Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಒಡಿಶಾದ ಕಾಂಗ್ರೆಸ್ ಸಂಸದ ಧೀರಜ ಸಾಹು ಅವರ ಮನೆಯಲ್ಲಿ ರೂ. 300 ಕೋಟಿಗೂ ಅಧಿಕ ನಗದು ಹಣ ಪತ್ತೆಯಾಗಿದ್ದು, ಕೂಡಲೇ ಭ್ರಷ್ಟ ಸಂಸದರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ, ಕಾಂಗ್ರೆಸ್ನ ರಾಜ್ಯಸಭೆ ಸದಸ್ಯ ಧೀರಜ ಸಾಹು ಅವರ ಮನೆಯಲ್ಲಿ ಕೋಟ್ಯಂತರ ನಗದು ಪತ್ತೆಯಾಗಿದೆ. ಇದರಿಂದಾಗಿ ಕಾಂಗ್ರೆಸ್ ಪ್ರಜಾಪ್ರಭುತ್ವ ವಿರೋಧಿ, ಲೂಟಿಕೋರ, ಲಂಚಕೋರ ಎಂಬುವುದು ಸಾಬೀತಾಗಿದೆ. ಬೆಂಗಳೂರಿನಲ್ಲಿ ಗುತ್ತಿಗೆದಾರರ ಬಳಿ ರೂ. 40 ಕೋ. ರೂ. 80 ಕೋ. ಹಣ ಸಿಕ್ಕಿತ್ತು. ಈಗ ಕಾಂಗ್ರೆಸ್ ಸಂಸದನ ಮನೆಯಲ್ಲಿ ರೂ. 300 ಕೋಟಿಗೂ ಅಧಿಕ ನಗದು ಸಿಕ್ಕಿದೆ. ಇದರಿಂದ ಕಾಂಗ್ರೆಸಲ್ಸಿನ ಸಾಚಾತನ ಬಟಾಬಯಲಾಗಿದೆ. ಸಂಸದ ಧೀರಜ ಸಾಹು ರಾಜೀನಾಮೆ ನೀಡಬೇಕು. ತಕ್ಷಣ ಅವರನ್ನು ಐಟಿ ಅಧಿಕಾರಿಗಳು ಬಂಧಿಸಿ ಕ್ರಮ ಕೈಗೊಳ್ಳಬೇಕು. ನೈತಿಕತೆ ಇದ್ದರೆ ಕಾಂಗ್ರೆಸ್ ಪಕ್ಷ ಕ್ರಮ ಕೈಗೊಳ್ಳಬೇಕು…
Udayarashmi kannada daily newspaper
ವಿಜಯಪುರ: ಡಿ.24 ರಂದು ನಗರದಲ್ಲಿ ನಡೆಯಲಿರುವ ವಿಜಯಪುರ ವೃಕ್ಷತ್ಥಾನ ಹೆರಿಟೇಜ್ರನ್- 2023 ಗೆ ಇವರೆಗೆ ಸುಮಾರು 6000 ಜನ ಆನಲೈನ್ ಮೂಲಕ ಹೆಸರು ನೋಂದಾಯಿಸಿ ಕೊಂಡಿದ್ದು, ಡಿಸೆಂಬರ್ 13 ನೋಂದಣಿ ಮಾಡಲು ಕೊನೆಯ ದಿನವಾಗಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ನೋಂದಣಿ ಸಮಿತಿಯ ಡಾ. ಮಲ್ಲಿಕಾರ್ಜುನ ಯಲಗೊಂಡ ಮತ್ತು ವೀರೇಂದ್ರ ಗುಚ್ಚೆಟ್ಟಿ, ಈ ಓಟದಲ್ಲಿ ಪಾಲ್ಗೋಳ್ಳಲು ಈಗಾಗಲೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಖ್ಯಾತಿಯ ಕ್ರೀಡಾಪಟುಗಳು, 72 ವರ್ಷದ ಹಿರಿಯ ಮಹಿಳೆ ಸೇರಿದಂತೆ ಮಕ್ಕಳು ಹಾಗೂ ಯುವಕರು ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಡಿಸೆಂಬರ್ 13 ನೋಂದಾವಣಿಗೆ ಕೊನೆಯ ದಿನವಾಗಿದ್ದು, ಕ್ರೀಡಾಸಕ್ತರು ಕೂಡಲೇ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಈ ಮೂಲಕ ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತುಜಾಗೃತಿ ಮೂಡಿಸಲು ಹಾಗೂ ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗೌರವಾರ್ಥ ಆಯೋಜಿಸಲಾಗಿರುವ ವಿಜಯಪುರ ವೃಕ್ಷತ್ಥಾನ ಹೆರಿಟೇಜ್ರನ್- 2023 ಭಾಗಿಯಾಗಬೇಕು.