Author: editor.udayarashmi@gmail.com

ಸಾರವಾಡದ ದ್ಯಾಮವ್ವದೇವಿ ದೇವಸ್ಥಾನ ಉದ್ಘಾಟನೆ ಮತ್ತು ಜಾತ್ರೆಯಲ್ಲಿ ಪಾಲ್ಗೊಂಡ ಸಚಿವ ಎಂ.ಬಿ.ಪಾಟೀಲ ಸ್ಪಷ್ಠನೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಇಂದು ಸೋಮವಾರ ಬಬಲೇಶ್ವರ ತಾಲೂಕಿನ ಸಾರವಾಡ ದ್ಯಾಮವ್ವದೇವಿ ಮತ್ತು ವಿಜಯಪುರ ನಗರದ ಬುರಣಾಪುರ ರಸ್ತೆಯಲ್ಲಿರುವ ಘತ್ತರಗಿ ಭಾಗಮ್ಮ ದೇವಿಯ ಜಾತ್ರೆಯಲ್ಲಿ ಪಾಲ್ಗೋಂಡು ದೇವಿಯ ಆಶೀರ್ವಾದ ಪಡೆದರು.ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ನಡೆಯುತ್ತಿರುವ ದ್ಯಾಮವ್ವದೇವಿ ದೇವಸ್ಥಾನದ ಉದ್ಘಾಟನೆ ಮತ್ತು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೋಂಡ ಸಚಿವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಾರವಾಡ ಗ್ರಾಮಸ್ಥರು ಸಚಿವರನ್ನು ಸನ್ಮಾನಿಸಿ ಗೌರವಿಸಿದರು.ಈ ವೇಳೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಎಂ. ಬಿ. ಪಾಟೀಲ ಅವರು, ದೇಶದಲ್ಲಿ ಈಗ ಐದಾರು ರಾಜ್ಯಗಳು ಭೀಕರ ಬರದಿಂದ ತತ್ತರಿಸಿವೆ. ನಮ್ಮ ರಾಜ್ಯದಲ್ಲಿಯೂ ಬರಗಾಲ ಉಂಟಾಗಿದ್ದು, ವಿಜಯಪುರ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದೆ. ರಾಜ್ಯ ಸರಕಾರ ಬರವನ್ನು ಸಮರ್ಥವಾಗಿ…

Read More

ಬಸವನಬಾಗೇವಾಡಿ: ಪಾಲಕರು ತಮ್ಮ ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳುಹಿಸಬೇಕು. ಅವರ ವಿದ್ಯಾಭ್ಯಾಸಕ್ಕೆ ಸದಾ ಪ್ರೋತ್ಸಾಹ ನೀಡಬೇಕೆಂದು ನೇಗಿನಾಳದ ಕೆಬಿಎಲ್ಪಿಎಸ್ ಮುಖ್ಯಗುರು, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಹೇಳಿದರು.ತಾಲೂಕಿನ ನೇಗಿನಾಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ಜರುಗಿದ ಬಾಲ ವಿಕಾಸ ಸಮಿತಿ ಹಾಗೂ ಪಾಲಕರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಾಲಕರು ತಮ್ಮ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಕಡೆಗೆ ಆದ್ಯತೆ ಕೊಡುವ ಮೂಲಕ ಅವರ ಆರೋಗ್ಯದ ರಕ್ಷಣೆ ಮಾಡಬೇಕು. ಸರ್ಕಾರದ ಯೋಜನೆಗಳನ್ನು ನೇರವಾಗಿ ಫಲಾನುಭವಿಗಳಿಗೆ ತಲುಪುವಂತೆ ಮಾಡುವಲ್ಲಿ ಅಂಗನವಾಡಿ ಕೇಂದ್ರಗಳ ಪಾತ್ರ ಬಹುಮುಖ್ಯವಾಗಿದೆ ಎಂದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಭಾರತಿ ಸಜ್ಜನ ಮಾತನಾಡಿ, ಮಕ್ಕಳ ಶಿಕ್ಷಣ ಮತ್ತು ಆರೋಗ್ಯದ ಕಡೆಗೆ ಅಂಗನವಾಡಿ ಕಾರ್ಯಕರ್ತೆಯರು ಗಮನಹರಿಸಬೇಕೆಂದರು.ಅಧ್ಯಕ್ಷತೆಯನ್ನು ಡೋಣೂರ ಗ್ರಾಮ ಪಂಚಾಯಿತಿ ಸದಸ್ಯೆ -ತೀಮಾ ಬಿಜಾಪುರ ವಹಿಸಿದ್ದರು. ಸಭೆಯಲ್ಲಿ ಮಹಿಬೂಬ ದುಂಡಸಿ, ಶಮಶುದ್ಧೀನ ಕುಡಚಿ, ಮಹಿಬೂಬ ಮುಲ್ಲಾ, ಅದಮ ಪರೂತಾಬಾದ, ಶೋಭ ಚವ್ಹಾಣ, ರಾಜಾಮಾ ಪರೂತಾಬಾದ, ನೀಲಮ್ಮ ಮಠ ಇತರರು ಇದ್ದರು.ರಜಿಯಾ…

