Author: editor.udayarashmi@gmail.com

ಮುದ್ದೇಬಿಹಾಳ: ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಖಾಸಗಿ ಶಾಲೆಯವರನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ಬಿಂಬಿಸಿದ ಇಲ್ಲಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ ಇವರ ಧೋರಣೆಯನ್ನು ಉಗ್ರವಾಗಿ ಖಂಡಿಸುತ್ತೇನೆ ಎಂದು ಖಾಸಗಿ ಅನುದಾನ ರಹಿತ ಶಾಲೆಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಮಂಜುನಾಥ ಕೊಪ್ಪ ಹೇಳಿದರು.ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ವೇದಿಕೆಯ ಮೇಲೆ ನಿಂತು ಮಾಧ್ಯಮದ ಎದುರು ತಮ್ಮ ಆಕ್ರೋಶವನ್ನು ಅವರು ಹೊರಹಾಕಿದರು.ಸಂಪೂರ್ಣವಾಗಿ ಈ ಕಾರ್ಯಕ್ರಮವೇ ಕಾಟಾಚಾರಕ್ಕಾದಂತಾಗಿದೆ. ಸರಿಯಾದ ಟೆಂಟ್ ವ್ಯವಸ್ಥೆ ಇಲ್ಲದೇ ಮಕ್ಕಳು ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದಿದ್ದಾರೆ. ಇಲಾಖೆಗೆ ಸಾಕಷ್ಟು ಅನುದಾನ ಬಂದಿದ್ದರೂ ಅದನ್ನು ಖರ್ಚು ಮಾಡದೇ ಎತ್ತಿ ಹಾಕುವ ಹುನ್ನಾರ ಇಲ್ಲಿನ ಬಿಇಓ ಧರಿಕಾರ ಅವರು ಮಾಡಿದ್ದಾರೆ. ಖಾಸಗಿ ಶಾಲೆಯವರನ್ನು ಹಣಕಾಸಿನ ನೆರವು ಬೇಕಾದಾಗ ಮಾತ್ರ ಕರೆಯುತ್ತಾರೆ. ಆದರೆ ಈ ಕಾರ್ಯಕ್ರಮದಲ್ಲಿ ಖಾಸಗಿ ಶಾಲೆಯವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ. ಈ ಪ್ರತಿಭಾ ಕಾರಂಜಿ…

Read More

ಬೆಂಗಳೂರು: ಮುಂದಿನ ತಿಂಗಳು ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಮಂಡನೆ ಮಾಡಲು ರಾಜ್ಯ ಸರಕಾರ ಮುಂದಾಗಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಬೃಹತ್‌ ಚಳವಳಿ ನಡೆಸಿದರು.ಬುಧವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಜಮಾಯಿಸಿದ ದಲಿತ ಸಂಘರ್ಷ ಸಮಿತಿ ಸದಸ್ಯರು, ರಾಜ್ಯ ಸರಕಾರ ಈ ಬಾರಿಯ ಅಧಿವೇಶನದಲ್ಲಿ ಎ.ಜೆ.ಸದಾಶಿವ ಆಯೋಗದ ವರದಿ ಮಂಡಿಸಿ ದಲಿತ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಘೋಷಣೆ ಕೂಗಿ ಆಗ್ರಹಿಸಿದರು.ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ ಸಂಸ್ಥಾಪಕ ಎನ್.ಮೂರ್ತಿ, ಎ.ಜೆ. ಸದಾಶಿವ ಆಯೋಗದ ವರದಿಯನ್ನು ಉಭಯ ಸದನಗಳಲ್ಲಿ ಅಂಗೀಕರಿಸಿ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು, ಅದೇ ರೀತಿ, ಕೇಂದ್ರ ಸರಕಾರ ಚಳಿಗಾಲದ ಅಧಿವೇಶನದಲ್ಲಿ ಪರಿಶಿಷ್ಟ ಒಳ ಮೀಸಲಾತಿ ಬಗ್ಗೆ ಉಷಾಮಹ ಸಮಿತಿ (2008) ನೀಡಿರುವ ವರದಿಯಂತೆ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ ಮಾಡಿ ಸಂವಿಧಾನದ ಷೆಡ್ಯೂಲ್ಡ್ 9ರಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದರು.ಇನ್ನೂ ಸುಪ್ರೀಂ ಕೋರ್ಟ್‌ನ 7 ನ್ಯಾಯಾಧೀಶರ ಪೀಠದಲ್ಲಿರುವ ವಿವಿಧ ರಾಜ್ಯಗಳ ಒಳ…

