Author: editor.udayarashmi@gmail.com

ವಿಜಯಪುರ: ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿರುವುದು ಮುಂಬರುವ ಲೋಕಸಭೆ ಚುನಾವಣೆಯ ಬಿಜೆಪಿ ಗೆಲುವಿನ ಮುನ್ನುಡಿಯಾಗಿದ್ದು, ಈ ಗೆಲುವಿನ ನಗೆ ಇದೇ ರೀತಿ ಮುನ್ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಉಮೇಶ ಕಾರಜೋಳ ಹರ್ಷ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಪಕ್ಷಗಳು ಎಷ್ಟೇ ಬಿಜೆಪಿ ಬಗ್ಗೆ ವಿರೋಧ ನಿಲುವು ಬಿತ್ತಲು ಪ್ರಯತ್ನಿಸಿದರೂ ಸಹ ಜನತೆ ಬಿಜೆಪಿಗೆ ಆಶೀರ್ವಾದ ಮಾಡಿ ಮತ್ತೊಮ್ಮೆ ಮೋದಿ ಎನ್ನುವ ಸಂದೇಶವನ್ನು ಈ ಚುನಾವಣೆ‌ ಮೂಲಕ ರವಾನಿಸಿದ್ದಾರೆ. ರಾಜಸ್ತಾನ, ಮಧ್ಯಪ್ರದೇಶ, ಛತ್ತೀಸಘಢ ಹೀಗೆ ಮೂರು ರಾಜ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಪ್ರಧಾನಮಂತ್ರಿ ‌ನರೇಂದ್ರ ಮೋದಿ ಅವರ ಭ್ರಷ್ಟಾಚಾರ ರಹಿತ ಶುದ್ದ ಆಡಳಿತ,‌ ಬಿಜೆಪಿ ಜನಪರ ಚಿಂತನೆ, ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಬಿಜೆಪಿ ಗೆಲುವಿನ ನಗೆ ಬೀರಿದೆ. ಇದು ಖಂಡಿತವಾಗಿಯೂ ಲೋಕಸಭಾ ಚುನಾವಣೆ ದಿಕ್ಸೂಚಿಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿ ಅರಳುವುದು ಖಚಿತವಾಗಿದೆ, ಈ ಗೆಲುವು ಸಮಸ್ತ ಕಾರ್ಯಕರ್ತರ ಗೆಲುವಾಗಿದೆ ಎಂದು ಅವರು ಹೇಳಿದ್ದಾರೆ.ಕಿಸಾನ್…

