Author: editor.udayarashmi@gmail.com

ವಿಜಯಪುರ: ೧೧೦/೧೧ ಕೆವಿ ಚಾಂದಕವಟೆ ವಿದ್ಯುತ್ ವಿತರಣಾ ಉಪ ಕೇಂದ್ರದಲ್ಲಿ ಈಗಿರುವ ೧೧೦ ಎಂ.ವಿ.ಎ ಶಕ್ತಿ ಪರಿವರ್ತಕ ಬದಲು ೧೨೦ ಎಂ.ವಿ.ಎ ಶಕ್ತಿ ಪರಿವರ್ತಕ ಅಳವಡಿಸುವ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ದಿನಾಂಕ: ೦೬-೧೨-೨೦೨೩ರ ಬೆಳಿಗ್ಗೆ ೭.೦೦ ಗಂಟೆಯಿಂದ ದಿನಾಂಕ:೦೮.೧೨.೨೦೨೩ರ ಸಂಜೆ ೭:೦೦ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ೧೧ ಕೆವಿ ಮಾರ್ಗದ ಮೇಲೆ ಬರುವ ಎಲ್ಲಾ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಪಶು ಸಖಿ ತರಬೇತಿ ಕಾರ್ಯಾಗಾರದಲ್ಲಿ ಜಿಪಂ ಸಿಇಓ ರಾಹುಲ್ ಶಿಂಧೆ ಸಲಹೆ ವಿಜಯಪುರ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಡೇ-ಎನ್‌ಆರ್‌ಎಲ್‌ಎಂ) ಹಾಗೂ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವಿಜಯಪುರ ಇವರುಗಳ ಸಹಯೋಗದೊಂದಿಗೆ ರುಡಸೆಟ್ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾದ ೦೬ ದಿನಗಳ ಮೊದಲನೇ ಮಾಡ್ಯೂಲ್ ಪಶು ಸಖಿಯರ ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು “೦೬ ದಿನಗಳ ಈ ಒಂದು ಪಶು ಸಖಿಯರ ತರಬೇತಿ ಕಾರ್ಯಾಗಾರವು ಬಹಳ ಉಪಯುಕ್ತವಾದ ತರಬೇತಿಯಾಗಿದೆ. ಈಗಾಗಲೇ ಕಳೆದ ಒಂದು ವರ್ಷದಿಂದ ನಮ್ಮ ಜಿಲ್ಲೆಯ ಎಲ್ಲಾ ತಾಲೂಕುಗಳ ಪಶು ಚಿಕಿತ್ಸಾಲಯಗಳಲ್ಲಿ ಎಲ್ಲ ಪಶು ಸಖಿಯರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲಾ ಪಂಚಾಯತ ವಿಜಯಪುರದಿಂದ ಈಗಾಗಲೇ ಒಂದು ವರ್ಷದ ಪಶು ಸಖಿಯರ ಗೌರವಧನವನ್ನು ಪಾವತಿಸಲಾಗಿದೆ. ಪಶು ಸಖಿಯರು ತರಬೇತಿಯಲ್ಲಿ ಕಲಿಯುವ ವಿಷಯಗಳನ್ನು ತಮ್ಮ ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಎಲ್ಲ ರೈತ್ತರನ್ನು ಸಂಘಟಿಸುವುದು ನಿಮ್ಮ ಕಾರ್ಯವಾಗಬೇಕು.…

Read More

ಮುದ್ದೇಬಿಹಾಳ: ತಾಳಿಕೋಟೆ ತಾಲೂಕಿನ ಬಿಳೇಭಾವಿ ಗ್ರಾಮದಿಂದ ಬೊಮ್ಮನಹಳ್ಳಿ ಗ್ರಾಮಕ್ಕೆ ಕೂಲಿ ಕೆಲಸಕ್ಕೆ ಕರೆದೊಯ್ಯುವಾಗ ವಾಹನ ಅಪಘಾತವಾಗಿ ಓರ್ವ ಬಾಲಕಿ ಮೃತಪಟ್ಟು ಸುಮಾರು ೧೨ ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆಗೆ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ ಕೋಸಂಬೆ ವಿಷಾದ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಘಟನೆ ಕುರಿತು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ವರದಿ ನೀಡಲು ದೂರವಾಣಿ ಮೂಲಕ ತಿಳಿಸಿದ್ದಾಗಿ ಮತ್ತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Read More

