Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಸಿಂದಗಿ: ಶಿಕ್ಷಕನಾಗ ಬಯಸುವ ಪ್ರಶಿಕ್ಷಣಾರ್ಥಿಗಳಿಗೆ ತಾಳ್ಮೆ ಹಾಗೂ ಸಂಯಮ ಮುಖ್ಯ, ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಪೂಜ್ಯನೀಯ ಸ್ಥಾನವನ್ನು ನೀಡಿದ್ದಾರೆ. ಅಂತಹ ಸ್ಥಾನದಲ್ಲಿರುವ ನಾವುಗಳು ವಿದ್ಯಾರ್ಥಿಗಳ ಬದುಕಿನಲ್ಲಿ ಜ್ಞಾನ ಎಂಬ ಬೆಳಕನ್ನು ಚೆಲ್ಲಬೇಕು ಎಂದು ಪದ್ಮರಾಜ ಬಿ.ಈಡಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜೆ.ಸಿ.ನಂದಿಕೋಲ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಜೆ.ಹೆಚ್.ಪಟೇಲ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ೨೦೨೩-೨೪ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ದೀಪದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಗನವಾಡಿಯಿಂದ ಪದವಿಯವರೆಗೆ ಒಂದು ಕಲಿಕೆಯಾದರೆ ೨ ವರ್ಷದ ಈ ಬಿ.ಈಡಿ ತರಬೇತಿ ಶಿಕ್ಷಣವು ಭಿನ್ನ ಹಾಗೂ ಸೃಜನಾತ್ಮಕತೆಯಿಂದ ಕೂಡಿರುತ್ತದೆ. ವೃತ್ತಿ ಜೀವನ ಆರಂಭಿಸುವ ಪ್ರಶಿಕ್ಷಣಾರ್ಥಿಗಳು ಸಮಾಜದಲ್ಲಿ ಪ್ರೀತಿ ಮತ್ತು ಚಾರಿತ್ರ್ಯವನ್ನು ಕಾಯ್ದುಕೊಂಡರೆ ಕಾಯಕದ ಮಹತ್ವವನ್ನು ಗುರುತಿಸಿದಂತೆ. ಶಿಕ್ಷಕ ಎಂಬ ವೃತ್ತಿ ಒಂದು ಹುದ್ದೆಯಲ್ಲ ಸುಂದರ ಸಮಾಜದ ಸೃಷ್ಠಿಕರ್ತನ ಕಾಯಕ ಎಂದರು.ಈ ವೇಳೆ ಪ್ರಾಚಾರ್ಯ ಬಿ.ಎಮ್.ಹುರಕಡ್ಲಿ ಮಾತನಾಡಿ, ಶಿಕ್ಷಕನು ಓರ್ವ ಮಾರ್ಗದರ್ಶಕ ಆತನ ಕಲಿಕೆ ನಿರಂತರವಾಗಿರುತ್ತದೆ. ಕೋವಿಡ್ ಸಮಯದಲ್ಲಿನ ಆನ್ಲೈನ್ ಶಿಕ್ಷಣದಿಂದ ಬಹಳಷ್ಟು ತಾಪತ್ರಯವನ್ನು ಪ್ರಶಿಕ್ಷಾಣಾರ್ಥಿಗಳ…
ಸಿಂದಗಿ: ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳು ಸರ್ವತೋಮುಖ ಬೆಳವಣಿಗೆ ಹೊಂದಬೇಕಾದರೆ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಸ್.ಎನ್. ಕೋರವಾರ ಹೇಳಿದರು.ಪಟ್ಟಣದ ಜೇವರಗಿ ರಸ್ತೆಯಲ್ಲಿರುವ ಲೋಯಲ್ ಶಾಲೆಯಲ್ಲಿ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರ ವತಿಯಿಂದ ಹಮ್ಮಿಕೊಂಡ ಚಿಣ್ಣರ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ದೇಹ ಸದೃಡವಾಗಿರಬೇಕಾದರೆ ಅವರು ಪೌಷ್ಠಿಕ ಆಹಾರ ಪಡೆಯಬೇಕು. ಅಜ್ಜ ಅಜ್ಜಿ ಹೇಳುವ ಕಥೆಗಳನ್ನು ಕೇಳಬೇಕು. ಮಗುವಿಗೆ ೬ತಿಂಗಳಿಂದ ೩ವರ್ಷದವರೆಗೆ ಸಮಯಕ್ಕನುಸಾರವಾಗಿ ಚುಚ್ಚುಮದ್ದು ಲಸಿಕೆಯನ್ನು ಹಾಕಿಸಬೇಕು. ಅದರಿಂದ ಮಗುವಿನ ಬೆಳವಣಿಗೆಗೆ ಸಹಾಯವಾಗುತ್ತದೆ ಎಂದರು.ಈ ವೇಳೆ ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ ಪ್ರಾಸ್ತವಿಕವಾಗಿ ಮಾತನಾಡಿದರು.ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ನೀರಿಕ್ಷಕ ವಿಶ್ವನಾಥ ಕೊರವಾರ, ಮಲಕಪ್ಪ ಹಲಗಿ, ರಾಜೀವ ಕುರಿಮನಿ, ವಿಜಯ ಭಂಟನೂರ ಸೇರಿದಂತೆ ತಾಲೂಕಿನ ವಿವಿಧ ಗ್ರಾಮದ ಸರಕಾರಿ ಶಾಲೆಯ ಮಕ್ಕಳು, ಸಂಸ್ಥೆಯ ಸಿಬ್ಬಂದಿ ಹಾಗೂ ಶಾಲೆಯ ಶಿಕ್ಷಕರು, ಸಿಬ್ಬಂದಿಗಳು ಇದ್ದರು.
ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಪಾಟೀಲ ವೈದ್ಯಕೀಯ ಕಾಲೇಜಿನ ಫಿಜಿಯಾಲಜಿ ವಿಭಾಗದ ಡಿಸ್ಟಿಂಗ್ವಿಷ್ಡ್ ಚೇರ್ ಪ್ರೊಫೆಸರ್ ಡಾ. ಕುಶಾಲ್ ಕೆ. ದಾಸ್ ಅವರಿಗೆ ರಾಜ್ಯ ಸರಕಾರ ವಿಕಲಚೇತನರ ಕ್ಷೇತ್ರದಲ್ಲಿನ ಸೇವೆಗಾಗಿ ರಾಜ್ಯ ಮಟ್ಟದ ವೈಯಕ್ತಿಕ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ.ಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.ನಾನಾ ಕ್ಷೇತ್ರಗಳಲ್ಲಿ ವಿಶಿಷ್ಠವಾದ ಸೇವೆ ಸಲ್ಲಿಸಿದ ವಿಕಲಚೇತನ ವ್ಯಕ್ತಿ/ವಿಕಲಚೇತನರ ಕ್ಷೇತ್ರದಲ್ಲಿ ವಿಶಿಷ್ಠ ಸೇವೆಯನ್ನು ಸಲ್ಲಿಸುತ್ತಿರುವುದನ್ನು ಗುರುತಿಸಿ ವೈಯಕ್ತಿಕ ವಿಭಾಗದಡಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು.ಡಾ. ಕುಶಾಲ್ ಕೆ. ದಾಸ್ ಅವರು ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ.…
ಜಯ್ ನುಡಿ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರು, ಬೆಳಗಾವಿ ೯೪೪೯೨೩೪೧೪೨ ‘ಪಕ್ಕದ ಮನೆ ಪದ್ಮ ಕೋಗಿಲೆ ತರ ಹಾಡುತ್ತಾಳೆ. ನೀನೂ ಇದ್ದಿಯಾ. ನಿನ್ನ ಗೆಳೆಯ ರವಿ ನೋಡು ಭಾಷಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದವರೆಗೂ ಬಹುಮಾನ ಪಡೆದಿದ್ದಾನೆ. ಹಾಡು ಭಾಷಣ ಇರದಿದ್ದರೆ ಅಷ್ಟೇ ಹೋಯ್ತು ರಜನಿ ತರಹ ಕ್ಲಾಸಿಗೆ ರ್ಯಾಂಕ್ ಬರೋಕೆ ಆಗಲ್ಲ ಯಾವಾಗ ನೋಡಿದರೂ ಮನೆ ಮುಂದೆ, ಮೈದಾನದಲ್ಲಿ ಕ್ರಿಕೆಟ್ ಬ್ಯಾಟ್ ಹಿಡಿದು ಆಡ್ತಿಯಾ ನಾಯಿ ಬಾಲ ಯಾವಾಗಲೂ ಡೊಂಕು ಅದನ್ನು ನೇರ ಮಾಡಲು ಸಾಧ್ಯವಿಲ್ಲ. ನಾ ಹೇಳಿದಾಗ ಮಾತ್ರ ಅಭ್ಯಾಸ ಮಾಡುತ್ತಿಯಾ.’ ಇದು ರಾಜುವಿನ ಅಪ್ಪ ಅವ್ವನ ಮಾತುಗಳು.ರಾಜುನಿಗೂ ಹೆತ್ತವರ ಮಾತುಗಳನ್ನು ಕೇಳಿ ಕೇಳಿ ರೋಸಿ ಹೋಗುತ್ತದೆ. ನಾನು ಆಟದಲ್ಲಿ ಮುಂದಿರೋದು ಇವರಿಗೆ ಕಾಣುವುದೇ ಇಲ್ಲ ಎಂದು ಗೊಣಗಿಕೊಳ್ಳುತ್ತಾನೆ. ಮನಸ್ಥಿತಿ ಸರಿ ಇರದಿದ್ದಾಗ ಹೌದಲ್ಲ ನನಗೆ ಚೆನ್ನಾಗಿ ಹಾಡೋಕೆ ಬರಲ್ಲ. ಭಾಷಣ ಮಾಡೋಕೆ ಬರಲ್ಲ. ಅಂಕ ಜಾಸ್ತಿ ಗಳಿಸಲು ಆಗಿಲ್ಲ. ನಾನು ಕೆಲಸಕ್ಕೆ ಬಾರದವನು ಎಂದೆನಿಸುತ್ತದೆ. ಇದು ಕೇವಲ ರಾಜುವಿನ ಆತಂಕದ…
Udayarashmi kannada daily newspaper
