Author: editor.udayarashmi@gmail.com

ವಿಜಯಪುರ: ಸಿಂದಗಿ ತಾಲೂಕಿನ ಮನ್ನಾಪುರ ಗ್ರಾಮದ ೭೩ ವರ್ಷ ವಯಸ್ಸಿನ ಸಾಹೇಬಗೌಡ ತಂದೆ ಶರಣಪ್ಪ ಮಲಘಾಣ ಎಂಬ ವ್ಯಕ್ತಿ ದಿನಾಂಕ ೧೦-೦೧-೨೦೨೩ ರಿಂದ ಕಾಣೆಯಾಗಿರುವ ಕುರಿತು ಸಿಂದಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾಣೆಯಾದ ವ್ಯಕ್ತಿಯ ಪತ್ತೆಗೆ ಪೋಲಿಸ್ ಸಬ್ ಇನ್ಸಪೆಕ್ಟರ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಕಾಣೆಯಾದ ವ್ಯಕ್ತಿಯು ಅಂದಾಜು ೭೩ ವರ್ಷ ವಯಸ್ಸಿನವನಾಗಿದ್ದು, ೫.೫ ಫೂಟ್ ಎತ್ತರ, ಮೈಯಿಂದ ತೆಳ್ಳಗೆ, ಸಾದಗೆಂಪು ಮೈ ಬಣ್ಣ, ಉದ್ದು ಮುಖ, ಕನ್ನಡ ಭಾಷೆ ಬಲ್ಲವನಾಗಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ನೆಹರು ಶರ್ಟ, ಬಿಳಿ ಧೊತರ್ ಬಿಳಿ ಟೋಪಿ ಧರಿಸಿದ್ದನು. ಈ ಚಹರೆಪಟ್ಟಿಯುಳ್ಳ ವ್ಯಕ್ತಿ ಕುರಿತು ಮಾಹಿತಿ ದೊರೆತದಲ್ಲಿ ಸಾರ್ವಜನಿಕರು ವಿಜಯಪುರ ಕಂಟ್ರೋಲ್ ರೂಂ. ದೂ: ೦೮೩೫೨-೨೫೦೮೪೪, ಸಿಂದಗಿ ಪೋಲಿಸ್ ಠಾಣೆ ದೂ: ೦೮೪೮೮-೨೨೧೩೩೩, ಇಂಡಿ ಡಿಎಸ್‌ಪಿ ದೂ:೦೮೩೫೯-೨೨೫೦೨೨ ಅಥವಾ ಸಿಂದಗಿ ಸಿಪಿಐ ದೂ:೦೮೪೮೮-೨೨೨೩೩೩ ಸಂಖ್ಯೆ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

Read More

ವಿಜಯಪುರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಪ್ರತಿಜ್ಞೆ ಸ್ವೀಕಾರ ಕಾರ್ಯಕ್ರಮ ಡಿ.೧೦ರಂದು ಬೆಳಿಗ್ಗೆ ೧೦-೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾಗಾAಧಿ ವಸತಿ ಶಾಲೆಗಳಲ್ಲಿ ೨೦೨೪-೨೫ನೇ ಶೈಕ್ಷಣಿಕ ಸಾಲಿಗೆ ೬ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ೨೦೨೪ರ ಫೆಬ್ರುವರಿ ೧೮ರಂದು ನಡೆಸಲಿರುವ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಪ್ರಸ್ತುತ ೫ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹತ್ತಿರದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ,http://kea.kar.nic.in ನಲ್ಲಿ ಮತ್ತು ವಸತಿ ಶಿಕ್ಷಣ ಸಂಸ್ಥೆಗಳ ವೆಬ್‌ಸೈಟ್ http://kreis.kar.nic.in ಡಾ.ಬಿ.ಆರ್.ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ ಡಿ.೭ ರಿಂದ ೩೧ರವರೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಮಾಹಿತಿ ಪುಸ್ತಕ-೨೦೨೪ನ್ನು ಪ್ರಾಧಿಕಾರದ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಪ್ರವೇಶ ಪತ್ರವನ್ನು ದಿನಾಂಕ : ೦೧-೦೨-೨೦೨೪ರಂದು ಅರ್ಜಿ ಸಲ್ಲಿಸಿದ ವಸತಿ ಶಾಲೆಯಿಂದ ಪಡೆದುಕೊಳ್ಳಬಹುದಾಗಿದೆ.ಈ ಕುರಿತಂತೆ…

