Author: editor.udayarashmi@gmail.com

ಮುದ್ದೇಬಿಹಾಳ: ಶಕ್ತಿ ಸಾಮರ್ಥ್ಯ ಇದ್ದ ವ್ಯಕ್ತಿ ಎಂದಿಗೂ ನ್ಯಾಯ, ನೀತಿ, ಧರ್ಮವನ್ನು ಬಿಡಬಾರದು ಎಂದು ಹಾರ್ವರ್ಡ್ ಪಿ.ಯು.ಸೈನ್ಸ್ ಕಾಲೇಜಿನ ಅಧ್ಯಕ್ಷ ಎಸ್.ಎಮ್.ನೆರಬೆಂಚಿ ಹೇಳಿದರು.ಪಟ್ಟಣದ ಹೊರವಲಯದಲ್ಲಿ ನಾಲತವಾಡ ರಸ್ತೆಯಲ್ಲಿರುವ ಹಾರ್ವರ್ಡ್ ಪಿ.ಯು.ಸೈನ್ಸ್ ಕಾಲೇಜಿನಲ್ಲಿ, ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಯತಿವರೇಣ್ಯರಾದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಆಯೋಜಿಸಿರುವ ಭಗವದ್ಗೀತಾ ಅಭಿಯಾನ ಕರ್ನಾಟಕ-೨೦೨೩ರ ತಾಲೂಕು ಮಟ್ಟದ ಸಪ್ತಾಹದ ೬ನೇ ದಿನದ ಉಪನ್ಯಾಸಮಾಲಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭೂಮಿಗೆ ಬಂದ ಪ್ರತಿಯೊಬ್ಬ ಮನುಷ್ಯನಿಗೂ ಅಂತ್ಯವೆಂಬ ಸತ್ಯವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ಹಣಬಲ, ತೋಳ್‌ಬಲ ಇದೆ ಅಂದ ಮಾತ್ರಕ್ಕೆ ನ್ಯಾಯ, ನೀತಿ ಮತ್ತು ಧರ್ಮವನ್ನು ಬಿಟ್ಟು ಬದುಕಬಾರದು ಎಂದು ಭಗದ್ಗೀತೆಯ ಪ್ರತಿಯೊಂದು ಅಧ್ಯಾಯಗಳು ಹೇಳುತ್ತವೆ. ನಮ್ಮ ಶಕ್ತಿ ಸಾಮರ್ಥ್ಯವನ್ನು ಸಾಧ್ಯವಾದಷ್ಟು ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸಬೇಕು ಎಂದರು.ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ.ಚಲವಾದಿ, ನಿವೃತ್ತ ಮುಖ್ಯಗುರು ಎಸ್.ಎಚ್.ಮುದ್ನಾಳ, ನಿವೃತ್ತ ಖಾದಿ ಗ್ರಾಮೋದ್ಯೋಗ ಕೇಂದ್ರದ ನೌಕರರಾದ ಕೆ.ಎಸ್.ಕುಲಕರ್ಣಿ ಮಾತನಾಡಿದರು.ಈ ಸಂದರ್ಭದಲ್ಲಿ ಪ್ರಾಚಾರ್ಯೆ ರಾಜಶ್ರೀ ರೂಢಗಿ. ಉಪನ್ಯಾಸಕರಾದ ಇಮಾಂಬು ಗಂಗೂರ, ಸಿ.ಎಸ್.ಪಾಟೀಲ್, ದಾನಪ್ಪ ಹೊಸಮನಿ…