Read More

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಮಾಹಿತಿ ಬೆಂಗಳೂರು: ‘ವಿವಿಧ ಇಲಾಖೆಗಳ ಕಾಮಗಾರಿಗಳಲ್ಲಿನ ಭ್ರಷ್ಟಾಚಾರದ ಕುರಿತು ದಾಖಲೆ ಸಹಿತ ದೂರು ಸಲ್ಲಿಸಿದ್ದೇವೆ. ನಮ್ಮ ಬಳಿ ಲಭ್ಯವಿರುವ 600ಕ್ಕೂ ಹೆಚ್ಚು ಪುಟಗಳಷ್ಟು ದಾಖಲೆಗಳನ್ನು ಎಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಆಯೋಗಕ್ಕೆ ಹಸ್ತಾಂತರಿಸಿದ್ದೇವೆ’ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ತಿಳಿಸಿದ್ದಾರೆ.ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸರಕಾರದ ಅವಧಿಯಲ್ಲಿ ವಿವಿಧ ಇಲಾಖೆಗಳ ಕಾಮಗಾರಿಗಳಲ್ಲಿ ಶೇ.40ರಷ್ಟು ಕಮಿಷನ್ ಪಡೆಯಲಾಗುತ್ತಿತ್ತು ಎಂದು ಪ್ರಧಾನಿ ಮೋದಿ ಹಾಗೂ ಅಂದಿನ ಮುಖ್ಯಮಂತ್ರಿಗೆ ದೂರು ಸಲ್ಲಿಸಲಾಗಿತ್ತು. ಆದರೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದು ದೂರಿದರು.ಬಿಜೆಪಿ ಸರಕಾರದಲ್ಲಿ ಶೇ.40ರಷ್ಟು ಕಮಿಷನ್ ಪಡೆದಿದ್ದರ ಬಗ್ಗೆ ತನಿಖೆ ನಡೆಸುವಂತೆ ಈಗ ಕಾಂಗ್ರೆಸ್ ಸರಕಾರವು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಆಯೋಗ ರಚಿಸಿದೆ. ಈಗಿನ ಕಾಂಗ್ರೆಸ್ ಸರಕಾರದಲ್ಲಿಯೂ ಭ್ರಷ್ಟಚಾರ ನಡೆಯುತ್ತಿದೆ. ಹಾಗಾಗಿ ಈಗ ನಡೆಯುತ್ತಿರುವ ಭ್ರಷ್ಟಚಾರದ ಬಗ್ಗೆಯೂ ದೂರು ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

Read More

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸ್ಪಷ್ಠನೆ | ಚುನಾವಣಾ ಆಯೋಗದ ಪತ್ರಕ್ಕೆ ಸರಕಾರದಿಂದ ಉತ್ತರ ಬೆಂಗಳೂರು: ತೆಲಂಗಾಣದಲ್ಲಿ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ದಿನಪತ್ರಿಕೆಗಳಲ್ಲಿ ರಾಜ್ಯ ಸರ್ಕಾರದ ಕೆಲಸಗಳ ಕುರಿತು ರಾಜ್ಯ ಸರ್ಕಾರದ ಜಾಹೀರಾತುಗಳು ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ. ಈ ಕುರಿತು ಚುನಾವಣಾ ಆಯೋಗದ ಪತ್ರಕ್ಕೆ ಸರಕಾರ ಉತ್ತರ ನೀಡಲಿದೆ ಎಂದು ಹೇಳಿದ್ದಾರೆ.ನವೆಂಬರ್ 30 ರಂದು ನಡೆಯಲಿರುವ ವಿಧಾನಸಭೆಯ ಮತದಾನಕ್ಕೆ ಮುನ್ನ ತೆಲಂಗಾಣ ಮಾಧ್ಯಮಗಳಲ್ಲಿ ಜಾಹೀರಾತುಗಳನ್ನು ಪ್ರಕಟಿಸಿರುವ ಕಾಂಗ್ರೆಸ್ ಕರ್ನಾಟಕದಲ್ಲಿ ತನ್ನ ಸರ್ಕಾರದೊಂದಿಗೆ ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರ ಈ ವಿಚಾರದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅದೇ ದಿನ ಚುನಾವಣಾ ಆಯೋಗವು ತೆಲಂಗಾಣ ಪತ್ರಿಕೆಗಳಲ್ಲಿ ತನ್ನ ಕೆಲಸದ ಬಗ್ಗೆ ಜಾಹೀರಾತುಗಳನ್ನು ಪ್ರಕಟಿಸುವುದನ್ನು ನಿಲ್ಲಿಸುವಂತೆ ಕರ್ನಾಟಕದ ಕಾಂಗ್ರೆಸ್ ಸರ್ಕಾರವನ್ನು ಕೇಳಿದೆ ಮತ್ತು ಮಾದರಿ ನೀತಿ ಸಂಹಿತೆ (MCC) ಅಡಿಯಲ್ಲಿ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯದಿದ್ದಕ್ಕಾಗಿ…

