Author: editor.udayarashmi@gmail.com

ಇಂಡಿ: ರಾತ್ರಿ ಸಮಯದಲ್ಲಿ ವಿದ್ಯುತ್ ಕಂಬಗಳ ಮೂಲಕ ನೇರವಾಗಿ ಕದ್ದು ವಾಯರ ಹುಕ್ಕು ಹಾಕಿ ವಿದ್ಯುತ್ ಕಳ್ಳತನ ಮಾಡುತ್ತಿರುವುದು ಮಹಾಪರಾಧವಾಗಿದೆ ಎಂದು ಹೆಸ್ಕಾಂ ಇಂಡಿ ಗ್ರಾಮಿಣ ಶಾಖೆಯ ಶಾಖಾಧಿಕಾರಿ ಆರ್.ವ್ಹಿ ಕುಂಬಾರ ಸಾರ್ವಜನಿಕರಿಗೆ ಅರಿವು ಮೂಡಿಸಿದರು.ಅವರು ತಾಲೂಕಿನ ಭುಯ್ಯಾರ ಹಾಗು ಹಿರೇಬೆವನೂರ, ನೆಹರು ನಗರದಲ್ಲಿ ವಿದ್ಯುತ್ ಬಾಕಿ ವಸೂಲಿ ಹಾಗೂ ಅನಧಿಕೃತ ವಿದ್ಯುತ್ ಕಾರ್ಯಚರಣೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಕಳ್ಳತನದಿಂದಾಗಿ ವಿದ್ಯುತ್ ಪೊಲಾಗಿ ನಮ್ಮ ಇಲಾಖೆಗೆ ಹೆಚ್ಚಿನ ಹೊರೆ ಬೀಳುತ್ತಿರುವುದರಿಂದ ವಿದ್ಯುತ್ ಕಳ್ಳತನ ಮಾಡಬಾರದು. ಒಂದು ವೇಳೆ ವಾಮ ಮಾರ್ಗದಿಂದ ವಿದ್ಯುತ್ ಬಳಕೆ ಮಾಡಿದರೆ ಸೂಕ್ತ ಕಾನೂನು ಕ್ರಮ ಕೈಗೊಂಡು ಭಾರಿ ದಂಡ ವಿಧಿಸಲಾಗುವುದು. ಆದ್ದರಿಂದ ದಯವಿಟ್ಟು ಯಾರು ಕಳ್ಳತನ ಮಾಡಲು ಮುಂದಾಗಬಾರದು ಎಂದರು.ಈ ವೇಳೆ ಅನಧಿಕೃತವಾಗಿ ಬಳಕೆ ಮಾಡುತ್ತಿದ್ದ ವಾಟರ್ ಹೀಟರ್ ಹಾಗೂ ವಾಯರ್ ವಶಪಡಿಕೊಂಡರು. ಇದರ ಜೊತೆಯಲ್ಲಿ ಗ್ರಾಮಿಣ ಭಾಗದ ಜನರಿಗೆ ವಿದ್ಯುತ ಬಳಕೆ ಕುರಿತು ಅರಿವು ಮೂಡಿಸಿದರು.ಕಾರ್ಯಚರಣೆಯಲ್ಲಿ ಮಲ್ಲಿಕಾರ್ಜುನ ಮಾಶಾಳ, ಕಲ್ಲಪ್ಪ ಬಜಂತ್ರಿ, ಮಲ್ಲು…

