Author: editor.udayarashmi@gmail.com

ಕೊಲ್ಹಾರ: ತಾಲೂಕಿನ ರೋಣಿಹಾಳ ಸಮೀಪದ ಮುತ್ತಲದಿನ್ನಿ ಗ್ರಾಮದ ಆರಾಧ್ಯ ದೇವತೆ ಹನುಮಾನ ದೇವರ ಕಾರ್ತಿಕ ದೀಪೋತ್ಸವ ಮಂಗಲ ಕಾರ್ಯಕ್ರಮ ಡಿ.೧೬ ಶನಿವಾರ ಸಾಯಂಕಾಲ ಜರುಗುವದು ಎಂದು ದೇವಸ್ಥಾನ ಸಮೀತಿಯವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.ದಿನಾಂಕ ೧೬ ಶನಿವಾರ ಸಾಯಂಕಾಲ ೬ ಘಂಟೆಗೆ ಸಂಗೀತ ಕಾರ್ಯಕ್ರಮ ೭ ಘಂಟೆಗೆ ಭಕ್ತಾಧಿಗಳಿಂದ ದೀಪೋತ್ಸವ ಬೆಳಗುವದು. ತದನಂತರ ೭.೩೦ ಘಂಟೆಗೆ ವಿಜಯಪೂರ ಜ್ಞಾನಯೋಗಾಶ್ರಮದ ಸಂಗಮೇಶ್ವರ ಮಹಾಸ್ವಾಮಿಗಳವರಿಂದ ಪ್ರವಚನ ಕಾರ್ಯಕ್ರಮ ಜರುಗುವದು. ಭಕ್ತಾಧಿಗಳು ದೇವರ ದರ್ಶನ ಆಶಿರ್ವಾದ ಮತ್ತು ಪ್ರವಚನವನ್ನು ಆಲಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮೀತಿಯವರು ತಿಳಿಸಿದ್ದಾರೆ.

Read More

ಕೊಲ್ಹಾರ: ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಮೇಲೆ ಆಕರ್ಷಿತರಾಗಬಾರದೆನ್ನುವ ಕಾರಣಕ್ಕಾಗಿ ಶಾಲಾ-ಕಾಲೇಜುಗಳ ೧೦೦ಮೀ ವ್ಯಾಪ್ತಿಯಲ್ಲಿ ಯಾವುದೇ ಅಂಗಡಿಗಳಲ್ಲಿ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಒಂದು ವೇಳೆ ಮಾರಾಟ ಮಾಡಿದ್ದೆಯಾದಲ್ಲಿ ಅಂಗಡಿಗಳ ಮೇಲೆ ಸೂಕ್ತ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದು ತಹಶೀಲ್ದಾರ ಎಸ್.ಎಸ್. ನಾಯಕಲಮಠ ಹೇಳಿದರು.ಪಟ್ಟಣದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ತಾಲೂಕಿನಾದ್ಯಂತ ಹಮ್ಮಿಕೊಂಡ ಗುಲಾಬಿ ಆಂದೋಲನ ಜನಜಾಗೃತಿ ಕಾರ್ಯಕ್ರಮಕ್ಕೆ ಸರ್ಕಾರಿ ಪ್ರೌಢ ಶಾಲಾ ವ್ಯಾಪ್ತಿಯ ಗೂಡಂಗಡಿಗಳ ಮಾಲಿಕರಿಗೆ ವಿದ್ಯಾರ್ಥಿಗಳಿಂದ ಗುಲಾಬಿ ಹೂವು ಕೊಡಿಸಿ ಮಾತನಾಡಿದರು.ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಹಾಗೂ ಅವುಗಳನ್ನು ಸೇವಿಸುವುದು ಬಹಳಷ್ಟು ಅಪಾಯಕಾರಿಯಾಗಿದೆ. ಸರ್ಕಾರದ ಆದೇಶದ ಅನುಸಾರ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಇಂದು ಪಟ್ಟಣದ ಶಾಲಾ ಕಾಲೇಜುಗಳ ಸುತ್ತಮುತ್ತ ನೂರು ಮೀಟರ್ ಅಂತರದಲ್ಲಿ ವ್ಯಾಪಾರ ಮಾಡುವಂತಹ ವ್ಯಾಪಾರಸ್ಥರಿಗೆ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಮರಾಟ ಮಾಡಬಾರದು ಎಂದು ಗುಲಾಬಿ ಹೂವನ್ನು ಕೊಡುವುದರ ಮೂಲಕ ಒಂದು ವಾರದ ಗಡುವನ್ನು ನೀಡಲಾಗಿದೆ. ಮನವರಿಕೆ…

