Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಕ್ರೀಡಾಸಕ್ತರಿಗೆ ಸಾಮೂಹಿಕವಾಗಿ ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಹೇಳಿದರು.ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ನಡೆದ ರಾಜ್ಯ ಮಟ್ಟದ ಮುಕ್ತ ಟೆನಿಸ್ ಬಾಲ್ ಹಾಗೂ ಕ್ರಿಕೇಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.ಕ್ರೀಡಾಕೂಟದಲ್ಲಿ ತಂಡ ಗೆಲ್ಲಬಾರದು ಬದಲಾಗಿ ಕ್ರೀಡೆ ಗೆಲ್ಲಬೇಕು. ಉತ್ತಮ ಪ್ರದರ್ಶನ ನೀಡಿ ಮುನ್ನಡೆಯಬೇಕು ಎಂದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಮಾತನಾಡಿ ಕ್ರೀಡಾ ಸ್ಪರ್ಧಾಳುಗಳಿಗೆ ಶುಭ ಕೋರಿದರು.ಈ ಸಂದರ್ಭದಲ್ಲಿ ಡಾ.ಸಂದೀಪ ಸಜ್ಜನ, ಶಿವಾನಂದ ಮಾಸ್ತಹೋಳಿ, ಹರೀಶ ಪೂಜಾರ, ಎಂ.ಬಿ.ಬಳ್ಳಾರಿ, ಜುಬೇರ ಕೇರೂರ, ಸಿ.ಐ.ರಾಠೋಡ, ಮಹ್ಮದಯಾಸೀನ್ ಮೊಮಿನ್, ಎ.ಎ.ಸಿಂದಗಿಕರ, ಹೇಮಂತ ಕುಲಕರ್ಣಿ, ಮಹೇಶ ನಾವಲಗಿ, ಸುನೀಲ ರೂಡಗಿ, ಸುರೇಮದ್ರ ಮಾನಕರ, ಸಂತೋಷ ದೇವಲಾಪುರ, ಅಜಯ ಉತ್ನಾಳ ಇದ್ದರು.
ಬಸವನಬಾಗೇವಾಡಿ: ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯ ಸಹಯೋಗದಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ೯೭೬ ಸಿವ್ಹಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು, ೩ ಬ್ಯಾಂಕ್ ಪ್ರಕರಣಗಳು, ೮೯೮ ಟ್ರಾಫಿಕ್ ಚಲನ್ಗಳು ಸೇರಿದಂತೆ ಒಟ್ಟು ೧,೮೭೭ ಪ್ರಕರಣಗಳನ್ನು ಹಿರಿಯ ಸಿವ್ಹಿಲ್ ನ್ಯಾಯಾಧೀಶರು, ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶರು, ಕಿರಿಯ ಸಿವ್ಹಿಲ್ ನ್ಯಾಯಾಧೀಶರು, ಹೆಚ್ಚುವರಿ ಕಿರಿಯ ಸಿವ್ಹಿಲ್ ನ್ಯಾಯಾಧೀಶರು ಇತ್ಯರ್ಥಪಡಿಸಿದರು.ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಅವರು ೩೮೩ ಪ್ರಕರಣಗಳನ್ನು, ಹೆಚ್ಚುವರಿ ಸಿವ್ಹಿಲ್ ನ್ಯಾಯಾಧೀಶೆ ತಯ್ಯಾಬಾ ಸುಲ್ತಾನ ಅವರು ೩೪೭ ಪ್ರಕರಣಗಳನ್ನು, ಸಿವ್ಹಿಲ್ ನ್ಯಾಯಾಧೀಶೆ ತೇಜಸ್ವಿನಿ ಸೊಗಲದ ಅವರು ೫೧ ಪ್ರಕರಣಗಳನ್ನು, ಹೆಚ್ಚುವರಿ ಸಿವ್ಹಿಲ್ ನ್ಯಾಯಾಧೀಶೆ ಸೌಮ್ಯ ಹೂಲಿ ಅವರು ೧೯೬ ಪ್ರಕರಣಗಳನ್ನು ವಿಲೇವಾರಿ ಮಾಡಿದರು. ನಾಲ್ಕು ನ್ಯಾಯಾಲಯಗಳಲ್ಲಿ ೮೯೮ ಟ್ರಾಫಿಕ್ ಚಲನ್ಗಳು, ೩ ಬ್ಯಾಂಕ್ ಪ್ರಕರಣಗಳನ್ನು ವಿಲೇವಾರಿಯಾದವು.ಲೋಕ ಅದಾಲತದಲ್ಲಿ ಹಿರಿಯ ಹಾಗೂ ಕಿರಿಯ ನ್ಯಾಯವಾದಿಗಳು ಭಾಗವಹಿಸಿದ್ದರು.
