Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಜನ ಜಾನುವಾರಗಳಿಗೆ ಕುಡಿಯುವ ನೀರಿನ ತೊಂದರೆಯುಂಟಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು. ಈಗಾಗಲೇ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕಾಲುವೆ ಜಾಲದ ಮೂಲಕ ನೀರನ್ನು ಹರಿಸಲಾಗುತ್ತಿದ್ದು, ಕಟ್ಟುನಿಟ್ಟಾಗಿ ನಿಗಾವಹಿಸಿ ಕೆರೆಗಳನ್ನು ತುಂಬಿಸುವ ಮೂಲಕ ಕುಡಿಯುವ ನೀರಿನ ಸಮರ್ಪಕ ಬಳಕೆಗೆ ಎಲ್ಲಾ ಅಧಿಕಾರಿಗಳು ಕಾರ್ಯನ್ಮೋಖರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ಬುಧವಾರ ಜಿಲ್ಲಾಧಿಕಾರಿಗಳ ಕೆಸ್ವಾನ ಸಭಾಂಗಣದಲ್ಲಿ ನಡೆದ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಈಗಾಗಲೇ ನೀರಿನ ಅವಶ್ಯಕತೆ ಇರುವ ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕ ನೀರನ್ನು ಒದಗಿಸಲಾಗುತ್ತಿದೆ. ಶಾಲೆ, ಆಸ್ಪತ್ರೆ ಸೇರಿದಂತೆ ಅಗತ್ಯವಿರುವ ಕಡೆ ಆದ್ಯತೆ ಮೇಲೆ ನೀರು ಪೂರೈಸಲು ಕ್ರಮ ವಹಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಕುಡಿಯುವ ನೀರಿಗಾಗಿ ಖಾಸಗಿ ಬೊರವೆಲ್ಗಳು, ತೆರೆದ ಬಾವಿಗಳನ್ನು ಗುರುತಿಸಿ ನೀರಿನ ಲಭ್ಯತೆ ಪರಿಶೀಲಿಸಬೇಕು. ಕಾಲಕಾಲಕ್ಕೆ ಟಾಸ್ಕಪೋರ್ಸ್ ಸಮಿತಿ ಸಭೆ ನಡೆಸಿ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಟ್ಯಾಂಕರ್ ನೀರು ಅವಶ್ಯಕತೆವಿದ್ದ ಕಡೆ ಟಾಸ್ಕಪೋರ್ಸ್ ಸಮಿತಿ ಸಭೆಯಲ್ಲಿ…
ವಿಜಯಪುರ: ನಗರದ ವಿಮಾನ ನಿಲ್ಧಾಣ ನಿರ್ಮಾಣ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿಗಳು, ಮಧಭಾವಿ, ಅಲಿಯಾಬಾದ ಹಾಗೂ ಬುರಣಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮ ವಹಿಸುವುದಾಗಿ ಜಿಲ್ಲಾಧಿಕಾರಿ ಟಿ.ಬೂಬಾಲನ್ ಹೇಳಿದರು.ಇಂದು ಬುರಣಾಪುರ ಹತ್ತಿರ ವಿಮಾನ ನಿಲ್ಧಾಣಕ್ಕೆ ಭೇಟಿ ನೀಡಿ ಈ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರೊಂದಿಗೆ ಪರಿಸರ ಅಭಿಯಾನ ಜಾಗೃತಿ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾವು ಮಂಡಿಸಿರುವ ತಮ್ಮ ಅನಿಸಿಕೆಗಳನ್ನು ದೃಡೀಕರಿಸಿ ಭಾರತದ ಸರ್ಕಾರದ ಅರಣ್ಯ ಮಂತ್ರಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದರು.ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಹಿರಿಯ ಪರಿಸರ ಅಭಿಯಂತರರಾದ ಗೋಪಾಲಕೃಷ್ಣ ಸಣ್ಣತಂಗಿ, ಜಿಲ್ಲಾ ಪರಿಸರ ಅಧಿಕಾರಿಗಳಾಸ ಎಮ್.ಎ ಮಣಿಯಾರ, ಎಕ್ಸಿಕ್ಯೂಟಿವ ಇಂಜಿನಿಯರ್ ರಾಜು ಮಜುಮದಾರ, ಸಹಾಯರ ಅಭಿಯಂತರರಾದ ಎಮ್.ಎಮ್ ಪಾಟೀಲ, ರವಿ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.