Read More

ಬಸವನಬಾಗೇವಾಡಿ: ಪಟ್ಟಣದಲ್ಲಿ ಜ್ವರ ಪ್ರಕರಣಗಳು ಕಂಡುಬಂದಿರುವುದರಿಂದ ಆರೋಗ್ಯ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳ ಲಾರ್ವ ತಂಡವು ಶುಕ್ರವಾರ ಪಟ್ಟಣದ ವಿವಿಧ ಗಲ್ಲಿಗಳಲ್ಲಿ ಲಾರ್ವಾ ಸಮೀಕ್ಷೆ ಮಾಡುವ ಜೊತೆಗೆ ಸಂಶಯಾಸ್ಪದ ರೋಗಿಗಳ ರಕ್ತಸಂಗ್ರಹ ಮಾಡಿ ಜಿಲ್ಲಾ ಕೇಂದ್ರಕ್ಕೆ ಕಳುಹಿಸಿಕೊಡಲಾಯಿತು. ಜನರಿಗೆ ಮುಂಜಾಗ್ರತೆ ಕುರಿತು ಜಾಗೃತಿ ಮೂಡಿಸಲಾಯಿತು.ತಾಲೂಕು ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಓತಗೇರಿ ಅವರು, ಇಂದು ಪಟ್ಟಣದಲ್ಲಿ ನಮ್ಮ ಇಲಾಖೆಯು ನಡೆಸುವ ನಿಯಮಿತ ಲಾರ್ವ ಸಮೀಕ್ಷೆ ಮಾಡುವ ಜೊತೆಗೆ ಸಂಶಯ ಬಂದ ರೋಗಿಗಳಿಂದ ರಕ್ತ ಸಂಗ್ರಹ ಮಾಡಿ ರಕ್ತವನ್ನು ಪ್ರಯೋಗಾಲಯಕ್ಕೆ ಪರೀಕ್ಷೆ ಕಳುಹಿಸಿಕೊಡಲಾಗಿದೆ. ೧೦ ಜನರ ರಕ್ತವನ್ನು ವಿಜಯಪುರದ ಡಿಪಿಎಚ್ ಲ್ಯಾಬ್‌ಗೆ ಕಳುಹಿಸಲಾಯಿತು. ೧೨ ಜನರಿಗೆ ಬ್ಲಡ್ ಸ್ಮಿಮರ ಮಾಡಲಾಗಿದೆ. ಮನೆ ಮನೆಗೆ ತೆರಳಿ ಜ್ವರ ಸಮೀಕ್ಷೆ ಮಾಡಲಾಯಿತು. ಜ್ವರ ಬಂದರೆ ನಮ್ಮ ಕ್ಲಿನಿಕ್ ಇಲ್ಲವೇ ಸರ್ಕಾರಿ ಆಸ್ಪತ್ರೆಗೆ ತೆರಳಿ ರಕ್ತ ತಪಾಸಣೆ ಮಾಡಿಸಿ ಸೂಕ್ತ ಚಿಕಿತ್ಸೆ ಪಡೆಯಬೇಕೆಂದು ಜನರಿಗೆ ತಿಳಿಸಲಾಯಿತು ಎಂದು ಮಾಹಿತಿ ನೀಡಿದರು.ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ…