Read More

ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಗೋಲಗೇರಿಯ ಶ್ರೀ ಗೊಲ್ಲಾಳೇಶ್ವರ ಕಾತಿ೯ಕೋತ್ಸವ ಡಿ.೧೮ರಂದು ನಡೆಯಲಿದೆ.ದೇವಸ್ಥಾನದ ಧಮ೯ದಶಿ೯ ವರಪುತ್ರ ಹೊಳೆಪ್ಪನವರು ದೇವರಮನಿ ಸಾನ್ನಿಧ್ಶದಲ್ಲಿ ಡಿ.೧೮ರಂದು ಸೋಮವಾರ ಮಧ್ಶಾಹ್ನ ಗೊಲ್ಲಾಳೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ದೀಪಾಲಂಕಾರ ಮಾಡಲಾಗುವುದು. ಸಂಜೆ ೭ಗಂಟೆಗೆ ದೀಪೋತ್ಸವ ನಂತರ ಗೊಲ್ಲಾಳೇಶ್ವರ ಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದು ದೇವಸ್ಥಾನ ಟ್ರಸ್ಟ್ ಕಾಯಾ೯ಧ್ಶಕ್ಷ ರವಿರಾಜ ದೇವರಮನಿ ಸದ್ಭಕ್ತರಲ್ಲಿ ಮನವಿ ಮಾಡಿದ್ದಾರೆ.

Read More

ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಸುಕ್ಷೇತ್ರ ಬ್ರಹ್ಮದೇವನಮಡು ಗ್ರಾಮದ ಆರಾಧ್ಶ ದೈವ ಶ್ರೀ ಬಲಭೀಮೇಶ್ವರ (ಚಟ್ಟಿ) ಕಾತಿ೯ಕೋತ್ಸವ ಡಿ.೧೬ ರಂದು ನಡೆಯಲಿದೆ. ದೇವಸ್ಥಾನದ ಅಚ೯ಕ ನಿಂಗಣ್ಣಚಾಯ೯ ಜೋಶಿ ಸಾನ್ನಿಧ್ಶದಲ್ಲಿ ಬಲಭೀಮೇಶ್ವರ ಮೂತಿ೯ಗೆ ವಿಶೇಷ ಪೂಜೆ ಸಲ್ಲಿಸಿ ದೀಪಾಲಂಕಾರ ಮಾಡಲಾಗುವುದು.ಸಂಜೆ ಭಕ್ತರಿಗೆ ಭಜ್ಜಿ, ರೊಟ್ಟಿ ಪ್ರಸಾದ ವ್ಶವಸ್ಥೆ ಕಲ್ಪಿಸಲಾಗಿದೆ. ಅಂದು ಇಡೀ ರಾತ್ರಿ ಖಾನಾಪೂರ, ಹೊನ್ನಳ್ಳಿ, ಕಡಕೋಳ,ಅರಳಗುಂಡಗಿ ಭಜನಾ ಮಂಡಳಿಯವರಿಂದ ಭಜನೆ ನಡೆಯಲಿದೆ ಎಂದು ಮುಖಂಡ ರುದ್ರಣ್ಣಸಾಹು ಮಾನಶೆಟ್ಟಿ, ಕಮೀಟಿ ಅಧ್ಶಕ್ಷ ರೇವಣಸಿದ್ದಸಾಹು ಕೋರವಾರ ಭಕ್ತರಲ್ಲಿ ಮನವಿ ಮಾಡಿದ್ದಾರೆ.

