Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಲಕೇರಿಯಲ್ಲಿ ಚಾತುರ್ಮಾಸ ಮುಕ್ತಾಯ | ಬ್ರಹ್ಮ ಪ್ರಶಸ್ತಿ ಪ್ರಧಾನ | ಧರ್ಮಸಭೆ ಕಲಕೇರಿ: ಮಠಮಾನ್ಯಗಳು ಸಮಾಜ ಸುಧಾರಣೆಯ ಸಂಸ್ಕೃತಿಯ ಪ್ರತೀಕಗಳಾಗಬೇಕು ಈ ದಿಸೆಯಲ್ಲಿ ಸರ್ವಜನಾಂಗದ ಶಾಂತಿಯ ತೋಟದಂತಿರುವ ತಿಳಗೂಳದ ಆಶ್ರಮ ಬಳಲಿ ಬಂದವರ ಆರೈಕೆಯ ಶಕ್ತಿ ಕೇಂದ್ರವಾಗಿದ್ದು, ದೈವಿಗುಣ, ಮಾತೃ ಹೃದಯಿಯಾಗಿರುವ ಶ್ರೀಗಳು ನಂಬಿ ಬಂದ ಭಕ್ತರ ಉದ್ಧಾರ ಮಾಡುವ, ಸಾಧಕರನ್ನು ಗುರುತಿಸಿ ಗೌರವಿಸುವ, ಸ್ತ್ರೀ ಶಕ್ತಿಯನ್ನು ಪೂಜಿಸುವ ಶ್ರೇಷ್ಟ ಕಾರ್ಯಗಳನ್ನು ಮಾಡುವ ಪರೋಪಕಾರಿ ಸಂತರಾಗಿದ್ದಾರೆ ಎಂದು ಆಲಮೇಲ ವಿರಕ್ತಮಠದ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು ಹೇಳಿದರು.ಸಮೀಪದ ತಿಳಗೂಳ ಗ್ರಾಮದ ಶ್ರೀಚಕ್ರ ಬಗಳಾಂಭ ಶಕ್ತಿಪೀಠ ಬ್ರಹ್ಮವಿದ್ಯಾಶ್ರಮದ ಪೂಜ್ಯ ಮಹೇಶ್ವರಾನಂದತೀರ್ಥ ಮಹಾಸ್ವಾಮಿಗಳ ಚಾತುರ್ಮಾಸ ಮುಕ್ತಾಯದ ಪ್ರಯುಕ್ತ ನಡೆದ ಮಹಾಪೂಜೆ, ಮಹಾಯಜ್ಞೆ, ೧೦೦೮ ಮುತ್ತೈದೆಯರಿಗೆ ಉಡಿತುಂಬುವದು, ಧರ್ಮಸಭೆ, ಬ್ರಹ್ಮ ಪ್ರತಿಷ್ಠಿತ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆದಿಶಕ್ತಿಯ ಮಹಾಪೂಜೆ, ಮಹಾಯಜ್ಞೆ, ೧೦೦೮ ಮುತ್ತೈದೆಯರಿಗೆ ಪೂಜೆಯೊಂದಿಗೆ ಉಡಿತುಂಬುವದು, ಚಾತುರ್ಮಾಸ ವ್ರತ ಮುಕ್ತಾಯಗೊಳಿಸಿದ ಶ್ರೀಗಳಿಗೆ ಭಕ್ತರಿಂಗ ತುಲಾಭಾರ ಸೇವೆ ಮತ್ತು ಗೌರವ ಸಮರ್ಪಣೆ ಕಾರ್ಯ ನಡೆಯಿತು.ಬ್ರಹ್ಮ ಪ್ರತಿಷ್ಠಿತ ಪ್ರಶಸ್ತಿ ಪ್ರಧಾನ…
ಮುದ್ದೇಬಿಹಾಳ: ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯುವುದರ ಜೊತೆಗೆ ಮಕ್ಕಳಿಗೆ ನೀಡಬೇಕಾದ ಶಿಕ್ಷಣ, ಸೌಲಭ್ಯ, ಅವಕಾಶಗಳನ್ನು ಪ್ರಾಮಾಣಿಕವಾಗಿ ನೀಡಲು ಪ್ರತಿಯೊಬ್ಬ ಶಿಕ್ಷಕರು ಮುಂದಾಗಬೇಕು ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ ಹೇಳಿದರು.ಪಟ್ಟಣದ ಗಾಂಧಿ ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಗಂಡು ಮಕ್ಕಳ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗುರುಸ್ಪಂದನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ರಮವೇ ಗುರುಸ್ಪಂದನೆ ಕಾರ್ಯಕ್ರಮ. ಶಿಕ್ಷಕರು ತಮ್ಮ ಸೇವಾ ಅವಧಿಯ ಯಾವುದಾದರೂ ಮಾಹಿತಿ ತಮ್ಮ ಸೇವಾ ಪುಸ್ತಕದಲ್ಲಿ ಕಾರಣಾಂತರಗಳಿಂದ ಸೇರ್ಪಡೆ ಮಾಡದೇ ಬಿಟ್ಟು ಹೋದಲ್ಲಿ ಈ ಕಾರ್ಯಕ್ರಮದ ಮೂಲಕ ಸೇರ್ಪಡೆ ಮಾಡಿಕೊಳ್ಳಬಹುದು ಎಂದರು.