Author: editor.udayarashmi@gmail.com

ಬಸವನಬಾಗೇವಾಡಿ: ಪಟ್ಟಣದಲ್ಲಿ ಕಳೆದ ಹಲವಾರು ದಿನಗಳಿಂದ ಹಂದಿಗಳು ಕಾಯಿಲೆಯಿಂದಾಗಿ ಸಾವಿಗೀಡಾಗುತ್ತಿರುವದರಿಂದಾಗಿ ಪುರಸಭೆಯ ಎಲ್ಲ ವಾರ್ಡ್ಗಳಲ್ಲಿರುವ ಜನರಿಗೆ ಅವುಗಳ ವಾಸನೆಯಿಂದ ಇರಲು ಸಾಧ್ಯವಾಗುತ್ತಿಲ್ಲ. ಹಂದಿಗಳ ಸಾವಿನಿಂದ ಮಕ್ಕಳು ಸೇರಿದಂತೆ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿರುವದು ಜನರಲ್ಲಿ ಆತಂಕ ಮನೆ ಮಾಡಿದೆ. ಹಂದಿಗಳಿಗೆ ಮಾರಣಾಂತಿಕ ಕಾಯಿಲೆ ಬಂದಿರುವದರಿಂದ ಹಂದಿಗಳ ಮಾಲೀಕರು ಅವುಗಳಿಗೆ ಔಷಧೋಪಚಾರ ಮಾಡುವ ಕಡೆಗೆ ಗಮನ ಹರಿಸಬೇಕು. ದಿನಕ್ಕೆ ಸುಮಾರು ೧೦-೧೫ ಹಂದಿಗಳು ಸಾವಿಗೀಡಾಗುತ್ತಿವೆ. ಹಂದಿಗಳು ಸಾಯುತ್ತಿರುವದರಿಂದ ಅವುಗಳು ಕೊಳೆತು ನಾರುತ್ತಿವೆ. ಇದರಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗುತ್ತಿವೆ. ಇದರ ಪರಿಣಾಮ ಮಕ್ಕಳ ಮೇಲೆ ಪರಿಣಾಮ ಬೀರಿ ಮಕ್ಕಳು ಜ್ವರ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಾಧೆ ಪಡುತ್ತಿದ್ದಾರೆ. ಸಾಂಕ್ರಾಮಿಕ ರೋಗಗಳಾದ ಡೆಂಗ್ಯೂ, ಮಲೇರಿಯಾದಂತಹ ಮಾರಣಾಂತಿಕ ಕಾಯಿಲೆಗಳು ಬರುವ ಸಾಧ್ಯತೆಯಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹಂದಿಗಳ ಸಾವಿಗೆ ಕಡಿವಾಣ ಹಾಕುವ ಅಗತ್ಯವಿದೆ. ಹಂದಿಗಳ ಸಾವಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಈಚೆಗೆ ಮಕ್ಕಳ ಆಸ್ಪತ್ರೆಯಲ್ಲಿ ದಿನವೂ ಅನೇಕ ಮಕ್ಕಳು ಚಿಕಿತ್ಸೆ ಬರುವುದು ಕಂಡುಬರುತ್ತಿದೆ. ಪಶು ಇಲಾಖೆಯ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ…