ಪಂಚಮಿತ್ರ ಪೋರ್ಟಲ್ ಮತ್ತು ಪಂಚಮಿತ್ರ ವ್ಯಾಟ್ಸಪ್ ಚಾಟ್ ಲೋಕಾರ್ಪಣೆಗೊಳಿಸಿದ ಜಿ.ಪಂ.ಸಿಇಓ ರಿಷಿ ಆನಂದ ವಿಜಯಪುರ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯುವ ಪಂಚಮಿತ್ರ ಪೋರ್ಟಲ್ ಮತ್ತು ವ್ಯಾಟ್ಸಪ್ ಚಾಟ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಲೋಕಾರ್ಪಣೆಗೊಳಿಸಿದರು.ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ಬರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು, ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಸೇವೆಗಳಿಗೆ ಆನ್-ಲೈನ್ ನಲ್ಲಿ ಅರ್ಜಿ ಸಲ್ಲಿಸಲು, ಸಲ್ಲಿಸಿದ ಅರ್ಜಿಗಳ ಸ್ಥಿತಿಗತಿಯನ್ನು ಪರಿಶೀಲಿಸಲು ಹಾಗೂ ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ದಾಖಲಿಸಲು, “ಪಂಚಮಿತ್ರ” ಎಂಬ ಒಂದೇ ವೇದಿಕೆಯನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ದಿ ಪಡಿಸಿ, ಅನುಷ್ಠಾನಗೊಳಿಸಲಾಗಿದೆ.ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ದೇಶದಲ್ಲೇ ಪ್ರಥಮ ಬಾರಿಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ದಿ ಪಡಿಸಿದ ಪಂಚಮಿತ್ರ ಪೋರ್ಟಲ್…
ಬಸವನಬಾಗೇವಾಡಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಯ ಗೆಲುವಿಗೆ ರೂಪರೇಷೆಗಳನ್ನು ರೂಪಿಸುವ ಕುರಿತಂತೆ ಮಾ. ೭ ರಂದು ಮುದ್ದೇಬಿಹಾಳ ರಸ್ತೆಯಲ್ಲಿರುವ ಪಂಚಾಚಾರ್ಯ ಜನಕಲ್ಯಾಣ ಮಂಟಪದಲ್ಲಿ ಸಂಜೆ 5 ಗಂಟೆಗೆ ಬಸವನಬಾಗೇವಾಡಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರ, ಜನಪ್ರತಿನಿಧಿಗಳ, ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಸಚಿವ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಸಚಿವ ಶಿವಾನಂದ ಪಾಟೀಲರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಆಡಳಿತ ಬಂದ ಮೇಲೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗುವ ಮೂಲಕ ಜನರಿಗೆ ಸಾಕಷ್ಟು ಸದುಪಯೋಗವಾಗುತ್ತಿದೆ. ಅನೇಕ ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. ನಮ್ಮ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲರೂ…
