Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಬ್ರಾಹ್ಮಣ, ಕ್ಷತ್ರೀಯ, ವೈಷ್ಯ ಹಾಗೂ ಶೂದ್ರ ಇವು ಒಂದರ ಮೇಲೆ ತಳಹದಿಯ ಆಧಾರದ ಮೇಲೆ ನಿಂತು ಬದುಕು ಸಾಗಿಸಿ ಸಮಾಜದ ಉದ್ದಾರದ ಕಡೆಗೆ ತಗೆದುಕೊಂಡು ಹೋಗುವದರಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದು ಮುತ್ತಗಿಯ ಅರ್ಚಕ ಪಂ. ನರಹರಿ ಆಚಾರ್ಯ ಜೋಶಿ ಅವರು ಹೇಳಿದರು.ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆ ವಿಜಯಪುರ ಇದರ ಆಶ್ರಯದಲ್ಲಿ ಪ್ರತಿತಿಂಗಳು ನಡೆಸುತ್ತಿರುವ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂತ ಕನಕದಾಸರ ಮೋಹನ ತರಂಗಿಣಿ ಕುರಿತು ಉಪನ್ಯಾಸ ನೀಡುತ್ತದ್ದ ಅವರು, ಕನಕದಾಸರ ಈ ಕೃತಿಯಲ್ಲಿಯೂ ಧರ್ಮದ ತಳಹದಿಯ ಮೇಲೆ ನಿಂತ ಪ್ರಸಂಗದ ವಿವರಣೆಯನ್ನು ನೀಡಿ, ಬ್ರಾಹ್ಮಣ ಓದಿದರೇ, ಅವನಿಗೆ ಕ್ಷತ್ರೀಯ ನೆಂಬ ಶಕ್ತಿ ಬರಬೇಕು, ಈ ಶಕ್ತಿ ಬರಲು ಆಹಾರ ಬೇಕಾದರೆ ವೈಷ್ಯನ ಆಹಾರ ಸೇವಿಸಿ ಶಕ್ತಿ ಉಂಟಾಗಲು ದೇಹ ಶೂದ್ರನ ಪಾದ ಮೇಲೆ ನಿಂತಿರುತ್ತದೆ, ನಮಸ್ಕಾರ ಮಾಡುವದು ಶಿರಕ್ಕಲ್ಲ ಪಾದಕ್ಕೆ ಎಂಬುದು ಅರಿತುಕೊಂಡು ನಾಲ್ಕು ವರ್ಣಗಳು ಯಾವ ರೀತಿಯಲ್ಲಿ ಶ್ರೇಷ್ಠವಾದುದು ಎಂಬುದನ್ನು ಸೂಕ್ಷ್ಮವಾಗಿ ಅರಿಯಲು ಸಾಧ್ಯ ಎಂದವರು ಹೇಳಿದರು.ಜಗತ್ತನ್ನು…
ಮುದ್ದೇಬಿಹಾಳ: ಇಲ್ಲಿನ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮುದ್ದೇಬಿಹಾಳ ಕ್ರಿಕೇಟ್ ಪ್ರೀಮಿಯರ್ ಲೀಗ್ ಸೀಜನ್ ೬ ನ ಮುಕ್ತಾಯ ಸಮಾರಂಭವನ್ನು ಡಿ.೩ ರಂದು ಸಂಜೆ ೫:೩೦ಕ್ಕೆ ಹಮ್ಮಿಕೊಳ್ಳಲಾಗಿದೆ.ಸಮಾರಂಭದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ಮತ್ತು ಮೌಲಾನಾ ಅಲ್ಲಾಭಕ್ಷ ಖಾಜಿ ವಹಿಸಲಿದ್ದಾರೆ. ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅಧ್ಯಕ್ಷತೆ, ಸಮಾಜ ಸೇವಕ, ಅಸ್ಕಿ ಫೌಂಡೇಶನ್ ಅಧ್ಯಕ್ಷ ಸಿ.ಬಿ.ಅಸ್ಕಿ, ಯಾಸೀನ್ ಸೋಠೆ ಮುಖ್ಯ ಅತಿಥಿಗಳಾಗಿ ಸಮಾಜ ಸೇವಕ ಮಲ್ಲಿಕಾರ್ಜುನ ಮದರಿ, ಶಾಂತಗೌಡ ಪಾಟೀಲ ನಡಹಳ್ಳಿ, ಮಾಜಿ ಪುರಸಭೆ ಅಧ್ಯಕ್ಷೆ ಪ್ರತಿಭಾ ಅಂಗಡಗೇರಿ, ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ವಿ.ಎಂ.ನಾಗಠಾಣ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಗುರು ತಾರನಾಳ, ದಿ ಕರ್ನಾಟಕ ಕೋ ಅಪ್ ಬ್ಯಾಂಕ್ ಅಧ್ಯಕ್ಷ ಸತೀಶ ಓಸ್ವಾಲ, ಪು.ಸ ಮಹೆಬೂಬ ಗೊಳಸಂಗಿ ಸೇರಿದಂತೆ ಮತ್ತೀತರರು ಅತಿಥಿಗಳಾಗಿ ಆಗಮಿಸಲಿದ್ದಾರೆ.
ಇಂಡಿ: ಗ್ರಾಮೀಣ ಕತೆಗಳು ನಮ್ಮ ಬದುಕಿನ ಕತೆಗಳೇ ಆಗಿವೆ, ಅಲ್ಲಿ ನಮ್ಮ ದೇಸಿಯ ಸೊಗಡು ಇತ್ತೀಚೆಗಿನ ದಿನಗಳಲ್ಲಿ ಮರೆಯಾಗುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಬೆಳಗಾವಿ ಜಿಲ್ಲೆಯ ಯಕ್ಕುಂಡಿ ಸರಕಾರಿ ಪದವಿಪೂರ್ವ ಕಾಲೇಜಿ ಪ್ರಾಚಾರ್ಯ ಡಾ. ವೈ.ಎಂ.ಯಾಕೊಳ್ಳಿ ಹೇಳಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಹಾಗೂ ಕಡಣಿಯ ಬೆರಗು ಪ್ರಕಾಶನ ಸಂಸ್ಥೆಯ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಡಾ. ಪ್ರಕಾಶ ಗ.ಖಾಡೆ ಅವರ ಬಾಳುಕುನ ಪುರಾಣ ಕಥಾ ಓದು ಮತ್ತು ಸಂವಾದ ಕಾರ್ಯಕ್ರಮದಲ್ಲಿ ಬಾಳುಕುನ ಪುರಾಣ ಕತಾವಲೋಕನ ಕುರಿತು ಉಪನ್ಯಾಸ ನೀಡಿದರು.ಇಂದಿನ ಕನ್ನಡದ ಕತೆಗಳಲ್ಲಿ ಮೆಟ್ರೊ ಜಗತ್ತು ಅನಾವರಣವಾಗುತ್ತಿರುವ ಈ ಹೊತ್ತಲ್ಲಿ ಬಾಳುಕುನ ಪುರಾಣದ ಮೂಲಕ ಕತೆಗಾರ ಗ್ರಾಮೀಣ ಪ್ರದೇಶದ ಜನರ ಜೀವನಶೈಲಿಗಳನ್ನು ಜಾನಪದೀಯಶೈಲಿಯಲ್ಲಿ ಹಿಡಿದಿಡುವ ಕಾರ್ಯ ಮೆಚ್ಚುಗೆ ಪಡುವಂತಹದ್ದು, ಕತೆಗಾರರು ಇಂತಹ ಸಂಗತಿಗಳನ್ನು ಬಹಳ ಸೂಕ್ಷವಾಗಿ ಓದುಗರಿಗೆ ಕಟ್ಟಿಕೊಡುವ ಕೆಲಸ ಮಾಡಬೇಕು ಎಂದು ಆಶಿಸಿದರು.ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ವಿಭಾಗದ ಮುಖ್ಯಸ್ಥ ಡಾ ರಮೇಶ ಕತ್ತಿ ಮಾತನಾಡಿ, ಪ್ರಕಾಶ ಖಾಡೆ ಈ…