Read More

ಚಿಮ್ಮಡದ ಕಾರ್ತಿಕ ದೀಪೋತ್ಸವದಲ್ಲಿ ಪ್ರಭು ಶ್ರೀ ಅಭಿಮತ ಚಿಮ್ಮಡ: ಪ್ರತಿಯೊಂದು ಧರ್ಮದ ಪೂರ್ವಜರು ಆಚರಣೆಗೆ ತಂದಿರುವ ಹಬ್ಬ, ಹರಿದಿನ, ಧಾರ್ಮಿಕ, ಸಾಮಾಜಿಕ ಉತ್ಸವಗಳಿಗೆ ವೈಜ್ಞಾನಿಕ ಹಿನ್ನೆಲೆಗಳಿವೆ ಎಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.ಗ್ರಾಮದಲ್ಲಿ ಗುರುವಾರ ರಾತ್ರಿ ಶ್ರೀ ಪ್ರಭುಲಿಂಗೇಶ್ವರ ಕಾರ್ತಿಕೋತ್ಸವದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ದೀಪೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು ಕಾರ್ತಿಕ ಮಾಸದ ಮಾಗಿಯ ಛಳಿಯಿಂದ ಪ್ರಕೃತಿದತ್ತ ಬರುವ ರೋಗಾಣುಗಳನ್ನು ನಾಶಗೊಳಿಸಲು ಆಚರಣೆಗೆ ತಂದಿರುವ ಈ ದೀಪೋತ್ಸವದಿಂದ ಮನುಷ್ಯರ ಜೀವನ ಬೆಳಗಲಿದೆಯಂದರು. ಸ್ಥಳಿಯ ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಮಾತನಾಡಿದರು., ಬಾಳಪ್ಪಾ ಹಳಿಂಗಳಿ, ಅಣ್ಣಪ್ಪಗೌಡ ಪಾಟೀಲ, ರಾಮಪ್ಪಾ ಬಗನಾಳ, ಗ್ರಾಪಂ. ಮಾಜಿ ಅಧ್ಯಕ್ಷ ಶಂಕರ ಬಟಕುರ್ಕಿ, ಗುರಲಿಂಗಪ್ಪಾ ಪೂಜಾರಿ, ಆನಂದ ಕವಟಿ, ಪರಪ್ಪಾ ಪಾಲಭಾವಿ, ಅಶೋಕ ಧಡೂತಿ, ಬೀರಪ್ಪಾ ಹಳೆಮನಿ, ಪ್ರಭು ಮುಧೋಳ, ಬಸವರಾಜ ಕುಂಚನೂರ ಸೇರಿದಂತೆ ಹಲವಾರು ಜನ ಪ್ರಮುಖರು ಭಾಗವಹಿಸಿದ್ದರು.ಇದೇ ಸಂದರ್ಭದಲ್ಲಿ ಗ್ರಾಮದ ಭಾಹುಸಾಹೇಬರ ಮಠದ ಆವರಣದಿಂದ ಬನಸಂಕರಿ…

Read More

ದೇವರಹಿಪ್ಪರಗಿ: ತಾಲ್ಲೂಕಿನ ಮಣೂರ ಗ್ರಾಮದ ವೆಂಕಟೇಶ್ವರ ಜಾತ್ರಾ ಮಹೋತ್ಸವ ಡಿ.೧೭ ರಂದು ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಜರುಗಲಿದೆ.ದೇವಸ್ಥಾನದ ಆವರಣದಲ್ಲಿ ಜರುಗುವ ಮಹೋತ್ಸವದಲ್ಲಿ ಬೀದರ ಚಿದಂಬರ ಆಶ್ರಮದ ಡಾ.ಶಿವಕುಮಾರ ಸ್ವಾಮೀಜಿ, ವೀರಗೋಟ ಅಡವಿಲಿಂಗ ಮಹಾರಾಜರು, ವಿಜಯಪುರ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ದೇವೂರ ಹಿರೇಮಠದ ಮರುಳಾರಾಧ್ಯಶ್ರೀಗಳು, ಬಾಲಗಾವಿ ಗುರುದೇವ ಆಶ್ರಮದ ಅಮೃತಾನಂದ ಸ್ವಾಮೀಜಿ ಸೇರಿದಂತೆ ಸಂಸದರು, ಸ್ಥಳೀಯ ಹಾಗೂ ಸಿಂದಗಿ ಮತಕ್ಷೇತ್ರಗಳ ಶಾಸಕರು ಭಾಗವಹಿಸಲಿದ್ದಾರೆ.ಶ್ರೀವೆಂಕಟೇಶ್ವರ ದೇವಸ್ಥಾನ ಸೇವಾ ಸಮೀತಿಯ ಅಧ್ಯಕ್ಷ ಎಲ್.ಆರ್.ಅಂಗಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕೊನೆಯಲ್ಲಿ ಮಹಾಪ್ರಸಾದ ಜರುಗುವುದು ಎಂದು ದೇವಸ್ಥಾನದ ಸೇವಾ ಸಮೀತಿ ಪ್ರಕಟಣೆ ಮೂಲಕ ತಿಳಿಸಿದೆ.