Read More

ಕಲಕೇರಿ ಹೋಬಳಿಗಾಗಿ ಪ್ರತಿಭಟನೆ ಅಂಗಡಿ ಮುಂಗಟ್ಟುಗಳು ಮುಚ್ಚಿ ಬಂದ್‌ಗೆ ಬೆಂಬಲ ಸೂಚಿಸಿದ ವರ್ತಕರು ಕಲಕೇರಿ: ೨೦೦೩ ರಲ್ಲಿ ಕಲಕೇರಿ ತಾಲೂಕಿಗಾಗಿ ಸುಮಾರು ೧೨೦ ದಿನಗಳ ಕಾಲ ಧರಣಿ ಹೋರಾಟ ಮಾಡಿ ಆಗಿನ ಶಾಸಕರು, ಅಧಿಕಾರಿಗಳ ಗಮನಕ್ಕೆ ತಂದರೂ, ಪ್ರಯೋಜನವಾಗಿಲ್ಲ, ೨೦೨೦ರಲ್ಲಿ ಕಲಕೇರಿಯಲ್ಲಿ ಹೋರಾಟ ಮಾಡಿ ಕಲಕೇರಿಯಿಂದ ತಾಳಿಕೋಟಿವರೆಗೆ ಸಾವಿರಾರು ಜನರೊಂದಿಗೆ ತಾಲೂಕಾ ದಂಡಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಲಾಗಿತ್ತು, ಕರೋನಾ ನಿಮಿತ್ಯ ಅನಿವಾರ್ಯವಾಗಿ ಹೊರಾಟಕ್ಕೆ ತಡೆ ಹಿಡಿಯಲಾಗಿತ್ತು, ಈಗ ಮತ್ತೆ ಹೋರಾಟ ಚುರುಕುಗೊಂಡಿದ್ದು, ಕಲಕೇರಿ ಹೋಬಳಿ ಆಗುವವರೆಗೂ ನಾವೆಲ್ಲರೂ ಸುಮ್ಮನಿರಲ್ಲ ಹೋರಾಟ ಮುಂದುವರೆಸುತ್ತೇವೆ ಎಂದು ಮಾಜಿ ತಾ.ಪಂ ಸದಸ್ಯ ಲಕ್ಕಪ್ಪ ಬಡಿಗೇರ ಹೇಳಿದರು.ಪ್ರಗತಿಪರ ಹೋರಾಟಗಾರರ ಒಕ್ಕೂಟ ರಚನಾ ಸಮಿತಿ ವತಿಯಿಂದ ಕಲಕೇರಿ ಹೋಬಳಿ ಮಾಡಬೇಕು ಎಂದು ಸ್ಥಳೀಯ ಡಾ|| ಬಾಬಾ ಸಾಹೇಬ ಅಂಬೇಡ್ಕರ ವೃತ್ತದಿಂದ ಮುಖ್ಯ ಬಜಾರದವರೆಗೆ ಹಲಿಗೆಯೊಂದಿಗೆ ವಿವಿಧ ಘೋಷಣೆ ಕೂಗುತ್ತಾ ಮೆರವಣಿಗೆ ಮೂಲಕ ಆಗಮಿಸಿ ಟಾಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರನ್ನು ಉದ್ದೇಶಿಸಿ ಅವರು…

Read More

ದೇವರಹಿಪ್ಪರಗಿ: ಪುರಾಣ, ಪ್ರವಚನ, ಧರ್ಮಸಭೆಗಳಿಗೆ ಗ್ರಾಮಗಳಲ್ಲಿನ ಮಠಮಾನ್ಯಗಳು ಉತ್ತಮ ವೇದಿಕೆಯಾಗಿವೆ ಎಂದು ದೇವರಹಿಪ್ಪರಗಿ ಗದ್ದುಗೆಮಠದ ಮಡಿವಾಳೇಶ್ವರ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ನಿವಾಳಖೇಡ ಗ್ರಾಮದಲ್ಲಿ ಶುಕ್ರವಾರ ನೂತನ ಶ್ರೀ ಸಿದ್ದಕೃಪಾ ಮಲ್ಲಿಕಾರ್ಜುನ ಮಹಾ ಮಠದ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು. ಗ್ರಾಮಗಳಲ್ಲಿ ಹಿಂದಿನಿಂದಲೂ ಮಠಗಳು ಆಧ್ಯಾತ್ಮಿಕ ಚಿಂತನೆಗಳ ಕೇಂದ್ರಗಳಾಗಿವೆ. ಇಂದು ಇಲ್ಲಿ ಆಧ್ಯಾತ್ಮಿಕ ತಾಣಕ್ಕೆ ಚಾಲನೆ ನೀಡುತ್ತಿರುವುದು ಅತ್ಯಂತ ಸಮಯೋಚಿತ ಎಂದರು.ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ, ಧಾರ್ಮಿಕ ಚಿಂತನೆಗಳ ಮೂಲಕದ ನಮ್ಮತನ ಉಳಿಸಿಕೊಳ್ಳಬೇಕು. ಸಂತರು, ಶರಣರು, ಮಹಾಂತರ ಉದಾತ್ತ ಯೋಚನೆಗಳ ಮೂಲಕ ನಮ್ಮ ಜೀವನ ಪಾವನಗೊಳಿಸಿಕೊಳ್ಳಬೇಕು ಎಂದರು.ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ. ಪ್ರಭುಗೌಡ ಲಿಂಗದಳ್ಳಿ ಮಾತನಾಡಿ, ಆಧ್ಯಾತ್ಮಿಕ ಬದುಕು ಉತ್ತಮ ಜೀವನ ರೂಪಿಸಿಕೊಡಲು ಸಹಕಾರಿಯಾಗಿದೆ. ನಾವೆಲ್ಲ ಶ್ರೀಗಳ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಜೀವನ ಪಾವನಗೊಳಿಸಿಕೊಳ್ಳೊಣ ಎಂದರು.ದೇವರಹಿಪ್ಪರಗಿ ಪ್ರಗತಿ ಪಟ್ಟಣ ಸಹಕಾರಿ ಬ್ಯಾಂಕಿನ ಅಧ್ಯಕ್ಷ ವೈ.ಬಿ.ಪಾಟೀಲ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಶೆಡಶ್ಯಾಳ ಮಾತನಾಡಿದರು.ಬೆಳ್ಳೆರಿ ಶಿವಾನಂದಮಠದ ಬಸವಾನಂದ ಸ್ವಾಮೀಜಿ…

