Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಟೈಯರ್ ಬ್ಲಾಸ್ಟ್ ಆಗಿ ಏಕಾಏಕಿ ಜನತಾ ಟ್ರಾವೆಲ್ಸ್ಗೆ ಸೇರಿದ ಬಸ್ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಬಳಿ ನಡೆದಿದೆ.ಈ ಬಸ್ ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದಾಗ ಬಸ್ ಟೈಯರ್ ಬ್ಲಾಸ್ಟ್ ಆಗಿದೆ. ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಪ್ರಯಾಣಿಕರು ಕೆಳಗೆ ಇಳಿದು ಸೇಫ್ ಆಗಿದ್ದಾರೆ. ಆದರೆ ಪ್ರಯಾಣಿಕರ ಎಲ್ಲ ಲಗೇಜ್ ಬೆಂಕಿಗಾಹುತಿ ಆಗಿವೆ. ಬೆಲೆಬಾಳುವ ವಸ್ತುಗಳು, ಬಟ್ಟೆಗಳು, ನಗದು, ಒಡವೆ ಭಸ್ಮವಾಗಿವೆ.ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು.ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
*ಮೊದಲ ಪುಟ* ವಿಜಯಪುರ: ಸೆಕ್ಯೂರಿಟಿ ಗಾರ್ಡ ಮೇಲೆ ಹಲ್ಲೆಗೈದು ಮನೆ ನುಗ್ಗಿದ ಕಳ್ಳರು ಚಿನ್ನ, ನಗದು ದೋಚಿ ಫರಾರಿಯಾಗಿರುವ ಘಟನೆ ವಿಜಯಪುರ ನಗರದ ಮಹಾವೀರ ಕಾಲೋನಿಯಲ್ಲಿ ನಡೆದಿದೆ.ಗುಲಾಬ್ ಮುಹಮ್ಮದ್ ಮುಜಾವರ ಹಲ್ಲೆಗೊಳಗಾದ ಸೆಕ್ಯೂರಿಟಿ ಗಾರ್ಡ ಆಗಿದ್ದಾರೆ.ಇನ್ನು ಶ್ರೀಕಾಂತ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.ಶ್ರೀಕಾಂತ ಕುಟುಂಬದವರು ಮದುವೆಗೆಂದು ಹೋದಾಗ ಈ ಕೃತ್ಯ ನಡೆದಿದೆ. ಕಳ್ಳರು ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ತಡೆಯಲು ಯತ್ನಿಸಿದ ಸೆಕ್ಯೂರಿಟಿ ಗಾರ್ಡ ಗುಲಾಬ್ ಮುಹಮ್ಮದ್ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೈದು ಮನೆಯಲ್ಲಿದ್ದ ಚಿನ್ನ, ನಗದು ಹಾಗೂ ಬೆಲೆ ಬಾಳುವ ವಸ್ತುಗಳನ್ನು ದೋಚಿಕೊಂಡು ಫರಾರಿಯಾಗಿದ್ದಾರೆ.ತೀವ್ರ ಗಾಯಗೊಂಡಿರುವ ಸೆಕ್ಯೂರಿಟಿ ಗಾರ್ಡ ಗುಲಾಬ್ ಮುಹಮ್ಮದ್ ರನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ ಪುರಸಭೆ ಉಪಚುನಾವಣೆಯ ವಾರ್ಡ್ ನಂ: 18 ರಲ್ಲಿ ಆಮ್ ಆದ್ಮಿ ಪಾರ್ಟಿ ಅಭ್ಯರ್ಥಿಯನ್ನ ಕಣಕ್ಕಿಳಿಸಿದ್ದು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್, ಬಬಲೇಶ್ವರ್ ಮತಕ್ಷೇತ್ರದ ಉಸ್ತುವಾರಿ ಬಾಬು ಬಿಜಾಪುರ, ನಾಗಠಾಣ್ ಮತಕ್ಷೇತ್ರದ ಉಸ್ತುವಾರಿ ಅವಿನಾಶ್ ಐಹೊಳೆ, ಮುದ್ದೇಬಿಹಾಳ ಮತಕ್ಷೇತ್ರದ ಉಸ್ತುವಾರಿ ಮೆಹಬೂಬ್ ಹಡಲಗೇರಿ ಹಾಗೂ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷ ಇಂದ್ರಜಿತ್ ಜಾಧವ್, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Udayarashmi kannada daily newspaper