Read More

ಬ್ರಹ್ಮದೇವನಮಡು: ಪ್ರತಿಯೊಬ್ಬರೂ ಧಾಮಿ೯ಕ ಕಾಯ೯ಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮಾನಸಿಕ ನೆಮ್ಮದಿ ಕಂಡಕೊಳ್ಳಬೇಕು ಎಂದು ಕೊಡೆಕಲ್ ಕುಮಾರ ಶ್ರೀ ಪ್ರಶಸ್ತಿ ಪುರಸ್ಕ್ರತ,ಪ್ರವಚನಕಾರ ಗಂಗಾಧರ ಶಾಸ್ತ್ರಿಗಳು ಹೇಳಿದರು.ಸಿಂದಗಿ ತಾಲೂಕಿನ ಸುಕ್ಷೇತ್ರ ಹೊನ್ನಳ್ಳಿ ಗ್ರಾಮದ ಗುರು ವೀರಘಂಟೈ ಮಡಿವಾಳೇಶ್ವರ ಜಾತ್ರಾ ಮಹೋತ್ಸವ ನಿಮಿತ್ಶ ಗುರುವಾರ ರಾತ್ರಿ ಹಮ್ಮಿಕೊಂಡಿದ್ದ ವೈರಾಗ್ಶನಿಧಿ ಅಕ್ಕಮಹಾದೇವಿ ಮಹಾ ಪುರಾಣದಲ್ಲಿ ತೊಟ್ಚಿಲೋತ್ಸವ ಕಾಯ೯ಕ್ರಮದಲ್ಲಿ ಅವರು ಮಾತನಾಡಿದರು.ವಿವಿಧ ಜಾತಿ, ಧಮ೯, ಮತ, ಜನಾಂಗದ ಮಧ್ಶೆ ಭಾವೈಕ್ಶ ಹಾಗೂ ಸೌಹಾದ೯ತೆ ಮೂಡಿಸಲು ಪುರಾಣ, ಪ್ರವಚನಗಳು ಅತೀ ಅವಶ್ಶವಾಗಿವೆ ಎಂದರು.ಶ್ರೀಮಠದ ಒಡೆಯರಾದ ಗುರುಲಿಂಗಯ್ಶ ಮಹಾಸ್ವಾಮೀಜಿ ಮಾತನಾಡಿ, ತಂದೆ ತಾಯಿ ಕಲಿಸುವ ಸಂಸ್ಕಾರ, ಗುರು ಕಲಿಸುವ ವಿದ್ಶೆ ಸಮಾಜ ಕಲಿಸುವ ಬದುಕುವ ಕಲೆ,ನಾವು ಯಾವ ರೀತಿಯಾಗಿ ಸ್ವೀಕರಿಸುತ್ತೇವೆ. ಎಂಬುದರ ಮೇಲೆ ನಮ್ಮ ವ್ಶಕ್ತಿತ್ವ ರೂಪಗೊಳ್ಳುತ್ತದೆ. ಮಠ ಮಂದಿರಗಳಲ್ಲಿ ಇಂತಹ ಆಧ್ಶಾತ್ಮಿಕ ಚಿಂತನೆ ಮಹಾಪುರಷರ ಜೀವನ ಚರಿತ್ರೆ ಪ್ರವಚನದಿಂದ ಸಾಧ್ಶವಾಗುತ್ತೆ ಎಂದರು.ಈ ವೇಳೆ ಅಯ್ಶಪ್ಪಮುತ್ಶಾ ಗದ್ದಗಿಮಠ, ಆನಂದ ಗೌಡರ, ವೀರಭದ್ರ ಕಿರಣಗಿ, ಭೀಮನಗೌಡ ಹೆಬ್ಬಾಳ, ಮಾಂತೇಶ ಸಜ್ಜನ, ಶಾಂತಗೌಡ ಪಾಟೀಲ…

Read More

ಕೊಲ್ಹಾರ: ಪಟ್ಟಣಕ್ಕೆ ಸಮೀಪವಿರುವ ರಾಷ್ಟ್ರೀಯ ಹೆದ್ದಾರಿ ೨೧೮ರಲ್ಲಿ ವಾಹನಗಳ ದಟ್ಟಣೆ ಸಂಚಾರದಿಂದ ಸರಣಿ ಅಪಘಾತಗಳಾಗುತ್ತಿದ್ದು ಕೆಲವು ಕಡೆ ಹಂಪ್ಸ್ಗಳನ್ನು ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಾವುಗಳು ಸೂಚಣೆ ಕೊಡಬೇಕೆಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರಿಗೆ ಪಟ್ಟಣದ ಸಾರ್ವಜನಿಕರು ಮನವಿ ಸಲ್ಲಿಸಿದರು.ಕಾರ್ಯನಿಮಿತ್ಯ ಜಿಲ್ಲಾಧಿಕಾರಿ ಟಿ. ಭೂಬಾಲನ್ ಕೊಲ್ಹಾರ ಪಟ್ಟಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತಹಶೀಲ್ದಾರ ಕಚೇರಿಯಲ್ಲಿ ಅವರನ್ನು ಚಂದ್ರಶೇಖರಯ್ಯ ಹಿರೇಮಠ ನೇತೃತ್ವದಲ್ಲಿ ಭೇಟಿಯಾದ ಸ್ಥಳೀಯ ಮುಖಂಡರು ಬೀಳಗಿ ತಾಲೂಕಿನ ಗೋವಿನದಿನ್ನಿ ಟಕ್ಕಳಕಿ ವಸ್ತಿ ಪ್ರದೇಶದಿಂದ ಸೇತುವೆಯು ಸೇರಿದಂತೆ ಕೊಲ್ಹಾರ ತಾಲೂಕಿನ ಮುಳವಾಡ ಕ್ರಾಸ್ ತನಕ ಮತ್ತು ಕೊಲ್ಹಾರ ಪಟ್ಟಣಕ್ಕೆ ಪುರ ಪ್ರವೇಶ ಮಾಡುವ ಗಾಣಸಿರಿ ವೃತ್ತ ತಹಶೀಲ್ದಾರ ಕಾರ್ಯಾಲಯ ಸಮೀಪ ರಾಷ್ಟ್ರೀಯ ಹೆದ್ದಾರಿಯನ್ನು ದಾಟುವಾಗ ಅಪಘಾತಗಳು ಹೆಚ್ಚಿನಸಂಖ್ಯೆಯಲ್ಲಿ ಸಂಭವಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಹಂಪ್ಸ್ಗಳ ನಿರ್ಮಾಣ ಮಾಡುವುದು ಅವಶ್ಯಕವಾಗಿದೆ ಎಂದು ಮನವಿ ಸಲ್ಲಿಸಿದರು.ಈ ವ್ಯಾಪ್ತಿಯಲ್ಲಿ ನಾಮಫಲಕ, ಜಾಗೃತ ಫಲಕ, ಯುಕೆಪಿಯಿಂದ ಕೊಲ್ಹಾರ ಪಟ್ಟಣಕ್ಕೆ ಸಂಪರ್ಕ ಕಲ್ಪಿಸಲು ಪ್ರತ್ಯೇಕವಾದ ಒಳಮಾರ್ಗದ ಸರ್ವಿಸ್ ರಸ್ತೆ…

