Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕೊಲ್ಹಾರ: ದೇಶದಲ್ಲಿ ನಡೆಯುವ ಅನೇಕ ಚುನಾವಣೆಗಳಲ್ಲಿ ಮತದಾರ ಯಾವ ರೀತಿ ತೀರ್ಪು ಕೊಡುತ್ತಾರೆ ಎನ್ನುವದನ್ನು ಎಂಥಹ ರಾಜಕೀಯ ವಿಶ್ಲೇಷಕರಿಗೂ ತಜ್ಞರಿಗೂ ನೇತಾರರಿಗೂ ಸಿಗದ ಆಶಾಭಾವನೆಯಾಗಿದೆ ಎಂದು ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಪಟ್ಟಣದ ಅಗಶಿಯ ಹತ್ತಿರ ಮೂರು ರಾಜ್ಯಗಳಲ್ಲಿ ಭಾರತೀಯ ಜನತಾ ಪಕ್ಷವು ಸಂಪೂರ್ಣ ಬಹುಮತದೊಂದಿಗೆ ಅಧಿಕಾರದ ಚುಕ್ಕಾನೆ ಹಿಡಿಯಲು ಕಾರಣೀಕರ್ತರಾದ ಮತದಾರ ಬಂಧುಗಳಿಗೆ ಕೃತಜ್ಞತೆ ಸಲ್ಲಿಸುವ ಹಾಗೂ ವಿಜಯೋತ್ಸವ ಸಮಾರಂಭದಲ್ಲಿ ಜನತೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.ಕಾರ್ಯಕರ್ತರು ಪರಸ್ಪರ ಸಿಹಿ ಸವಿಯುವ ಮೂಲಕ ಜನತೆಗೆ ವಿತರಣೆ ಮಾಡಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ದೇಶದ ರಾಜಕಾರಣದಲ್ಲಿ ಸ್ವಚ್ಚಂದ ರಾಜಕೀಯ ವ್ಯಕ್ತಿಗಳಾಗಿ ಮನೆ ಮಠ ಎನ್ನದೇ ಭಾರತೀಯರ ಅಭಿವೃದ್ದಿಗಾಗಿ ಸದಾ ಶ್ರಮಿಸುತ್ತಿರುವ ವಿಶ್ವದ ಭೂಪಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಉತ್ತುಂಗದ ಶಿಖರಕ್ಕೆ ಕೊಂಡೊಯ್ಯುತ್ತಿರುವ ಮಹಾನ ನಾಯಕ ನರೇಂದ್ರ ಮೋದಿಯವರ ನಾಯಕತ್ವ ಮುಂದಿನ ಲೋಕಸಭಾ ಚುಣಾವಣೆಯಲ್ಲಿಯೂ ಪ್ರಜ್ವಲಿಸುವ ಆಶಾಭಾವನೆಯನ್ನು ಈ ಚುನಾವಣೆ ತೀರ್ಪು ದಿಕ್ಸೂಚಿಯಾಗಿದೆ ಎಂದು ಎಸ್.ಕೆ.ಬೆಳ್ಳುಬ್ಬಿ ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡ ಟಿ.ಟಿ.ಹಗೇದಾಳ, ಚಂದ್ರಶೇಖರಯ್ಯ ಗಣಕುಮಾರ, ವಿನೀತಕುಮಾರ…
ಕೊಲ್ಹಾರ: ತಾಲ್ಲೂಕು ಗಾಣಿಗ ಸಮಾಜ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ೨೦೨೩-೨೪ ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಯಲ್ಲಿ ಶೇ ೯೦% ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ೧೭-೧೨-೨೦೨೩ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ .ಗಾಣಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಾಲಯದಿಂದ ಅರ್ಜಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು ಎಂದು ತಾಲೂಕು ಗಾಣಿಗ ಸಮಾಜದ ಅಧ್ಯಕ್ಷ ಪುಂಡಲೀಕ ಬಸರಕೋಡ , ಕಾರ್ಯದರ್ಶಿ ಬಸವರಾಜ ನಿಂ ತುಪ್ಪದ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.ಬಸವರಾಜ ತುಪ್ಪದ-೯೬೮೬೦೪೭೪೪೩, ಪುಂಡಲೀಕ ಬಸರಕೋಡ-೯೧೧೦೮೩೧೯೫೪, ಅಶೋಕ ಗಿಡ್ಡಪ್ಪಗೋಳ-೯೯೮೬೩೩೦೯೨೪, ಸಂಗಪ್ಪ ಹಂಡಿ-೮೩೧೦೯೨೫೨೮೦
ಬಸವನಬಾಗೇವಾಡಿ: ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ೨೦ ನೇ ನಗೆ ಸಮ್ಮೇಳನದಲ್ಲಿ ಹಿಂದಿನ-ಇಂದಿನ-ಮುಂದಿನ ನಗುವಿನ ಕುರಿತು ಹೆಚ್ಚು ಚರ್ಚೆಯಾಗದೇ ಸಂಘಟಕರು ಸನ್ಮಾನಕ್ಕೆ ಹೆಚ್ಚು ಒತ್ತು ಕೊಟ್ಟಿರುವುದು ನಮಗೆ ನಿರಾಶೆ ಉಂಟು ಮಾಡಿದೆ ಎಂದು ಬೆಂಗಳೂರಿನಿಂದ ಆಗಮಿಸಿದ್ದ ಹಿರಿಯ ಜೀವಿ, ಸಮ್ಮೇಳನದ ಪ್ರತಿನಿಧಿ, ನಿವೃತ್ತ ಖಾದಿಗ್ರಾಮೋದ್ಯೋಗ ನೌಕರ ಸುರೇಶ ಕಲಘಟ್ಟಗಿ ಹೇಳಿದರು.ಅವರು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಗೆಕೂಟ ೧೯೯೮ ರಲ್ಲಿ ಸ್ಥಾಪನೆಯಾದಗಿನಿಂದಲೂ ನಾನು ನಗೆಕೂಟದ ಸದಸ್ಯನಾಗಿದ್ದೇನೆ. ರಾಜ್ಯದ ವಿವಿಧೆಡೆಗಳಲ್ಲಿ ಪ್ರತಿ ವರ್ಷ ನಡೆಯುವ ನಗೆ ಸಮ್ಮೇಳನಕ್ಕೆ ನಿರಂತರವಾಗಿ ಹೋಗುತ್ತಿದ್ದೇನೆ. ಬಸವೇಶ್ವರ ಜನ್ಮಸ್ಥಳದಲ್ಲಿ ನಡೆಯುವ ಈ ರಾಜ್ಯ ಸಮ್ಮೇಳನಕ್ಕೆ ಬರುವ ಮೂಲಕ ಬಸವ ಜನ್ಮಸ್ಥಳ ನೋಡುವ ಜೊತೆಗೆ ನಗೆ ಕುರಿತ ಚಿಂತನ-ಮಂಥನದಲ್ಲಿ ಭಾಗವಹಿಸಲು ಉತ್ಸಾಹದಿಂದ ಬಂದಿದ್ದೆ. ಈ ಸಮ್ಮೇಳನದಲ್ಲಿ ಶೇ. ೩೦ ರಷ್ಟು ಮಾತ್ರ ನಗೆಗೆ ಒತ್ತು ನೀಡಲಾಗಿತ್ತು. ನಾನು ಮೂಲತಃ ಧಾರವಾಡದವನು. ನಾನು ೬೦ ವರ್ಷದಿಂದ ಬೆಂಗಳೂರಿನಲ್ಲಿದ್ದೇನೆ. ರಾಜ್ಯದಲ್ಲಿ ಸು. ೨೦೦ ನಗೆಕೂಟಗಳಿವೆ.…
ಬಸವನಬಾಗೇವಾಡಿ: ನಾವು ಕಳೆದ ೨೦ ವರ್ಷಗಳಿಂದ ರಾಜ್ಯದ ವಿವಿಧೆಡೆ ನಗೆ ಸಮ್ಮೇಳನ ಮಾಡುತ್ತಾ ಬರುತ್ತಿದ್ದೇವೆ. ಈಚೆಗೆ ನಗೆ ಸಮ್ಮೇಳನ ಆಯೋಜನೆ ಮಾಡಲು ಯಾವ ಜಿಲ್ಲೆಯವರು ಅಷ್ಟಾಗಿ ಮುಂದೆ ಬರುತ್ತಿಲ್ಲ. ಇದರಿಂದಾಗಿ ಮುಂದಿನ ರಾಜ್ಯ ಬಜೆಟ್ನಲ್ಲಿ ನಗೆ ಸಮ್ಮೇಳನಕ್ಕೆ ರಾಜ್ಯ ಸರ್ಕಾರದಿಂದ ಕನಿಷ್ಠ ಒಂದು ಕೋಟಿ ರೂಪಾಯಿಯನ್ನು ಅನುದಾನ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ನಗೆ ಭಾಗ್ಯವನ್ನು ನೀಡುವಂತೆ ಮನವಿ ಮಾಡಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ನಗೆಯೋಗ ಕೂಟಗಳ ಒಕ್ಕೂಟದ ಅಧ್ಯಕ್ಷ ಪನ್ನಗ ಶಯನಂ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ಕರ್ನಾಟಕ ರಾಜ್ಯ ನಗೆಯೋಗ ಕೂಟಗಳ ಒಕ್ಕೂಟ ಹಾಗೂ ಸ್ಥಳೀಯ ಬಸವೇಶ್ವರ ನಗೆಯೋಗ ಕೂಟದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ೨೦ ನೇ ನಗೆ ಸಮ್ಮೇಳನದ ಎರಡನೇ ದಿನ ಭಾನುವಾರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರಂಭದಲ್ಲಿ ನಗೆ ಸಮ್ಮೇಳನ ಆಯೋಜನೆ ಮಾಡುವಾಗ ಸಾಕಷ್ಟು ಪ್ರತಿನಿಧಿಗಳು ಶುಲ್ಕ ತುಂಬಿ ಬರುತ್ತಿದ್ದರು. ಈಚೆಗೆ ಸಮ್ಮೇಳನ ಆಯೋಜನೆ ಮಾಡಲು ಹೆಚ್ಚಾಗಿ ಮುಂದೆ ಬರುತ್ತಿಲ್ಲ. ರಾಜ್ಯ…
ಸಿಂದಗಿ: ಕ್ಷೇತ್ರದ ಅಭಿವೃದ್ಧಿ, ನೀರಾವರಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ನಾನು ಯಾವತ್ತೂ ರಾಜಕಾರಣ ಮಾಡುವುದಿಲ್ಲ. ನಾನೊಬ್ಬ ಪಕ್ಷಾತೀತ ಶಾಸಕ. ಕ್ಷೇತ್ರದ ಅಭಿವೃದ್ಧಿ ಹಂತ ಹಂತವಾಗಿ ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ರವಿವಾರದಂದು ತಾಲೂಕಿನ ಸಾಸಾಬಾಳ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ಸಿಂದಗಿ ಹಮ್ಮಿಕೊಂಡಿರುವ ಸಾಸಬಾಳ ಎಲ್. ಟಿ ಗ್ರಾಮದಲ್ಲಿ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಅಂದಾಜು ರೂ. ೪೨ ಲಕ್ಷ ರೂಪಾಯಿಗಳಲ್ಲಿ ಮನೆ ಮನೆಗೆ ನೀರು ಕಾಮಗಾರಿಯ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು,ಈ ಕ್ಷೇತ್ರದ ಜನತೆಯ ಪರವಾಗಿ ನಾನು ಇದ್ದೇನೆ. ಚುನಾವಣೆ ಮಾಡಿದವರು ನನ್ನವರು, ಮಾಡದಿದ್ದವರೂ ನನ್ನವರು, ನಾನು ಈ ಕ್ಷೇತ್ರದ ಪ್ರತಿನಿಧಿಯಾಗಿ ಎಲ್ಲರ ಏಳಿಗೆಗೆ ಸದಾ ಸಿದ್ದನಾಗಿದ್ದೇನೆ. ತಮ್ಮ ನೂರೆಂಟು ಕಾರ್ಯಗಳಿಗೆ ನನ್ನನ್ನ ಮುಕ್ತ ಭಾವದಿಂದ ಸಂಪರ್ಕಿಸಿ ಎಲ್ಲರ ಸಮಸ್ಯೆಗಳಿಗೂ ನಾನು ಸ್ಪಂದಿಸುವ ಸಾಮಾನ್ಯ ಶಾಸಕನಿದ್ದಂತೆ. ಮೂಲಭೂತ ಸೌಕರ್ಯಗಳಲ್ಲಿ ಕುಡಿಯುವ ನೀರು ಅತ್ಯಂತ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಗ್ರಾಮದ ಪ್ರತಿ…
