Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಾಲ್ಯಾವಸ್ಥೆ-ಕಿಶೋರಾವಸ್ಥೆ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕುರಿತು ಕಾನೂನು ಅರಿವು-ನೆರವು ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನ.೨೪ರಂದು ನಗರದ ವಿಕಾಸ ಸ್ಕೂಲ್ನಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕುರಿತು ಕಾನೂನು ಅರಿವು ನೆರವು ನ.೨೪ರಂದು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮವನ್ನು ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರ ಅವರು ಉದ್ಘಾಟಿಸಿ ಮಾತನಾಡಿ, ೧೮ ವರ್ಷದೊಳಗಿನ ಮಕ್ಕಳು ಯಾವುದೇ ಉದ್ದಿಮೆ ಸಂಸ್ಥೆಗಳಲ್ಲಿ ದುಡಿಯಬಾರದು. ಬಾಲಕಾರ್ಮಿಕರು ಕಂಡು ಬಂದಲ್ಲಿ ಇಲಾಖೆಯ ಗಮನಕ್ಕೆ ತರುವಂತೆ ತಿಳಿಸಿದ ಅವರು, ಇಲಾಖೆಯಿಂದ ಇ-ಶ್ರಮ ಕಾರ್ಡ ಹಾಗೂ ಪಿಎಂಎಸ್ವೈಎಂ ಕಾರ್ಡ ಸೇರಿದಂತೆ ಇಲಾಖೆಯ ವಿವಿಧ ಯೋಜನೆಗಳ ಸೌಲಭ್ಯದ ಕುರಿತು ಮಾತನಾಡಿದರು.ಬಾಲಕಾರ್ಮಿಕ ಯೋಜನಾ ಸಂಘದ ನಿರ್ದೇಶಕರಾದ ಕುಮಾರ ನೀಲಮ್ಮಾ ಎಚ್.ಖೇಡಗಿ ಅವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ…
ಅಪಘಾತ ರಹಿತ ಚಾಲನೆಗಾಗಿ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪ್ರದಾನ ವಿಜಯಪುರ: ಶಕ್ತಿ ಗ್ಯಾರಂಟಿಗೆ ಶತಕೋಟ ಸಂಭ್ರಮದ ಅಂಗವಾಗಿ ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ನವೆಂಬರ್ ೨೪ ರಂದು ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ೬ ಜನ ಚಾಲಕರು ಅಪಘಾತ ರಹಿತ ಚಾಲನೆಗೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪಡೆದುಕೊಂಡಿದ್ದಾರೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ಮೊಹಮ್ಮದ ಫೈಜ್ ಅವರು ತಿಳಿಸಿದ್ದಾರೆ.ನಿಗಮದ ಚಾಲಕರಾದ ಮುದ್ದೇಬಿಹಾಳ ಘಟಕದ ಸಿ.ಎಸ್.