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.- ವಿವೇಕಾನಂದ. ಎಚ್.ಕೆ, ಬೆಂಗಳೂರು ಸೋಷಿಯಲ್ ಮೀಡಿಯಾದಲ್ಲಿ ರಾಜಕೀಯ ಧಾರ್ಮಿಕ ಸಾಮಾಜಿಕ ಮತ್ತು ಇತರ ವಿಷಯಗಳ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸುವ ಗೆಳೆಯ ಗೆಳತಿಯರಲ್ಲಿ ಒಂದು ವಿನಯ ಪೂರ್ವಕ ಮನವಿ.. ನಾವು ವ್ಯಕ್ತಪಡಿಸುವ ಅಭಿಪ್ರಾಯದ ನ್ಯಾಯ ದಂಡ ಎಲ್ಲಾ ಕಾಲಕ್ಕೂ, ಎಲ್ಲಾ ಸಂದರ್ಭ ಗಳಿಗೂ,ಎಲ್ಲಾ ವಿಷಯಗಳಿಗೂ ಒಂದೇ ರೀತಿಯಲ್ಲಿ ಮತ್ತು ನಿಷ್ಪಕ್ಷಪಾತವಾಗಿ ಇರಲಿ.. ಅತಿಮುಖ್ಯ ಎಂದರೆ ನಮ್ಮ ನ್ಯಾಯ ದಂಡವೇ ಸಮಗ್ರ ಚಿಂತನೆಯ 360° ಡಿಗ್ರಿ ಕೋನದ ಸಮಷ್ಟಿ ಪ್ರಜ್ಞೆಯ ಚಿಂತನೆಯಲ್ಲಿ ಮಾಡಿರಬೇಕು. ಆಗ ಮಾತ್ರ ನ್ಯಾಯ ತೀರ್ಮಾನ ಮಾಡಲು ಸಾಧ್ಯ. ಅರಿವೇ ಇಲ್ಲದ ವಿಷಯಗಳ ಬಗ್ಗೆ ಒಂದು ಅನುಮಾನದ ಅವಕಾಶಕ್ಕೆ ಜಾಗ ಕಲ್ಪಿಸಿರಬೇಕು. ಸ್ಪಷ್ಟತೆಯ ಹೆಸರಿನಲ್ಲಿ ಆತ್ಮವಂಚನೆ ಮಾಡಿಕೊಳ್ಳಬಾರದು.. ಕಾಂಗ್ರೆಸ್ ಅಥವಾ ಬಿಜೆಪಿ ಅಥವಾ ಕಮ್ಯುನಿಸ್ಟ್ ಅಥವಾ ಬಿಎಸ್ಪಿ ಅಥವಾ ಜೆಡಿಎಸ್ ಅಥವಾ ಎಎಪಿ ಅಥವಾ ಇನ್ಯಾವುದೇ ಪಕ್ಷವಾಗಿರಲಿ ಅದನ್ನು ಬೆಂಬಲಿಸುವ ಅಥವಾ ವಿರೋಧಿಸುವ ಅಥವಾ ಸಮರ್ಥಿಸುವ ಮಾನದಂಡಗಳು ಯಾವಾಗಲೂ ಈ ನ್ಯಾಯ ದಂಡದ ಅಡಿಯಲ್ಲಿಯೇ ಇರಬೇಕು..…
ವಿಜಯಪುರ: ನ್ಯಾಶನಲ್ ಪೋರ್ಟಲ್ನಲ್ಲಿ ನೊಂದಣಿಯಾದ ವಿಜಯಪುರ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುತಿನ ಚೀಟಿ ವಿತರಿಸಿದರು.ನ್ಯಾಶನಲ್ ಪೋರ್ಟಲ್ನಲ್ಲಿ ನೊಂದಣಿ ಮಾಡಿಕೊಂಡ ಜಿಲ್ಲೆಯ ೧೦೦ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ ಮುಖ್ಯವಾಹಿನಿಯಲ್ಲಿ ತಮ್ಮ ಬದುಕು ಕಟ್ಟಿಕೊಳ್ಳಲು ಜಿಲ್ಲಾಡಳಿತದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ ಅವರು, ಮಹಾನಗರ ಪಾಲಿಕೆಯಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಕಲ್ಪಿಸುವ ಕುರಿತು ಸಹ ಪರಿಶೀಲನೆ ನಡೆಸಿ, ಸಮುದಾಯಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ನಿಗಮದ ನಿರೀಕ್ಷಕರಾದ ವಿಠ್ಠಲ ಹೆರಕಲ್, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಗಳಾದ ಶಬ್ಬಿರ ಕಾಗಜಕೋಟೆ, ನವಸ್ಪೂರ್ತಿ ಸಂಘ, ಮಲ್ಲು ಕೆಎಸ್ಎಂಎಫ್, ಪ್ರಾರ್ಥನಾ, ಗುಲಾಬ, ಈರಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪರಿಶಿಷ್ಟ ಜಾತಿ-ಪಂಗಡದ ಅಭ್ಯರ್ಥಿಗಳಿಗೆ ಅಪ್ರೆಂಟಿಶಿಪ್ ತರಬೇತಿ ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನಹೊಂದಿದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ೧೨ ತಿಂಗಳ ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ ೨೬ರವರೆಗೆ ವಿಸ್ತರಿಸಲಾಗಿದೆ.