Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ನಗರದ ಮರಾಠಾ ವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವನ್ನು ಆಯೋಜಿಸಿದ ಜಿಲ್ಲಾ ಪಂಚಾಯತ ವಿಜಯಪುರ ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನ, ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ದಿ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಹಾಗೂ ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಕರ ಇಲಾಖೆ ವಿಜಯಪುರ ರವರಿಂದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆ-೨೦೨೩-೨೪ ಸಾಲಿನ ಚಿತ್ರಕಲಾ ಸ್ಪರ್ಧೆಯಲ್ಲಿ ಶಾಲೆಯ ಅಲ್ -ಅಮಾನ್ ಬಾಲಕರ ಉರ್ದು ಪ್ರೌಢಶಾಲೆ, ವಿಜಯಪುರ ಶಿಕ್ಷಕರಾದ ಎಸ್.ಬಿ. ವಾಲಿಕಾರ ಶಿಕ್ಷಕ (ಕಲಾವಿದರು) ಭಾಗವಹಿಸಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದು, ನಮ್ಮ ಜಿಲ್ಲೆಯ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಹಾಗೂ ಈ ಕಾರ್ಯಕ್ರಮದಲ್ಲಿ ಎನ್.ಎಚ್. ನಾಗೂರ (ಡಿ.ಡಿ.ಪಿ.ಐ) ಹಾಗೂ ವಿಷಯ ಪರೀವೀಕ್ಷಕಿ ಶ್ರೀಮತಿ ಎಸ್.ಎ. ಅಳ್ಳಗಿ, ವಿ.ಆರ್. ಹಿರೇಮಠ ಡಿವೈಎಸ್ಪಿ, ಶ್ರೀಮತಿ ಟಿ.ಸಿ. ಕೋಲಾರ ಹಾಗೂ ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶೆಡಶ್ಯಾಳ ಹಾಗೂ ಜಿಲ್ಲಾ ನೌ.ಸ. ಖಜಾಂಚಿ ಜುಬೇರ ಕೆರೂರ, ಪ್ರಾ.ಶಾ.ಶಿ.ಸ.ಜಿಲ್ಲಾದ್ಯಕ್ಷ…
ವಿಜಯಪುರ: ಡಿ.೦೯ರಂದು ಮಧ್ಯಾಹ್ನ ೧೨-೩೦ ಗಂಟೆಗೆ ಕಂದಗಲ್ ಹನಮಂತರಾಯ ರಂಗ ಮಂದಿರ ವಿಜಯಪುರದಲ್ಲಿ ಆದರ್ಶ ಶಿಕ್ಷಕರ ವೇದಿಕೆ ವಿಜಯಪುರ ವತಿಯಿಂದ ಶೈಕ್ಷಣಿಕ ಚಿಂತನಾಗೋಷ್ಠಿ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀ ಚನ್ನವೀರ ದೇವರು, ಸಂಸ್ಥಾನ ಹಿರೇಮಠ ಕುಂಟೋಜಿ ಇವರು ವಹಿಸಲಿದ್ದಾರೆ. ಉದ್ಘಾಟಕರಾಗಿ ಬೃಹತ್ ಮತ್ತು ಮದ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ. ಬಿ. ಪಾಟೀಲ ನೆರವೇರಿಸುವರು.ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿಗಳಾದ ಟಿ ಬೂಬಾಲನ್, ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್, ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಹಾಂತೇಶ ಬಿರಾದಾರ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು, ಎಂ ಎಂ ಸಿಂಧೂರ ಜಂಟಿ ನಿರ್ದೇಶಕರು ಬೆಳಗಾಂವ, ಎನ್,ಎಚ್. ನಾಗೂರ್ ಉಪ ನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ವಿಜಯಪುರ, ಶ್ರೀಮತಿ ಪ್ರಮೋದಿನಿ ಬಳೊಲಮಟ್ಟಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಗ್ರಾಮೀಣ ವಲಯ ವಿಜಯಪುರ, ಬಸವರಾಜ್ ತಳವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಗರ ವಲಯ, ಶ್ರೀಮತಿ ಸಾಯಿರಾಬಾನು ಖಾನ್ ನಿವೃತ್ತ ಉಪ ನಿರ್ದೇಶಕರು…
ಡಿ.೦೮ ರಂದು ಬೆಳಗಾವಿ ರುದ್ರಾಕ್ಷಿಮಠದ `ಸೇವಾರತ್ನ ಪ್ರಶಸ್ತಿ’ ಸ್ವೀಕರಿಸುವ ನಿಮಿತ್ಯ ವಿಶೇಷ ಲೇಖನ – ಗುಲಾಬ್ಚಂದ್ ಆರ್. ಜಾಧವ*ಶಿಕ್ಷಕರು, ಆರ್.ಬಿ.ಪಿ.ಜಿ ಹಳಕಟ್ಟಿ ಪ್ರೌಢಶಾಲೆ, ಆಲಮಟ್ಟಿ ಕನ್ನಡದ ಕುಲಗುರುಗಳಾದ ಪೂಜ್ಯ ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಕುರಿತು ಡಾ.ಎನ್.ಜಗದೀಶ ಕೊಪ್ಪ ಹಾಗೂ ಪ್ರೋ.ಶಶಿಧರ ತೋಡಕರ ಅವರು ಸಂಪಾದಿಸಿ ಪ್ರಕಟಿಸಿದ ಸಮಾಜಮುಖಿ ಗ್ರಂಥದಲ್ಲಿ ಪ್ರಕಟವಾಗಿರುವಂತೆ *”ಪಟ್ಟಣಶೆಟ್ಟರಿಗೆ ಸನ್ಮಾನ ಮಾಡಿದ್ದು ಒಂದು ರೀತಿ ನನಗೆ ಸಂತೋಷ, ಮತ್ತೊಂದು ರೀತಿ ಮುಜುಗರ ಅಂದರೆ ಸನ್ಮಾನ ಮಾಡಿಸಿಕೊಳ್ಳುವ ಮನೋಭಾವ ಅವರ ಹತ್ತಿರ ಇಲ್ಲ, ನಮ್ಮ ಪಟ್ಟಣಶೆಟ್ಟರೆಂದರೇ ನನ್ನ ಇನ್ನೊಂದು ಮುಖ, ಬಹಳ ಬದ್ಧತೆಯುಳ್ಳಂಥ ಮುಖ. ನಾನೊಬ್ಬನೇ ಈ ಮಠವನ್ನು ಇಷ್ಟೆತ್ತರಕ್ಕೆ ಬೆಳೆಸಲು ಸಾಧ್ಯವಿರಲಿಲ್ಲ, ನನಗೆ ಸಾಹಿತ್ಯದ ಬಗೆಗೆ ಬಹಳ ಒಲವಿದೆ. ಪ್ರತಿ ವರ್ಷ ೨೦ ಪುಸ್ತಕಗಳನ್ನು ಪ್ರಿಂಟ್ ಮಾಡುತ್ತೇವೆ, ಅದಕ್ಕಾಗಿ ೪೦-೫೦ ದಿನ ನಿದ್ದೆಗೆಡುವಷ್ಟು ಕೆಲಸ ಮಾಡುತ್ತೇನೆ. ಆ ಪುಸ್ತಕದ ವಿಷಯದಲ್ಲಿ ಮಾತ್ರ, ಆಮೇಲೆ ಶಿವಾನುಭವ ಪುಸ್ತಕ ಪ್ರಕಟಣೆ ಮತ್ತು ಸಮಾಜದ ಒಂದು ಸಮಾಚಾರ ಇವುಗಳನ್ನು ಬಿಟ್ಟರೆ ಶಾಲೆ-ಕಾಲೇಜು ನನಗೇನೋ…
