Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಚೀಟಿ ಸಂಸ್ಥೆಗಳು ಸಮರ್ಪಕವಾಗಿ ನಡೆಸುವ ದೃಷ್ಟಿಯಿಂದ ಚೀಟಿ ಕಾಯ್ದೆಯ ಪ್ರಕರಣ ೪ ರಡಿಯಲ್ಲಿ ಪೂರ್ವಾನುಮೋದನೆಯ ಮುನ್ನ ಚೀಟಿ ಗುಂಪುಗಳ ಭದ್ರತಾ ಠೇವಣಿ ಮೊತ್ತವನ್ನು ಅನುಮೋದಿತ ಬ್ಯಾಂಕ್ನಲ್ಲಿ ನಿಬಂಧಕರ ಹೆಸರಿನಲ್ಲಿ ತೊಡಗಿಸುವುದು ಕಡ್ಡಾಯವಾಗಿರುತ್ತದೆ.ಸಹಕಾರ ಇಲಾಖೆಯಿಂದ ಅನುಮತಿ ಪಡೆದ ಚೀಟಿ ಸಂಸ್ಥೆಗಳು ಚೀಟಿ ಗುಂಪುಗಳ ಭದ್ರತಾ ಠೇವಣಿ ಮೊತ್ತವನ್ನು ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್- ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಲ್ಲಿ ತೊಡಗಿಸುವಂತೆ ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿ.೭ರಂದು ನಡೆದ ಸಮಾರಂಭದಲ್ಲಿ ೨೦೨೨ನೇ ಸಾಲಿನಲ್ಲಿ ಅತಿ ಹೆಚ್ಚು ಧ್ವಜ ನಿಧಿ ಸಂಗ್ರಹ ಮಾಡಿದ ವಿಜಯಪುರ ಜಿಲ್ಲೆಗೆ ಪ್ರಥಮ ಸ್ಥಾನ ನೀಡಲಾಗಿದೆ.ಸಮಾರಂಭದಲ್ಲಿ ವಿಜಯಪುರ ಜಿಲ್ಲೆ ಅತಿ ಹೆಚ್ಚು ನಿಧಿ ಸಂಗ್ರಹ ಮಾಡಿದ್ದರಿಂದ ಲೆಫ್ಟಿನೆಂಟ್ ಜನರಲ್ ಬಿ.ಕೆ.ರೆಪ್ಸವಾಲ್, ಎ.ವಿ.ಎಸ್.ಎಂ. ವಿ.ಎಸ್.ಎಂ. ಕಮಾಂಡೆಂಟ್ ಎ.ಎಸ್.ಸಿ. ಸೆಂಟರ್ ಮತ್ತು ಕಾಲೇಜ್ ಬೆಂಗಳೂರು ಇವರಿಂದ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರು ಪ್ರಶಸ್ತಿ ಪಾರಿತೋಷಕವನ್ನು ಸ್ವೀಕರಿಸಿದ್ದಾರೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಕೆಬಿಜೆಎನ್ಎಲ್ ವತಿಯಿಂದ ಕಾಲುವೆಗಳ ಮೂಲಕ ಬಹುಹಳ್ಳಿ ಕುಡಿಯುವ ನೀರಿನ ಯೋಜನೆಯಡಿ ಜನವಸತಿಗಳಿಗೆ ಕಾಲುವೆಗಳ ಮೂಲಕ ನೀರು ಪೂರೈಸಲಾಗುತ್ತಿದ್ದು, ಜಲಸಂಗ್ರಹಾರ-ಕೆರೆಗಳಲ್ಲಿರುವ ನೀರನ್ನು ಕುಡಿಯುವ ನೀರಿಗಾಗಿ ಮಾತ್ರ ಉಪಯೋಗಿಸುವಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಜಲಸಂಗ್ರಹಗಾರ-ಕೆರೆಗಳ ವ್ಯಾಪ್ತಿಯ ೧೦೦ ಅಡಿ ಪ್ರದೇಶದಲ್ಲಿ ೨೦೨೩ರ ಡಿ.೭ರಿಂದ ೨೦೨೪ರ ಜನವರಿ ೦೧ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಈ ಸಂದರ್ಭದಲ್ಲಿ ಜಲಸಂಗ್ರಹಗಾರ-ಕೆರೆಗಳ ವ್ಯಾಪ್ತಿಯ ೧೦೦ ಅಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರು ಗುಂಪು-ಗುಂಪಾಗಿ ಓಡಾಡುವುದು, ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿದಲಾಗಿದೆ. ಜಲಸಂಗ್ರಹಗಾರ-ಕೆರೆಗಳಿಂದ ಅಕ್ರಮ ಪಂಪಸೆಟ್, ಸೈಫನ್, ಜಲಚರದಿಂದ ಸೈಫನ್ ಮೂಲಕ ನೀರನ್ನು ಉಪಯೋಗಿಸಕೂಡದು. ಅಕ್ರಮ ಪಂಪಸೆಟ್ ಮೂಲಕ ನೀರನ್ನು ಬಳಸುತ್ತಿದ್ದಲ್ಲಿ ಅಂತಹ ಪಂಪಸೆಟ್ಗಳ ವಿದ್ಯುತ್ ಸಂಪರ್ಕವನ್ನು ಕಡಿಗೊಳಿಸಲಾಗುವುದು. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವಿಜಯಪುರ: ಜಿಲ್ಲೆಯಲ್ಲಿ ಡಿ.೯ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ ಯಶಸ್ವಿಯಾಗಿದ್ದು, ಕಕ್ಷಿದಾರರು ಹಾಗೂ ವಕೀಲರ ಸಹಕಾರದಿಂದ ಈ ಅದಾಲತ್ನಲ್ಲಿ ೧೮೪ ಸಿವಿಲ್ ದಾವೆಗಳು, ೧೮೨ ಚೆಕ್ ಬೌನ್ಸ್ ಪ್ರಕರಣಗಳು, ೧೫೨ ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣ ಹಾಗೂ ೧೧ ಕೌಟುಂಬಿಕ ಪ್ರಕರಣಗಳು ಮತ್ತು ೯೭ ರಾಜಿಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ ಒಟ್ಟು ೧೧೪೪೧ ಪ್ರಕರಣಗಳು ಮತ್ತು ೧,೪೧,೦೮೩ ವ್ಯಾಜ್ಯ ಪೂರ್ವ ಪ್ರಕರಣಗಳು ಮುಕ್ತಾಯಗೊಂಡಿವೆ.ರಾಷ್ಟ್ರೀಯ ಲೋಕ್ ಅದಾಲತನ ಯಶಸ್ಸಿಗೆ ಸಹಕರಿಸಿದ ವಕೀಲರು, ಕಕ್ಷಿದಾರರು, ವಿಮಾ ಕಂಪನಿಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮತ್ತು ರಾಷ್ಟ್ರೀಯ ಲೋಕ್ ಅದಾಲತ್ ಪ್ರಚಾರದಲ್ಲಿ ಸಹಭಾಗಿಯಾದವರಿಗೆ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಡಿ.೧೧ರಿಂದ ೧೬ರವರೆಗೆ ಡಿಇಎಲ್ ಇಡಿ ಹಾಗೂ ಡಿಪಿಎಸ್ಇ ಪೂರಕ ಪರೀಕ್ಷೆ ವಿಜಯಪುರ: ನಗರದ ಮನಗೂಳಿ ರಸ್ತೆಯಲ್ಲಿರುವ ಸರಕಾರಿ ಉರ್ದು ಟಿಟಿಐ ಕಾಲೇಜ್ನಲ್ಲಿ ಡಿಸೆಂಬರ್ ೧೧ ರಿಂದ ೧೬ರವರೆಗೆ ಪ್ರಥಮ ಮತ್ತು ದ್ವಿತೀಯ ಡಿ.ಇಎಲ್.ಇಡಿ ಹಾಗೂ ಡಿ.ಪಿ.ಎಸ್.ಇ ಪೂರಕ ಪರೀಕ್ಷೆ ಜರುಗಲಿದ್ದು, ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ೨೦೦ ಮೀ. ಪ್ರದೇಶವನ್ನು ಕಲಂ ೧೪೪ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದು ಮತ್ತು ಬಳಸುವುದು ನಿಷೇಧಿಸಲಾಗಿದೆ. ಪರೀಕ್ಷಾ ದಿನಗಳಂದು ಬೆಳಿಗ್ಗೆ ೮ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಕೇಂದ್ರದ ವ್ಯಾಪ್ತಿಯಲ್ಲಿನ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.