ಕಸಬೇಗೌಡರ, ಸಿಂದಗಿಯ ಪಿ.ಬಿ.ಕಾಂಬಳೆ, ವಿಜಯಪುರ ೧ನೇ ಘಟಕದ ಎಸ್.ಎ.ಬಿರಾದಾರ, ಸಿಂದಗಿಯ ಎನ್.ಎಂ.ಮಾದರ, ತಾಳಿಕೋಟೆಯ ಕೆ.ಎಚ್.ಓಲೇಕಾರ ಹಾಗೂ ವಿಜಯಪುರ ಘಟಕ-೧ರ ಎಂ.ಆಯ್.ಸೋಲಾಪುರ ಅವರು ಚಿನ್ನದ ಪದಕ ಪಡೆದುಕೊಂಡಿದ್ದು, ಇವರ ಸಾಧನೆಗೆ ವಿಭಾಗೀಯ ನಿಯಂತ್ರಣಾಧಿಕಾರಿ ಹಾಗೂ ಎಲ್ಲ ಅಧಿಕಾರಿ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಸಚಿವ ಡಾ. ಎಂ.ಬಿ.ಪಾಟೀಲ ಕರೆ ವಿಜಯಪುರ: ವಿಶೇಷ ಚೇತನರು ತಮ್ಮಲ್ಲಿರುವ ಕೀಳರಿಮೆ ಭಾವನೆ ತೊರೆದು ಸಕಾರಾತ್ಮಕ ಯೋಚನೆಯೊಂದಿಗೆ ಸರ್ಕಾರದ ವಿವಿಧ ಯೋಜನೆಗಳ ಸದುಪಯೋಗ ಪಡೆದುಕೊಂಡು ಸ್ವಾವಲಂಬಿಗಳಾಗಿ ಜೀವನ ನಡೆಸುವಂತೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸೋಮವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ವಿಕಲಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ವಿಶೇಷಚೇತನರಿಗೆ ಕೇವಲ ಸಹಾನುಭೂತಿ ಒದಗಿಸದೇ, ಅವರಿಗೂ ಅವಕಾಶ ಕಲ್ಪಿಸಿಕೊಟ್ಟು ಸ್ವಾವಲಂಬಿಗಳನ್ನಾಗಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಮನೋಭಾವ ಬೆಳೆಸಿಕೊಳ್ಳಬೇಕು. ಸರ್ಕಾರವು ಸಹ ವಿಶೇಷಚೇತನರು ಆರ್ಥಿಕವಾಗಿ ಸದೃಢರಾಗಿ ಸ್ವಾವಲಂಬಿ ಬದುಕಿ ಸುಂದರ ಬದುಕು ರೂಪಿಸಿಕೊಳ್ಳಲು ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳ ಸದುಪಯೋಗ…
ವಿಜಯಪುರ: ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತು ಸಾಮಾಜಿಕ ಭದ್ರತಾ ಯೋಜನೆಯಡಿ ಜಿಲ್ಲೆಯ ೧೩ ಗ್ರಾಮಗಳಲ್ಲಿ ಡಿ.೨ ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ ೧೧ ಗಂಟೆಗೆ ವಿಜಯಪುರ ಉಪ ವಿಭಾಗಾಧಿಕಾರಿಗಳು ಮನಗೂಳಿ ತಾಂಡಾ-೨ರ ಸೇವಾಲಾಲ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಮುಳಸಾವಳಗಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.