ಬಸವನಬಾಗೇವಾಡಿ: ಪುರಸಭೆಯಿಂದ ಇಂಗಳೇಶ್ವರ ರಸ್ತೆಯಲ್ಲಿ ನಿರ್ಮಾಣ ಮಾಡಿರುವ ಜಿ ಪ್ಲಸ್-೧ ಮಾದರಿ ಮನೆಗಳನ್ನು ಫಲಾನುಭವಿಗಳಿಗೆ ವಿತರಿಸುವ ಕಾರ್ಯ ಶೀಘ್ರದಲ್ಲಿ ನಡೆಯಲಿದೆ. ಫಲಾನುಭವಿಗಳಿಗೆ ವಿವಿಧ ಬ್ಯಾಂಕುಗಳು ಗೃಹಸಾಲ ಒದಗಿಸಲು ಮುಂದೆ ಬಂದಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಹೇಳಿದರು.ಪಟ್ಟಣದ ಪುರಸಭೆ ಸಭಾಭವನದಲ್ಲಿ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಜಿಲ್ಲಾಡಳಿತ, ಪುರಸಭೆ ಸಹಯೋಗದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) ಜಿ ಪ್ಲಸ್-೧ ಹಾಗೂ ರಾಜ್ಯ ಪುರಸ್ಕ್ರತ ವಸತಿ ಯೋಜನೆಗಳ ಸಮನ್ವತೆಯೊಂದಿಗೆ ವಸತಿ ಯೋಜನೆಗಳ ಅನುಷ್ಠಾನದಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಫಲಾನುಭವಿಗಳಿಗೆ ಗೃಹಸಾಲ ಒದಗಿಸಲು ಬ್ಯಾಂಕುಗಳೊಂದಿಗೆ ಮೇಳದಲ್ಲಿ ಮಾತನಾಡಿದ ಅವರು, ಈಗಾಗಲೇ ಪುರಸಭೆಯಿಂದ ಜಿ ಪ್ಲಸ್-೧ ಮಾದರಿಯಲ್ಲಿ ೫೦೦ ಮನೆಗಳ ನಿರ್ಮಾಣವಾಗಿವೆ. ಈ ಮನೆಗಳ ಫಲಾನುಭವಿಗಳಿಗೆ ತಾತ್ಕಾಲಿಕ ಹಕ್ಕು ಪತ್ರ ಈಗಾಗಲೇ ವಿತರಿಸಲಾಗಿದೆ. ಮುಂಬರುವ ದಿನಗಳಲ್ಲಿ ಖಾಯಂ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ೫೦೦ ಫಲಾನುಭವಿಗಳಲ್ಲಿ ಈಗಾಗಲೇ ೧೪೭ ಫಲಾನುಭವಿಗಳು ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ್ದು ಇದರಲ್ಲಿ ೧೪೩ ಫಲಾನುಭವಿಗಳು ಸಾಲ…
ಮುದ್ದೇಬಿಹಾಳ: ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರ ಪಟ್ಟಾಧಿಕಾರ ಮಹೋತ್ಸವ ಕೊನೆಯ ದಿನವಾದ ಮಾ.೭ ರಂದು ಬೆಳಿಗ್ಗೆ ೭ ರಿಂದ ಪಟ್ಟಾಧಿಕಾರದ ವಿಧಿ ವಿಧಾನಗಳು ಜರುಗುವವು.ಶ್ರೀ ರಂಭಾಪುರಿ ಜಗದ್ಗುರುಗಳ ಸನ್ನಿಧಿಯಲ್ಲಿ ಆಗಮಿಸಿದ ಶಿವಾಚಾರ್ಯರ ಸಮ್ಮುಖದಲ್ಲಿ ಕಂಕಣಧಾರಣೆ, ಹರಿದ್ರಾಲೇಪನ ಮಂಗಲದ್ರವ್ಯಯುಕ್ತ ಮಹಾಮಸ್ತಾಕಾಭಿಷೇಕ, ತಿಲಕದಾರಣೆ, ಮಂಗಲಾಕ್ಷತೆಗಳಿಂದೊಡಗೂಡಿ ಆಶೀರ್ವಾದ. ನಿಡಗುಂದಿಯ ಪರಮತಪಸ್ವಿ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಡಾ.ಚನ್ನವೀರ ದೇವರಿಗೆ ಷಟಸ್ಥಲ ಬ್ರಹ್ಮೋಪದೇಶ ಮಾಡಿ ಶಂಕ, ಗಿಳಿಲು, ಭಸ್ಮ, ಪಟ್ಟಭಂದನ, ದಂಡ, ಕಮಂಡಲ, ಪಂಚಮುದ್ರಾ ಪ್ರಧಾನ ಮಾಡಿ ಗುರು ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು ಎಂಬ ನೂತನ ನಾಮ ಅನುಗ್ರಹಿಸುವರು.ನಂತರ ಮಹೋತ್ಸವ ಹಾಗೂ ಧರ್ಮ ಸಂದೇಶ ಕಾರ್ಯಕ್ರಮ ಜರುಗುವದು.ಸಂಜೆ ಸಮಾರಂಭಕ್ಕೆ ಸೇವೆ ಸಲ್ಲಿಸಿದ ಮಹನೀಯರಿಗೆ ಗೌರವ ಸನ್ಮಾನ ಜರುಗುವುದು.
