Author: editor.udayarashmi@gmail.com

ವಿಜಯಪುರ: ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಖಾತೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರು ಡಿಸೆಂಬರ್ ೦೧ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ಬೆಳಿಗ್ಗೆ ೧೧-೩೦ಕ್ಕೆ ಮುಧೋಳದಿಂದ ವಿಜಯಪುರಕ್ಕೆ ಆಗಮಿಸಿ, ಮಧ್ಯಾಹ್ನ ೧ ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ ೩ ಗಂಟೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಂಜೆ ೬ ಗಂಟೆಗೆ ವಿಜಯಪುರದಿಮದ ಮುಧೋಳಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಈವರೆಗೆ ೧೫೯.೯೨ ಕೋಟಿ ರೂ. ರೈತರಿಗೆ ಪಾವತಿ :ಡಿಸಿ ಟಿ.ಭೂಬಾಲನ್ ವಿಜಯಪುರ: ಜಿಲ್ಲೆಯ ೯ ಸಕ್ಕರೆ ಕಾರ್ಖಾನೆಗಳಲ್ಲಿ ೨೦೨೩-೨೪ನೇ ಸಾಲಿನ ಹಂಗಾಮಿನ ಕಬ್ಬು ನುರಿಸುವ ಕಾರ್ಯ ಆರಂಭವಾಗಿದ್ದು, ಈವರೆಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ೧೧.೭೬ ಲಕ್ಷ ಮೆಟ್ರಿಕ್ ಟನ್ ಕಬ್ಬನ್ನು ನುರಿಸಿದ್ದು, ದಿನಾಂಕ ೨೯-೧೧-೨೦೨೩ ರವರೆಗೆ ೧೫೯.೯೨ ಕೋಟಿ ಹಣವನ್ನು ರೈತರಿಗೆ ಪಾವತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಜಿಲ್ಲೆಯ ಸಾಯಿಬಸವ ಮಲಘಾಣ ಸಕ್ಕರೆ ಕಾರ್ಖಾನೆಯವರು ರೂ ೪.೯೦, ಇಂಡಿಯನ್ ಶುಗರ್ಸ ಹಾವಿನಾಳ ೧೦.೫೮, ಶ್ರೀ ಬಾಲಾಜಿ ಶುಗರ್ಸ ಯರಗಲ್ಲ ೪೯.೦೭, ಕೆಪಿಆರ್ ಶುಗರ್ಸ ಆಲಮೇಲ ೨೫.೧೧, ಜಮಖಂಡಿ ಶುಗರ್ಸ ಯುನಿಟ್-೨ ನಾದ ಕೆಡಿ ೧೪.೯೧, ಸಂಗಮನಾಥ ಶುಗರ್ಸ ಯರಗಲ್ಲ ಬಿಕೆ ೧೮.೧೯, ಭೀಮಾಶಂಕರ ಶುಗರ್ಸ ೧೧.೮೩ ಹಾಗೂ ಶ್ರೀ ಬಸವೇಶ್ವರ ಶುಗರ್ಸ ಕಾರಜೋಳ ೨೫.೩೦ ಕೋಟಿ ಹಣವನ್ನು ರೈತರ ಖಾತೆಗೆ ಜಮೆ ಮಾಡಿದ್ದಾರೆ. ರೈತರಿಂದ ಪಡೆದುಕೊಂಡು ಕಬ್ಬು ನುರಿಸಿದ ಕೂಡಲೇ ಆಯಾ ರೈತರಿಗೆ ಹಣ ನೀಡಲು ಎಲ್ಲಾ ಸಕ್ಕರೆ…