ಇಂಡಿ: ಸರ್ಕಾರ ಬಡವರು ಹಸಿವಿನಿಂದ ಬಳಲಬಾರದು ಎಂದು ಪಡಿತರ ಅಂಗಡಿಗಳ ಮೂಲಕ ಬಡಜನರಿಗೆ ಉಚಿತವಾಗಿ ಅಕ್ಕಿ ಸೇರಿದಂತೆ ಕೆಲ ಆಹಾರ ಧಾನ್ಯಗಳನ್ನು ನೀಡುತ್ತದೆ. ಕೇಂದ್ರ ಸರ್ಕಾರ ಪ್ರತಿಯೊಬ್ಬ ಪಡಿತರದಾರನಿಗೆ ಐದು ಕಿಲೋ ಅಕ್ಕಿ ನೀಡಿದ್ರೆ, ರಾಜ್ಯ ಸರ್ಕಾರ ಐದು ಕಿಲೋ ಅಕ್ಕಿ ಬದಲಾಗಿ ಇದೀಗ ಹಣವನ್ನು ನೀಡುತ್ತಿದೆ. ಆದ್ರೆ, ಬಡ ಜನರ ಹೊಟ್ಟೆ ತುಂಬಿಸಬೇಕಿದ್ದ ಪಡಿತರ ಧಾನ್ಯಗಳು, ಬಡವರ ಹೊಟ್ಟೆ ತುಂಬಿಸದೇ ಕಾಳ ಸಂತೆಯಲ್ಲಿ ಮಾರಾಟವಾಗುತ್ತಿವೆ.ಅದಕ್ಕೆ ಸಾಕ್ಷಿ ಎಂಬಂತೆ ನಿನ್ನೆಯ ದಿನ ಅಕ್ರಮ ಅಕ್ಕಿ ಸಾಗಾಟ ವೇಳೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಶಿರಸ್ತೆದಾರ ಪರಮಾನಂದ ಹಾಗೂ ಪೊಲೀಸರು ದಾಳಿಗೈದು ಅಪಾರ ಪ್ರಮಾಣದ ಅಕ್ಕಿ ಹಾಗೂ ಖದಿಮರನ್ನು ಬಂಧಿಸಿರುವ ಘಟನೆ ಇಂಡಿ ತಾಲ್ಲೂಕಿನ ಬಸನಾಳ ರಸ್ತೆಯಲ್ಲಿ ನಡೆದಿದೆ.ಅಂಜಾದ ಪಠಾಣ, ಅವಿನಾಶ್ ಘುಲೆ ಬಂಧಿತ ಆರೋಪಿಗಳು.ಸಂಭಾಜಿ ಗಾಯಕವಾಡ, ಪವನ ತೊಟ್ಲಾ ಈ ಇಬ್ಬರು ಮಾಲೀಕರು ಪರಾರಿಯಾಗಿದ್ದಾರೆ.ಆರೋಪಿಗಳು ಲಾರಿಯಲ್ಲಿ 8,23,310 ಮೌಲ್ಯದ 28,390 ಕೆಜಿ ಅಕ್ಕಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ…
ಇಂಡಿ: ಪಟ್ಟಣದ ಹೊರವಲಯದಲ್ಲಿರುವ ಅಮರ್ ಮಂಗಲ ಕಾರ್ಯಾಲಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕಲ್ಪುರ ಸಂಸ್ಕೃತಿಕ ಕಲಾಸಂಘ ಕಲ್ಲೂರು ಸಹಯೋಗದಲ್ಲಿ ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಕನ್ನಡ ವಿಷಯದಲ್ಲಿ ಬರುವ ಜ್ಞಾನಪೀಠ ಪ್ರಶಸ್ತಿ ವಿಜೇತರಾದ ಡಾಕ್ಟರ್ ಚಂದ್ರಶೇಖರ್ ಕಂಬಾರರ ಬೋಳೇಶಂಕರ ನಾಟಕ ಹಾಗೂ ರಾಷ್ಟ್ರಕವಿ ಕುವೆಂಪು ಅವರ ಮಗನಾದ ಪೂರ್ಣಚಂದ್ರ ತೇಜಸ್ವಿಯವರು ಬರೆದಿರುವ ದೀರ್ಘ ಗದ್ಯ ಕೃಷ್ಣೆಗೌಡನ ಆನೆ ಎಂಬ ಪಠ್ಯಾಧರಿತ ನಾಟಕವನ್ನು ಪ್ರದರ್ಶನ ಇಂಡಿ ತಾಲೂಕಿನ ಪದವಿಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕ ಉಪನ್ಯಾಸಕಿಯರು ಹಾಗೂ ಶ್ರೀಧರ ಗೌಡ ಬಿರಾದಾರ, ಎಸ್.