Author: editor.udayarashmi@gmail.com

ಮುದ್ದೇಬಿಹಾಳ: ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸೋಂದಾ ಸ್ವರ್ಣವಲ್ಲೀ ಸಂಸ್ಥಾನ ಶಿರಸಿ, ಮತ್ತು ಶ್ರೀ ಪವಾಡ ಬಸವೇಶ್ವರ ಆಶ್ರಮ ಭಕ್ತವೃಂದ ಹಾಗೂ ಮಹರ್ಷಿ ವಾಲ್ಮೀಕಿ ವಿದ್ಯಾ ವರ್ಧಕ ಸಂಸ್ಥೆಯ ಚೇತನ ಹಿರಿಯ ಪ್ರಾಥಮಿಕ ಶಾಲೆ ಮುದ್ದೇಬಿಹಾಳ ಇವರ ಸಹಯೋಗದಲ್ಲಿ ತಾಲೂಕಾ ಮಟ್ಟದ ಭಗವದ್ಗೀತಾ ಅಭಿಯಾನ-೨೦೨೩ ಸಪ್ತಾಹದ ಉದ್ಘಾಟನಾ ಸಮಾರಂಭವನ್ನು ಡಿ.೭ ರಂದು ಸಂಜೆ ೫ ಗಂಟೆಗೆ ಪಟ್ಟಣದ ಹಡಲಗೇರಿ ರಸ್ತೆಯ ಮಾರ್ಗದಲ್ಲಿ ಬರುವ ಪವಾಡ ಬಸವೇಶ್ವರ ಆಶ್ರಮದಲ್ಲಿ ಆಯೋಜಿಸಲಾಗಿದೆ.ಆಶ್ರಮದ ಚನ್ನಮಲ್ಲಪ್ಪ ಶರಣರು ಉದ್ಘಾಟಿಸಲಿದ್ದು, ಅಧ್ಯಕ್ಷ ಬಸವರಾಜ ಮೋಟಗಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ. ಪ್ರಾಪಂಚಿಕ ಬದುಕಿಗೊಂದು ಭಗವದ್ಗೀತೆ ಎನ್ನುವ ವಿಷಯದ ಮೇಲೆ ತಾಳಿಕೋಟೆಯ ಬಾಲ ಭಾರತಿ ವಿದ್ಯಾ ಮಂದಿರದ ಕಾರ್ಯದರ್ಶಿಗಳಾದ ಚಿದಂಬರ ಕರಮರಕರ ಉಪನ್ಯಾಸ ನೀಡಲಿದ್ದಾರೆ.ಮುಖ್ಯ ಅತಿಥಿಗಳಾಗಿ ಚೇತನ ಹಿ.ಪ್ರಾ.ಶಾಲೆಯ ಅಧ್ಯಕ್ಷ ಈರಣ್ಣ ತಳವಾರ, ಕ.ಸಾ.ಪ ನಿಕಟಪೂರ್ವ ಅಧ್ಯಕ್ಷ ಎಮ್.ಬಿ.ನಾವದಗಿ, ಪುರಸಭೆ ಸದಸ್ಯೆ ಸೋನಾಬಾಯಿ ನಾಯಕ ಹಾಗೂ ಜ್ಞಾನ ಭಾರತಿ ವಿದ್ಯಾ ಮಂದಿರದ ಅಧ್ಯಕ್ಷ ಬಿ.ಪಿ.ಕುಲಕರ್ಣಿ, ಜಿಲ್ಲಾ ಅಧ್ಯಕ್ಷ ಪ್ರಭು ಎಸ್.ಕಡಿ, ಜಿಲ್ಲಾ…