Read More

ಸಿಂದಗಿ: ಡಿ.೧೩ರಂದು ಬೆಳಿಗ್ಗೆ ೧೦ಗಂಟೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದ ಅಧಿವೇಶನದ ಸಂದರ್ಭದಲ್ಲಿ ಗಾಂಧಿ ಭವನದಿಂದ ರ‍್ಯಾಲಿ ಮೂಲಕ ಬೆಳಗಾವಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪಂಚಮಸಾಲಿ, ಗೌಡ, ಮಲೆಗೌಡ, ದೀಕ್ಷ ಲಿಂಗಾಯತರಿಗೆ ೨ಎ ಮೀಸಲಾತಿ ಅನುಷ್ಠಾನ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಒಬಿಸಿ ಮೀಸಲಾತಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ, ರಾಜ್ಯ ಸರ್ಕಾರ ತೊರಿಸುತ್ತಿರುವ ನಿರ್ಲಕ್ಷಕ್ಕೆ ಅಸಮಾಧಾನಗೊಂಡು ಕೂಡಲಸಂಗಮ ಗುರುಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದ್ದು, ಕಾರಣ ಸಿಂದಗಿ ತಾಲೂಕಿನ ಪಂಚಮಸಾಲಿ ಸಮಾಜದ ಬಂಧುಗಳು ಸ್ವಯಂ ಪ್ರೇರಿತರಾಗಿ ಮೀಸಲಾತಿ ಹೋರಾಟದಲ್ಲಿ ಭಾಗವಹಿಸುವಂತೆ ಸಮಾಜದ ಅಧ್ಯಕ್ಷ ಎಂ.ಎಂ.ಹಂಗರಗಿ, ಕಾರ್ಯದರ್ಶಿ ಆನಂದ ಶಾಬಾದಿ ಹಾಗೂ ಮೀಸಲಾತಿ ಹೋರಾಟ ಸಮಿತಿ ಗೌರವಾಧ್ಯಕ್ಷ ಚಂದ್ರಶೇಖರ ನಾಗರಬೆಟ್ಟ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮುದ್ದೇಬಿಹಾಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ನಡೆದ ಪ್ರಕರಣ *- ಚೇತನ ಶಿವಶಿಂಪಿ* ಮುದ್ದೇಬಿಹಾಳ: “ದೇವರು ವರ ಕೊಟ್ರೂ ಪೂಜಾರಿ ಕೊಡೊಲ್ಲಾಗ್ಯಾನ ನೋಡ್ರಿ. ನಮಗ ಕೊಡಬೇಕಾದ ಹಣ ಕೊಡಲಾರದ ತಮ್ಮ ಕಡೆನೇ ಇಟಗೊಂಡ ಜೀವಾ ತಿನಾಕತ್ತಾರ ನೋಡ್ರಿ. ಶಿಕ್ಷಕರನ್ನು ಪ್ರೋತ್ಸಾಹಿಸಾಕ ಶಿಕ್ಷಣ ಇಲಾಖೆ ರಗಡ ಸವಲತ್ತುಗಳನ್ನು ಕೊಡತ್ತ, ಆದ್ರ ಈ ಅಧಿಕಾರಿಗಳು ಮಾತ್ರ ಶಿಕ್ಷಕರಿಗೆ ಮುಟ್ಟಬೇಕಾದ್ದನ್ನ ಮುಟ್ಟಸಲಾರದ ಗಪ್ಪನ ಕುಂತಬಿಡತಾರ ನೋಡ್ರಿ..” ಅಂತಾ ಇಲ್ಲಿನ ಕೆಲವು ನೊಂದ ಶಿಕ್ಷಕರು “ಉದಯರಶ್ಮಿ” ಎದುರು ತೋಡಿಕೊಂಡ ಅಳಲಿದು.ಅಷ್ಟಕ್ಕೂ ಏನಿದು ಪ್ರಕರಣ ಅಂತೀರಾ ಈ ಸ್ಟೋರಿ ಪೂರ್ತಿಯಾಗಿ ಓದಿ..ಶಿಕ್ಷಣ ಇಲಾಖೆ ಪ್ರತೀ ವರ್ಷ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆ ಎಂಬ ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ದೆಗಳನ್ನು ನಡೆಸುತ್ತೆ. ಈ ಸ್ಪರ್ದೆಗೆ ತಾಲೂಕು ಮಟ್ಟದಲ್ಲಿ ೫೭,೭೦೦ ರೂಪಾಯಿ ಗಳ ಅನುದಾನ ನೀಡಿ ಸ್ಪರ್ದೆಯಲ್ಲಿ ವಿಜೇತ ಪ್ರಥಮ, ದ್ವಿತೀಯ ಮತ್ತು ತೃತೀಯ ಶಿಕ್ಷಕರಿಗೆ ಪ್ರಶಸ್ತಿ ಜೊತೆಗೆ ನಗದು ಬಹುಮಾನಗಳನ್ನು ನೀಡಲಾಗುತ್ತದೆ.ಶಿಕ್ಷಕರ ಕಲ್ಯಾಣ ನಿಧಿಯಿಂದ ಪ್ರತೀ…

