Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಮಾಜದ ಪ್ರಗತಿಯಲ್ಲಿ ಮಹಿಳೆಯರು ಗಮನಾರ್ಹ ಪಾತ್ರ ವಹಿಸುತ್ತಿದ್ದಾರೆ ಎಂದು ರಾಷ್ಟ್ರೀಯ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರೇಣುಕಾ ಪಾಟೀಲ ಹೇಳಿದರು.ಪಟ್ಟಣದ ಜೆಎಮ್‌ಜೆ ಸಮಾಜಸೇವಾ ಸಂಸ್ಥೆಯ ಆವರಣದಲ್ಲಿ ಶನಿವಾರ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ನೀಡುತ್ತಿರುವ ಕೊಡುಗೆಗಳನ್ನು ಪುರುಷ ಪ್ರಧಾನ ಸಮುದಾಯಗಳು ಗುರುತಿಸಿ, ಸ್ಮರಿಸಬೇಕಾಗಿದೆ ಎಂದರು.ಮಹಿಳಾ ಹೋರಾಟಗಾರ್ತಿ ಶೈಲಜಾ ಸ್ಥಾವರಮಠ ಮಾತನಾಡಿ, ಮಹಿಳೆಯರ ಹಕ್ಕು, ಸಮಾನತೆ ಹಾಗೂ ಸಬಲೀಕರಣದ ಬಗ್ಗೆ ಜಾಗೃತಿ ಮೂಡಿಸುವುದು ಇಂದು ಅತ್ಯಂತ ಅಗತ್ಯವಾಗಿದೆ. ಮಹಿಳಾ ದಿನಾಚರಣೆ ಕೇವಲ ಆಚರಣೆ ಮಾತ್ರವೇ ಅಲ್ಲ, ಇದು ಮಹಿಳೆಯರ ಹಕ್ಕುಗಳು, ಗೌರವ ಮತ್ತು ಸಮಾನತೆಯನ್ನು ಪ್ರೇರೇಪಿಸುವ ಮಹತ್ವದ ದಿನವಾಗಿದೆ ಎಂದರು.ಹಿರಿಯ ಆರೋಗ್ಯ ಸುರಕ್ಷಾ ಅಧಿಕಾರಿ ಸುಕನ್ಯಾ ಚಳ್ಳಗಿ ಮಾತನಾಡಿ, ಕುಟುಂಬದ ಜವಾಬ್ದಾರಿಗಳ ಜೊತೆಗೆ ವೃತ್ತಿ ಜೀವನವನ್ನು ಸಮತೋಲನದಿಂದ ನಿಭಾಯಿಸುತ್ತಿರುವ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗುತ್ತಿದ್ದಾರೆ. ಮಹಿಳೆಯರ ಸಾಮರ್ಥ್ಯವನ್ನು ಗುರುತಿಸಿ ಅವರಿಗೆ ಬೆಂಬಲ ನೀಡುವುದು ಅಗತ್ಯ ಎಂದರು.ಸಿಆರ್‌ಪಿ ವಿಜಯಲಕ್ಷ್ಮಿ ನವಲಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ ನಡೆಸಲಾಯಿತು. ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ದೃಷ್ಟಿಯಿಂದ ಈ ವಿಶೇಷ ಜಾಥಾ ನಡೆಸಿದರು.ಕ್ಯಾನ್ಸರ್ ರೋಗ ತಡೆಗಟ್ಟುವ ವಿಧಾನ, ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ಅಂಶಗಳ ಕುರಿತು ಭಿತ್ತಿ ಫಲಕಗಳನ್ನು ಸಹ ಪ್ರದರ್ಶಿಸಲಾಯಿತು.ಈ ಕಾರ್ ರ‍್ಯಾಲಿಗೆ ಚಾಲನೆ ನೀಡಿದ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ ಮಾತನಾಡಿ, ಮಹಿಳೆ ಇಂದು ಎಲ್ಲ ಕ್ಷೇತ್ರದಲ್ಲಿಯೂ ಸಾಧನೆಯ ನಗೆ ಬೀರಿದ್ದಾಳೆ, ವೈದ್ಯಕೀಯ, ವಿಜ್ಞಾನ, ಬಾಹ್ಯಾಕಾಶ ಹೀಗೆ ಎಲ್ಲ ರಂಗದಲ್ಲಿಯೂ ಸಾಧನೆ ತೋರಿದ್ದಾರೆ, ಒಬ್ಬ ತಾಯಿಯಾಗಿ, ಸಹೋದರಿಯಾಗಿ, ಪತ್ನಿಯಾಗಿ ಸಮಾಜದಲ್ಲಿ ತನ್ನದೇ ಆದ ಮಹೋನ್ನತ ಪಾತ್ರ ನಿಭಾಯಿಸುವ ಸ್ತ್ರೀ ಪೂಜ್ಯಳು ಎಂದರು.