Author: editor.udayarashmi@gmail.com

ಸಿಂದಗಿಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಹಾಸೀಂಪೀರ ವಾಲೀಕಾರ ಮನವಿ ಸಿಂದಗಿ: ಗ್ರಾಮೀಣ ಬಾಗದ ಸೂಕ್ತ ಪ್ರತಿಭೆಗಳನ್ನು ಹೊರತರುವ ನಿಟ್ಟಿನಲ್ಲಿ ವಿಜಯಪುರದ ಇದೇ ೩೦ ಮತ್ತು ೩೧ ರಂದು ವಿಜಯಪುರದ ಕಂದಕಲ್ ಹಣಮಂತ್ರಾಯ ರಂಗ ಮಂದಿರದಲ್ಲಿ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಈ ತಾಲೂಕಿನ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಹಾಸೀಂಪೀರ ವಾಲೀಕಾರ ಮನವಿ ಮಾಡಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಹಿತ್ಯ ಪರಿಷತ್ತು ಬರೀ ಹಾಸೀಂಪೀರ ವಾಲಿಕಾರ ಹಾಗೂ ಕೆಲ ತಾಲೂಕು ಅದ್ಯಕ್ಷರ ಸ್ವತ್ತಲ್ಲ. ಅದು ಎಲ್ಲ ಕನ್ನಡಿಗರ ಸೊತ್ತು ಅದು ಎಲ್ಲರ ಮನೆಗಂಳದಲ್ಲಿ ಎಲ್ಲ ಮನದಲ್ಲಿ ಪ್ರಜ್ವಲಿಸಬೇಕು ಅಂತೆಯೇ ಸಾಹಿತ್ಯ ಪರಿಷತ್ತಿನ ಉದ್ದೇಶವಾಗಿದೆ. ಹಿಂದಿನ ಅಧ್ಯಕ್ಷರ ಕೆಲಸದ ಒತ್ತಡದ ಮಧ್ಯದಲ್ಲಿ ಕಳೆದ ೨ ವರ್ಷಗಳಿಂದ ಸಿಂದಗಿಯಲ್ಲಿ ಸಾಹಿತ್ಯ ಚಟುವಟಿಕೆಗಳಲ್ಲಿ ಕೊರತೆ ಉಂಟಾಗಿತ್ತು. ಅವುಗಳನ್ನು ಚುರಕುಗೊಳಿಸಲು ನೂತನ ಅದ್ಯಕ್ಷ ಶಿವಾನಂದ ಬಡಾನೂರ…

Read More

ಮೋರಟಗಿ: ತಾಲೂಕಿನ ಗ್ರಾಮಗಳಾದ ಕುಳೇಕುಮಟಗಿ, ಬಗಲೂರ, ಹಾವಳಗಿ, ಕಕ್ಕಳಮೆಲಿ, ಹಂಚಿನಾಳ, ಜಾಟ್ನಳ, ಬಿಸಾನಾಳ, ಕೆರೂರ ಸೇರಿದಂತೆ ಹತ್ತು ಹಲವಾರು ಹಳ್ಳಿಗಳಿಗೆ ವ್ಯಾಪಾರ ವಹಿವಾಟಕ್ಕೆ ಮೋರಟಗಿ ಗ್ರಾಮವು ಕೇಂದ್ರ ಬಿಂದುವಾಗಿದೆ. ಸ್ಥಳೀಯವಾಗಿ ೧೪ ಸಾವಿರಕ್ಕಿಂತಲೂ ಅಧಿಕ ಜನಸಂಖ್ಯೆ ಹೊಂದಿರುವ ಮೋರಟಗಿ ಗ್ರಾಮವನ್ನು ಹೋಬಳಿ ಕೇಂದ್ರವನ್ನಾಗಿ ಮಾಡಿ ಆದೇಶಿಸಬೇಕು ಎಂದು ಸ್ಥಳೀಯ ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಕಾಂಗ್ರೆಸ್ ಮುಖಂಡ ಮೈಬೂಬಸಾಬ ಕಣ್ಣಿ ಸೇರಿದಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೨ಕಿ.ಮೀ ಸಮೀಪದ ಸಿಂದಗಿ ತಾಲೂಕಿನಲ್ಲಿದ್ದ ಮೋರಟಗಿ ಗ್ರಾಮವನ್ನು ೪೫ಕಿಮೀ ದೂರದ ಆಲಮೇಲ ತಾಲೂಕಿಗೆ ಸೇರ್ಪಡೆಗೊಂಡಿದ್ದರಿಂದ ಸರಕಾರಿ ಸೌಲಭ್ಯಕ್ಕೆ, ವೃದ್ಧರು, ಅಂಗವಿಕಲರು ಬಹಳಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ. ರೈತರಿಗೆ, ವೃದ್ಧರಿಗೆ, ಅಂಗವಿಕಲರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮೋರಟಗಿ ಗ್ರಾಮವನ್ನು ಹೋಬಳಿ ಗ್ರಾಮವನ್ನಾಗಿ ಆದೇಶಿಸಲು ಹಿಂದಿನ ಶಾಸಕರಿಗೂ, ಸಚಿವರಿಗೂ ಹತ್ತು ಹಲವಾರು ಬಾರಿ ಮನವಿ ಮಾಡಿದ್ದೇವೆ. ಆದರೆ ಆಶ್ವಾಸನೆಗಳ ಸುರಿಮಳೆಗಳೇ ಬಂದಿವೆ ವಿನಃ ಕಾರ್ಯರೂಪಕ್ಕೆ ಬಂದಿಲ್ಲ. ನೂತನ ಶಾಸಕರಾಗಿ ಆಯ್ಕೆಯಾದ ಅಶೋಕ ಮನಗೂಳಿ ಅವರಿಗೂ…