ಕಾರ್ಯನಿರತ ಪತ್ರಕರ್ತರ ಸಂಘ & ರಾಜ್ಯ ವಿತರಕರ ಒಕ್ಕೂಟದಿಂದ ಅಭಿನಂದನೆ ಬೆಂಗಳೂರು: ಪತ್ರಿಕಾ ವಿತರಕರು ಶ್ರಮಜೀವಿಗಳಾಗಿದ್ದು, ಅವರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಹೊಸದಾಗಿ ಯೋಜನೆ ರೂಪಿಸಿ, ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕರಿಗೆ 2 ಲಕ್ಷ ವೈದ್ಯಕೀಯ ನೆರವಿಗೆ 1 ಲಕ್ಷ ರೂ ನೆರವಿನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.ಪತ್ರಿಕಾ ವಿತರಕರ ಸಮಸ್ಯೆಗೆ ಸ್ಪಂಧಿಸಿ ಯೋಜನೆಯನ್ನು ಜಾರಿಗೊಳಿಸಿದ್ದಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಅಸಂಘಟಿತ ವಲಯದಲ್ಲಿರುವ ಎಲ್ಲರಿಗೂ ಸಾಮಾಜಿಕ ಭದ್ರತೆ ಕಲ್ಪಿಸಬೇಕು ಎನ್ನುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದ್ದು, ಮೊದಲ ಹಂತವಾಗಿ ಪತ್ರಿಕಾ ವಿತರಕರಿಗೆ ಯೋಜನೆಯನ್ನು ಜಾರಿಗೆ ನೀಡಲಾಗಿದೆ ಎಂದರು.ಸದುದ್ದೇಶಕ್ಕಾಗಿ ರೂಪಿಸಿರುವ ಯೋಜನೆ ದುರ್ಬಳಕೆ ಆಗಬಾರದು. ನಿಜವಾದ ಪತ್ರಿಕಾ ವಿತರಕರಿಗೆ ನೆರವಾಗುವಂತೆ ಮಾಡಲು ಸರ್ಕಾರ ನೀತಿ ನಿಯಮಾವಳಿ ರೂಪಿಸಲಿದ್ದು, ಅದಕ್ಕಾಗಿ ನಿಮ್ಮೆಲ್ಲರ ಸಹಕಾರವೂ ಮುಖ್ಯವಾಗಿದೆ ಎಂದರು.ಯೋಜನೆಯನ್ನು ಜಾರಿಗೆ ನೀಡಲು ಸಿಎಂ ಸಿದ್ದರಾಮಯ್ಯ…
ಆಲಮಟ್ಟಿ: ಕವನಗಳು ಕನ್ನಡದ ಕಳೆಯನ್ನು ಹೆಚ್ಚಿಸುತ್ತವೆ. ನೊಂದವರ ಪಾಲಿನ ಆಶಾದ್ವನಿಯಾಗಿರಬೇಕೆಂದು ನಿಡಗುಂದಿ ತಹಶೀಲ್ದಾರ ಎ.ಬಿ.ಅಮರವಾಡಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಮಂಗಳವಾರ ಆಲಮಟ್ಟಿಯ ಜವಾಹರ ನವೋದಯ ವಿದ್ಯಾಲಯದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ನಿಡಗುಂದಿ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕವನ ವಾಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸತ್ತಂತಿರುವರನ್ನು ಬಡಿದೆಬ್ಬಿಸುವಂತಿರಬೇಕು. ಓದುವವರ ಮನಸ್ಸನ್ನು ಸೊರೆಗೊಳ್ಳುವಂತಿರಬೇಕು. ಮುಖ್ಯವಾಗಿ ಸಮಾಜಮುಖಿಯಾಗಿ ಮೌಲ್ಯವನ್ನು ಎತ್ತಿ ತೋರಿಸುವಂತಿರಬೇಕೆಂದರು.ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯ ವಿ ಶಾಂತಿ ಮುಖ್ಯ ಅತಿಥಿಯಾಗಿ ಮಾತನಾಡಿ, ಮಕ್ಕಳು ಮಾತೃಭಾಷೆಯಲ್ಲಿ ಪಾಂಡಿತ್ಯ ಪಡೆಯಬೇಕು. ಮಾತು ವೈರಿಗಳ ಮುಂದೆ ಗತ್ತಿನಂತೀರಬೇಕು. ಹೆದರಿಸುವವರ ಮುಂದೆ ಕತ್ತಿಯಂತಿರಬೇಕು. ಆತ್ಮೀಯರ ಮುಂದೆ ಮುತ್ತಿನಂತಿರಬೇಕು. ಹಿರಿಯರ ಮುಂದೆ ಹತ್ತಿಯಂತಿರಬೇಕು. ಕವನಗಳ ಅಥ೯ ಎಲ್ಲರಿಗೂ ತಿಳಿಯುವ ಹಾಗಿರಬೇಕೆಂದರು.ಮುಖ್ಯ ಅತಿಥಿಯಾದ ಗ್ರಾಮೀಣ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಸಿದ್ರಾಮಪ್ಪ ನಾಗಠಾಣ ಮಾತನಾಡಿ, ಕನ್ನಡ ಅನ್ನದ ಭಾಷೆಯಾಗಿರುತ್ತದೆ. ಆಡಳಿತ ಭಾಷೆಯಾಗಿರುತ್ತದೆ. ಜಾನಪದ ಕವಿಗಳು ವಿದ್ಯಾಭ್ಯಾಸ ಮಾಡದಿದ್ದರೂ ಅನುಭವ ಜ್ಞಾನ ಅಪಾರವಾಗಿತ್ತು ಎಂದರು.ಅಧ್ಯಕ್ಷತೆ ವಹಿಸಿದ ಕನ್ನಡ ಸಾಹಿತ್ಯ…
ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳ ಸದ್ದು | ಚುನಾವಣೆ ಆಯೋಗದ ಎಚ್ಚರಿಕೆ ಹೈದರಾಬಾದ: ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆಗಳ ಹವಾ ಎಬ್ಬಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆ ಆಗಿದೆ. ಕರ್ನಾಟಕ ರಾಜ್ಯದ ಮಾದರಿಯಲ್ಲಿ ತೆಲಂಗಾಣದಲ್ಲಿ ಗ್ಯಾರಂಟಿ ಯೋಜನೆ ಜಾರಿ ಮಾಡುವುದಾಗಿ ಹೇಳಿದ್ದ ಕಾಂಗ್ರೆಸ್, ಅದಕ್ಕೆ ಸಂಬಂಧಿಸಿಂತೆ ತೆಲುಗು ಪತ್ರಿಕೆಗಳಲ್ಲಿ ಜಾಹೀರಾತುಗಳನ್ನು ನೀಡಿತ್ತು. ಇದಕ್ಕೆ ಚುನಾವಣೆ ಆಯೋಗ ತಡೆ ನೀಡಿದ್ದಲ್ಲದೇ ಕಾಂಗ್ರೆಸ್ ಗೆ ಎಚ್ಚರಿಕೆ ಸಹ ನೀಡಿದೆ.ಕರ್ನಾಟಕದಂತೆ ತೆಲಂಗಾಣ ವಿಧಾನಸಭಾ ಚುನಾವಣೆಗೂ ಮುನ್ನ ಆರು ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಇದಕ್ಕೆ ಸಂಬಂಧಿಸಿದಂತೆ ತೆಲುಗಿನ ಸಾಕ್ಷಿ, ಆಂಧ್ರಜ್ಯೋತಿ, ಈ ನಾಡು ಪತ್ರಿಕೆಗಳಲ್ಲಿ ಮೊದಲ ಪೇಜಿನಲ್ಲಿ ದೊಡ್ಡ ಜಾಹೀರಾತುಗಳನ್ನು ನೀಡಿತ್ತು. ಕರ್ನಾಟಕದ ಹಣ ತೆಲಂಗಾಣದಲ್ಲಿ ಪೋಲಾಗುತ್ತಿದೆ ಎಂದು ಕಾಂಗ್ರೆಸ್ ನಡೆಯನ್ನು ಬಿಜೆಪಿ ವಿರೋಧಿಸಿತ್ತು.ಕರ್ನಾಟಕ ರಾಜ್ಯದ ಸಚಿವರನ್ನು ತೆಲಂಗಾಣದಲ್ಲಿ ಚುನಾವಣೆಗಾಗಿ ನಿಯೋಜಿಸಿರುವ ಪಕ್ಷ ಮತ್ತು ಸಿಎಂ ಸಿದ್ದರಾಮಯ್ಯ ಅವರು, ಇದೀಗ ಇಲ್ಲಿನ ಜನರ ತೆರಿಗೆ ಹಣದಲ್ಲಿ ತೆಲುಗು ರಾಜ್ಯದಲ್ಲಿ ಜಾಹೀರಾತು ನೀಡಿವೆ. ಇದಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಕರ್ನಾಟಕವನ್ನು ಆರ್ಥಿಕವಾಗಿ…