ವಿಜಯಪುರ: ಇತ್ತೀಚೆಗೆ ದುಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಬ್ರೇನ್ ಓ ಬ್ರೇನ್ ಅಬ್ಯಾಕ್ಸ್ ಸ್ಪರ್ಧೆಯಲ್ಲಿ ವಿಜಯಪುರದ ಅಮೋಘಸಾಯಿ ಬಾಬು ಕೋರಿ ಅವರು ಭಾಗವಹಿಸಿ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ಅಮೋಘ ಸಾಧನೆ ಮಾಡಿದ್ದಾರೆ.ಎಆರ್ಜೆ ಅಂತಾರಾಷ್ಟ್ರೀಯ ಪಬ್ಲಿಕ್ ಶಾಲೆಯಲ್ಲಿ ಓದುತ್ತಿರುವ ಅಮೋಘಸಾಯಿ ಈ ವಿಶಿಷ್ಟ ಸಾಧನೆ ಮಾಡಿದ್ದಾರೆ ಎಂದು ವಿಜಯ ಜೋಶಿ ತಿಳಿಸಿದ್ದಾರೆ.
ವಿಜಯಪುರ: ನಗರದ ಮನಗೂಳಿ ರಸ್ತೆಯಲ್ಲಿರುವ ಶ್ರೀ ಶಿವಚಿದಂಬರ ದೇವಾಲಯದಲ್ಲಿ ಇದೇ ದಿನಾಂಕ ೦೩ ರಂದು ಶ್ರೀ ಶಿವಚಿದಂಬರ ಜಯಂತೋತ್ಸವ ಶ್ರದ್ಧಾ-ಭಕ್ತಿಪೂರ್ವಕವಾಗಿ ನಡೆಯಲಿದೆ.ದಿ.೩ ರಂದು ಬೆಳಿಗ್ಗೆ ೬ ಕ್ಕೆ ಕಾಕಡಾರತಿ, ಬೆಳಿಗ್ಗೆ ೭ ಕ್ಕೆ ಶ್ರೀ ಶಿವಚಿದಂಬರೇಶ್ವರರಿಗೆ ಅಭಿಷೇಕ, ಬೆಳಿಗ್ಗೆ ೮ ಕ್ಕೆ ಶ್ರೀ ಯೋಗಿಶ್ವರ ಯಾಜ್ಞವಲ್ಕ್ಯರ ಅಷ್ಟೋತ್ತರ ನಡೆಯಲಿದೆ. ಅದೇ ದಿನ ಬೆಳಿಗ್ಗೆ ೧೦ ಕ್ಕೆ ಶ್ರೀ ರಾಮ ಜಯರಾಮ ಜಯರಾಮ ಎಂಬ ಜಪ ಸಂಕಲ್ಪಕ್ಕೆ ಪೂರಕವಾದ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ೧೨ ಕ್ಕೆ ತೊಟ್ಟಿಲೋತ್ಸವ ನಡೆಯಲಿದೆ. ಅದೇ ದಿನ ಮಧ್ಯಾಹ್ನ ೧೨.೩೦ ಕ್ಕೆ ಶ್ರೀ ಸಂತ ಶಂಕರಣ್ಣಾ ಅನಂತಪೂರ ಅವರಿಂದ ಪ್ರವಚನ, ಮಧ್ಯಾಹ್ನ ೧.೩೦ ಕ್ಕೆ ಮಂಗಳಾರತಿ, ಮಹಾಪ್ರಸಾದ ವಿತರಣೆ ನಡೆಯಲಿದೆ. ಸಂಜೆ ೭ ಕ್ಕೆ ಶಿವಚಿಂದಬರ ಹಾಗೂ ಕಾರ್ತಿಕೋತ್ಸವ ನಡೆಯಲಿದೆ ಎಂದು ವಿಜಯ ಜೋಶಿ ತಿಳಿಸಿದ್ದಾರೆ.