Read More

ದೇವರಹಿಪ್ಪರಗಿ: ಶ್ರೀವೀರಭದ್ರೇಶ್ವರ ದೇವರ ನೂತನ ಮೂರ್ತಿ ಪ್ರಾಣ ಪ್ರತಿಷ್ಠಾಪನೆಯ ಹನ್ನೊಂದನೆಯ ವರ್ಷದ ಕಾರ್ತಿಕೋತ್ಸವ ಹಾಗೂ ದೀಪೋತ್ಸವದ ಅಂಗವಾಗಿ ಶ್ರೀ ರಂಭಾಪುರಿ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ದಿ:೧೮ ಸೋಮವಾರದಂದು ಜರುಗಲಿದೆ.ಪಟ್ಟಣದ ಬಿ.ಎಲ್.ಡಿ.ಇ ಪ್ರೌಢಶಾಲಾ ಆವರಣದಿಂದ ಮಧ್ಯಾನ್ಹ ೩ ಗಂಟೆಗೆ ಕುಂಭ, ಕಳಸ, ವಾದ್ಯ ವೈಭವಗಳೊಂದಿಗೆ ಆರಂಭಗೊಳ್ಳುವ ಮಹೋತ್ಸವ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ವೀರಭದ್ರೇಶ್ವರ ದೇವಸ್ಥಾನ ತಲುಪುವುದು. ನಂತರ ೭ ಗಂಟೆಗೆ ಧರ್ಮಸಭೆ ಆರಂಭಗೊಳ್ಳಲಿದೆ.ಅಡ್ಡಪಲ್ಲಕ್ಕಿ ಮಹೋತ್ಸವ ಹಾಗೂ ಧರ್ಮಸಭೆಯಲ್ಲಿ ಸಿಂದಗಿ, ದೇವರಹಿಪ್ಪರಗಿ, ದೇವೂರ, ಬಸವನ ಬಾಗೇವಾಡಿ, ಕನ್ನೋಳ್ಳಿ, ಕೊಕಟನೂರ, ಕನ್ನೂರ, ಚಿಮ್ಮಲಗಿ, ತಾಳಿಕೋಟಿ ಮಠಗಳ ಶ್ರೀಗಳು, ಪೂಜ್ಯರು, ಸ್ಥಳೀಯ ಮತ್ತು ಸಿಂದಗಿ ಮತಕ್ಷೇತ್ರಗಳ ಶಾಸಕರು, ಮಾಜಿಶಾಸಕರು, ರಾಜಕೀಯ ಧುರೀಣರು ಸೇರಿದಂತೆ ಪಟ್ಟಣದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ.ಈ ಕಾರ್ಯಕ್ರಮದಲ್ಲಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸದ್ಭಕ್ತರು ಭಾಗವಹಿಸಿ ಶ್ರೀಗಳ ಕೃಪೆಗೆ ಪಾತ್ರರಾಗುವುದರ ಜೊತೆಗೆ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೇವಾ ಸಮೀತಿ ಪ್ರಕಟಣೆ ಮೂಲಕ ತಿಳಿಸಿದೆ.

Read More

ದೇವರಹಿಪ್ಪರಗಿ: ದಿ: ೧೬ ರಂದು ಶನಿವಾರ ಬೆಳಿಗ್ಗೆ ೧೦ ಘಂಟೆಗೆ ದೇವರಹಿಪ್ಪರಗಿ ಇಂಡಿ ರಸ್ತೆಯಲ್ಲಿಯ ಹೆಸ್ಕಾಂ ಉಪವಿಭಾಗೀಯ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ ಹಮ್ಮಿಕೊಳ್ಳಲಾಗಿದೆ.ತಾಲ್ಲೂಕಿನ ಎಲ್ಲಾ ಗ್ರಾಹಕರು ಸಭೆಗೆ ಆಗಮಿಸಿ ತಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಕಾರ್ಯ ಮತ್ತು ಪಾಲನೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Read More