ವಿಜಯಪುರ: ಬಾಲ್ಯ ವಿವಾಹ ನಿಷೇಧ ಕಾಯ್ದೆ, ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಸಮರ್ಪಕ ಜಾರಿ ಸೇರಿದಂತೆ ಮಹಿಳಾ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ನೊಂದ ಮತ್ತು ಸಂಕಷ್ಟಕ್ಕೊಳಗಾಗಿರುವ ಮಹಿಳೆಯರಿಗೆ ತಾತ್ಕಾಲಿಕ ಆಶ್ರಯ ಮತ್ತು ಪುನರವಸತಿ ಸೌಲಭ್ಯ ಒದಗಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯ ೨೦೨೩-೨೪ನೇ ಸಾಲಿನ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಹಾಗೂ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಬಾಲ್ಯವಿವಾಹವನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ನಿಷೇಧ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು. ಬಾಲ್ಯ ವಿವಾಹವಾಗದಂತೆ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸ್ಥಳೀಯ ಆಡಳಿತ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಬಾಲ್ಯ ವಿವಾಹಗಳನ್ನು ಪತ್ತೆ ಹಚ್ಚಿ, ಸಾಧ್ಯವಾದಷ್ಟು ಬಾಲ್ಯ ವಿವಾಹವಾಗುವ ಮೊದಲೇ ತಡೆಗಟ್ಟಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಬಾಲ್ಯ ವಿವಾಹ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಬೇಕು. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ…
ವಿಜಯಪುರ: ವಿಜಯಪುರ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಡಿಸೆಂಬರ್ ೧೪ ರಂದು ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.ಅಂದು ಬೆಳಿಗ್ಗೆ ೧೦:೩೦ ಗಂಟೆಯಿಂದ ಪೊಲೀಸ್ ಉಪಾಧೀಕ್ಷಕರು (ಮೊ:೯೩೬೪೦೬೨೫೫೭), ಪೊಲೀಸ್ ಇನ್ಸಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್ಸಪೆಕ್ಟರ್-೨(ಮೊ:೯೩೬೪೦೬೨೬೩೯) ತಿಕೋಟದ ತಾಲೂಕ ಪಂಚಾಯತಿ ಸಭಾ ಭವನದಲ್ಲಿ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡಿವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದ್ದು, ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಸಂಪಾದನೆ ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರ ದೂರುಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ ಕಚೇರಿ ದೂರವಾಣಿ ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸುವಂತೆ…
ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ :ಡಿಸಿ ಟಿ.ಭೂಬಾಲನ್ ವಿಜಯಪುರ: ನಗರದ ಕುಡಿಯುವ ನೀರಿನ ಕಾಮಗಾರಿಗಳಿಗೆ ವೇಗ ನೀಡಿ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಿ ನಗರದ ಎಲ್ಲ ವಾರ್ಡಗಳಿಗೆ ಕುಡಿಯುವ ನೀರು ಪೂರೈಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮಂಡಳಿ ಹಾಗೂ ಕುಡಿಯುವ ನೀರಿನ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರೊಂದಿಗೆ ಸಭೆ ನಡೆಸಿದ ಅವರು, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗಬಾರದು. ಕುಡಿಯುವ ನೀರಿನ ಕಾಮಗಾರಿಗಳಿಗೆ ವೇಗ ನೀಡಿ, ಡಿಸೆಂಬರ್ ಅಂತ್ಯದೊಳಗೆ ಸಂಪೂರ್ಣ ಕಾಮಗಾರಿ ಪೂರ್ಣಗೊಳಿಸಿ ಸಮರ್ಪಕವಾಗಿ ಎಲ್ಲ ವಾರ್ಡಗಳಿಗೆ ನೀರು ಪೂರೈಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಕೆಲವೊಂದು ಕಡೆಗಳಲ್ಲಿ ಒಂದು ವಾರದ ನಂತರ ನೀರು ಸರಬರಾಜು ಮಾಡಲಾಗುತ್ತಿರುವ ಕುರಿತು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು ಎಲ್ಲ ವಾರ್ಡಗಳಲ್ಲಿ ನಿರಂತರವಾಗಿ ಕುಡಿಯುವ ನೀರು ಸರಬರಾಜುವಿಗೆ ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಮರ್ಪಕವಾಗಿ ನೀರು ಪೂರೈಸುವ ಹಿನ್ನಲೆಯಲ್ಲಿ ಅವಶ್ಯಕತೆಗಿಂತ ಹೆಚ್ಚಾಗಿ…
ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದಲ್ಲಿ ಸಂತ ಜ್ಞಾನೇಶ್ವರರ ಮಹಾರಾಜರ ಉತ್ಸವದ ಅಂಗವಾಗಿ ನಾಲ್ಕು ದಿನಗಳವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ಜರುಗಿದವು.ಪಟ್ಟಣದ ವಿಠಲ ಮಂದಿರದಲ್ಲಿ ಶುಕ್ರವಾರ ಸಂಜೆ ಭಜನೆಯೊಂದಿಗೆ ಪೋತಿ ಸ್ಥಾಪನಾ ಕಾರ್ಯಕ್ರಮ ನಡೆಯಿತು. ಶನಿವಾರ ಬೆಳಿಗ್ಗೆ ಪಾರಾಯಣ, ಸಂಜೆ ಪ್ರವಚನ, ರಾತ್ರಿ ಕೀರ್ತನೆ ಹಾಗೂ ಭಜನೆಯೊಂದಿಗೆ ಜಾಗರಣೆ ಕಾರ್ಯಕ್ರಮದಲ್ಲಿ ಭಕ್ತರು ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಿದ್ದರು. ಭಾನುವಾರ ಬೆಳಗ್ಗೆ ದೇವಸ್ಥಾನದಲ್ಲಿ ಹರಿಪಾಠ ನಡೆಯಿತು. ಸಂಜೆ ಭಕ್ತರ ಭಜನೆಯೊಂದಿಗೆ ಪಲ್ಲಕ್ಕಿ ಉತ್ಸವವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಸೋಮವಾರ ಬೆಳಗ್ಗೆ ಕಾಲಾಕೀರ್ತನ ಕಾರ್ಯಕ್ರಮದ ನಂತರ ಭಕ್ತರು ಪ್ರಸಾದ ಸ್ವೀಕರಿಸಿದರು.ಭಾನುವಾರ ಜರುಗಿದ ಪಲ್ಲಕ್ಕಿ ಉತ್ಸವದಲ್ಲಿ ಮುಖಂಡರಾದ ಅಪ್ಪುಗೌಡ ಪಾಟೀಲ, ಸುಭಾಸಗೌಡ ಪಾಟೀಲ, ಬಾಬು ಅರಳೆಪ್ಪನವರ, ಶಿವಾಜಿ ಘೋರ್ಪಡೆ, ಸಂಭಾಜಿ ನಲವಡೆ, ಜೋತಿಬಾ ನಾಮನೆ, ಪಾಂಡುಗ ಬನಸೋಡೆ, ಯಲ್ಲಪ್ಪ ರೊಳ್ಳಿ, ರಾಜು ಬಣಕರ, ವಿಶ್ವನಾಥ ಗುಂಡ, ಪುಂಡಲೀಕ ಮಾಳಿ, ಬಸವರಾಜ ಚಿಮ್ಮಲಗಿ, ಮುರಳಿ ನುಲೆಣ್ಣವರ, ಶಿವಾಜಿ ಮೋರೆ ಇತರರು ಇದ್ದರು.