Read More

ಬಸವನಬಾಗೇವಾಡಿ: ದೇವರು ನಮಗೆ ಚೆಂದವಾದ ಬದುಕು ನೀಡಿದ್ದಾನೆ. ಈ ಚೆಂದವಾದ ಬದುಕಿನಲ್ಲಿ ಯಾರು ದಾನ ಮಾಡುತ್ತಾರೋ ಅವರು ಅಳಿದು ಹೋದರೂ ಅವರ ಬದುಕು ಸಮಾಜದಲ್ಲಿ ಅಜರಾಮರವಾಗಿರುತ್ತದೆ. ಇದುವೇ ದಾನದ ಶ್ರೇಷ್ಠತೆ ಎಂದು ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು ಹೇಳಿದರು.ಪಟ್ಟಣದ ವಿರಕ್ತಮಠದ ಶಿವಾನುಭವ ಮಂಟಪದಲ್ಲಿ ನಂದಿ ಸಾಹಿತ್ಯ ವೇದಿಕೆಯು ಭಾನುವಾರ ಹಮ್ಮಿಕೊಂಡಿದ್ದ ಸ್ಥಳೀಯ ಐತಿಹಾಸಿಕ ಬಸವೇಶ್ವರ ದೇವಾಲಯ ಜೀಣೋದ್ಧಾರಕ್ಕೆ ೬೫ ವರ್ಷಗಳ ಹಿಂದೆ ದೇಣಿಗೆ ನೀಡಿದ ಮಹಾದಾನಿಗಳ ಸ್ಮರಣೆ ಹಾಗೂ ಅವರ ವಂಶಜರಿಗೆ ಸನ್ಮಾನ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ತಮ್ಮೊಳಗೆ ಇರುವ ಅಂಶವನ್ನು ಸಮಾಜಕ್ಕೆ ನೀಡುವವರು ನಿಜವಾಗಿ ದೊಡ್ಡವರು. ಪ್ರತಿಯೊಬ್ಬರಿಗೆ ಸಮಾಜಕ್ಕೆ ಏನಾದರೂ ಕೊಡಬೇಕೆಂಬ ಭಾವ ಇರಬೇಕು. ಕೊಡುವ ಭಕ್ತಿ ದೊಡ್ಡದ್ದು. ಸಮಾಜಕ್ಕೆ ದಾನ ನೀಡಿರುವ ಅನೇಕ ದಾನಿಗಳ ಹೆಸರು ನಾಡಿನಲ್ಲಿ ಅಜರಾಮರವಾಗಿವೆ. ೬೫ ವರ್ಷಗಳ ಹಿಂದೆ ಬಸವೇಶ್ವರ ದೇವಾಲಯಕ್ಕೆ ದಾನ ನೀಡಿದ ಮಹನೀಯರ ವಂಶಜರನ್ನು ಆಹ್ವಾನಿಸಿ ಅವರಿಗೆ ಗೌರವ ಸಲ್ಲಿಸುವ ಕಾರ್ಯ ಮಾಡುತ್ತಿರುವ ನಂದಿ ಸಾಹಿತ್ಯ ವೇದಿಕೆಯ…

