Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬೇಸಿಗೆಯಲ್ಲಿ ಜನರಿಗೆ ನೀರು ಒದಗಿಸುವ ಕಾರ್ಯ ಮಾನವೀಯತೆಯ ಪವಿತ್ರ ಸೇವೆಯಾಗಿದೆ ಎಂದು ಬಿಜೆಪಿ ಧುರೀಣ ಬಸನಗೌಡ ಪಾಟೀಲ(ಯಡಿಯಾಪೂರ) ಹೇಳಿದರು.ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದ ಆವರಣದಲ್ಲಿ ಭಾನುವಾರ ರೇಣುಕಾಚಾರ್ಯ ಜಯಂತಿ ಅಂಗವಾಗಿ ‘ಸಾರ್ವಜನಿಕರಿಗಾಗಿ ಅರವಟ್ಟಿಗೆ’ ಗೆ ಚಾಲನೆ ನೀಡಿ ಮಾತನಾಡಿದರು. ಈ ಬಾರಿ ಬೇಸಿಗೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಅರವಟ್ಟಿಗೆ ಆರಂಭಿಸಿರುವುದು ಉತ್ತಮ ಕಾರ್ಯವಾಗಿದೆ ಎಂದರು.ಕೋಕಟನೂರ ಮಡಿವಾಳೇಶ್ವರ ಸ್ವಾಮೀಜಿ ಮಾತನಾಡಿ, ಕುಡಿಯುವ ನೀರನ್ನು ಸಾರ್ವಜನಿಕರಿಗೆ ಪೂರೈಸುವುದರ ಜೊತೆಗೆ ಪಶು, ಪಕ್ಷಿಗಳಿಗೂ ಒದಗಿಸಿ ಮಾನವೀಯತೆ ಮೆರೆಯಲು ಪ್ರತಿಯೊಬ್ಬರು ಮುಂದಾಗಬೇಕು. ತಮ್ಮ ಪ್ರತಿ ಮನೆಯ ಮುಂದಿನ ಗಿಡಗಳಲ್ಲಿ ನೀರು ಇಟ್ಟು ಪಕ್ಷಿಗಳಿಗೆ ನೀರು ಉಣಿಸಿ ಪುಣ್ಯ ಕಟ್ಟಿಕೊಳ್ಳಿ ಎಂದರು.ಸ್ಥಳೀಯ ಜಡಿಮಠದ ಜಡಿಸಿದ್ದೇಶ್ವರಶ್ರೀ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ ಸಂಕ್ಷಿಪ್ತವಾಗಿ ಮಾತನಾಡಿದರು.ಪಂಚಾಚಾರ್ಯ ಕಲ್ಯಾಣ ಭವನದ ಅಧ್ಯಕ್ಷ ಬಸಯ್ಯ ಮಲ್ಲಿಕಾರ್ಜುನಮಠ, ಬಂಡೆಪ್ಪ ಬಿರಾದಾರ(ದಿಂಡವಾರ), ಸೋಮಶೇಖರ ಹಿರೇಮಠ, ಸಂಗನಗೌಡ ಪಾಟೀಲ, ರಾಮಯ್ಯ ನಾಶೀಮಠ, ವಿರೇಶ ಮಠಪತಿ ಇದ್ದರು.
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೊಂಡಗೂಳಿ ಹಾಗೂ ಹಂಚಲಿ ಗ್ರಾಮ ವ್ಯಾಪ್ತಿಯಲ್ಲಿ ಕಾಲುವೆ ಕಾಮಗಾರಿ ಮಾಡದ ಕುರಿತು ಇಂಡಿ ಕೃಷ್ಣಾ ಮೇಲ್ದಂಡೆ ಯೋಜನಾ ಕಛೇರಿ ಅಧಿಕಾರಿಗಳಿಗೆ ರೈತರು ಮನವಿ ಸಲ್ಲಿಸಿದರು.ತಾಲ್ಲೂಕಿನ ಕೊಂಡಗೂಳಿ ಹಾಗೂ ಹಂಚಲಿ ಗ್ರಾಮಗಳ ರೈತರು ಸೋಮವಾರ ಇಂಡಿ ಪಟ್ಟಣದ ಕೃಷ್ಣಾ ಮೇಲ್ದಂಡೆ ಯೋಜನಾ ಕಚೇರಿಗೆ ತೆರಳಿ ತಮ್ಮ ಸಮಸ್ಯೆ ಕುರಿತು ಗಮನ ಸೆಳೆದರು. ಈ ಸಂದರ್ಭದಲ್ಲಿ ಟಿ.ಎಸ್.