Read More

ನಿಡಗುಂದಿ: ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವ ಮೂಲಕ ಸಮ ಸಮಾಜವನ್ನು ನಿರ್ಮಿಸುವಲ್ಲಿ ನಾಟಕಗಳು ಬಹುಮುಖ್ಯ ಪಾತ್ರ ವಹಿಸುತ್ತವೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅಭಿಪ್ರಾಯಪಟ್ಟರು.ಪಟ್ಟಣದ ಆರಾಧ್ಯ ದೇವಿ ತಾಯಿ ಬನಶಂಕರಿ ದೇವಿ ಜಾತ್ರೆಯ ಅಂಗವಾಗಿ ಶನಿವಾರ ರಾತ್ರಿ ಬನಶಂಕರಿ ಯುವಕ ಮಂಡಳ ಹಮ್ಮಿಕೊಂಡಿದ್ದ “ತಾಳಿ ಹರಿಯಲಿಲ್ಲ, ಶೀಲ ಉಳಿಯಲಿಲ್ಲ’ ನಾಟಕ ಉದ್ಘಾಟಿಸಿ ಅವರು ಮಾತನಾಡಿದರು.ಸಮ, ಶ್ರಮ ಸಂಸ್ಕೃತಿಯ ಹರಿಕಾರರು, ತಮ್ಮ ಬೆವರಿನ ಹನಿಯಿಂದಲೇ ಇಡೀ ಸಮಾಜದ ಜನರ ಮಾನ ಮುಚ್ಚುವ ಬಟ್ಟೆ ನೇಯ್ಗೆಯ ಕಾಯಕದ ದೇವಾಂಗ ಸಮಾಜದ ಕಾರ್ಯನಿಷ್ಠೆ ಶ್ಲಾಘನೀಯ ಎಂದರು. ಎರಡು ದಿನ ಪ್ರದರ್ಶನಗೊಳ್ಳುತ್ತಿರುವ ಈ ಸಾಮಾಜಿಕ ನಾಟಕದಲ್ಲಿ ಶಿಕ್ಷಕರೇ ಹೆಚ್ಚಿನ ಸಂಖ್ಯೆಯ ಪಾತ್ರಧಾರಿಯಾಗಿರುವುದು ಸಂತಸದ ಸಂಗತಿ ಎಂದರು.ನಾಟಕಗಳು ಮನರಂಜನೆಯಲ್ಲ, ಅಲ್ಲಿಯೂ ಸಾಕಷ್ಟು ಬದಲಾವಣೆಗಳಾಗುತ್ತಿವೆ, ಆಧುನಿಕ ನಾಟಕಕಾರಗಳು ಬರೆದಿರುವ ನಾಟಕಗಳು ಕೂಡಾ ಗ್ರಾಮೀಣ ಭಾಗದಲ್ಲಿ ಕಲಾ ಆಸಕ್ತರು ಪ್ರಸಾರ ಮಾಡಿ ಕನ್ನಡತನದ ಶಕ್ತಿ ಇನ್ನಷ್ಟು ಹೆಚ್ಚಿಸಬೇಕು ಎಂದರು.ನಿಡಗುಂದಿಯ ರುದ್ರೇಶ್ವರ…

Read More

ಆಲಮಟ್ಟಿ: ಕ್ರಿಸ್ತಪೂರ್ವದಿಂದಲೂ ಅಸ್ತಿತ್ವದಲ್ಲಿದ್ದ ಸನಾತನ ಧರ್ಮದಲ್ಲಿ “ಮೇಲು-ಕೀಳು’ ಎಂಬ ಕೆಟ್ಟ ವ್ಯವಸ್ಥೆ ಇತ್ತು, ಮುಂದೆ ರಾಜರ ಕಾಲದಲ್ಲಿಯೂ ಒಂದೇ ಧರ್ಮ ಪೋಷಿಸಲ್ಪಟ್ಟಿತು, ಒಟ್ಟಾರೇ ಹಿಂದಿನ ಕಾಲದಲ್ಲಿ ದಲಿತ ಜನಾಂಗಕ್ಕೆ ಅತಿ ಹೆಚ್ಚಿನ ಅನ್ಯಾಯವಾಗಿದೆ, ಪ್ರಾಣಿಗಳಿಗಿಂತಲೂ ಕಡೆಯಾಗಿದ್ದು ಸುಳ್ಳಲ್ಲ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಎಸ್.ಕೆ. ಬೆಳ್ಳುಬ್ಬಿ ಅಭಿಪ್ರಾಯಪಟ್ಟರು.ಇಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಅಂಬೇಡ್ಕರ ಸೈನ್ಯ ರಾಜ್ಯ ಸಮಿತಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಹಾಗೂ ಸಂವಿಧಾನ ಜಾಗೃತಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮೇಲು-ಕೀಳು ಎಂಬ ಭಾವನೆ ತೊರೆಯುವಲ್ಲಿ ಹಾಗೂ ನಾನಾ ಅನಿಷ್ಠ ಪದ್ಧತಿಗಳನ್ನು ತೊಡೆಯಲು ಶ್ರಮಿಸಿದ ಗೌತಮ ಬುದ್ಧ, ಅಣ್ಣ ಬಸವಣ್ಣ, ರಾಜಾರಾಮ ಮೋಹನರಾಯ್, ಮಹಾತ್ಮಾ ಗಾಂಧೀಜಿ, ಡಾ ಬಿ.ಆರ್. ಅಂಬೇಡ್ಕರ, ಜ್ಯೋತಿಬಾ ಫುಲೆ ಅವರ ಕಾರ್ಯ ಇತಿಹಾಸದಲ್ಲಿ ಚಿರಸ್ಥಾಯಿ. ಅಂತಹ ಮಹಾನ್ ವ್ಯಕ್ತಿಗಳ ಚಿಂತನೆ, ಹೋರಾಟದ ಫಲವಾಗಿ ದಲಿತರು ಕೂಡಾ ಸಹಬಾಳ್ವೆ, ಸಮಾನತೆಯಿಂದ ಬದುಕುತ್ತಿದ್ದಾರೆ ಎಂದರು. ಬಿಜೆಪಿ ಎಂದೂ ಸಂವಿಧಾನದ ಬದಲಾವಣೆಯ ಚಿಂತನೆಯೂ ಮಾಡಿಲ್ಲ, ಯಾರೋ ಹೇಳಿದ್ದು,…