ಮುದ್ದೇಬಿಹಾಳ: ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಗಳನ್ನುಇಲಾಖೆ ವೇತನಾನುದಾನಕ್ಕೆ ಒಳಪಡಿಸಲು ಪೂರ್ವಭಾವಿ ಪರಿವೀಕ್ಷಣೆ ಕೈಗೊಂಡಿದ್ದರೂ ಸರ್ಕಾರ ವೇತನಾನುದಾನ ನೀಡಲು ಮೀನಾಮೇಷ ಎಣಿಸುತ್ತಿರುವುದು ಖಂಡನೀಯವಾಗಿದೆ. ಈ ಕುರಿತು ಡಿ೬ ರಂದು ಬೆಳಗಾವಿಯ ಸುವರ್ಣ ಸೌಧದ ಎದುರು ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುತ್ತಿದ್ದು ರಾಜ್ಯದ ಎಲ್ಲ ಖಾಸಗಿ ಐಟಿಐಗಳ ಆಡಳಿತ ಮಂಡಳಿಯ ಮುಖ್ಯಸ್ಥರು ಹಾಗೂ ನೌಕರರು ಭಾಗಿಯಾಗುವಂತೆ ಕರ್ನಾಟಕ ರಾಜ್ಯ ಖಾಸಗಿ ಐಟಿಐಗಳ ಸಂಘದ ರಾಜ್ಯಾಧ್ಯಕ್ಷ ಎಸ್.ಎಂ.ನೆರಬೆಂಚಿ ಮನವಿ ಮಾಡಿಕೊಂಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಐಟಿಐ ತರಬೇತಿಗೆ ಬಡವರ್ಗದ ಮಕ್ಕಳು ಬರುವುದರಿಂದ ಅವರಿಂದ ಬರುವಂಥ ಶುಲ್ಕಗಳಿಂದ ಸಿಬ್ಬಂದಿಗೆ ಸರ್ಕಾರ ನಿಗದಿಪಡಿಸಿದ ಸೂಕ್ತ ಗೌರವಧನ ಕೊಡಲು ಸಹ ಆಗುವುದಿಲ್ಲ. ಹಾಗಾಗಿ ಸರ್ಕಾರದ ಸಹಾಯಾನುದಾನದ ಅಗತ್ಯವಿದೆ. ಇದನ್ನು ಮನಗಂಡು ಹಿಂದಿನ ಸರ್ಕಾರಗಳು ೧೯೯೭ರಲ್ಲಿಯೇ ವೇತನ ಅನುದಾನ ಸಂಹಿತೆ ಜಾರಿಗೆ ತಂದಿದ್ದು ಅದರಂತೆ ೭ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿದ ಐಟಿಐಗಳಿಗೆ ವೇತನಾನುದಾನ ಕೊಡುತ್ತ ಬಂದಿವೆ. ಈಗಾಗಲೇ ರಾಜ್ಯದಲ್ಲಿ ೧೯೨ ಅನುದಾನಿತ ಐಟಿಐಗಳಿವೆ. ಆದರೆ ೨೦೧೦ರಲ್ಲಿ…

Read More

ಮುದ್ದೇಬಿಹಾಳ: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ)ದ ಬಾಗಲಕೋಟೆ, ಬೆಳಗಾವಿ ನಗರ ಹಾಗೂ ಬೆಳಗಾವಿ ಗ್ರಾಮಾಂತರ ಜಿಲ್ಲೆಗಳ ಉಸ್ತುವಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ದಾಂ ಕುಂಟೋಜಿ ಅವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷೆ ಕೀರ್ತಿ ಗಣೇಶ ಆದೇಶಿಸಿದ್ದಾರೆ.

