Author: editor.udayarashmi@gmail.com

ಕೊಲ್ಹಾರ: ಪಟ್ಟಣದ ಶ್ರೀ ಸಂಗಮೇಶ್ವರ ವಿದ್ಯಾವರ್ಧಕ ಸಂಸ್ಥೆಯ ಆವರಣದಲ್ಲಿ ಪ್ರಪ್ರಥಮ ಬಾರಿಗೆ ಪದವಿ ಪೂರ್ವ ಮಹಾವಿದ್ಯಾಲಯಗಳ ವಿಧ್ಯಾರ್ಥಿ ಹಾಗೂ ವಿಧ್ಯಾರ್ಥಿನಿಯರ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ೧೯ ರಿಂದ ೨೧ರ ವರೆಗೆ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಶ್ರೀಶೈಲ ಬ ಪತಂಗಿ ಹೇಳಿದರು.ಕ್ರೀಡಾಕೂಟದ ಸಿದ್ದತೆಯನ್ನು ವೀಕ್ಷಿಸಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾಯಂಕಾಲ ಕ್ರೀಡಾಪಟುಗಳಿಂದ ಪಟ್ಟಣದ ಪ್ರಮುಖ ರಾಜಬೀದಿಯಲ್ಲಿ ಪಥಸಂಚಲನ ನಡೆಯುವದು. ನಂತರ ಸಂಜೆ ೬ಘಂಟೆಗೆ ಉದ್ಘಾಟನೆ ಕಾರ್ಯಕ್ರಮ ಇರುವದು. ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಉಪನಿರ್ದೇಶಕರ ಕಛೇರಿ ವಿಜಯಪೂರ ಮತ್ತು ಸಂಗಮೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಪ್ರಸಕ್ತ ಸಾಲಿನ ಪದವಿ ಪೂರ್ವ ಮಹಾವಿದ್ಯಾಲಯಗಳ ರಾಜ್ಯಮಟ್ಟದ ಕ್ರೀಡಾಕೂಟ ನಡೆಯುವುದು ಎಂದರು.ಕನ್ನೇರಿ ಮಠದ ಅದೃಷ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಉದ್ಘಾಟನೆ ನೆರವೇರಿಸುವರು. ಅಧ್ಯಕ್ಷತೆಯನ್ನು ಸಚಿವ ಶಿವಾನಂದ ಪಾಟೀಲ ವಹಿಸುವರು. ಅತಿಥಿಗಳಾಗಿ ಅವಳಿ ಜಿಲ್ಲೆಯ ವಿಧಾನ ಪರಿಷತ್ ಸದಸ್ಯರು ಜಿಲ್ಲೆಯ ಸರ್ವ…

Read More

ಜಿಲ್ಲೆಯ ೨೭೫೫ ಅಂಗನವಾಡಿ ಕೇಂದ್ರಗಳ ಪಾಲಕರ ಸಭೆ: ೪೩೫೮೪ ಮಕ್ಕಳ ಪಾಲಕರು ಭಾಗಿ ವಿಜಯಪುರ: ಪ್ರತಿ ತಿಂಗಳು ನಡೆಯುವ ಪಾಲಕರ ಸಭೆಯನ್ನು ಜಿಲ್ಲೆಯ ೨೭೫೫ ಅಂಗನವಾಡಿ ಕೇಂದ್ರಗಳಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ೪೩೫೮೪ ಮಕ್ಕಳ ಪಾಲಕರು ಸಭೆಯಲ್ಲಿ ಭಾಗವಹಿಸಿ ಸಮಾಲೋಚನೆ ನಡೆಸುವ ಮೂಲಕ ಸಭೆಯನ್ನು ಯಶಸ್ವಿಗೊಳಿಸಲಾಯಿತು.ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು ಚಡಚಣ ತಾಲೂಕಿನ ಇಂಚಗೇರಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಪಾಲಕರ ಸಭೆಯಲ್ಲಿ ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿ ಇಲಾಖೆಯು ಮಹಿಳೆಯರ ಹಾಗೂ ಮಕ್ಕಳ ಸರ್ವಾಂಗೀಣ ಬೆಳವಣಿಗೆಗಾಗಿ ಶ್ರಮಿಸುತ್ತಿದ್ದು, ಇಲಾಖೆಯ ಸೌಲಭ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಪಡೆದುಕೊಳ್ಳಲು ಜಿಲ್ಲೆಯ ಎಲ್ಲ ಪಾಲಕರು ಮುಂದೆ ಬರಬೇಕು ಎಂದರು. ಅಂಗನವಾಡಿ ಕೇಂದ್ರದಲ್ಲಿ ಎಲ್ಲ ಮಕ್ಕಳಿಗೆ ಪೌಷ್ಠಿಕಾಂಶವುಳ್ಳ ಆಹಾರವನ್ನು ಸರ್ಕಾರದ ನಿರ್ದೇಶನದಂತೆ ನೀಡಲಾಗುತ್ತಿದೆ. ಎಲ್ಲ ಅಂಗನವಾಡಿ ಕೇಂದ್ರಗಳು ಇಲಾಖೆಯ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇಲಾಖೆಯ ಜೊತೆಗೆ ಸಮುದಾಯದ ಸಹಭಾಗಿತ್ವವು ತುಂಬಾ ಮುಖ್ಯವಾಗಿದೆ. ಎಲ್ಲ ಪಾಲಕರು ಅಂಗನವಾಡಿ ಕೇಂದ್ರ ತಮ್ಮ ಆಸ್ತಿಯಂತೆ…

