Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,- ವಿವೇಕಾನಂದ ಎಚ್ ಕೆ, ಬೆಂಗಳೂರು ಇಷ್ಟೊಂದು ದುರ್ಬಲ ವ್ಯವಸ್ಥೆಯಲ್ಲಿ ನಾವಿದ್ದೇವೆಯೇ.. ಒಂದು ಪ್ರಖ್ಯಾತ, ಬೃಹತ್ ಶಿಕ್ಷಣ ಸಂಸ್ಥೆಗಳನ್ನು ನಡೆಸುವ, ರಾಜ್ಯದ ಪ್ರತಿಷ್ಠಿತ ಮಠ ಮತ್ತು ಅದರ ಮುಖ್ಯಸ್ಥರಾಗಿದ್ದ ರಾಜ್ಯದ ಅತ್ಯಂತ ಮಹತ್ವದ ಪ್ರಭಾವಿ ವ್ಯಕ್ತಿಯೂ ಆಗಿದ್ದ, ಪ್ರಗತಿಪರ ಚಿಂತನೆಯ ಕ್ರಾಂತಿಕಾರಿ ಮಠಾಧೀಶರು ಆಗಿದ್ದ ಗೌರವಾನ್ವಿತ ಪೂಜ್ಯ ಸ್ವಾಮೀಜಿಗಳೆಂಬ ವ್ಯಕ್ತಿಯನ್ನು ಒಂದು ದಿನ ದಿಢೀರನೆ ರಾಜ್ಯದ ಪೋಲೀಸರು ಬಂಧಿಸುತ್ತಾರೆ. ಅದಕ್ಕೆ ತನಿಖಾಧಿಕಾರಿಗಳು ನೀಡುವ ಕಾರಣ ಅವರ ಮೇಲೆ ಹೆಣ್ಣು ಮಕ್ಕಳಿಬ್ಬರು ನೀಡಿರುವ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರದ ದೂರು. ಇದನ್ನು ಕೇಳಿ ರಾಜ್ಯದ ಜನ ದಿಗ್ಬ್ರಮೆಗೆ ಒಳಗಾಗುತ್ತಾರೆ.. ನಂತರ ಉನ್ನತ ಅಧಿಕಾರಿಗಳಿಂದ ತನಿಖೆ ನಡೆಯುತ್ತದೆ. ಎಲ್ಲಾ ಸಾಕ್ಷಿ, ದಾಖಲೆ, ಹೇಳಿಕೆಗಳನ್ನು ಪರಿಶೀಲಿಸಿ ರಾಜ್ಯದ ಪೋಲೀಸರು ಎರಡು ಪೋಕ್ಸೋ ಪ್ರಕರಣ ದಾಖಲಿಸಿ ವಿವರವಾದ ಆರೋಪ ಪಟ್ಟಿ ಸಲ್ಲಿಸುತ್ತಾರೆ. ಅದರಲ್ಲಿ ಈ ಪ್ರಸಿದ್ಧ ಮತ್ತು ಪ್ರಭಾವಿ ವ್ಯಕ್ತಿಯ ಮೇಲೆ ಅತ್ಯಾಚಾರವೂ ಸೇರಿ ಸಾಕಷ್ಟು ಅಸಹ್ಯ ರೀತಿಯ ವರ್ತನೆಯನ್ನು ಆರೋಪಿಸುತ್ತಾರೆ.. ನೆನಪಿಡಿ…
ತಾಳಿಕೋಟಿ ತಾಲೂಕಿನ ಆಸ್ಕಿ, ಬೆಕಿನಾಳ, ಬೂದಿಹಾಳ ಹಾಗೂ ಹುಣಶ್ಯಾಳ ಕೆರೆಗಳು | ಜಿಲ್ಲಾಧಿಕಾರಿಗೆ ಮನವಿ ವಿಜಯಪುರ: ಜಿಲ್ಲೆಯ ತಾಳಿಕೋಟಿ ತಾಲೂಕಿನ ಆಸ್ಕಿ, ಬೆಕಿನಾಳ, ಬೂದಿಹಾಳ ಹಾಗೂ ಹುಣಶ್ಯಾಳ ಕೆರೆಗೆ ನೀರು ತುಂಬಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿ ಟಿ.ಬೂಬಾಲನ್ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಮಾತನಾಡಿ, ಈ ವರ್ಷ ಒಟ್ಟಾರೆ ಮಳೆ ಬಾರದಿರುವುದರಿಂದ ಬರಲಿರುವ ಬೇಸಿಗೆ ಸಮಯದಲ್ಲಿ ರೈತರಿಗೆ, ಜನಜಾನುವಾರುಗಳಿಗೆ ಕುಡಿಯಲು ನೀರು ಇಲ್ಲದೇ ಸಮಸ್ಯೆ ಇಡಾಗಬೇಕಾಗುತ್ತದೆ, ಕೂಡಲೆ ಅಧಿಕಾರಿಗಳ ಜೊತೆ ಚರ್ಚಿಸಿ ಈ ೪ ಕೆರೆಗಳನ್ನು ತುಂಬಬೇಕು ಎಂದು ಮನವಿ ಸಲ್ಲಿಸಿ ಆಗ್ರಹಿಸಿದರು.