Author: editor.udayarashmi@gmail.com

ವಿಜಯಪುರ: ಜಿಲ್ಲೆಯ ಜಿಲ್ಲಾ ಕಛೇರಿಗಳ ಸಂಕೀರ್ಣ ನಿರ್ಮಾಣ ಮಾಡಲು ಪರಿಷ್ಕೃತ ಅಂದಾಜು 49 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಮತ್ತು ಜಿಲ್ಲಾ ಉಸ್ತವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯಪುರ ಜಿಲ್ಲಾ ಸಂಕೀರ್ಣ ಕಟ್ಟಡದ ನೆಲಮಹಡಿ ಮತ್ತು 1ನೆ ಮತ್ತು 2ನೆ ಮಹಡಿ ಸಿವಿಲ್ ಕಾಮಗಾರಿಗಳ ಜೊತೆಗೆ ಪೀಠೋಪಕರಣಗಳು ಮತ್ತು ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಒಳಚರಂಡಿ ಮತ್ತು ನೀರು ಸರಬರಾಜು, ವಿದ್ಯುತ್ ಕಾಮಗಾರಿ, ನೀರು ಕೊಯ್ಲು, ಫರ್ನೀಚರ್ ಕಾಮಗಾರಿ, ಬೋರ್ವೆಲ್, ಒಳರಸ್ತೆ ಸೇರಿದಂತೆ ಇತರೆ ಕಾಮಗಾರಿಗಳಿಗೆ ಅಂದಾಜು 49 ಕೋಟಿ ರೂಪಾಯಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.ಈ ಹಿಂದೆ 3.12.2019 ರಂದು 25 ಕೋಟಿಗಳ ಅಂದಾಜು ವೆಚ್ಚದ ಪಟ್ಟಿಗೆ ಕರ್ನಾಟಕ ಗೃಹ ಮಂಡಳಿಗೆ ನಿರ್ಮಾಣ ಮಾಡಲು ಆದೇಶ ನೀಡಲಾಗಿತ್ತು. ಈಗ ತಿದ್ದುಪಡಿ…

Read More

ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ | ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಇಂದು ಮಧ್ಯಾಹ್ನದವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.85 ವರ್ಷದ ನಟಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್​ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ನಾಳೆ ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ಸಿದ್ದತೆ ಮಾಡಲಾಗುತ್ತಿದೆ.1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದವರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.ಲೀಲಾವತಿ ಅವರು ತುಂಬಿದ ಕೊಡ, ಮಹಾತ್ಯಾಗ, ಭಕ್ತ ಕುಂಬಾರ, ಸಿಪಾಯಿ ರಾಮು, ಗೆಜ್ಜೆ ಪೂಜೆ ಚಿತ್ರಗಳಲ್ಲಿನ ಮನೋಜ್ಞ ಅಭಿನಯಕ್ಕೆ ರಾಜ್ಯ ಪ್ರಶಸ್ತಿ ಪಡೆದಿದ್ದು ಕನ್ನಡದ ಕಂದ ಚಿತ್ರಕ್ಕೆ ಫಿಲ್ಮ್ ಫೇರ್​ ಪ್ರಶಸ್ತಿ…