ಸಿಂದಗಿ: ಪಟ್ಟಣದ ದೇವತೆ ನೀಲಂಗಾದೇವಿಯ ಪಲ್ಲಕ್ಕಿಯು ದೇವಸ್ಥಾನದಿಂದ ಹೊರ ಬರುತ್ತಿದ್ದಂತೆ ಸಾವಿರಾರು ಭಕ್ತರು ದಿಂಡರಕಿಗೈದರು. ಪಲ್ಲಕ್ಕಿ ಮಹೋತ್ಸವ ದೇವಸ್ಥಾನದಿಂದ ಹಳೆ ಬಜಾರ್ ರಸ್ತೆಯ ಮಾರ್ಗವಾಗಿ ಸ್ಥಳೀಯ ಶ್ರೀ ಬಸವಣ್ಣ ದೇವರ ಗುಡಿಗೆ ಸಾಗಿ ಬಂತು. ಮಾರ್ಗ ಮಧ್ಯದಲ್ಲಿ ಅನೇಕ ಮುತ್ತೈದರು, ಭಕ್ತರು ಆರತಿ ಬೆಳಗಿ ಆಶೀರ್ವಾದ ಪಡೆದುಕೊಂಡರು.ಪಟ್ಟಣದ ಆರಾಧ್ಯ ದೈವ ತಾಯಿ ನೀಲಗಂಗಾದೇವಿ ಜಾತ್ರೆಯು ರವಿವಾರ ಅತ್ಯಂತ ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಜರುಗಿತು.ಗೌರಿ ಹುಣ್ಣಿಮೆಯಿಂದ ಪ್ರಾರಂಭವಾದ ನೂರಾರು ಭಕ್ತರ ನಿರಹಾರ ಸೇವೆ ಪಲ್ಲಕ್ಕಿ ದೇವಸ್ಥಾನಕ್ಕೆ ಮರಳಿ ಬಂದ ನಂತರ ಮುಕ್ತಾಯಗೊಳಿಸಿದರು. ಪಲ್ಲಕ್ಕಿಗೆ ಮಾಡಿದ ವಿವಿಧ ಹೂವಿನ ಅಲಂಕಾರ ಭಕ್ತರ ಗಮನ ಸೆಳೆಯಿತು. ಜಾತ್ರೆಯಲ್ಲಿ ಪುರವಂತರ ಸೇವೆ, ನಂದಿಕೋಲು ಸೇವೆ, ಡೊಳ್ಳು ಕುಣಿತ, ಸನಾದಿ, ಮ್ಯೂಸಿಕಲ್ ಬ್ರಾಂಡ್ ಸೇರಿದಂತೆ ವಿವಿಧ ವಾದ್ಯಗಳು ಕಂಡುಬಂದವು.ಜಾತ್ರಾ ನೇತೃತ್ವವನ್ನು ಧರ್ಮದರ್ಶಿ ಸುನೀಲ ಶಿರೂಗೌಡ ದೇವರಮನಿ ವಹಿಸಿದ್ದರು. ಜಾತ್ರಾ ಮೆರವಣಿಗೆಯಲ್ಲಿ ಅಶೋಕಗೌಡ ದೇವರಮನೆ, ಅಶೋಕ ವಾರದ, ನೀಲಪ್ಪಗೌಡ ಬಿರಾದಾರ, ಗುಂಡಪ್ಪ ಪಡ ಗನೂರ, ದುಂಡಪ್ಪ ಸೊನ್ನದ, ಉಮೇಶ ಪಟ್ಟಣಶೆಟ್ಟಿ,…
ವಿವಿಧ ಸಂಘ-ಸಂಸ್ಥೆಗಳ ಸಭೆಯಲ್ಲಿ ಸಚಿವ ಡಾ. ಎಂ.ಬಿ.ಪಾಟೀಲ ಮನವಿ ವಿಜಯಪುರ: ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಅವುಗಳ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ವಿಜಯಪುರದಲ್ಲಿ ಡಿ.