Read More

ಬಿಜೆಪಿ-ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ | ಸಾರ್ವತ್ರಿಕ ಚುನಾವಣೆಯ ಸೆಮಿಫೈನಲ್ | ಬಿಜೆಪಿ, ಕಾಂಗ್ರೆಸ್ ಗೆ ಅಗ್ನಿ ಪರೀಕ್ಷೆ ಬೆಂಗಳೂರು: ಇನ್ನು ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ.ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮತ್ತು ಮಧ್ಯಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನಡುವೆ ಈ ಮೂರು ರಾಜ್ಯಗಳಲ್ಲಿ ನೇರ ಹಣಾಹಣಿ ಇದೆ. ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ(ಬಿಆರ್‌ಎಸ್) ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ – ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ ಎಂದು ಹೇಳಿವೆ.ಮಧ್ಯಪ್ರದೇಶದ 230, ಛತ್ತೀಸ್‌ಗಢದ 90, ತೆಲಂಗಾಣದ 119 ಮತ್ತು ರಾಜಸ್ಥಾನದ 199 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಭಾನುವಾರ ಬೆಳಗ್ಗೆ 8 ಗಂಟೆಗೆ ಬಿಗಿ…

Read More

ಮಂಡ್ಯ ಮಂಜುನಾಥ ಉಡುಪ ಬಲ ಹೆಟ್ಟೋ, ಬುದ್ದಿ ಹೆಚೋ ಎಂಬ ವಿಷಯದಲ್ಲಿ ಒಮ್ಮೆ ಸಿಂಹಕ್ಕೂ ನರಿಗೂ ತುಂಬ ಚರ್ಚೆ ನಡೆಯಿತು. ಬಲಕ್ಕಿಂತ ಬುದ್ದಿಯೇ ಹೆಚ್ಚು ಎಂದು ನರಿ ವಾದಿಸಿತು. ಅಷ್ಟೇ ಅಲ್ಲ, ತನ್ನ ಆ ಹೇಳಿಕೆಯನ್ನು ಸಮರ್ಥಿಸಿ ತೋರಿಸಲೂ ಅದು ಸಿದ್ಧವಿತ್ತು. ನರಿಯ ಮಾತಿನ ಸರಣಿ ಸಿಂಹಕ್ಕೆ ಹಿಡಿಸಿತು.ನರಿಯ ಹೇಳಿಕೆ ನಿಜವಿರಲೂಬಹುದೆಂದು ಅದಕ್ಕೆ ಅನ್ನಿಸತೊಡಗಿತು.ಹೀಗಿರುತ್ತ ಒಮ್ಮೆ ಅವು ಬೇಟೆಗೆಂದು ಹೊರಟವು.ನರಿ ತನ್ನ ಹೇಳಿಕೆಯ ಸಮರ್ಥನೆಗಾಗಿ ಒಂದು ಯೋಜನೆ ಹಾಕಿತು. ಸಿಂಹ ಸತ್ತು ಬಿದ್ದಂತೆ ನಟಿಸಬೇಕು. ಇತರ ಪ್ರಾಣಿಗಳು ಸಮೀಪಿಸಿದಾಗ ಧುತ್ತೆಂದು ಎದ್ದು ನಿಂತು ಅವುಗಳ ಮೇಲೆ ಆಕ್ರಮಣ ನಡೆಸಬೇಕು, ಇದು ನರಿಯಯೋಜನೆ.ಸರಿ, ಸಿಂಹ ಸತ್ತಂತೆ ಬಿದ್ದು ಕೊಂಡಿತು. ನರಿ ಪಕ್ಕದಪೊದೆಯಲ್ಲಿ ಅಡಗಿಕೊಂಡಿದ್ದು ಸಿಂಹಕ್ಕೆ ಸೂಚನೆಗಳನ್ನು ಕೊಡುತ್ತಿತ್ತು. ಅಷ್ಟರಲ್ಲಿ ಆನೆಗಳ ಒಂದು ಹಿಂಡು ಧಾವಿಸುತ್ತ ಬರುವುದು ಕಾಣಿಸಿತು. ಸಿಂಹ ಸಹಜವಾಗಿ ಇಂಥ ಸಂದರ್ಭದಲ್ಲಿ ಎದ್ದು ನಿಲ್ಲಬೇಕು. ಆದರೆ ನರಿ ಅದಕ್ಕೆ ಏಳಬೇಡವೆಂದು ಸೂಚಿಸಿತು. ಆನೆಗಳ ಹಿಂಡು ತೀರ ಹತ್ತಿರ ಬರಲಿ, ಆಗ ಮಿಂಚಿನಂತೆ…