Read More

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,- ವಿವೇಕಾನಂದ ಎಚ್ ಕೆ* ಬೆಂಗಳೂರು ಇದೊಂದು ಗ್ರಾಫಿಕ್ ಅನಿಮೇಷನ್‌ ರೀತಿಯ ಕಂಪ್ಯೂಟರ್ ತಂತ್ರಜ್ಞಾನ ಮತ್ತು ಕಲೆ.. ಇದರ ಬಗ್ಗೆ ಇತ್ತೀಚೆಗೆ ಪ್ರಧಾನ ಮಂತ್ರಿಗಳು ಸಹ ಮಾತನಾಡಿದ್ದಾರೆ. ಅಮಿತಾಭ್ ಬಚ್ಚನ್ ಆತಂಕಗೊಂಡಿದ್ದಾರೆ. ತೆಲಂಗಾಣ ಸರ್ಕಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಸಾಕಷ್ಟು ಜನ ಇದರ ಬಗ್ಗೆ ಚರ್ಚಿಸುತ್ತಿದ್ದಾರೆ.. ಸಾಮಾನ್ಯ ಜನರ ಸಾಮಾನ್ಯ ತಿಳಿವಳಿಕೆಗಾಗಿ ಒಂದಷ್ಟು ಸಾಮಾನ್ಯ ಮಾಹಿತಿ.. ಡೀಪ್ ಪೇಕ್ ಎಂಬ ಪದದ ಕನ್ನಡ ಅನುವಾದ ಅಥವಾ ಸಾರಾಂಶ ಆಳವಾದ ವಂಚನೆ ಎನ್ನಬಹುದು ಅಥವಾ ತೀವ್ರ ಭ್ರಮೆ ಅಥವಾ ನಕಲಿ ಛಾಯೆ ಅಥವಾ ಸತ್ಯದಂತೆ ಕಾಣುವ ಸುಳ್ಳು ಎಂದಾಗಬಹುದು ಅಥವಾ ಇದಕ್ಕಿಂತ ಉತ್ತಮ ಅನುವಾದ ಇದ್ದರೆ ತಿಳಿಸಿ.. ಈ ತಂತ್ರಜ್ಞಾನದ ಬಗ್ಗೆ ಒಂದಷ್ಟು ಜನರಿಗೆ ಸ್ವಲ್ಪ ಆತಂಕ ಶುರುವಾಗಿದೆ. ಇದೊಂದು ಉತ್ತಮ ಕಲೆಯೂ ಹೌದು. ಈ ತಂತ್ರಜ್ಞಾನ ಉಪಯೋಗಿಸಿ ತುಂಬಾ ಕೆಟ್ಟ ಸಂದೇಶಗಳನ್ನು, ನಿಂದನೆಗಳನ್ನು, ಭ್ರಮೆಗಳನ್ನು, ನೈತಿಕತೆಯನ್ನು, ವೈಯಕ್ತಿಕ ಚಿತ್ರಣವನ್ನು, ವ್ಯಕ್ತಿತ್ವವನ್ನು ಪ್ರಸಾರ ಮಾಡಬಹುದು ಮತ್ತು ನಾಶ…

Read More

ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಹೋರಾಟ | ರುಪ್ಸಾ ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶ ಪಾಟೀಲ ಸುದ್ದಿಗೋಷ್ಠಿ ಆಲಮಟ್ಟಿ: ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ದಿಂದ ಅನುದಾನ ರಹಿತ ಶಾಲೆಗಳ ವಿವಿಧ ಬೇಡಿಕೆಗೆ ಆಗ್ರಹಿಸಿ ಒಂದು ದಿನದ ಹೊರಾಟವನ್ನು ಡಿ.೧೧ರಂದು ಬೆಳಗಾಂವಿಯ ಸುವರ್ಣಸೌಧದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶ ಪಾಟೀಲ ಹೇಳಿದರು.ಶುಕ್ರವಾರ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.೧೯೯೫ರ ನಂತರದ ರಾಜ್ಯದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು, ಖಾಸಗಿ ಶಾಲೆಗಳಲ್ಲಿ ಶೇಕಡಾ ೨೫%ರಷ್ಟು ಆರ್.ಟಿ.ಇ ಮಕ್ಕಳ ದಾಖಲಾತಿಯನ್ನಯ ಮರು ಸ್ಥಾಪಿಸುವ ಕುರಿತು ಹಾಗೂ ಪ್ರಸ್ತುತ ನೀಡುತ್ತಿರುವ ೧೬,೦೦೦ ವೆಚ್ಚವನ್ನು ೩೫,೦೦೦ ರೂಗಳಿಗೆ ವಿಸ್ತರಿಸಬೇಕು ಎಂದರು.ಖಾಸಗಿ ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ನವೀಕರಣವನ್ನು ೧೦ ವರ್ಷಗಳ ಅವಧಿಗೆ ನಿಗದಿ ಪಡಿಸುವ ಹಾಗೂ ಖಾಸಗಿ ಶಾಲೆಗಳಿಗೆ ನವೀಕರಣ ಸಂದರ್ಭದಲ್ಲಿ ಕೇಲುವ ಫೈರ್ ಸೇಪ್ಟಿ ಹಾಗೂ ಕಟ್ಟಡ ಭದ್ರತಾ ಪ್ರಮಾಣ ಪತ್ರಗಳಲ್ಲಿ ರಿಯಾಯಿತಿ…