ಮುಳವಾಡ ಏತನೀರಾವರಿ, ಬೂದಿಹಾಳ-ಪೀರಾಪುರ, ಏತನೀರಾವರಿ ಯೋಜನೆಗಳು ರೈತರಿಗೆ ಅನುಕೂಲವಾಗುವ ಯೋಚನೆಯನ್ನಿಟ್ಟುಕೊಂಡು ಸರಕಾರದ ಕೋಟ್ಯಾಂತರ ರೂಪಾಯಿ ಹಣ ವ್ಯಯ ಮಾಡಿ ಪ್ರಾರಂಭ ಮಾಡಿರುವ ಯೋಜನೆಗಳು ಇನ್ನು ಮುಗಿದಿಲ್ಲ, ಕಳಪೆ ಮಟ್ಟದ ಕಾಮಗಾರಿ ನಡೆಯುತ್ತಿದ್ದರು ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತ್ತಿದ್ದಾರೆ, ಆದ್ದರಿಂದ ತಾವುಗಳು ಕುದ್ದಾಗಿ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಸರಕಾರಕ್ಕೆ…
ವಿಜಯಪುರ ಜಿಲ್ಲೆಯಲ್ಲಿ ೧೩ ಪ್ರಕರಣಗಳ ದಾಖಲು | ಪ್ರಕರಣಗಳಲ್ಲಿ ಭಾಗಿಯಾಗಿರುವ ಬಾಂಡ್ ರೈಟರ್ಸ್ ಲೈಸನ್ಸ್ ರದ್ದಿಗೆ ಕ್ರಮ ಸಚಿವ ಎಂ.ಬಿ.ಪಾಟೀಲ ಖಡಕ್ ಸೂಚನೆ ವಿಜಯಪುರ: ನಗರ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಠಿಸಿ ಆಸ್ತಿ ನೋಂದಣಿ ಮಾಡುವ ಪ್ರಕರಣಗಳು ಕಂಡು ಬಂದಿದ್ದು ಇಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದ್ದಾರೆ.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ ಸಭೆ ನಡೆಸಿ ಮಾತನಾಡಿದ ಅವರು, ಕೆಲವರು ಆಧಾರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಮೂಲಕ ಭೂ ಮಾಲೀಕರ ಹೆಸರಿನಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡುತ್ತಿರುವ ೧೩ ಪ್ರಕರಣಗಳನ್ನು ಈಗಾಗಲೇ ದಾಖಲಿಸಲಾಗಿದೆ. ಖೊಟ್ಟಿ ದಾಖಲೆ ಸೃಷ್ಟಿ ಮಾಡಿ, ಆಸ್ತಿಗಳನ್ನು ನೋಂದಣಿ ಮಾಡುವ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಾಂಡ್ ರೈಟರ್ಸ್ ಗುರುತಿಸಿ, ಅವರ ಬಾಂಡ್ ರೈಟರ್ಸ್…