ಹೆಬ್ಬಾಳ ಮಾತನಾಡಿ, ಜಮೀನಿನಲ್ಲಿ ೩ ವರ್ಷಗಳ ಹಿಂದೆಯೇ ಕಾಲುವೆಗಾಗಿ ಜಮೀನುಗಳನ್ನು ವಶಪಡಿಸಿಕೊಳ್ಳುವ ನೋಟೀಸು ನೀಡಿ ನಂತರ ಗುತ್ತಿಗೆದಾರರು ಅಧಿಕಾರಿಗಳ ಅನುಮತಿ ಪಡೆಯದೆ ಕಾಲುವೆ ಕಾಮಗಾರಿಗಾಗಿ ಜಮೀನುಗಳನ್ನು ಬೇಕಾಬಿಟ್ಟಿ ಅಗೆದಿರುತ್ತಾರೆ. ಸದ್ಯದ ಸ್ಥಿತಿಯಲ್ಲಿ ಕಾಮಗಾರಿಯು ಇಲ್ಲ, ಗುತ್ತಿಗೆದಾರರು ಇಲ್ಲ. ಭೂಮಿ ಕಳೆದುಕೊಂಡ ರೈತರಿಗೆ ಸರಕಾರದಿಂದ ಕಾಲುವೆ ಕಾಮಗಾರಿ ಅವಾರ್ಡ್ ಪ್ರತಿಯೂ ಇಲ್ಲ, ಪರಿಹಾರವೂ ಇಲ್ಲ, ಉಳುಮೆ ಮಾಡಲು ಜಮೀನು ಇಲ್ಲದಾಗಿ ಸಂಪೂರ್ಣವಾಗಿ ಹಾಳಾಗಿದ್ದು ರೈತರಿಗೆ ಆರ್ಥಿಕವಾಗಿ ನಷ್ಟವಾಗಿದೆ.ರೈತರ ಈ ಸಮಸ್ಯೆಗಳ ಬಗ್ಗೆ ದೇವರ ಹಿಪ್ಪರಗಿ ತಾಲ್ಲೂಕಿನ ಎಲ್ಲಾ ರಾಜಕಾರಣಿಗಳು ಮೌನ ವಹಿಸಿರುವುದರಿಂದ ಹಲವಾರು ರೈತರು…
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಮಡಿವಾಳ ಸಮುದಾಯವು ಹಿಂದುಳಿದಿದ್ದು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಸಮಾಜ ಯಾವ ದೃಷ್ಟಿಕೋನದಿಂದ ನೋಡಿದರೂ ಮುಂದುವರಿದಿಲ್ಲ. ಸಮಾಜ ಮುಖ್ಯವಾಹಿಗೆ ಸೇರಲು ಪರಿಶಿಷ್ಟ ಜಾತಿಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ತಾಲೂಕು ವೀರ ಮಡಿವಾಳ ಸಂಘದ ಅಧ್ಯಕ್ಷ ಎಲೆ ಹುಂಡಿ ಚಂದ್ರು ಶೆಟ್ಟಿ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಮಡಿವಾಳ ಜನಾಂಗ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಸಾಕಷ್ಟು ಹಿಂದುಳಿದಿದೆ. ದೇಶದ 17 ರಾಜ್ಯಗಳಲ್ಲಿ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿಸಲಾಗಿದೆ . ಅದರಂತೆ ರಾಜ್ಯದಲ್ಲೂ ಮಡಿವಾಳ ಜನಾಂಗವನ್ನು ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿಸಿ, ಶಿಕ್ಷಣ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸಬೇಕು. ದುಡಿದು ತಿನ್ನುವ ಪ್ರಾಮಾಣಿಕ ಸಮಾಜ ಇದಾಗಿದ್ದು, ಜನಸಂಖ್ಯೆ ಆಧಾರದ ಮೇಲೆ ಸೌಲಭ್ಯ ನೀಡುವುದಾದರೆ ಈ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ. ಸರಕಾರದ ಸೌಲಭ್ಯ ಪಡೆಯಲು ಮಡಿವಾಳ ಸಮುದಾಯವನು ಪರಿಶಿಷ್ಟ ಜಾತಿಗೆ ಸೇರಿಸಲೇಬೇಕಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಮಡಿವಾಳರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕೆ. ಬಿ. ಎಸ್ ನಂಬರ 28 ಟ್ರೇಝರಿ ಕಾಲನಿ ಶಾಲೆಯಲ್ಲಿ ಮಂಗಳವಾರ ನೂತನ ಎಸ್.