ಅಧ್ಯಕ್ಷತೆ ವಹಿಸಿದ್ದ ಕರಾಪ್ರಾಶಾಶಿ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ ಮಾತನಾಡಿ.ಮುಖ್ಯ ಅತಿಥಿಗಳಾಗಿದ್ದ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯ ಎಂ.ಎಸ್.ಕವಡಿಮಟ್ಟಿ ಮಾತನಾಡಿದರು.ಈ ವೇಳೆ ರಾಜ್ಯಮಟ್ಟದ ಸಂಗಮಸಿರಿ ಪ್ರಶಸ್ತಿಗೆ ಭಾಜನರಾನ ಸಿದ್ದನಗೌಡ ಬಿಜ್ಜೂರ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಯು.ಬಿ.ಧರಿಕಾರ, ಕರಾಪ್ರಾಶಾಶಿ ಸಂಘದ ಅಧ್ಯಕ್ಷ ಬಿ.ಎಚ್.ಮುದ್ನೂರ, ಪ್ರೌಢ ಶಾಲಾ ಮುಖ್ಯೋಪಾದ್ಯಾಯರ ಸಂಘದ ಅಧ್ಯಕ್ಷ ಎಂ.ಎಸ್.ಕವಡಿಮಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಎಸ್.ಡಿ.ಸಿ ಗಳಾದ…
ಮುದ್ದೇಬಿಹಾಳ: ಉತ್ತರ ಕನ್ನಡ ಜಿಲ್ಲೆ ಶಿರಸಿಯ ಶ್ರೀ ಸ್ವರ್ಣವಲ್ಲೀ ಮಹಾಸಂಸ್ಥಾನದ ಪೀಠಾಧೀಶರಾದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ೨೦೦೭ರಿಂದ ನಾಡಿನಾದ್ಯಂತ ಗೀತಾ ಅಭಿಯಾನ ಹಮ್ಮಿಕೊಂಡಿದ್ದು ಈ ಬಾರಿಯೂ ಗೀತೆಯ ೧೦ನೇ ಅಧ್ಯಾಯದ ಕಂಠಪಾಠ ಮತ್ತು ಭಾಷಣ ಸ್ಪರ್ಧೆಯನ್ನು ತಾಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ನಡೆಯಲಿವೆ.ಪ್ರಾಥಮಿಕ ವಿಭಾಗ(೫ ರಿಂದ ೭ನೇ ತರಗತಿ), ಪ್ರೌಢ ವಿಭಾಗ (೮ ರಿಂದ ೧೦ನೇ ತರಗತಿ) ಪದವಿ ಪೂರ್ವ ವಿಭಾಗ (೧೧ ಮತ್ತು ೧೨ನೇ ತರಗತಿ) ವಿದ್ಯಾರ್ಥಿಗಳಿಗೆ ಪ್ರತಿ ಸ್ಪರ್ಧೆಗಳಿಗೆ ಒಂದು ಶಾಲೆಯಿಂದ ಒಂದು ವಿದ್ಯಾರ್ಥಿ ಭಾಗವಹಿಸಲು ಅವಕಾಶವಿರುತ್ತದೆ. ಕಂಠಪಾಠ ಸ್ವರ್ಧೆ ೫ನಿಮಿಷಗಳದ್ದಾಗಿರುತ್ತದೆ. ನಿರ್ಣಾಯಕರು ಸೂಚಿಸಿದ ಯಾವುದೆ ೧೦ಶ್ಲೋಕವನ್ನು ಕ್ರಮವಾಗಿ ಪಠಿಸಬೇಕಾಗಿರುತ್ತದೆ. (ಯೂಟ್ಯೂಬ್ ಲಿಂಕ https://youtu.be/BzOAO102K-U?feature=shared ಇದರಲ್ಲಿ ಲಭ್ಯವಿರುವ ೧೦ನೇ ಅಧ್ಯಾಯವನ್ನು ಅಭ್ಯಾಸ ಮಾಡಿರಬೇಕು.)ಮೂರು ಹಂತಗಳಲ್ಲಿ ನಡೆಯುವ ೫ ನಿಮಿಷಗಳ ಕಾಲಾವಧಿಯ ಭಾಷಣ ಸ್ಪರ್ಧೆಗೆ ಪ್ರಾಥಮಿಕ ವಿಭಾಗಗಳಿಗೆ ವಿಷಯ ಭಗವದ್ಗೀತೆಯಿಂದ ಜೀವನ ಸಮೃದ್ಧಿ, ಪ್ರೌಢ ವಿಭಾಗದ ವಿಷಯ ಭಗವದ್ಗೀತೆಯಿಂದ ಭಾರತಕ್ಕೆ ವಿಶ್ವ ಮಾನ್ಯತೆ, ಪದವಿ ಪೂರ್ವ ವಿಭಾಗದ…