ಆಲಮಟ್ಟಿ: ಗ್ರಾಮದಲ್ಲಿ ಯುವಕನ ಮೇಲೆ ಚೂರಿ ಇರಿದ ಘಟನೆ ಬುಧವಾರ ಸಂಜೆ ಜರುಗಿದೆ.ಅಭಿಲಾಷ ಕಾಳೆ ಚಾಕು ಇರಿತಕ್ಕೆ ಒಳಗಾದ ಯುವಕ.ಮುದ್ದೇಬಿಹಾಳ ಪಟ್ಟಣದ ನಾಲ್ವರು ಯುವಕರು ಆಲಮಟ್ಟಿ ಉದ್ಯಾನ ವೀಕ್ಷಣೆಗೆ ಆಲಮಟ್ಟಿ ಪೆಟ್ರೋಲ್ ಪಂಪ್ ನಿಂದ ರಾಕ್ ಉದ್ಯಾನಕ್ಕೆ ತೆರಳುತ್ತಿದ್ದ ಯುವತಿಯರ ಗುಂಪಿಗೆ ಚುಡಾಯಿಸಿದ್ದಾರೆ. ಆ ರೀತಿ ಮಾಡದಂತೆ ಅಭಿಲಾಷ ಸೇರಿದಂತೆ ಕೆಲವರು ತರಾಟೆಗೆ ತೆಗೆದುಕೊಂಡಿದ್ದಾರೆ.ಇದರಿಂದ ಕುಪಿತಗೊಂಡ ಯುವಕರು ಮತ್ತು ಇವರ ಮಧ್ಯೆ ವಾಗ್ಯುದ್ಧ ನಡೆದಿದೆ.ಸಂಜೆ ಆರೋಪಿಗಳು ಮರಳಿ ಆಗಮಿಸಿ ಆಲಮಟ್ಟಿ ಪೆಟ್ರೋಲ್ ಪಂಪ್ ಬಳಿ ಇರುವ ಪ್ರವೇಶ ದ್ವಾರದ ಬಳಿ ಕುಳಿತಿದ್ದ ಅಭಿಷೇಕ ಕಾಳೆ ಗೆ ನಾಲ್ವರು ಸೇರಿ ಜಾತಿ ನಿಂದನೆ ಮಾಡಿ ಹೊಟ್ಟೆ ಮತ್ತೀತರ ಕಡೆ ಚಾಕು ಹಾಕಿದ್ದಾರೆ ಎಂದು ಗುರುವಾರ ಈ ಪ್ರಕರಣದ ತನಿಖೆಗೆ ಆಗಮಿಸಿದ್ದ ವಿಜಯಪುರ ಡಿವೈಎಸ್ಪಿ ಜಿ.ಎಚ್. ತಳಕಟ್ಟಿ ತಿಳಿಸಿದರು.ಈ ಕುರಿತು ಆರೋಪಿಗಳಾದ ದೀಪಕ ಲಕ್ಷ್ಮಣ ರಾಠೋಡ, ಕಾರ್ತಿಕ ಮಂಜುನಾಥ ಪೇಟೇಕರ, ಮನೋಜ ಮುತ್ತಣ್ಣ ದೊಡಮನಿ, ಕಿಶೋರ ರಮೇಶ ರಾಠೋಡ ಅವರನ್ನು ಬಂಧಿಸಲಾಗಿದ್ದು ಅವರ ವಿರುದ್ಧ…
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಗಿರಿಜನ ಉಪಯೋಜನೆಯಡಿ ಡಿ.೧೦ ರಂದು ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮ ಪಂಚಾಯತ್ ಆವರಣದ ಬಯಲು ವೇದಿಕೆಯಲ್ಲಿ ಗಿರಿಜನ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಅಂದು ಸಂಜೆ ೫-೩೦ಕ್ಕೆ ಬಸ್ ನಿಲ್ದಾಣದಿಂದ ಅಗಸಿ ಮಾರ್ಗವಾಗಿ ಗ್ರಾಮ ಪಂಚಾಯತ್ ಆವರಣದವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ ೬-೩೦ಕ್ಕೆ ಗಿರಿಜನ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಮುಳವಾಡ…