Read More

ವಿಜಯಪುರ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ ೩೭೦ ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರಿಂಕೋರ್ಟ್ ಪಂಚ ಸದಸ್ಯರ ಸಾಂವಿಧಾನಿಕ ಪೀಠ ಎತ್ತಿ ಹಿಡಿದಿರುವುದು ಸತ್ಯ ಹಾಗೂ ಜನಹಿತಕ್ಕೆ ಸಂದ ಜಯವಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಭಾರತೀಯ ನ್ಯಾಯದಾನ ವ್ಯವಸ್ಥೆ ಅತ್ಯಂತ ಶ್ರೇಷ್ಠ, ಸುಪ್ರೀಂಕೋರ್ಟ್ ತೀರ್ಪಿನಿಂದ ಪ್ರತಿಯೊಬ್ಬ ಭಾರತೀಯರಿಗೂ ಅತ್ಯಂತ ಸಂತೋಷವಾಗಿದೆ. ಕಣಿವೆ ರಾಜ್ಯ ಕಾಶ್ಮೀರ ಪ್ರಗತಿಯಾಗಲು ಈ ವಿಧಿ ರದ್ದಾಗುವುದು ಅವಶ್ಯಕವಾಗಿತ್ತು, ಹೀಗಾಗಿ ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಸರ್ಕಾರ ಈ ವಿಧಿ ರದ್ದುಗೊಳಿಸುವ ಮೂಲಕ ದಿಟ್ಟ ಹೆಜ್ಜೆ ಇರಿಸಿತ್ತು, ಆ ಮೂಲಕ ಕಾಶ್ಮೀರ ಪ್ರಗತಿಗೆ ಹೊಸ ಶಕೆ ಆರಂಭವಾದಂತಾಯಿತು, ಆದರೆ ಕೆಲವರು ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಲೇರಿದ್ದರು, ಈ ಬಗ್ಗೆ ವಾದ-ಪ್ರತಿವಾದ ಆಲಿಸಿದ ಸುಪ್ರೀಂಕೋಟ್ ಪಂಚ ಸದಸ್ಯರ ನ್ಯಾಯಪೀಠವು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ ೩೭೦ ನೇ ವಿಧಿ ರದ್ದುಗೊಳಿಸಿದ ಕೇಂದ್ರ…