Read More

ತಾಳಿಕೋಟಿ: ಭಾರತದ ಎಲ್ಲ ಪ್ರಜೆಗಳಿಗೆ ಸಾಮಾಜಿಕ ಸಮಾನತೆ ಆರ್ಥಿಕ ಭದ್ರತೆ ಮತ್ತು ರಾಜಕೀಯ ಸ್ವಾತಂತ್ರ್ಯವನ್ನು ಕೊಡುವ ಉದ್ದೇಶದೊಂದಿಗೆ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅಂತಃಕರಣದಿಂದ ರೂಪಿತವಾದ ಭಾರತದ ಸಂವಿಧಾನ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ದಲಿತ ಯುವ ಮುಖಂಡ ಜೈ ಭೀಮ ಮುತ್ತಗಿ ಹೇಳಿದರು.ರವಿವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಉದ್ಯಾನವನದಲ್ಲಿ ಸಮಾಜ ಕಲ್ಯಾಣ ಇಲಾಖೆ. ತಾಲೂಕ ಆಡಳಿತ ಹಾಗೂ ಪುರಸಭೆಯ ಸಹಯೋಗದಲ್ಲಿ ಸಂವಿಧಾನ ದಿನದ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನ ನಮಗೆ ಸರಳವಾಗಿ ಸಿಕ್ಕಿದ್ದಲ್ಲ ಇದರ ಹಿಂದೆ ಬಾಬಾಸಾಹೇಬರ ತ್ಯಾಗ ಮತ್ತು ಪರಿಶ್ರಮ ಅಡಗಿದೆ ಬಾಬಾ ಸಾಹೇಬರು ಯಾವ ಕಾರಣಕ್ಕೂ ಸಂವಿಧಾನ ರಚನಾ ಸಮಿತಿಯಲ್ಲಿ ಬರಬಾರದೆಂದು ಕೆಲವು ಪಟ್ಟ ಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾದ ಷಡ್ಯಂತರ ನಡೆಸಿದರು ತಮ್ಮ ಅಗಾಧವಾದ ಜ್ಞಾನ ಹಾಗೂ ದೂರದೃಷ್ಟಿ ಗುಣದಿಂದ ಬಾಬಾ ಸಾಹೇಬರು ಸಂವಿಧಾನ ರಚನಾ ಸಮಿತಿಗೆ ಆಯ್ಕೆಯಾದರು 5000 ವರ್ಷಗಳಿಂದ ನಿರಂತರವಾಗಿ ನಡೆಯುತ್ತಾ ಬಂದಿರುವ ಶೋಷಣೆಯನ್ನು ಕೇವಲ ಐವತ್ತು ವರ್ಷಗಳಲ್ಲಿ ನಿರ್ಮೂಲೆ ಮಾಡಿದ…

Read More

ತಾಳಿಕೋಟಿ: ಪಟ್ಟಣದ ಸರ್ವಜ್ಞ ವಿದ್ಯಾಪೀಠ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ತಾಳಿಕೋಟಿಯಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಸಂಸ್ಥಾಪಕ ಅಧ್ಯಕ್ಷ ಸಿದ್ದನಗೌಡ ಮಂಗಳೂರ ರವರು, ಸಂವಿಧಾನದ ಆಚರಣೆ ಮತ್ತು ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿಹೇಳಿದರು.ದೈಹಿಕ ಶಿಕ್ಷಕ ಬಸವರಾಜ ಚಳ್ಳಗಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವ ಪೀಠಿಕೆಯನ್ನು ಪಟಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಗುರು ಸಂತೋಷ ಪವಾರ, ರವಿಕುಮಾರ ಮಲ್ಲಾಬಾದಿ, ಬಸವರಾಜ ಸವದತ್ತಿ, ಭೀಮನಗೌಡ ಸಾಸನೂರ, ಸಂಗಮೇಶ ಬಿರಾದಾರ, ಗಿರೀಶ ಎಚ್, ಸಿದ್ದನಗೌಡ ಮುದ್ನೂರ, ಶೀವಲೀಲಾ ಚುಂಚೂರ, ಮಿನಾಕ್ಷಿ ರಜಪೂತ,ಸಂಗೀತಾ ಬಿರಾದಾರ, ಜಯಶ್ರೀ ಮಕಾಶಿ, ಲಕ್ಷ್ಮೀ ಚುಂಚೂರ, ಸಂಗೀತಾ ನಾಯ್ಕ, ಭಾಗ್ಯಶ್ರೀ ಗಿರಿನಿವಾಸ, ವಿದ್ಯಾಶ್ರೀ ಗಿರಿನಿವಾಸ, ಸರ್ವ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಇದ್ದರು.