Read More

ವಿಜಯಪುರ: ನಗರದ ಸಾರಿಪುತ್ರ ಭೋಧಿಮ್ಮ ಬುದ್ಧ ವಿಹಾರದಲ್ಲಿ ಡಿ. ೬ರಿಂದ ೮ರವರೆಗೆ ಬೆಳಿಗ್ಗೆ ೧೦ ರಿಂದ ರಾತ್ರಿ ೯ ಗಂಟೆವರೆಗೆ ವಿಶ್ವರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ೬೭ನೇ ಮಹಾಪರಿನಿರ್ವಾಣ ದಿನದ ನಿಮಿತ್ಯ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಮತ್ತು ನುಡಿನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಗರದ ಬೌದ್ಧವಿಹಾರ ನಿರ್ಮಾಣ ಸಮಿತಿ ಅಧ್ಯಕ್ಷ ರಾಜಶೇಖರ ಯಡಹಳ್ಳಿ ಹೇಳಿದ್ದಾರೆ.ನಗರದ ಖಾಸಗಿ ಹೊಟೆಲನಲ್ಲಿ ಶನಿವಾರ ಸುದ್ಧಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ನಿಪ್ಪಾಣಿಯ ದೀಪಕ ಆಕಾರಾಮ ಮಥಾಳೆ ಮತ್ತು ನಂದಕುಮಾರ ಆಕಾರಾಮ ಮಥಾಳೆ ಅವರು ಸಂಗ್ರಹಿಸಿರುವ ಅಪರೂಪದ ಛಾಯಾಚಿತ್ರಗಳ ಪ್ರದರ್ಶನ ಇದಾಗಿದೆ. ಡಿ.೬ರಂದು ಸಂಜೆ ೬ಗಂಟೆಗೆ ಡಾ.ಅಂಬೇಡ್ಕರ ಅವರ ನುಡಿನಮನ ಕಾರ್ಯಕ್ರಮವೂ ಜರುಗಲಿದೆ. ಕಾರಣ ಜಿಲ್ಲೆಯ ಡಾ. ಬಾಬಾಸಾಹೇಬ ಅಂಬೇಡ್ಕರ ಅನುಯಾಯಿಗಳು, ಪ್ರಗತಿಪರ ಚಿಂತಕರು, ಬುದ್ಧನುಯಾಯಿಗಳು ಈ ಛಾಯಾಚಿತ್ರಗಳ ಪ್ರದರ್ಶನ ಮತ್ತು ನುಡಿನಮನ ಕಾರ್ಯಕ್ರಮಕ್ಕೆ ಅಧಿಕ ಸಂಖ್ಯೆಯಲ್ಲಿ ಆಗಮಿಸಬೇಕೆಂದು ರಾಜಶೇಖರ ಯಡಹಳ್ಳಿ ಕೋರಿದ್ದಾರೆ.ಬೌದ್ಧವಿಹಾರ ನಿರ್ಮಾಣ ಸಮಿತಿ ಉಪಾಧ್ಯಕ್ಷ ಶಶಿಕಾತ ಹೊನವಾಡಕರ, ಪ್ರಧಾನ ಕಾರ್ಯದರ್ಶಿ ನಾಗರಾಜ ಲಂಬು, ಹಿರಿಯ ಪತ್ರಕರ್ತ ಅನೀಲ…