Read More

ವಿಜಯಪುರ: ತರಬೇತಿಗಳು ವೃತ್ತಿ ನೈಪುಣ್ಯತೆಯನ್ನು ಹೆಚ್ಚಿಸುತ್ತವೆ ಎಂದು ಬಿ ಎಲ್ ಡಿ ಇ ಡಿಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ.ನಗರದ ಬಿ ಎಲ್ ಡಿಇ ವೈದ್ಯಕೀಯ ಕಾಲೇಜಿನ ಸಭಾಂಗಣದಲ್ಲಿ ರಾಜ್ಯ ಮಟ್ಟದ 38ನೇ ರೇಡಿಯೋಲಜಿ- ಐ ಆರ್ ಐ ಏ ಮೂರು ದಿನಗಳ ಸಮ್ಮೇಳನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಕೊನೆಯ ದಿನವಾದ ರವಿವಾರ ಮತ್ತು ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಇಂಥ ಸಮ್ಮೇಳನದಲ್ಲಿ ರೇಡಿಯೋಲಜಿ ಟೆಕ್ನಿಷಿಯನ್(ತಂತ್ರಜ್ಞರು)ಗಳಿಗಾಗಿ ಆಯೋಜಿಸಲಾದ ವಿಶೇಷ ವೈಜ್ಞಾನಿಕ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಡಿಜಿಟಲ್ ಲ್ಯಾಂಪ್ ಹಚ್ಚುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ರೇಡಿಯೋಗ್ರಾಫರ್ ಗಳನ್ನು ಟೆಕ್ನೋಗ್ರಾಫರ್ ಎಂದು ಶ್ಲಾಘಿಸಿದ ಅವರು, ಇಂಥ ಕೌಶಲ್ಯಾಭಿವೃದ್ಧಿ ತರಬೇತಿಗಳಲ್ಲಿ ಪಾಲ್ಗೊಳ್ಳುವುದರಿಂದ ವಿಶ್ವದಲ್ಲಿ ಬದಲಾಗುತ್ತಿರುವ ಸಂಶೋಧನೆ ವಿಧಾನಗಳು ಮತ್ತು ತಂತ್ರಜ್ಞಾನದ ಬಗ್ಗೆ ಅಧ್ಯಯನ ನಡೆಸಲು ಮತ್ತು ಹೊಸ ಹೊಸ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಸೇವಾ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಅನುಕೂಲವಾಗಲಿದೆ. ಮುಂದೆಯೂ ವಿವಿಯಿಂದ ಇಂಥ ತರಬೇತಿ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ಮತ್ತು ಪ್ರೋತ್ಸಾಹ ನೀಡುವುದಾಗಿ ಅವರು…