Read More

ಪದವಿ-ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಘಟಿಕೋತ್ಸವ ಉದ್ಘಾಟಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಅಭಿಮತ ವಿಜಯಪುರ: ಎವಿಎಸ್ ಆಯುರ್ವೇದ ವೈದ್ಯ ಪದ್ಧತಿ ಕೊರೊನಾ ಸಂಕಷ್ಟ ಸಮಯದಲ್ಲಿ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಆರೋಗ್ಯವಾಗಿರಲು ಬಹಳಷ್ಟು ಜನರಿಗೆ ನೆರವಾಗಿದೆ ಎಂದು ವಿಧಾನ ಪರಿಷತ ಸದಸ್ಯ ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ 2017ನೇ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಅಂಗವಾಗಿ ನಡೆದ ಘಟಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ಕೊರೊನಾ ಸಮಯದಲ್ಲಿ ರೋಗ ಪ್ರತಿರೋಧಕ ಚೂರ್ಣ ತಯಾರಿಸಿ ಕೊರೊನಾ ವಾರಿಯರ್ಸ್ ಮತ್ತು ಜನಸಾಮಾನ್ಯರಿಗೂ ಉಚಿತವಾಗಿ ವಿತರಿಸಿದೆ. ಇದು ಅಂದಿನ ಕಠಿಣ ದಿನಗಳಲ್ಲಿ ಜನರಲ್ಲಿ ರೋಗ ಪ್ರತಿರೋಧಕ ಶಕ್ತಿ ಹೆಚ್ಚಳಕ್ಕೆ ಅನುಕೂಲವಾಗಿದೆ. ಇನ್ನು ಮುಂದೆಯೂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ವೈದ್ಯರು ನಡೆಸುವ ಸಂಶೋಧನೆಗಳಿಗೆ ಸಕಲ ರೀತಿಯ ನೆರವು ನೀಡಲಾಗುವುದು. ಜನಸೇವೆಯೇ ನಮ್ಮ…

Read More

ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘದ ಸಮ್ಮೇಳನ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಕುಟುಂಬ ಮತ್ತು ದೇಶಕ್ಕೆ ಆಧಾರ ಸ್ತಂಬವಾಗಿ ಸಮಾಜಕ್ಕೆ ಬೆನ್ನೆಲುಬಾಗಿರುವ ಮಹಿಳೆಯರನ್ನು ಸದಾ ಸದೃಢ ಮತ್ತು ಆರೋಗ್ಯವಂತವಾಗಿಡಲು ನಾವೆಲ್ಲರೂ ಪಣತೊಡೋಣ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ನಗರದ ಬಿ. ಎಲ್. ಡಿ. ಈ ವೈದ್ಯಕೀಯ ಕಾಲೇಜಿನ ಗ್ರಂಥಾಲಯದಲ್ಲಿ ಶುಕ್ರವಾರ ಮುಸ್ಸಂಜೆ ನಡೆದ ಕರ್ನಾಟಕ ರಾಜ್ಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಸಂಘದ 38ನೇ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ವಿಶ್ವದಲ್ಲಿ ಭೂಮಿ ತಾಯಿಯಂತೆ ಪ್ರಮುಖ ಪಾತ್ರ ವಹಿಸುತ್ತಾರೆ. ಮಹಿಳೆಗೆ ಮಾತ್ರ ಮತ್ತೋಂದು ಜೀವ ಸೃಷ್ಠಿ ಸಾಮರ್ಥ್ಯವಿದೆ. ದೇವರು ಜೀವಸೃಷ್ಠಿಗೆ ಮಹಿಳೆಯನ್ನು ಸೃಷ್ಠಿಸಿದ್ದಾರೆ.  ಹೀಗಾಗಿ ಹೆರಿಗೆ ಸಂದರ್ಭದಲ್ಲಿ ಮಹಿಳೆಯರ ಸಾವು ಮತ್ತು ಭ್ರೂಣ ಹತ್ಯೆ ತಡೆಯುವ ನಿಟ್ಟಿನಲ್ಲಿ ಎಲ್ಲರೂ ಗಮನ ಹರಿಸಬೇಕಿದೆ.  ಆರೋಗ್ಯವಂತ ಮಹಿಳೆ ತನ್ನ ಕುಟುಂಬವನ್ನು ಸುಖವಾಗಿ ಇಡಬಲ್ಲಳು. ಜೊತೆಗೆ ಸದೃಢ…