Read More

ಸಿಂದಗಿ: ಭಾರತದ ಸಂವಿಧಾನವು ವಿಶ್ವದ ಎಲ್ಲಾ ಸಂವಿಧಾನಗಳಿಗಿಂತ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದೆ. ಸಂವಿಧಾನದಲ್ಲಿ ಪ್ರತಿಪಾದಿಸಿರುವ ಮೂಲಭೂತ ಕರ್ತವ್ಯಗಳ ಅರಿವು ಮೂಡಿಸುವ ಗುರಿಯನ್ನು ಈ ದಿನವು ಹೊಂದಿದೆ ಎಂದು ಪ್ರಾಚಾರ್ಯ ವಿಮಲಕಾಂತ ಪಾಟೀಲ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಆರ್.ಡಿ.ಪಾಟೀಲ ಪದವಿ ಪೂರ್ವ ಕಲಾ,ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದಲ್ಲಿ ಜರುಗಿದ ಭಾರತದ ಸಂವಿಧಾನ ದಿನದ ಸಮಾರಂಭದಲ್ಲಿ ಅವರು ಮಾತನಾಡಿದ ಅವರು, ಭಾರತದ ಸಂವಿಧಾನವು ರಾಷ್ಟ್ರಕ್ಕೆ ಮಾರ್ಗದರ್ಶಿ ಪುಸ್ತಕವಾಗಿದೆ. ಕರ್ತವ್ಯಗಳು ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರಚನೆಯ ಆಧಾರವಾಗಿದೆ. ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಸಂವಿಧಾನ ದಿವಸ ಎಂದು ಕರೆಯಲಾಗುತ್ತದೆ ಎಂದರು. ಈ ವೇಳೆ ಇಎಲ್‌ಸಿ ನೋಡಲ್ ಅಧಿಕಾರಿ ಎನ್.ಬಿ.ಪೂಜಾರಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಪಿ.ವ್ಹಿ.ಮಹಲಿನಮಠ, ಎಸ್.ಎಚ್.ಜಾಧವ, ಬಿ.ಬಿ.ಜಮಾದಾರ, ಪಿ.ಬಿ.ಜೋಗೂರ, ಡಾ.ಶರಣಬಸವ ಜೋಗೂರ, ಎಂ.ಐ.ಮುಜಾವರ, ಸುನೀಲ ಪಾಟೀಲ, ವ್ಹಿ.ಪಿ.ನಂದಿಕೋಲ, ಎನ್.ಎಂ.ಶೆಳ್ಳಗಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಇದ್ದರು.*ಪ್ರೇರಣಾ ಶಾಲೆ:*ಪಟ್ಟಣದ ಆಲಮೇಲ ರಸ್ತೆಯ ಹೊರವಲಯದಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ…

Read More

ಸಿಂದಗಿಯ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ-೫೦ರ ಸಂಭ್ರಮ ಸಿಂದಗಿ: ಮಕ್ಕಳಿಗೂ ಹಕ್ಕುಗಳಿವೆ. ಮಕ್ಕಳ ಶೋಷಣೆಯ ವಿರುದ್ಧ ಪ್ರಶ್ನಿಸುವ ಹಕ್ಕುಗಳಿಗೆ ಸರ್ಕಾರ ಮನ್ನಣೆ ಇಡಬೇಕು ಎಂದು ಕೆರೂಟಗಿ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯಗುರು ಎಸ್.ಎಸ್. ಸಾತಿಹಾಳ ಹೇಳಿದರು.ಶನಿವಾರ ಸಾಯಂಕಾಲ ಪಟ್ಟಣದ ಆಲಮೇಲ ರಸ್ತೆಯ ಹೊರವಲಯದಲ್ಲಿರುವ ಪ್ರೇರಣಾ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ-೫೦ರ ಸಂಭ್ರಮದಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪುಸ್ತಕಗಳು ನಮ್ಮನ್ನು ನೋಡಿ ಕಂಗಲಾಗಬೇಕೇ ವಿನಃ ನಾವು ಪುಸ್ತಕ ಕಂಡು ಹೆದರಬಾರದು. ಡಾ.ಬಿ.ಆರ್.ಅಂಬೇಡ್ಕರ್ ಓದಿನ ಪರಿ ಎಲ್ಲರಿಗೂ ಆದರ್ಶನೀಯ ಎಂದು ಮಕ್ಕಳಿಗೆ ಮನವರಿಕೆ ಮಾಡಿದರು. ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಇತಿಮಿತಯಲ್ಲಿರಬೇಕು. ಪುಸ್ತಕ ಎಲ್ಲ ವಿವಿಧ ಭಾವನೆ, ಹಣ, ಕೀರ್ತಿ, ಸಂಪತ್ತು ಎಲ್ಲವನ್ನು ನೀಡುತ್ತದೆ ಎಂಬ ಕಿವಿಮಾತು ಹೇಳಿದರು.ಈ ವೇಳೆ ವಕೀಲ ಬಿ.ಜಿ.ನೆಲ್ಲಗಿ ಮಕ್ಕಳಿಗಾಗಿರುವ ಕಾಯ್ದೆ-ಕಾನೂನುಗಳ ಕುರಿತು ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಆರ್.ಡಿ. ಕುಲಕರ್ಣಿ ಅಧ್ಯಕ್ಷೀಯ ನುಡಿಗಳನ್ನಾಡಿದರು.ಮಕ್ಕಳ ದಿನಾಚರಣೆಯ ನಿಮಿತ್ತ ಹಮ್ಮಿಕೊಂಡ ವಿವಿಧ…