Read More

ಸಿಎಎ ಗೆ ಮಮತಾ ಬ್ಯಾನರ್ಜಿ ವಿರೋಧ | ಪೌರತ್ವ ತಿದ್ದುಪಡಿ ಕಾಯ್ದೆ ಅಂತಿಮ ಕರಡು 2024ರ ಮಾ.30ರೊಳಗೆ ಸಿದ್ಧ ಕೋಲ್ಕತ್ತಾದ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಠನೆ ಬೆಂಗಳೂರು: ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆಯನ್ನುತರಲಿದೆ ಮತ್ತು ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.ಕೋಲ್ಕತ್ತಾದಲ್ಲಿ ಲೋಕಸಭೆಯ ಚುನಾವಣಾ ಪ್ರಚಾರದ ಭಾಗವಾಗಿ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅಮಿತ್‌ ಶಾ, ಸಿಎಎಯನ್ನು ಮಮತಾ ಬ್ಯಾನರ್ಜಿ ವಿರೋಧಿಸುತ್ತಿದ್ದಾರೆ. ಆದರೆ ಯಾರೊಬ್ಬರೂ ಅದರ ಅನುಷ್ಠಾನವನ್ನು ತಡೆಯಲು ಸಾಧ್ಯವಿಲ್ಲ. ಪ್ರತಿಪಕ್ಷಗಳ ಬಲವಾದ ವಿರೋಧದ ಮಧ್ಯೆ ಕೇಂದ್ರವು ಸಿಎಎ ಕುರಿತು ನಿಯಮವನ್ನು ರೂಪಿಸಲಿದೆ ಎಂದು ಹೇಳಿದ್ದಾರೆ.ಇದಲ್ಲದೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಮೇಲೆ ತುಷ್ಟೀಕರಣ, ಭ್ರಷ್ಟಾಚಾರ ಮತ್ತು ರಾಜಕೀಯ ಹಿಂಸಾಚಾರ, ಒಳ ನುಸುಳುವಿಕೆ ವಿಚಾರದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸುವಂತೆ ಸೂಚಿಸಿದ್ದಾರೆ.ಇಲ್ಲಿ ನೆರೆದಿರುವ ಜನಸ್ತೋಮವನ್ನು ನೋಡಿದರೆ ಇದು ಬಿಜೆಪಿಯ ಪರ ಜನರ ಒಲವನ್ನು ಸೂಚಿಸುತ್ತದೆ. 2026ರಲ್ಲಿ…

