Author: editor.udayarashmi@gmail.com

ವ್ಯವಸ್ಥಿತವಾಗಿ ಪರೀಕ್ಷೆ ಜರುಗಿಸಲು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಸಿ ಗ್ರೂಪ್ ಹುದ್ದೆಗಳ ನೇಮಕಾತಿಗೆ ಡಿ.೧೬ ಹಾಗೂ ೧೭ ರಂದು ವಿಜಯಪುರದ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಪರೀಕ್ಷೆಯಗಳು ವ್ಯವಸ್ಥಿತವಾಗಿ ಜರುಗುವಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಡಿ.೧೬ ರಂದು ಸರ್ಕಾರಿ ಬಾಲಕರ ಪಿಯು ಕಾಲೇಜ್ ಪರೀಕ್ಷಾ ಕೇಂದ್ರದಲ್ಲಿ ಮಧ್ಯಾಹ್ನ ೨ ರಿಂದ ಸಂಜೆ ೪ ಗಂಟೆವರೆಗೆ ಜರುಗುವ ಕನ್ನಡ ಭಾಷಾ ಪರೀಕ್ಷೆಗೆ ೫೯ ಅಭ್ಯರ್ಥಿಗಳು ಹಾಗೂ ಡಿ.೧೭ ರಂದು ನಗರದ ಸರ್ಕಾರಿ ಬಾಲಕರ ಪಿಯು ಕಾಲೇಜ್, ಸರ್ಕಾರಿ ಬಾಲಕಿಯರ ಕಿರಿಯ ಪದವಿಪೂರ್ವ ಕಾಲೇಜ್ ಹಾಗೂ ಪಿಡಿಜೆ ಹೈಸ್ಕೂಲ್ ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ ೧೦ರಿಂದ ೧೧-೩೦ರವರೆಗೆ ಪತ್ರಿಕೆ-೧ ಸಾಮಾನ್ಯ ಜ್ಞಾನ, ಹಾಗೂ…

Read More

ಮುದ್ದೇಬಿಹಾಳ : ತಾಲೂಕಿನ ಹುಲ್ಲೂರು ಗ್ರಾ.ಪಂ ನ ಕಾರ್ಯಾಲಯದ ಎದುರು ಬಸವ ವಸತಿ ಯೋಜನೆಯಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿದ್ದು ತನಿಖೆ ನಡೆಸುವಂತೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಗುರುವಾರ ಗ್ರಾಮ ಪಂಚಾಯತ ಸದಸ್ಯ ಶಿವಾನಂದ ಲಮಾಣಿ ಬೆಂಬಲಿಗರೊಂದಿಗೆ ಧರಣಿ ಸತ್ಯಾಗ್ರಹ ಆರಂಭಿಸಿದರು.ಈ ಕುರಿತು ಮಾಧ್ಯಮಕ್ಕೆ ಮಾಹಿತಿ ನೀಡಿದ ಶಿವಾನಂದ, ಹುಲ್ಲೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಪುತ್ರ ಕಲ್ಮೇಶ ಮಾದರ ಉಪಾಧ್ಯಕ್ಷೆ ಸುಪುತ್ರ ವಿನೋದ ಓಲೇಕಾರ ಮತ್ತು ಪ್ರಭಾರಿ ಅಭಿವದ್ಧಿ ಅಧಿಕಾರಿ ರಾಜೇಂದ್ರ ಎಕ್ಸಂಬಿ ತಮ್ಮ ಅಣತಿಯಂತೆ ನಡೆಯುವ ನಾಲ್ಕು ಜನ ಸದಸ್ಯರನ್ನು ಸೇರಿಸಿಕೊಂಡು ಸಾಮಾನ್ಯ ಸಭೆಗಳನ್ನು ನಡೆಸದೇ ಮನಸೋಯಿಚ್ಚೆ ಕೆಲಸಗಳನ್ನು ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ನಡೆದ ಬಸವ ವಸತಿ ಯೋಜನೆಯಲ್ಲಿ ಆಯ್ಕೆ ಪ್ರಕ್ರಿಯೆ ತಡೆಗೆ ಕೋರಿ ನಾನು ಅರ್ಜಿ ಸಲ್ಲಿಸಿದ್ದರು ಕ್ಯಾರೆ ಅನ್ನದೇ ತಾರಾತುರಿಯಲ್ಲಿ ಜಿ.ಪಿ.ಎಸ್ ಮಾಡಿ ಒಟ್ಟು ೭೨ ಮನೆಗಳನ್ನು ಆಯ್ಕೆ ಮಾಡಿದ್ದಾರೆ. ಇದು ಘೋರ ಅಪರಾಧವಾಗಿದ್ದು ಇಲ್ಲಿ ಸರಕಾರದ ಆದೇಶ ಗಾಳಿಗೆ ತೂರಿದ್ದಾರೆ.…