ಬಸವನಬಾಗೇವಾಡಿ: ಪಟ್ಟಣದಲ್ಲಿ ಅಖಂಡ ೧೮೮ ದಿನದ ಹೋರಾಟದ ಫಲವಾಗಿ ಬಸವನಬಾಗೇವಾಡಿ ವಿದ್ಯುತ್ ವಿಭಾಗೀಯ ಕಚೇರಿ ದಿ.೧೨.೧೨.೨೦೧೨ ರಂದು ಆದೇಶ ಸಿಕ್ಕಿತು. ಇದರಿಂದಾಗಿ ೨೯೭ ಗ್ರಾಮಗಳ ಜನರು ವಿಜಯಪುರಕ್ಕೆ ಹೋಗಿ ಬರುವುದನ್ನು ತಪ್ಪಿಸಿದಂತಾಗಿದೆ. ಇಂದಿಗೆ ಈ ಕಚೇರಿಯು ಹತ್ತು ವರ್ಷದ ಹಿಂದೆ ಆದೇಶದೊಂದಿಗೆ ಆರಂಭವಾಗಿ ಇಂದಿಗೆ ಹನ್ನೊಂದು ವರ್ಷಕ್ಕೆ ಕಾಲಿಡುತ್ತಿದ್ದರೂ ಜನರಿಗೆ ಈ ಕಚೇರಿಯ ಸೌಲಭ್ಯಗಳು ಸರಿಯಾಗಿ ಜನರಿಗೆ ಸಿಗುತ್ತಿಲ್ಲ ಎಂದು ರೈತಪರ, ಜನಪರ ಸಾಮಾಜಿಕ ಹೋರಾಟಗಾರ ಮಲ್ಲಿಕಾರ್ಜುನ ಕೆಂಗನಾಳ ಹೇಳಿದರು.ಸೋಮವಾರ ದೂರವಾಣಿ ಮೂಲಕ ಮಾತನಾಡಿದ ಅವರು, ಪಟ್ಟಣದಲ್ಲಿ ವಿದ್ಯುತ್ ವಿಭಾಗೀಯ ಕಚೇರಿ ಇಲ್ಲದ ಪರಿಣಾಮವಾಗಿ ಜನರು ಜಿಲ್ಲಾ ಕೇಂದ್ರ ವಿಜಯಪುರಕ್ಕೆ ತಮ್ಮ ಕೆಲಸಗಳಿಗಾಗಿ ಅಲೆದಾಡುವ ಪರಿಸ್ಥಿತಿಯಿತ್ತು. ಅಲ್ಲದೇ ದೂರದ ತಾಳಿಕೋಟಿ, ಮುದ್ದೇಬಿಹಾಳ, ನಿಡಗುಂದಿ, ಕೊಲ್ಹಾರ ತಾಲೂಕಿನ ಸೇರಿದಂತೆ ಇದರ ವ್ಯಾಪ್ತಿಯಲ್ಲಿ ಬರುವ ಗ್ರಾಮದ ಜನರು ವಿದ್ಯುತ್ ಕೆಲಸಗಳಿಗಾಗಿ ವಿಜಯಪುರದಲ್ಲಿರುವ ವಿಭಾಗೀಯ ಕಚೇರಿಗೆ ಹೋಗುವ ಪರಿಸ್ಥಿತಿಯಿತ್ತು. ಜನರ ಅಲೆದಾಡುವದನ್ನು ಮನಗಂಡು ಅವರ ಕೆಲಸಗಳು ಸುಲಭವಾಗಿ ಬೇಗನೇ ಆಗುವ ಉದ್ದೇಶದಿಂದ ಹೆಸ್ಕಾಂ ಇಲಾಖೆಯು ಬಸವನಬಾಗೇವಾಡಿಯಲ್ಲಿ…
