Subscribe to Updates
Get the latest creative news from FooBar about art, design and business.
Author: editor.udayarashmi@gmail.com
Udayarashmi kannada daily newspaper
ಅಶ್ರುವಾಯು ಸಿಡಿಸುತ್ತಾ ಗ್ಯಾಲರಿಯಿಂದ ನುಗ್ಗಿದ ಈರ್ವರು |ಆರು ಆರೋಪಿಗಳ ಬಂಧನ | 3 ತಿಂಗಳ ತಯಾರಿ! ನವದೆಹಲಿ: ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದ್ದು ಭಾರೀ ಭದ್ರತಾ ಲೋಪವುಂಟಾದ ಪ್ರಸಂಗ ನಡೆದಿದೆ.ಇದರಿಂದ ಗೊಂದಲದ ವಾತಾವರಣ ಉಂಟಾಗಿ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.ಸಂದರ್ಶಕ ಗ್ಯಾಲರಿಯಿಂದ ಲೋಕಸಭೆಯ ಚೇಂಬರ್ಗೆ ಜಿಗಿದು ಬೆಂಚುಗಳ ಮೇಲೆ ಘೋಷಣೆ ಕೂಗುತ್ತಾ ಇಬ್ಬರು ಹಾರುತ್ತಿರುವುದು ಕಂಡುಬಂದಿತು.ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳುವಂತೆ ಇಬ್ಬರು ಸಾರ್ವಜನಿಕ ಗ್ಯಾಲರಿಯಿಂದ ಜಿಗಿದಿದ್ದಾರೆ. ಶೂನ್ಯ ವೇಳೆಯಲ್ಲಿ ಒಬ್ಬರು ಅಶ್ರುವಾಯು ಎರಚುತ್ತಾ ಸಾರ್ವಜನಿಕ ಗ್ಯಾಲರಿಯಿಂದ ಜಿಗಿದರೆ ಮತ್ತೊಬ್ಬ ಲೋಕಸಭೆಯ ಬೆಂಚುಗಳ ಮೇಲೆ ಹಾರುತ್ತಿರುವುದು ಕಂಡುಬಂದಿದೆ ಎಂದು ಚೌಧರಿ ಹೇಳಿದರು.ಕೂಡಲೇ ಇಬ್ಬರು ವ್ಯಕ್ತಿಗಳನ್ನು ಅಲ್ಲಿದ್ದ ಲೋಕಸಭಾ ಸದಸ್ಯರು ಮತ್ತು ಸಿಬ್ಬಂದಿ ನಿಯಂತ್ರಿಸಲು ಹೋಗಿ ತಳ್ಳಾಟ ನಡೆದಿದೆ.ಇದು ಭದ್ರತಾ ಉಲ್ಲಂಘನೆಯಾಗಿದೆ. ಇಂದು 2001 ರಲ್ಲಿ ನಡೆದ ಸಂಸತ್ತಿನ ದಾಳಿಯ…
ಯಶಸ್ವಿಗೆ ಶ್ರಮಿಸಿದ ವೈದ್ಯಾಧಿಕಾರಿಗಳಿಗೆ, ತಾಲೂಕು ಆರೋಗ್ಯಾಧಿಕಾರಿಗಳಿಗೆ ಜಿಪಂ ಸಿಇಓ ರಾಹುಲ್ ಶಿಂಧೆ ಸನ್ಮಾನ ವಿಜಯಪುರ: ಜಿಲ್ಲೆಯ ಆರ್.ಬಿ.ಎಸ್.ಕೆ ಕಾರ್ಯಕ್ರಮದಲ್ಲಿ ಸಾಧಿಸಿದ ಪ್ರಗತಿ ಮಾದರಿಯಾಗಿದೆ. ಹೆಮ್ಮೆ ಪಡುವಂತಹ ಸಾಧನೆಯಲ್ಲಿ ಭಾಗಿಯಾದ ಎಲ್ಲ ಇಲಾಖೆಯ ಅಧಿಕಾರಿಗಳ ಸಮನ್ವಯದಿಂದ ಯಶಸ್ವಿ ಅನುಷ್ಟಾನಗೊಂಡಿದೆ. ಮುಂಬರುವ ದಿನಗಳಲ್ಲಿ ತಾವೆಲ್ಲರೂ ಇನ್ನಷ್ಟು ಅನುಕೂಲ ಕಲ್ಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.ಡಿ.೧೨ರಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಿದ ತಂಡದ ವೈದ್ಯಾಧಿಕಾರಿಗಳಿಗೆ, ತಾಲೂಕಾ ಆರೋಗ್ಯ ಅಧಿಕಾರಿಗಳಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನಿತರಿಗೆ ಗೌರವಿಸಿ ಅವರು ಮಾತನಾಡಿದರು. ಅನಾರೋಗ್ಯಕ್ಕೆ ಒಳಗಾದ ಮಕ್ಕಳನ್ನು ಗುರುತಿಸಿ, ಅವರಿಗೆ ಸೂಕ್ತ ಚಿಕಿತ್ಸೆ ಔಷಧೋಪಚಾರ ಮತ್ತು ಸಮಾಲೋಚನೆ ಮೂಲಕ ಚಿಕಿತ್ಸಾ ಪರಿಹಾರ ಕಲ್ಪಿಸುವ ವ್ಯವಸ್ಥೆ…