ಸಿಂದಗಿ: ವಕೀಲರಿಗೆ ರಕ್ಷಣೆಯೇ ಇಲ್ಲದಂತಾಗಿದೆ. ಕಳೆದ ವಾರ ಚಿಕ್ಕಮಗಳೂರು ಪೊಲೀಸರು ವಕೀಲರ ಮೇಲೆ ಹಲ್ಲೆ ಮಾಡಿದ್ದರು. ಇದೀಗ ಕಲಬುರಗಿಯಲ್ಲಿ ವಕೀಲರೊಬ್ಬರ ಕೊಲೆಯಾಗಿದೆ. ಸರ್ಕಾರ ವಕೀಲರ ರಕ್ಷಣೆಗೆ ನಿಲ್ಲಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ಎಸ್.ಬಿ. ದೊಡಮನಿ ಒತ್ತಾಯಿಸಿದರು.ತಾಲೂಕು ಆಡಳಿತ ಸೌಧಕ್ಕೆ ಹೋಗಿ ಮನವಿ ಸಲ್ಲಿಸುವ ಮೊದಲು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಹತ್ಯೆಗೈದವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು. ಬಳಿಕ ತಾಲೂಕು ಆಡಳಿತ ಸೌಧದವರೆಗೆ ಬೈಕ್ ರ್ಯಾಲಿ ಮೂಲಕ ಪ್ರತಿಭಟನೆ ನಡೆಸಿದರು.ಈ ವೇಳೆ ವಕೀಲರಾದ ಅರವಿಂದ ಕನ್ನೂರ, ಆರ್.ಡಿ.ಅಮ್ಯಾಗೋಳ, ಜಿ.ಜಿ.ಮಾರ್ಸನಳ್ಳಿ, ಎಸ್.ಎ. ಗಾಯಕವಾಡ, ಆರ್. ಎಂ.ಶಿರಬೂರ, ಎಂ.ಸಿ. ಯಾತನೂರ, ಎಸ್.ಬಿ. ಖಾನಾಪೂರ, ಎಸ್.ಎಮ್.ಕಾಚೂರ, ಶಶಿಧರ ಗಾಯಕವಾಡ ಸೇರಿದಂತೆ ತಾಲೂಕಿನ ಎಲ್ಲ ವಕೀಲರು ಇದ್ದರು.
ಸಿಂದಗಿ: ಮಕ್ಕಳಿಗಾಗಿ ಮಕ್ಕಳ ಹಕ್ಕುಗಳಿವೆ. ಅವುಗಳನ್ನು ಅವರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮಕ್ಕಳ ಹಿರಿಯ ಸಾಹಿತಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹ.ಮ. ಪೂಜಾರ ಹೇಳಿದರು.ಪಟ್ಟಣದ ಭುವನೇಶ್ವರಿ ವಿದ್ಯಾವರ್ಧಕ ಸಂಸ್ಥೆಯ ಕಾವ್ಯಾ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕಾವ್ಯಾ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ ೫೦ರ ನಿಮಿತ್ಯ ಹಮ್ಮಿಕೊಂಡ ಮಕ್ಕಳ ಕಲರವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಹಳಷ್ಟು ಮಕ್ಕಳಿಗೆ ಅವರ ಹಕ್ಕುಗಳ ಬಗ್ಗೆ ಜಾಗೃತಿ ಇಲ್ಲದಿರುವುದು ನೋವಿನ ಸಂಗತಿ. ಹಾಗಾಗಿ ಮಕ್ಕಳು ಮೊದಲು ನಿಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಮಕ್ಕಳಿಗಾಗಿಯೇ ಸರಕಾರ ಭಾಗವಹಿಸುವ ಹಕ್ಕು, ಸಂರಕ್ಷಣೆ ಮಾಡುವ ಹಕ್ಕು, ಭಾಗವಹಿಸುವ ಹಕ್ಕು ಸೇರಿದಂತೆ ಅನೇಕ ಹಕ್ಕುಗಳನ್ನು ಜಾರಿಗೆ ತಂದಿದ್ದಾರೆ. ಅದನ್ನು ನೀವೆಲ್ಲಾ ತಿಳಿದುಕೊಳ್ಳಬೇಕು ಎಂದು ಸಲಹೆ ನೀಡಿದರು.