Read More

ಕಣಕಾಲ & ಮುತ್ತಗಿ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಸಿಇಓ ರಾಹುಲ ಶಿಂಧೆ ಅಭಿಮತ ವಿಜಯಪುರ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅತಿಮುಖ್ಯವಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಕೈಜೋಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮನವಿ ಮಾಡಿಕೊಂಡರು.ಶುಕ್ರವಾರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಣಕಾಲ & ಮುತ್ತಗಿ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಕಣಕಾಲ ಗ್ರಾಮದಲ್ಲಿ ಸರಕಾರಿ ಜಾಗ ಅತಿಕ್ರಮಣವಾಗಿರುವ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದ ಅವರು, ಅತಿಕ್ರಮಣವಾಗಿದೆ ಎನ್ನಲಾದ ಸ್ಥಳದಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದು, ನಮಗೆ ಇಲ್ಲೇ ವಾಸಿಸಲು ಅವಕಾಶ ನೀಡಲು ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಅವರು ಈ ವಿಷಯದ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.ಗ್ರಾಮದ ಶಿಶು ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳೊಡನೆ ಮಾತನಾಡಿದರು.ಗ್ರಾಮಸ್ಥರ ಮನವಿಯನುಸಾರ ಗ್ರಾಮದ ಆರೋಗ್ಯ ಕೇಂದ್ರಕ್ಕೆ ನಿಯಮಾನುಸಾರ ಸಮುದಾಯ ಆರೋಗ್ಯ ಅಧಿಕಾರಿಗಳನ್ನು…

Read More

ಮುದ್ದೇಬಿಹಾಳ: ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದ ಸಿದ್ದೇಶ್ವರ ವೇದಿಕೆಯಲ್ಲಿ ಡಿ.೧೦ ರಿಂದ ೩೧ರವರೆಗೆ ಪ್ರತಿದಿನ ಸಂಜೆ ೬:೩೦ ರಿಂದ ೮ಗಂಟೆಯವರೆಗೆ ಬಸವ ಪುರಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಧಾರವಾಡ ಜಿಲ್ಲೆಯ ಉಪ್ಪಿನ ಬೆಟಗೇರಿಯ ಮೂರು ಸಾವಿರ ವಿರಕ್ತಮಠದ ಮ.ನಿ.ಪ್ರ ಕುಮಾರ ವಿರೂಪಾಕ್ಷ ಮಹಾಸ್ವಾಮಿಗಳು ಪ್ರವಚನ ನೀಡಲಿದ್ದಾರೆ. ಡಿ.೧೦ ರಂದು ಉದ್ಘಾಟನೆ, ೧೩ರಂದು ಬಸವಣ್ಣನವರ ತೊಟ್ಟಿಲೋತ್ಸವ, ೧೮ರಂದು ಬಸವಣ್ಣನವರ ಕಲ್ಯಾಣಮಹೋತ್ಸವ ಹಾಗೂ ಸಾಮೂಹಿಕ ವಿವಾಹ, ೨೯ರಿಂದ ಶಿವಯೋಗ ಹಾಗೂ ಲಿಂಗಧಾರಣೆ ೩೧ರಂದು ಮಂಗಲೋತ್ಸವ. ೧೩ರಿಂದ೨೭ ರವರೆಗೆ ಬಸವ ಬೆಳಗಿನ ಸಂಚಾರ ಹೀಗೆ ವಿಶೇಶ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು ತಾಲೂಕಿನ ಎಲ್ಲ ಮಹನೀಯರು, ಮಾತೆಯರು, ಯುವಕರು ಸೇರಿದಂತೆ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ ವಿನಂತಿಸಿದ್ದಾರೆ.