ಡಿ. ಎಂ.ಸಿ ರಚನೆ ಮಾಡಲಾಯಿತು.ಎಸ್. ಡಿ.ಎಂ. ಸಿ ಅಧ್ಯಕ್ಷರಾಗಿ ಬಸವರಾಜ ಬಡಿಗೇರ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಉಮಾ ಕಾಂಬಳೆ ಅವರು ಆಯ್ಕೆಯಾದರು. ಈ ಸಂದರ್ಭದಲ್ಲಿ ವಾರ್ಡ್ ನಂಬರ 35ರ ಮಹಾನಗರ ಪಾಲಿಕೆಯ ಸದಸ್ಯರಾದ ರಾಜಶೇಖರ ಕುರಿ, ಶಿಕ್ಷಣ ಸಂಯೋಜಕ ಎ. ಕೆ.ದಳವಾಯಿ, ಸಿ. ಆರ್. ಪಿ ಬಸವರಾಜ ಪಡಗಾನೂರ, ಹಿಂದಿನ ಎಸ್. ಡಿ. ಎಂ. ಸಿ ಸದಸ್ಯರು, ಎಲ್ಲ ಮಕ್ಕಳ ಪಾಲಕ ಪೋಷಕರು ಭಾಗವಹಿಸಿದ್ದರು.ನೂತನವಾಗಿ ಆಯ್ಕೆಯಾದ ಎಸ್. ಡಿ. ಎಂ. ಸಿ ಅಧ್ಯಕ್ಷರಿಗೂ ಉಪಾಧ್ಯಕ್ಷರು ನಮ್ಮ ಶಾಲೆಯ ಪರವಾಗಿ ಅಭಿನಂದಿಸಲಾಯಿತು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆ ಇಂದು ಎಲ್ಲ ರಂಗದಲ್ಲಿಯೂ ಉನ್ನತವಾದ ಸಾಧನೆಯ ನಗೆ ಬೀರಿದ್ದಾಳೆ ಎಂದು ಅಧೀಕ್ಷಕ ಅಭಿಯಂತರ ಸಿದ್ದಪ್ಪ ಬಿಂಜಿಗೇರಿ ಹೇಳಿದರು.ವಿಜಯಪುರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಸಹಯೋಗದಲ್ಲಿ ಆಯೋಜಿಲಾಗಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆ ಅಂದು ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದಳು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸ್ವ ಸ್ವಾಮರ್ಥ್ಯದ ಮೇಲೆ ಇಂದು ಎಲ್ಲ ರಂಗದಲ್ಲಿಯೂ ಸಾಧನೆ ತೋರಿದ್ದಾಳೆ, ವಿಮಾನ ನಡೆಸುವ ಜೊತೆಗೆ ಅಂತರಿಕ್ಷ ನೌಕೆಯನ್ನೂ ಸಹ ಸಮರ್ಥವಾಗಿ ಚಲಾಯಿಸುವ ಮಟ್ಟಕ್ಕೆ ಬೆಳೆದಿದ್ದಾಳೆ, ಪ್ರತಿ ಬಾರಿಯ ಫಲಿತಾಂಶದಲ್ಲಿಯೂ ಬಾಲಕಿಯರ ಮೇಲುಗೈ ಸಾಧಿಸುತ್ತಿದ್ದಾರೆ, ತೊಟ್ಟಿಲು ತೂಗುವ ಕೈ ವಿಶ್ವವನ್ನೇ ಆಳಬಲ್ಲದು ಎಂಬುದನ್ನು ನಿರೂಪಿಸಿದ್ದಾಳೆ ಎಂದರು.ಮುಖ್ಯ ಅತಿಥಿಯಾಗಿದ್ದ ಉಷಾ ಹಿರೇಮಠ ಮಾತನಾಡಿ, ಮಹಿಳೆ ಅಪಾರ ಶಕ್ತಿವಂತಳು, ಕರುಣೆ, ವಾತ್ಸಲ್ಯ ದ ಪ್ರತಿರೂಪ, ಮಹಿಳೆಗೆ ಸಾಧನೆ ತೋರಲು ವೇದಿಕೆ ಬೇಕು, ಯಾವ ಸವಾಲನ್ನು ಆಕೆ ಸಮರ್ಥವಾಗಿ ನಿಭಾಯಿಸುವ ಗಟ್ಟಿತನ ಹೆಣ್ಣಿಗೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಪ್ರಕಾಶ ಚೌಧರಿ ಅವರ ಆಕ್ಷಪರ್ಡ ಚೌಧರಿ ಕೋಚಿಂಗ್ ಕ್ಲಾಸಿಸ್ ವಿದ್ಯಾರ್ಥಿಗಳು ೨೦೨೬-೨೭ನೇ ಸಾಲಿನ ಅಖಿಲ ಭಾರತ ಸೈನಿಕ ಶಾಲಾ ಪ್ರವೇಶ ಪರೀಕ್ಷೆಯಲ್ಲಿ (ಎಐಎಸ್ಎಸ್ಇಇ) ಪರೀಕ್ಷೆಯಲ್ಲಿ ಶೇ.