Read More

ವರದಿ ಪರಿಣಾಮ: ಸ್ವಯಂ ಪ್ರೇರಿತ ಪ್ರಕರಣ ದಾಖಲು ಕ್ರಮಕ್ಕೆ ಮುಂದಾದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುದ್ದೇಬಿಹಾಳ: ಇತ್ತೀಚೆಗೆ ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಿಸದೇ ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಈ ಕುರಿತು ’ಉದಯರಶ್ಮಿ’ ಪತ್ರಿಕೆಯಲ್ಲಿ “ಅವ್ಯವಸ್ಥೆಯ ಆಗರವಾದ ಪ್ರತಿಭಾ ಕಾರಂಜಿ :ಆಕ್ರೋಶ” ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಕಟಿಸಿತ್ತು.ವಿದ್ಯಾರ್ಥಿಗಳಿಗೆ ಸರಿಯಾದ ಟೆಂಟ್ ವ್ಯವಸ್ಥೆ ಇಲ್ಲದೇ ಮಕ್ಕಳು ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದಿರುವ, ಸಮರ್ಪಕವಾದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಬಗ್ಗೆ, ಸಮರ್ಪಕ ಶೌಚಾಲಯಗಳಿಲ್ಲದ ಬಗೆಗಿನ ಅಂಶಗಳನ್ನು ವಿವರಿಸಿ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು.ವರದಿ ಗಮನಿಸಿದ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದೆ. ಅಲ್ಲದೇ ವಿಜಯಪುರದ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸದರಿ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಕಲೆ ಹಾಕಿ…

Read More

ವಿಜಯಪುರದ ರಾಜಗುರು ಫುಡ್ಸ್ ಗೋದಾಮು | ಮೃತ ಕುಟುಂಬಗಳಿಗೆ ರೂ.೨ಲಕ್ಷ ಪರಿಹಾರ | ೫೦ ಕಾರ್ಮಿಕರು ಪ್ರಾಣಾಪಾಯದಿಂದ ಪಾರು ವಿಜಯಪುರ: ತಾಲೂಕಿನ ಅಲಿಯಾಬಾದ ಕೈಗಾರಿಕಾ ಪ್ರದೇಶದಲ್ಲಿ ರಾಜಗುರು ಫುಡ್ಸ್ ವ್ಯಾಪಾರ ಕೇಂದ್ರದ ಮೆಕ್ಕೆಜೋಳ ಸಂಸ್ಕರಣ ಘಟಕದ ಗೋದಾಮಿನಲ್ಲಿ ಸೋಮವಾರ ಸಂಜೆ ನಡೆದ ದುರಂತದಲ್ಲಿ ಒಟ್ಟು ಏಳು ಜನ ಕಾರ್ಮಿಕರು ದುರ್ಮರಣಕ್ಕೀಡಾಗಿದ್ದಾರೆ. ದುರಂತದಲ್ಲಿ ಸಾವಿಗೀಡಾದ ಕಾರ್ಮಿಕರೆಲ್ಲರೂ ಬೀಹಾರ ಮೂಲದವರಾಗಿದ್ದು ದುರ್ಘಟನೆ ಸಂಭವಿಸಿದ ಬಳಿಕ ಉರುಳಿಬಿದ್ದ ನೂರಾರು ಮೆಕ್ಕೆಜೋಳದ ಚೀಲಗಳಡಿ ಈ ಕಾರ್ಮಿಕರು ಸಿಲುಕಿಕೊಂಡ ಕಾರಣ ಅವರೆಲ್ಲ ಉಸಿರು ಚೆಲ್ಲಿದ್ದಾರೆ.*ಘಟನೆಯ ವಿವರ*ಈ ಸಂಸ್ಕರಣ ಘಟಕದ ಗೋದಾಮಿನಲ್ಲಿ ೪೦ ರಿಂದ ೫೦ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಈ ಕೇಂದ್ರದಲ್ಲಿ ಅವಶ್ಯಕತೆಯನುಸಾರ ೧೦೦ ರಿಂದ ೧೫೦ ಕಾರ್ಮಿಕರನ್ನು ಗುತ್ತಿಗೆ ಪಡೆಯಲಾಗುತ್ತದೆ. ಡಿ೪ರಂದು ಸಂಜೆ ೫ ಗಂಟೆಗೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಮೆಕ್ಕೆಜೋಳ ತುಂಬಿರುವ ಒಂದು ಟ್ಯಾಂಕ್ ಸರಣಿ ಕಂಬ ಮುರಿದು ಬಿದ್ದಿದ್ದು, ಕಾರ್ಮಿಕರು ಭಯಭೀತರಾಗಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಅಂದಾಜು ೫೦ ಕಾರ್ಮಿಕರು ಪ್ರಾಣಾಪಾಯದಿಂದ…