Read More

ಮುದ್ದೇಬಿಹಾಳ: ಭಗವದ್ಗೀತೆ ಎಂಬುದು ಎಂದಿಗೂ ಚಿರನೂತನವಾಗಿದ್ದು ವಿಶ್ವಕ್ಕೆ ಭಗವದ್ಗೀತೆಯ ಸಂದೇಶವನ್ನು ಸಾರಬೇಕಿದೆ ಎಂದು ತಾಳಿಕೋಟೆ ಬಾಲ ಭಾರತಿ ವಿದ್ಯಾಮಂದಿರದ ಕಾರ್ಯದರ್ಶಿ ಚಿದಂಬರ ಕರಮರಕರ ಹೇಳಿದರು.ಪಟ್ಟಣದ ಹಡಲಗೇರಿ ರಸ್ತೆಯಲ್ಲಿರುವ ಪವಾಡ ಬಸವೇಶ್ವರ ಆಶ್ರಮದಲ್ಲಿ ಉತ್ತರ ಕನ್ನಡ ಜೆಲ್ಲೆಯ ಶಿರಸಿಯ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಮತ್ತು ಪವಾಡ ಬಸವೇಶ್ವರ ಭಕ್ತ ವೃಂದ ಹಾಗೂ ಚೇತನ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕ ಮಟ್ಟದ ಭಗವದ್ಗೀತಾ ಅಭಿಯಾನ ೨೦೨೩ ಸಪ್ತಾಹದಲ್ಲಿ ಅವರು ವಿಶೇಶ ಉಪನ್ಯಾಸ ನೀಡಿದರು.ಶಾಲಾ ವರ್ಗಗಳಲ್ಲಿ ಭಗವದ್ಗೀತೆ ಕಂಠಪಾಠ ಮತ್ತು ಆಶಯಗಳನ್ನು ತಿಳಿಸಬೇಕು. ಭಾರತೀಯ ಸಂಸ್ಕೃತಿ ಪರಿಚಯ ಹೊಸ ಶಿಕ್ಷಣ ನೀತಿಯಿಂದ ತಿಳಿಯಬಹುದು ಎಂದರು.ಕಸಾಪ ನಿಕಟಪೂರ್ವ ಅಧ್ಯಕ್ಷ ಎಂ.ಬಿ ನಾವದಗಿ, ಜ್ಞಾನ ಭಾರತಿ ವಿದ್ಯಾ ಮಂದಿರದ ಅಧ್ಯಕ್ಷ ಬಿ.ಪಿ ಕುಲಕರ್ಣಿ, ಭಗವದ್ಗೀತೆ ಅಭಿಯಾನದ ಸಂಚಾಲಕ ರಾಮಚಂದ್ರ ಹೆಗಡೆ ಮಾತನಾಡಿ ಗೀತೆಯು ಹಿಂದೂ ಧರ್ಮದ ಪವಿತ್ರ ಗ್ರಂಥವಾಗಿದ್ದು ಇದು ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗಿಲ್ಲ. ಇಡೀ ಜಗತ್ತಿಗೆ…

Read More

ಬಸವನಬಾಗೇವಾಡಿ: ಕಳೆದ ೧೨ ವರ್ಷಗಳಿಂದ ಬಸವನಬಾಗೇವಾಡಿಯಲ್ಲಿ ಕಂದಾಯ ಉಪವಿಭಾಗಾಧಿಕಾರಿ ಕಚೇರಿ ಮಂಜೂರು ಮಾಡಲು ಹೋರಾಟ ಮಾಡುತ್ತಾ ಬಂದರೂ ಇದುವರೆಗೂ ಸರ್ಕಾರ ಕಂದಾಯ ಉಪವಿಭಾಗಾಧಿಕಾರಿ ಕಚೇರಿ ಮಂಜೂರು ಮಾಡಲು ಮುಂದಾಗುತ್ತಿಲ್ಲ. ಇದೀಗ ಬೆಳಗಾವಿ ನಡೆಯುತ್ತಿರುವ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಿ ಈ ಕಚೇರಿಯನ್ನು ಮಂಜೂರು ಮಾಡಲು ಮುಂದಾಗಬೇಕೆಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪಟ್ಟಣದಲ್ಲಿ ಉಪವಿಭಾಗಾಧಿಕಾರಿ ಕಚೇರಿ ಇಲ್ಲದೇ ಇರುವದರಿಂದಾಗಿ ರೈತ ಬಾಂಧವರು ಸುಮಾರು ೧೧೦ ಕಿಮೀ ವ್ಯಾಪ್ತಿಯಿಂದ ತಮ್ಮ ಕೃಷಿ ಚಟುವಟಿಕೆಗಳನ್ನು ಬಿಟ್ಟು ನೂರಾರು ರೂ.ಗಳನ್ನು ಮಾಡಿಕೊಂಡು ವಿಜಯಪುರಕ್ಕೆ ಅಲೆದಾಡಬೇಕು. ರೈತರ ಪ್ರಮುಖ ಕೆಲಸಗಳಾದ ಟ್ರಿಬ್ಯುನಲ್ ಪ್ರಕರಣ, ಶರ್ತಗಳ ಬದಲಾವಣೆ, ಹರ ತಿದ್ದುಪಡಿ, ಜನನ ಮತ್ತು ಮರಣ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ಪ್ರಕರಣಗಳು ಉಪವಿಭಾಗಾಧಿಕಾರಿ ವ್ಯಾಪ್ತಿಗೆ ಬರುವದರಿಂದ ದಿನನಿತ್ಯ ರೈತರ ವಿಜಯಪುರಕ್ಕೆ ಅಲೆದಾಡಲು ಕಷ್ಟವಾಗುತ್ತಿದೆ. ರೈತ ಬಾಂಧವರು ತಮ್ಮ ಕೆಲಸಗಳನ್ನು ಮಾಡಿಕೊಳ್ಳಲು ಅನುಕೂಲವಾಗಲು ಬಸವನಬಾಗೇವಾಡಿಯಲ್ಲಿ…