ವೈದ್ಯೆ ಡಾ.ವಾಣಿ ಗಚ್ಚಿನಮಠ ಮಾತನಾಡಿ, ಕ್ಯಾನ್ಸರ್ ಬಗ್ಗೆ ಭಯ ಬೇಡ, ಕ್ಯಾನ್ಸರ್ ಬಗ್ಗೆ ಅರಿವು ಅಗತ್ಯ, ಪ್ರಾಥಮಿಕ ಹಂತದಲ್ಲಿಯೇ ಕ್ಯಾನ್ಸರ್ ಪತ್ತೆ ಮಾಡಿದರೆ ಸಂಪೂರ್ಣವಾಗಿ ಅದನ್ನು ಗುಣಪಡಿಸಬಹುದು ಎಂದರು.ಕಾನೂನು ತಜ್ಞೆ ಡಾ.ಉಜ್ವಲಾ ಸರನಾಡಗೌಡ, ಖ್ಯಾತ ವೈದ್ಯ ಡಾ.ಕಿರಣ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಮಾರ್ಚ್ ೯ರ ಸೋಮವಾರ ಸಂಜೆ ೪:೦೦ ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಭೀಮ ಗಾಯನ ಕಾರ್ಯಕ್ರಮ ನಡೆಯಲಿದೆ.ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘವು ಭೀಮ ಗಾಯನವನ್ನು ಪ್ರಸ್ತುತಪಡಿಸಲಿದ್ದು, ಅಂಬೇಡ್ಕರ್ ಗೀತೆಗಳ ಈ ಮಹೋತ್ಸವಕ್ಕೆ ಎಲ್ಲ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಜಿಪಂ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪ್ರಗತಿ ಹಂತದಲ್ಲಿರುವ ಎಲ್ಲ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೂಡಲೇ ಪೂರ್ಣಗೊಳಿಸಬೇಕು ಎಂಸು ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಶನಿವಾರ ನಡೆದ ಮಹಾತ್ಮ ಗಾಂಧಿ ನರೇಗಾ ಯೋಜನೆಯ ನಾನಾ ವಿಷಯಗಳ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಗ್ರಾಪಂಗಳಿಗೆ ಬಿಡುಗಡೆ ಮಾಡಿರುವ ಸಾಮಗ್ರಿ ವೆಚ್ಚದ ಅನುದಾನವನ್ನು ವಿಳಂಬ ಮಾಡದೇ ಇದೇ ಮಾ. ೧೬ನೇ ತಾರೀಖಿನೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಹೇಳಿದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೋಂದಾಯಿಸಲ್ಪಟ್ಟ ಎಲ್ಲ ಕೂಲಿಕಾರರ ಇಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಮುಖ್ಯವಾಗಿ ಸಕ್ರಿಯ ಕೂಲಿಕಾರರ ಇಕೆವೈಸಿಯನ್ನು ಕಡ್ಡಾಯವಾಗಿ ಮಾ. ೧೭ ನೇ ತಾರೀಖಿನೊಳಗೆ ಶೇ.