Read More

ಭೀಮಾಂತರಂಗ ಜಗಲಿ, ಆನ್ ಲೈನ್ ಉಪನ್ಯಾಸ ಮಾಲಿಕೆಯಲ್ಲಿ ಡಾ.ಮಧುಬಾಲ ಅಭಿಮತ ಇಂಡಿ: 19ನೇ ಶತಮಾನದಲ್ಲಿ ಕರ್ನಾಟಕ, ಕನ್ನಡ ಮತ್ತು ಕನ್ನಡ ಜನರಿಗೋಸ್ಕರ ದೂರದ ಗಡಿ ಸೊಲ್ಲಾಪುರದಲ್ಲಿ ನಿಂತು ಕನ್ನಡಿಗರ ಕೋಟೆ ಕಟ್ಟಿ ಅದನ್ನು ರಕ್ಷಣೆ ಮಾಡಿದ ಅಪ್ರತಿಮ ಹೋರಾಟಗಾರ್ತಿ, ಗಡಿನಾಡ ಸಿಂಹಿಣಿ ಜಯದೇವಿತಾಯಿ ಲಿಗಾಡೆ ಆಗಿದ್ದರು ಎಂದು ಸೋಲಾಪುರದ ಖ್ಯಾತ ವೈದ್ಯ-ಸಾಹಿತಿ ಡಾ.ಮಧುಬಾಲ ಲಿಗಾಡೆ ಹೇಳಿದರು.ಅವರು ಇಂಡಿಯ ಭೀಮಾಂತರಂಗ ಜಗಲಿ, ಆನ್ ಲೈನ್ ಸಾಹಿತ್ಯಿಕ-ಸಾಂಸ್ಕೃತಿಕ ಸಂಸ್ಥೆಯಿಂದ ಹಮ್ಮಿಕೊಂಡ ಉಪನ್ಯಾಸ ಮಾಲಿಕೆ-2 ರಲ್ಲಿ ಜಯದೇವಿತಾಯಿ ಲಿಗಾಡೆ ಬದುಕು-ಬರಹ ಕುರಿತು ಉಪನ್ಯಾಸ ನೀಡುತ್ತಾ ಈ ಮಾತುಗಳನ್ನು ಹೇಳಿದರು.ಸಿದ್ದರಾಮೇಶ್ವರ ಪುರಾಣ ಮಹಾಕಾವ್ಯ ಕರ್ತೃವಾಗಿ,ಕನ್ನಡ ಕಾವಲುಗಾರ್ತಿಯಾಗಿ,ಸಾಹಿತ್ಯ ಸಾಧಕಿಯಾಗಿ,ಆಧ್ಯಾತ್ಮ ಚಿಂತನಕಾರರಾಗಿ, ಕುಟುಂಬವತ್ಸಲೆಯಾಗಿ ಈಜಂಗಮತಾಯಿಯು ತಾಯ್ನುಡಿಯ ಸೇವೆಗಾಗಿ ತಮ್ಮ ಜೀವನ ಸವೆಸಿದರು. ಕನ್ನಡ ನಾಡು-ನುಡಿ ಬೆಳೆಸುವಲ್ಲಿ ಅವರ ಅಗಾಧ ಪರಿಶ್ರಮ, ಅದ್ಭುತಕಾರ್ಯ, ಅಪಾರ ಸಾಧನೆ ಇಂದಿಗೂ ಚಿರಸ್ಥಾಯಿಯಾಗಿದ್ದು, ಕನ್ನಡಿಗರ ಅಭಿಮಾನದ ಮಹಾತಾಯಿಯೇ ಆಗಿದ್ದಾರೆ ಎಂದು ಹೇಳಿದರು.ಹುಟ್ಟಿನಿಂದ ಹೋರಾಟ ಮನೋಭಾವ ಮೈಗೂಡಿಸಿಕೊಂಡು ಕನ್ನಡ ಚಳವಳಿ, ಸ್ವಾತಂತ್ರ ಏಕೀಕರಣ, ದಲಿತ ವಿಮೋಚನೆ, ಮಹಿಳಾಪರ ಕಾಳಜಿ,…