Read More

ಇಂಡಿ: ಜಗತ್ತು ನಮ್ಮ ನೆಮ್ಮದಿಯ ನೆಲೆ. ಇಲ್ಲಿ ಸೊಗಸಾದ ಬದುಕನ್ನು ಕಟ್ಟಿಕೊಳ್ಳಬೇಕು. ಶಾಂತಿ ಸಮಾಧಾನ ಅನುಭವಿಸಬೇಕು. ನೆಲ, ಜಲ, ಗಾಳಿ, ಬೆಳಕು ನಮಗೆ ಅವಶ್ಯ. ಹೀಗಾಗಿ ನಾವು ಭವ್ಯವೂ ದಿವ್ಯವೂ ಆದ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಬೀದರಿನ ಚಿದಂಗರ ಆಶ್ರಮದ ಡಾ. ಶಿವಕುಮಾರ ಸ್ವಾಮೀಜಿ ಹೇಳಿದರು.ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿ ಶ್ರೀ ಮಲ್ಲಿಕಾರ್ಜುನ ದೇವರಛಟ್ಟಿ ಜಾತ್ರಾ ಮಹೋತ್ಸವ ಹಾಗೂ ಶ್ರೀ ಭ್ರಮರಾಂಭಿಕಾ ದೇವಸ್ಥಾನದ ಜಿರ್ಣೋದ್ಧಾರಗೋಸ್ಕರ ನಡೆದ ಕಾರ್ಯಕ್ರಮದಲ್ಲಿ ಆರ್ಶೀವಚನ ನೀಡಿ ಅವರು ಮಾತನಾಡಿದರು.ದಾಸ್ಯವು ದಾಶ್ಯದ ಮೂಲಕ ವ್ಯಕ್ತಪಡಿಸುವ ದೇವರ ಮೇಲಿನ ಪ್ರೀತಿ ಮತ್ತು ಭಕ್ತಿ. ದೇವರನ್ನು ಅಥವಾ ಗುರುಗಳನ್ನು ಸಮರ್ಪಣಾ ಭಾವದಿಂದ ಸೇವೆ ಮಾಡುವದು ದೇವಸ್ಥಾನವನ್ನು ಶುಚಿಗೊಳಿಸುವದು, ಬಡವರ ಸೇವೆ ಮಾಡುವದು,ಧರ್ಮಗ್ರಂಥಗಳನ್ನು ಧ್ಯಾನಿಸುವುದು ಅಥವಾ ದೇವರ ಸೇವಕರಾಗಿ ಕೆಲಸ ಮಾಡುವ ಭಕ್ತಿಯ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದರು.ಇದೇ ವೇಳೆ ಶಿವಕುಮಾರ ಶ್ರೀಗಳನ್ನು ತುಲಾಭಾರ ಮಾಡಿ ಸನ್ಮಾನಿಸಲಾಯಿತು. ಪ್ರವಚನಕಾರರಾದ ಕಲಬುರಗಿಯ ಸಿದ್ದಾರೂಢಮಠದ ಮಾತೋಶ್ರೀ ವಿದ್ಯಾತಾಯಿಯವರನ್ನು ಸನ್ಮಾನಿಸಲಾಯಿತು.ಆಳೂರ ಗ್ರಾಮದ ಸಿದ್ದಾರೂಢ ಮಠದ ಶಂಕರಾನಂದ ಶ್ರೀಗಳು ಮತ್ತು ಮಾತೋಶ್ರೀ ಲಕ್ಷ್ಮೀತಾಯಿಯವರು,…

Read More

ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ೧೦ಗಂಟೆಗೆ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಹಾಗೂ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ನಿಂಗಪ್ಪ ಗರಗ ಉದ್ಘಾಟಿಸುವರು. ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಸಂಪತ್ತ ಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ತಹಶೀಲ್ದಾರ ಬಲರಾಮ ಕಟ್ಟಿಮನಿ, ಪ್ರಭಾರ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಯುವರಾಜ ಹನಗಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಆಗಮಿಸಿದ್ದಾರೆ. ಮಾನವ ಹಕ್ಕುಗಳು ಹಾಗೂ ಗ್ರಾಹಕರ…