೧೦೦ ರಷ್ಟು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು. ಪ್ರತಿ ಗ್ರಾಪಂಗಳಲ್ಲಿ ನರೇಗಾ ಯೋಜನೆಯಡಿ ಚಾಲ್ತಿಯಲ್ಲಿರುವ ಸಮುದಾಯ ಹಾಗೂ ವೈಯಕ್ತಿಕ ಕಾಮಗಾರಿಗಳಲ್ಲಿ ಕೆಲಸ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ವಿವಿಧ ಬೇಡಿಕೆಗಳ ಈಡೆರಿಕೆಗಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಇಲಾಖೆಯ ಎಲ್ಲ ವೃಂದಗಳ ಸಂಘಗಳು ಶಾಸಕ ಯಶವಂತರಾಯಗೌಡ ಪಾಟೀಲರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು.ನಮ್ಮ ಬೇಡಿಗಳು ಈಡೇರುವವರೆಗೆ ಮಾರ್ಚ ೧೧ ರಿಂದ ೧೫ ರವರೆಗೆ ಕಪ್ಪು ಪಟ್ಟಿ ಧರಿಸಿ ಹೊರರೋಗಿ ಸೇವೆ ನೀಡದೆ ಕೇವಲ ತುರ್ತು ಸೇವೆ ಮಾತ್ರ ಒದಗಿಸುತ್ತೇವೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.ಅಲ್ಲಿಯವರೆಗೆ ನಮ್ಮ ಬೇಡಿಕೆ ಈಡೇರದಿದ್ದರೆ ದಿನಾಂಕ ೧೬ ರಿಂದ ಅನಿಷ್ಠಾವಧಿವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗುವದರ ಮೂಲಕ ಮುಷ್ಕರ ಹಮ್ಮಿಕೊಳ್ಳಲಾಗುವದು ಎಂದು ಮನವಿಯಲ್ಲಿ ತಿಳಿಸಿದ್ದಾರೆ.ತಾಲೂಕು ಆರೋಗ್ಯ ಅಧಿಕಾರಿ ಡಾ|| ರಾಜೇಶ ಕೋಳೆಕರ, ಡಾ|| ಪ್ರಶಾಂತ ಧೂಮಗೊಂಡ, ಡಾ|| ಶಿವಯೋಗಿ ನಡಗಡ್ಡೆ , ಹಿರಿಯ ಆರೋಗ್ಯ ಸಿಬ್ಬಂದಿ ಎಸ್.ಆರ್.ಗೋಟ್ಯಾಳ, ಎಸ್.ಎಂ. ದರ್ಗಾ, ಸಂಜೀವ ಅಂಕಲಗಿ, ಬಸವರಾಜ ಪಾಟೀಲ,ನಿಮಂಲಾ ಜಾಧವ ಆಡಳಿತ ವೈದ್ಯಾಧಿಕಾರಿಗಳು, ಸಹ ವೈದ್ಯಾಧಿಕಾರಿಗಳು, ಎಲ್ಲಾ ವೃಂದದ ಅಧ್ಯಕ್ಷರು, ಪದಾಧಿಕಾರಿಗಳು, ಹಾಗೂ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾಹೂರ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ೨೦೨೬-೨೭ನೇ ಸಾಲಿನ ಆಯವ್ಯಯ ಮಂಡನೆ ಸೇರಿದಂತೆ ವಿವಿಧ ವಿಷಯಗಳ ಮೇಲೆ ಚರ್ಚೆ ಜರುಗುವುದರ ಮೂಲಕ ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆ ಜರುಗಿತು.