ಸಿಂದಗಿ: ಆಲಮೇಲ ಮತ್ತು ಸಿಂದಗಿ ತಾಲೂಕಿನ ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಕುಡಿಯುವ ನೀರಿನ ಕೊರತೆಯನ್ನು ನಿವಾರಣೆ ಸೂಕ್ತ ವ್ಯವಸ್ಥೆಯನ್ನು ಮಾಡಿಕೊಳ್ಳಿ ಎಂದು ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ತಾಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಂಡ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯ ಬಂದಾಳ, ಚಿಕ್ಕಸಿಂದಗಿ, ಬ್ಯಾಕೋಡ, ಬನ್ನೆಟ್ಟಿ, ಚಟ್ಟರಕಿ, ಚಾಂದಕವಟೆ, ಸುರುಗಿಹಳ್ಳಿ, ಹಿಕ್ಕನಗುತ್ತಿ, ನಾಗಾವಿ ಬಿ.ಕೆ, ಗೊರವಗುಂಡಗಿ, ªನಾಗಾವಿ ತಾಂಡಾ, ರಾಂಪುರ ಪಿಎ, ರಾಂಪುರ ತಾಂಡಾ, ಬೆನಕೊಟಗಿ, ಮತ್ತು ಆಲಮೇಲ ತಾಲೂಕಿನ ಬಗಲೂರ, ಶಿರಸಗಿ, ದೇವಣಗಾವ, ಕಡ್ಲೆವಾಡ, ಮಲಘಾಣ, ಸೋಮಜಾಳ, ಮಲಘಾಣ, ರಾಮನಹಳ್ಳಿ, ಗುಡ್ಡಳ್ಳಿ ಈ ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತುರ್ತಾಗಿ ನೀರಿನ ಸಮಸ್ಯೆ ಎದುರಾಗದಂತೆ ಕ್ರಮಕೈಗೊಳ್ಳಬೇಕು ಎಂದು ಆಯಾ ಗ್ರಾಪಂನ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.ಇದೇ ಸಂದರ್ಭದಲ್ಲಿ ತಾಪಂ ಇಓ ರಾಮು ಅಗ್ನಿ ಸಹಾಯಕ ನಿರ್ದೇಶಕ ನಿತ್ಯಾನಂದ ಯಲಗೋಡ, ಎ.ಎ ದುರ್ಗದ, ಮಂಜುನಾಥ್ ಸ್ವಾಮಿ, ವಿರುಪಾಕ್ಷಿ…
ಸಿಂದಗಿ: ಪಟ್ಟಣದ ಬಸವ ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಗೌರಿ ಹುಣ್ಣಿಮೆಯ ನಿಮಿತ್ಯ ಲಕ್ಷ್ಮೀ ಜಾತ್ರಾ ಮಹೋತ್ಸವದಲ್ಲಿ ಮುತೈದೆಯರಿಗೆ ಉಡಿ ತುಂಬುವ ಕಾರ್ಯವನ್ನು ಸ್ಥಳೀಯ ನಿವಾಸಿಗಳು, ಗುರು-ಹಿರಿಯರು ನಡೆಸಿಕೊಂಡು ಬರಲಾಗುತ್ತಿದೆ ಎಂದು ಮಳೇಂದ್ರ ಕತ್ತಿ ಹೇಳಿದರು.ಈ ವೇಳೆ ಬಾಬು ರಾಠೊಡ, ವೆಂಕಟೇಶ ಕಾಂಬಳೆ, ತಾಜು ಕೋಳಕುರ, ಜಿ.ಸಿ. ಸಂಗಾಲಕ್, ಹಸನ್ ಮಂದೇವಾಲಿ, ರಾಹುಲ್ ಪಾಟೀಲ, ಅಜಯ ಯಲಗಟ್ಟಿ, ರಾಜು ಸ್ಥಾವರಮಠ, ಮಲ್ಲು ಸದುಗೋಳು, ಲಕ್ಕಪ್ಪ ದೇವಣಗಾವ ಸೇರಿದಂತೆ ಮಹಿಳೆಯರು ಮತ್ತು ಸ್ಥಳೀಯರು ಇದ್ದರು.