ಮೋರಟಗಿ: ಇಡೀ ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಸಂಸ್ಕೃತಿ ಹೊಂದಿದಂತ ನಾಡು ನಮ್ಮದು. ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಯುವ ಪೀಳಿಗೆಗೆ ದಾರಿದೀಪವಾಗುತ್ತವೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ಗ್ರಾಮದ ಆರಾಧ್ಯದೇವ ಶ್ರೀವೀರಭದ್ರೇಶ್ವರ ಜಾತ್ರೆಯ ಪ್ರಯುಕ್ತ ಗುರುವಾರ ರಾತ್ರಿ ಹಮ್ಮಿಕೊಂಡ ಧರ್ಮ ಸಭೆಯಲ್ಲಿ ಜ್ಯೋತಿ ಬೆಳಗಿಸಿ ಅವರು ಮಾತನಾಡಿದರು.ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗುತ್ತಿದ್ದಂತೆ ಜಾತ್ರೆಗಳು ಸಂಸ್ಕೃತಿಕ ಕಾರ್ಯಕ್ರಮಗಳು ಸಂಸಾರಿಕ ನಾಟಕ, ಬಯಲಾಟ ಗಳು ಮಾಯವಾಗುತ್ತಿವೆ. ನಮ್ಮ ಹಿರಿಯರ ಕಾಲದಲ್ಲಿ ಒಡೆದು ಹೋದಂತ ಸಂಸಾರಗಳು ಒಳ್ಳೆಯ ನಾಟಕಗಳು ನೋಡಿ ಅದರಲ್ಲಿ ಬರುವಂತಹ ದೃಶ್ಯಗಳನ್ನು ವೀಕ್ಷಿಸಿ ತಮ್ಮಷ್ಟಕ್ಕೆ ತಾವೇ ಒಗ್ಗೂಡಿದ್ದಾರೆ. ಆ ನಿಟ್ಟಿನಲ್ಲಿ ಇಂದಿನ ಯುವಕರು ಅನವಶ್ಯಕವಾಗಿ ಮೊಬೈಲ್ ಉಪಯೋಗಿಸದೆ, ಸತ್ಯ ಶರಣರ ಸಂತರ, ದಾಸರ ಪುರಾಣ ಪ್ರವಚನಗಳನ್ನು ಆಲಿಸಿ ಉತ್ತಮ ನಾಗರೀಕರಾಗಿ ಹೊರಹೊಮ್ಮಬೇಕು ಎಂದು ಹೇಳಿದ ಅವರು, ಈ ಗ್ರಾಮದಲ್ಲಿ ವರ್ಷದೊಳಗೆ ತಿಂಗಳಿಗೊಂದು ಜಾತ್ರೆಗಳು ಹಮ್ಮಿಕೊಂಡು ಜಾತ್ಯತೀತವಾಗಿ ಧಾರ್ಮಿಕ ಸಮಾರಂಭಗಳು ಹಮ್ಮಿಕೊಳ್ಳುತ್ತಿರುವ ಗ್ರಾಮಸ್ಥರ ಕಾರ್ಯ ಶ್ಲಾಘನೀಯ ಎಂದರು.ಕಾರ್ಯಕ್ರಮದಲ್ಲಿ ಕನ್ನಯ್ಯ ಮುತ್ಯಾ ಸಾನಿಧ್ಯ…