Read More

ಸಂತ ಕನಕದಾಸ ಜಯಂತಿಗೆ ಚಾಲನೆ | ಸಚಿವ ಡಾ.ಎಂ.ಬಿ.ಪಾಟೀಲ ಅಭಿಮತ ವಿಜಯಪುರ: ದಾಸ ಸಾಹಿತ್ಯಕ್ಕೆ ವೈಚಾರಿಕೆ ನೆಲೆಗಟ್ಟನ್ನು ಒದಗಿಸಿದ ಭಕ್ತ ಶ್ರೇಷ್ಠ ಸಂತ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಉನ್ನತ ಚಿಂತನೆಗಳನ್ನು ಬಿತ್ತಿದ್ದಾರೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಸಂತ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕನಕದಾಸರ ಚಿಂತನೆಗಳು ದಾಸ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದೆ. ಕ್ಲಿಷ್ಟಕರ ಹಾಗೂ ಸಮಾಜದಲ್ಲಿ ಮೌಢ್ಯತೆ ತುಂಬಿದ ಸಂದರ್ಭದಲ್ಲಿ ಅವರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವಲ್ಲಿ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.ಆಧ್ಯಾತ್ಮಿಕ, ಸಾಮಾಜಿಕ ಮತ್ತು ವೈಚಾರಿಕೆ ಪ್ರಜ್ಞೆ ಬೆಳೆಸಿದ ಕನಕದಾಸರ ತತ್ವಾದರ್ಶಗಳು ದಾರಿದೀಪವಾಗಿವೆ. ದೇಶದ ಭವ್ಯವಾದ ಸಂಸ್ಕೃತಿ, ಪರಂಪರೆ ಇಲ್ಲಿನ ದಾರ್ಶನಿಕರ ವಿಚಾರಧಾರೆಗಳನ್ನು ಅವರ ಚಿಂತನೆಗಳನ್ನು ಇಡೀ ವಿಶ್ವವೇ ಅನುಸರಿಸುತ್ತಿದ್ದೆ. ಇಂತಹ ಶ್ರೇಷ್ಠ…

Read More

ಚಿಮ್ಮಡ: ಕನಕದಾಸರು ಕನ್ನಡ ಭಾಷೆಯ ಪ್ರಸಿದ್ದ ಕೀರ್ತನಕಾರರು, ಹರಿದಾಸರಾಗಿದ್ದರು. ಅವರ ತತ್ವ ಆದರ್ಶಗಳು ಪ್ರತಿಯೊಬ್ಬರಿಗೆ ಮಾದರಿಯಾಗಿದೆ ಎಂದು ಸ್ಥಳಿಯ ರಘುನಾಥ ಪ್ರೀಯ ಸಾಧು ಮಹಾರಾಜರ ಮಠದ ಶ್ರೀ ಜನಾರ್ಧನ ಮಹಾರಾಜರು ಹೇಳಿದರು.ಗ್ರಾಮದ ಕನಕದಾಸ ವೃತ್ತದಲ್ಲಿ ಹಾಲುಮತ ಸಮಾಜ ಬಾಂಧವರಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ಸಂತರು, ಮಹಾಪುರುಷರ ಆದರ್ಷಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಕನಕದಾಸರು ನಮ್ಮ ನಾಡು ಕಂಡ ಶ್ರೇಷ್ಠ ದಾಸರಲ್ಲಿ ಒಬ್ಬರಾಗಿದ್ದಾರೆ. ಅವರ ಅಚಲ ಭಕ್ತಿ ಮತ್ತು ವೈರಾಗ್ಯ ಮನೋಭಾವನೆಯು ಸರ್ವಕಾಲಕ್ಕೂ ಮಾದರಿಯಾಗಿದೆ. ಪ್ರತಿವರ್ಷಕೊಮ್ಮೆ ಅವರ ಜಯಂತಿ ಆಚರಣೆಗೆ ಮಾತ್ರ ಸಿಮಿತ ಗೊಳಿಸದೆ, ಕನಕದಾಸರ ಜೀವನದ ತತ್ವ-ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆಗಳು ಸಾರ್ಥಕವಾಗುತ್ತವೆ ಎಂದರು.ಗ್ರಾಮದ ಕನಕದಾಸ ವೃತ್ತದಲ್ಲಿ ಕನಕದಾಸರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಇದೇ ಸಂದರ್ಭದಲ್ಲಿ ಜನಾರ್ಧನ ಮಹಾರಾಜರನ್ನು ಸಮಾಜ ಬಾಂಧವರಿಂದ ಸತ್ಕರಿಸಿ ಗೌರವಿಸಲಾಯಿತು.ಸಮಾರಂಭದಲ್ಲಿ ಹಾಲುಮತ ಸಮಾಜದ ಪರಪ್ಪ ಮುಂದಿನಮನಿ, ಅಶೋಕ…