ವಿಜಯಪುರ: ರೈತರಿಗೆ ತೂಕದಲ್ಲಿ ಮೋಸ ಆಗದಂತೆ ತಡೆಯಲು ಕಾರ್ಖಾನೆಗಳಲ್ಲಿ ಕಡ್ಡಾಯವಾಗಿ ಎಲೆಕ್ಟ್ರಾನಿಕ್ ಆಧಾರಿತ ತೂಕ ಮಷಿನ್ ಅಳವಡಿಸಲು ಕ್ರಮ ವಹಿಸಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಕಾನೂನು ಮಾಪನ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಬೆಳಗಾವಿಯ ಸುವರ್ಣ ಸೌಧದಲ್ಲಿ ಆಹಾರ ಮತ್ತು ಕಾನೂನು ಮಾಪನ ಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಬೆಳಗಾವಿ ಜಿಲ್ಲೆಯ ಎಲ್ಲಾ ತಾಲೂಕಿನ ಆಯ್ದ ೧೦೦ ಜನ ಅಂಗಡಿಕಾರರ ಕುಂದು ಕೊರತೆ ಆಲಿಸಿದ ಸಚಿವರು, ಸಾರ್ವಜನಿಕರ ದೂರು ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಪಡಿತರ ಅಕ್ಕಿ ಜೊತೆಗೆ, ಡಿಬಿಟಿ ಮೊತ್ತ ಫಲಾನುಭವಿಗಳಿಗೆ ನಿಯಮಾನುಸಾರ ಪ್ರತಿ ಮಾಹೆ ಜಮೆ ಮಾಡಿಸಬೇಕು. ಅರ್ಹ ಫಲಾನುಭವಿಗಳಿಗೆ ನಿಯಮಾನುಸಾರ ಪಡಿತರ ಚೀಟಿ ಅನುಮೋದನೆ ಮಾಡಲು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಭೆಯಲ್ಲಿ ಸಕ್ಕರೆ ಸಚಿವ ಶಿವಾನಂದ ಎಸ್ ಪಾಟೀಲ್, ಬೆಳಗಾವಿ ಜಿಲ್ಲೆಯ ಅಥಣಿ ಕ್ಷೇತ್ರದ…
ವಿಜಯಪುರ: ಕಲಬುರಗಿ ಜಿಲ್ಲೆಯ ೧೧೦ ಕೆ.ವಿ ಶಹಾಪೂರ-ಕೆಂಬಾವಿ, ೧೧೦ ಕೆ.ವಿ ಹತ್ತಿಗುಡೂರ್-ನಾಗನೂರು ಮತ್ತು ೧೧೦ ಕೆ.ವಿ ನಾಗನೂರು ಕೆಂಬಾವಿ ಮಾರ್ಗಗಳಲ್ಲಿ ಫ್ಲಾಷ್ಡ ಒವರ್ ಇನ್ಸುಲೇಟರ್ ಬದಲಾವಣೆ ಸೇರಿದಂತೆ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ೧೧೦ ಕೆ.ವಿ ಅಸ್ಕಿ ಹಾಗೂ ೧೧೦ ಕೆ.ವಿ ತಾಳಿಕೋಟಿ ವಿದ್ಯುತ್ ವಿತರಣಾ ಉಪ ಕೇಂದ್ರಗಳಲ್ಲಿ ಬರುವ ಎಲ್ಲಾ ೧೧ಕೆ.ವಿ ನಿರಂತರ ವಿದ್ಯುತ್, ಕುಡಿಯುವ ನೀರು ಹಾಗೂ ಕೃಷಿ ನೀರಾವರಿ ಮಾರ್ಗಗಳಿಗೆ ಹಾಗೂ ಬಂಟನೂರ ಐ.ಪಿ ಮಾರ್ಗ, ಗೊಟಗುಣಕಿ ನಿರಂತರ ಜ್ಯೋತಿ ಹಾಗೂ ೧೧೦ಕೆ.ವಿ ಎಫ್.ಪಿ.ಇ.ಎಲ್ ಸೌರ ವಿದ್ಯುತ್ ಉತ್ಪಾದನಾ ಘಟಕಗಳಿಗೆ ಡಿಸೆಂಬರ್ ೧೪ರ ಬೆಳಿಗ್ಗೆ ೧೦:೩೦ ರಿಂದ ಸಾಯಂಕಾಲ ೫:೩೦ ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಬಸವನ ಬಾಗೇವಾಡಿ ಕಾರ್ಯ ನಿರ್ವಾಹಕ ಅಭಿಯಂತರರು ಕೋರಿದ್ದಾರೆ.