ಎಸ್.ಈರಣ್ಣಕೇರಿ, ವಿಜಯಕುಮಾರ ರಾಠೋಡ, ಮಲ್ಲಿಕಾರ್ಜುನ ಕಳ್ಳಿಮನಿ, ಎಮ್.ಕೆ.ಪಾಟಿಲ, ಉಪನ್ಯಾಸಕಿಯರದ ಶಖೀನಾ ಪಟೇಲ್,ಎಸ್.ಎಸ್ ಹೂಗಾರ , ಶ್ವೇತಾ ಮೇಡಮ್ ಎಲ್ಲರೂ ತಮಟೆ ಬಾರಿಸುವುದರ ಮೂಲಕ ಉದ್ಘಾಟಿಸಿದರು.ಪ್ರಸ್ತಾವಿಕವಾಗಿ ನಾಟಕದ ವಸ್ತು ವಿಷಯ ಕುರಿತು ಉಪನ್ಯಾಸಕ ಸದಾನಂದ ಎಸ್ ಈರನಕೇರಿ ಅವರು ಮಾತನಾಡುತ್ತಾ ಇಂದಿನ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಪಠ್ಯ ಆಧಾರಿತ ನಾಟಕಗಳು ಅತ್ಯಂತ ಪರಿಣಾಮ ಬೀರುವುದರಿಂದ ಪರೀಕ್ಷೆಯಲ್ಲಿ ಹೆಚ್ಚು…
ಇಂಡಿ: ರಾಷ್ಟ್ರ ಮಟ್ಟದ ಆದರ್ಶ ಶಿಕ್ಷಕರಾಗಿ ಗುರುತರ ಸೇವೆ ಸಲ್ಲಿಸಿ ಸಾಮಾಜಿಕ ನಾಟಕಕಾರರಾಗಿ ಜನ ಮನದಲ್ಲಿ ನೆಲೆ ನಿಂತವರು ಮೋಹನ ಚಂದ ಕಿರಣಗಿ ಅವರು ಎಂದು ಕನ್ನಡ ಸಾಹಿತ್ಯ ಪರಿಷತ್ತು ಇಂಡಿ ಘಟಕದ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಅಭಿಪ್ರಾಯ ಪಟ್ಟರು. ಅವರು ಇಂಡಿಯ ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ, ಸಾಂಸ್ಕೃತಿಕ ವೇದಿಕೆ ಅಡಿಯಲ್ಲಿ ಜರುಗಿದ ಎರಡನೇ ಉಪನ್ಯಾಸ ಮಾಲಿಕೆಯಲ್ಲಿ ಸಾಮಾಜಿಕ ನಾಟಕಕಾರ ಮೋಹನಚಂದ ಕಿರಣಗಿ ಅವರ ಬದುಕು ಬರಹ ಎಂಬ ವಿಷಯದ ಕುರಿತು ಉಪನ್ಯಾಸ ನೀಡುತ್ತಾ ಮಾತನಾಡಿದರು.ಒಬ್ಬ ಪ್ರಾಥಮಿಕ ಶಾಲಾ ಶಿಕ್ಷಕನಾಗಿ ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಪ್ರೀತಿಸಿ ತಾನು ಕೆಲಸ ಮಾಡುವ ಊರಿನ ಸ್ಥಿತಿಗತಿ ಸುಧಾರಿಸಲು ಪ್ರಯತ್ನಿಸಿದ ವ್ಯಕ್ತಿಗಳು. ಹಾಗೆಯೇ ಅಣ್ಣತಂಗಿ ಮತ್ತೂ ಆದರ್ಶ ಪ್ರೇಮ ಎಂಬಂಥ ಸಾಮಾಜಿಕ ನಾಟಕಗಳನ್ನು ರಚಿಸಿ ಅಭಿನಯಿಸಿ ಎಲ್ಲ ಹಳ್ಳಿಗಳ ಮನೆ ಮಾತಾಗಿದ್ದವರು ಕಿರಣಗಿ ಅವರು ಕಲ್ಯಾಣ ಕರ್ನಾಟಕ ಮತ್ತು ಮುಂಬೈ ಕರ್ನಾಟಕದ ಜನಮಾನಸದಲ್ಲಿ ನೆಲೆ ಯೂರಿದ್ದಾರೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಇಂಡಿ ಜಿ.…
ಶಾಸಕ ಅಶೋಕ ಮನಗೂಳಿ ಅವರಿಗೆ ಗೋಲಗೇರಿ ತಳವಾರ ಸಮಾಜದ ವತಿಯಿಂದ ಸನ್ಮಾನ ಗೋಲಗೇರಿ: ಗ್ರಾಮದಲ್ಲಿ ತಳವಾರ ಸಮಾಜದ ವತಿಯಿಂದ ಸಿಂದಗಿ ಮತಕ್ಷೇತ್ರದ ಶಾಸಕ ಅಶೋಕ ಮನಗೂಳಿ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಅಶೋಕ ಮನಗೂಳಿ ಅವರು, ತಳವಾರ ಸಮಾಜದ ಬೇಡಿಕೆಗಳನ್ನು ಈಡೇರಿಸಲು ಸದಾ ಸಿದ್ದವಿರುವುದಾಗಿ ಹೇಳಿದರು.ಇದೇ ಸಂದರ್ಭದಲ್ಲಿ ತಳವಾರ ಸಮಾಜದ ಗೋಲಗೇರಿ ಗ್ರಾಮದಲ್ಲಿ ಇರುವ ಬಹಳ ವರ್ಷದ ಬೇಡಿಕೆ ಯಾಗಿದ್ದ ಈರಣ್ಣ ಮುತ್ಯಾ ಗುಡಿಯ ಕಟ್ಟಡದ ಕಾಮಗಾರಿಯನ್ನು ಶೀಘ್ರದಲ್ಲಿಯೇ ಆರಂಭಿಸುವುದಾಗಿ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಶಿವು ಹತ್ತಿ, ರವಿರಾಜ ದೇವರಮನಿ, ಬಸವರಾಜ ಮಾರಲಭಾವಿ, ವಿಜುಗೌಡ ಕರ್ನಾಳ, ತಳವಾರ ಸಮಾಜದ ಮುಖಂಡರಾದ ಮಡಿವಾಳ ನಾಯ್ಕೋಡಿ, ಮಂಜುನಾಥ ನಾಯ್ಕೋಡಿ, ರಮೇಶ ತಳವಾರ, ಮಲ್ಲಣ್ಣ ನಾಯ್ಕೋಡಿ, (ಬೆಂಗಳೂರು), ರಾಜು ಯಂಕಂಚಿ, ಚಂದ್ರಾಮ ನಾಯ್ಕೋಡಿ, ಸಿದ್ದಪ್ಪ ನಾಯ್ಕೋಡಿ, ಭಾಗಪ್ಪ ಕೊಂಡಗೂಳಿ, ಭೀಮಣ್ಣ ತಳವಾರ, ಮಲ್ಲಪ್ಪ ನಾಯ್ಕೋಡಿ, ರಾವುತಪ್ಪ ಮಾಗಣಗೇರಿ, ಮಹಾಂತೇಶ ನಾಯ್ಕೋಡಿ, ರಾವುತ್ ನಾಯ್ಕೋಡಿ ಇದ್ದರು.
