Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ದೇಶದಲ್ಲಿ ಇದೇ ಮೊದಲ ಬಾರಿಗೆ ಚರ್ಮರೋಗ ತಜ್ಞರಿಗೆ ಲೇಸರಗಳ ನಿರಂತರ ತರಬೇತಿ ಮತ್ತು ಫೆಲೋಶಿಪ್ ಪ್ರೋಗ್ರಾಂ ಆಯೋಜಿಸುವ ಇಟಲಿಯ ಸಹಭಾಗಿತ್ವದ ಅಕಾಡೆಮಿಯೊಂದು ಬಸವ ನಾಡು ವಿಜಯಪುರದಲ್ಲಿ ಡಿಸೆಂಬರ್ 3 ರಂದು ಬಿ. ಎಲ್. ಡಿ. ಇ ಆಸ್ಪತ್ರೆಯಲ್ಲಿ ಆರಂಭವಾಗಲಿದೆ.ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ- ಡೆಕಾ ಲೇಸರ್ ಅಕಾಡೆಮಿ ಉದ್ಘಾಟನೆ ಕಾರ್ಯಕ್ರಮ ಕಾರ್ಯಕ್ರಮ ಡಿಸೆಂಬರ್ 3ರಂದು ರವಿವಾರ ಬೆಳಿಗ್ಗೆ 10 ಗಂಟೆಗೆ ಬಿ.ಎಲ್.ಡಿ.ಇ ಆಸ್ಪತ್ರೆಯ ಹೊಸ ಟ್ರಾಮಾ ಸೆಂಟರ್ ನಲ್ಲಿ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೋಳ್ಳಲಿದ್ದಾರೆ.ಇಟಲಿಯ ಎಲ್ ಎನ್ ಸ್ಪಾ(ಲೇಸರ್) ಗ್ರುಪ್ ಪ್ರಧಾನ ವ್ಯವಸ್ಥಾಪಕ ಡಾ. ಪಾಲೊ ಸಾಲ್ವೆಡೊ, ವಿವಿಯ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಸಮಕುಲಪತಿ ಡಾ. ಅರುಣ ಸಿ. ಇನಾಮದಾರ, ಪ್ರಾಚಾರ್ಯ ಡಾ. ಅರವಿಂದ ವಿ. ಪಾಟೀಲ, ಕುಲಸಚಿವ…
ಸಚಿವ ಎಂ. ಬಿ. ಪಾಟೀಲ ಪುತ್ರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ನಿರ್ದೇಶಕ ಬಸನಗೌಡರ ವಿವಾಹ ಆರತಕ್ಷತೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಮತ್ತು ಆಶಾ ಎಂ. ಪಾಟೀಲ ದಂಪತಿಯ ಹಿರಿಯ ಪುತ್ರ ಹಾಗೂ ಬಿ.ಎಲ್.ಡಿ.ಇ ಸಂಸ್ಥೆ ನಿರ್ದೇಶಕ ಬಸನಗೌಡ ಪಾಟೀಲ ಹಾಗೂ ಹಿರಿಯ ಶಾಸಕ ಡಾ. ಶ್ಯಾಮನೂರು ಶಿವಶಂಕರಪ್ಪ ಅವರ ಮೊಮ್ಮಗಳಾದ ಅಖಿಲಾ ಅವರ ವಿವಾಹ ಆರತಕ್ಷತೆ ಕಾರ್ಯಕ್ರಮ ನಾಡಿನ ನಾನಾ ಕಡೆಗಳಿಂದ ಆಗಮಿಸಿದ್ದ ಸುಮಾರು 250 ಸ್ವಾಮೀಜಿಗಳ ಸಾನಿಧ್ಯದಲ್ಲಿ ಇಂದು ಶುಕ್ರವಾರ ನಗರದಲ್ಲಿ ನಡೆಯಿತು.ಗದಗ ತೋಂಟದಾರ್ಯ ಮಠದ ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ, ಸಿರಿಗೆರೆ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಮೂರು ಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗಿಂದ್ರ ಮಹಾಸ್ವಾಮೀಜಿಗಳು, ಕಾಶಿಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಗಳು, ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಉಜ್ಜಯಿನಿ ಜಗದ್ಗುರು ಶ್ರೀ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ, ಮೋಟಗಿ ಡಾ.…