Read More

ದೇವರಹಿಪ್ಪರಗಿ: ರಂಭಾಪುರಿ ಪೀಠದ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರ ಅಡ್ಡಪಲ್ಲಕ್ಕಿ ಮಹೋತ್ಸವ ಅದ್ದೂರಿಯಾಗಿ ಜರುಗಿತು.ಪಟ್ಟಣದ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ರಂಭಾಪುರಿಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ಸೋಮವಾರ ಸಾಯಂಕಾಲ ಪಂಚಾಚಾರ್ಯ ಕಲ್ಯಾಣ ಮಂಟಪದಿಂದ ಆರಂಭಗೊಂಡಿತು. ಮಹೋತ್ಸವದಲ್ಲಿ ಚಿಕ್ಕಮಗಳೂರ ಜಿಲ್ಲೆಯ ಅರಳಳ್ಳಿಯ ಶಿವತಾಂಡವ ನೃತ್ಯ ರೂಪಕ, ಸಾಗರದ ಮಹಿಳಾ ಡೊಳ್ಳು ಕುಣಿತ ವಿಶೇಷವಾಗಿದ್ದು, ೨೫೧ ಕುಂಭ, ಕಳಶ ಹೊತ್ತ ಮಹಿಳೆಯರು ಮಹೋತ್ಸವದಲ್ಲಿ ಭಕ್ತಿಪೂರ್ವಕವಾಗಿ ಪಾಲ್ಗೊಂಡು ತಮ್ಮ ಭಾವ ಮೆರೆದರು.ಮೆರವಣಿಗೆ ಇಂಡಿ ರಸ್ತೆಯಿಂದ ಆರಂಭಗೊಂಡು ಅಂಬೇಡ್ಕರ್ ವೃತ್ತ, ಮೋಹರೆ ಹಣಮಂತ್ರಾಯ ವೃತ್ತ, ಮೇನ್ ಬಜಾರ ಮಾರ್ಗವಾಗಿ ಶ್ರೀವೀರಭದ್ರೇಶ್ವರ ದೇವಸ್ಥಾನ ತಲುಪಿತು. ಮೆರವಣಿಗೆಯಲ್ಲಿ ಸಮಸ್ತ ಭಕ್ತವೃಂದ “ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ, ವಂದೇ ರೇಣುಕಂ” ಎಂಬ ಉದ್ಘೋಶಗಳೊಂದಿಗೆ ಕಳೆ ತಂದರು.ಎಮ್ಮಿಗನೂರಿನ ವಾಮದೇವಶ್ರೀ ,ಸಗರದ ವೀರಮಹಾಂತಶ್ರೀಗಳು, ಸದಯ್ಯನಮಠದ ವೀರಗಂಗಾಧರಶ್ರೀಗಳು, ಜಡಿಮಠದ ಜಡೇಸಿದ್ದೇಶ್ವರ ಶ್ರೀಗಳು, ಕೊಕಟನೂರಿನ ಶ್ರೀಗಳು ಸಹಿತ ವಿವಿಧ ಮಠಾಧೀಶರು, ಜಾತ್ರಾ ಸಮೀತಿಯ ಸಿ.ಕೆ.ಕುದರಿ, ಬಾಬುಗೌಡ ಪಾಟೀಲ(ಜಿಡ್ಡಿಮನಿ), ಬಾಳಯ್ಯ ಇಂಡಿಮಠ, ಯಲಗೂರೇಶ ದೇವೂರ, ಕಾಸು ಜಲಕತ್ತಿ,…

Read More

ಡಿ.24ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024 ವಿಜಯಪುರ: ಕೋಟಿವೃಕ್ಷ ಅಭಿಯಾನ ಅಂಗವಾಗಿ ಡಿಸೆಂಬರ್ 24 ರವಿವಾರ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024 ಪ್ರೊತ್ಸಾಹಿಸಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರವರು 10ಲಕ್ಷ ರೂ. ಪ್ರಾಯೋಜಕತ್ವ ನೀಡಿದ್ದಾರೆ.ವಿಜಯಪುರ ಜಿಲ್ಲೆಯಲ್ಲಿ ಸಸಿಗಳನ್ನು ನೆಟ್ಟು, ಮರಗಳನ್ನಾಗಿ ಬೆಳೆಸಿ, ಅರಣ್ಯ ಪ್ರಮಾಣ ಹೆಚ್ಚಿಸುವುದು. ವಿಜಯಪುರ ನಗರದಲ್ಲಿನ ವಿವಿಧ ಐತಿಹಾಸಿಕ ಸ್ಮಾರಕಗಳ ಕುರಿತು ಜಾಗೃತಿ ಮೂಡಿಸಿ, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಿ, ತನ್ಮೂಲಕ ನಗರದಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚಿಸುವಂತೆ ಜಾಗೃತಿ ಮೂಡಿಸುವ ಹೆರಿಟೇಜ್ ರನ್ ಪ್ರೊತ್ಸಾಹಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿ.ದಿಂದ 10ಲಕ್ಷ ರೂ.ಗಳ ಚೆಕ್ ಸಿದ್ಧಸಿರಿ ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ ಇಂದು ಕೋಟಿವೃಕ್ಷ ಅಭಿಯಾನ ಸಂಚಾಲಕಪ್ರೊ.ಮುರುಗೇಶ ಪಟ್ಟಣಶೆಟ್ಟಿ ಅವರಿಗೆ ನೀಡಿದರು.ಈ ಸಂದರ್ಭದಲ್ಲಿ ಕೋಟಿವೃಕ್ಷ ಅಭಿಯಾನದ ಡಾ.ಮಹಾಂತೇಶ ಬಿರಾದಾರ, ಶಿವನಗೌಡ ಪಾಟೀಲ, ಸಂತೋಷ ಔರಸಂಗ, ಅಮೀತ ಬಿರಾದಾರ, ಸೋಮು ಮಠ, ಸಿದ್ಧಸಿರಿ ನಿರ್ದೇಶಕರಾದ…