Read More

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಅರಿವಿಗಾಗಿ ಮ್ಯಾರಥಾನ್ ಓಟ ಸಿಂದಗಿ: ಈ ದೇಶವನ್ನು ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ರಾಷ್ಟ್ರೀಯತೆಯಿಂದ ಸಾಮಾಜಿಕ ತಳಹದಿಯ ಮೇಲೆ ಕಟ್ಟಬೇಕು ಎಂಬ ಆಶಯದೊಂದಿಗೆ ಭಾರತದ ಸಂವಿಧಾನವನ್ನು ಡಾ. ಬಿ.ಆರ್.ಅಂಬೇಡ್ಕರ ಅವರು ನಮಗೆಲ್ಲ ನೀಡಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದಲ್ಲಿ ಪ್ಲೈ ಸ್ಪೋರ್ಟ್ಸ ಅಸೋಷಿಯೇಶನ್ ಹಾಗೂ ಗಣೇಶ ಕನ್ಸ್ಸ್ಟçಕ್ಷನ್ ಸಹಯೋಗದಲ್ಲಿ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಅರಿವಿಗಾಗಿ ಓಟ ಎಂಬ ಶೀರ್ಷಿಕೆಯ ಅಡಿಯಲ್ಲಿ ಹಮ್ಮಿಕೊಂಡ ಮ್ಯಾರಥಾನ್ ಓಟ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ಸಂವಿಧಾನವನ್ನು ಉಳಿಸಬೇಕಾಗಿರುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ. ಇಂದು ನಾವು ಸಂವಿಧಾನದ ಪೀಠಿಕೆಯ ವಿಧಿ ಓದಿದಂತೆ ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜೀವನ ಸಾಗಿಸಬೇಕು ಎಂದರು.ಇದೇ ಸಂದರ್ಭದಲ್ಲಿ ತಾಲೂಕಾಡಳಿತ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂವಿಧಾನದ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಗೌರವ ಸಲ್ಲಿಸಿದರು. ಬಳಿಕ ತಾಲೂಕಾ ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಸಂವಿಧಾನ ಪೀಠಿಕೆಯನ್ನು ಭೋದಿಸಿದರು.ಇದೇ ಸಂದರ್ಭದಲ್ಲಿ ರಾಜಶೇಖರ ಕೂಚಬಾಳ…