ಸಿಂದಗಿ-ದೇವರಹಿಪ್ಪರಗಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಸಿಇಓ ರಾಹುಲ್ ಶಿಂಧೆ ವಿಜಯಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಬುಧವಾರ ಸಿಂದಗಿ ಹಾಗೂ ದೇವರಹಿಪ್ಪರಗಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಕುಡಿಯುವ ನೀರಿನ ಕಾಮಗಾರಿ, ನರೇಗಾ, ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣೆ, ವಿವಿಧ ಶಾಲೆಗಳಲ್ಲಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮಕ್ಕೆ ಭೇಟಿ ನೀಡಿದ ಅವರು ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಿಶು ಪಾಲನಾ ಕೇಂದ್ರವನ್ನು (ಕೂಸಿನ ಮನೆ) ಉದ್ಘಾಟನೆ ಮಾಡಿದರು.ನಂತರ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರು ಮತ್ತು ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿಕಾರರು ತಮ್ಮ ಮಕ್ಕಳನ್ನು ಶಿಶುಪಾಲನಾ ಕೇಂದ್ರದಲ್ಲಿ ಬಿಟ್ಟು, ನಿಶ್ಚಿಂತೆಯಿಂದ ಕೆಲಸಕ್ಕೆ ಹೋಗಬಹುದು. ನಿಮ್ಮ ಮಕ್ಕಳ ಸಂಪೂರ್ಣ ಜವಾಬ್ದಾರಿಯನ್ನು ಸರಕಾರ ತನ್ನ ಮಡಿಲಿಗೆ ಹಾಕಿಕೊಂಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.ಕೇಂದ್ರದಲ್ಲಿರುವ ಮಕ್ಕಳನ್ನು ಪ್ರೀತಿಯಿಂದ, ಸೇವಾಮನೋಭಾವದಿಂದ ನೋಡಿಕೊಳ್ಳುವಂತೆ ಆರೈಕೆದಾರರಿಗೆ ಸೂಚಿಸಿದರು. ಪ್ರಸ್ತುತ ಕೇವಲ ೯ ಮಕ್ಕಳು ನೋಂದಣಿಯಾಗಿದ್ದು, ಮುಂದಿನ…
ಮುದ್ದೇಬಿಹಾಳ: ಇಲ್ಲಿನ ಪುರಸಭೆಯ ೧೮ನೇ ವಾರ್ಡಿನ ಉಪ ಚುನಾವಣೆಯ ನಿಮಿತ್ಯ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ ನೇತೃತ್ವದಲ್ಲಿ ವಾರ್ಡ್ ನ ಮಾಬುಸ್ಮಾಮಿ ಕಟ್ಟೆಯ ಆವರಣದಲ್ಲಿ ಬುಧವಾರ ಬೆಳಿಗ್ಗೆ ಕಾಂಗ್ರೆಸ್ ಪಕ್ಷದ ಪೂರ್ವಭಾವಿ ಸಭೆ ಜರುಗಿತು.ಈ ವೇಳೆ ಮುಖಂಡರಾದ ಶಿವಾನಂದ ಹಿರೇಮಠ, ಮಹೆಬೂಬ ನಾಲತವಾಡ, ಕಾಮರಾಜ ಬಿರಾದಾರ ಸೇರಿದಂತೆ ಹಲವರು ಮಾತನಾಡಿ ವಾರ್ಡ್ ನ ಸರ್ವತೋಮುಖ ಬೆಳವಣಿಗೆಗೆ ಪಕ್ಷದ ಎಲ್ಲರೂ ಶ್ರಮಿಸಬೇಕು. ಸದ್ಯ ನಮ್ಮ ನಮ್ಮಲ್ಲೇ ಟಿಕೇಟ್ ಗಾಗಿ ಪೈಪೋಟಿ ಮಾಡೋದು ಬೇಡ. ಎಲ್ಲ ಸದಸ್ಯರು ಚರ್ಚಿಸಿ ಸೂಕ್ತ ಒಬ್ಬ ಅಭ್ಯರ್ಥಿಯನ್ನ ಆಯ್ಕೆ ಮಾಡೋಣ ಎಂದರು.ಈ ವೇಳೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ ಮಾತನಾಡಿದರು.ಈ ವೇಳೆ ಮಾಜಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗಪೂರ ಮಕಾನದಾರ, ಪಕ್ಷದ ಹಿರಿಯರಾದ ಎಂ.ಬಿ.ನಾವದಗಿ, ಪುರಸಭೆ ಸದಸ್ಯ ಮಹೆಬೂಬ ಗೊಳಸಂಗಿ, ಮಾಜಿ ಸದಸ್ಯ ಪಿಂಟು ಸಾಲಿಮನಿ, ಅಪ್ಪು ದೇಗಿನಾಳ, ಗೋಪಿ ಮಡಿವಾಳರ, ಶ್ರೀಕಾಂತ ಚಲವಾದಿ ಸೇರಿದಂತೆ ಮತ್ತೀತರರು ಭಾಗಿಯಾಗಿದ್ದರು.