Read More

ವಿಜಯಪುರ: ಡಿಸೆಂಬರ್ 24 ರಂದು ನಡೆಯಲಿರುವ ವೃಕ್ಷತ್ಥಾನ್ ಹೆರಿಟೇಜ್ ರನ್-2023ಕ್ಕೆ ಮಹಿಳೆಯರು ಅತ್ಯುತ್ಸಾಹದಿಂದ ಪಾಲ್ಗೊಳ್ಳುತ್ತಿದ್ದು, ಸೀರೆಯುಟ್ಟು ಬರಿಗಾಲಿನಲ್ಲಿ ಓಡುವ ಓಟಗಾರ್ತಿ ಎಂದೇ ಹೆಸರಾಗಿರುವ ಪ್ರೀತಿ ಮನೀಶ್ ಅವರು 21 ಕಿ. ಮೀ. ಸ್ಪರ್ಧೆಯಲ್ಲಿ ಪಾಲ್ಗೋಳ್ಳುತ್ತಿರುವುದು ಇತರರಿಗೆ ಸ್ಪೂರ್ತಿ ನೀಡುತ್ತಿದೆ.ಹುಬ್ಬಳ್ಳಿ ಮೂಲದ ಮತ್ತು ಬೆಂಗಳೂರಿನಲ್ಲಿ ನೆಲೆಸಿರುವ ಅವರು, ಬ್ಯೂಸಿನೆಸ್ ಮ್ಯಾನೆಜಮೆಂಟ್ ಸ್ನಾತಕೋತ್ತರ ಪದವೀಧರೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅವರು, ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ಜಾಗೃತಿ ಕುರಿತು ಎನ್ಜಿಓವೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾನಾ ಶಾಲೆ ಮತ್ತು ಕಾಲೇಜುಗಳು ಹಾಗೂ ಮಹಿಳಾ ಗುಂಪುಗಳಲ್ಲಿ ಪ್ರೌಢಾವಸ್ಥೆ, ಸುಸ್ಥಿರ ಮುಟ್ಟಿನ ಕುರಿತು ಹಾಗೂ ಋತುಚಕ್ರದ ಬಗ್ಗೆ ಯವತಿಯರು ಹಾಗೂ ಮಹಿಳೆಯಲ್ಲಿ ಅರಿವು ಮೂಡಿಸುವ ಸಮಾಜಮುಖಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ.ಭಾರತೀಯರು ಸೀರೆ ಉಡುವುದನ್ನು ಪ್ರೋತ್ಸಾಹಿಸಲು ಮತ್ತು ಬರಿಗಾಲಿನಲ್ಲಿಯೂ ಸಾಧನೆ ಮಾಡಬಹುದು ಎಂಬುದನ್ನು ತೋರಿಸಲು ಅವರು ಅಪ್ಪಟ ಭಾರತೀಯ ಮಹಿಳೆಯಾಗಿ ಸೀರೆಯುಟ್ಟು ಬರಿಗಾಲಿನಲ್ಲಿ ಓಡುವುದನ್ನು ರೂಢಿಯಾಗಿಸಿಕೊಂಡಿದ್ದಾರೆ. ಅಲ್ಲದೇ, ಈಗಾಗಲೇ ಹಲವಾರು ಮ್ಯಾರಾಥಾನ್ ಗಳಲ್ಲಿ ಪಾಲ್ಗೊಂಡು ಬರಿಗಾಲ…