ವಿಜಯಪುರ: ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಿಷಯದ ಕುರಿತು ಡಿ.೮ ರಂದು ಸಂಜೆ ೬ ರಿಂದ ೮ ಗಂಟೆವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಡಿಪಿಐ ಎನ್.ಎಚ್.ನಾಗೂರ ಅವರು ತಿಳಿಸಿದ್ದಾರೆ.ಮಾರ್ಚ್ನಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿನ ಕಲಿಕೆ ಸಮಸ್ಯೆಗಳಿಗೆ ಮತ್ತು ಮಕ್ಕಳ ಪಾಲಕರು ಹಾಗೂ ಸಾರ್ವಜನಿಕರು ಪರೀಕ್ಷೆ ವಿಧಾನ ಹಾಗೂ ವಿಜ್ಞಾನ ವಿಷಯದ ಕುರಿತು ಇರುವ ತಮ್ಮ ಸಮಸ್ಯೆಗಳಿಗೆ ಫೋನ್ ಇನ್ ಕಾರ್ಯಕ್ರಮದಲ್ಲಿ ಕರೆ ಮಾಡಿ ಪರಿಹರಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.ಕರೆ ಮಾಡಲು ಸಂಪರ್ಕಿಸಬೇಕಾದ ಸಂಖ್ಯೆ : ೯೪೪೮೯೯೯೩೩೧, ೯೮೮೦೭೪೫೨೧೫, ೯೦೦೮೮೯೪೧೦೬, ೯೯೦೨೫೩೮೬೬೨, ೯೯೭೨೧೪೧೬೮೨, ೮೯೭೧೦೨೨೬೨೬, ೯೬೬೩೧೫೩೮೪೪, ೬೩೬೦೯೩೭೩೩೮, ೯೭೩೧೧೯೧೬೨೨, ೯೯೦೨೪೭೪೭೦೭, ೯೮೮೦೫೫೭೪೨೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ.ಪ್ರತಿ ವಿಷಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ದೂರವಾಣಿ ನಂಬರಗಳನ್ನು ನೀಡಲಾಗುವುದು. ಎಲ್ಲಾ ವಿಷಯಗಳ ಕುರಿತು ಕರೆ ಮಾಡಲು ಜಿಲ್ಲೆಯ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರ ಹಾಗೂ ಸಹ ಶಿಕ್ಷಕರ ಕಡೆಗೆ ಫೋನ್ ನಂಬರ್ಗಳು ಲಭ್ಯವಿರಲಿದ್ದು, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು ಈ…
ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ವತಿಯಿಂದ ೨೦೨೩-೨೪ನೇ ಸಾಲಿನಲ್ಲಿ ಅನುಷ್ಠಾನೊಳಿಸುತತಿರುವ ಸಮುದಾಯ ಆಧಾರಿತ ತರಬೇತಿ ಯೋಜನೆಯಡಿ ತರಬೇತಿ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದೆ.ಅಲ್ಪಸಂಖ್ಯಾತ ಸಮುದಾಯದ ನಿರುದ್ಯೋಗ ಯುವಕ-ಯುವತಿಯರಿಗೆ ಸ್ವಯಂ ಉದ್ಯೋಗ, ಕಛೇರಿ, ಕಂಪನಿ, ಕಾರ್ಖಾನೆಗಳಲ್ಲಿ ಉದ್ಯೋಗ ದೊರಕಿಸಲು ಈ ಯೋಜನೆಯಡಿ ಬ್ಯೂಟಿ ಪಾರ್ಲರ್ (ಪುರುಷ ಮತ್ತು ಮಹಿಳೆಯರಿಗೆ) ಪ್ರಮಾಣೀಕರಣ ಕೋರ್ಸ್, ಹೆವಿ ಅರ್ಥ ಮೂವರ್ (ಜೆಸಿಬಿ, ಕ್ರೇನ್, ಪೋಕ್ ಲೇನ್ ಸೇರಿದಂತೆ ಭಾರಿ ವಾಹನ ಚಾಲನಾ ತರಬೇತಿ) ತರಬೇತಿ, ಶಾರ್ಟ ಹ್ಯಾಂಡ್ ಟ್ರ್ರೇನಿಂಗ್, ಭದ್ರತಾ ಸೇವೆಗಳ ತರಬೇತಿ, ಆಪೀಸ್ ಅಡ್ಮಿನಿಸ್ಟ್ರೇಶನ್ ಮತ್ತು ರಿಟೈಲ್ ಮಾರ್ಕೆಟಿಂಗ್ ತರಬೇತಿ ನೀಡಲಾಗುವುದು.