ಶೈಕ್ಷಣಿಕ ಚಿಂತನಾಗೋಷ್ಠಿ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿದ ಸಚಿವ ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದಲಾಗುತ್ತಿರುವ ವಿದ್ಯಮಾನಗಳಿಗೆ ತಕ್ಕಂತೆ ಶಿಕ್ಷಕರು ನಿರಂತರ ಜ್ಞಾನಾರ್ಜನೆ ಮಾಡುತ್ತ ಆದರ್ಶ ಶಿಕ್ಷಕರಾಗಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ನಗರದ ಕಂದಗಲ ಹನಮಂತರಾಯ ರಂಗಮಂದಿರದಲ್ಲಿ ಆದರ್ಶ ಶಿಕ್ಷಕರ ವೇದಿಕೆ ಮತ್ತು ಜಿಲ್ಲಾ ಯುವ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ನಡೆದ ಶೈಕ್ಷಣಿಕ ಚಿಂತನಾಗೋಷ್ಠಿ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಗಾಟಿಸಿ ಅವರು ಮಾತನಾಡಿದರು.ದೇಶ ಮತ್ತು ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಶ್ಲಾಘನೀಯವಾಗಿದೆ. ಶಿಕ್ಷಕರು ಆದರ್ಶರಾಗಿರಬೇಕು. ಇದರಿಂದ ಸ್ಪೂರ್ತಿ ಪಡೆದ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕನಸುಗಳನ್ನು ನನಸು ಮಾಡಲು ಶ್ರಮಿಸುತ್ತಾರೆ. ನಮ್ಮ ಅಜ್ಜ ತಿಕೋಟಾದ ಎ. ಟಿ. ಪಾಟೀಲರು ರಾಷ್ಟ್ರ ಮಟ್ಟದಲ್ಲಿ ಆದರ್ಶ ಶಿಕ್ಷಕ ಪ್ರಶಸ್ತಿ ಪಡೆದಿದ್ದರು. ಅಲ್ಲದೇ, ತರಗತಿಗಳಿಗೆ ಗೈರು ಹಾಜರಾದ ತಮ್ಮ ಸ್ವಂತ…
ರಾಜ್ಯ 38ನೇ ರೇಡಿಯಾಲಜಿ- ಐ ಆರ್ ಐ ಎ ಸಮ್ಮೇಳನ ಉದ್ಘಾಟಿಸಿ ಸಚಿವ ಎಂ.ಬಿ.ಪಾಟೀಲ ಭರವಸೆ ವಿಜಯಪುರ: ರೇಡಿಯಾಲಾಜಿಸ್ಟ್ ಗಳ ಸಮಸ್ಯೆಗಳ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ, ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ನೀಡಿದ್ದಾರೆ.ನಗರದ ಬಿ. ಎಲ್. ಡಿ. ವೈದ್ಯಕೀಯ ಕಾಲೇಜಿನ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ರಾಜ್ಯ 38ನೇ ರೇಡಿಯಾಲಜಿ- ಐ ಆರ್ ಐ ಎ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.