Read More

ವಿಜಯಪುರ: ಭಾರತೀಯ ಪುರಾತನ ವೈದ್ಯ ಪದ್ಧತಿ ಆಯುರ್ವೇದ ಈಗ ವಿಶ್ವದೆಲ್ಲೆಡೆ ಜನಪ್ರೀಯವಾಗಿದೆ ಎಂದು ಯರನಾಳ ಮತ್ತು ಉಕ್ಕಲಿ ವಿರಕ್ತಮಠದ ಶ್ರೀ ಗುರು ಸಂಗನಬಸವ ಮಹಾಸ್ವಾಮೀಜಿ ಹೇಳಿದ್ದಾರೆ.ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಅಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ರವಿವಾರ ನಡೆದ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಸ್ನೇಹ ಸಮ್ಮೇಳನ ಸ್ನೇಹ ಮಾಗಮ- 2023 ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ವೈದ್ಯರು ನಮ್ಮ ಭಾರತೀಯ ಪುರಾತನ ವೈದ್ಯಪದ್ಧತಿಯಾಗಿರುವ ಆಯುರ್ವೇದವನ್ನು ಜನಸಾಮಾನ್ಯರಿಗೆ ತಲುಪಿಸಬೇಕು. ಈ ಕ್ಷೇತ್ರದಲ್ಲಿರುವ ಚಿಕಿತ್ಸಾ ವಿಧಾನಗಳನ್ನು ಹೆಚ್ಚೆಚ್ಚು ಪ್ರಚಾರ ಮಾಡುವ ಮೂಲಕ ತಾವೂ ಕೂಡ ಹೆಸರು ಬೆಳೆಯಬೇಕು. ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪಕರಾದ ವಚನಪಿತಾಮಹ ಡಾ. ಫ. ಗು. ಹಳಕಟ್ಟಿ, ಪೂಜ್ಯ ಬಂಥನಾಳ ಸ್ವಾಮೀಜಿ, ದಿ. ಬಿ. ಎಂ. ಪಾಟೀಲ ಅವರ ಆಶೀರ್ವಾದದಿಂದ ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಆಯುರ್ವೇದ ಮಹಾವಿದ್ಯಾಲಯ ಇನ್ನೂ ಉನ್ನತ ಸ್ಥಾನಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು…

Read More

ಸಿಂದಗಿ: ವೀರಶೈವ ಧರ್ಮಗ್ರಂಥ ಸಿದ್ಧಾಂತ ಶಿಖಾಮಣಿ ಕರ್ತೃ ಸಾಲೋಟಗಿಯ ಶಿವಾಚಾರ್ಯರ ಹೆಸರಿನಲ್ಲಿ ಪಟ್ಟಣದ ಲಿಂಗೈಕ್ಯ ಚೆನ್ನಯ್ಯ ಸ್ವಾಮಿ ಮತ್ತು ಲಿಂಗೈಕ್ಯ ಶಾರದಾದೇವಿ ಜನಕಲ್ಯಾಣ ಫೌಂಡೇಶನ್ ಕೊಡ ಮಾಡುವ ಶ್ರೀ ಶಿವಯೋಗಿ ಶಿವಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಶ್ರೀಶೈಲ ಮಲ್ಲಿಕಾರ್ಜುನ ಸಮಾಜೋತ್ತಾನ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಚೆನ್ನಸಿದ್ದರಾಮ ಪಂಡಿತರಾಧ್ಯಾ ಶಿವಾಚಾರ್ಯರು ಭಾಜನರಾಗಿದ್ದಾರೆ.ಪ್ರಶಸ್ತಿ ೧ ಲಕ್ಷ ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ. ನಗರದ ಸಾರಂಗಮಠದಲ್ಲಿ ಡಿಸೆಂಬರ್ ೧೮ ರಂದು ಸಂಜೆ ೭ ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ .ಈ ವೇಳೆ ಸಾರಂಗಮಠದ ಪೀಠಾಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಕೊಣ್ಣೂರಿನ ಹೊರಗಿನ ಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಶಾಸಕ ಅಶೋಕ ಮನಗೂಳಿ, ಜಗದೀಶ್ ಗುಡಗುಂಟಿ ಸೇರಿದಂತೆ ಅನೇಕ ಮಠಾಧೀಶರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಶ್ರೀ ಚನ್ನವೀರ ಮಹಾಸ್ವಾಮೀಜಿ ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