Read More

ಕೊಲ್ಹಾರ: ಹುಬ್ಬಳ್ಳಿ-ಹುಮನಾಬಾದ ರಾಷ್ಟೀಯ ಹೆದ್ದಾರಿ ೨೧೮ರ ರಸ್ತೆಯ ಮೂಲಕ ಹಲವಾರು ವಾಹನಗಳ ಸಂಚಾರ ದಟ್ಟಣೆ ದಿನನಿತ್ಯ ಅಧಿಕವಾಗುತ್ತಾ ಸಾಗುತ್ತಿದೆ.ಈ ರಸ್ತೆಯ ಮಧ್ಯಭಾಗದಲ್ಲಿ ಕೊಲ್ಹಾರ ಎಂಬ ತಾಲೂಕು ಕೇಂದ್ರದ ಪಟ್ಟಣ ಪ್ರದೇಶವನ್ನು ಒಳಪ್ರವೇಶಿಸುವಾಗ ಅಥವಾ ಊರ ಜನರು ಹೆದ್ದಾರಿಯನ್ನು ಕೂಡಿಕೊಳ್ಳುವಾಗ ತಮ್ಮ ಪ್ರಾಣವನ್ನು ಕೈಯಲ್ಲಿಯೇ ಹಿಡಿದುಕೊಂಡು ಸಾಗುವ ಜನರಿಗೆ ನಿತ್ಯ ನರಕಯಾತನೆಯಾಗಿದೆ.ಹುಬ್ಬಳ್ಳಿ ಮೂಲಕ ಬರುವಾಗ ಯುಕೆಪಿಯಿಂದ ಎರಡು ಕಿ.ಮೀ ಬಂದರೆ ವಿಜಯಪೂರದಿಂದ ಬರುವಾಗ ಉಪ್ಪಲದಿನ್ನಿ ಕ್ರಾಸ್‌ನಿಂದ ೧.೫ ಕಿ.ಮೀ ಬಂದರೆ ಕೊಲ್ಹಾರ ಪುರ ಪ್ರವೇಶದ ರಹದಾರಿ ಸಿಗುತ್ತದೆ.ಈ ದಾರಿಯ ಮೂಲಕ ಒಳಗಡೆ ಸಂಚಾರ ಮಾಡುವಾಗ ಜಾಗೃತೆಯಿಂದ ಮಾಡುವಂತಹ ಅನಿವಾರ್ಯ ಪರಿಸ್ಥಿತಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ನಿರ್ಮಿಸಿದ್ದಾರೆ. ಅಲ್ಲದೇ ಜನರ ಜೀವದ ಜೊತೆ ಚೆಲ್ಲಾಟವಾಡುವಂಥಹ ಪರಿಸ್ಥಿತಿ ತಂದೊಡ್ಡಿದ್ದಾರೆ ಇದಕ್ಕೆ ಪರಿಹಾರ ಯಾವಾಗ ಎನ್ನುವ ಯಕ್ಷ ಪ್ರಶ್ನೆ ಇಲ್ಲಿನ ನಾಗರಿಕರಲ್ಲಿ ಮೂಡತೊಡಗಿದೆ.ಈ ಹಿಂದೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಈ ರಸ್ತೆಯ ಹೆದ್ದಾರಿ ನಿರ್ಮಾಣದ ಗುತ್ತಿಗೆದಾರ ರಾಜ್‌ಗ್ರುಪ್ ಕಂಪನಿಯ ವ್ಯವಸ್ಥಾಪಕ ಮಂಡಳಿಯವರು ಸ್ಥಳಿಯ ಯುವಕರು ಹೋರಾಟ…