ಕಲಕೇರಿ: ಈಗಿನ ಯುವ ಜನತೆ ಹಾಗೂ ಸಮುದಾಯಗಳು ಸರ್ಕಾರದ ಜೊತೆ ಕೈಜೋಡಿಸಿದರೆ ಹೆಚ್.ಐ.ವಿ ಏಡ್ಸ್ ರೋಗವನ್ನು ಇಡೀ ವಿಶ್ವದಿಂದ ತೊಲಗಿಸಬಹುದು ಇದರ ಬಗ್ಗೆ ಯುವಕರು ಅರಿಯುಕೊಳ್ಳಬೇಕು ಸರ್ಕಾರ ಇದರ ಜಾಗೃತಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ ಎಂದು ವೈದ್ಯರಾದ ನವೀನ ಶಂಕರ ಅವರು ಮಾತನಾಡಿದರುಏ.ಕೆ ಸಿರಸಗಿ ಪಿ.ಯು ವಿಜ್ಞಾನ ಹಾಗೂ ಆಲಮೀನ್ ಪ್ಯಾರಾ ಮೆಡಿಕಲ್ ಕಾಲೇಜು ಹಾಗೂ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು.ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳೊಂದಿಗೆ ಏಡ್ಸ್ ಜಾಗೃತಿಯ ಕುರಿತು ವಿವಿಧ ಘೋಷಣೆಗಳನ್ನು ಕೂಗುತ್ತಾ ಜಾತಾ ಹಮ್ಮಿಕೊಂಡು ನಂತರದಲ್ಲಿ ಸಿರಸಗಿ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯಕ್ರಮ ಜರುಗಿತುಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಜಹಾಂಗೀರ ಸಿರಸಗಿ, ವೈಧ್ಯಾಧಿಕಾರಿಗಳಾದ ನವೀನ ಶಂಕರ ಹಾಗೂ ಅತಿಥಿಗಳಾಗಿ ಪ್ರಾಚಾರ್ಯರಾದ ಶಿವಾನಂದ ಸಜ್ಜನ, ಎಂ.ಜಿ.ಮೊಮಿನ ಹಾಗೂ ರೇಷ್ಮಾ ಮುಜಾವರ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ.ಡಿ ಮೊತಿಬಾಯಿ, ಆಪ್ತ ಸಮಾಲೋಚಕರದ…
ವಿಜಯಪುರ: ವಿಜಯಪುರ ರೇಲ್ವೆ ಪೋಲಿಸ್ ಠಾಣೆಯಲ್ಲಿ ಅಂದಾಜು ೫೫ ವರ್ಷ ವಯಸ್ಸಿನ ಅಪರಿಚಿತ ಮೃತ ವ್ಯಕ್ತಿ ಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಈ ಅಪರಿಚಿತ ವ್ಯಕ್ತಿಯ ವಾರಸುದಾರರ ಪತ್ತೆಗೆ ರೈಲ್ವೆ ಪೋಲಿಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಮೃತ ವ್ಯಕ್ತಿಯ ಅಂದಾಜು ೫೦ ರಿಂದ ೫೫ ವರ್ಷ ವಯಸ್ಸಿನವಾಗಿದ್ದು, ೫.೫ಅಡಿ ಎತ್ರ, ಸಾದಾಗಪ್ಪು ಮೈಬಣ್ಣ, ದಪ್ಪನೆಯ ಮೈಕಟ್ಟು, ಕೋಲು ಮುಖ, ಮೊಂಡ ಮೂಗು, ತಲೆಯಲ್ಲಿ ೧.