ಹೊನ್ನಳ್ಳಿ ಗ್ರಾಮದ ರಾಜೀವ ಗಾಂಧಿ ಪ್ರೌಢಶಾಲೆ | ಶಿಕ್ಷಕರ ಕೊರತೆಯಿಂದ ರೋಸಿ ಹೋದ ವಿದ್ಯಾರ್ಥಿಗಳು ಸಿಂದಗಿ: ಶಿಕ್ಷಕರ ಕೊರತೆಯಿಂದಾಗಿ ವಿದ್ಯಾಭ್ಯಾಸ ಹಾಳಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲವೆಂದು ಹೇಳಿ ತಾಲೂಕಿನ ಹೊನ್ನಳ್ಳಿ ಗ್ರಾಮದಲ್ಲಿರುವ ರಾಜೀವ ಗಾಂಧಿ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಶಾಲೆಗೆ ಬೀಗ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು.ತಾಲೂಕಿನ ಹೊನ್ನಳ್ಳಿ ಗ್ರಾಮದ ರಾಜೀವ ಗಾಂಧಿ ಪ್ರೌಢ ಶಾಲೆಯಲ್ಲಿ ೮-೧೦ನೇ ತರಗತಿವರೆಗೂ ೧೮೭ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ, ಗಣಿತ ಹಾಗೂ ಸಮಾಜ ವಿಜ್ಞಾನ ಶಿಕ್ಷಕರು ಇಲ್ಲದೆ ಇರುವುದರಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ೬೨೫ಕ್ಕೆ ೬೨೫ ಅಂಕ ಪಡೆಯಬೇಕು ಎಂದು ಹೇಳುತ್ತಾರೆ. ಆದರೆ, ನಮಗೆ ಸರಿಯಾಗಿ ಕಲಿಸಲು ಶಿಕ್ಷಕರಿಲ್ಲ ಎಂದು ೧೦ನೇ ತರಗತಿ ವಿದ್ಯಾರ್ಥಿನಿ ಅಶ್ವಿನಿ ವಡ್ಡರ ತಮ್ಮ ಸಮಸ್ಯೆ ಹೇಳಿಕೊಂಡರು.ಶಿಕ್ಷಕರ ಸಮಸ್ಯೆಯಿಂದ ಈ ಹಿಂದೆ ಒಮ್ಮೆ ಬೀಗ ಹಾಕಿ ಪ್ರತಿಭಟನೆ ಮಾಡಿದ್ದೇವೆ. ಬಿಇಒ ಕಚೇರಿಗೆ ಹೋಗಿ ಎನ್ನುತ್ತಾರೆ. ಗಣಿತ, ಸಮಾಜ ವಿಜ್ಞಾನ ಶಿಕ್ಷಕರಿಲ್ಲದೆ ತೀವ್ರ ತೊಂದರೆಯಾಗುತ್ತಿದೆ ಎಂದು…
ಸಿಂದಗಿ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಬೆಂಗಳೂರಿನ ಸಂಸ್ಕೃತ ನಿರ್ದೇಶನಾಲಯ ಹಾಗೂ ಶ್ರೀ ಪದ್ಮರಾಜ ಸಂಸ್ಕೃತ ವೇದ ಪಾಠಶಾಲೆಯ ಇವರ ಸಹಯೋಗದೊಂದಿಗೆ ಸೇತುಬಂಧ ೦೩-೦೪ನೆಯ ಸಾಲಿನ ಪುನಶ್ಚೇತನ ಶಿಬಿರ ಹಾಗೂ ಸಂಸ್ಕೃತ ಪಾಠಶಾಲಾ ಶಿಕ್ಷಕರಿಗೆ ವಿಶೇಷ ತರಬೇತಿ ಸಮಾರೋಪ ಸಮಾರಂಭವನ್ನು ಡಿ.೧೪ರಂದು ಬೆಳಿಗ್ಗೆ ೯ಗಂಟೆಗೆ ಸಾತವಿರೇಶ್ವರ ಸಭಾಭವನದಲ್ಲಿ ಜರುಗಲಿದೆ ಎಂದು ಸಂಯೋಜಕ ಡಾ.ಮಲ್ಲನಗೌಡ ಎಸ್. ತಿಳಿಸಿದ್ದಾರೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ವಹಿಸಿಕೊಳ್ಳಲಿದ್ದಾರೆ. ಸಾನಿಧ್ಯವನ್ನು ಡಾ. ವಿಶ್ವಪ್ರಭುದೇವ ಶಿವಾಚಾರ್ಯರು, ಕನ್ನೊಳ್ಳಿ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರುಣ ಶಹಾಪೂರ, ಅಧ್ಯಕ್ಷತೆಯನ್ನು ಸಂಸ್ಕೃತ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಪಾಲಯ್ಯ ಸಿ, ಪ್ರಮಾಣ ಪತ್ರ ವಿತರಣೆಯನ್ನು ವಿಜಯಪುರ ಬಿ.