Read More

ಮುದ್ದೇಬಿಹಾಳ: ಭಗವದ್ಗೀತೆ ರತ್ನಗರ್ಭವಾಗಿದೆ. ಭೂಮಿಯ ಆಳದಲ್ಲಿ ಯಾವೆಲ್ಲ ರೀತಿಯ ವಸ್ತುಗಳು ಹಂಚಿಕೆಯಾಗಿವೆಯೋ ಹಾಗೆ ಭಗವದ್ಗೀತೆ ವಿಸ್ತಾರವಾಗಿ ಮಹಾಸಾಗರೋಪಾದಿಯಲ್ಲಿ ವ್ಯಾಪಿಸಿದೆ ಎಂದು ಯೋಗ ಶಿಕ್ಷಕಿ ಪ್ರಭಾ ಹೆಬ್ಬಾರ ಹೇಳಿದರು.ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಅರಿಹಂತ (ಸಗರಿ) ಕಾಲೇಜಿನಲ್ಲಿ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ(ರಿ.) ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ ಇವರಿಂದ ಆಯೋಜಿಸಿರುವ ಭಗವದ್ಗೀತಾ ಅಭಿಯಾನ-ಕರ್ನಾಟಕ-೨೦೨೩ರ ತಾಲೂಕು ಮಟ್ಟದ ಸಪ್ತಾಹದ ಅಂಗವಾಗಿ ನಡೆದ ೫ನೇ ದಿನದ ಪಠಣ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ “ಭಗವದ್ಗೀತೆ ಮತ್ತು ಜೀವನ ಸಮೃದ್ಧಿ” ಎನ್ನುವ ವಿಷಯದ ಮೇಲೆ ಅವರು ಉಪನ್ಯಾಸ ನೀಡಿದರು.ಜನರ ಪ್ರತಿಯೊಂದು ಲೌಖಿಕ ಮತ್ತು ಆಲೌಖಿಕ ಸಮಸ್ಯೆಗಳಿಗೆ ಇದರಲ್ಲಿ ಪರಿಹಾರವಿದೆ. ಗೀತೆಯಲ್ಲಿ ನಮ್ಮ ಜೀವನವನ್ನು ಸಮೃದ್ಧ ಮತ್ತು ಸುಂದರಗೊಳಿಸುವ ಶಕ್ತಿ ಹೊಂದಿದೆ. ಅದನ್ನು ಬಳಕೆಮಾಡಿಕೊಳ್ಳಬೇಕು ಎಂದು ಹೇಳಿದರು.ದಂತ ವೈದ್ಯೆ ಡಾ.ಆಶಾ ಮಾತನಾಡಿ ನ್ಯೂಟನ ನಿಯಮವಾದ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎನ್ನುವ ಹಾಗೆ ಭಗವದ್ಗೀತೆ ಕರ್ಮ ಸಿದ್ಧಾಂತ ಪ್ರಧಾನವಾಗಿದ್ದು ನಾವು ಮಾಡುವ ಕೆಲಸಗಳ ಆಧಾರದ ಮೇಲಿಂದ ಫಲಿತಾಂಶ ನೀಡುತ್ತವೆ ಎಂದರು.ಸಂಸ್ಥೆಯ…