Read More

ತಾಳಿಕೋಟಿ: ಸಂತ ಕನಕದಾಸರು ಜಾತಿ ವ್ಯವಸ್ಥೆಯನ್ನು ವಿರೋಧಿಸಿದರು ಎಲ್ಲಾ ಮತ -ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠವಾದದ್ದು ಎಂದು ಸಾರಿದರು ತಾರತಮ್ಯ ಭೇದಭಾವ ಮಾನವ ಕುಲಕ್ಕೆ ಮಾರಕ ಎಂಬುದನ್ನು ಅವರು ತಮ್ಮ ಕೀರ್ತನೆಗಳ ಮೂಲಕ ಸಾರಿ ಹೇಳಿದರು ಅವರ ಆದರ್ಶ ವಿಚಾರಧಾರೆಗಳು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿವೆ ಎಂದು ತಹಸಿಲ್ದಾರ್ ಕೀರ್ತಿ ಚಾಲಕ್ ಹೇಳಿದರು.ಗುರುವಾರ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದ ಸಭಾಂಗಣದಲ್ಲಿ ತಾಲೂಕ ಆಡಳಿತ ವತಿಯಿಂದ ಆಯೋಜಿಸಿದ್ದ ಸಂತ ಕನಕದಾಸರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ಹಾಲುಮತ ಸಮಾಜದ ಮುಖಂಡ ಶಿವರಾಜ್ ತಂಗಡಗಿ ಮಾತನಾಡಿ ಜಾತ್ಯಾತೀತ ಸಮಾನತೆಯ ಸಮಾಜದ ನಿರ್ಮಾಣಕ್ಕಾಗಿ ದುಡಿದ ಸಂತ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಬಾರದು ಅವರು ಇಡೀ ಮಾನವ ಸಮಾಜದ ಒಳಿತನ್ನು ಬಯಸಿದವರು ಇಂತಹ ಮಹಾನ್ ಸಂತನ ಜಯಂತಿಯನ್ನು ಎಲ್ಲ ಸಮಾಜದವರು ಕೂಡಿ ಕೊಂಡು ಆಚರಿಸುವಂತಾಗಬೇಕು ಎಂದರು. ಕಾರ್ಯಕ್ರಮದಲ್ಲಿ ತಾಪಂ ಇಒ ಬಿ. ಆರ್. ಬಿರಾದರ. ಹಾಲುಮತ ಸಮಾಜ ತಾಳಿಕೋಟಿ ಅಧ್ಯಕ್ಷ ಸಾಹೇಬ್ ಗೌಡ ಆಲ್ಯಾಳ. ಉಪಾಧ್ಯಕ್ಷ ಮಲ್ಲಣ್ಣ ಕುರುಬರ.…