Read More

ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಚಾಲನೆ ನೀಡಿದ ಎಡಿಸಿ ಮಹಾದೇವ ಮುರಗಿ ಅಭಿಮತ ವಿಜಯಪುರ: ನಮ್ಮ ಕಲೆ ಹಾಗೂ ಸಂಸ್ಕೃತಿ ಇವುಗಳನ್ನು ಸ್ಪರ್ಧೆಗೆ ಮಾತ್ರ ಸೀಮಿತಗೊಳಿಸದೆ ನಮ್ಮ ಬದುಕಿನ ದೈನಂದಿನ ಭಾಗವಾಗಿಸಿಕೊಳ್ಳಬೇಕು. ಅಂದಾಗ ಮಾತ್ರ ನಾಡಿನ, ದೇಶದ ಸಂಸ್ಕೃತಿ ಸದೃಢವಾಗಬಲ್ಲದು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಭಿಪ್ರಾಯಪಟ್ಟರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ, ಬಿ.ಎಲ್.ಡಿ.ಇ. ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಶನಿವಾರ ನಗರದ ಆಯುರ್ವೇದ ಮಹಾವಿದ್ಯಾಲಯದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು, ಇಂದಿನ ಯುವಕರು ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ, ಕಲೆ ಹಾಗೂ ಸಾಹಿತ್ಯಕ್ಕೆ ಹೆಚ್ಚು ಒತ್ತು ನೀಡುವುದರೊಂದಿಗೆ ಹೆಮ್ಮರವಾಗಿ ಬೆಳೆಸುವಂತಾಗಬೇಕೆಂದು ಹೇಳಿದರು.ಭಾರತ ಸರಕಾರದ ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯ ಡಾ. ಜಾವಿದ್ ಜಮಾದಾರ ಮಾತನಾಡಿ, ಭಾರತದ ಶ್ರೀಮಂತ ಸಂಸ್ಕೃತಿ ಪೋಷಿಸುತ್ತ ಸಾರ್ವತ್ರಿಕ ಮೌಲ್ಯಗಳನ್ನು ಜಗತ್ತಿಗೆ ಬಿತ್ತರಿಸುತ್ತಿದೆ. ಅಂತಹ ಮೌಲ್ಯಾಧಾರಿತ ಸಂಸ್ಕೃತಿಯನ್ನು ಮೈಗೂಡಿಸಿಕೊಳ್ಳಲು ಇಂದಿನ ಯುವ ಜನಾಂಗ…

Read More

ವಿಜಯಪುರ: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವೆಂಬರ್ ೨೦ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ನವೆಂಬರ್ ೨೦ರಂದು ಬೆಂಗಳೂರಿನಿಂದ ಹೊರಟು ಬೆಳಿಗ್ಗೆ ೧೧-೪೦ಕ್ಕೆ ವಿಜಯಪುರ ಸೈನಿಕ ಶಾಲೆ ಆವರಣ ಹೆಲಿಪ್ಯಾಡ್‌ಗೆ ಆಗಮಿಸಿ, ವಿಜಯಪುರ ನಗರದ ಸೋಲಾಪುರ ರಸ್ತೆಯ ಕಿತ್ತೂರು ಚನ್ನಮ್ಮ ನಗರದಲ್ಲಿರುವ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ ೭೦ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಶತಮಾನೋತ್ಸವ ಭವನ ಉದ್ಘಾಟನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ ೩-೩೦ಕ್ಕೆ ವಿಜಯಪುರ ಸೈನಿಕ ಶಾಲೆ ಹೆಲಿಪ್ಯಾಡ್‌ದಿಂದ ಹೆಲಿಕ್ಯಾಪ್ಟರ್ ಮೂಲಕ ಮರು ಪ್ರಯಾಣ ಬೆಳೆಸಲಿದ್ದಾರೆ.

Read More

ಬಸವನಬಾಗೇವಾಡಿ: ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಜೈನ್ ಪ್ಲಾಟ್‌ನಲ್ಲಿ ನಿರ್ಮಾಣಗೊಂಡಿರುವ ಪುರಸಭೆ ಕಾರ್ಯಾಲಯದ ನೂತನ ಕಟ್ಟಡದಲ್ಲಿ ಶನಿವಾರ ಸತ್ಯನಾರಾಯಣ ಪೂಜೆಯೊಂದಿಗೆ ಕಚೇರಿ ಕಾರ್ಯಾರಂಭಗೊಂಡಿತು.ಪಟ್ಟಣದ ತೆಲಗಿ ರಸ್ತೆಯಲ್ಲಿ ಇದುವರೆಗೂ ಪುರಸಭೆ ಕಚೇರಿ ಕಟ್ಟಡದಲ್ಲಿ ಸಾರ್ವಜನಿಕರಿಗೆ ಪುರಸಭೆ ಸೇವೆ ಒದಗಿಸುತ್ತಿದೆ. ಇದೀಗ ವಿಶಾಲವಾದ ಪ್ರದೇಶದಲ್ಲಿ ಅಂದಾಜು ರೂ. ೨ ಕೋಟಿಕ್ಕೂ ಹೆಚ್ಚಿನ ವೆಚ್ಚದಲ್ಲಿ ನಿರ್ಮಾಣವಾಗಿರುವ ಭವ್ಯವಾದ ಪುರಸಭೆ ಕಚೇರಿಯ ನೂತನ ಕಟ್ಟಡದಲ್ಲಿ ಇಂದಿನಿಂದ ಜನರಿಗೆ ಸೇವೆ ಲಭ್ಯವಾಗಲಿದೆ.ಬೆಳಗ್ಗೆ ೯ ಗಂಟೆಗೆ ಸತ್ಯನಾರಾಯಣ ಪೂಜೆಯು ಧಾರ್ಮಿಕ ವಿಧಿ ವಿಧಾನದೊಂದಿಗೆ ಪುರಸಭೆಯ ಎಲ್ಲ ಅಧಿಕಾರಿ ವರ್ಗ,ಸಿಬ್ಬಂದಿ, ಪುರಸಭೆ ಸದಸ್ಯರು, ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಪೂಜೆ ನೆರವೇರಿದ ನಂತರ ಸ್ಥಳೀಯ ಪೂಜ್ಯರಾದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪುರಸಭೆ ಕಚೇರಿಯ ನೂತನ ಕಟ್ಟಡದಲ್ಲಿ ಹಿಂದೆ ಒಮ್ಮೆ ಪೂಜೆ ನೆರೇವರಿದೆ. ಇದೀಗ ಸಚಿವ ಶಿವಾನಂದ ಪಾಟೀಲ, ಜಿಲ್ಲಾಧಿಕಾರಿ, ಆಡಳಿತಾಧಿಕಾರಿ ಉಪವಿಭಾಗಾಧಿಕಾರಿ, ಪುರಸಭೆ ಸದಸ್ಯರ ಸರ್ವರ ಸಹಮತದೊಂದಿಗೆ…