Read More

ವಿಜಯಪುರ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷರಾದ ಆರ್.ಧರ್ಮಸೇನಾ ಇವರ ನಿರ್ದೇಶನದ ಮೇರೆಗೆ ಭಾರತಿ ಲವ ಕಾಲೇಬಾಗ ಇವರನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ವಿಭಾಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ.ಜಾ.ವಿಭಾಗದ ಅಧ್ಯಕ್ಷರಾದ ರಮೇಶ ಕಾ.ಗುಬ್ಬೇವಾಡ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ವಿಜಾಪೂರ ಹಾಗೂ ಬಾಗಲಕೋಟ ಜಿಲ್ಲಾ ಆರೋಗ್ಯ ಇಲಾಖೆ ನೌಕರರ ಪತ್ತಿನ ಸಹಕಾರಿ ಸಂಘ ನಿಯಮಿತ, ವಿಜಯಪುರ ಇದರ ಈ ಮುಂಚೆ ಇದ್ದ ವಿನಾಯಕ ಅವದಿ ಉಪಾಧ್ಯಕ್ಷ ಸ್ಥಾನವು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಡಿ.೧೩ ರಂದು ನಾಮನಿರ್ದೇಶನ ಜರುಗಿದ್ದು, ಆಡಳಿತ ಮಂಡಳಿಯ ಎಲ್ಲ ಸದಸ್ಯರು ಹಾಗೂ ಅಧ್ಯಕ್ಷರ ಸಮ್ಮುಖದಲ್ಲಿ ಶ್ರೀ ಮೋಹಮ್ಮದಯಾಶೀನ ಕೆ. ಮೋಮಿನ ಇವರನ್ನು ಸಂಘದ ನೂತನ ಉಪಾಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಈ ಸಂದರ್ಭದಲ್ಲಿ ಅಧ್ಯಕ್ಷ ಡಾ. ಬಾಲಕೃಷ್ಣ ಕೆಳಗೇರಿ, ಸಂಘದ ಸದಸ್ಯರಾದ ಎಸ್.ಎಸ್. ಪಾಟೀಲ, ಅನೀಲ ಘೋರ್ಪಡೆ, ಎಸ್.ಓ.ಹಿರೇಕುರುಬರ, ಸಂತೋಷ ಯರಗಲ್, ಎಂ.ಎಸ್.ಬಾಗೇವಾಡಿ, ಶಂಕರ ತೋಡಕೆ, ಶ್ರೀಮತಿ ಕೆ.ಎಸ್.ಹಂಚಿನಾಳ, ಇನ್ನಿತರರು ಉಪಸ್ಥಿತರಿದ್ದರು.

Read More

ವಿಜಯಪುರ: ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರ ೬೧ನೇ ಜನ್ಮ ದಿನದ ಅಂಗವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ವಿಕ್ರಮ ಗಾಯಕವಾಡ ಅವರು ಆರ್ಫನೈಜ್ ಅನಾಥ ಆಶ್ರಮದ ಮಕ್ಕಳಿಗೆ ಬುಧವಾರ ಅನ್ನ ಪ್ರಸಾದ ವ್ಯವಸ್ಥೆ ಮಾಡಿದರು.ನಂತರ ಮಾತನಾಡಿದ ಅವರು, ಅಭಿವೃದ್ಧಿ ಹರಿಕಾರ ಶಾಸಕರ ಜನ್ಮ ದಿನ ಅರ್ಥಪೂರ್ಣವಾಗಿ ಆಚರಿಸಬೇಕೆಂಬ ನಿಟ್ಟಿನಲ್ಲಿ ಅನಾಥ ಆಶ್ರಮದ ಮಕ್ಕಳೊಂದಿಗೆ ಕೇಕ್ ಕತ್ತರಿಸಿ, ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ನಮ್ಮ ನಾಯಕರಿಗೆ ಉನ್ನತ ಹುದ್ದೆ ದೊರಕಿ, ನಾಡಿನ ಅಭಿವೃದ್ಧಿಗೆ ಶ್ರಮಿಸಲು ಅವಕಾಶ ಸಿಗಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.ಬಿಜೆಪಿ ಮುಖಂಡರಾದ ಬಾಬು ಶಿರಶ್ಯಾಡ, ಅಶೋಕ ಬೆಲ್ಲದ, ರಾಜಶೇಖರ ಭಜಂತ್ರಿ, ರಮೇಶ ಪಡಸಲಗಿ, ಶರಣು ಕಾಖಂಡಕಿ, ಬಸವರಾಜ ಗೊಳಸಂಗಿ, ಅಮಿತ್ ಗಡುಕರ, ನಾಗರಾಜ ಮುಳವಾಡ, ಕೃಷ್ಣಾ ರಾಠೋಡ, ಶ್ರೀಧರ ಮತ್ತಿತರರು ಇದ್ದರು.