Read More

ವೀಣಾಂತರಂಗ- ವೀಣಾ ಹೇಮಂತ್ ಗೌಡ ಪಾಟೀಲ್ ಮುಂಡರಗಿ-ಗದಗ ರಸ್ತೆಯ ತಿರುವಿನಲ್ಲಿ ಕೈಕಾಲು ಗಟ್ಟಿಮುಟ್ಟಾಗಿದ್ದ ಓರ್ವ ಮನುಷ್ಯ ಭಿಕ್ಷೆ ಬೇಡುತ್ತಿದ್ದ. ಭಿಕ್ಷೆ ಹಾಕದೆ ಮುಂದೆ ಹೋಗುತ್ತಿದ್ದ ಜನರನ್ನು ಹೀಯಾಳಿಸುತ್ತಾ, ಈ ಜಗತ್ತನ್ನು ಪಾಪಿಗಳ ಲೋಕವೆಂದು ಕೊಂಚ ಮಾತ್ರದ ಕನಿಕರವೂ ಇಲ್ಲದ ಜನರೆಂದು ಎಲ್ಲರನ್ನೂ ದೂಷಿಸುತ್ತಾ ಗೊಣಗುತ್ತ ಕುಳಿತಿದ್ದನು. ತನ್ನನ್ನು ತಾನು ಕನಿಕರದ, ಅಪಹಾಸ್ಯದ, ಅವಜ್ಞೆಯ ವಸ್ತುವನ್ನಾಗಿಸಿಕೊಂಡು ಭಿಕ್ಷೆ ಬೇಡುತ್ತಿದ್ದ ಆತನದು ಹೀನಾಯ ಪರಿಸ್ಥಿತಿ. ಸ್ವಯಂಕೃತ ಅಪರಾಧ,!! ಪರೀಕ್ಷೆಗೆ ಚೆನ್ನಾಗಿ ತಯಾರಿ ಮಾಡಿಕೊಳ್ಳದ ಮಗುವೊಂದು ಪರೀಕ್ಷಾ ಮೇಲ್ವಿಚಾರಕರ ಮತ್ತು ಉತ್ತರ ಪತ್ರಿಕೆಗಳನ್ನು ಪರಿಶೀಲಿಸುವ ಶಿಕ್ಷಕರ ಗುಂಪನ್ನು ಹೀಯಾಳಿಸುವುದು, ಶಾಲೆಯ ಸ್ಪರ್ಧೆಗಳಲ್ಲಿ ಮೊದಲ ಸ್ಥಾನ ಗಳಿಸದಿದ್ದರೆ ಶಾಲೆಯಲ್ಲಿ ಭೇದ ಭಾವ ಮಾಡುವರೆಂಬ ಆರೋಪ ಮಾಡುವ ಹಲವಾರು ಜನ ನಮ್ಮ ಸಮಾಜದಲ್ಲಿ ಇರುತ್ತಾರೆ. ಕೆಲವೊಮ್ಮೆ ಅವರ ಆಪಾದನೆಗಳು ನಿಜವಾದರೂ ಬಹಳಷ್ಟು ಬಾರಿ ಈ ಮಾತುಗಳಲ್ಲಿ ಹುರುಳಿರುವುದಿಲ್ಲ. ಅಂತಹವರಿಗೆ ನೀವೇನಾದರೂ ತಿಳಿಯ ಹೇಳ ಹೊರಟರೆ ನಿಮ್ಮಷ್ಟು ಮೂರ್ಖರು ಮತ್ತೊಬ್ಬರಿಲ್ಲ. ಅವರದು ಒಂದು ರೀತಿಯ ಅರೆಬೆಂದ ಪರಿಸ್ಥಿತಿ. ಪೂರ್ತಿ ತಿಳಿದವರಿಗೆ…