Read More

ಬಸವನಬಾಗೇವಾಡಿ: ತಾಲೂಕು ಗ್ರಾಮ ಸಹಾಯಕರ ಸಂಘದವರು ಬೆಳಗಾವಿಯಲ್ಲಿ ಹಮ್ಮಿಕೊಂಡಿರುವ ಮುಷ್ಕರದಲ್ಲಿ ಭಾಗವಹಿಸಲು ಕೇಂದ್ರ ಸ್ಥಾನ ಬಿಡುಗಡೆಗೆ ಅನುಮತಿ ನೀಡುವಂತೆ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ಅವರು ಸಲ್ಲಿಸಿದ ಮನವಿಯಲ್ಲಿ ಕಂದಾಯ ಇಲಾಖೆಯಲ್ಲಿ ಸುಮಾರು ೪೬ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ೧೦,೪೫೦ ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸಿ ಸೇವೆಯನ್ನು ಖಾಯಂಗೊಳಿಸಬೇಕೆಂದು ಮತ್ತು ಸೇವಾ ಭದ್ರತೆ ನೀಡಬೇಕೆಂದು ಡಿ.೧೧ ರಂದು ಕರ್ನಾಟಕ ರಾಜ್ಯ ಸರ್ಕಾರ ಕಂದಾಯ ಇಲಾಖೆಯ ಗ್ರಾಮ ಸಹಾಯಕರ ಸಂಘದ ರಾಜ್ಯಾಧ್ಯಕ್ಷರ ಕರೆಯ ಮೇರೆಗೆ ಬೆಳಗಾವಿಯ ಕಿತ್ತೂರು ವೀರರಾಣಿ ಚನ್ನಮ್ಮ ಅರಮನೆ ಮೈದಾನದಿಂದ ಪಾದಯಾತ್ರೆ ಮೂಲಕ ಬೆಳಗಾವಿಯ ಸುವರ್ಣ ಸೌಧದವರೆಗೆ ತಲುಪಿದ ನಂತರ ಡಿ.೧೨ ರಿಂದ ಸುವರ್ಣ ಸೌಧದ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ. ಈ ಮುಷ್ಕರದಲ್ಲಿ ತಾಲೂಕಿನ ೩೦ ಗ್ರಾಮ ಸಹಾಯಕರು ಭಾಗವಹಿಸಲಿದ್ದೇವೆ. ಅದಕ್ಕಾಗಿ ನಾವು ಕೇಂದ್ರ ಸ್ಥಾನವನ್ನು ಬಿಡಲು ತಹಸೀಲ್ದಾರರು ನಮಗೆ ಅನುಮತಿ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿದೆ.ಮನವಿ ಪತ್ರಕ್ಕೆ ಸಂಘದ ರಾಜ್ಯ ಸಂಘಟನಾ…