ಚಿಮ್ಮಡ: ಅನಾದಿಕಾಲದಿಂದಲೂ ಪ್ರತಿಯೊಂದು ಧರ್ಮಗಳಲ್ಲಿ ಆಚರಣೆಯಲ್ಲಿರುವ ಜಾಗರಣೆ, ಉಪವಾಸ ವೃತಗಳು ಮನುಷ್ಯನ ಆರೋಗ್ಯ ರಕ್ಷಣೆಗೆ ಸಹಾಯಕವಾಗಿವೆ ಎಂದು ಸ್ಥಳಿಯ ವಿರಕ್ತಮಠದ ಶ್ರೀ ಪ್ರಭು ಮಹಾಸ್ವಾಮಿಗಳು ಹೇಳಿದರು.ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಪ್ರಭುಲಿಂಗೇಶ್ವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ಉಪವಾಸದೊಂದಿಗೆ ಪ್ರಕೃತಿದತ್ತವಾಗಿ ಕಾಲಕಾಲಕ್ಕೆ ಲಭಿಸುವ ಹಣ್ಣು, ತರಕಾರಿಗಳನ್ನು ಸೇವಿಸುವುದರಿಂದ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳು ದೊರೆಯುತ್ತವೆ, ನಿತ್ಯ ಸಮಾಜದಲ್ಲಿ ನಾವು ಉತ್ತಮ ಬದುಕು ಕಂಡುಕೊಳ್ಳಬೇಕಾದರೆ ಸಂಸ್ಕೃತಿ, ಸಂಸ್ಕಾರ, ಸೌಹಾರ್ದತೆಯನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಜೊತೆಗೆ ನಮ್ಮ ಮಕ್ಕಳಿಗೂ ಕಲಿಸಬೇಕು ಎಂದರು,ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪಾ ಪೂಜಾರಿ, ರಾಚಯ್ಯಾ ಮಠಪತಿ, ಸುರೇಶ ಅಥಣಿ, ಪ್ರಕಾಶ ಹಳ್ಳೂರ, ಎಲ್ಲಪ್ಪಾ ಅರುಟಗಿ, ಬಸಪ್ಪಾ ಪಾಲಭಾವಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ರೈತರು ಉಪಸ್ಥಿತರಿದ್ದರು.ಇಲಾಹಿ ಜಮಖಂಡಿಯವರಿಂದ ಹಮ್ಮಿಕೊಳ್ಳಲಾಗಿದ್ದ ದಾಸೋಹ ಮಹಾಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಮಂಗಲಗೊಂಡಿತು
ಬಸವಕಲ್ಯಾಣ ಪಿಎಸೈ ವಾಗಮೋರೆ ಅಮಾನತಿಗೆ ಪಟ್ಟು | ಪಿಎಸೈಯಿಂದ ಅಮಾನವೀಯ ವರ್ತನೆ, ಜಾತಿ ನಿಂದನೆ ಆರೋಪ ಇಂಡಿ: ಪಟ್ಟಣದ ಮತ್ತು ತಾಲೂಕಿನ ಬಂಗಾರ ಮಾರಾಟದ ಅಂಗಡಿಕಾರರು ಮತ್ತು ಆಭರಣ ತಯಾರಕರು ಬಸವಕಲ್ಯಾಣ ಪಿಎಸ್ಐ ಅಂಬರೀಷ ವಾಗಮೋರೆ ಇಂಡಿಯ ಇಬ್ಬರು ಬಂಗಾರದ ವ್ಯಾಪಾರಿಗಳ ಜೊತೆ ಅಮಾನವೀಯವಾಗಿ ವರ್ತಿಸಿ ಜಾತಿ ನಿಂದನೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಪ್ರತಿಭಟನೆ ಮೆರವಣಿಗೆ ಪಟ್ಟಣದ ಅಗಸಿಯ ಹನುಮಾನ ಮಂದಿರದಿಂದ ಮಿನಿ ವಿಧಾನಸೌಧವರೆಗೆ ನಡೆಯಿತು.