Read More

ಸಿಂದಗಿ: ಪಟ್ಟಣದ ಸಾರಂಗಮಠವು ನಿರಂತರವಾಗಿ ಸಮಾಜಕ್ಕೆ ಮಾದರಿಯಾಗುವ ಮತ್ತು ಸಂದೇಶ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಭಾನುವಾರದಂದು ಪಟ್ಟಣದ ಸಾರಂಗಮಠದಲ್ಲಿ ಪೂಜ್ಯ ಚನ್ನವೀರ ಸ್ವಾಮೀಜಿ ಪ್ರತಿಷ್ಠಾನ ಸಾರಂಗಮಠ ಸಿಂದಗಿ ವತಿಯಿಂದ ಪೂಜ್ಯ ಶ್ರೀ ಚನ್ನವೀರ ಸ್ವಾಮೀಜಿಗಳ ೧೩೦ನೆಯ ಜಯಂತೋತ್ಸವ ನಿಮಿತ್ಯವಾಗಿ ಹಮ್ಮಿಕೊಂಡ ಶಿವಶರಣೆಯರ ಜೀವನ ವಚನಾಮೃತ ಪ್ರವಚನದಲ್ಲಿ ಶತಮಾನಕಂಡ ಸಿಂದಗಿ ಗಣ್ಯ ವರ್ತಕರಿಗೆ ಹಾಗೂ ಗಣ್ಯ ಹಿರಿಯರಿಗೆ ನಡೆದ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರಂಗಮಠವು ಕಳೆದ ೫೦ ವರ್ಷಗಳಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಒಂದು ವ್ಯಾಪಾರವನ್ನು ಶತಮಾನದ ಅಂಚಿನವರೆಗೂ ತೆಗೆದುಕೊಂಡು ಹೋಗುವುದು ಎಂದರೆ ಕಷ್ಟ. ಆದರೆ ಸಿಂದಗಿ ನಗರದಲ್ಲಿ ವಾರದ, ಕುಲಕರ್ಣಿ, ಪೋರವಾಲ್, ಕಮತಗಿ ಹಾಗೂ ಗೋಲಾ ಕುಟುಂಬಗಳು ಶತಮಾನ ಕಂಡಿರುವುದು ಶ್ಲಾಘನೀಯ ಎಂದರು.ಈ ವೇಳೆ ಸನ್ಮಾನ ಸ್ವೀಕರಿಸಿದ ಗಣ್ಯವರ್ತಕ ನೆಹರೂ ಪೋರವಾಲ್ ಮಾತನಾಡಿದರು.ಬಳಿಕ ಅಶೋಕ ವಾರದ, ಶಿವಪ್ಪಗೌಡ ಬಿರಾದಾರ ಮಾತನಾಡಿದರು.ಈ ವೇಳೆ…

Read More

ವಿಜಯಪುರ: ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಮೂರು ರಾಜ್ಯಗಳಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದು ಈ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಮೀನುಗಾರರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಗೌತಮ್ ಚೌಧರಿ ಅಭಿಪ್ರಾಯ ವ್ಯಕ್ತಪಡಿಸಿದರು.ಈ ಕುರಿತು ಸೋಮವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸಗಢ ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಆಡಳಿತವನ್ನು ಇಡೀ ದೇಶವೇ ಮೆಚ್ಚಿದೆ ಎನ್ನುವುದಕ್ಕೆ ಈ ಫಲಿತಾಂಶವೇ ಸಾಕ್ಷಿ. ಪ್ರತಿಪಕ್ಷಗಳು ಬಿಜೆಪಿ ಹಾಗೂ ಪ್ರದಾನಿ ಮೋದಿ ಕುರಿತು ಎಷ್ಟೇ ಅವಹೇಳನಕಾರಿಯಾಗಿ ಮಾತನಾಡಿದರೂ ಜನತೆ ಅದನ್ನು ಗಣನೆಗೆ ತೆಗೆದುಕೊಳ್ಳದೇ ಮೋದಿ ಅವರ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಆಶೀರ್ವದಿಸಿದ್ದಾರೆ ಎಂದು ಹೇಳಿದರು.ಈ ಫಲಿತಾಂಶದಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸಹ ದೇಶದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವನ್ನು ಡಾ.ಗೌತಮ್ ಚೌಧರಿ ವ್ಯಕ್ತಪಡಿಸಿದರು.