Read More

ಮುದ್ದೇಬಿಹಾಳ: ಪಟ್ಟಣದ ಹಳೆಯ ಕಾಯಿಪಲ್ಲೆ ಮಾರುಕಟ್ಟೆಯಲ್ಲಿರುವ ಖಾಸ್ಗತೇಶ್ವರ ಮಠದಲ್ಲಿ ನ.೩೦ ರಂದು ಸಂಜೆ ೫ಕ್ಕೆ ಕಾರ್ತಿಕ ಕಿರಣ ಕಾರ್ಯಕ್ರಮದ ಮಂಗಲೋತ್ಸವ ಕಾರ್ಯಕ್ರಮ ಜರುಗಲಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಇಂಗಳೆಶ್ವರದ ಚನ್ನಬಸವ ಮಹಾಸ್ವಾಮಿಗಳು ವಹಿಸಲಿದ್ದು, ಇಟಗಿಯ ಭೂಕೈಲಾಸ ಮೇಲ್ಗದ್ದುಗೆಯ ಡಾ.ಗುರುಶಾಂತವೀರ ಶಿವಾಚಾರ್ಯರು, ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು, ಬಾಗೇವಾಡಿಯ ವಿರಕ್ತಮಠದ ಸಿದ್ಧಲಿಂಗ ಮಹಾಸ್ವಾಮಿಗಳು, ತಾಳಿಕೋಟೆ ಖಾಸ್ಗತೇಶ್ವರ ಮಠದ ಬಾಲ ಶಿವಯೋಗಿ ಸಿದ್ಧಲಿಂಗ ದೇವರು, ಮುದ್ದೇಬಿಹಾಳದ ಖಾಸ್ಗತೇಶ್ವರ ಮಠದ ಸಂಗಯ್ಯ ಸ್ವಾಮಿಗಳು ವಹಿಸಲಿದ್ದು, ಉದ್ಘಾಟಕರಾಗಿ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ, ಸಾಧನಾ ಮಹಿಳಾ ಒಕ್ಕೂಟದ ಅಧ್ಯಕ್ಷೆ ಗಿರಿಜಾ ಕಡಿ ಅಧ್ಯಕ್ಷತೆವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ಯಶಸ್ವಿನಿ ಸಾಮಾಜಿಕ ಮಹಿಳಾ ಸೇವಾ ಸಂಘದ ಸಿದ್ದಮ್ಮ ಒಣರೊಟ್ಟಿ ಆಗಮಿಸಲಿದ್ದು, ಅಕ್ಕನ ಬಳಗದ ಗೌರಮ್ಮ ನಿಡಗುಂದಿಮಠ, ಸಾಧನಾ ಮಹಿಳಾ ಒಕ್ಕೂಟದ ಗೌರವಾಧ್ಯಕ್ಷೆ ಬೋರಮ್ಮ ರಾಂಪೂರ ಉಪಸ್ಥಿತರಿರಲಿದ್ದಾರೆ.ಒಕ್ಕೂಟದ ಕಾರ್ಯದರ್ಶಿ ಶಶಿಕಲಾ ಕೆಂಧೂಳಿ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ.

Read More

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ತೀರ್ಥಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಮ್ಮೇಳನದಲ್ಲಿ ಭಾಗವಹಿಸಿ ಮಾನವೀಯ ಮೌಲ್ಯಗಳ ಬಗ್ಗೆ ಉಪನ್ಯಾಸ ನೀಡಲು ಬೆಂಗಳೂರಿನಿಂದ ಪ್ರಯಾಣಿಸಿ ಈಗ ತೀರ್ಥಹಳ್ಳಿ ಪ್ರಕೃತಿಯ ಸುಂದರ ಮಡಿಲಲ್ಲಿ ಇರುವಾಗ ಮೂಡಿದ ಒಂದಷ್ಟು ಆಲೋಚನೆಗಳು..*ತಾಯಿ ಭಾಷೆಯ ಉಳಿವಿಗಾಗಿ..*ಕನ್ನಡದ ಭಾಷೆಯ ಸೊಗಡನ್ನು ಉಳಿಸಿಕೊಳ್ಳುವ, ಇಲ್ಲಿನ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ, ಕನ್ನಡ ಭಾಷೆಯನ್ನು ಮತ್ತಷ್ಟು ವ್ಯಾಪಕವಾಗಿ ಬಳಸುವ ಮತ್ತು ಬೆಳೆಸುವ ದಿಕ್ಕಿನಲ್ಲಿ ವೈಯಕ್ತಿಕವಾಗಿ ನಾವು  ಮಾಡಬಹುದಾದ ಕೆಲವು ಕರ್ತವ್ಯಗಳು ನನಗೆ ತಿಳಿದಂತೆ..೧) ಇನ್ನು ಮುಂದೆ ಕನ್ನಡದ ಯಾವುದೇ ಪೋಷಕರಿಗೆ ಹುಟ್ಟುವ ಮಕ್ಕಳಿಗೆ ಪರಂಪರಾನುಗತವಾಗಿ ಬೆಳೆದು ಬಂದ ಕನ್ನಡ ನೆಲಕ್ಕೆ ಹೆಚ್ಚು ಹತ್ತಿರದ ಮುದ್ದಾದ” ಹೆಸರುಗಳನ್ನು ” ಆಯ್ಕೆ ಮಾಡಿಕೊಂಡು ನಾಮಕರಣ ಮಾಡುವುದು. ಅದರಿಂದಾಗಿ ಕನ್ನಡದ ಘಮಲು ಸದಾ ಪಸರಿಸುತ್ತಿರುತ್ತದೆ..೨) ಒಂದು ವೇಳೆ ಅನಿವಾರ್ಯವಾಗಿ ಮತ್ತು ಅವಶ್ಯಕತೆಗಾಗಿ ನಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿದ್ದರು ಸಹ ಮನೆಯಲ್ಲಿ ಎಲ್ಲರೂ ಸಂಪೂರ್ಣ ಅಚ್ಚ ಕನ್ನಡದಲ್ಲಿ ಮಾತನಾಡುವುದು. ಏಕೆಂದರೆ ಈಗ ಭಾಷಾ…