Read More

ತಿಕೋಟಾ: ತಾಲ್ಲೂಕಿನ ಹೊನವಾಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಿರಿಯ ಸುರಕ್ಷತಾ ಅಧಿಕಾರಿ ಶ್ರೀಮತಿ ಅನಸೂಯಾ ಹೆಗಡೆ ಅವರ ಬೀಳ್ಕೊಡುಗೆ ಸಮಾರಂಭ ಜರುಗಿತು.ಪ್ರಾಥಮಿಕ ಆಡಳಿತ ವೈದ್ಯಾಧಿಕಾರಿ ಡಾ. ಎಸ್ ಜಿ ಕಿಣಗಿ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಆರೋಗ್ಯ ಇಲಾಖೆಯಲ್ಲಿ ಉತ್ತಮ ಕಾರ್ಯ ನಿರ್ವಹಿಸಿಕೊಂಡು ಬಂದಂತಹ ಸುರಕ್ಷತಾ ಅಧಿಕಾರಿ ತಮ್ಮ ಒಳ್ಳೆಯ ಒಡನಾಟದಿಂದ ಆರೋಗ್ಯ ಕೇಂದ್ರಕ್ಕೆ ಬರುವಂತಹ ರೋಗಿಯ ಜೊತೆಗೆ ಹಾಗೆ ಸಿಬ್ಬಂದಿ ಜೊತೆಗೆ ಅಚ್ಚು ಮೆಚ್ಚಿನ ಸೇವೆ ಸಲ್ಲಿಸಿದ್ದರು. ಇಂತಹ ಅಧಿಕಾರಿಗಳು ಸಿಗುವುದು ಅಪರೂಪ ಎಂದು ಶ್ಲಾಘಿಸಿದರು.ವೇದಿಕೆ ಮೇಲೆ ವೈದ್ಯಾಧಿಕಾರಿಗಳಾದ ಡಾ. ಶ್ವೇತಾ ಇಂಗಳೇಶ್ವರ್,ಪ್ರಾಥಮಿಕ ಆರೋಗ್ಯ ನಿರೀಕ್ಷಣಾಧಿಕಾರಿ ಜಕ್ಕನಗೌಡ, ಗ್ರಾಪಂ ಸದಸ್ಯ ಅರವಿಂದ ಮಾಲಗಾರ ಮಾತನಾಡಿದರು.ನಿರೂಪಣೆ ಸಿ ಎ ಜೋಶಿ ಮಾಡಿದರು.ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ತುಕಾರಾಮ ದಡಕೆ, ಉಪಾಧ್ಯಕ್ಷ, ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಇದ್ದರು.