Read More

ತಾಳಿಕೋಟಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಹೌಸಿಂಗ್ ಫಾರ್ ಆಲ್ ಹಾಗೂ ರಾಜ್ಯ ಸರ್ಕಾರದ ವಸತಿ ಯೋಜನೆಗಳ ಸಹ ಯೋಜನೆಯೊಂದಿಗೆ ನಿರ್ಮಿಸುತ್ತಿರುವ 600 ( ಜಿ+3) ಗುಂಪು ಮನೆಗಳ ನಿರ್ಮಾಣ ಕಾಮಗಾರಿಗೆ ಶಾಸಕ ಸಿ. ಎಸ್. ನಾಡಗೌಡ ಅವರು ಭೂಮಿ ಪೂಜೆ ನೆರವೇರಿಸಿದರು.ಬುಧವಾರ ಪಟ್ಟಣದ ಹರನಾಳ ರಸ್ತೆಯ ಪಕ್ಕದಲ್ಲಿ ನಿರ್ಮಾಣಗೊಳ್ಳಲಿರುವ ನಿವೇಶನದಲ್ಲಿ ರಾಜೀವ್ ಗಾಂಧಿ ವಸತಿ ನಿಗಮ ಹಾಗೂ ತಾಳಿಕೋಟಿ ಪುರಸಭೆ ಇವರ ಆಶ್ರಯದಲ್ಲಿ ಹಮ್ಮಿಕೊಂಡ ಸಮಾರಂಭದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಈ ಬಡಾವಣೆ ಆಧುನಿಕ ತಂತ್ರಜ್ಞಾನದಿಂದ ನಿರ್ಮಾಣ ಗೊಳ್ಳಲಿದ್ದು ಸಕಲ ಸೋಲತ್ತುಗಳನ್ನು ಹೊಂದಿರುವ ಒಂದು ಸುಂದರವಾದ ಬಡಾವಣೆ ಆಗಲಿದೆ ಇದು ತಾಳಿಕೋಟಿ ಪಟ್ಟಣದ ಉಪನಗರದಂತೆ ಆಗುವುದು ಈ ಕಾಮಗಾರಿಯು ಅತ್ಯುತ್ತಮ ರೀತಿಯಲ್ಲಿ ಮುಕ್ತಾಯವಾಗಬೇಕಾದರೆ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಸಣ್ಣಪುಟ್ಟ ಏನಾದರೂ ತೊಂದರೆ ಹಾಗೂ ಸಮಸ್ಯೆಗಳು ಇದ್ದರೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಗೆಹರಿಸಿಕೊಳ್ಳಿ ಈ ಮನೆಗಳು ನಿರ್ಮಾಣವಾದಾಗ ತಾವು ತಮ್ಮ ನೂತನ ಮನೆಯಲ್ಲಿ ನೆಮ್ಮದಿ ಯ ಬದುಕು ನೆಡಸಿ ಎಂದು…

Read More

ಇಂಡಿ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ವಿಭಾಗ ಮತ್ತು ಕಡಣಿಯ ಬೆರಗು ಪ್ರಕಾಶನದ ಸಹಯೋಗದಲ್ಲಿ ಡಾ. ಪ್ರಕಾಶ ಗ.ಖಾಡೆ ಅವರ ಬಾಳುಕುನ ಪುರಾಣ ಕಥಾ ಓದು ಮತ್ತು ಸಂವಾದ ಕಾರ್ಯಕ್ರಮವನ್ನು ಕಾಲೇಜು ಸಭಾಭವನದಲ್ಲಿ ಡಿಸೆಂಬರ್ ೨ ರಂದು ಹಮ್ಮಿಕೊಂಡಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ರಮೇಶ ಎಸ್. ಕತ್ತಿ ತಿಳಿಸಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಆರ್.ಎಚ್.ರಮೇಶ ವಹಿಸಲಿದ್ದಾರೆ. ಬಾಳುಕುನ ಪುರಾಣ ಕತಾವಲೋಕನವನ್ನು ಸವದತ್ತಿಯ ಸರಕಾರಿ ಪದವಿಪೂರ್ವ ಕಾಲೇಜಿ ಪ್ರಾಚಾರ್ಯ ಡಾ. ವೈ.ಎಂ.ಯಾಕೊಳ್ಳಿ ಅವರು ಮಾಡಲಿದ್ದು, ಕತೆಗಾರರ ಕುರಿತು ಹಿರಿಯ ಸಾಹಿತಿ ವಿಜಯಪುರದ ಶಂಕರ ಬೈಚಬಾಳ ಅವರು ಮಾತನಾಡಲಿದ್ದಾರೆ. ಕತೆಗಾರ ಡಾ. ಪ್ರಕಾಶ ಗ.ಖಾಡೆ ಅವರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಐಕ್ಯೂಐಸಿ ಸಂಯೋಜಕಿ ಡಾ. ಶೀರುನುಸಲ್ತಾನ ಇನಾಂದಾರ, ಬೆರಗು ಪ್ರಕಾಶನ ಸಂಸ್ಥೆಯ ಅಧ್ಯಕ್ಷೆ ವಿಜಯಲಕ್ಷಿö್ಮ ಆರ್. ಕತ್ತಿ ಭಾಗವಹಿಸಲಿದ್ದಾರೆ.ಬೆರಗು ಪ್ರಕಾಶನವು ಆಯ್ದ ೫೦ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ಉಚಿತವಾಗಿ ನೀಡಿ, ಅವರಲ್ಲಿ ಸಾಹಿತ್ಯಾಸಕ್ತಿ ಬೆಳೆಸುವುದು ಮತ್ತು ಕತೆಗಾರರೊಂದಿಗೆ…