Read More

ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತು ಜಾಗೃತಿ ಮೂಡಿಸಲು ಹಾಗೂ ಶತಮಾನದ ಸಂತ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಗೌರವಾರ್ಥ ಡಿಸೆಂಬರ್ 24 ರಂದು ನಗರದಲ್ಲಿ ನಡೆಯಲಿರುವ ವೃಕ್ಷತ್ಥಾನ ಹೆರಿಟೇಜ್ ರನ್- 2023 ಗೆ ನೋಂದಣಿ ಮಾಡಲು ಡಿಸೆಂಬರ್ 13 ಕೊನೆಯ ದಿನವಾಗಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ನೋಂದಣಿ ಸಮಿತಿಯ ಡಾ. ಮಲ್ಲಿಕಾರ್ಜುನ ಯಲಗೊಂಡ ಮತ್ತು ವೀರೇಂದ್ರ ಗುಚ್ಚೆಟ್ಟಿ, ಈ ಓಟದಲ್ಲಿ ಪಾಲ್ಗೋಳ್ಳಲು ಈಗಾಗಲೇ ದೇಶದ ನಾನಾ ಭಾಗಗಳಿಂದ ಹಾಗೂ ವಿದೇಶಗಳಿಂದಲೂ ಹಲವಾರು ಜನರು ತಮ್ಮ ಹೆಸರು ನೋಂದಾಯಿಸಿದ್ದಾರೆ. ಮಕ್ಕಳಿಂದ ಹಿಡಿದು, ಹಿರಿಯರು, ಹಿರಿಯ ನಾಗರಿಕರೂ ಕೂಡ ತಮ್ಮ ಹೆಸರುಗಳನ್ನು ನೋಂದಾಯಿಸಿ ಇತರರಿಗೆ ಮಾದರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.ಈಗಾಗಲೇ ವೃಕ್ಷತ್ಥಾನ ಹೆರಿಟೇಜ್ ರನ್- 2023 ಕೋರ್ ಕಮಿಟಿಯ ಪದಾಧಿಕಾರಿಗಳು ಮತ್ತು ನೋಂದಣಿ ಸಮಿತಿಯ ಉಸ್ತುವಾರಿಗಳು ನಾನಾ ಶಾಲೆ ಮತ್ತು ಕಾಲೇಜುಗಳು ಹಾಗೂ ಸಂಘ- ಸಂಸ್ಥೆಗಳನ್ನು ಭೇಟಿ ಮಾಡಿದ್ದು, ಎಲ್ಲರೂ ಉತ್ಸಾಹದಿಂದ ಈ ಓಟದಲ್ಲಿ ಪಾಲ್ಗೋಳ್ಳಲು ನಿರ್ಧರಿಸಿದ್ದಾರೆ. ಅಲ್ಲದೇ, ತಮ್ಮ ಹೆಸರು…

Read More

ವಿಜಯಪುರ: ಜಿಲ್ಲೆಯಲ್ಲಿ ಹಳ್ಳ ತುಂಬುವ ಯೋಜನೆಗಳ ಜೊತೆಯಲ್ಲಿಯೇ ಹಳ್ಳಗಳ ಪಕ್ಕದಲ್ಲಿ ನಾಲ್ಕೈದು ಕೋಟಿ ಗಿಡ ನೆಡುವ ಯೋಜನೆ ರೂಪಿಸಲಾಗಿದೆ ಎಂದು ಬೃಹತ್ ಮತ್ತು‌ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಬಬಲೇಶ್ವರ ಪಟ್ಟಣದ ಹೊರವಲಯದಲ್ಲಿ ಇರಪಾನಗೋಳ ತೋಟದ ವಸ್ತಿ ಬಳಿ ಬಬಲೇಶ್ವರ-ಯಕ್ಕುಂಡಿ ಹಳ್ಳಕ್ಕೆ ಅಂದಾಜು ರೂ. 97.50 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬ್ರಿಡ್ಜ್ ಕಂ ಬ್ಯಾರೇಜ್ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.ವಿಜಯಪುರ ಜಿಲ್ಲೆಯಲ್ಲಿ ಸುಮಾರು 160 ಹಳ್ಳಗಳಿಗೆ ಪ್ರತಿ 100 ಮೀ. ಗೊಂದರಂತೆ ಚೆಕ್ ಡ್ಯಾಂ‌ ನಿರ್ಮಿಸಿ ನೀರು ತುಂಬಿಸಲು ಯೋಜನೆ ರೂಪಿಸಲಾಗಿದೆ. ಈ ಹಳ್ಳಗಳ ಎರಡೂ ಬದಿಗಳಲ್ಲಿ ಸುಮಾರು ನಾಲ್ಕೈದು ಕೋಟಿ ಗಿಡ ನೆಡಲಾಗುವುದು. ಇದರಿಂದ ಅಂತರ್ಜಲ ವೃದ್ಧಿ ಮಾತ್ರವಲ್ಲ, ಜಿಲ್ಲೆಯಲ್ಲಿ ಅರಣ್ಯ ಪ್ರದೇಶವೂ ಹೆಚ್ಚಾಗಲಿದೆ ಎಂದು ಅವರು ತಿಳಿಸಿದರು.ಈ ಕಾಮಗಾರಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಈ ಭಾಗದ ರೈತರ ಬೇಡಿಕೆ ಈಡೇರಿಸಲಾಗುತ್ತಿದೆ.…

Read More