ರೇಡಿಯಾಲಾಜಿಸ್ಚ್ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಈ ಸಂಘಟನೆಯವರು ಮಾಡಿರುವ ಮನವಿಯ ಕುರಿತು ಆರೋಗ್ಯ ಮತ್ತು ವೈದ್ಯಕೀಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.ಜನರಿಗೆ ಕೈಗೆಟಕುವಂತೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ವೈದ್ಯರ ಸತತವಾಗಿ ನಡೆಸುತ್ತಿರುವ ಪ್ರಯತ್ನ ಗಮನಾರ್ಹವಾಗಿದೆ. ರೇಡಿಯಾಲಜಿ ವೈದ್ಯಕೀಯ ಕ್ಷೇತ್ರದ ಅವಿಭಾಜ್ಯ ಅಂಗವಾಗಿದೆ. ಇಂಟರವೆನ್ಶನಲ್ ರೇಡಿಯಾಲಜಿ ಶಸ್ತಚಿಕಿತ್ಸೆಗಳಲ್ಲಿ ಕ್ರಾಂತಿಕಾರಿ ತಂದಿದೆ.…
ವಿಜಯಪುರ: ಶ್ರೇಷ್ಠ ವಿಜ್ಞಾನಿ ಡಾ. ಕುಶಾಲ ದಾಸ ಅವರು ತಮ್ಮ ಸಾಧನೆಗಳ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಫಿಜಿಯಾಲಜಿ ವಿಭಾಗದ ಡಿಸ್ಟಿಂಗ್ವಿಷ್ಡ್ ಚೇರ್ ಪ್ರೊಫೆಸರ್ ಡಾ. ಕುಶಾಲ ಕೆ. ದಾಸ್ ಅವರಿಗೆ ರಾಜ್ಯ ಸರಕಾರ ವಿಕಲಚೇತನರ ಕ್ಷೇತ್ರದಲ್ಲಿನ ಸೇವೆಗಾಗಿ ರಾಜ್ಯ ಮಟ್ಟದ ವೈಯಕ್ತಿಕ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿತ್ತು. ಈ ಹಿನ್ನೆಲೆಯಲ್ಲಿ ವಿವಿ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಡಾ. ಕುಶಾಲ ಕೆ. ದಾಸ ಅವರನ್ನು ಸನ್ಮಾನಿಸಿ ಸಚಿವರು ಮಾತನಾಡಿದರು.ಡಾ. ಕುಶಾಲ ಕೆ. ದಾಸ ತಮ್ಮ ಕೆಲಸ ಕಾರ್ಯಗಳ ಮೂಲಕ ಬಿ.ಎಲ್.ಡಿ.ಇ ಸಂಸ್ಥೆಗೆ ಬೆನ್ನೆಲುಬಾಗಿದ್ದಾರೆ. ಸಂಶೋಧನೆಗಳ ಸಾಧನೆಯ ಮೂಲಕ ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದ್ದಾರೆ. ನ್ಯೂನ್ಯತೆಗಳು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾರೆ. ಸಮಸ್ಯೆಗಳನ್ನು ಮೆಟ್ಟಿ ನಿಂತು ಅವರು ಮಾಡಿರುವ ಸಾಧನೆಗಳ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ. ಸದಾ…
Udayarashmi kannada daily newspaper