ವಿಜಯಪುರ ಗ್ರೇಡ್-೨ ತಹಶೀಲ್ದಾರ ಅವರು ಅಂಕಲಗಿ ಶ್ರೀ ದುಸ್ಸಂಗರಾಯನ ದೇವಸ್ಥಾನದ ಆವರಣದಲ್ಲಿ, ಬಬಲೇಶ್ವರ ಗ್ರೇಡ್-೨ ತಹಶೀಲ್ದಾರ ಅವರು ಕಾತ್ರಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ತಿಕೋಟಾ ಗ್ರೇಡ್-೨ ತಹಶೀಲ್ದಾರ ಅವರು ಕೋಟ್ಯಾಳ ಗ್ರಾಮದ ಶ್ರೀ ಹನುಮಾನ ದೇವಸ್ಥಾನದಲ್ಲಿ, ನಿಡಗುಂದಿ ಗ್ರೇಡ್-೨ ತಹಶೀಲ್ದಾರ ಅವರು ಕಾಶಿನಕುಂಟೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಹಾಗೂ ಮುದ್ದೇಬಿಹಾಳ ಗ್ರೇಡ್-೨ ತಹಶೀಲ್ದಾರ ಅವರು ಆನಂದಮಠ ಗುಡಿಹಾಳನಲ್ಲಿ ಪಿಂಚಣಿ ಅದಾಲತ್ ನಡೆಸಲಿದ್ದಾರೆ.ತಾಳಿಕೋಟೆ ತಹಶೀಲ್ದಾರ ಅವರು ಕೂಚಬಾಳ ಶ್ರೀ ಭೀಮಾಶಂಕರ ಮಠದ ಆವರಣದಲ್ಲಿ, ಇಂಡಿ ಗ್ರೇಡ್-೨ ತಹಶೀಲ್ದಾರ ಅವರು ಮಾವಿನಹಳ್ಳಿ ಶ್ರೀ ಹನುಮಾನ…
ವಿಜಯಪುರ: ಜಿಲ್ಲೆಯಲ್ಲಿ ಹಿಂಗಾರು/ಬೇಸಿಗೆ ಹಂಗಾಮಿನ ಬೆಳೆ ವಿಮೆ ನೊಂದಣಿ ಪ್ರಗತಿಯಲ್ಲಿದ್ದು, ಇನ್ನೂ ಹೆಚ್ಚಿನ ರೈತರು ತಮ್ಮ ಬೆಳೆ ವಿಮೆ ಮಾಡಿಸಿರುವುದಿಲ್ಲ. ಹಿಂಗಾರು/ಬೇಸಿಗೆ ಹಂಗಾಮಿನ ಪ್ರಮುಖ ಬೆಳೆಗಳಿಗೆ ಕೊನೆಯ ದಿನಾಂಕ ನಿಗದಿಪಡಿಸಲಾಗಿದ್ದು, ನಿಗದಿತ ದಿನಾಂಕದೊಳಗೆ ಜಿಲ್ಲೆಯ ರೈತರು ಬೆಳೆ ವಿಮೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.ವಿಮೆ ವಿಮೆಗೆ ನೊಂದಾಯಿಸಲು ಹಿಂಗಾರು ಹಂಗಾಮಿನ ಕಡಲೆ (ಮಳೆ ಆಶ್ರಿತ ಹಾಗೂ ನೀರಾವರಿ) ಬೆಳೆಗೆ ೨೦೨೩ರ ಡಿಸೆಂಬರ್ ೩೦, ಗೋಧಿ (ನೀ) ಬೆಳೆಗೆ ೨೦೨೩ರ ಡಿಸೆಂಬರ್ ೧೫ ಹಾಗೂ ಮುಸುಕಿನ ಜೋಳ (ನೀ) ಬೆಳೆಗೆ ೨೦೨೩ರ ಡಿಸೆಂಬರ್ ೦೧ ಕೊನೆಯ ದಿನಾಂಕವಾಗಿದೆ. ಬೇಸಿಗೆ ಹಂಗಾಮಿನ ಸೂರ್ಯಕಾಂತಿ (ನೀ) ಹಾಗೂ ಶೇಂಗಾ (ನೀ) ಬೆಳೆಗೆ ೨೦೨೪ರ ಫೆಬ್ರುವರಿ ೨೮ ಕೊನೆಯ ದಿನಾಂಕವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಬೆಳೆ ನಷ್ಟವಾಗಿರುವ ರೈತರು ಪರಿಹಾರ ಪಡೆಯಲು ತಮ್ಮ ಭೂಮಿ ವಿವರ ಹೊಂದಿರುವ ಎಫ್ಐಡಿ ಗುರುತಿನ ಸಂಖ್ಯೆ ಹೊಂದುವುದು ಅವಶ್ಯಕವಾಗಿರುವುದರಿಂದ ಕೂಡಲೇ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಕಂದಾಯ, ತೊಟಗಾರಿಕೆ, ಪಶುಸಂಗೋಪನೆ, ರೇಷ್ಮೆ ಮತ್ತು ಮೀನುಗಾರಿಕೆ ಇಲಾಖೆ ಕಚೇರಿಗಳಲ್ಲಿ ಎಫ್ಐಡಿ ಮಾಡಿಸಿಕೊಳ್ಳುವಂತೆ ಹಾಗೂ ಎಲ್ಲ ಜಮೀನುಗಳನ್ನು ಎಫ್ಐಡಿಗೆ ಜೋಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮನವಿ ಮಾಡಿಕೊಂಡಿದ್ದಾರೆ.ಸರ್ಕಾರ ಜಿಲ್ಲೆಯ ೧೩ ತಾಲುಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಬರ ಪರಿಹಾರ ಹಣ ಮಾತ್ರವಲ್ಲದೇ ಬೆಳೆ ವಿಮೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನ ಮಾರಾಟ ಮಾಡಲು ಮತ್ತು ಸರ್ಕಾರದ ಯಾವುದೇ ಯೋಜನೆಯ ಸವಲತ್ತು ಹಾಗೂ ಬ್ಯಾಂಕ್ ಸಾಲ ಪಡೆಯಲು ಎಫ್ಐಡಿ ಅಗತ್ಯವಿದ್ದು, ಎಫ್ಐಡಿಯನ್ನು ಹೊಂದಿರದ ರೈತರು ಆಧಾರ ಕಾರ್ಡ ಪ್ರತಿ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ ತಮ್ಮ ಹೆಸರಿನಲ್ಲಿರುವ ಎಲ್ಲ ಜಮೀನುಗಳ ಪಹಣಿ, ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರದ ಪ್ರತಿ (ಎಸ್ಸಿ-ಎಸ್ಟಿ ರೈತರು), ಪಾಸ್ ಪೋರ್ಟ ಅಳತೆಯ ಫೋಟೋ ದಾಖಲೆಗಳನ್ನು…
ಇಂಡಿ: ಹಾಸ್ಯವು ಬುದ್ಧಿವಾದದ ಮೂಲತತ್ವವಾಗಿದೆ. ಸಾಂಕ್ರಾಮಿಕ ಪರಹಿತಚಿಂತನೆಯ ನಗುವು ಆತ್ಮವಾಗಿದೆ. ನಗುವಿನಿಂದ ಆಯುಷ್ಯ ಹೆಚ್ಚಾಗುತ್ತದೆ ಎಂದು ಗಂಗಾವತಿ ಪ್ರಾಣೇಶ ಹೇಳಿದರು.ಇಂಡಿ ತಾಲೂಕಿನ ತಡವಲಗಾ ಗ್ರಾಮದ ಜೋಡಗುಡಿಯ ಶ್ರೀ ಮರುಳಸಿದ್ದೇಶ್ವರ ನೂತನ ದೇವಾಲಯದ ಲೋಕಾರ್ಪಣೆ ನಿಮಿತ್ತವಾಗಿ ನಡೆದ ಖ್ಯಾತ ಹಾಸ್ಯಗಾರ ಶ್ರೀ ಗಂಗಾವತಿ ಪ್ರಾಣೇಶ, ಬಸವರಾಜ ಮಾಮನಿ,ನರಸಿಂಹ ಜೋಶಿ ತಂಡದಿಂದ ನಡೆದ ನಗೆ ಸಂಭ್ರಮ ಹಾಗೂ ಪ್ರಶಸ್ತಿ ವಿತರಣೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು.ನರಸಿಂಹ ಜೋಶಿ ಮಾತನಾಡಿ, ಹಾಸ್ಯವು ಹೃದಯಗಳನ್ನು ಅವರ ಬೆತ್ತಲೆ ವಾಸ್ತವಿಕತೆಯಲ್ಲಿ ಸೆರೆಹಿಡಿಯುತ್ತದೆ. ಅದು ಮೀರಿದ ಅತಿವಾಸ್ತವಿಕತೆಯ ಕುರುಹುಗಳನ್ನು ಸಹ ನೀಡುತ್ತದೆ. ನಗುವಿಗೆ ವಯೋವೃದ್ಧಿಗೆ, ಮಿತಿಯಿಲ್ಲ. ಹಾಸ್ಯವು ರಂಗದ ಹಂತಗಳ ಜೀವವೈವಿಧ್ಯವನ್ನು ಸೆರೆಹಿಡಿಯುತ್ತದೆ ಎಂದರು.