ಈ ವೇಳೆ ಸಂಗಮ ಸಂಸ್ಥೆಯ ಸಹ ನಿರ್ದೇಶಕಿ ಸಿಂತಿಯಾ, ಜಯಶ್ರೀ ಕುಲಕರ್ಣಿ, ಎಂ.ಎಂ. ಹಂಗರಗಿ ಮಾತನಾಡಿದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಆದೀಶೇಷ ಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು.ಇದೇ ಸಂದರ್ಭದಲ್ಲಿ ಕಸಾಪ…
ಸಿಂದಗಿ: ನಗರದ ಹೊರವಲಯದ ಆಲಮೇಲ ರಸ್ತೆಯಲ್ಲಿರುವ ಪಿ.ಇ.ಎಸ್ ಶಿಕ್ಷಣ ಸಂಸ್ಥೆಯ ಶ್ರೀಮತಿ ಪ್ರೇಮಾ ಭೀ. ಕರ್ಜಗಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯದ ಪ್ರಸಕ್ತ ಸಾಲಿನ ಬಿಎ ಪದವಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.ಅಮೃತಾ ಯಾತನೂರ ಶೇ.೯೧ ಪ್ರಥಮ ಸ್ಥಾನ, ಶಾರದಾ ಗಾಡದ ಶೇ.೯೦ ದ್ವಿತೀಯ ಸ್ಥಾನ, ಶಿಲ್ಪಾ ಮಠ ಶೇ.೮೯.೮ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಐಶ್ವರ್ಯ ಉಡಚಾಣ ಶೇ.೮೯.೧೪, ಭಾಗ್ಯಶ್ರೀ ಗುತ್ತರಗಿ ಶೇ.೮೮.೫೭ ಪಡೆದುಕೊಂಡಿದ್ದಾರೆ. ಈ ಬಾರಿ ಮಹಾವಿದ್ಯಾಲಯದ ಪಲಿತಾಂಶ ೧೦೦ಕ್ಕೆ ೧೦೦ರಷ್ಟಾಗಿದೆ.ಈ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಕಾರ್ಯದರ್ಶಿ ಬಿ.ಪಿ.ಕರ್ಜಗಿ ಹಾಗೂ ನಿರ್ದೇಶಕ ಮಂಡಳಿ ಮತ್ತು ಪ್ರಾಚಾರ್ಯ ಗುರು ಕಡಣಿ, ಮಾರ್ಗದರ್ಶಕರಾದ ಆರ್.ಬಿ.ಗೋಡಕರ, ಕೆ.ಎಚ್. ಸೋಮಾಪೂರ, ಆಯ್.ಬಿ. ಬಿರಾದಾರ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಕೇರಿ: ಸುಮಾರು ೨೦ ಸಾವಿರ ಜನಸಂಖ್ಯೆ ಹೊಂದಿ, ಒಂದು ತಾಲೂಕಿಗೆ ಬೇಕಾಗುವ ಎಲ್ಲಾ ಅರ್ಹತೆಗಳು ಇದ್ದಾಗ್ಯೂ ಕೂಡಾ ಇಲ್ಲಿಯವರೆಗೆ ಹೋಬಳಿಯೂ ಆಗದಿರುವುದು ಈ ಭಾಗದ ಜನಪ್ರತಿನಿಧಿಗಳ ಹಾಗೂ ಅಧಿಕಾರಗಳ ನಿರ್ಲಕ್ಷ್ಯವೇ ಮುಖ್ಯ ಕಾರಣ ಎಂದು ಭೋವಿ ಸಮಾಜದ ಮುಖಂಡರಾದ ಹಣಮಂತ ಹೋರಾಟ ಮಾತನಾಡಿದರು.ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಎಲ್ಲಾ ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಕಲಕೇರಿ ಹೋಬಳಿ ಹೋರಾಟದ ಸಲುವಾಗಿ ಕರೆದ ಪೂರ್ವಬಾವಿ ಸಭೆಯಲ್ಲಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಸೋಮವಾರದಂದು ಕಲಕೇರಿ ಬಂದ್ಗೆ ಕರೆ ನೀಡಿ ಮುಂದಿನ ಹೋರಾಟದ ಕುರಿತು ಚರ್ಚೆ ಮಾಡಲಾಯಿತು.ಮಾಜಿ.ತಾ.ಪಂ ಸದಸ್ಯ ಲಕ್ಕಪ್ಪ ಬಡಿಗೇರ ಮಾತನಾಡಿದರು.ಈ ವೇಳೆ ಗ್ರಾ.ಪಂ ಅಧ್ಯಕ್ಷ ರಾಜ ಅಹಮ್ಮದ ಸಿರಸಗಿ, ಸುಧಾಕರ ಅಡಕಿ, ನಬಿಲಾಲ್ ನಾಯ್ಕೋಡಿ, ಎಂ.ಪಿ.ನದಾಫ, ಕಲಕೇರಿ ಹೋಬಳಿ ಆದರೆ ಕಲಕೇರಿ ಸೇರಿದಂತೆ ಸುತ್ತಮುತ್ತಲಿನ ಸುಮಾರು ೫೦ ಹಳ್ಳಿಗಳಿಗೆ ಇಷ್ಟೇಲ್ಲಾ ಅನುಕೂಲ ಆಗುವುದು ಎಂದು ಹೇಳಿದರುಈ ಸಂದರ್ಭದಲ್ಲಿ ಮುಖಂಡರಾದ ದೇವಿಂದ್ರ ಜಂಬಗಿ, ಪರಶುರಾಮ ಕುದರಕಾರ, ಅನೀಲ ಬಡಿಗೇರ, ಪರಶುರಾಮ ಬೇಡರ, ರಮೇಶ ಹೆಂಡಿ, ಕಾಸೀಂ ನಾಯ್ಕೋಡಿ,…
ಮುದ್ದೇಬಿಹಾಳ: ಪಟ್ಟಣದ ವಿಬಿಸಿ ಹೈಸ್ಕೂಲ ಮೈದಾನದ ಸಿದ್ದೇಶ್ವರ ವೇದಿಕೆಯಲ್ಲಿ ಹಮ್ಮಿಕೊಳ್ಳಲಾದ ಬಸವ ಪುರಾಣ ಕಾರ್ಯಕ್ರಮದ ಉದ್ಘಾಟನೆ ಡಿ.೧೦ ರಂದು ಸಂಜೆ ೫:೩೦ ಕ್ಕೆ ಜರುಗಲಿದೆ.ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ದಿವ್ಯಸಾನಿಧ್ಯ ವಹಿಸಲಿದ್ದು, ಉದ್ಘಾಟಕರಾಗಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಮುಖ್ಯ ಅತಿಥಿಗಳಾಗಿ ವೀರಶೈವ ವಿದ್ಯಾ ವರ್ಧಕ ಸಂಘದ ಕಾರ್ಯಾಧ್ಯಕ್ಷ ಬಿ.ಸಿ.ಮೋಟಗಿ, ಸಮಾಜ ಸೇವಕ ಮಲ್ಲಿಕಾರ್ಜುನ ಮದರಿ, ಉದ್ದಿಮೆದಾರ ಶಂಕರಗೌಡ ಹಿರೇಗೌಡರ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಗುತ್ತಿಗೆದಾರ ಶಾಂತಗೌಡ ಪಾಟೀಲ ನಡಹಳ್ಳಿ, ಬಸವ ಪುರಾಣ ಸಮಿತಿಯ ಗೌರವಾಧ್ಯಕ್ಷ ಎಂ.ಬಿ.ನಾವದಗಿ, ಕಾರ್ಯಾಧ್ಯಕ್ಷ ಪ್ರಭುಗೌಡ ದೇಸಾಯಿ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಸಜ ಕಲ್ಬುರ್ಗಿ ಆಗಮಿಸಲಿದ್ದಾರೆ.