೨ ಇಂಚ್ ಬಿಳಿ ಕಪ್ಪು ಕೂದಲು, ಬಿಳಿ ಕಪ್ಪು ಬಣ್ಣದ ದಾಡಿ, ಮೀಸೆವುಳ್ಳವನಾಗಿರುತ್ತಾನೆ. ಕಿವಿಯ ಅಲೆತಗಳು ತೂತು ಇದೆ. ಮೈಮೇಲೆ ಬೂದು ಬಣ್ಣದ ತೋಳಿನ ಜಾಕೆಟ್, ಕ್ರಿಮ್ ಕಲರ್ ರೆಡಿಮೇಡ್ ಪ್ಯಾಂಟ್, ಚಾಕಲೇಟ್ ಬಣ್ಣದ ಕೆಂಪು ಡಿಸೈನ್ವುಳ್ಳ ಬರಮೋಡಾ, ಕೊರಳಲ್ಲಿ ಕಪ್ಪು ದಾರ, ಸೊಂಟದಲ್ಲಿ ಕಪ್ಪುದಾರದ ಉಡದಾರ, ಸ್ಯಾಂಡಲ್ ಚಪ್ಪಲಿಗಳು ಧರಿಸಿದ್ದಾನೆ.ಈ ಚಹರೆಪಟ್ಟಿಯುಳ್ಳ ವ್ಯಕ್ತಿ ಬಗ್ಗೆ ಅಥವಾ ವಾರಸುದಾರರ ಕುರಿತು ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಆರಕ್ಷಕ ಉಪ ನಿರೀಕ್ಷಕರು ರೇಲ್ವೆ ಪೋಲಿಸ್ ಠಾಣೆ ವಿಜಯಪುರ ೦೮೩೫೨-೨೫೦೮೮೩, ಅಥವಾ…
ವಿಜಯಪುರ: ಪ್ರಸಕ್ತ ಸಾಲಿನಲ್ಲಿ ೧ ರಿಂದ ೮ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ : ೦೮-೧೨-೨೦೨೩ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.ಅರ್ಹ ಅಭ್ಯರ್ಥಿಗಳು ಮೆಟ್ರಿಕ್ ಪೂರ್ವ ಆನ್ಲೈನ್ ವೆಬ್ಸೈಟ್ https://ssp.karnataka.gov.in ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಅವರು ತಿಳಿಸಿದ್ದಾರೆ.
ವಿಜಯಪುರ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ವಿಜಯಪುರ ಜಿಲ್ಲೆಯ ಜಿಲ್ಲಾ ಕೇಂದ್ರ ಹಾಗೂ ತಾಲೂಕಾ ಕೇಂದ್ರಗಳ ಎಲ್ಲ ನ್ಯಾಯಾಲಯಗಳಲ್ಲಿ ಡಿಸೆಂಬರ್ ೯ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.ಲೋಕ್ ಅದಾಲತ್ನಲ್ಲಿ ರಾಜಿಯಾಗಬಹುದಾದ ಎಲ್ಲ ಕ್ರಿಮಿನಲ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಕೋರಿ ಸಲ್ಲಿಸಿರುವ ಪ್ರಕರಣಗಳು,ಕೌಟುಂಬಿಕ ವ್ಯಾಜ್ಯಗಳು, ಆಸ್ತಿಯಲ್ಲಿ ಪಾಲು ಕೋರಿ ಸಲ್ಲಿಸಿರುವ ದಾವೆಗಳು, ದೂರವಾಣಿ, ನೀರಿನ ಬಿಲ್ಲು ಬಾಕಿ ಪಾವತಿ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿರುವ ಪ್ರಕರಣಗಳು, ಕಾರ್ಮಿಕ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಕಂದಾಯ ಪ್ರಕರಣಗಳು, ಸಾಲ ವಸೂಲಾತಿ, ಬ್ಯಾಂಕ್ ವ್ಯಾಜ್ಯಗಳು ಹಾಗೂ ಇತರೆ ಸಿವ್ಹಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು.ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಮೂಲಕ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಸಂತೋಷ ಎಸ್.ಕುಂದರ್ ಅವರು ಕೋರಿದ್ದಾರೆ.
ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಇಓ ರಾಹುಲ್ ಶಿಂಧೆ ಎಚ್ಚರಿಕೆ ವಿಜಯಪುರ: ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಇರುವುದರಿಂದ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು. ಕೆಲಸ ಬಯಸಿ ಬರುವ ಕೂಲಿಕಾರರಿಗೆ ಕೆಲಸ ನೀಡಬೇಕು. ಕೆಲಸ ನೀಡಲು ವಿಫಲರಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ & ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಸೂಚನೆ ಮೇರೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿಷಯಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು,ಬರ ಪರಿಸ್ಥಿತಿ ಇರುವುದರಿಂದ ಕೂಲಿ ಬಯಸಿ ಅರ್ಜಿ ಸಲ್ಲಿಸಿದ ೧೫ ದಿನಗಳೊಳಗಾಗಿ ಕೆಲಸ ನೀಡಬೇಕು. ಒಂದು ವೇಳೆ ಅರ್ಜಿ ಸಲ್ಲಿಸಿದ ೧೫ ದಿನಗಳೊಳಗಾಗಿ ಕೆಲಸ ನೀಡದಿದ್ದಲ್ಲಿ ಅಂತಹ ಫಲಾನುಭವಿಗಳಿಗೆ ಕಡ್ಡಾಯವಾಗಿ ನಿರುಧ್ಯೋಗ ಭತ್ಯೆ ನೀಡಲು ಕ್ರಮ…
ಸಿಂದಗಿ: ಅಧಿಕಾರ ಬರುತ್ತೆ, ಹೋಗುತ್ತೆ. ಆದರೆ ನಿರಂತರವಾಗಿ ಸಮಾಜದ ಕೆಲಸ ಮಾಡಬೇಕು ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಬಂದಾಳ ಗ್ರಾಮದ ಬನ್ನಿ ಮಂಟಪ ನಿರ್ಮಾಣ ಮಾಡಲು ತಮ್ಮ ಸ್ವಂತ ಖರ್ಚಿನಲ್ಲಿ ನಾಲ್ಕು ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಅವರು ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ದಾನ ಧರ್ಮ ಪರೋಪಕಾರಗಳು ಜೀವನದಲ್ಲಿ ಅಳವಡಿಸಿಕೊಂಡು ಗ್ರಾಮದ ಬನ್ನಿ ಮಂಟಪ ನವ ನಿರ್ಮಾಣ ಮಾಡುತ್ತಿರುವದು ಹೆಮ್ಮಯ ವಿಷಯವಾಗಿದೆ ಗ್ರಾಮದ ಸರ್ವ ಭಕ್ತರು ಬನ್ನಿ ಮಂಟಪ ನಿರ್ಮಾಣ ಮಾಡುವ ಕಾರ್ಯದಲ್ಲಿ ಭಾಗವಹಿಸಿ ಬನ್ನಿ ಮಂಟಪದ ಆರ್ ಸಿ ಗುಣಮಟ್ಟದಿಂದ ಕೂಡಿರಬೇಕು ಎಂದರು.ಭೂಮಿ ಪೂಜೆಯಲ್ಲಿ ಗ್ರಾಮಸ್ಥರು ಭಾಗವಹಿಸಿದ್ದರು.
ಮುದ್ದೇಬಿಹಾಳ: ತಾಲೂಕಿನ ನೂತನ ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಗೌರವ ಅಧ್ಯಕ್ಷರಾಗಿ ಸಿ .ಎಸ್ .ಮನಗೂಳಿ, ಅಧ್ಯಕ್ಷರಾಗಿ ಎಸ್. ಎಸ್. ಲಮಾಣಿ, ಕಾರ್ಯದರ್ಶಿಯಾಗಿ ಎಂ.ಎಸ್.ನಾಟೆಕಾರ್, ಖಜಾಂಚಿಯಾಗಿ ಜಿ.ಎಂ.ಸಾಲಿಮಠ , ಹಿರಿಯ ಉಪಾಧ್ಯಕ್ಷರಾಗಿ ವಿ.ಜಿ.ನಾಗರಾಳ, ಉಪಾಧ್ಯಕ್ಷರಾಗಿ ಸುಭಾಷ್ ಒ. ಮತ್ತು ಬಿ.ಎ .