Read More

ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣ ಬೆಳಗಾವಿ: ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿರುವ ಅಮಾನವೀಯ ಘಟನೆ ವಿಚಾರವನ್ನು ಸದನಲ್ಲಿ ಚರ್ಚಿಸುವಂತೆ ಬಿಜೆಪಿ ಹೈಕಮಾಂಡ್​ ಸೂಚಿಸಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಮುಂದಾಗಿದೆ.ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದ ಘಟನೆ ದೇಶಾದ್ಯಂತ ಚರ್ಚೆ ಚರ್ಚೆಗೆ ಒಳಪಟ್ಟಿದೆ. ಪರಿಶಿಷ್ಟ ಜಾತಿ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದು ಖಂಡನಾರ್ಹ ಮತ್ತು ಖೇದಕರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕರಾದ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.ಘಟನೆ ಸಂತ್ರಸ್ತೆಯನ್ನು ಮುಖ್ಯಮಂತ್ರಿಗಳು ಭೇಟಿ ಮಾಡಿಲ್ಲ. ಗೃಹ ಸಚಿವರು ಹೊರತುಪಡಿಸಿ ಬೇರೆ ಯಾರೂ ಭೇಟಿ ಕೊಟ್ಟಿಲ್ಲ. ನಿನ್ನೆ ದಿನ ಹೈಕೋರ್ಟ್, ರಾಜ್ಯ ಸರಕಾರಕ್ಕೆ ಚಾಟಿ ಬೀಸಿದೆ. ಯಾಕೆ ಸರಕಾರ ಇದು ನಡೆಯಲು ಬಿಟ್ಟಿದೆ? ಪೊಲೀಸ್ ಗಸ್ತು ಯಾಕೆ ಇರಲಿಲ್ಲ? ರಾಜ್ಯ ಸರಕಾರ ಇಂಥ ಘಟನೆ ಆಗದಂತೆ ತಡೆಯಲು ಏನು ಕ್ರಮ ಕೈಗೊಂಡಿದೆ?…

Read More

ಬೆಂಗಳೂರು: ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು. ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಶುಕ್ರವಾರ ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ ಈ ಮಾತುಗಳನ್ನಾಡಿದರು.ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನವಾಗಿದೆ. ಕರ್ನಾಟಕದ ಏಕೀಕರಣಕ್ಕಾಗಿ ಬಹಳಷ್ಟು ಜನರು ಹೋರಾಡಿದ್ದಾರೆ. ಭಾಷಾವಾರು ಪ್ರಾಂತ್ರ್ಯ ರಚನೆಯಾಗಲು ಹೋರಾಟ ಮಾಡಿದವರಿದ್ದಾರೆ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.ಕಿತ್ತೂರು ಕರ್ನಾಟದ 5 ತಾಲ್ಲೂಕುಗಳು ಸೇರಿದಂತೆ ಅತ್ಯಂತ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ಕೊಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14,877.36 ಕೋಟಿ ರೂ.ಗಳು ಮೀಸಲಿಡಲಾಗಿದೆ. ಬಿಡುಗಡೆಯಾಗಿದ್ದು 10,280 ಕೋಟಿ ರೂ. ಹಾಗೂ 8,330 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ವರ್ಷದಿಂದ 5,000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ನೀಡಲಾಗುವುದು ಎಂದರು.