ದಾರಿಯೂದ್ದಕ್ಕೂ ಪಿಎಸ್ಐ ವರ್ತನೆ ವಿರುದ್ಧ ಘೋಷಣೆ ಕೂಗಿದರು.ಸಂಘದ ಅಧ್ಯಕ್ಷ ಸೋಮನಗೌಡ ಬಿರಾದಾರ ಮಾತನಾಡಿ, ಬಸವಕಲ್ಯಾಣದಿಂದ ಆಗಮಿಸಿದ ಐದು ಜನರು ಯಾರೂ ಸಮವಸ್ತ್ರದಲ್ಲಿ ಇರಲಿಲ್ಲ. ಇಂಡಿಯ ಪೋಲಿಸ್ ಇಲಾಖೆಗೆ ಮಾಹಿತಿ ನೀಡಿರಲಿಲ್ಲ. ಇಲ್ಲವೆ ಬಸವ ಕಲ್ಯಾಣ ಪೋಲಿಸರಿಂದ ಯಾವದೇ ತರಹದ ಲಿಖಿತ ಮಾಹಿತಿ ಇಲ್ಲ. ಮತ್ತು ಬಾಡಿಗೆ ವಾಹನದಲ್ಲಿ ಬಂದಿದ್ದರು ಎಂದು ಹೇಳಿದರು.ಅಪ್ಪು ಮೋರೆ ಮಾತನಾಡಿ, ತಾನು ತುಡುಗಿನ ಬಂಗಾರ ತೆಗೆದುಕೊಂಡಿರುವುದಾಗಿ ಆರೊಪಿಸಿ ತನಗೆ ಹಣ ನೀಡಬೇಕೆಂದು ಕೇಳಿದರು. ತಾನು ನೀಡದೇ ಇದ್ದಾಗ ಬಸವಕಲ್ಯಾಣಕ್ಕೆ ತೆಗೆದುಕೊಂಡು ಹೋಗಿ…
ಕೊಲ್ಹಾರ: ಪಟ್ಟಣದ ವಿಶ್ವಕರ್ಮ ವಿಕಾಸ ಸಂಸ್ಥೆ ಮತ್ತು ಸರ್ವ ಧರ್ಮದ ಜನರ ಸಹಬಾಗಿತ್ವದಲ್ಲಿ ಸರಕಾರಿ ಕನ್ನಡ ಹಿರಿಯ ಹೆಣ್ಣು ಮಕ್ಕಳ ಶಾಲೆಯ ಹತ್ತಿರವಿರುವ ಕಾಳಿಕಾದೇವಿ, ಜಗದ್ಗುರು ಮೌನೇಶ್ವರ ದೇವಸ್ಥಾನದ ೮ನೇ ವಾರ್ಷಿಕೋತ್ಸವ ಹಾಗೂ ಪ್ರತಿವರ್ಷದಂತೆ ಈ ವರ್ಷವೂ ದಿನಾಂಕ ೮-೯ ಎರಡು ದಿನಗಳ ಕಾಲ ಜಾತ್ರಾ ಮಹೋತ್ಸವ ಕಾರ್ಯಕ್ರಮ ಜರುಗುವವು ಎಂದು ಸಂಸ್ಥೆಯ ಅಧ್ಯಕ್ಷರಾದ ಪುಂಡಲೀಕ ಕಂಬಾರ, ಮಳೆಪ್ಪ ಬಡಿಗೇರ ತಿಳಿಸಿದ್ದಾರೆ.ಪತ್ರಿಕಾ ಪ್ರಕಟಣೆ ಮೂಲಕ ಹೇಳಿಕೆ ನೀಡಿರುವ ಅವರು ದಿನಾಂಕ ೮ ಶುಕ್ರವಾರ ಬೆಳಿಗ್ಗೆ ೧೧.