ಆಸಕ್ತರು ಆನಲೈನ್ ಮೂಲಕ https://reg.myraceindia.com/MRTS/VHR2023 ಹೆಸರು ನೋಂದಾಯಿಸಬೇಕು ಎಂದು ಡಾ. ಮಲ್ಲಿಕಾರ್ಜುನ ಯಲಗೊಂಡ ಮತ್ತು ವೀರೇಂದ್ರ…
ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ತಂಡ ರಚನೆ | ನೀರು, ಮೇವಿನ ಕೊರತೆ ಆಗದಂತೆ ಕ್ರಮ | ಶಾಸಕರಿಗೆ ಸಂಪೂರ್ಣ ಜವಾಬ್ದಾರಿ ಬೆಂಗಳೂರು: ಬರ ನಿರ್ವಹಣೆಗೆ ರಾಜ್ಯ ಸರ್ಕಾರ ಸನ್ನದ್ಧವಾಗಿದ್ದು, ಮುಂದಿನ ದಿನಗಳಲ್ಲಿ ಎದುರಾಗುವ ಭೀಕರತೆಗೆ ಅನುಗುಣವಾಗಿ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಮುಖ್ಯಮಂತ್ರಿ, ಜನವರಿ ವೇಳೆಗೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸಲಿದ್ದು, ದಿನದ 24 ಗಂಟೆಯೂ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಬರ ನಿರ್ವಹಣೆಗೆ ಶಾಸಕರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ತಂಡ ರಚನೆ ಮಾಡಲಾಗಿದೆ. ಈಗಾಗಲೇ 183 ಟಾಸ್ಕ್ ಫೋರ್ಸ್ ಸಭೆ ನಡೆಸಲಾಗಿದೆ. ಜಿಲ್ಲೆಯಲ್ಲಿನ ಬರಗಾಲ ನಿರ್ವಹಣೆಯ ಜವಾಬ್ದಾರಿಯನ್ನು ಸಂಪೂರ್ಣವಾಗಿ ಶಾಸಕರಿಗೆ ನೀಡಲಾಗಿದೆ. ಅವರ ಅಧ್ಯಕ್ಷತೆಯಲ್ಲಿಯೇ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಅವರ ಖಾತೆಗಳಿಗೆ ಸುಮಾರು ರೂ. 900 ಕೋಟಿ ಎಸ್.ಡಿ.ಆರ್.ಎಫ್ ಮೂಲಕ ನೀಡಲಾಗಿದ್ದು, ಹಣ ಬಳಕೆಯ ಸಂಪೂರ್ಣ ಅಧಿಕಾರವನ್ನು ಜಿಲ್ಲಾ…
ಕೊಲ್ಹಾರ: ಸ್ಥಳೀಯ ಪಟ್ಟಣವನ್ನು ತಾಲೂಕು ಕೆಂದ್ರವನ್ನಾಗಿ ಮಾಡಿ ಸುಮಾರು ೧೦-೧೨ ವರ್ಷಗಳೇ ಕಳೆದರೂ ಹೆಸರಿಗೆ ಮಾತ್ರ ತಾಲೂಕು ಕೇಂದ್ರವಾಗಿದ್ದು ಈ ತಾರತಮ್ಯವನ್ನು ಹೋಗಲಾಡಿಸಿ ಪರಿಪೂರ್ಣ ತಾಲೂಕು ಕಚೇರಿಗಳನ್ನು ಹೊಂದಿದ ಕೊಲ್ಹಾರ ತಾಲೂಕು ಕೇಂದ್ರವಾಗಲು ಸಚಿವರಾದ ಶಿವಾನಂದ ಎಸ್ ಪಾಟೀಲ ವಿಶೇಷ ಕಾಳಜಿವಹಿಸಬೇಕೆಂದು ಹಿರೇಮಠದ ಮುರುಘೇಂಧ್ರ ಮಹಾಸ್ವಾಮೀಜಿ ಹಾಗೂ ಕೊಲ್ಹಾರ ತಾಲೂಕು ಹೋರಾಟ ಸಮೀತಿ ಅಧ್ಯಕ್ಷ ಈರಣಗೌಡ ಬ ಕೋಮಾರ ಆಗ್ರಹಿಸಿದರು.