ಬಿಜೆಪಿ ಮುಖಂಡರು ಹಾಗೂ ಸ್ವದೇಶಿ ಜಾಗರಣ ಮಂಚ ಸಂಚಾಲಕ ಶಂಕರಗೌಡ ಪಾಟೀಲ ( ಡೋಮನಾಳ) ಹಾಗೂ ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠಿ ಸಂಚಾಲಕ ಬಾಬುರಾಜೇಂದ್ರ ನಾಯಕ ಅ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ತಡವಲಗಾ ಗ್ರಾಮದ ಶ್ರೀ ಅಭಿನವ ರಾಚೋಟೇಶ್ವರ ಶಿವಾಚಾರ್ಯರು…
ವಿಜಯಪುರ: ಸೃಜನಾತ್ಮಕತೆ ಹೋರಹಾಕುವುದೇ ಸಹಪಠ್ಯ ಚಟುವಟಿಕೆ ಎಂದು ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಲೋಲಮಟ್ಟಿ ಹೇಳಿದರು.ತಾಲ್ಲೂಕಿನ ಐನಾಪೂರ ಎಲ್.ಟಿ. ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗ್ರಾಮೀಣವಲಯ ಹಾಗೂ ಬಾಲಾಜಿ ಬಂಜಾರಾ ವಿಧ್ಯಾವರ್ಧಕ ಸಂಘದ ಸಹಯೋಗದಲ್ಲಿ ಸೊಮವಾರ ನಡೆದ 2023-24 ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕಾ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರ್ಜುನ ಲಮಾಣಿ ಮಾತನಾಡಿ ಶಿಕ್ಷಕರು ಕೇವಲ ಬೋಧನೆಗೆ ಮಾತ್ರ ಸೀಮಿತವಾಗದೆ ಸಂಸ್ಕೃತಿಕ ಹಾಗೂ ಸಹಪಠ್ಯ ಚಟುವಟಿಕೆಗಳಲ್ಲೂ ಸಹ ಭಾಗಿಯಾಗಬೇಕು ಆಗ ಮಾತ್ರ ಬೋಧನೆಯಲ್ಲಿ ಹೊಸ ಆವಿಷ್ಕಾರಗಳನ್ನು ಅಳವಡಿಕೊಳ್ಳಬಹುದಾಗಿದೆ ಎಂದು ಹೇಳಿದರು.ಶಿಕ್ಷಣ ಸಂಯೋಜಕರು ಪ್ರಭು ಬಿರಾದಾರ ಮಾತನಾಡಿ ಪ್ರತಿ ವರ್ಷವೂ ಕೂಡ ಸಹಪಠ್ಯ ಚಟುವಟಿಕೆಗಳನ್ನು ವ್ಯವಸ್ಥಿತವಾಗಿ ನಮ್ಮ ತಾಲ್ಲೂಕಿನಲ್ಲಿ ನಿರ್ವಹಣೆ ಮಾಡುತ್ತಾ ಬಹುಮಾನ ಪಡೆಯುವ ಶಿಕ್ಷಕರಿಗೆ ಪ್ರಥಮ, ದ್ವಿತೀಯ ಹಾಗುಯ ತೃತೀಯ…