Read More

ದೇವರಹಿಪ್ಪರಗಿ: ಜಂಗಮರು ಪೂರ್ವಜರ ಆಚಾರ ವಿಚಾರಗಳನ್ನು ಅರಿತು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಧರ್ಮರಕ್ಷಣೆಗೆ ಮುಂದಾಗಬೇಕು ಎಂದು ಜಡಿಮಠದ ಜಡಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಗುರುವಾರ ಜಂಗಮ ವಟುಗಳಿಗೆ ಅಯ್ಯಾಚಾರ ದೀಕ್ಷೆ ನೀಡಿ ಅವರು ಮಾತನಾಡಿದರು.೮ ವರ್ಷ ವಯಸ್ಸಿನ ಎಲ್ಲ ಜಂಗಮರು ಸಂಪ್ರದಾಯದಂತೆ ಅಯ್ಯಾಚಾರ ದೀಕ್ಷೆ ಪಡೆಯಬೇಕು. ಇಂದು ಶಿವದೀಕ್ಷಾ ಪಡೆದ ವಟುಗಳು ತಮ್ಮ ಜೀವನದುದ್ದಕ್ಕೂ ನಿತ್ಯ ಸ್ನಾನದ ನಂತರ ಶಿವಪೂಜೆ ನೆರವೇರಿಸಬೇಕು ಇದರಿಂದ ನಿಮ್ಮ ಭವಿಷ್ಯಕ್ಕೆ ಭದ್ರ ಬುನಾದಿ ದೊರೆಯುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.ಸದಯ್ಯನಮಠದ ವೀರಗಂಗಾಧರಶ್ರೀಗಳು ವಟುಗಳಿಗೆ ಮಂತ್ರೋಚ್ಛಾರದ ಮಹತ್ವ ಹಾಗೂ ಶಿಷ್ಟಾಚಾರಗಳ ಕುರಿತು ಮಾಹಿತಿ ನೀಡಿದರು. ಜೊತೆಗೆ ಪಾಲಕರು, ಹಿರಿಯರು ನಮ್ಮ ಆಚಾರ, ವಿಚಾರಗಳನ್ನು ಪಾಲಿಸಲು ಮಕ್ಕಳಿಗೆ ತಿಳಿಹೇಳುವ ಮೂಲಕ ತಮ್ಮದೇಯಾದ ಕರ್ತವ್ಯ ಪಾಲಿಸಲು ಮುಂದಾಗಬೇಕು ಎಂದರು.ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ಪಟ್ಟಣ ಪಂಚಾಯಿತಿ ಸದಸ್ಯ ಶಾಂತಯ್ಯ ಜಡಿಮಠ, ಪಿ.ಜಿ.ಹಿರೇಮಠ, ಪಿ.ಎಸ್.ಮಿಂಚನಾಳ, ಯಲಗೂರೇಶ ದೇವೂರ, ಸಂಗಪ್ಪ ಮಣೂರ, ಚನ್ನಯ್ಯ ಮಲ್ಲಿಕಾರ್ಜುನಮಠ, ರಮೇಶ ಮಶಾನವರ, ಕಾಶೀನಾಥ ಹಿರೇಮಠ,…