Read More

ಸಿಂದಗಿ-ಶಹಾಪೂರ ಮುಖ್ಶ ರಸ್ತೆ ಸಂಚಾರಕ್ಕೆ ತಡೆ | ಸಮಪ೯ಕ ವ್ಶವಸ್ಥೆ ಕಲ್ಪಿಸಲು ಆಗ್ರಹ ಬ್ರಹ್ಮದೇವನಮಡು: ಗ್ರಾಮೀಣ ಭಾಗದಲ್ಲಿ ಸಾರಿಗೆ ಸಂಸ್ಥೆ ಬಸ್ ಗಳ ವ್ಶವಸ್ಥೆ ಕಲ್ಪಿಸುವ ಜತೆಗೆ ಎಲ್ಲ ಬಸ್ ಗಳ ನಿಲುಗಡೆಗೆ ಆಗ್ರಹಿಸಿ ಸಿಂದಗಿ ತಾಲೂಕು ಸಾಸಾಬಾಳ ಕ್ರಾಸ್ ಬಳಿ ವಿದ್ಶಾಥಿ೯ಗಳು ಹಾಗೂ ಪಾಲಕರು ಮಂಗಳವಾರ ಬೆಳಗ್ಗೆ ಮೂರು ಗಂಟೆ ಕಾಲ ಸಿಂದಗಿ – ಶಹಾಪೂರ ಮುಖ್ಶ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.ಈ ವೇಳೆ ಯುವ ಮುಖಂಡ ಮಲ್ಲನಗೌಡ ಬಿರಾದಾರ, ಶಿವು ಕುದರಿ ಮಾತನಾಡಿ,ಶಾಲೆ- ಕಾಲೇಜಿಗೆ ಸಿಂದಗಿಗೆ ತೆರಳಲು ಬಸ್ ಇಲ್ಲದೆ ಪರದಾಡುವಂತಾಗಿದೆ.ಈ ಬಗ್ಗೆ ಸಾರಿಗೆ ಅಧಿಕಾರಿಗಳಿಗೆ ಹಲವು ಭಾರಿ ಪ್ರತಿಭಟಿಸಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಶಕ್ತಪಡಿಸಿದರು.ಈ ಭಾಗದಲ್ಲಿ ಸಂಚರಿಸುವ ಬಸ್ ಗಳ ಸಂಖ್ಶೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.ಸ್ಥಳಕ್ಕೆ ಭೇಟಿ ನೀಡಿದ ಘಟಕದ ವ್ಶವಸ್ಥಾಪಕ ರೇವಣಸಿದ್ದ ಖೈನೂರ ಮಾತನಾಡಿ, ಶಾಲೆ – ಕಾಲೇಜು ಅವಧಿಯಲ್ಲಿ ಬಸ್ ಸೌಲಭ್ಶ ಕಲ್ಪಿಸುವ ಭರವಸೆ ನೀಡಿದರು. ಅಲ್ಲದೇ ವೇಗದೂತ ಬಸ್…

Read More

ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆ | ಜಮೀನು ಕಳೆದುಕೊಂಡ ರೈತರಿಗಿಲ್ಲ ಪರಿಹಾರ ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ನಡೆದ ತುಬಚಿ- ಬಬಲೇಶ್ವರ ಏತ ನೀರಾವರಿಯು ೨೦೧೯-೨೦೨೦ ನೇ ಸಾಲಿನಲ್ಲಿ ಕಾಮಗಾರಿ ಮುಗಿದು ಸುಮಾರು ೩-೪ ವರ್ಷಗಳೇ ಕಳೆದರು ಇಲ್ಲಿಯವರೆಗೆ ರೈತರಿಗೆ ಬರಬೇಕಾದ ಪರಿಹಾರ ಇನ್ನು ಬಂದಿಲ್ಲವೆಂದು ಜಿಲ್ಲಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಲಾಯಿತು.ಹೊನವಾಡ ಒಂದೇ ಗ್ರಾಮದಲ್ಲಿ ಸುಮಾರು ೧೦೦೦ ಕ್ಕೂ ಅಧಿಕ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ಬಂದಿರುವುದಿಲ್ಲ, ಅಧಿಕಾರಿಗಳಿಗೆ ಕೇಳಿದರೆ ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ಅಲ್ಲಿ ಹೋಗಿ, ಇಲ್ಲಿ ಹೋಗಿ ಎಂದು ಹಾರಿಕೆ ಉತ್ತರ ನೀಡುತ್ತಿದ್ದಾರೆ, ಗುತ್ತಿಗೆ ಹಿಡಿದವರು ತಮ್ಮ ಕೆಲಸ ಮುಗಿಸುವ ವೇಳೆ ರೈತರೊಂದಿಗೆ ಚೆನ್ನಾಗಿ ಮಾತನಾಡಿ ಈಗ ಕೆಲಸ ಮುಗಿಸಿಕೊಂಡು ಹೋಗಿದ್ದಾರೆ, ಅವರಿಗೆ ಕೇಳಿದರೆ ಅಧಿಕಾರಿಗಳಿಗೆ ಕೇಳಿ ಎಂದು ತಪ್ಪಿಸಿಕೊಳ್ಳುತ್ತಿದ್ದಾರೆ.ಆದ್ದರಿಂದ ಕೂಡಲೇ ಸಂಬಂಧಿಸಿದ ಅಧಿಕಾರಿಗಳನ್ನು ಕರೆದು ಇಲ್ಲಿಯವರೆಗೆ ಕೇವಲ ಭೂ…