ಗೋಲಗೇರಿ: ಇಲ್ಲಿಯ ಸರಕಾರಿ ಕನ್ನಡ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ ೪ ರಿಂದ ೨೮ ರವರೆಗೆ ಸಿಂದಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಆರೀಫ್ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್.ಟಕ್ಕೆ ಹಾಗೂ ಗೋಲಗೇರಿ ಕ್ಲಸ್ಟರಿನ ಸಮೂಹ ಸಂಪನ್ಮೂಲ ವ್ಯಕ್ತಿ ಆರ್.ಎಸ್.ಬಿರಾದಾರ ಅವರ ಮಹತ್ವಾಕಾಂಕ್ಷೆಯ ಕ್ರಿಯಾಯೋಜನೆ ಅಡಿಯಲ್ಲಿ ಕನ್ನಡ ಮಾಸಾಚರಣೆ ಆಚರಿಸಲಾಯಿತು.ಶಾಲೆಯ ಕನ್ನಡ ವಿಷಯ ಬೋಧಕರಾದ ಶಿಕ್ಷಕ, ಸಾಹಿತಿ, ವ್ಯಂಗ್ಯಚಿತ್ರಕಾರ ಶರಣು ಚಟ್ಟಿ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿ ದಿನದ ಕೊನೆಯ ಅವಧಿಯಲ್ಲಿ ಕರ್ನಾಟಕ ಏಕೀಕರಣ ಹೋರಾಟಗಾರರ ಪರಿಚಯದೊಂದಿಗೆ, ಕನ್ನಡ ವ್ಯಾಕರಣ ಮಾಹಿತಿ, ಕನ್ನಡ ಅಂಕಿಗಳ ಬಳಕೆ, ಕನ್ನಡ ಸಾಹಿತಿಗಳ ಪರಿಚಯ, ಕನ್ನಡ ಸಾಹಿತ್ಯ ಪರಿಷತ್ತಿನ ಪರಿಚಯ, ಕಥೆ ಕಟ್ಟುವಿಕೆ, ಪ್ರಬಂಧ ಬರಹ, ಭಿತ್ತಿಪತ್ರ ರಚನೆ, ರಸಪ್ರಶ್ನೆ, ಗಾಯನ ಸ್ಪರ್ಧೆ ಸೇರಿದಂತೆ ಹಲವು ನಿಗದಿತ ಚಟುವಟಿಕೆಗಳನ್ನು ಏರ್ಪಡಿಸಿ ಕನ್ನಡ ಮಾಸಾಚರಣೆಯನ್ನು ಯಶಸ್ವಿಗೊಳಿಸಲಾಯಿತು.ಕನ್ನಡ ಮಾಸಾಚರಣೆ ಅಂಗವಾಗಿ ಆಯೋಜಿಸಿದ ರಸಪ್ರಶ್ನೆ ಸ್ಪರ್ಧೆ, ಕಥೆ ಕಟ್ಟುವ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಗಾಯನ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ…
Udayarashmi kannada daily newspaper
ಮೋರಟಗಿ ರೇವಣಸಿದ್ಧೇಶ್ವರ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವ ಉದ್ಘಾಟನೆ ಮೋರಟಗಿ: ಅಕ್ಷರ ಜ್ಞಾನದ ಜೊತೆಯಲ್ಲಿ ಭಾರತೀಯ ಸಂಸ್ಕೃತಿ ಸಂಸ್ಕಾರ ಮುಖ್ಯ ಎಂದು ಹೇಳಿದರು.