Read More

ಚಡಚಣ: ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದಿದೆ. ಈ ಹಿನಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ಒದಗಿಸಿ ಈ ಯೋಜನೆಯನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಬಿಜ್ಜರಗಿಯವರು ಹೇಳಿದರು.ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಬಿಸಿಯೂಟ ಯೋಜನೆಯಲ್ಲಿ ಮಕ್ಕಳಿಗೆ ಇಡ್ಲಿ-ಸಾಂಬಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದ ಅವರು. ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಶಿಕ್ಷಕರು ಮಕ್ಕಳಿಗೆ ವಾರದಲ್ಲಿ ಒಂದು ದಿನ ಇಡ್ಲಿ-ಸಾಂಬಾರ ನೀಡುವ ವ್ಯವಸ್ಥೆಯನ್ನು ಕಲ್ಪಿಸಿರುವುದು ಮಕ್ಕಳ ಕಲಿಕೆಗೆ ಉತ್ತಮ ಬೆಳವಣಿಗೆಯಾಗಿದೆ ಎಂದರು. ಹೊಸ ಪಠ್ಯ ಕ್ರಮಕ್ಕೆ ಅನುಗುಣವಾಗಿ ಶಿಕ್ಷಕರು ನೂತನ ಕೌಶಲ್ಯಗಳನ್ನು ಬಳಸಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಸಾಧ್ಯ ಎಂದರು.ಈ ವೇಳೆಯಲ್ಲಿ ಶಾಲೆಯ ಮುಖ್ಯ ಗುರು ಆರ್.ಎನ್.ಹತ್ತಳ್ಳಿಯವರು ಮಾತನಾಡಿದರು.ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಎಸ್.ಡಿ.ಆದಿಗೊಂಡೆ, ಎಸ್.ಜೆ.ಬಿಜ್ಜರಗಿ, ಪಿ.ಎ.ವಾಲಿಕಾರ, ಎಂ.ಕೆ.ಬಗಲಿ, ಎ.ಎಚ್.ಬಗಲಿ, ಎನ.ಎಸ್.ಘೋಡೇಸವಾರ, ಎಂ.ಎಸ್.ಶೇಖ, ಹೀನಾ ಸೈಯದ, ಬಿ.ಎಚ್.ಪಾಟೀಲ ಹಾಗೂ ಹಣಮಂತ ಹಕ್ಕೆ, ಮಲ್ಲಪ್ಪ…