Read More

ಇಂಡಿ: ಪಂಚ ರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಮೂರು ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಇಂಡಿ ಮಂಡಲ ಬಿಜೆಪಿ ಕಾರ್ಯಕರ್ತರು ಭಾನುವಾರ ಬಸವೇಶ್ವರ ವೃತ್ತದಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಾಸು ಗೌಡ ಬಿರಾದಾರ, ಬಿಜೆಪಿ ಮುಖಂಡ ಅನಿಲ ಜಮಾದಾರ ಮಾತನಾಡಿ, ಈ ಪಂಚರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಮೂರು ರಾಜ್ಯಗಳಲ್ಲಿ ಜಯ ಸಾಧಿಸಿದ್ದು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸಹ ದೇಶದಲ್ಲಿ ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ.ಈ ಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ. ಫಲಿತಾಂಶದಿಂದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿದೆ ಈ ಬಾರಿ ರಾಜ್ಯದ ಲೋಕಸಭೆ ಚುನಾವಣೆಯಲ್ಲಿಯೂ ಸಹ ಭಾರಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಪಕ್ಷ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ವಿಶ್ವದಲ್ಲಿಯೇ ಭಾರತ ದೇಶಕ್ಕೆ ಅತ್ಯುತ್ತಮ ಮನ್ನಣೆ ಸಿಕ್ಕಿದೆ ಇಂತಹ…

Read More

ಇಂಡಿ: ಆಟೋ, ಟಮ್ ಟಮ್ ನಿಲುಗಡೆಗೆ ಸ್ಥಳಾವಕಾಶವನ್ನು ಮಾಡಿಕೊಡಿ ಎಂದು ಅಟೋ ಚಾಲಕರ‌ ಮತ್ತು ಮಾಲಕರ ಸಂಘದವರು ತಾಲೂಕು ಆಡಳಿತ ಸೌಧಕ್ಕೆ ಆಗಮಿಸಿ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.ಪಟ್ಟಣದಲ್ಲಿ ಅಟೋ ಮತ್ತು ಟಮ್ ಟಮ್ ನಿಲುಗಡೆಗೆ ಎಲ್ಲಿಯೂ ಸ್ಥಳಾವಕಾಶವಿಲ್ಲ. ಆದ್ದರಿಂದ ಪ್ರತಿನಿತ್ಯ ಬರುವ ಸಾವಿರಾರು ಪ್ರಯಾಣಿಕರಿಗೆ ಮತ್ತು ಅಟೋ, ಟಮ್ ಟಮ್ ಚಾಲಕರಿಗೆ ಸಮಸ್ಯೆಯಾಗುತ್ತಿದೆ.ಜಿಲ್ಲೆ ಮತ್ತು ನೆರೆ ಮಹಾರಾಷ್ಟ್ರ ರಾಜ್ಯದಿಂದ ಬರುವ ನಿತ್ಯದ ಪ್ರಯಾಣಿಕರಿಗೆ ಜನಸ್ನೇಹಿಯಾಗಿ ಅವರ ಸ್ಥಳಕ್ಕೆ ತಲುಪಿಸುವ ಕಾರ್ಯ ಮಾಡುತ್ತಿದ್ದೆವೆ. ಆದ್ದರಿಂದ ದೂರದ ಊರಿನ ಪ್ರಯಾಣಿಕರ ಸಹಕಾರಕ್ಕೆ ಮತ್ತು ವಾಹನ ಚಾಲಕರ ಸಮಸ್ಯೆ ತಪ್ಪಿಸಲು, ಪಟ್ಟಣದ ಬಸ್ ನಿಲ್ದಾಣ ಎದುರುಗಡೆ ಹಾಗೂ ಮಹಾವೀರ ವೃತದಲ್ಲಿ ಆಟೋ ಮತ್ತು ಟಮ್ ನಿಲುಗಡೆಗೆ ಸ್ಥಳಾವಕಾಶ ಮಾಡಕೊಡಬೇಕೆಂದು ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಅಟೋ ಚಾಲಕರ ಸಂಘದ ಅಧ್ಯಕ್ಷ ಖಾಜಾಸಾಹೇಬ ಬಾಗವಾನ, ಉಪಾಧ್ಯಕ್ಷ ಮಲ್ಲಿಕಾರ್ಜುನ ಮದರಕಂಡಿ, ರೈಸ್ ಅಷ್ಟೇಕರ್, ಇಸಾಕ ಎಕ್ಕವಾಲೆ, ಸಿದ್ರಾಮ ಹೊಸಮನಿ, ನರಸಪ್ಪ ಬಜಂತ್ರಿ, ಮಹೇಶ…