ಪಟ್ಟಣದ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ ಆರಂಭಗೊಂಡ ಸಾಮಾನ್ಯ ಸಭೆಯಲ್ಲಿ ೨೦೨೬-೨೭ನೇ ಸಾಲಿನ ಅಯವ್ಯಯ ಕುರಿತು ಚರ್ಚೆ ಆರಂಭಗೊಂಡಿತು.ಈ ಸಂದರ್ಭದಲ್ಲಿ ಸಿಬ್ಬಂದಿ ಎಸ್.ಪಿ.ಹಿರೇಮಠ ಮಾಹಿತಿ ನೀಡಿದರು.ನಂತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ನಿವೇಶನ ಮಂಜೂರು, ಉದ್ದಿಮೆ ಪರವಾನಿಗೆ ರದ್ದತಿ, ಕಟ್ಟಡ ಪರವಾನಿಗೆ ತೆಗೆದುಕೊಳ್ಳುವುದು. ಪಟ್ಟಣದ ಎಲ್ಲ ೧೭ ವಾರ್ಡುಗಳಲ್ಲಿಯ ದೇವಸ್ಥಾನಗಳ ಸರ್ವೇ ಹಾಗೂ ಉತಾರೆ ನೀಡುವ ಬಗ್ಗೆ ಹಾಗೂ ಅಮೃತ ಕಾಮಗಾರಿ ಕುರಿತು ಚರ್ಚೆ ಆರಂಭಗೊAಡಿತು.ವಿವಿಧ ವಾರ್ಡಗಳಲ್ಲಿ ಅಮೃತ ಕಾಮಗಾರಿಗಾಗಿ ಭೂಮಿ ಅಗೆದು ಪುನಃ ಕಾಂಕ್ರಿಟ್ ಮಾಡದೇ ಇರುವುದು. ಹಾಗೂ ಮನೆಮನೆಗೆ ನೀರು ಬರುವ ಮುಂಚೆಯೇ ರಸ್ತೆ ನಿರ್ಮಿಸಿ ಅವೈಜ್ಞಾನಿಕ ಕಾಮಗಾರಿ ನಡೆದ ಬಗ್ಗೆ ಸುದೀರ್ಘ ಚರ್ಚೆ ಜರುಗಿತು.ಪಟ್ಟಣದ ಹಿಂದುಳಿದ ವರ್ಗದ ಸ್ಮಶಾನದಲ್ಲಿ ಗಟಾರ ನಿರ್ಮಿಸಿದ್ದು , ಅಲ್ಲಿ ನಿಂತ ನೀರನ್ನು ಸ್ಥಳಾಂತರಿಸುವ ಕುರಿತು ಸೂಚಿಸಲಾಯಿತು…

Read More

ವಿಜಯಪುರದಲ್ಲಿ ಜಿಲ್ಲಾಧಿಕಾರಿ ಡಾ.‌ಆನಂದ‌. ಕೆ. ಹೇಳಿಕೆ‌ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಸತಿ ನಿಲಯಗಳು ಮಕ್ಕಳ‌ ಭವಿಷ್ಯ ರೂಪಿಸುವ ಕಲಿಕಾ ಕೇಂದ್ರಗಳಾಗಿದ್ದು, ಈ ಕೇಂದ್ರಗಳಲ್ಲಿ ಮಕ್ಕಳ‌ ಓದಿಗೆ‌ ಪೂರಕವಾಗಿ ಅವರ ಉತ್ತಮ‌ ವ್ಯಕ್ತಿತ್ವ ರೂಪಿಸಲು ಮನೆಯ ವಾತಾವರಣ ನಿರ್ಮಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಡಾ. ಆನಂದ‌ ಕೆ. ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಸಮಾಜ‌ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಫರ್ಲ‌ ಹೊಟೇಲ್ ಹಿಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಶುಕ್ರವಾರ ಸಂಜೆ ನಡೆದ 2025-26ನೇ ಸಾಲಿನ‌ ವಸತಿ ನಿಲಯ ವಾಸ್ತವ್ಯ ಹಾಗೂ ವಿವಿಧ ವಿನೂತನ ಕಾರ್ಯಕ್ರಮಗಳ ಸಮಾರೋಪ‌ ಸಮಾರಂಭ ಹಾಗೂ ಕ್ರೀಡಾಕೂಟ- ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ಈಗಾಗಲೇ‌‌ ಜಿಲ್ಲಾಮಟ್ಟದ ಅಧಿಕಾರಿಗಳನ್ನುಹಾಸ್ಟೆಲ್‌ ಮೆಂಟರ್ ಗಳಾಗಿ ನೇಮಿಸಿ,ಬಿಡುವು ಮಾಡಿಕೊಂಡು ನಿಯೋಜಿಸಿದ‌ ವಸತಿ ನಿಲಯಗಳಿಗೆ ಆಗಾಗ‌…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: TMG ಸುನಿಧಿ ಫೌಂಡೇಶನ್ ಟ್ರಸ್ಟ್ ಮಣಿಪಾಲ, MPI ಪೇಮೆಂಟ್ ಮಣಿಪಾಲ , ಹಾಗೂ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ್, ಶ್ರೀ ಕಾಯಕ ರತ್ನ ಮಹಿಳಾ ಸೇವಾ ಸಂಸ್ಥೆ, ಜಮಖಂಡಿ, ಸೆಲ್ಕೋ ಸೋಲಾರ್ ಲೈಟ್ ಪ್ರೈವೇಟ್ ಲಿಮಿಟೆಡ್ ಬಾಗಲಕೋಟೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಚಿಕ್ಕಲಕಿ ಕ್ರಾಸ್ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕಾದರೆ ಜೀವನೋಪಾಯ ಕೌಶಲ್ಯಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಸಸಿಗೆ ನೀರು ಹಾಕುವುದರ ಮೂಲಕ ಮುಖ್ಯ ವೈದ್ಯಾಧಿಕಾರಿ ಡಾ.ಮುಕುಂದ ಕಾಂಬಳೆ ಮಾಡಿದರು.ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಕಾಯಕರತ್ನ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಯಶೋಧಾ ಲಮಾಣಿಯವರು ವಹಿಸಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಸುಧಾಕರ ಸಬಕಾಳೆ, ಗೋವಿಂದ ದಾಸರ, ಸೆಲ್ಕೊ ಸೋಲಾರ ಸಂಸ್ಥೆ ಬಾಗಲಕೋಟೆಯ ತರಬೇತಿ ಮುಖ್ಯ ವ್ಯವಸ್ಥಾಪಕ ಶಿವಕುಮಾರ ಕೆ. ಆನಂದ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಮ್ಮ ಜಮಖಂಡಿಯ ಅನೇಕ ಪ್ರತಿಭೆಗಳು ಇಂದು ರಾಜ್ಯಮಟ್ಟದಲ್ಲಿ ಉನ್ನತ ಹುದ್ದೆಯಲ್ಲಿ ವಿರಾಜಮಾನರಾಗಿದ್ದಾರೆ, ಕ್ರಮಬದ್ಧವಾದ ಅಭ್ಯಾಸದಿಂದ ಇದು ಸಾಧ್ಯವಾಗಿದೆ ವಿದ್ಯಾರ್ಥಿಗಳಾದ ನೀವು ಕ್ರಮಬದ್ಧವಾದ ಅಧ್ಯಯನದಿಂದ ನೂರಕ್ಕೆ ನೂರು ಅಂಕ ಪಡೆಯಬಹುದು ಎಂದು ಜಮಖಂಡಿ ಶಾಸಕ ನಾಡೋಜ ಜಗದೀಶ ಗುಡಗುಂಟಿ ಅಭಿಪ್ರಾಯಪಟ್ಟರು.