Read More

ವಿಜಯಪುರ: ಭೂಣಲಿಂಗ ಹತ್ಯೆ ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಜಿಲ್ಲಾಧಿಕಾರಿಗಳಿಗೆ ಶನಿವಾರ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಎರಡು-ಮೂರು ದಿನಗಳ ಹಿಂದೆ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹೆಣ್ಣು ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಬೆಂಗಳೂರು ಪೊಲೀಸ್ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.ಈ ಜಾಲ ದಕ್ಷಿಣ ಕರ್ನಾಟಕವಲ್ಲದೇ ಉತ್ತರ ಕರ್ನಾಟಕದಲ್ಲಿಯೂ ಸಕ್ರಿಯವಾಗಿದೆ ಎಂಬ ವದಂತಿ ಇದೆ. ಅದರಲ್ಲೂ ವಿಜಯಪುರ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳನ್ನು ನಡೆಸುತ್ತಿರುವ ರಾಜಕಾರಣಿಗಳು ಉದ್ಯಮಿಗಳು ಸರ್ಕಾರಿ ಅಧಿಕಾರಿಗಳ ಸಂಬಂಧಿಕರ ಆಸ್ಪತ್ರೆಗಳಲ್ಲಿ ಈ ರೀತಿಯ ಪ್ರಕರಣಗಳು ಯಥೇಚ್ಛವಾಗಿ ಇದ್ದರೂ ಸಹ ಜಿಲ್ಲಾ ಆರೋಗ್ಯ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಯಾವುದೇ ರೀತಿಯ ಪ್ರಕರಣಗಳು ಬೆಳಕಿಗೆ ಬಂದಿರುವುದಿಲ್ಲ. ಹಾಗಾಗಿ ಜಿಲ್ಲೆಯಲ್ಲಿ ಒಂದು ತನಿಖಾ ತಂಡವನ್ನು ರಚಿಸಿ ಹೆಣ್ಣು ಬ್ರೂಣ ಹತ್ಯೆ ಪ್ರಕರಣಗಳು ವಿಜಯಪುರ ಜಿಲ್ಲೆಯಲ್ಲಿ ನಡೆಯದಂತೆ ಸೂಕ್ತ ಕ್ರಮವನ್ನು ವಹಿಸಬೇಕು. ಮೈಸೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ಬಂಧನಕ್ಕೆ…

Read More

ವಿಜಯಪುರ ಜಿಲ್ಲೆಯ ೩೦೮ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ ವಿಜಯಪುರ: ಜಿಲ್ಲೆಯ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಲ್ಲಿ ಕಾರ್ಯನಿರ್ವಹಿಸುತ್ತಿರುವ ೩೦೮ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ವಿತರಣೆ ಮಾಡಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಜಿಲ್ಲೆಯ ಮಹಾನಗರ ಪಾಲಿಕೆ, ಪುರಸಭೆ, ಪಟ್ಟಣ ಪಂಚಾಯತಿ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಜಿಲ್ಲಾಧಿಕಾರಿಗಳಿಂದ ನೇಮಕಾತಿ ಆದೇಶ ಪಡೆದುಕೊಂಡರು.ಆದೇಶ ಪ್ರತಿ ಪಡೆದ ಪೌರಕಾರ್ಮಿಕರು ಅಪಾರ ಸಂತಸ ವ್ಯಕ್ತಪಡಿಸಿ, ನಮ್ಮ ಬಾಳಿಗೆ ಬೆಳಕು ಕಲ್ಪಿಸಿದ ಜಿಲ್ಲಾಡಳಿತ, ಜಿಲ್ಲಾಧಿಕಾರಿಗಳಿಗೆ ಕೃತಜ್ಞತೆಯನ್ನು ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು, ನಗರ ಗ್ರಾಮೀಣ ಪ್ರದೇಶದಲ್ಲಿ ಸ್ವಚ್ಛತೆಯನ್ನು ಕಾಪಾಡುವ ಪೌರಕಾರ್ಮಿಕರು ಸ್ವಚ್ಛತಾ ಸೈನಿಕರಾಗಿ ಕಾರ್ಯನಿರ್ವಹಿಸುತ್ತಾರೆ. ಇವರ ಬದುಕಿಗೆ ಆಧಾರ ಕಲ್ಪಿಸಲು ಸರ್ಕಾರ ನೇಮಕಾತಿ ಆದೇಶ ನೀಡಿದ್ದು, ಪ್ರತಿ ಪೌರಕಾರ್ಮಿಕರಿಗೆ ಎರಡು ಜೊತೆ ಸಮವಸ್ತ್ರ, ಸುರಕ್ಷಾ ಸಾಧನಗಳನ್ನು ಒದಗಿಸಲಾಗುವುದು. ತಮ್ಮ ಆರೋಗ್ಯ ಕಾಪಾಡಿಕೊಂಡು ಸುರಕ್ಷಾ ಸಾಧನಗಳನ್ನು ಬಳಸಿ ಕಾರ್ಯನಿರ್ವಹಿಸಬೇಕು.…

Read More