Read More

ಭಗವಾನ ಬುದ್ಧರ ಅಂತಿಮ ಉಪದೇಶ & ಡಾ.ಬಾಬಾಸಾಹೇಬ ಅಂಬೇಡ್ಕರ ಕೊನೆಯ ಸಂದೇಶ” ಕೃತಿಗಳ ಬಿಡುಗಡೆ ದೇವರಹಿಪ್ಪರಗಿ: “ಭಗವಾನ ಬುದ್ಧರ ಅಂತಿಮ ಉಪದೇಶ ಮತ್ತು ಡಾ.ಬಾಬಾಸಾಹೇಬ ಅಂಬೇಡ್ಕರವರ ಕೊನೆಯ ಸಂದೇಶ” ಎಂಬ ಪುಸ್ತಕ ಇಂದು ಬಿಡುಗಡೆಯಾಗುತ್ತಿರುವುದು ಅತ್ಯಂತ ಸೂಕ್ತ ಹಾಗೂ ಸಮಯೋಚಿತವಾಗಿದೆ ಎಂದು ವಿಶ್ವರತ್ನ ಬುದ್ಧ ವಿಹಾರ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡಕೋಳಕರ್ ಹೇಳಿದರು.ತಾಲ್ಲೂಕಿನ ಕಡಕೋಳ ಗ್ರಾಮದ ವಿಶ್ವರತ್ನ ಬುದ್ಧವಿಹಾರ ಹೊಸಕಾಲೋನಿ, ಚೇತವನದಲ್ಲಿ ವಿಶ್ವರತ್ನ ಬುದ್ಧವಿಹಾರ ಟ್ರಸ್ಟ್ ಇವರ ಸಹಯೋಗದಲ್ಲಿ ಭಾನುವಾರ ಜರುಗಿದ ಪುಸ್ತಕ ಬಿಡುಗಡೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಇಂದು ನಾವು ಸಾಕಷ್ಟು ಗ್ರಂಥ, ಪುಸ್ತಕಗಳನ್ನು ನೆಮ್ಮದಿಗಾಗಿ ಓದಿ ಮರೆಯುತ್ತಿದ್ದೇವೆ. ಆದರೆ ವಾಸ್ತವಿಕವಾಗಿ ಅವುಗಳಲ್ಲಿನ ಅಂಶಗಳನ್ನು ಅರ್ಥೈಸಿ ಅದರಂತೆ ನಡೆಯುವುದನ್ನು ರೂಢಿಸಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಇಂದಿನ ಪುಸ್ತಕ ಉತ್ತಮ ಅಂಶಗಳ ಸಂಗ್ರಹವಾಗಿದೆ ಎಂದರು.ಸಿಂದಗಿ ಮಾಜಿಶಾಸಕ ಶರಣಪ್ಪ ಸುಣಗಾರ ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿ, ಮಾತನಾಡುತ್ತಾ, ಬುದ್ಧವಿಹಾರ ನಿರ್ಮಿತ ತಾಣದಲ್ಲಿಯೇ ಇಂದು ಭಗವಾನ ಬುದ್ಧರ ಅಂತಿಮ ಉಪದೇಶಗಳನ್ನು ಹೊತ್ತ ಹೊತ್ತಿಗೆ ಬಿಡುಗಡೆ ಮಾಡುತ್ತಿರುವುದು…

Read More

ದೇವರಹಿಪ್ಪರಗಿ: ತಾಲ್ಲೂಕು ಆಡಳಿತ, ಪಟ್ಟಣ ಪಂಚಾಯಿತಿ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಂವಿಧಾನ ದಿನಾಚರಣೆ ಜರುಗಿತು.ಪಟ್ಟಣದ ಅಂಬೇಡ್ಕರ ವೃತ್ತದಲ್ಲಿ ಭಾನುವಾರ ತಹಶೀಲ್ದಾರ್ ಪ್ರಕಾಶ ಸಿಂದಗಿ ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಪೀಠಿಕೆ ಓದುವುದರ ಮೂಲಕ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದ ಸಂವಿಧಾನ ನಮ್ಮದಾಗಿದೆ. ಪ್ರತಿಯೊಂದು ಅಂಶಗಳು ನಮಗೆ ಮಾದರಿಯಾಗಿವೆ. ಸರ್ಕಾರ ನಡೆಸುವ ಪ್ರತಿಯೊಬ್ಬ ನಾಗರೀಕನಿಗೂ ಅನ್ವಯವಾಗುವ ಹಕ್ಕು ಮತ್ತು ಕರ್ತವ್ಯಗಳ ಕುರಿತು ಸಂವಿಧಾನ ಮಾಹಿತಿ ನೀಡುತ್ತದೆ. ಇಂತಹ ಸಂವಿಧಾನ ರಚನೆ ಮಾಡಿದ ಮಹನೀಯರೆಲ್ಲರಿಗೂ ನಾವು ಕೃತಜ್ಞರಾಗಿರಬೇಕು. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ ಅವರ ಸೇವೆ ಶ್ಲಾಘನೀಯವಾಗಿದೆ. ಇಂತಹ ಸಂವಿಧಾನವನ್ನು ಸಂರಕ್ಷಣೆ ಮಾಡುವ ಕಾರ್ಯ ನಮ್ಮ ಮೇಲಿದೆ ಎಂದರು.ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ಡಿ.ಮುಲ್ಲಾ, ಸದಸ್ಯರಾದ ರಮೇಶ ಮಸಬಿನಾಳ, ಶಾಂತಯ್ಯ ಜಡಿಮಠ, ಬಶೀರ್ ಅಹ್ಮದ್ ಮಳಖೇಡ, ಕಾಸುಗೌಡ ಬಿರಾದಾರ(ಜಲಕತ್ತಿ), ರಮೇಶ ಮ್ಯಾಕೇರಿ, ಭೀಮಪ್ಪ ಗುಡಿಮನಿ, ರಾಜಕುಮಾರ…

Read More