೯೦ ರಷು ವಿದ್ಯಾರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ.ಅಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳ ವಿವರ: ಅಶ್ವಿನಿ ಭಜಂತ್ರಿ, ಸಹನಾ ಕುಂಬಾರ, ತೃಪ್ತಿ ಚವ್ಹಾಣ, ಅಮೃತಾ ಕಟ್ಟಿಮನಿ, ಸಾಕ್ಷಿ ಮೂಲಿಮನಿ, ಮಧುಪ್ರೀಯಾ, ಶ್ರಾವಣಿ ಪೋಲಿಸ್ಪಾಟೀಲ, ಪ್ರೀತಮ ರಾಠೋಡ, ಅಮೀತ ಬಗಲಿ, ವಿಕಾಶ ಹಿರೇಮಠ, ಸಿದ್ದಾರ್ಥ ನಾಗಠಾಣ,, ಕಾರ್ತಿಕ ಚಟ್ಟರಕಿ, ರುಕ್ಮೀಣಿ ಅಂಕಲಗಿ, ವಿನಾಯಕ ಕಲಶೆಟ್ಟಿ, ಬಸವರಾಜ ನಾಯ್ಕೋಡಿ, ಪೃತ್ವಿರಾಜ ಮಾಶ್ಯಾಳ, ಸಮರ್ಥ ದೊಡಮನಿ, ಸಂಸ್ಕಾರ ಕೊಪ್ಲೆ ಅಧಿಕ ಅಂಕಗಳನ್ನು ಪಡೆದು ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಚಾಲಕ ಪ್ರಕಾಶ ಚೌಧರಿ, ಆಢಳಿತಾಧಿಕಾರಿ ಮಹಾಂತೇಶ ಚೌಧರಿ, ಮುಖ್ಯಗುರು ವಿಶ್ವನಾಥ ಯಾತನೂರ ಸೇರಿದಂತೆ ಸಿಬ್ಬಂಧಿ ಹರ್ಷ ವ್ಯಕ್ತಪಡೆಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜಕೀಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಮಹಿಳೆಯರು ಇನ್ನಷ್ಟು ಮುನ್ನಡೆಯಬೇಕು ಎಂದು ತಾಲೂಕು ದಂಡಾಧಿಕಾರಿ ಕರೇಪ್ಪ ಬೆಳ್ಳಿ, ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸ್ಪೂರ್ತಿ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ಸಿಂದಗಿ ಇವರುಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರಕಾರಗಳು ಮಹಿಳೆಯರ ಏಳಿಗೆಗಾಗಿ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ ಅದರ ಸದುಪಯೋಗವನ್ನು ಎಲ್ಲ ಮಹಿಳೆಯರು ಪಡೆದುಕೊಂಡು ಸಬಲರಾಗಬೇಕು ಎಂದರು.ಸಿಂದಗಿ ನಗರದ ಗೋಲಗೇರಿ ರಸ್ತೆಯಲ್ಲಿರುವ ಡಾ.