Read More

ಮುದ್ದೇಬಿಹಾಳ: ಹುಲ್ಲೂರ ಗ್ರಾಪಂನಲ್ಲಿ ಬಸವ ವಸತಿ ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ನಿಯಮ ಉಲ್ಲಂಘಿಸಿದ್ದಾರೆ, ಆಯ್ಕೆ ತಡೆಹಿಡಿಯುವಂತೆ ಕೊರಿ ಸಲ್ಲಿಸಿದ್ದ ಅರ್ಜಿಗೆ ಹಿಂದಿನ ಪ್ರಭಾರ ಪಿಡಿಓ ಮನ್ನಣೆ ನೀಡದ್ದನ್ನು ಮತ್ತು ಅಧ್ಯಕ್ಷ, ಉಪಾಧ್ಯಕ್ಷರ ಮಕ್ಕಳಸರ್ವಾಧಿಕಾರ ಧೋರಣೆ ಹಾಗೂ ಆಡಳಿತದಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಅದೇ ಗ್ರಾಪಂ ಸದಸ್ಯ ಶಿವಾನಂದ ಲಮಾಣಿ ಗುರುವಾರದಿಂದ ಆರಂಭಿಸಿದ್ದ ಧರಣಿ ಸತ್ಯಾಗ್ರಹ ಗ್ರಾಪಂ ಮಾಜಿ ಅಧ್ಯಕ್ಷ ಹಣಮಗೌಡ ಬಿರಾದಾರ, ಹಾಲಿ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಮನವೊಲಿಕೆಯಿಂದಾಗಿ ಶುಕ್ರವಾರ ಅಂತ್ಯಗೊಂಡಿತು.ಈ ಕುರಿತು ಮಾಧ್ಯಮದವರೊಂದಿಗೆ ಸಚೀನ ಮಾತನಾಡಿ, ಶುಕ್ರವಾರ ಧರಣಿ ಸ್ಥಳಕ್ಕೆ ಆಗಮಿಸಿದ ಗ್ರಾಪಂ ಮಾಜಿ ಅಧ್ಯಕ್ಷ ಹಣಮಗೌಡ ಬಿರಾದಾರ, ಹಾಲಿ ಸದಸ್ಯರು ಹಾಗೂ ಸ್ಥಳೀಯ ಮುಖಂಡರ ಮುಂದೆ ಈ ಪಂಚಾಯಿತಿಯಲ್ಲಿ ತಪ್ಪುಗಳು ನಡೆಯದಂತೆ, ಎಲ್ಲ ಸದಸ್ಯರಿಗೂ ಸಮಾನ ಗೌರವ ಕೊಡುವಂತೆ ಆಡಳಿತದಲ್ಲಿರುವವರ ಮನವೊಲಿಸುವ ಮತ್ತು ಸದಸ್ಯರ ಮಾತು, ಅರ್ಜಿಗಳಿಗೆ ಮಹತ್ವ ಕೊಡುವಂತೆ ತಿಳಿಹೇಳುವ ಭರವಸೆ ನೀಡಿದ್ದರಿಂದ ಧರಣಿ ಮುಕ್ತಾಯಗೊಳಿಸಬೇಕಾಯಿತು. ಮುಂದೆ ಮತ್ತೆ ತಪ್ಪುಗಳು ನಡೆದಲ್ಲಿ ಉಗ್ರ ಹೋರಾಟ…