Read More

ದೇವರ ಹಿಪ್ಪರಗಿ: ಸಿದ್ದೇಶ್ವರ ಶ್ರೀಗಳ ಆಸೆಯಂತೆ ರೈತರಿಗಾಗಿ ನನ್ನ ಐದು ವರ್ಷದ ಅಧಿಕಾರ ಅವಧಿಯಲ್ಲಿ ಕ್ಷೇತ್ರದ ಸಾವಿರಾರು ಎಕರೆ ನೀರಾವರಿ ಮಾಡುವುದಕ್ಕಾಗಿ ನೂರಾರು ಕೋಟಿ ಅನುದಾನ ತಂದು ನೀರಾವರಿ ಕಾಮಗಾರಿಗಳು ಮಾಡಿರುವುದು ನನಗೆ ತೃಪ್ತಿಯಿದೆ ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಹೇಳಿದರು. ಮತಕ್ಷೇತ್ರದ ಚಿಕ್ಕರೋಗಿ ಗ್ರಾಮದಲ್ಲಿ ಮಂಗಳವಾರದಂದು ಗಂಗಾ ಪೂಜೆ ಹಾಗೂ ಬ್ರಿಜ್, ಕಮ್ ಬಾಂದಾರು ಲೋಕಾರ್ಪಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರಾಜಕಾರಣಿಗಳಿಗೆ ಅಧಿಕಾರ ಶಾಶ್ವತ ಅಲ್ಲ, ಅಧಿಕಾರ ಅವಧಿಯಲ್ಲಿ ಮಾಡಿರುವ ಕಾಮಗಾರಿಗಳು ಕ್ಷೇತ್ರದ ಜನಸಾಮಾನ್ಯರಿಗೆ ಸಮರ್ಪಕವಾಗಿ  ತಲುಪುವಂತಾಗಬೇಕು. ಇನ್ನು ಕೆಲವು ನೀರಾವರಿ ಕಾಮಗಾರಿಗಳು ಪೂರ್ಣಗೊಳ್ಳಬೇಕಾದರೆ ಈಗಿನ ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಇನ್ನಷ್ಟು ಅನುದಾನ ಬಿಡುಗಡೆಗೊಳಿಸಿ ಇನ್ನುಳಿದ ಕಾಮಗಾರಿಗಳು ಪೂರ್ಣಗೊಳಿಸಿ ಕ್ಷೇತ್ರದ ರೈತರಿಗೆ ಅನುಕೂಲ ಮಾಡಿಕೊಡಬೇಕು. ಅದಕ್ಕಾಗಿ ನನ್ನ ಸಲಹೆ, ಸಹಕಾರ ಈಗಿನ ಶಾಸಕರಿಗೆ ಕೊಡುತ್ತೇನೆ. ನನ್ನ ಅಧಿಕಾರ ಅವಧಿಯಲ್ಲಿ ಆದ ಕಾಮಗಾರಿ ಈಗ ನನ್ನಿಂದಲೇ ಲೋಕಾರ್ಪಣೆ ಮಾಡಿಸಿ ನನಗೆ ಚಿಕ್ಕರೂಗಿ ಗ್ರಾಮದ ರೈತರಿಗೆ ನಾನು ಚಿರಋಣಿಯಾಗಿರುತ್ತೇನೆ. ಕ್ಷೇತ್ರದ ಜನರ…