Read More

ವಿಜಯಪುರ: ಬಿ.ಎಲ್.ಡಿ.ಇ ಡಿಯು- ಡೆಕಾ ಲೇಸರ್ ಅಕ್ಯಾಡೆಮಿಯನ್ನು ಅಂತಾರಾಷ್ಟ್ರೀಯ ಸಂಸ್ಥೆಯನ್ನಾಗಿ ಮಾಡಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ನಗರದ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ್ ನಲ್ಲಿ ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಬಿ.ಎಲ್.ಡಿ.ಇ ಡಿಯು- ಡೆಕಾ ಲೇಸರ್ ಅಕ್ಯಾಡೆಮಿ ಉದ್ಘಾಟಿಸಿ ಅವರು ಮಾತನಾಡಿದರು.ಇಟಲಿ ಮೂಲದ ಡೆಕಾ ಲೇಸರ್ ಕಂಪನಿ ಮತ್ತು ಬಿ.ಎಲ್.ಡಿ.ಇ ಆಸ್ಪತ್ರೆಯ ಚರ್ಮರೋಗ ವಿಭಾಗದ ಸಹಯೋಗದಲ್ಲಿ ದೇಶದಲ್ಲಿಯೇ ಇದೇ ಮೊದಲ ಬಾರಿಗೆ ಈ ಅಕ್ಯಾಡೆಮಿ ಆರಂಭವಾಗಿದೆ. ಡಾ ಅರುಣ ಚಂ.ಇನಾಮದಾರ ಅವರು ಆರೋಗ್ಯ ಕ್ಷೇತ್ರದಲ್ಲಿ ವಿಜಯಪುರ ಜಿಲ್ಲೆಯ ಕೀರ್ತಿಯನ್ನು ವಿಶ್ವಕ್ಕೆ ಪಸರಿಸುವ ಕೆಲಸ ಮಾಡಿದ್ದಾರೆ. ಈ ಅಕ್ಯಾಡೆಮಿ ಸ್ಥಾಪನೆಯಿಂದ ಉಭಯ ದೇಶಗಳ ಮಧ್ಯೆ ಚರ್ಮರೋಗ ಮತ್ತು ಲೇಸರ್ ತಂತ್ರಜ್ಞಾನದ ಬಳಕೆಯ ಬಗ್ಗೆ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಹೊಸ ಸಂಶೋಧನೆಯ ಜೊತೆಗೆ ರೋಗಿಗಳಿಗೆ ಉಪಯುಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಇದರ ಕಾರ್ಯವ್ಯಾಪ್ತಿಯನ್ನು ಅಂತಾರಾಷ್ಟ್ರಿಯ…

Read More