Read More

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಯೋಜನೆಯಡಿ ಡಿ.೧೬ ರಂದು ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಅಂದು ಸಂಜೆ ೫-೦೦ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ ೬-೦೦ಕ್ಕೆ ಜರುಗುವ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ…

Read More

ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦/೧೧ಕೆವ್ಹಿ ತೊರವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧೧ ಕೆವ್ಹಿ ಬೇಗಳ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಡುವ ಎಲ್ಲ ೧೧ ಕೆವ್ಹಿ ವಿದ್ಯುತ್ ಮಾರ್ಗಗಳಿಗೆ ಡಿ.೧೬ ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಹೆಸ್ಕಾಂದೊಂದಿಗೆ ಸಹಕರಿಸುವಂತೆ ವಿಜಯಪುರ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಸಿ ಗುಂಪಿನ ಹುದ್ದೆಗಳ ನೇಮಕಾತಿಗಾಗಿ ಡಿ.೧೬ ಹಾಗೂ ೧೭ ರಂದು ನಗರದ ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಜರುಗಲಿವೆ.ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ೨೦೦ ಮೀ. ಪ್ರದೇಶವನ್ನು ಕಲಂ ೧೪೪ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದು ಮತ್ತು ಬಳಸುವುದು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಕ್ಯಾಮರಾ ಇಲ್ಲದೇ ಇರುವ ಸಾಮಾನ್ಯ ಮೊಬೈಲ್ ಬೇಸಿಕ್ ಸೆಟ್ ಬಳಸಲು ಅನುಮತಿಸಿದೆ.ಪರೀಕ್ಷಾ ದಿನಗಳಂದು ಬೆಳಿಗ್ಗೆ ೯ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಕೇಂದ್ರದ ವ್ಯಾಪ್ತಿಯಲ್ಲಿನ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್ಗಳು, ಸೈಬರ್ ಕೆಫೆಗಳು,ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.

Read More

ವಿಜಯಪುರ: ಕೃಷಿ ಇಲಾಖೆಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳದ ಅಂಗವಾಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಡಿ.೧೪ ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ್ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಜಂಟಿ ಕೃಷಿ ನಿರ್ದೇಶಕ ಡಾ.ರಾಜಶೇಖರ ವಿಲಿಯಮ್ಸ್ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ಆಧುನಿಕ ಜೀವನ ಶೈಲಿಯಿಂದಾಗಿ ಜನರ ಪಾರಂಪರಿಕ ಆಹಾರ ಪದ್ಧತಿ ಬದಲಾವಣೆ ಹೊಂದಿ ಹಲವಾರು ಕಾಯಿಲೆಗಳು ಜನರು ತುತ್ತಾಗುತ್ತಿದ್ದಾರೆ. ಈ ಎಲ್ಲ ಕಾಯಿಲೆಗಳಿಗೆ ಸಿರಿಧಾನ್ಯಗಳ ಸೇವನೆ ರಾಮಬಾಣವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಿರಿ ಧಾನ್ಯಗಳ ಬೇಸಾಯ ಹಾಗೂ ಸೇವನೆಗೆ ಒತ್ತು ನೀಡಿದ್ದು, ಪ್ರಸಕ್ತ ೨೦೨೩ನೇ ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಿದೆ ಎಂದು ಹೇಳಿದರು.ಸಿರಿಧಾನ್ಯಗಳ ಬೇಸಾಯ ಮತ್ತು ಸೇವನೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಸಿರಿಧಾನ್ಯಗಳ ಬೇಸಾಯ ಮತ್ತು ಸೇವನೆಗೆ ಪ್ರೊತ್ಸಾಹಿಸಲು ಬರುವ ಜನವರಿ ಮೊದಲನೇ ವಾರದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-೨೦೨೪ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸಾರ್ವಜನಿಕರು ಭಾಗವಹಿಸಿ…

Read More