Read More

ಸಹಕಾರಿ ಬ್ಯಾಂಕ್‌ಗಳಲ್ಲಿರುವ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮಾತ್ರ ಮನ್ನಾ | ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ (ಡಿಸೆಂಬರ್ 15) ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಮಾತನಾಡಿದ ಸಿಎಂ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ತಿಳಿಸಿದ್ದಾರೆ.“ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುತ್ತೇವೆ ಎಂದು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತಿದ್ದೇವೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪ್ರಣಾಳಿಕೆಯಲ್ಲಿ ರೈತರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ, ಬಳಿಕ ಬಂದ ಯಡಿಯೂರಪ್ಪ ಸರ್ಕಾರ ಯಾವುದೇ ಸಾಲ ಮನ್ನಾ ಮಾಡಿಲ್ಲ” ಎಂದು ಸಿಎಂ ಹೇಳಿದ್ದಾರೆ.ಡಿಸೆಂಬರ್ 4ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಾರಂಭಗೊಂಡ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು(ಡಿ.15) ಕೊನೆಗೊಂಡಿದೆ.

Read More

ಕನ್ನಡಿಗರ ಕೂಗಾಗಿ, ಜನಾಂದೋಲನವಾಗಿ ಡಿ.17ರಂದುಅಸಂಖ್ಯಾತ ಅಭಿಮಾನಿಗಳಿಂದ ಬೆಂಗಳೂರಿನಲ್ಲಿ ಪ್ರತಿಭಟನೆ – ಸಿದ್ಧಾಪುರ ಶಿವಕುಮಾರ್ ಡಾ.ವಿಷ್ಣುವರ್ಧನ್ ಬರೀ ಜನಪ್ರಿಯ  ಅತ್ಯುತ್ತಮ ಕಲಾವಿದರಲ್ಲ, ಸಾಮಾಜಿಕ ಸೇವಕ ಚಿಂತಕರು, ಆಧ್ಯಾತ್ಮಶೀಲರು. ಬರೀ ತನ್ನ ಅಭಿನಯ ಭಾಷಣದ ಮೂಲಕ  ಜನರಿಗೆ ಭೋದಿಸಿದವರಲ್ಲ. ತಕ್ಕಂತೆ ಬಾಳಿ ಬದುಕಿದವರು. ಕನ್ನಡ ಭಾಷೆ ನೆಲ ಜಲ ಬಗ್ಗೆ ಕಾಳಜಿಹೊಂದಿದವರು. ಹೆಣ್ಣುಕುಲವನ್ನು ಬರೀ ನಟನೆಯಿಂದ ಹಾಡಿ ಹೊಗಳದೇ ತನ್ನ ಆದರ್ಶದ ಬದುಕಿನ ನಡೆತೆಯಿಂದಲೇ  ಗೌರವಿಸುವುದನ್ನು ತೋರಿಸಿದವರು. ಒಬ್ಬ ಕಲಾವಿದ ಬೆಳೆಯಬೇಕಾದಾಗ ಕಿಡಿಗೇಡಿಗಳ ಕಿರುಕುಳ  ಸಮಸ್ಯೆ ಸವಾಲುಗಳನ್ನು  ಎದುರಿಸಿ ಬೆಳೆಯಬೇಕೆಂಬುದಕ್ಕೆ ಸ್ಪೂರ್ತಿ ಸಾಕ್ಷಿಯಾದವರು.  ಪ್ರಶಸ್ತಿ ಪುರಸ್ಕಾರ ಸನ್ಮಾನಗಳ ಗೀಳಿಲ್ಲದೆ ಅದಕ್ಕಿಂತ ಮಿಗಿಲಾಗಿ ಅಭಿಮಾನವನ್ನು ಸಹಜವಾಗಿಯೇ ಸಂಪಾದಿಸಿದವರು. ಮಾನ ಅವಮಾನಗಳ ನಡುವೆಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಹೃದಯವಂತರಾದವರು. ತನ್ನ ಆದಾಯಕ್ಕಿಂತ ಅಧಿಕವಾಗಿ ಅಸಂಖ್ಯಾತರಿಗೆ ದಾನ ಧರ್ಮಕ್ಕೆ ಯಾವುದೇ ಪ್ರಚಾರ ಬಯಸದೆ ಕೃತಿ ರೂಪದಲ್ಲಿ ಸಾಕ್ಷಿಯಾದವರು. ವಿಷ್ಣುವರ್ಧನ್ ಇಹಲೋಕ ತ್ಯಜಿಸಿ ಹದಿನಾಲ್ಕು ವರ್ಷಗಳೇ ದಾಟಿದರೂ ಅವರನ್ನು ಅಭಿಮಾನಿಸುವ ಗೌರವಿಸುವ ಸಂತನಂತೆ ಪೂಜಿಸುವವರ ಕ್ರೇಜ್ ಹೆಚ್ಚುತ್ತಲಿದೆ ವಿನಃ ಕಡಿಮೆಯಾಗುತ್ತಿಲ್ಲ ಆಗುವುದೂ…

Read More