ಮುದ್ದೇಬಿಹಾಳ: ನಮ್ಮ ದೇಶದ ಸಂವಿಧಾನವು ಸಮಬಾಳು ಸಮಪಾಲು ತತ್ವದ ಮೇಲೆ ರೂಪಿತವಾಗಿದ್ದು ದೇಶದ ಪ್ರತಿಯೊಬ್ಬ ಬಡವ ಬಲ್ಲಿದನ ಅಭಿವೃದ್ದಿಗೆ ಪೂರಕವಾಗಿದೆಯೆಂದು ಹಾರ್ವರ್ಡ್ ಪಿಯು ಸೈನ್ಸ ಕಾಲೇಜಿನ ಅಧ್ಯಕ್ಷ ಎಸ್.ಎಂ.ನೆರಬೆಂಚಿ ಹೇಳಿದರು.ಪಟ್ಟಣದ ಹಾರ್ವರ್ಡ್ ಪಿಯು ಸೈನ್ಸ ಕಾಲೇಜಿನಲ್ಲಿ ಜರುಗಿದ ಸಂವಿಧಾನ ಸಮರ್ಪಣಾ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ನಮ್ಮ ಸಂವಿಧಾನ ಗ್ರಂಥವು ತುಂಬಾ ದೊಡ್ಡದಿದ್ದರೂ ಕಠಿಣತೆಯನ್ನು ಹೊಂದಿಲ್ಲ. ಹಾಗಾಗಿ ಈಗಾಗಲೇ ೧೦೪ ಬಾರಿ ತಿದ್ದುಪಡಿಯಾಗಿದೆ. ಕರಡು ಸಮಿತಿಗೆ ಗಾಂಧೀಜಿ ರವರು ಕಾನೂನು, ರಾಜನೀತಿ ಹಾಗೂ ಅರ್ಥಶಾಸ್ತ್ರ ವಿಷಯಗಳಲ್ಲಿ ಪಿಎಚ್ಡಿ ಪದವಿ ಪಡೆದಿದ್ದ ಶೈಕ್ಷಣಿಕ ದಿಗ್ಗಜ ಅಂಬೇಡ್ಕರ್ ರವರ ಹೆಸರನ್ನು ಕರಡು ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಲು ಸೂಚಿಸಿದ್ದರಿಂದಲೇ ಇಂಥ ಅಧ್ಬುತವಾದ ಸಂವಿಧಾನ ರಚನೆಯಾಗಲು ಸಾಧ್ಯವಾಯಿತು ಎಂದು ಹೇಳಿದರು.ಅತಿಥಿಯಾಗಿ ಆಗಮಿಸಿದ್ದ ಸಂತ ಕನಕದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ಎಸ್.ಮೇಟಿ ಮಾತನಾಡಿ ನಮ್ಮ ದೇಶದ ಸಂವಿಧಾನವು ದೇಶದ ಎಲ್ಲ ಜಾತಿ, ಧರ್ಮಗಳ ಜನರನ್ನು ಒಂದುಗೂಡಿಸುವ ಶಾಂತಿಯ ತೋಟವೆಂದು ಬಣ್ಣಿಸಿದರು.ಕಾರ್ಯಕ್ರಮಕ್ಕೂ ಮೊದಲು ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು. ಪಟ್ಟಣದ ಸರ್ಕಾರಿ ಪದವಿ…
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಕಾಯಚಿಕಿತ್ಸಾ ವಿಭಾಗದ ವತಿಯಿಂದ ನಾನಾ ಚರ್ಮರೋಗ ಕಾಯಿಲೆಗಳಿಗಾಗಿ ನವೆಂಬರ್ 29 ರಿಂದ ಡಿಸೆಂಬರ್ 2ರ ವರೆಗೆ ಉಚಿತ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ನಾಲ್ಕು ದಿನ ನಡೆಯಲಿರುವ ಈ ಶಿಬಿರದಲ್ಲಿ ನಾನಾ ರೀತಿಯ ಚರ್ಮರೋಗಗಳಾದ ಭಂಗು, ಮೊಡವೆ, ಚಿಬ್ಬು, ಗಜಕರ್ಣ, ಇಸುಬು, ಅಲರ್ಜಿಯಿಂದ ಅಗುವ ತುರಿಕೆ ಮುಂತಾದ ದೀರ್ಘಕಾಲಿನ ಚರ್ಮರೋಗಳಿಗೆ ಉಚಿತವಾಗಿ ತಪಾಸಣೆ ನಡೆಸಲಾಗುವುದು. ಸಾರ್ವಜನಿಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಮೊ. ಸಂ: 9513397413, 7483278348 ಸಂಪರ್ಕಿಸಬಹುದಾಗಿದೆ.