ಅವರು ತಾಲೂಕಿನ ಕುಂಬಾರಹಳ್ಳದ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಯ ವಾರ್ಷಿಕ ಸ್ನೇಹಸಮ್ಮೇಳನ, ಪಾಲಕ ಪೋಷಕರ ಸಭೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದ ಉದ್ಘಾಟಕರಾಗಿ ಮಾತನಾಡುತ್ತಾ, ಜ್ಞಾನವು ಮಾನವನಿಗೆ ಹಿರಿದಾದ ಬಲವನ್ನು ನೀಡುತ್ತದೆ ಅದನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ, ಮಕ್ಕಳಾದ ನೀವು ಪಠ್ಯದ ಜೊತೆ ಇತರೆ ಪುಸ್ತಕಗಳನ್ನು ಓದಿ ಜ್ಞಾನಿಗಳಾಗಿ, ಗ್ರಂಥಗಳಲ್ಲಿ ಬರುವ ಜೀವನ ತತ್ವ, ಸತ್ವಗಳನ್ನು ಬಾಳಿನಲ್ಲಿ ಅಳವಡಿಸಿಕೊಳ್ಳಿ ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.ಸಾನಿಧ್ಯ ವಹಿಸಿದ ಜಮಖಂಡಿಯ ಓಲೆ ಮಠದ ಶ್ರೀ ಆನಂದ ದೇವರು ಮಾತನಾಡಿ, ಇಂದು ಯುವಜನರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ, ಎಲ್ಲರಿಗೂ ತೊಟ್ಟಿಲ ಕಟ್ಟು, ಬಾಸಿಂಗ ಕಟ್ಟು, ಚಟ್ಟದ ಕಟ್ಟು ಸಾಮಾನ್ಯವಾಗಿದೆ , ನೀವು ಅದನ್ನು ಮೀರಿ ಜೀವನವನ್ನು…

Read More

೧೧ ಅಂಗನವಾಡಿ ಕೇಂದ್ರಗಳು ಸೇರಿ ಆಚರಿಸಿದ ಸಂಭ್ರಮದ ಬಾಲಮೇಳ | ಪ್ರತಿಭಾ ಪುರಸ್ಕಾರ ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಮಗುವಿಗೆ ಜನ್ಮ ಕೊಟ್ಟ ಒಬ್ಬ ತಾಯಿಯ ಜವಾಬ್ದಾರಿ ಎಷ್ಟಿರುತ್ತದೆಯೋ ಅಷ್ಟೇ ಜವಾಬ್ದಾರಿಯನ್ನು ಅಂಗನವಾಡಿಯಲ್ಲಿ ಕಾರ್ಯ ನಿರ್ವಹಿಸುವ ಮಾತೆಯರು ಹೊಂದಿದ್ದು, ಮಗು ಹುಟ್ಟಿದ ಎರಡು ವರ್ಷಗಳ ನಂತರ ತಾಯಿಗಿಂತ ಹೆಚ್ಚಿನ ಲಾಲನೆ ಪಾಲನೆ ಆರೈಕೆಗಳ ಜವಾಬ್ದಾರಿಯನ್ನು ಹೊತ್ತು ಮಗುವಿನ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಪೀಸ್ ಇಂಟರ್‌ನ್ಯಾಷನಲ್ ಶಾಲೆಯ ಮುಖ್ಯಗುರುಗಳಾದ ಚಾಂದಪಾಶಾ ಹವಾಲ್ದಾರ ಹೇಳಿದರು.ಗ್ರಾಮದ ಸರಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಜಯಪುರ, ಶಿಶು ಅಭಿವೃದ್ಧಿ ಯೋಜನೆ ಸಿಂದಗಿ ಹಾಗೂ ಅಜೀಂ ಪ್ರೇಮ್‌ಜಿ ಫೌಂಡೇಶನ್ ವಿಜಯಪುರ ಅವರ ಸಹಯೋಗದಲ್ಲಿ ಕಲಕೇರಿ ವಲಯ ಮಟ್ಟದ ಬಾಲಮೇಳ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಗ್ರಾಪಂ ಸದಸ್ಯರಾದ ನಬಿಲಾಲ ನಾಯ್ಕೋಡಿ ಮತ್ತು ಸುಧಾಕರ ಅಡಕಿ ಅವರು ಮಾತನಾಡಿ ಪ್ರತಿಯೊಂದು ಮಗುವಿಗೆ ಆಟದೊಂದಿಗೆ ಪಾಠವನ್ನು ಕಲಿಸುತ್ತಾ…

Read More