Read More

ಸಂಸ್ಕೃತ ಪಾಠಶಾಲಾ ಶಿಕ್ಷಕರಿಗೆ ಪುನಶ್ಚೇತನ ಶಿಬಿರದ ಸಮಾರೋಪದಲ್ಲಿ ಮಾಜಿ ಎಂಎಲ್ಸಿಅರುಣ ಶಹಾಪೂರ ಅಭಿಮತ ಸಿಂದಗಿ: ಸಂಸ್ಕೃತ ಭಾಷೆ ಅತ್ಯಂತ ಪುರಾತನ ಭಾಷೆ ನಮ್ಮ ಭಾಷೆ. ಚೈನಾ ದೇಶದಲ್ಲಿಯೂ ಕೂಡಾ ಸಂಸ್ಕೃತ ಬಳಕೆಯಲ್ಲಿ ಇದೆ ಎಂದರೆ ಅದು ಭಾರತದ ಹೆಮ್ಮೆಯ ಸಂಗತಿ. ಆದರೆ ನಮ್ಮ ಸಂಸ್ಕೃತ ಭಾಷೆಯನ್ನು ಭಾರತೀಯರೆ ಆದ ನಾವುಗಳೂ ಅದನ್ನು ಪ್ರಚಾರ, ಪ್ರಸಾರ ಮಾಡದೆ ದೂರ ಮಾಡಿದ್ದೇವೆ ಎಂಬುದೇ ವಿಷಾದನೀಯ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ ಶಹಾಪೂರ ಕಳವಳ ವ್ಯಕ್ತಪಡಿಸಿದರು.ಅವರು ಪಟ್ಟಣದ ಶ್ರೀ ಸಾತವಿರೇಶ್ವರ ಸಭಾಭವನದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಂಸ್ಕೃತ ಶಿಕ್ಷಣ ನಿರ್ದೇಶನಾಲಯ ಮತ್ತು ಶ್ರೀ ಪದ್ಮರಾಜ ಸಂಸ್ಕೃತ ವೇದ ಪಾಠಶಾಲೆ ಇವುಗಳ ಸಹಯೋಗದಲ್ಲಿ ೧೦ ದಿನಗಳ ಕಾಲ ಆಯೋಜಿಸಿರುವ ಸಂಸ್ಕೃತ ಪಾಠಶಾಲಾ ಶಿಕ್ಷಕರಿಗೆ ಪುನಶ್ಚೇತನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಸಂಸ್ಕೃತ ಭಾಷೆ ಭಾರತೀಯ ಸಂಸ್ಕೃತಿಯ ಪರಂಪರೆಯ ಸಂಕೇತವಾಗಿದೆ. ಈ ಭಾಷೆ ನಮ್ಮ ಸಮಾಜವನ್ನು ಹಲವು ವರ್ಷಗಳಿಂದ ಶ್ರೀಮಂತಗೊಳಿಸುತ್ತಾ ಬಂದಿದೆ.ಇಂದಿನ ಮತ್ತು ಮುಂದಿನ ಪೀಳಿಗೆಗೆ…

Read More

ವಿಜಯಪುರ: ನಗರದ ಸಾಕ್ಷಿ ಹನುಮಾನ ಮಂದಿರ, ಗಣೇಶ ನಗರದ ಜನತೆ ಮತ್ತು ಮಹಾನಗರಪಾಲಿಕೆ ಸದಸ್ಯ ಕುಮಾರ ಗಡಗಿ ಅವರ ನೇತೃತ್ವದಲ್ಲಿ ಶ್ರೀ ತುಳಸಿಗಿರೀಶ ಫೌಂಡೇಶನ್ ಮತ್ತು ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆ, ವಿಜಯಪುರ ವತಿಯಿಂದ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ಗುರು ನಮನ ಮಹೋತ್ಸವ ನಿಮಿತ್ತ ಗುರುವಾರ ಉಚಿತ ಆರೋಗ್ಯ ಚಿಕಿತ್ಸಾ ಶಿಬಿರ ನಡೆಯಿತು.ನಗರದ ವಾರ್ಡ್ ನಂ. 21, ಗಣೇಶ ನಗರ, ಶ್ರೀ ಸಿದ್ಧಿವಿನಾಯಕ ಮತ್ತು ಶ್ರೀ ಸಾಕ್ಷಿ ಹನುಮಾನ್ ದೇವಸ್ಥಾನದಲ್ಲಿ ನೂರಾರು ಜನರ ಮಧುಮೇಹ ಹಾಗೂ ಬಿಪಿ ತಪಾಸಣೆ ನಡೆಸಿ ಸೂಕ್ತ ಸಲಹೆ ಮಾರ್ಗದರ್ಶನ ನೀಡಲಾಯಿತು.ಮಧುಮೇಹ ತಜ್ಞ ಡಾ.ಬಾಬುರಾಜೇಂದ್ರ ನಾಯಿಕ, ಹೃದಯರೋಗ ತಜ್ಞೆ ಡಾ.ಶೀತಲ ನಾಯಿಕ ಶಿಬಿರದಲ್ಲಿ ಮಾರ್ಗದರ್ಶನ ನೀಡಿದರು.

Read More