ಸ್ಥಳೀಯ ರೇವಣಸಿದ್ಧೇಶ್ವರ ಸಿದ್ಧರಾಮೇಶ್ವರ ಜಾತ್ರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಸಸಿಗೆ ನೀರು ಎರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೆಳೆಯುವ ಮಕ್ಕಳ ಭವಿಷ್ಯ ಬರೆಯುವುದು ಪಾಲಕರ ಕರ್ತವ್ಯ. ಎಂಎಲ್ಎ, ಎಂಪಿ, ಡಿಸಿ, ಡಾಕ್ಪರ, ಇಂಜನೀಯರ ಹೀಗೆ ಹಲವು ಕನಸುಗಳನ್ನು ಮಕ್ಕಳ ಮೂಲಕ ಬೆಳಸುವುದು ತಪ್ಪಲ್ಲ. ಜೊತೆಯಲ್ಲಿ ಸಂಸ್ಕಾರ ಕಲಿಸುವುದು ಅಷ್ಠೆ ಮುಖ್ಯ. ತಂದೆ ತಾಯಿ ಅಕ್ಕ ತಂಗಿ ಅಣ್ಣ ತಮ್ಮ ಬಂಧು ಬಳಗ ಗಂಡ ಹೆಂಡತಿ ಎಂಬ ಅನೋನ್ಯತೆಯ ಮಹತ್ವ, ದೇವಸ್ಥಾನ, ಭಕ್ತಿ, ಸಂಪ್ರದಾಯ, ಆಚಾರ, ಪದ್ಧತಿ ಮುಂದುವರೆಸುವ ಜ್ಞಾನ ತುಂಬುವ ಕರ್ತವ್ಯ ಹಿರಿಯರದ್ದು ಎಂದ ಅವರು ನಾನು ಶಾಸಕನಾಗಲು ತಾವುಗಳು ಕಾರಣ. ನಿಮ್ಮಿಂದ ನಾನು. ನನ್ನಿಂದ ಮುಂಬರುವ ದಿನ ಮಾನಗಳಲ್ಲಿ ಗ್ರಾಮದ ಅಭಿವೃದ್ದಿಯ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡುವೆ ಎಂದು ಹೇಳಿದರು.ಮೋರಟಗಿ ಗ್ರಾಮದ ಬಹುದಿನಗಳ ಕನಸು ಶ್ರೀ ಸಿದ್ಧರಾಮೇಶ್ವರ ಕಲ್ಯಾಣ…
ಪ್ರಶಸ್ತಿ ಪುರಸ್ಕೃತ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಅಭಿನಂದನೆ ಬೆಂಗಳೂರು: ಪತ್ರಕರ್ತರು ಸಮಾಜದ ಮತ್ತು ಸರ್ಕಾರದ ಅಂಕು-ಡೊಂಕುಗಳನ್ನು ತಿದ್ದುವವರಾಗಿದ್ದು, ವೃತ್ತಿ ಬದ್ದತೆ ಕಾಪಾಡಿಕೊಳ್ಳುವಂತೆ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕರೆ ನೀಡಿದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಅವರು ಮಾತನಾಡಿದರು.ಈ ಬಾರಿ ಸಮರ್ಥ ಪತ್ರಕರ್ತರಿಗೆ ಪ್ರಶಸ್ತಿಗಳು ಅರಸಿ ಬಂದಿರುವುದು ನಿಜಕ್ಕೂ ಶ್ಲಾಘನೀಯ. ಪತ್ರಕರ್ತರು ದಿಟ್ಟತನದಿಂದ ಕಾರ್ಯ ನಿರ್ವಹಿಸಬೇಕಾದುದು ಅತ್ಯಗತ್ಯ. ಹಾಗಾಗಿ ಸಮರ್ಥರಿಗೆ ಮನ್ನಣೆ ನೀಡಬೇಕಾದುದು ಎಲ್ಲರ ಕರ್ತವ್ಯ ಎಂದರು.