Read More

ವಿಜಯಪುರ: ‘ವಿಶ್ವ ಏಡ್ಸ್’ ದಿನದ ಅಂಗವಾಗಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತಿ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಜಿಲ್ಲಾಸ್ಪತ್ರೆ , ಸ್ವಯಂ ಸೇವಾ ಸಂಘ ಸಂಸ್ಥೆಗಳು, ಎನ್‌ಎಸ್ ಎಸ್ ಘಟಕಗಳು, ರೆಡ್ ರಿಬ್ಬನ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ನ.೩೦ರಂದು ಜಾಥಾ, ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸಮುದಾಯಗಳು ಮುನ್ನಡೆಯಲಿ ಎಂಬ ಈ ವರ್ಷದ ಘೋಷ ವಾಕ್ಯದೊಂದಿಗೆನ.೩೦ರಂದು ಸಂಜೆ ೬ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತದವರೆಗೆ ದೀಪ ನಡಿಗೆ (ಕ್ಯಾಂಡಲ್ ಮಾರ್ಚ್) ಜಾಥಾ ಹಾಗೂ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಲಾಗುವುದು. ಡಿ.೧ರಂದು ಬೆಳಿಗ್ಗೆ ೮.೩೦ಕ್ಕೆ ಕೇಂದ್ರ ಬಸ್ ನಿಲ್ದಾಣದಿಂದ ಜೋಡ ಗುಮ್ಮಟ,ಮೀನಾಕ್ಷಿ ಚೌಕ,ಗಾಂಧಿ ವೃತ್ತ ಮಾರ್ಗವಾಗಿ ಸಂತ ಅನ್ನಮ್ಮಾ ದೇವಾಲಯ (ಚರ್ಚ್)ವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಸಂತ ಅನ್ನಮ್ಮಾ ದೇವಾಲಯ (ಚರ್ಚ್)ನಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ.ಈ ಜಾಥಾ ಹಾಗೂ ಕಾರ್ಯಕ್ರಮದಲ್ಲಿ…

Read More

ವಿಜಯಪುರ: ವಿಜಯಪುರ ಜಿಲ್ಲೆಯು ೨೦೨೨ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ನಿಗದಿಪಡಿಸಲಾಗಿದ್ದ ಗುರಿಯನ್ನು ಸಾಧಿಸಿದ ಹಿನ್ನಲೆಯಲ್ಲಿ ಡಿಸೆಂಬರ್ ೭ ರಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆಯುವ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿಗಳ ಟಿ.ಭೂಬಾಲನ್ ಅವರು ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೌರವಾನ್ವಿತ ರಾಜ್ಯಪಾಲರಿಂದ ಪ್ರೊತ್ಸಾಹಕ ಪಾರಿತೋಷಕ ಸ್ವೀಕರಿಸಲಿದ್ದಾರೆ.ಸಶಸ್ತ್ರ ಪಡೆಗಳ ಧ್ವಜ ನಿಧಿಗೆ ನಿಗದಿಪಡಿಸಲಾದ ಗುರಿ ಸಾಧಿಸಿರುವುದರಿಂದ ಈ ನಿಧಿಯು ಮಾಜಿ ಸೈನಿಕರು ಮತ್ತು ಅವರ ಅವಲಂಬಿತರ ಕಲ್ಯಾಣ ಕಾರ್ಯಕ್ರಮಗಳಿಗೆ ಅಮೂಲ್ಯ ನೆರವು ನೀಡಲಿದ್ದು, ಜಿಲ್ಲೆಯ ಕೊಡುಗೆಯನ್ನು ಪ್ರಶಂಸಿಸುವ ಉದ್ದೇಶದಿಂದ ಪ್ರೋತ್ಸಾಹಕ ಪಾರಿತೋಷಕವನ್ನು ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

Read More