Read More

ಮುದ್ದೇಬಿಹಾಳ: ತಾಲೂಕಿನ ಬಳವಾಟ ಗ್ರಾಮದ ಕಂಠಿ ಬಸವೇಶ್ವರ ದೇವಸ್ಥಾನದಲ್ಲಿ ಡಿ.೯ ರಂದು ರಂಭಾಪುರಿ ಜಗದ್ಗುರುಗಳಿಂದ ಇಷ್ಟಲಿಂಗ ಮಹಾಪೂಜೆ ಹಾಗೂ ಲಿಂ.ಸದಾನಂದ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯ ಸ್ಮರಣೋತ್ಸವದ ಅಂಗವಾಗಿ ೫೦೧ ಸುಮಂಗಲೆಯರಿಗೆ ಉಡಿ ತುಂಬುವ ಮತ್ತು ಸಾಮೂಹಿಕ ವಿವಾಹ, ಧರ್ಮಸಭೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಬೆ೮ ಕ್ಕೆ ಇಷ್ಟಲಿಂಗ ಮಹಾಪೂಜೆ, ೧೧ಕ್ಕೆ ಸುಮಂಗಲೆಯರ ಉಡಿ ತುಂಬುವ ಕಾರ್ಯಕ್ರಮ, ೧೨ಕ್ಕೆ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಸಂಜೆ ೪ಕ್ಕೆ ಅರುಣೋದಯ ಸಾಂಸ್ಕೃತಿಕ ಕಲಾ ತಂಡದಿಂದ ಜಾನಪದ ಜಾತ್ರೆ ಕಾರ್ಯಮಗಳು ಜರುಗಲಿವೆ. ಸಮಸ್ತ ಸದ್ಭಕ್ತರು ಭಾಗಿಯಾಗಿ ತನು-ಮನ-ಧನದಿಂದ ಸೇವೆ ಸಲ್ಲಿಸುವಂತೆ ಆಯೋಜಕರು ಕೋರಿದ್ದಾರೆ.

Read More

ವಿಜಯಪುರ: ಸಿಬ್ಬಂದಿ ನೇಮಕಾತಿ ಆಯೋಗ (ಕೆಕೆಆರ್) ಬೆಂಗಳೂರು ಕೇಂದ್ರ ವತಿಯಿಂದ ಸಶಸ್ತç ಪೋಲಿಸ್ ಮತ್ತು ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್ಸ್ಟೆಬಲ್ ಮತ್ತು ಆಸ್ಸಾಂ ರೈಫಲ್ಸ್ನಲ್ಲಿ ರೈಫಲ್‌ಮ್ಯಾನ್ (ಜಿಡಿ) ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ೧೮ ರಿಂದ ೨೩ ವರ್ಷ ವಯೋಮಾನದ ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೧-೧೨-೨೦೨೩ ಕೊನೆಯ ದಿನವಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು www.ssckar.kar.nic.in & https:ssc.nic.in ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಮಹಿಳೆಯರಿಗೆ ಮೀಸಲಾಗಿರುವ ೨೭೯೯ ಹುದ್ದೆಗಳನ್ನು ಸೇರಿಸಿ ೨೬,೧೪೬ ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳು ಜರುಗಲಿದ್ದು, ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ, ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಕೋಜಿಕೋಡ್ ಹಾಗೂ ತ್ರೀಶೂರ್ ಪರೀಕ್ಷಾ ಕೇಂದ್ರಗಳಿವೆ. ಎಸ್ಸಿ-ಎಸ್ಟಿ, ಮಹಿಳೆ ಹಾಗೂ ಮಾಜಿ ಸೈನಿಕರಿಗೆ ಯಾವುದೇ ಶುಲ್ಕವಿರುವುದಿಲ್ಲ. ಸಾಮಾನ್ಯರು ೧೦೦ ಶುಲ್ಕ ಪಾವತಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ…