Read More

ಸಿಂದಗಿ: ಭವ್ಯ ಭಾರತದ ನಿರ್ಮಾಣ ಮಾಡುವಲ್ಲಿ ಮತದಾನ ಪ್ರಕ್ರಿಯೆ ಪ್ರಮುಖವಾಗಿದೆ ಎಂದು ತಾಲೂಕು ಪಂಚಾಯತ್ ಇಓ ರಾಮು ಅಗ್ನಿ ಹೇಳಿದರು.ಪಟ್ಟಣದ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಸತಿ ನಿಲಯಕ್ಕೆ ಭೇಟಿ ನೀಡಿ ಸ್ವೀಪ್ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ೧೮ವರ್ಷ ಪೂರೈಸಿದ ಎಲ್ಲಾ ವಿದ್ಯಾರ್ಥಿಗಳು ನಮೂನೆ ೬ರ ಅರ್ಜಿಯನ್ನು ಸಲ್ಲಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕರಿಸಿ ಎಂದರು.ಇದೇ ಸಂದರ್ಭದಲ್ಲಿ ವಸತಿ ನಿಲಯದ ಸಹಾಯಕ ನಿರ್ದೇಶಕ ರವೀಂದ್ರ ಬಂಥನಾಳ, ಭೀಮರಾಯ ಚೌಧರಿ, ಬಸವರಾಜ್ ಹುಣಸಗಿ ಸೇರಿದಂತೆ ವಸತಿ ನಿಲಯದ ಮೇಲ್ವಿಚಾರಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿದ್ದರು.

Read More

ಸಿಂದಗಿ: ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವುದು ದೇಶ ಸೇವೆಗೆ ಸಮಾನವಾದ ಪ್ರಕ್ರಿಯೆ ಎಂದು ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಶ್ರೀ ಚೆನ್ನವೀರ ಸ್ವಾಮೀಜಿ ಪ್ರತಿಷ್ಠಾನ ಸಿಂದಗಿ, ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ವಿವಿಧ ಅಂಗ ಸಂಸ್ಥೆಗಳು, ಲಿಂ.ಶ್ರೀ ಚೆನ್ನಯ್ಯಸ್ವಾಮಿ ಮತ್ತು ಲಿಂ.ಶಾರದಾದೇವಿ ಜನಕಲ್ಯಾಣ ಫೌಂಡೇಶನ್ ಹಾಗೂ ವಿಜಯಪುರ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಮ್. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ಇವರ ಸಹಯೋಗದೊಂದಿಗೆ ಹಮ್ಮಿಕೊಂಡ ರಕ್ತದಾನ ಹಾಗೂ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇದು ವ್ಯಕ್ತಿಯ ದೇಹದಲ್ಲಿ ಮಾತ್ರ ಉತ್ಪತ್ತಿಯಾಗುತ್ತದೆ. ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಸಹ ಇಂದಿಗೂ ರಕ್ತವನ್ನು ಸಿದ್ಧಪಡಿಸುವಂತಹ ಪ್ರಕ್ರಿಯೆಯಲ್ಲಿ ಯಶಸ್ವಿಯಾಗಲು ಸಾಧ್ಯವಾಗಿಲ್ಲ, ಹೀಗಾಗಿ ರಕ್ತವು ಒಬ್ಬರಿಂದ ಇನ್ನೊಬ್ಬರ ದೇಹಕ್ಕೆ ವರ್ಗಾವಣೆಯಾಗಲೇಬೇಕಾಗಿದೆ. ಇಂದಿನ ಯುವಕರು ರಕ್ತದಾನಕ್ಕೆ ಮುಂದಾಗಬೇಕು ಎಂದು ಕರೆಕೊಟ್ಟರು.ಈ ವೇಳೆ ವಿಜಯಪುರದ ಬಿ.ಎಮ್.ಪಾಟೀಲ ವೈದ್ಯಕೀಯ ವಿಶ್ವವಿದ್ಯಾಲಯದ ಮೆಡಿಕಲ್ ಸುಪರಿಂಟೆಡೆಂಟ್ ಸಂಯೋಜಕ ಡಾ.ರಾಜೇಶ ಹೊನ್ನುಟಗಿ, ಪ್ರಾಚಾರ್ಯ ಡಾ.ಅರವಿಂದ ಪಾಟೀಲ ಮಾತನಾಡಿದರು.ಇದೇ ಸಂದರ್ಭದಲ್ಲಿ…

Read More