ಬಾಬು ಜಗಜೀವನರಾಮ್ ಭವನದಲ್ಲಿ ಸ್ಪೂರ್ತಿ ಮಹಿಳಾ ಸ್ವ-ಸಹಾಯ ಸಂಘಗಳ ಒಕ್ಕೂಟ ಹಾಗೂ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ, ಸಿಂದಗಿ ಇವರುಗಳ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಹಿಳಾ ಸಾಂತ್ವನ ಸಹಾಯವಾಣಿ ಕೇಂದ್ರದ ರಶ್ಮಿ ನೂಲಾನವರ ಮಾತನಾಡಿ, ಹೆಣ್ಣು ಮಕ್ಕಳು ಸಾಮಾಜಿಕ ಹಾಗೂ ಆರ್ಥಿಕವಾಗಿ ಬೆಳೆದು ಸ್ವಾವಲಂಬಿಗಳಾಗಲು ಕುಟುಂಬದ ಬೆಂಬಲ ಮತ್ತು ಪ್ರೋತ್ಸಾಹ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂಚೆ ವಿಭಾಗದ ೨೦೨೫-೨೬ನೇ ಸಾಲಿನ ೪ನೇ ತ್ರೈಮಾಸಿಕ ಅಂಚೆ ಅದಾಲತ್ ಕಾರ್ಯಕ್ರಮ ಮಾ.೨೩ ರಂದು ಮಧ್ಯಾಹ್ನ ೩ ಗಂಟೆಗೆ ವಿಜಯಪುರ ವಿಭಾಗದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.ಜಿಲ್ಲೆಯ ಬಬಲೇಶ್ವರ, ಬಸವನ ಬಾಗೇವಾಡಿ, ಚಡಚಣ, ದೇವರಹಿಪ್ಪರಗಿ, ಇಂಡಿ, ಕೊಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ತಾಳಿಕೋಟೆ, ತಿಕೋಟಾ, ಆಲಮೇಲ ಹಾಗೂ ವಿಜಯಪುರ ತಾಲೂಕುಗಳ ವ್ಯಾಪ್ತಿಯ ಅಂಚೆ ಸೇವೆಗಳಿಗೆ ಸಲಹೆ-ಸೂಚನೆ ಹಾಗೂ ದೂರುಗಳನ್ನು ಅಂಚೆ ಅದಾಲತ್ನಲ್ಲಿ ವಿಚಾರಣೆಗೆ ಎಂದು ಮೇಲ್ಬರಹ ಬರೆದು ದಿನಾಂಕ: ೧೬-೦೩-೨೦೨೬ರೊಳಗೆ ಯಾವುದೇ ಅಂಚೆ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಇಂತಹ ದೂರು ಮತ್ತು ಸಲಹೆಯ ಲಕೋಟೆಗೆ ಯಾವುದೇ ಅಂಚೆ ವೆಚ್ಚ ಭರಿಸುವ ಅಗತ್ಯವಿರುವುದಿಲ್ಲ.ಅಂಚೆ ಅದಾಲತ್ನಲ್ಲಿ ಅಂಚೆ ಇಲಾಖೆಯಿಂದ ಒದಗಿಸಲಾಗುತ್ತಿರುವ ಸೇವೆಗಳಲ್ಲಿ ಇರುವ ಕೊರತೆಗಳನ್ನು ಮತ್ತು ಸುಧಾರಿಸುವ ಸಲಹೆ ಸೂಚನೆಗಳ ಕುರಿತು ಚರ್ಚಿಸಲಾಗುವುದು ಎಂದು ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಸಾಮೂಹಿಕ ವಿವಾಹ ಮಾಡಿಸಿ ಬಡಕುಟುಂಬಗಳಿಗೆ ದಾರಿದೀಪವಾದ ಹೆಚ್ ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು – ಸೌಮ್ಯ ಅನಿಲ್ ದಂಪತಿ. ಇಂದಿನ ದಿನಗಳಲ್ಲಿ ಮದುವೆ ಎನ್ನುವುದು ಅತ್ಯಂತ ದುಬಾರಿ ಆಚರಣೆಯಾಗಿ ಬದಲಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಆರ್ಥಿಕ ಹೊರೆಯನ್ನು ಕಡಿಮೆ ಮಾಡಿ, ಸಾಮಾಜಿಕ ಕಳಕಳಿಯನ್ನು ಮೆರೆಯುವ ‘ಸಾಮೂಹಿಕ ಸರಳ ವಿವಾಹ’ಗಳು ಮಾದರಿಯಾಗುತ್ತಿವೆ. ಇಂತಹ ಮಹತ್ಕಾರ್ಯಕ್ಕೆ ಮುಂದಾಗಿ ನಾಲ್ಕು ಜೋಡಿ ಸಾಮೂಹಿಕ ಸರಳ ವಿವಾಹ ನೆರವೇರಿಸುವ ಮೂಲಕ ಶಾಸಕ ಅನಿಲ್ ಚಿಕ್ಕಮಾದು ಮಾದರಿಯಾಗಿದ್ದಾರೆ.