Read More

ನಗರಾಭಿವೃಧ್ಧಿಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ ಬಬಲೇಶ್ವರ ಭೇಟಿ ಬಬಲೇಶ್ವರ: ಜಿಲ್ಲಾ ನಗರಾಭಿವೃಧ್ಧಿಕೋಶದ ಯೋಜನಾ ನಿರ್ದೇಶಕ ವಿಜಯ ಮೆಕ್ಕಳಕಿ ಬುಧವಾರ ಬಬಲೇಶ್ವರ ಪಟ್ಟಣ ಪಂಚಾಯತ ಕಾರ್ಯಾಲಯಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.ಪಟ್ಟಣದಲ್ಲಿ ನಡೆಯುತ್ತಿರುವ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲಿಸಿ ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಿ ಆರಂಭ ಮಾಡದ ಕಾಮಗಾರಿಗಳನ್ನು ಪ್ರಾರಂಭಿಸಿ ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ತಿಳಿಸಿದರು.ಕಛೇರಿಯಲ್ಲಿ ಎಲ್ಲಾ ಸಿಬ್ಬಂದಿಗಳ ಸಭೆ ನಡೆಸಿ ಸರಿಯಾಗಿ ಕೆಲಸ ನಿರ್ವಹಿಸಬೇಕು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು. ಕಾಲಮಿತಿಯೊಳಗೆ ಕೆಲಸ ಮಾಡಬೇಕು. ಪಟ್ಟಣದಲ್ಲಿ ಸ್ವಚ್ಚತೆ ಕಾಪಾಡಲು ಹಾಗೂ ಟ್ರೇಡ ಲೈಸನ್ಸ ಶೇ 100 ರಷ್ಟು ಕಿರಿಯ ಆರೋಗ್ಯ ನೀರಿಕ್ಷರು ವಸೂಲಿ ಮಾಡಬೇಕು. ಕಂದಾಯ ವಸೂಲಿಯಲ್ಲಿ ಶೇ 100 ರಷ್ಟು ಸಾಧಿಸಬೇಕು. ಸಾರ್ವಜನಿಕ ಆಸ್ತಿಗಳ ಡಿಜಿಟಲಿಕರಣ ಕೆಲಸ ಡಿಸೆಂಬರ್ ಅಂತ್ಯದವರೆಗೆ ಪೂರ್ಣಗೊಳಿಸಬೇಕು. ಕಾರ್ಯಾಲಯದ ನೀರು ಸರಬರಾಜು ಸಿಬ್ಬಂದಿಗಳಿಗೆ ಪಟ್ಟಣದಲ್ಲಿ ಯಾವುದೇ ರೀತಿಯ ನೀರಿನ ತೊಂದರೆಯಾಗದಂತೆ ಕೆಲಸ ನಿರ್ವಹಿಸಬೇಕು. ತೆರಿಗೆ ವಸೂಲಿಯಲ್ಲಿ ಕಂದಾಯ ವಿಭಾಗದ ಸಿಬ್ಬಂದಿಗಳಿಗೆ…

Read More

ಕೊಲ್ಹಾರ: ಬರ ಪರಿಸ್ಥಿತಿ ಇರುವುದರಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು . ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವುದರ ಜೊತೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಂಡು ಪ್ರತಿ ಮನೆಗಳಿಗೆ ತೆರಳಿ ಕೂಲಿ ಬೇಡಿಕೆ ಸಂಗ್ರಹಿಸುವುದು, ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಸಭೆಗಳನ್ನು ಆಯೋಜಿಸಿ ನರೇಗಾ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖವಾಗಿರುತ್ತದೆ. ಒಂದು ವೇಳೆ ಅಧಿಕಾರಿಗಳು ಕೆಲಸ ಬಯಸಿ ಬರುವ ಕೂಲಿಕಾರರಿಗೆ ಕೆಲಸ ನೀಡದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಮುದ್ದಿನ್ ತಿಳಿಸಿದರು.ಪಟ್ಟಣದ ತಾಲೂಕ ಪಂಚಾಯಿತಿ ಕಾರ್ಯಾಲಯದಲ್ಲಿ ಗುರುವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆ ತಗೆದುಕೊಂಡು ಬರ ಪರಿಸ್ಥಿತಿ ಇರುವುದರಿಂದ ಕೂಲಿ ಬಯಸಿ ಅರ್ಜಿ ಸಲ್ಲಿಸಿದ ೧೫ ದಿನಗಳೊಳಗಾಗಿ ಕೆಲಸ ನೀಡಬೇಕು, ಒಂದು ವೇಳೆ ಅರ್ಜಿ ಸಲ್ಲಿಸಿದ ೧೫ ದಿನಗಳೊಳಗಾಗಿ ಕೆಲಸ ನೀಡದಿದ್ದಲ್ಲಿ ಅಂತಹ ಫಲಾನುಭವಿಗಳಿಗೆ ಕಡ್ಡಾಯವಾಗಿ ನಿರುಧ್ಯೋಗ ಭತ್ಯೆ ಕೊಡಿಸಲು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈಗಾಗಲೇ ಸೂಚನೆ…

Read More