ಡಿಕೆ ಶಿವಕುಮಾರ್ ವಿರುದ್ದಸಿಬಿಐ ತನಿಖೆ ವಾಪಸ್ | ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಅನುಮತಿ ವಾಪಸ್ ಪಡೆಯಲು ಮುಂದಾಗಿರುವ ರಾಜ್ಯ ಸರ್ಕಾರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.ಸರ್ಕಾರದ ನಡೆಯನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನುಬಾಹಿರವಾಗಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದ್ದು, ಈ ಮೂಲಕ ನ್ಯಾಯಾಂಗದ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪದ ಯತ್ನ ನಡೆದಿದೆ. ಹೀಗಾಗಿ ಸರ್ಕಾರದ ಕ್ರಮಕ್ಕೆ ಸೀಮಿತವಾಗಿ ತಮ್ಮ ವಾದ ಆಲಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ.
ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಅಭಿಮತ ಮುದ್ದೇಬಿಹಾಳ: ಸಂವಿಧಾನ ದಿನಾಚರಣೆಯ ದಿನದಂದು ಮಾತ್ರ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮತ್ತು ಸಂವಿಧಾನಕ್ಕೆ ಗೌರವಿಸದೇ, ಪ್ರತಿಯೊಬ್ಬ ಭಾರತೀಯ ತಮ್ಮ ಆತ್ಮದಲ್ಲಿ ಉಸಿರು ಇರುವವರೆಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಅಂದಾಗ ಮಾತ್ರ ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ಸಂಪೂರ್ಣವಾಗಿ ನಿರ್ಮೂಲನೆಯಾಗಿ ಸಮಾನತೆ ಕಾಣಲು ಸಾಧ್ಯ ಎಂದು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.ಸ್ವತಂತ್ರಪೂರ್ವ ಭಾರತದಲ್ಲಿ ಜಾತೀಯತೆ, ಅಸ್ಪೃಶ್ಯತೆ ತಾಂಡವವಾಡುತ್ತಿತ್ತು. ಸಂವಿಧಾನ ಸಮರ್ಪಣೆಯಾದ ನಂತರ ಕ್ರಮೇಣ ಕಡಿಮೆಯಾಗುತ್ತಾ ಬಂದಿದೆ. ಸಂವಿದಾನವನ್ನು ಪ್ರತಿಯೊಬ್ಬ ಜಾತಿ ಜನಾಂಗದವರೂ ಅಪ್ಪಿಕೊಳ್ಳುವಂಥದ್ದು. ಬಾರತದ ಪ್ರತಿಯೊಬ್ಬ ಪ್ರಜೆಯೂ ದೇಶಾಭಿಮಾನ, ಸೈನಿಕಾಭಿಮಾನ ಮತ್ತು ಸಂವಿಧಾನಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು.ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮತ್ತು ಹಿರಿಯ ನ್ಯಾಯವಾದಿ ಎಂ.ಎಚ್.ಹಾಲಣ್ಣವವರ…