ಕರ್ನಾಟಕ ಸರ್ಕಾರದ ಮುಜರಾಯಿ ಇಲಾಖೆಯು ಈ ಯೋಜನೆಯಡಿ ವಧುವಿಗೆ ಚಿನ್ನದ ತಾಳಿ, ವರನಿಗೆ ಧೋತಿ-ಶರ್ಟ್ ಮತ್ತು ದಂಪತಿಗಳಿಗೆ ಒಟ್ಟು ₹55,000 ವರೆಗಿನ ಪ್ರೋತ್ಸಾಹ ಧನವನ್ನು ನೀಡುತ್ತಿದೆ. ಆದರೆ ನಂಜಗೂಡಿನಲ್ಲಿ ನಡೆದ ಈ ಸಾಮೂಹಿಕ ವಿವಾಹಕ್ಕೆ ಸರ್ಕಾರದಿಂದ ಒಂದೇ ಒಂದು ರೂಪಾಯಿ ಹಣ ಪಡೆಯದೆ ತಾಳಿ ಬಟ್ಟೆ, ಬಂದಂತಹ ಪ್ರತಿಯೊಬ್ಬರಿಗೂ ಊಟ ತಿಂಡಿ ವ್ಯವಸ್ಥೆ ಮಾಡುವ ಮೂಲಕ ಸಂಪೂರ್ಣ ವೆಚ್ಚವನ್ನು ಶಾಸಕ ಅನಿಲ್ ಚಿಕ್ಕಮಾದು ದಂಪತಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯರು ಆತ್ಮಗೌರವ, ಆತ್ಮವಿಶ್ವಾಸ ಮತ್ತು ಆತ್ಮಸ್ಥೈರ್ಯದಂತಹ ಗುಣಗಳನ್ನು ಬೆಳೆಸಿಕೊಂಡರೆ ಸಮಾಜದಲ್ಲಿ ಧೈರ್ಯವಾಗಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದು ಕವಿಯಿತ್ರಿ ಡಾ.ರೇಖಾ ಪಾಟೀಲ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಹಾಗೂ ಕಲಾ ನಿಕಾಯದ ಸಹಯೋಗದೊಂದಿಗೆ ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೬ ಪ್ರಯುಕ್ತ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಸೋಮವಾರ ಆಯೋಜಿಸಿದ್ದ ಬಹುಭಾಷಾ ಕವಿಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.ಮಹಿಳೆಯರ ಮೇಲಿನ ದೌರ್ಜನ್ಯವನ್ನು ತೊಡೆದು ಹಾಕಿ ಅವರು ತಲೆಯೆತ್ತಿ ನಿಲ್ಲಲು ಸಮಾಜದ ಎಲ್ಲರೂ ಸಹಕಾರ ನೀಡಬೇಕು. ಜಾಗತಿಕ ಮಟ್ಟದಲ್ಲಿ ಮಹಿಳೆಯರು ಹಲವು ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆದಿದ್ದರೂ, ದೈಹಿಕ ಮತ್ತು ಮಾನಸಿಕ ಒತ್ತಡಗಳನ್ನು ಎದುರಿಸುವ ಪರಿಸ್ಥಿತಿ ಇಂದಿಗೂ ಇದೆ. ಮಹಿಳೆಯರು ತಮ್ಮ ಮೇಲಿನ ದೌರ್ಜನ್ಯಗಳ ಕುರಿತು ದೂರು ನೀಡಲು ಇನ್ನೂ ಹಿಂಜರಿಯುತ್ತಿದ್ದಾರೆ, ಏಕೆಂದರೆ ಅಪರಾಧಿಗಳಿಂದಾಗುವ ಮುಂದಿನ ತೊಂದರೆಗಳ ಭಯ ಇದೆ ಎಂದು ಹೇಳಿದರು. ಲಿಂಗ ಅಸಮಾನತೆ ಮತ್ತು ಲಿಂಗ ಆಧಾರಿತ ತಾರತಮ್ಯವು…