Read More

ವಿಜಯಪುರ: ನಗರದ ಹೊರವಲಯದ ಬುರಾಣಪುರ ಹತ್ತಿರ ನಿರ್ಮಿಸಲಾಗುತ್ತಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.ವಿಜಯಪುರ ವಿಮಾನ ನಿಲ್ದಾಣ ರನ್‌ವೇ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದ್ದು, ಬಾಕಿ ಇರುವ ರನವೇ ಮಾರ್ಕಿಂಗ್ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು. ಟರ್ಮಿನಲ್ ಕಟ್ಟಡದಲ್ಲಿ ಅಳವಡಿಸಲಾದ ಇಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಟರ್ಮಿನಲ್ ಕಟ್ಟಡ ಬಣ್ಣ ಹಚ್ಚುವ ಕಾಮಗಾರಿಯನ್ನು ವೀಕ್ಷಿಸಿದ ಅವರು, ರಾಷ್ಟ್ರೀಯ ಹೆದ್ದಾರಿಯಿಂದ ವಿಮಾನ ನಿಲ್ದಾಣಕ್ಕೆ ಕೂಡುವ ರಸ್ತೆ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ತಹಶೀಲ್ದಾರ ಶ್ರೀಮತಿ ಕವಿತಾ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎಂ.ಪಾಟೀಲ, ಪ್ರಥಮ ದರ್ಜೆ ಗುತ್ತಿಗೆದಾರರಾದ ಎಸ್.ಎಸ್.ಆಲೂರ ಹಾಗೂ ಶರವಣನ್ ಉಪಸ್ಥಿತರಿದ್ದರು.

Read More

ಬಸವನಬಾಗೇವಾಡಿ: ಪಟ್ಟಣದ ಬಸವ ಭವನದಲ್ಲಿ ಕರ್ನಾಟಕ ರಾಜ್ಯ ನಗೆಯೋಗ ಕೂಟಗಳ ಒಕ್ಕೂಟ ಹಾಗೂ ಸ್ಥಳೀಯ ಬಸವೇಶ್ವರ ನಗೆಯೋಗ ಕೂಟದ ಸಹಯೋಗದಲ್ಲಿ ಡಿ.೨ ಮತ್ತು ೩ ರಂದು ಎರಡು ದಿನಗಳ ಕಾಲ ರಾಜ್ಯ ಮಟ್ಟದ ೨೦ ನೇ ನಗೆ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ.ಡಿ.೨ ರಂದು ಮಧ್ಯಾನ್ಹ ೨.೩೦ ಗಂಟೆಗೆ ಸಮ್ಮೇಳನವನ್ನು ಸಚಿವ ಶಿವಾನಂದ ಪಾಟೀಲರು ಉದ್ಘಾಟಿಸುವರು. ಉದ್ಘಾಟನಾ ಸಮಾರಂಭದ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ರಾಜ್ಯ ನಗೆಯೋಗ ಕೂಟದ ಅಧ್ಯಕ್ಷ ಲಯನ ಪ್ರೊ.ಪಿ.ಸದಾಶಿವ ವಹಿಸುವರು. ಮುಖ್ಯ ಅತಿಥಿಗಳಾಗಿ ಅಂತರಾಷ್ಟ್ರೀಯ ನಗೆಯೋಗ ಕೂಟಗಳ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಮದನ ಕಠಾರಿಯಾ, ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಜಿಲ್ಲಾ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ವಿಮಾ ಸಹಕಾರ ಮಹಾಮಂಡಳ ಅಧ್ಯಕ್ಷ ಶಿವನಗೌಡ ಬಿರಾದಾರ, ರಾಜ್ಯ ನಗೆಯೊಗ ಕೂಟಗಳ ಒಕ್ಕೂಟದ ಕಾರ್ಯದರ್ಶಿಗಳಾದ ಬಿ.ಎಸ್.ರಾಜೇಶ್ವರ, ಪಾರ್ವತಿ ಶೆಟ್ಟಿ, ಒಕ್ಕೂಟದ ಖಜಾಂಚಿ ಡಾ.ದೇವತಾ ಶ್ರೀನಿವಾಸ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ…