ಈ ಕುರಿತು ಪತ್ರಿಕಾಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮೂವತ್ತು ಹಳ್ಳಿಗಳನ್ನು ಹಂಚಿಕೆ ಮಾಡಿ ಜನಸಂಖ್ಯೆ ಆಧಾರದ ಮೇಲೆ ಕೊಲ್ಹಾರ ಪಟ್ಟಣವನ್ನು ಹೋರಾಟ ಸಮೀತಿಯವರ ನಿರಂತರ ಹೋರಾಟದ ಫಲವಾಗಿ ಹಿಂದಿನ ಸರಕಾರಗಳು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದ್ದವು ಅದರಂತೆ ಕೆಲವೇ ಕೆಲವು ತಾಲೂಕಾ ಆಡಳಿತದ ಇಲಾಖೆಗಳು ಕಾರ್ಯನಿರ್ವಹಿಸುತ್ತಿದ್ದು ರೈತರಿಗೆ ಸಾರ್ವಜನಿಕರಿಗೆ ಅವಶ್ಯಕವಾದ ತಾಲೂಕಾ ಆಡಳಿತದ ಕಚೇರಿಗಳು ಪೂರ್ಣಪ್ರಮಾಣದಲ್ಲಿ ಬರದೇ ಇರುವದರಿಂದ ಜನರು ಈಗಲು ಮೂಲ ತಾಲೂಕು ಕೇಂದ್ರಕ್ಕೆ ತೆರಳಬೇಕಾದ ಅನಿವಾರ್ಯತೆಯನ್ನು ತಪ್ಪಿಸಲು ಇದೇ ಕ್ಷೇತ್ರವನ್ನು ಪ್ರತಿನಿಧಿಸುವ ಜನಪ್ರತಿನಿಧಿ ಸಚಿವ ಶಿವಾನಂದ…
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆ ಇವರ ಸಹಯೋಗದಲ್ಲಿ ಡಿ.೧೭ರಂದು ಸೋಲಾಪುರ ರಸ್ತೆಯ ಪೊಲೀಸ್ ಪರೇಡ್ ಮೈದಾನದಲ್ಲಿ ಶ್ವಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೯ ಗಂಟೆಗೆ ಶ್ವಾನ ಪ್ರದರ್ಶನವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಆಲಮಟ್ಟಿ: ಇಲ್ಲಿಯ ವಿವಿಧ ಉದ್ಯಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ದಿನಗೂಲಿ ಕಾರ್ಮಿಕರಿಗೆ ಆರು ತಿಂಗಳಿಂದ ವೇತನ ಪಾವತಿ ಮಾಡದಿರುವುದನ್ನು ಖಂಡಿಸಿ ಅರಣ್ಯ ದಿನಗೂಲಿಗಳುಮಂಗಳವಾರ ಇಲ್ಲಿ ಪ್ರತಿಭಟಿಸಿದರು.ರಾಕ್ ಉದ್ಯಾನದಿಂದ ಮುಖ್ಯ ಎಂಜಿನಿಯರ್ ಕಚೇರಿಯವರೆಗೆ ೧೦೦ ಕ್ಕೂ ಹೆಚ್ಚು ಕಾರ್ಮಿಕರು ಮೆರವಣಿಗೆ ನಡೆಸಿ ವೇತನ ವಿಳಂಬ ಧೋರಣೆ ಖಂಡಿಸಿದರು.ಮುಖ್ಯ ಎಂಜಿನಿಯರ್ ಕಚೇರಿ ಎದುರು ಸಂಜೆಯವರೆಗೂ ಪ್ರತಿಭಟನೆ ನಡೆಸಿದ ನೂರಾರು ಕಾರ್ಮಿಕರು ಕಳೆದ ಆರು ತಿಂಗಳಿಂದ ವೇತನ ನೀಡಿಲ್ಲ, ಇದರಿಂದ ನಮ್ಮ ನಿತ್ಯ ಜೀವನದ ಸಾಗಿಸುವುದು ದುಸ್ತರವಾಗಿದೆ ಎಂದು ನೊಂದು ನುಡಿದರು.ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಮಧ್ಯಾಹ್ನದವರೆಗೂ ಕುಳಿತರೂ ಯಾರೊಬ್ಬರೂ ಅವರ ಸಮಸ್ಯೆಯನ್ನೂ ಆಲಿಸುವವರೂ ಯಾರೂ ಇರಲಿಲ್ಲ.ಧರಣಿನಿರತ ಪ್ರತಿಭಟನಾಕಾರರ ಸಮಸ್ಯೆ ಯಾರೊಬ್ಬ ಅಧಿಕಾರಿಯೂ ಆಲಿಸಿಲ್ಲ ಎಂಬುದನ್ನು ಗಮನಿಸಿ, ಪತ್ರಕರ್ತರ ಒತ್ತಡಕ್ಕೆ ಮುಖ್ಯ ಎಂಜಿನಿಯರ್ ಎಚ್.ಸಿ. ಶ್ರೀನಿವಾಸ ಹಾಗೂ ಪ್ರಧಾನ ಮುಖ್ಯ ಲೆಕ್ಕಾಧಿಕಾರಿ ವರದರಾಜು ಒಂದು ವಾರದೊಳಗೆ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.ಧರಣಿಯಲ್ಲಿ ಎಐಯುಟಿಯುಸಿ ಸಂಘಟನೆಯ ಜಿಲ್ಲಾ ಮುಖಂಡ ಎಚ್.ಟಿ. ಮಲ್ಲಿಕಾರ್ಜುನ, ಲಕ್ಷ್ಮಣ ಬ್ಯಾಲ್ಯಾಳ, ಯಮನಪ್ಪ ತುಬಾಕಿ,…
ಗೋಲಗೇರಿ ವಿದ್ಯುತ್ ಶಾಖೆ ವ್ಶಾಪ್ತಿಯ ಹಳ್ಳಿಗಳಲ್ಲಿ ಕಾರ್ಯಾಚರಣೆ ಬ್ರಹ್ಮದೇವನಮಡು: ಈ ಭಾಗದಲ್ಲಿ ರಾತ್ರಿ ವೇಳೆ ನೇರವಾಗಿ ಎಲ್ ಟಿ ಲೈನ್ ಗೆ ಹುಕ್ಕು ಹಾಕುತ್ತಿರುವದು ಕಂಡು ಬರುತ್ತಿದೆ. ವಿದ್ಯುತ್ ಕಳ್ಳತನ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಖಾಧಿಕಾರಿ ದಯಾನಂದ ಹಂಚಿನಾಳ ಹೇಳಿದರು.ಸಿಂದಗಿ ತಾಲೂಕಿನ ಗೋಲಗೇರಿ ಶಾಖೆಯ ವ್ಶಾಪ್ತಿಯ ವಂದಾಲ, ಢವಳಾರ, ಸಾಸಾಬಾಳ, ಸಾಸಾಬಾಳ ತಾಂಡಾ, ಡಂಬಳ, ಕರವಿನಾಳ, ಕದಾರಪೂರ, ಡಂಬಳ ತಾಂಡಾದಲ್ಲಿ ಸೋಮವಾರ ವಿದ್ಯುತ್ ಬಾಕಿ ವಸೂಲಿ ಹಾಗೂ ಅನಧಿಕೃತ ವಿದ್ಯುತ್ ಕಾರ್ಯಾಚರಣೆಯಲ್ಲಿ ಮಿಟರ್ ವೈಯರ್, ವಶಪಡಿಸಿಕೊಂಡು ಅವರು ಮಾತನಾಡಿದರು.ವಿದ್ಯುತ್ ಕಳ್ಳತನ ಮಹಾ ಅಪರಾಧ ಎಂದು ಗ್ರಾಮಗಳಲ್ಲಿ ಡಂಗುರ ಸಾರುವ ಮೂಲಕ ಜಾಗೃತಿ ಮೂಡಿಸಿದರು.ಅನಧಿಕೃತವಾಗಿ ಬಳಸುತ್ತಿರುವ ಮನೆಗಳ ಮೇಲೆ ದಾಳಿ ಮಾಡಿ ಮೋಟರ್, ಪಂಪಸೆಟ್ ವಿದ್ಯುತ್ ವೈಯರ್ ಗಳನ್ನು ವಶಪಡಿಸಿಕೊಂಡರು.ವಿದ್ಯುತ್ ಕಾರ್ಯಾಚರಣೆಯಲ್ಲಿ ಮೆಲ್ವಿಚಾರಕ ಉಮೇಶ ಕನಾ೯ಳ, ಲೈನಮನ್ ಫಾರುಕಪಟೇಲ ಪಾಟೀಲ, ಶ್ರೀಶೈಲ್ ಮಾಲಿಪಾಟೀಲ, ಹಣಮಂತ್ರಾಯಗೌಡ ಬಿರಾದಾರ, ಗ್ರಾಮ ವಿದ್ಶುತ್ ಪ್ರತಿನಿಧಿ ಮಲ್ಲಿಕಾಜು೯ನ ಕೋಟಾರಗಸ್ತಿ, ದೇವಿಂದ್ರ ಬಿರಾದಾರ ಇದ್ದರು.