“ಶ್ರೀ ಸಿದ್ಧಂತ ಶಿಖಾಮಣಿ”ಯಲ್ಲಿ ಶಿವಯೋಗಿ ಶಿವಾಚಾರ್ಯರು ತಮ್ಮ ವಂಶಕ್ಕೆ ಸಂಬಂಧಿಸಿದಂತೆ ನೀಡಿದ ಕೆಲವು ಮಾಹಿತಿಗೆ ಅನುಗುಣವಾಗಿ ಅವರ ವಂಶದ ಮೂಲ ಪುರುಷನು ಶಿವಯೋಗಿ ಎಂಬ ಹೆಸರಿನವನು. ಈ ಮೂಲ ಶಿವಯೋಗಿಯ ಮಗ ಮುದ್ದದೇವ. ಈತನ ಮಗ ಸಿದ್ಧನಾಥ. ಈ ಸಿದ್ಧನಾಥನ ಮಗನೇ “ಶ್ರೀ ಸಿದ್ಧಾಂತ ಶಿಖಾಮಣಿ” ಕರ್ತೃವಾದ ಶಿವಯೋಗಿ ಶಿವಾಚಾರ್ಯರು. ಆದರೆ ಇವರು ಸೊಲ್ಲಾಪುರದ ಶಿವಯೋಗಿ ಸಿದ್ಧರಾಮೇಶ್ವರರ ವಂಶಜರಲ್ಲ ಎಂಬುದು ಯುಕ್ತಿ-ತರ್ಕ-ಪ್ರಮಾಣಗಳಿಂದ ಸಿದ್ಧವಾದ ಸಂಗತಿಯಾಗಿದೆ. ಇವರು ತಮ್ಮ ಕೃತಿ ” ಶ್ರೀ ಸಿದ್ಧಾಂತ ಶಿಖಾಮಣಿ”ಯಲ್ಲಿ ತಮ್ಮ ಕಾಲದ ಬಗೆಗಾಗಲಿ ಮತ್ತು ತನ್ನ ದೇಶದ ಬಗ್ಗೆಯಾಗಲಿ ಏನನ್ನು ಹೇಳಿಕೊಂಡಿಲ್ಲವಾದರೂ ೧೨ ನೇ ಶತಮಾನದ ಶರಣರ ಕೆಲವು ವಚನಗಳಲ್ಲಿ ಮತ್ತು ೧೧ ನೇ ಶತಮಾನದ “ಶ್ರೀಕರಭಾಷ್ಯ”ದಲ್ಲಿ “ಸಿದ್ಧಾಂತ ಶಿಖಾಮಣಿಯ” ಕೆಲವು ಶ್ಲೋಕಗಳು ಉಲ್ಲೇಖಗೊಂಡಿರುವುದರಿಂದ ಇವರು ೧೦ ನೇ ಶತಮಾಕ್ಕಿಂತ ಪೂರ್ವದಲ್ಲಿ ಇದ್ದರೆಂದು ವಿದ್ವಾಂಸರ ವಾದದಿಂದ ತಿಳಿದು ಬರುತ್ತದೆ.ಇವರು “ಸಿದ್ಧಾಂತ ಶಿಖಾಮಣಿ”ಯನ್ನು ಬರೆಯುವ ಮೊದಲು ಅಭ್ಯಸಿಸಿರುವ ಗ್ರಂಥಗಳ ಬಗ್ಗೆ ಹೇಳುವ ಸಂದರ್ಭದಲ್ಲಿಆಲೋಕ್ಯ ಶೈವತಂತ್ರಾಣಿ ಕಾಮಿಕಾಧ್ಯಾನಿ ಸಾದರಂ |ವಾತುಲಾಂತಾನಿ…

Read More