ವಂದಾಲ್, ಜಂಟಿ ಕಾರ್ಯದರ್ಶಿಯಾಗಿ ಶ್ರೀಮತಿ ರುದ್ರಮ್ಮ ಟಕ್ಕಳಕಿ, ಮತ್ತು ಸಂಜೀವ್ ರಾಥೋಡ್, ಸಂಘಟನಾ ಕಾರ್ಯದರ್ಶಿಯಾಗಿ ಎಸ್.ಎಸ್ .ಅಂಗಡಿ, ಎಸ್.ಎಂ.ಇದ್ದಲಗಿ, ಮತ್ತು ಬಿ.ಎಸ್ .ರಾಮೋಡಗಿ, ಕ್ರೀಡಾ ಕಾರ್ಯದರ್ಶಿಯಾಗಿ ಬಿ.ಟಿ. ಬಜಂತ್ರಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ವಿ.ವಿ. ಗದಗ, ಪತ್ರಿಕ ಕಾರ್ಯದರ್ಶಿಯಾಗಿ ಜೆ .ಎಸ್. ನಾಡಗೌಡರು, ಆಂತರಿಕ ಲೆಕ್ಕ ಪರಿಶೋಧಕರಾಗಿ ಬಿ.ಎಸ್. ಪಣದಕಟ್ಟಿ ಅವರನ್ನು ಆಯ್ಕೆ ಮಾಡಲಾಯಿತು.ಈ ವೇಳೆ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಎಚ್. ಎಲ್. ಕರಡ್ಡಿ, ಬಿ ಕೆ .ನಾಯಕ, ಎ.ಸಿ. ಕೆರೂರ, ಎಸ್. ಟಿ ಸಜ್ಜನ್ ಎಸ್.ಆರ್. ಸುಲ್ಪಿ , ವಿ .ಎಸ್.ತೆಗ್ಗಿ ಸೇರಿದಂತೆ ಮತ್ತೀತರರು ಇದ್ದರು.
ದೇವರಹಿಪ್ಪರಗಿ: ಇಲ್ಲಿನ ಪಟ್ಟಣ ಪಂಚಾಯತಿಗೆ ಸ್ವಚ್ಛತೆಯಲ್ಲಿ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿರುವುದಕ್ಕಾಗಿ ಮುನಸಿಪಾಲಿಕಾ-೨೦೨೩ರ ಮಹಾ ಸಮ್ಮೇಳನದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಬೆಂಗಳೂರಿನಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ೧೭ನೇ ಅಂತರಾಷ್ಟ್ರೀಯ ಮಹಾಸಮ್ಮೇಳನ ಹಾಗೂ ಪ್ರದರ್ಶನದಲ್ಲಿ ಪಟ್ಟಣಪಂಚಾಯತಿ ಮುಖ್ಯಾಧಿಕಾರಿ ಎಲ್ ಡಿ ಮುಲ್ಲಾ ಹಾಗೂ ಕಿರಿಯ ಆರೋಗ್ಯ ಅಧಿಕಾರಿ ಫಿರೋಝ ಮುಲ್ಲಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ರಾಜ್ಯದಲ್ಲಿ ಸ್ವಚ್ಛತೆಯಲ್ಲಿ ಸಾಧನೆ ಮಾಡಿರುವ ೦೯ ಪಟ್ಟಣ ಪಂಚಾಯತಿಗಳಿಗೆ ಸ್ವಚ್ಛತೆ ಕುರಿತು ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲು ಅವಕಾಶವೂ ಸಿಕ್ಕಿತ್ತು. ನಗರಗಳ ಭವಿಷ್ಯ, ಸುರಕ್ಷತೆ, ಚತುರತೆ ಮತ್ತು ಸಮರ್ಥನೀಯ ಕುರಿತು ನಡೆದ ಮಹಾ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿತ್ತು.ಪ್ರಶಸ್ತಿ ಸಿಕ್ಕ ಸಂತಸದಲ್ಲಿ ಮಾತನಾಡಿದ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಲ್ ಡಿ ಮುಲ್ಲಾ, ಕಳೆದ ಹಲವಾರು ವರ್ಷಗಳಿಂದ ಪಟ್ಟಣದ ಸ್ವಚ್ಛತೆಗಾಗಿ ಅತ್ಯಾಧುನಿಕ ತಂತ್ರಜ್ಞಾನ ಮೂಲಕ ಕಾರ್ಯ ಮಾಡಲಾಗುತ್ತಿದೆ. ಈ ಕುರಿತು ಹಲವಾರು ಬಾರಿ ರಾಜ್ಯ ಮಟ್ಟದ ಅಧಿಕಾರಿಗಳ ಮುಂದೆ ಪ್ರಸ್ತುತ ಪಡಿಸಲಾಗಿತ್ತು. ಸ್ವಚ್ಛತೆ ಕುರಿತು…