Read More

ಮಿನಿ ವಿಧಾನಸೌಧ, ಬಸ್ ಡಿಪೋ, ವಿದ್ಯುತ್ ಬಿಲ್ ಕೌಂಟರ್, ರೈತ ಸಂಪರ್ಕ ಕೇಂದ್ರ ಮತ್ತು ಕೆರೆ ನಿರ್ಮಿಸಲು ಗ್ರಾಮಸ್ಥರ ಆಗ್ರಹ ಕಲಕೇರಿ: ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಕಲಕೇರಿ ಗ್ರಾಮವನ್ನು ಹೋಬಳಿಯನ್ನಾಗಿಸುವ ಸಲುವಾಗಿ ೨೦೦೩ ರಿಂದಲೂ ಹೋರಾಟ ಮಾಡುತ್ತಾ ಬಂದಿದ್ದು ಯಾರೂ ಈ ಕಡೆ ಗಮನ ಹರಿಸುತ್ತಿಲ್ಲ. ಈಗಲಾದರೂ ಕಲಕೇರಿಯನ್ನು ಹೋಬಳಿ ಎಂದು ಘೋಷಿಸಿ ಮೂಲ ಸೌಲಭ್ಯಗಳನ್ನು ಒದಗಿಸಿ ರೈತರು, ಕೂಲಿಕಾರ್ಮಿಕರು, ಬಡವರು ಮತ್ತು ಸಾರ್ವಜನಿಕರ ಸಮಸ್ಯೆಯನ್ನು ನಿವಾರಿಸಲು ಮುಂದಾಗಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಗ್ರಾಮದ ಮುಖಂಡರಾದ ಡಾ.ಈರಣ್ಣ ಗುಮಶೆಟ್ಟಿ, ಯಮನೂರಿ ಕುಲಕರ್ಣಿ ಸೇರಿದಂತೆ ಅನೇಕ ಮುಖಂಡರು ಆಗ್ರಹಿಸಿದರು.ಗ್ರಾಮದ ಮುಖಂಡರು ಮತ್ತು ಪ್ರಗತಿಪರ ಚಿಂತಕರು ಕಲಕೇರಿಯನ್ನು ಹೋಬಳಿ ಮಾಡುವಂತೆ ಆಗ್ರಹಿಸಿ ಪ್ರವಾಸಿ ಮಂದಿರದಲ್ಲಿ ಕರೆಯಲಾದ ಪತ್ರಿಕಾ ಸಭೆಯಲ್ಲಿ ಅವರು ಮಾತನಾಡಿದರು.ಮುಖಂಡರಾದ ಯಮನೂರಿ ಕುಲಕರ್ಣಿಯವರು ಮಾತನಾಡಿ, ಅದಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಯನ್ನು ಚರ್ಚಿಸಲು ಎರಡು ದಿನಗಳನ್ನು ಮೀಸಲಿಟ್ಟಿದ್ದು, ಈ ನಿಟ್ಟಿನಲ್ಲಿ ನಾವು ಆಗ್ರಹಪಡಿಸುವುದೇನೆಂದರೆ ದಯವಿಟ್ಟು ಕಲಕೇರಿ ಗ್ರಾಮವನ್ನು ಹೋಬಳಿ ಮಾಡಿ…

Read More

೩ ಕೃಷಿ ಕಾಯ್ದೆ, ಎ.ಪಿ.ಎಂ.ಸಿ ಕಾಯ್ದೆ & ಜಾನುವಾರು ಹತ್ಯೆ ನಿಷೇಧ ಕಾಯ್ದೆ ಹಿಂಪಡೆಗೆ ರೈತಸಂಘ ಆಗ್ರಹ ವಿಜಯಪುರ: ರಾಜ್ಯ ಹಾಗೂ ಜಿಲ್ಲೆಯ ರೈತರ ಜ್ವಲಂತ ಸಮಸ್ಯೆಗಳನ್ನು ಹಿಂಪಡೆಯುವ ಹಾಗೂ ಬಗೆಹರಿಸುವಂತೆ ಆಗ್ರಹಿಸಿ ಡಿಸೆಂಬರ್ ೭ರಂದು ಸುವರ್ಣ ಸೌಧ ಮುತ್ತಿಗೆ ಹಾಕಿ ವಿವಿಧ ಬೇಡಿಕೆಗಳನ್ನು ಈಡೇರಿಸುವವರೆಗೆ ಧರಣಿ ಮಾಡಲಾಗುವುದು, ಜಿಲ್ಲೆಯಿಂದ ೩೦೦೦ಕ್ಕಿಂತಲೂ ಹೆಚ್ಚು ರೈತರು ರಾಜ್ಯಾಧ್ಯಕ್ಷರಾದ ಚುನಪ್ಪಾ ಪೂಜೇರಿ ಅವರ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು ೨೦೦೦೦ ಕ್ಕೂ ಹೆಚ್ಚು ರೈತರು ಹೋರಾಟದಲ್ಲಿ ಪಾಲ್ಗೊಳಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ರಾಹುಲ ಕುಬಕಡ್ಡಿ ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದರು.ರೈತರಿಗೆ ಬರಗಾಲ ಪರಿಹಾರ ಸೇರಿದಂತೆ ವಿವಿಧ ಜ್ವಲಂತ ಸಮಸ್ಯೆಗಳನ್ನು ಬಗೆರಿಸಬೇಕು, ಈ ನಿಟ್ಟಿನಲ್ಲಿ ಬೆಳಗಾವಿ ಚಲೋ ಕರೆ ಕೊಡಲಾಗಿದೆ, ಕೂಡಲೇ ಸರಕಾರ ನೆಪ ಮಾತ್ರಕ್ಕೆ ಉತ್ತರ ಕರ್ನಾಟಕದಲ್ಲಿ ೧೦ ದಿನಗಳ ಕಾಲ ಪ್ರವಾಸಕ್ಕೆ ಬಂದ ಹಾಗೆ ಬಂದು ಹೋಗುವ ನೆಪ ಮಾತ್ರದ ಅಧಿವೇಶನ…