Read More

ವಿಜಯಪುರ: ತಾಂತ್ರಿಕ ತರಬೇತಿ ಸಂಸ್ಥೆ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.www.apprenticeshipindia.org/candidate registration ಬೆಂಗಳೂರು ವತಿಯಿಂದ ಐಟಿಐ ಫಿಟ್ಟರ್, ಟರ್ನರ್, ಮಷಿನಿಷ್ಟ್, ಶೀಟ್ ಮೆಟಲ್ ವರ್ಕರ್, ಫೌಂಡ್ರಿಮ್ಯಾನ್, ಕೋಪಾ, ಕಾರ್ಪೆಂಟರ್, ಮೆಕ್ಯಾನಿಕ್ ಆರ್ &ಎಸಿ, ಟೂಲ್ & ಡೈ ಮೇಕರ್ ಅಡ್ವಾನ್ಸ್ ಸಿಎನ್‌ಸಿ ಮಷಿನಿಂಗ್ ಹಾಗೂ ವೆಲ್ಡರ್ ಟ್ರೇಡ್ ಪಾಸಾದ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿ ಅವಧಿಯಲ್ಲಿ ಸ್ಟೈಫಂಡ್ ಹಾಗೂ ಇತರೆ ಸೌಲಭ್ಯಗಳನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ೨೦೨೩ರ ಡಿಸೆಂಬರ್ ೩೦ ಕೊನೆಯ ದಿನಾಂಕವಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೊಂದಣಿ ಮಾಡಿ ಅದರ ಪ್ರತಿಯೊಂದಿಗೆ ಜಿಲ್ಲಾ ಉದ್ಯೊಗ ವಿನಿಮಯ ಕಚೇರಿ ವಿಜಯಪುರ ಅಥವಾ www.hal-india.co.in ನಲ್ಲಿ ಖುದ್ದಾಗಿ ಅರ್ಜಿ ನಮೂನೆಗಳನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೧೧೦/೧೧ ಕೆವ್ಹಿ ಕೆಐಎಡಿಬಿ, ಜುಮನಾಳ, ವಿಜಯಪುರ ಮತ್ತು ೨೨೦/೧೧೦ ಕೆವ್ಹಿ ಸ್ವೀಕರಣಾ ವಿದ್ಯುತ್ ಕೇಂದ್ರಗಳಲ್ಲಿ ಹಾಗೂ ೧೧೦ ಕೆವ್ಹಿ ಹಾಗೂ ೧೧ಕೆವ್ಹಿ ಬೇಗಳ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಡಿ.೧೦ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೆ ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಹೊರಡುವ ಎಲ್ಲ ೧೧ ಕೆವ್ಹಿ ಮಾರ್ಗಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ವಿಜಯಪುರ ಹೆಸ್ಕಾ ಕಾರ್ಯನಿರ್ವಾಹಕ ಅಭಿಯಂತರರು ಮನವಿ ಮಾಡಿಕೊಂಡಿದ್ದಾರೆ.

Read More

ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಡಿ.೦೯ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಡಿ.೯ರಂದು ಬೆಳಿಗ್ಗೆ ೧೧ ಗಂಟೆಗೆ ಬಿಎಲ್‌ಡಿಇ ಆವರಣದ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಆಯೋಜಿಸಲಾದ ೩೮ನೇ ರೇಡಿಯಾಲಾಜಿ ರಾಜ್ಯ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೧೨-೩೦ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಶೈಕ್ಷಣಿಕ ಚಿಂತನಾಗೊಷ್ಠಿ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More