ಅರ್ಹ ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ https://kmdconline.karnataka. gov.in/portal/home ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೧೫-೧೨-೨೦೨೩ ಕೊನೆಯ ದಿನಾಂಕವಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಶಸ್ತ್ರ ಪಡೆಗಳ ಧ್ವಜ ದಿನ ಆಚರಣೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ ವಿಜಯಪುರ: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಚರಿಸಲಾಯಿತು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು, ಈ ಸಂದರ್ಭದಲ್ಲಿ ಸಶಸ್ತ್ರ ಪಡೆಗಳ ಸಾಂಕೇತಿಕ ಧ್ವಜ ಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯನ್ನು ದೇಶದ ಎಲ್ಲ ಭಾಗಗಳಲ್ಲಿ ಪ್ರತಿ ವರ್ಷ ಇದೇ ದಿನ ಡಿ.೭ರಂದು ಆಚರಿಸಲಾಗುತ್ತಿದೆ. ಸಶಸ್ತ್ರ ಪಡೆಗಳ ಧ್ವಜ ಬಿಡುಗಡೆ ಮಾಡಲಾಗುತ್ತದೆ. ಕೃತಜ್ಞತೆ ಸಲ್ಲಿಸಲು ಹಾಗೂ ಬೆಂಬಲ ವ್ಯಕ್ತಪಡಿಸಲು ಧ್ವಜ ದಿನಾಚರಣೆ ಒಂದು ಸದಾವಕಾಶ ಒದಗಿಸಿ ಕೊಡುತ್ತದೆ.ವೀರ ಯೋಧರ ಕುಟುಂಬಕ್ಕೆ ಬೆಂಬಲ ಒದಗಿಸಲು ಈ ದಿನಾಚರಣೆ ವೇದಿಕೆ.ಈ ನಿಧಿಯನ್ನು ಯುದ್ಧ ಸಂತ್ರಸ್ತರಿಗೆ, ಮಾಜಿ ಸೈನಿಕರು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಂಡ ವಿವಿಧ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ…
ವಿಜಯಪುರ: ಜಿಲ್ಲೆಯ ಅವಧಿ ಮುಕ್ತಾಯವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗದಿಂದ ವೇಳಾಪಟ್ಟಿಯನ್ನು ನಿಗದಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಜಿಲ್ಲೆಯ ಚಡಚಣ ಪಟ್ಟಣ ಪಂಚಾಯತಿಗೆ ಸಾರ್ವತ್ರಿಕೆ ಚುನಾವಣೆ ಹಾಗೂ ಮುದ್ದೇಬಿಹಾಳ ಪುರಸಭೆಯ ವಾರ್ಡ ನಂ.೧೮ ಮತ್ತು ಮನಗೂಳಿ ಪಟ್ಟಣ ಪಂಚಾಯತಿಯ ವಾರ್ಡ ನಂ.