ಸಿಂದಗಿ: ಅಧಿಕಾರವಿಲ್ಲದೇ ಸಮಾಜ ಸೇವೆ ಮಾಡುತ್ತಿರುವ ಏಕೈಕ ಸಂಸ್ಥೆ ಎಂದರೆ ಅದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಿಂದಗಿ ಘಟಕದ ಕಛೇರಿಯಲ್ಲಿ ಹಮ್ಮಿಕೊಂಡ ಆರೋಗ್ಯ ರಕ್ಷಾ ಕಾರ್ಯಕ್ರಮದಡಿಯಲ್ಲಿ ಚೆಕ್ ವಿತರಣೆ ಹಾಗೂ ಅಂಗವಿಕಲರಿಗೆ ಸಲಕರಣೆಯ ಜನಮಂಗಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ಈ ಸಂಸ್ಥೆಯು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಮಹಿಳೆಯರನ್ನು ಆರ್ಥಿಕವಾಗಿ, ಸಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಅರಿವು ಮೂಡಿಸುವ ಕಾರ್ಯ ಮಾಡುತ್ತಿದೆ ಎಂದರು.ಈ ವೇಳೆ ಕ್ಷೇತ್ರ ಯೋಜನಾಧಿಕಾರಿ ಗಿರೀಶಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಯೋಜನೆಯ ಬ್ಯಾಂಕಿನ ಬಿ.ಸಿ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಪ್ರಗತಿನಿಧಿ ನೀಡುವ ಮೂಲಕ ಸಾಮಾನ್ಯ ಮಹಿಳೆಯರನ್ನು ಹಣಕಾಸಿನ/ಬ್ಯಾಂಕಿನ ವ್ಯವಹಾರದಲ್ಲಿ ತೊಡಗಿಕೊಳ್ಳುವಂತೆ ಮಾಡಿತು. ಹಾಗೂ ಯೋಜನೆಯ ಕಾರ್ಯಕ್ರಮಗಳಾದ ಆರೋಗ್ಯ ವಿಮೆ, ಸಾಲದ ಭದ್ರತೆಯ ಪ್ರಗತಿ ರಕ್ಷಾ ಕವಚ, ಅಂಗವಿಕಲರಿಗೆ ಸಲಕರಣೆಯ ಜನಮಂಗಲ ಕಾರ್ಯಕ್ರಮ, ಸಂಘದ ಪಾಲುದಾರ ಬಂಧುಗಳ…
ಬಾರತೀಯ ಸಂವಿಧಾನ ಕುರಿತ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಶಾಸಕ ಮನಗೂಳಿ ಅಭಿಮತ ಸಿಂದಗಿ: ಸಂವಿಧಾನ ಸಮಾನತೆ, ಸೌಹಾರ್ದತೆ, ಭಾವೈಕ್ಯತೆಯನ್ನು ಹೊಂದಿದೆ. ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಸಂವಿಧಾನ ಬಾರತೀಯ ಸಂವಿಧಾನವೆಂದು ಸಿವ್ಹಿಲ್ ಮತ್ತು ಜೆ.ಎಮ್.ಎಫ್.ಸಿ.ನ್ಯಾಯಾಧೀಶ ಮಹಾಂತೇಶ ಭೂಸಗೋಳ ಹೇಳಿದರು.ಸೋಮವಾರದಂದು ಪಟ್ಟಣದ ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸಿಂದಗಿ ಮತ್ತು ಎಚ್.ಜಿ.ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಭಾರತೀಯ ಸಂವಿಧಾನ ಕುರಿತಾದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಪೀಠಿಕೆಯನ್ನು ಅಧ್ಯಯನ ಮಾಡುವುದು ಹಾಗೂ ಅದರಂತೆ ನಡೆದುಕೊಳ್ಳುವುದು ಎಲ್ಲರ ಆದ್ಯ ಕರ್ತವ್ಯವಾಗಬೇಕು ಎಂದರು.ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಸಕ ಅಶೋಕ ಮನಗೂಳಿ ಮಾತನಾಡಿ, ಸಂವಿಧಾನ ನಮಗೆಲ್ಲ ಎಲ್ಲ ರೀತಿಯ ಸೌಲಭ್ಯವನ್ನು ನೀಡಿದೆ. ಒಂದು ರೀತಿಯಲ್ಲಿ ಭಾರತದ ಸಂವಿಧಾನ ಬಾರತೀಯರ ಜೀವಾಳವಿದ್ದಂತೆ. ಅದರ ಕುರಿತು ತಿಳುವಳಿಕೆ ಪಡೆಯುವುದು, ಅದರ ಸರಿಯಾದ ಪಾಲನೇ ಮಾಡುವುದು ನಮ್ಮೇಲ್ಲ ಜವಾಬ್ದಾರಿಯಾಗಿದೆ. ಶಾಲಾ ಕಾಲೇಜುಗಳಲ್ಲಿ ಈ ವಿಚಾರ ಕುರಿತು ವಿಚಾರ ಸಂಕಿರ್ಣಗಳು, ಚರ್ಚೆಗಳು…
ವಿಜಯಪುರ: ಬಾಲಾಜಿ ಸಕ್ಕರೆ ಕಾರ್ಖಾನೆಯವರು ಪೂರ್ಣ ಪ್ರಮಾಣದ ಕಬ್ಬನ್ನು ಸಾಗಾಣೆ ಮಾಡಲು ಆದೇಶ ಮಾಡಬೇಕೆಂದುಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಾನ್ನಾಳ ಗ್ರಾಮದ ಕಬ್ಬು ಬೆಳೆಗಾರರು ಸೋಮವಾರ ಮನವಿ ಮಾಡಿದ್ದಾರೆ.ಈ ಸಂದರ್ಭದಲ್ಲಿ ರೈತಸಂಘದ ಜಿಲ್ಲಾ ಪ್ರ.ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರಾಜಶೇಖರ ಸಜ್ಜನ, ಸಂದರ್ಭದಲ್ಲಿಸಂಗಪ್ಪ ಸಜ್ಜನ ಮೊದಲಾದವರು ಮಾತನಾಡಿ, ಕಾನ್ನಾಳ ಗ್ರಾಮದಲ್ಲಿ ಈ ವರ್ಷವೂ ಕೂಡ ಅಂದಾಜು 150 ರಿಂದ 200 ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿದೆ. ಪ್ರತಿವರ್ಷವೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಕಬ್ಬು ಬೆಳೆದು ಮುದ್ದೇಬಿಹಾಳದ ಬಾಲಾಜಿ ಸಕ್ಕರೆ ಕಾರ್ಖಾನೆಗೆ ಸಾಗಾಣೆ ಮಾಡುತ್ತೇವೆ. ಈ ಭಾರಿ ಭೀಕರ ಬರಗಾಲದ ನಡುವೆಯು ಕೂಡ ಕಬ್ಬು ಬೆಳೆಯಲಾಗಿದೆ. ಆದರೆ ಈ ವರ್ಷ ಕಾರ್ಖಾನೆಯವರು ಎತ್ತರ ಮಟ್ಟದಲ್ಲಿ ಬೆಳೆದ ಹಾಗೂ ದಪ್ಪಗಿರುವ ಕಬ್ಬನ್ನು ಮಾತ್ರ ಕಾರ್ಖಾನೆಗೆ ತೆಗೆದುಕೊಂಡು ಹೋಗುತ್ತಿದ್ದು ಸ್ವಲ್ಪ ಪ್ರಮಾಣದಲ್ಲಿ ಎತ್ತರದಲ್ಲಿ ಕಡಿಮೆ ಇದ್ದ ಕಬ್ಬನ್ನು ಸಾಗಾಣೆಮಾಡಲು ಹಿಂದೇಟು ಹಾಕುತ್ತಿದ್ದಾರೆ. ಈ ಬಾರಿ…