ಮುದ್ದೇಬಿಹಾಳ: ರಾಷ್ಟ್ರೀಯ ಸಮಾಜ ಪಕ್ಷದ ತಾಲೂಕು ಅಧ್ಯಕ್ಷರನ್ನಾಗಿ ತಾಲೂಕಿನ ಕೇಸಾಪೂರ ಗ್ರಾಮದ ನಾಗರಾಜ ಹಿರೇಕುರುಬರ ಅವರನ್ನ ಆಯ್ಕೆ ಮಾಡಲಾಗಿದೆ.ಪಕ್ಷದ ಸಂಸ್ಥಾಪಕ ಅಧ್ಯಕ್ಷ ಮಹಾದೇವ ಜಾನಕರ ಅವರ ಮೌಖಿಕ ಆದೇಶದನ್ವಯ ಈ ಆದೇಶ ಮಾಡಲಾಗಿದೆ ಎಂದು ರಾಜ್ಯಾಧ್ಯಕ್ಷ ಥರ್ಮಣ್ಣ ತೊಂಟಾಪೂರ ತಿಳಿಸಿದ್ದಾರೆ.
ಮುದ್ದೇಬಿಹಾಳ: ಕರ್ಮದಲ್ಲಿ ಸಾವು ಸಹಿತವಾಗಿದೆ. ಭಗವದ್ಗೀತೆ ಸುಳ್ಳು ರಹಿತವಾಗಿದೆ ಎಂದು ಶಿಕ್ಷಣ ಸಂಯೋಜಕಿ ವಿಜಯಲಕ್ಷ್ಮೀ ಚಿಲ್ಲಾಳಶೆಟ್ಟ ಹೇಳಿದರು.ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ನಡೆದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಯತಿವರೇಣ್ಯರಾದ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ಆಯೋಜಿಸಿರುವ ಭಗವದ್ಗೀತಾ ಅಭಿಯಾನ-ಕರ್ನಾಟಕ-೨೦೨೩ರ ತಾಲೂಕು ಮಟ್ಟದ ಸಪ್ತಾಹದ ೨ನೇ ದಿನದ ಗೀತಾರಾಧನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಜೀವನದ ಪ್ರತಿಯೊಂದು ಸುಖ-ದು:ಖಗಳಿಗೆ ಗೀತೆಯಲ್ಲಿ ಉತ್ತರವಿದೆ. ಕಲೆ ಮತ್ತು ವಿಜ್ಞಾನ ಸದಶೃವಾದ ಅಂಶಗಳು ಅಡಕವಾಗಿದೆ. ಪ್ರತಿಯೊಂದು ಗೀತೆಯಲ್ಲಿನ ಅಂಶಗಳನ್ನು ಅನ್ವಯಮಾಡಿಕೊಳ್ಳುತ್ತಾ ಸಾರ್ಥಕ್ಯ ಕಾಣಬೇಕಾಗಿದೆ. ಮಕ್ಕಳು ಚಿಕ್ಕ ವಯಸ್ಸಿನಲ್ಲಿಯೇ ಮಾಡಬಾರದನ್ನು ಮಾಡುವ, ನೋಡಬಾರದನ್ನು ನೋಡುವ ಕಾರ್ಯಕ್ಕೆ ಮುಂದಾಗಿ ಸಮಾಜಕ್ಕೆ ಕಂಟಕರಾಗುತ್ತಿದ್ದಾರೆ. ಮನೆಯ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಧರ್ಮಮಾರ್ಗದ ಸುವಾಸನೆ ಪಸರಿಸುತ್ತ ಇರಬೇಕು. ಮೊದಲು ಪಾಲಕರು ಸಂಸ್ಕಾರವನ್ನು ಹೊಂದಿ ಮಕ್ಕಳಿಗೆ ಸಂಸ್ಕಾರ ಉಣಬಡಿಸಬೇಕು. ನಾವು ಮನರಂಜನೆ ಚಟುವಟಿಕೆ, ಸಮಾಜ ವ್ಯವಸ್ಥೆ, ಪ್ರತಿಯೊಂದು ಕಡೆಯಲ್ಲಿ ಕಾಣುವ ಒಳ್ಳೆಯ ಅಂಶಗಳನ್ನು ಮಾತ್ರವೇ ತೆಗೆದುಕೊಳ್ಳಬೇಕು ಎಂದರು.ಪುರಸಭೆ ನಾಮನಿರ್ದೇಶಕ ಸದಸ್ಯರಾದ ರಾಜಶೇಖರ ಹೊಳಿ ಮಾತನಾಡಿದರು.ನಿವೃತ್ತ ಮುಖ್ಯ…