ವಿಜಯಪುರ: ಡಿಸೆಂಬರ್ ೯ ರಿಂದ ಭಾರತಾದ್ಯಂತ ಭಗೀರಥ ಭಾರತ ಜನ ಕಲ್ಯಾಣ ಯಾತ್ರೆ ಪ್ರಾರಂಭಗೊಂಡಿದ್ದು, ಯಾತ್ರೆಯು ಡಿ.೧೪ ರಂದು ಬೆಳಿಗ್ಗೆ ೧೦ ಗಂಟೆಗೆ ವಿಜಯಪುರ ನಗರಕ್ಕೆ ಆಗಮಿಸುತ್ತಿದ್ದು, ಈ ಯಾತ್ರೆಯನ್ನು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಭಗೀರಥ ವೃತ್ತದಿಂದ ಶಿಕಾರಖಾನೆಯ ವೆಂಕಟೇಶ್ವರ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಪ್ಪಾರ ಸೇವಾ ಸಂಘದ ಅಧ್ಯಕ್ಷ ಜಕ್ಕಪ್ಪ ಯಡವೆ ಅವರು ತಿಳಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ನೇತೃತ್ವದಲ್ಲಿ ಭಗೀರಥ ಪೀಠದ ಜಗದ್ಗುರು ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ , ಪ್ರಧಾನ ಕಾರ್ಯದರ್ಶಿಗಳಾದ ಯು ವೆಂಕೋಬ ವಕೀಲರ ನೇತೃತ್ವದಲ್ಲಿ ಸದರಿ ಯಾತ್ರೆಯು ಸಾಗಲಿದೆ ಎಂದರು.ಈ ಯಾತ್ರೆಯಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಮಾಜಿ ಹಾಲಿ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ರಾಜ್ಯ ಮುಖಂಡರು, ಸಮಾಜದ ಮಾಜಿ-ಹಾಲಿ ಜನಪ್ರತಿನಿಧಿಗಳು ಸಮಾಜದ ಹಾಲಿ-ನಿವೃತ್ತ ನೌಕರರು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ದೇಶದ ವಿವಿಧ ರಾಜ್ಯಗಳಲ್ಲಿ…
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕುರಿತ ಪಾಲಕರ ಸಭೆಯಲ್ಲಿ ಶಿಕ್ಷಕ ನಿಂಗರಾಜ್ ಬಾಬಾಪುರ ಅಭಿಮತ ಕಲಕೇರಿ: ವಿದ್ಯಾರ್ಥಿ ಜೀವನದಲ್ಲಿ ಪ್ರಮುಖ ಘಟ್ಟವಾದ ಪದವಿಪೂರ್ವ ಹಂತದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಮೈಗೂಡಿಸಿಕೊಂಡರೆ ಅದುವೇ ಜೀವನಕ್ಕೆ ಭೂಷಣವಾಗಿದ್ದು, ವಿನಯದಿಂದ ಕಲಿತ ವಿದ್ಯೆ ಅಮೃತಕ್ಕೆ ಸಮಾನವಾದರೆ, ಅಹಂಕಾರದಿಂದ ಕಲಿತ ವಿದ್ಯೆ ವಿಷಕ್ಕೆ ಸಮಾನವಾಗುತ್ತದೆ. ಇದನ್ನರಿತು ತಂದೆ-ತಾಯಿ ಮತ್ತು ಶಿಕ್ಷಕರ ಮಾರ್ಗದರ್ಶನದಲ್ಲಿ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಪಡೆದಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಆದರ್ಶ ಪ್ರೌಢಶಾಲೆಯ ಶಿಕ್ಷಕ ನಿಂಗರಾಜ್ ಬಾಬಾಪುರ ಹೇಳಿದರು.ಗ್ರಾಮದ ಎ.ಕೆ.ಸಿರಸಗಿ ಕಲಾ ಮತ್ತು ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಪರಿಶೀಲನೆಯ ಕುರಿತು ಹಮ್ಮಿಕೊಂಡ ಪಾಲಕರ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.ಉಪಪ್ರಾಚಾರ್ಯ ಶ್ರೀದೇವಿ ಹೂಲಿ ಅವರು ಮಾತನಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶನದಂತೆ ಪರೀಕ್ಷೆಗಳನ್ನು ವಿದ್ಯಾರ್ಥಿ ಸ್ನೇಹಿಯಾಗಿ ಮಾರ್ಪಡಿಸುವ ಸಂಬಂಧ ಹಲವು ಶೈಕ್ಷಣಿಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಅದರಂತೆ ವಾರ್ಷಿಕ ಪರೀಕ್ಷೆ…