ಎಲ್.ಡಿ.ಇ ಸೊಸೈಟಿ, ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಪ್ರಾಂಶುಪಾಲರಾದ ಡಾ.ಸಂಜಯ್ ಕಡ್ಲಿಮಟ್ಟಿ ನೀಡಲಿದ್ದಾರೆ ಎಂದು ಬೆಂಗಳೂರ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಸಚಿವೆ ಡಾ. ರೂಪಾಶ್ರೀ ಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಲಮಟ್ಟಿ: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸ್ಪಂದಿಸಲು ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಿಸಿ ಸರ್ಕಾರ ಅಧಿವೇಶನ ನಡೆಸುತ್ತಿದೆ. ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಯಾವ ಶಾಸಕರೂ ಚಕಾರ ಎತ್ತುತ್ತಿಲ್ಲ. ಸರ್ಕಾರವು ಕೂಡಾ ಉತ್ತರ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಿದೆ. ಕೇವಲ ಕಾಟಾಚಾರಕ್ಕೆ ಅಧಿವೇಶನ ನಡೆಸುವುದಾದರೂ ಏತಕ್ಕೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರದಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.ಬುಧವಾರ ಆಲಮಟ್ಟಿಯ ಪ್ರವಾಸಿ ಮಂದಿರದ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರದ ನಾಡು ಖ್ಯಾತಿಯ ಉತ್ತರಕರ್ನಾಟಕವನ್ನು ಹಸಿರು ನಾಡಾಗಿಸಲು ಆಲಮಟ್ಟಿ ಜಲಾಶಯಕ್ಕೆ ನಿರ್ಮಿಸಲು ಭೂಮಿ ಪೂಜೆ ನೆರವೇರಿಸಿ ೬೦ವರ್ಷ ಕಳೆಯುತ್ತಾ ಬಂದರೂ ಇನ್ನೂವರೆಗೆ ಬರದ ನಾಡು ಖ್ಯಾತಿಯ ಜಿಲ್ಲೆಗಳಲ್ಲಿ ಇನ್ನೂವರೆಗೆ ಸಮರ್ಪಕವಾಗಿ ನೀರಾವರಿಯಾಗದೇ ಇರುವದು ಜನರಿಂದ ಚುನಾಯಿತರಾಗಿರುವ ಶಾಸಕರು, ಸಂಸದರುಗಳ ದಿವ್ಯ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಖಾರವಾಗಿ ಮಾತನಾಡಿದರು.ರಾಜ್ಯದ ಶೇ.೬೫ರಷ್ಟು ಕೃಷಿ ಜಮೀನನ್ನು ನೀರಾವರಿಗೊಳಪಡಿಸುವ ಕೃಷ್ಣಾ ಮೇಲ್ದಂಡೆ ಯೋಜನೆಯ ಕುರಿತು ಮೌನವಾಗದೇ ಪ್ರಗತಿಯ ಬಗ್ಗೆ ಮೌನ ಮುರಿದು ಮಾತನಾಡಿರಿ…