ನಾನು ಸದನಕ್ಕೆ ಬಂದ ಹೊಸದರಲ್ಲಿ ಏನೇನು ತಪ್ಪು ಮಾಡಿದೆ ಎನ್ನುವುದನ್ನು ಹಿರಿಯ ಪತ್ರಕರ್ತರೇ ತಿದ್ದಿ ಹೇಳುತ್ತಿದ್ದರು. ಹಾಗಾಗಿ ಬಹಳ ಕಲಿಯಲು ಸಾಧ್ಯವಾಯಿತು. ವೃತ್ತಿಪರವಾಗಿ ಅಷ್ಟು ಪ್ರಭುದ್ಧತೆ ಪತ್ರಕರ್ತರಿಗೆ ಇರಬೇಕು ಎಂದರು.ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ವೃತ್ತಿ ಭಾಂದವರ ಬಗ್ಗೆ ತೋರುತ್ತಿರುವ ಕಾಳಜಿಯು ನಿಜಕ್ಕೂ ಸ್ತುತ್ಯಾರ್ಹ. ಪತ್ರಿಕಾ ವಿತರಕರನ್ನೂ ಸರ್ಕಾರ ಈ ಬಾರಿ ಗುರುತಿಸಿ…
ವಿದ್ಯಾರ್ಥಿಗಳು ಸುರಕ್ಷಿತವಾಗಿ ಮನೆಗೆ ವಾಪಸ್ | ಆತಂಕಗೊಂಡ ಪೋಷಕರು | ಡಿಸಿಎಂ ಭೇಟಿ ಬೆಂಗಳೂರು: ಬೆಂಗಳೂರಿನ ಅರವತ್ತು ಖಾಸಗಿ ಶಾಲೆಗಳಿಗೆ ಶುಕ್ರವಾರ ಬೆಳಗ್ಗೆ ಬಾಂಬ್ ಬೆದರಿಕೆ ಇರುವ ಇಮೇಲ್ ಬಂದಿದ್ದು, ಸಿಬ್ಬಂದಿ ಮತ್ತು ಪೋಷಕರಲ್ಲಿ ಭಯ ಹುಟ್ಟಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶಾಲಾ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳದೊಂದಿಗೆ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಪೊಲೀಸರು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ತಕ್ಷಣವೇ ಶಾಲೆಯ ಆವರಣದಿಂದ ಹೊರಗೆ ಕಳುಹಿಸಿ, ತೀವ್ರ ತಪಾಸಣೆ ನಡೆಸಿದರು. ಆದರೆ ಯಾವುದೇ ಅನುಮಾನಾಸ್ಪದ ವಸ್ತುಗಳು ಇನ್ನೂ ಪತ್ತೆಯಾಗಿಲ್ಲ ಮತ್ತು ಪ್ರಾಥಮಿಕ ತನಿಖೆಯಿಂದ ಇದು ಹುಸಿ ಬಾಂಬ್ ಸಂದೇಶ ಎಂದು ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.”ಇದುವರೆಗೆ ಬೆಂಗಳೂರಿನ 60 ಶಾಲೆಗಳಿಗೆ ಬಾಂಬ್ ಬೆದರಿಕೆಯ ಬಗ್ಗೆ ಇಮೇಲ್ ಬಂದಿದೆ. ಬಾಂಬ್ ಬೆದರಿಕೆಯ ಬಗ್ಗೆ ಇಮೇಲ್ ಐಡಿಯಿಂದ ಸಂದೇಶವನ್ನು ಸ್ವೀಕರಿಸಲಾಗಿದೆ. ಶೋಧ ಕಾರ್ಯಾಚರಣೆ ಬಹುತೇಕ ಮುಗಿದಿದೆ ಮತ್ತು ಇಲ್ಲಿಯವರೆಗೆ, ನಮ್ಮ ತಂಡಗಳಿಗೆ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಇದು…