ವಿಜಯಪುರ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಾಗುವುದು.ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ :೨೬-೧೨-೨೦೨೩ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್ ಶ್ರೀ…
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಿ.೧೭ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಶ್ವಾನ ಪ್ರದರ್ಶನ ಹಮ್ಮಿಕೊಂಡಿದ್ದು, ಶ್ವಾನ ಮಾಲೀಕರು ತಮ್ಮ ಎಲ್ಲ ವಿವಿಧ ತಳಿಗಳ ಶ್ವಾನಗಳ ಹೆಸರುಗಳನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.ಶ್ವಾನ ಪ್ರದರ್ಶನದಲ್ಲಿ ಭಾಗವಹಿಸಿದ ಉತ್ತಮ ಶ್ವಾನಗಳಿಗೆ ಬಹುಮಾನ ನೀಡಲಾಗುವುದು. ಶ್ವಾನಗಳ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಪಶು ವೈದ್ಯಾಧಿಕಾರಿಗಳಾದ ಡಾ.ಬಿ.ಎಸ್.ಕನಮಡಿ ಮೊ: ೬೩೬೧೩೦೭೯೧೬, ಡಾ.ಸುಜಾತ ಎಸ್.ಎಂ. ಮೊ: ೯೮೪೫೮೭೩೭೦೧, ಹಿರಿಯ ಪಶುವೈದ್ಯಾಧಿಕಾರಿ ಡಾ.ಸತೀಶ ಪಾಟೀಲ ಮೊ: ೭೩೪೯೪೪೨೩೧೮ ಸಂಖ್ಯೆಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಸ್ವಾವಲಂಬಿ ಸಾರಥಿ ವಾಹನ ಖರೀದಿ ಸಹಾಯಧನ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿ-ಸರಕು ವಾಹನ ಖರೀದಿಗೆ ಫಲಾನುಭವಿಗಳನ್ನು ನವೆಂಬರ್ ೨೧ರಂದು ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ನೋಟಿಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ-೫೮೬೧೦೯ ದೂ: ೦೮೩೫೨-೨೭೮೩೪೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ವತಿಯಿಂದ ವಿಜಯಪುರ ತಾಲೂಕಿನ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗಕ್ಕೆ ಸಂಬಂಧಿಸಿದಂತೆ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಕಚೇರಿಯಲ್ಲಿ ಡಿ.೧೬ ರಂದು ಬೆಳಿಗ್ಗೆ ೧೦ ಗಂಟೆಗೆ ವಿದ್ಯುತ್ಮ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದೆ.ಗ್ರಾಮೀಣ ಉಪ ವಿಭಾಗದ ಕಚೇರಿ ವ್ಯಾಪ್ತಿಯ ಗ್ರಾಮಗಳ ಗ್ರಾಹಕರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