ಅಂತಿಮ ವರ್ಷದ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಉತ್ತಮ ಸಾಧನೆ ಆಲಮಟ್ಟಿ: ಸ್ಥಳೀಯ ಎಸ್.ವ್ಹಿ.ವ್ಹಿ. ಸಂಸ್ಥೆಯ ಎಂ.ಎಚ್.ಎಂ.ಕಲಾ ವಾಣಿಜ್ಯ ಪದವಿ ಮಹಾವಿದ್ಯಾಲಯವು ಕಳೆದ ಸೆಪ್ಟೆಂಬರ್, ಅಕ್ಟೋಬರ್ ತಿಂಗಳಲ್ಲಿ ನಡೆದ ವಾಣಿಜ್ಯ ವಿಭಾಗದ ಕೊನೆಯ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಅತ್ಯುತ್ತಮ ಫಲಿತಾಂಶ ಪಡೆದಿದೆ. ಪರೀಕ್ಷೆಗೆ ಕುಳಿತ ಎಲ್ಲ ೨೩ ವಿದ್ಯಾರ್ಥಿ,ವಿದ್ಯಾರ್ಥಿನಿಯರು ಪಾಸಾಗಿದ್ದಾರೆ. ಅದರಲ್ಲಿ ೮ ಡಿಸ್ಟಿಂಕ್ಷನ್,೧೦ ಪ್ರಥಮ,೫ ದ್ವೀತಿಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಕುಮಾರಿ ಅಮೃತ ಬಳ್ಳೊಳ್ಳಿ ಶೇ ೯೦, ಕುಮಾರಿ ಗಾಯತ್ರಿ ಶಿಂಧೆ ಶೇ ೮೮, ಹಾಗೂ ಕುಮಾರಿ ಪಲ್ಲವಿ ಶಿವಣಗಿ ಶೇ ೮೮ ರಷ್ಟು ಅತಿ ಹೆಚ್ಚು ಅಂಕಗಳಿಸಿ ತೇರ್ಗಡೆಯಾಗಿದ್ದಾರೆ. ಒಟ್ಟಾರೆ ಈ ಬಾರಿ ಕಾಲೇಜಿಗೆ ಉತ್ತಮ ಫಲಿತಾಂಶ ಲಭಿಸಿದೆ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿ ಕಾಲೇಜಿಗೆ ಕೀರ್ತಿ ತಂದಿರುವ ಪ್ರತಿಭಾವಂತ ಈ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಗದುಗಿನ ತೋಂಟದಾರ್ಯ ಮಠದ ಪೀಠಾಧಿಪತಿ ತೋಂಟದ ಡಾ.ಸಿದ್ದರಾಮ ಮಹಾಸ್ವಾಮಿಗಳು, ಸಂಸ್ಥೆಯ ಕಾರ್ಯದರ್ಶಿ ಶಿವಾನಂದ ಪಟ್ಟಣಶೆಟ್ಟರ, ಪ್ರಾಚಾರ್ಯ ಎಚ್.ಎನ್.ಕೆಲೂರ ಸೇರಿದಂತೆ…
ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ-೫೦ರ ಅಂಗವಾಗಿ ವಿಜಯಪುರ ನಗರದ ಗಾಂಧಿಚೌಕನಲ್ಲಿರುವ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜ್ ಆವರಣದ ಬಯಲು ರಂಗಮಂದಿರದಲ್ಲಿ ನವೆಂಬರ್ ೨೮ ರಂದು ಯುವ ಸೌರಭ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೯ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ.ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಭಾಗವಹಿಸಲಿದ್ದಾರೆ.ವಿಶೇಷ ಅಹ್ವಾನಿತರಾಗಿ ಶಾಲಾ ಶಿಕ್ಷಣ ಇಲಾಖೆ (ಪದವಿ-ಪೂರ್ವ)…