೨೪ರಂದು ಹಮ್ಮಿಕೊಂಡ ವೃಕ್ಷೋತ್ಥಾನ ಹೆರಿಟೇಜ್ ರನ್ ಕಾರ್ಯಕ್ರಮವನ್ನು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಾಯ-ಸಹಕಾರದೊಂದಿಗೆ ಯಶಸ್ವಿಯಾಗಿ ಆಯೋಜಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ರವಿವಾರ ವಿವಿಧ ಸಂಘ-ಸಂಸ್ಥೆಗಳೊಂದಿಗೆ ಸಭೆ ನಡೆಸಿದ ಅವರು, ಅರಣ್ಯೀಕರಣ ಅಭಿವೃದ್ಧಿಪಡಿಸುವುದರ ಜೊತೆಗೆ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಹಾಗೂ ಅವುಗಳ ಮಹತ್ವವಹನ್ನು ಸಾರುವ ನಿಟ್ಟಿನಲ್ಲಿ ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ವೃಕ್ಷೋಥಾನ್ ಹೆರಿಟೇಜ್ ರನ್-೨೦೨೩ ಹಮ್ಮಿಕೊಂಡಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಾರ್ವಜನಿಕರ ಸಹಭಾಗಿತ್ಯ ಅಗತ್ಯವಾಗಿದ್ದು, ವಿವಿಧ ಸಂಘ-ಸಂಸ್ಥೆಗಳು ತಮ್ಮ ಸಾಮಾಜಿಕ ಜವಾಬ್ದಾರಿಯಿಂದ ಹೆರಿಟೇಜ್ ರನ್ ಆಯೋಜನೆಗೆ ಕೈ ಜೋಡಿಸಬೇಕು. ಈ ಹೆರಿಟೇಜ್ ರನ್ ಸಿದ್ದೇಶ್ವರ ಶ್ರೀಗಳಿಗೆ ಸಮರ್ಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಈ ಓಟದಲ್ಲಿ ನಾನು ಭಾಗವಹಿಸುತ್ತಿದ್ದು,…
ವಿಜಯಪುರ: ಔರಾದ್ಕರ್ ವರದಿಯನ್ನು ಅನುಷ್ಠಾನಗೊಳಿಸಿ ರಾಜ್ಯದ ಆರಕ್ಷಕರ (ಪೊಲೀಸರ) ಪಿಂಚಣಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಇಂದು ಅಖಂಡ ಕರ್ನಾಟಕ ರೈತ ಸಂಘ ರಾಜ್ಯ ಘಟಕ ಬೆಂಗಳೂರು ವತಿಯಿಂದ ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ ಹಾಗೂ ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ಇವರಿಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ರಾಜ್ಯದ ಆರಕ್ಷಕರ (ಪೊಲೀಸರ) ಹಾಗೂ ಅವರ ಮೇಲಾಧಿಕಾರಿಗಳ ಮಾಸಿಕ ಪಿಂಚಣಿ ಹೆಚ್ಚಿಸಲು ಹಿಂದಿನ ನಿವೃತ್ತ ಪೊಲೀಸ್ ಮಹಾನಿರ್ದೇಶಕರಾಗಿದ್ದ ಔರಾದಕರ್ ವರದಿಯನ್ನು ಅನುಷ್ಠಾನಗೊಳಿಸಿ ರಾಜ್ಯದ ಪೊಲೀಸರಿಗೆ ಹಾಗೂ ಅವರ ಮೇಲಾಧಿಕಾರಿಗಳ ನೆರವಿಗೆ ಧಾವಿಸಬೇಕಿದೆ. ರಾಜ್ಯದ ವಿವಿಧ ಸರಕಾರಿ ನೌಕರಸ್ಥರಿಗೆ ಹಾಗೂ ಪೊಲೀಸ್ ಇಲಾಖೆಯವರ ಪಿಂಚಣಿಗೆ ಹೋಲಿಸಿದರೆ ಅಜಗಜಾಂತರ ವ್ಯತ್ಯಾಸವಿದೆ. ರಾಜ್ಯದ ಪೊಲೀಸ್ ಇಲಾಖೆಯವರಿಗೆ ಸರಕಾರ ಮಲತಾಯಿ ಧೋರಣೆ ಅನುಸರಿಸುತ್ತಿರುವ ರಾಜ್ಯದ ಪೊಲೀಸರು ಹಗಲು-ರಾತ್ರಿ ಎನ್ನದೇ ಮಳೆ,ಗಾಳಿ,ಚಳಿ ಎನ್ನದೇ ತಮ್ಮ ಜೀವದ ಹಂಗು ತೊರೆದು ಜನರನ್ನು ರಕ್ಷೆ ಮಾಡಲು ಮುಂದುಗುತ್ತಾರೆ. ಅಂತವರಿಗೆ…