Read More

ಕ್ಲಾಸಿಕ್ ಸ್ಟಡಿ ಸರ್ಕಲ್ ನಿರ್ದೇಶಕ ವಿನೋದ ಬಿರಾದಾರ ಅಭಿಮತ ಇಂಡಿ: ಅವಕಾಶಗಳು ಎಲ್ಲರಿಗೂ ಸಮನಾಗಿದ್ದು, ಅದನ್ನು ಸರಿಯಾದ ಹಂತದಲ್ಲಿ ಉಪಯೋಗಿಸಿಕೊಳ್ಳುವವನು ಯಶಸ್ವಿಯಾಗುತ್ತಾನೆ ಎಂದು ಕ್ಲಾಸಿಕ್ ಸ್ಟಡಿ ಸರ್ಕಲ್ ನಿರ್ದೇಶಕ ವಿನೋದ ಬಿರಾದಾರ ಹೇಳಿದರು. ಹಾಗೂ ಕೆಎಎಸ್, ಪಿಎಸ್‌ಐ ಗೆ ಯಾವ ರೀತಿ ತಯಾರಿ ಮತ್ತು ಅದಕ್ಕೆ ಸಂಬಂಧ ಪಟ್ಟಿರುವ ಪಠ್ಯಕ್ರಮದ ಬಗ್ಗೆ ಚರ್ಚಿಸಿದರಲ್ಲದೇ, ಸ್ಪರ್ಧಾತ್ಮಕ ಪರೀಕ್ಷೆಯ ಮಾಹಿತಿಯನ್ನು ತಿಳಿಸಿಕೊಟ್ಟರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್, ಐಕ್ಯೂಎಸಿ ಘಟಕ ಮತ್ತು ಕ್ಲಾಸಿಕ್ ಸ್ಟಡಿ ಸರ್ಕಲ್ ಸಹಯೋದಲ್ಲಿ ಹಮ್ಮಿಕೊಂಡ ಒಂದು ದಿನದ ಉಚಿತ ಸ್ಪರ್ದಾತ್ಮಕ ಪರೀಕ್ಷೆಗಳ ಕಾರ್ಯಗಾರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಉದ್ಯೋಗ ಪಡೆಯಬಹುದಾದ ಸಂಗತಿಗಳನ್ನು ಹೇಳಿದ ಅವರು ಇಂದಿನ ವಿದ್ಯಾರ್ಥಿಗಳಲ್ಲಿ ನಿರಂತರ ಓದಿನ ಮಹತ್ವದ ಕುರಿತಾಗಿ ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಪ್ರೊ. ಆರ್.ಎಚ್.ರಮೇಶ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವುದೇ ಪರೀಕ್ಷೆಗಳನ್ನು ಜಯಿಸಲು ಸಹಾಯಕಾರಿಯಾಗಿವೆ. ಸ್ಪರ್ಧಾತ್ಮ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಲೇಜಿನ ಹೆಚ್ಚು ಹೆಚ್ಚು…

Read More