೩೦ಕ್ಕೆ ಮೌನೇಶ್ವರ ಭಾವಚಿತ್ರದೊಂದಿಗೆ ಎತ್ತಿನ ಬಂಡಿಯಲ್ಲಿ ಹಂದರ ತಪ್ಪಲ ಮೆರವಣಿಗೆ ಸಾಯಂಕಾಲ ೪ ಘಂಟೆಗೆ ಮಹಿಳೆಯರಿಗಾಗಿ ರಂಗೋಲಿ ಸ್ಪರ್ದೆ ಇರುವದು. ೯ ಶನಿವಾರದಂದು ಬ್ರಾಹ್ಮಿ ಮಹೂರ್ತದಲ್ಲಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಕಾಳಿಕಾದೇವಿ ಮತ್ತು ಜಗದ್ಗುರು ಮೌನೇಶ್ವರ ಮೂರ್ತಿಗಳಿಗೆ ಪಂಚಾಮೃತ ಅಭಿಷೇಕ, ಹೋಮ ಹವನ ಹೂವಿನ ಅಲಂಕಾರ ನೈವೇದ್ಯೆ ತೀರ್ಥ ಪ್ರಸಾದದೊಂದಿಗೆ ಮಹಾಮಂಗಳಾರತಿ, ಉಪನಯನ ನೆರವೇರುವದು.ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಳಿಕಾದೇವಿ ಮತ್ತು ಜಗದ್ಗುರು ಮೌನೇಶ್ವರ ಪಲ್ಲಕ್ಕಿ ಉತ್ಸವ ಪುರವಂತರ…
ಕೊಲ್ಹಾರ: ಪ್ರತಿವರ್ಷದಂತೆ ಈ ವರ್ಷವೂ ಕೂಡ ೦೭ ಗುರುವಾರ ದಿವಸ ೨೦ನೇ ಶತಮಾನದ ಸೂಫಿ ಸಂತ ಶ್ರೀಗುರು ಅಲಹಾಜ ಶಾಹ ಮಹ್ಮದ ಅಬ್ದುಲಗಫಾರ ಕಾದ್ರಿಯವರ ೩೧ನೇ ಉರುಸು ಕಾರ್ಯಕ್ರಮವನ್ನು ಪಟ್ಟಣದ ಅಜಾದ ನಗರದಲ್ಲಿರುವ ಕಾದ್ರಿಯಾ ಮಸೀದಿ ಹತ್ತಿರದ ಖಾನಕಾಯ ಗಪಾರಿಯಾ ಆಶ್ರಮದ ಆವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಗುವದು ಎಂದು ಪೀಠಾಧಿಕಾರಿ ಅಲ್ಹಾಜ ಡಾ|| ಭಕ್ತಿಯಾರಖಾನ ಪಠಾಣ, ಉತ್ಸವ ಸಮೀತಿ ಅಧ್ಯಕ್ಷ ಉಸ್ಮಾನಸಾಬ ಪಟೇಲ ತಿಳಿಸಿದರು.ಈ ಕುರಿತು ಪತ್ರಿಕಾಗೋಷ್ಟಿಯನ್ನು ಉದ್ದೇಸಿಸಿ ಮಾತನಾಡಿದ ಅವರು ಅಂದು ಅಖಂಡ ವಿಜಯಪೂರ ಜಿಲ್ಲೆಯ ಸರ್ವ ಧರ್ಮದ ಜನರ ಸಮಾವೇಶವನ್ನು ಭಾವೈಕ್ಯತೆಯ ಸಂದೇಶ ಸಾರಲು ಏರ್ಪಡಿಸಲಾಗಿದ್ದು ಅಂದಿನ ದಿವಸ ೧೯ನೇಯ ಅಲಹಾಬಾದ ಮೌಲಾನಾ ಭಾವೈಕ್ಯತಾ ಪ್ರತಿಷ್ಟಿತ ಪ್ರಶಸ್ತಿಯನ್ನು ಪ್ರಸಕ್ತ ಸಾಲಿನಲ್ಲಿ ಜಾನಪದ ವಿದ್ವಾಂಸ ಡಾ|| ಶಂಭು ಬಳಗಾರ ಅವರಿಗೆ ಕೊಡಮಾಡಲಾಗುವದು. ಇದು ೨೪ನೇಯ ಸರ್ವಧರ್ಮ ಸದ್ಬವನಾ ಸಮಾರಂಭವಾಗಿದ್ದು ನಾವೆಲ್ಲ ಭಾರತೀಯರು ಎಂಬ ಬಾವ ಮೂಡಲಿ ನಮ್ಮಲ್ಲಿರುವ ಬೇಧ ಭಾವವನ್ನು ಪರಮಾತ್ಮನು ದೂರ ಮಾಡಲಿ ಎಂದು ಶ್ರೀಗಳು ಹೇಳಿದರು.ಮುಸ್ಲೀಂ ಹಾಗೂ ಹಿಂದೂ…