ಮುದ್ದೇಬಿಹಾಳ: ಮಾಹಿತಿ ಹಕ್ಕು ಅಧಿನಿಯಮದ ಅಡಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಪ್ರಭಾರ ಬಿಇಓ ಯು.ಬಿ.ಧರಿಕಾರ ಸೇರಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನಾಲ್ಕು ಜನರ ಮೇಲೆ ನ್ಯಾಯವಾದಿ ವಿರೇಶ ಹಿರೇಮಠ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.ವಿರೇಶ ಕಳೆದ ದಿನಗಳ ಹಿಂದೆ ಕೆಲವು ಮಾಹಿತಿಗಳನ್ನು ಕೋರಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯಕ್ಕೆ ಮಾಹಿತಿ ಹಕ್ಕು ಅಧಿನಿಯಮ ೨೦೦೫ ರ ಅಡಿ ಅರ್ಜಿ ಸಲ್ಲಿಸಿದ್ದು ಆ ಅರ್ಜಿಗೆ ಕೋರಲಾದ ದಾಖಲೆಗಳು ಇಟ್ಟಿರುವ ಕೊಠಡಿ ಮಳೆಯಿಂದ ಮೇಲ್ಛಾವಣಿ ಶಿಥಿಲಗೊಂದು ಸಾಕಷ್ಟು ಪ್ರಮಾಣದಲ್ಲಿ ಮಳೆ ನೀರು ಸೋರಿಕೆಯಾದ ಕಾರಣ ದಾಖಲೆಗಳು ನಾಶವಾಗಿವೆ ಎಂದು ಲಿಖಿತವಾಗಿ ಹಿಂಬರಹ ನೀಡಿದ್ದು ಇದು ಉದ್ದೇಶ ಪೂರ್ವಕವಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ನಿರ್ಗಮಿತ ಬಿಇಓ ಎಸ್.ಜೆ.ನಾಯಕ, ಪತ್ರಾಂಕಿತ ವ್ಯವಸ್ಥಾಪಕ ಬಿ.ಎಸ್.ಪಾಟೀಲ, ಕೇಸ್ ವರ್ಕರ್ ಸಿದ್ದನಗೌಡ ಪಾಟೀಲ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ-೫೦ರ ಅಂಗವಾಗಿ ನಗರದ ವಿವೇಕನಗರದಲ್ಲಿರುವ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಡಿ.೬ ರಂದು ಚಿಗುರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಚಿಗುರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು.ಸುಮಯ್ಯಾ ಶೇಖ ಅವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ನಾಟ್ಯ ಕಲಾ ಅಕಾಡೆಮಿ ವತಿಯಿಂದ ಸಮೂಹ ನೃತ್ಯ, ಕು.ನಿಜಬಾಯಿ ಹೋಸಾಳಿ ಏಕತಾಪ್ರಾಭಿನಯ, ಕು.ಲಕ್ಷ್ಮೀ ಮುರನಕೇರಿ ಅವರಿಂದ ಜಾನಪದ ಗೀತೆಗಳು ಹಾಗೂ ಕು.ಸಮರ್ಥ ಸಂಕೊಂಡ ಮತ್ತು ಸಂಗಡಿಗರಿಂದ ನಲಿ-ಕಲಿ ನಾಟಕ ಪ್ರದರ್ಶನ ಜರುಗಲಿವೆ.ಅಂದು ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ…