೭ಕ್ಕೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.ವೇಳಾಪಟ್ಟಿಯಂತೆ ಡಿ.೮ರಂದು ಚುನಾವಣಾ ಅಧಿಸೂಚನೆ ಹೊರಡಿಸುವುದು, ನಾಮಪತ್ರಗಳನ್ನು ಸಲ್ಲಿಸಲು ಡಿ.೧೫ ಕೊನೆಯ ದಿನಾಂಕ, ಉಮೇದುವಾರಿಕೆಗಳನ್ನು ಹಿಂತೆಗದುಕೊಳ್ಳಲು ಡಿ.೧೮ ಕೊನೆಯ ದಿನಾಂಕ, ಅವಶ್ಯಕವಿದ್ದರೆ ದಿನಾಂಕ : ೨೭-೧೨-೨೦೨೩ ರಂದು ಬೆಳಿಗ್ಗೆ ೭ ರಿಂದ ಸಂಜೆ ೫ ಗಂಟೆಯವರೆಗೆ ಮತದಾನ ಮತ್ತು ಮರು ಮತದಾನ ಅವಶ್ಯವಿದ್ದಲ್ಲಿ ತಾಲೂಕಿನ ಕೇಂದ್ರ ಸ್ಥಳದಲ್ಲಿ ಡಿ.೩೦ರಂದು ಬೆಳಿಗ್ಗೆ ೮ ಗಂಟೆಯಿಂದ ಮರು ಮತದಾನ ಹಾಗೂ ಡಿ.೩೦ ಚುನಾವಣೆಯನ್ನು ಯಾವ ದಿನಾಂಕಕ್ಕೆ ಮುಂಚೆ ಮುಕ್ತಾಯಗೊಳಿಸಬೇಕೋ ಆ ದಿನಾಂಕ ಮತ್ತು ದಿನವಾಗಿದೆ.ಚಡಚಣ ಪಟ್ಟಣ ಪಂಚಾಯತಿ ಸಾರ್ವತ್ರಿಕ ಚುನಾವಣೆಗೆ ವಾರ್ಡ ನಂ.೧ಕ್ಕೆ ಪರಿಶಿಷ್ಟ…
ವಿಜಯಪುರ ಆಯುಷ್ ಪಂಚಕರ್ಮ ಆಸ್ಪತ್ರೆಗೆ ಭೇಟಿ ನೀಡಿದ ಜಿ.ಪಂ.ಸಿಇಓ ರಾಹುಲ್ ಶಿಂಧೆ ಕರೆ ವಿಜಯಪುರ: ನಗರದ ಆಯುಷ್ ಪಂಚಕರ್ಮ ಘಟಕವು ಇತರ ಘಟಕಗಳಿಗೆ ಮಾದರಿಯಾಗಬೇಕು ಆ ನಿಟ್ಟಿನಲ್ಲಿ ಎಲ್ಲರೂ ಹೆಚ್ಚಿನ ಶ್ರಮವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚಿಸಿದರು.ಗುರುವಾರ ವಿಜಯಪುರದ ಆಯುಷ್ ಹೈಟೆಕ್ ಪಂಚಕರ್ಮ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ಪರಿಶೀಲನೆ ನಡೆಸಿದ ಅವರು, ಆಯುಷ್ ಘಟಕ ಕಾರ್ಯನಿರ್ವಹಿಸುತ್ತಿರುವ ಕುರಿತು ಹಾಗೂ ಈ ಘಟಕದಲ್ಲಿ ದೊರೆಯು ಸೌಲಭ್ಯಗಳ ಕುರಿತು ವಿವಿಧ ಐಇಸಿ ಚಟುವಟಿಕೆಗಳ ಮೂಲಕ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು, ಸಿಬ್ಬಂದಿಗಳು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿ, ಗ್ರಾಮೀಣ ಭಾಗದಿಂದ ಬರುವ ಸಾರ್ವಜನಿಕರಿಗೆ ಯಾವದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಬಿರಗಳನ್ನು, ಮನೆ ಮದ್ದು ಕಾರ್ಯಕ್ರಮಗಳನ್ನು ಮತ್ತು ಯೋಗ ಶಿಬಿರಗಳನ್ನು ಆಯೋಜನೆ ಮಾಡುವ ಮೂಲಕ ಮಾದರಿ ಆಯುಷ್ ಘಟಕವನ್ನಾಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. ಆಸ್ಪತ್ರೆಯ ಮುಂದುಗಡೆ ಖಾಲಿ ಇರುವ…