Read More

ಬಸವನಬಾಗೇವಾಡಿ: ಪಟ್ಟಣದ ಚನ್ನಮ್ಮ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯದಿಂದ ಭಕ್ತ ಕನಕದಾಸ ಜಯಂತಿ ಆಚರಿಸಲಾಯಿತು.ಕನ್ನಡಪ್ರಭವಾರ್ತೆ, ಬಸವನಬಾಗೇವಾಡಿ, ನ. 30ವಿಶ್ವಮಾನವ ಕಲ್ಪನೆ ಹೊಂದಿದ ಮಾನವೀಯ ಗುಣಗಳನ್ನು ಪ್ರತಿಪಾದಿಸಿ ಸಮಾನತೆಯ ಸಂದೇಶವನ್ನು ಭಕ್ತ ಕನಕದಾಸರು ಸಾರಿದ್ದಾರೆ ಎಂದು ರಾಷ್ಟ್ರೀಯ ಬಸವ ಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ಪಟ್ಟಣದ ಕಿತ್ತೂರಾಣಿ ಚೆನ್ನಮ್ಮ ವೃತ್ತದಲ್ಲಿ ಗುರುವಾರ ದಾಸ ಶ್ರೇಷ್ಠ ಕನಕದಾಸರ 536 ನೆಯ ಜಯಂತೋತ್ಸವದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಕನಕದಾಸರು ರಚಿಸಿರುವ ರಾಮಧಾನ್ಯ ಚರಿತ ಸೇರಿದಂತೆ ಹಲವಾರು ಸಾಹಿತ್ಯಗಳು ನಮಗೆ ದಾರಿದೀಪ. ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ. ಅವುಗಳ ಮೂಲಕ ಸಮಾಜದಲ್ಲಿ ಶಾಂತಿ, ಸಮಾನತೆ ಪ್ರಗತಿ ಸಾಧಿಸಲು ಸಾಧ್ಯವಿದೆ. ತಮ್ಮ ಸಮಾಜಸತ್ವವನ್ನು ಬಿಟ್ಟು ಅವರು ದಾಸ ಶ್ರೇಷ್ಠರಾಗಿದ್ದಾರೆ ಎಂದು ಹೇಳಿದರು.ದಾಸ ಸಾಹಿತ್ಯಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದ ತತ್ವಜ್ಞಾನಿ. ದಾಸ ಪದ ಹಾಡಿ ಜೀವನದ ಸಾರವನ್ನು ತಿಳಿಸಿದರು .ಕುಲ ಕುಲ ಕುಲವೆಂದು ಬಡಿದಾಡದಿರಿ, ನಿಮ್ಮ ಕುಲದ ನೆಲೆಯನಾದರೂ ಬಲ್ಲಿರಾ…

Read More