Read More

ಬಸವನಬಾಗೇವಾಡಿ: ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಎಸ್‌ಸಿ,ಎಸ್‌ಟಿ ಘಟಕದಲ್ಲಿ ವಿವಿಧ ಪದಾಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಪಕ್ಷದ ಸಂಘಟನೆಗೆ ಮುಂದಾಗಿದ್ದು. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿ ಗೆಲುವಿಗಾಗಿ ಪಕ್ಷದ ಕಾರ್ಯಕರ್ತರು ಶ್ರಮಿಸುತ್ತಾರೆ ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದ ಎಸ್‌ಸಿ, ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ರಮೇಶ ಬಿಜೆಪಿ ಪಕ್ಷ ದಲಿತ ವಿರೋಧ ಪಕ್ಷವಾಗಿದೆ. ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಬಾಂಧವರಿಗೆ ಕಾಂಗ್ರೆಸ್ ಪಕ್ಷವು ಹೆಚ್ಚಿನ ಸ್ಥಾನಮಾನ ನೀಡಿದೆ. ಬಿಜೆಪಿ ಪಕ್ಷ ದಲಿತ ವಿರೋಧ ಪಕ್ಷವಾಗಿದೆ. ಅದಕ್ಕಾಗಿಯೇ ಕಳೆದ ವಿಧಾನಸಭೆ ಚುನಾವಣೆಯಲ್ಲಿ ದಲಿತ ಸಮುದಾಯದವರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ ಹೆಚ್ಚು ಸ್ಥಾನಗಳು ಬರುವಂತೆ ಮಾಡಿದ್ದಾರೆ. ಬಿಜೆಪಿ ಪಕ್ಷವನ್ನು ತಿರಸ್ಕಾರ ಮಾಡಿದ್ದಾರೆ. ಇದೀಗ ಬಿಜೆಪಿಯು ಒಡೆದ ಮನೆಯಂತೆ ಆಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಸ್ಥಾನಗಳು ಬರುವದು ನಿಶ್ಚಿತ ಎಂದರು.ಕಾಂಗ್ರೆಸ್ ಪಕ್ಷವು ದಲಿತ ಸಮುದಾಯದವರಿಗೆ ಸಿಎಂ ಸ್ಥಾನ ನೀಡಬಹುದಿತ್ತಲ್ಲವೇ ಎಂಬ ಸುದ್ದಿಗಾರರ…

Read More

ದೇವರಹಿಪ್ಪರಗಿ: ಭಾರಿ ಸದ್ದಿನೊಂದಿಗೆ ಭೂಮಿ ಅದುರಿದ ಪರಿಣಾಮ ಸಾರ್ವಜನಿಕರು ಆತಂಕಕ್ಕೆ ಒಳಗಾದ ಘಟನೆ ಶನಿವಾರ ಜರುಗಿದೆ.ಪಟ್ಟಣದ ಇಂಡಿ ರಸ್ತೆ, ಬಸವನಗರ, ಕಲ್ಮೇಶ್ವರ ನಗರಗಳ ವ್ಯಾಪ್ತಿಯಲ್ಲಿ ಶನಿವಾರ ಬೆಳಿಗ್ಗೆ ೮ ಗಂಟೆಗೆ ಭಾರಿ ಸಪ್ಪಳದೊಂದಿಗೆ ೨ ಸೆಕೆಂಡ್‌ನಷ್ಟು ಕಾಲ ಭೂಮಿ ಅದುರಿದ ಕಾರಣ ಕೆಲವು ಮನೆಗಳ ಕಿಟಕಿ, ಬಾಗಿಲುಗಳಿಂದ ಸದ್ದು ಬಂದ ಅನುಭವವಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಿಂದ ತಹಶೀಲ್ದಾರ ಕಚೇರಿಗೂ ಸಹ ಮಾಹಿತಿ ರವಾನೆಯಾಗಿ ಸಾರ್ವಜನಿಕರಲ್ಲಿ ಚರ್ಚೆಗಳಾದವು. ನಂತರ ಇದು ಸಮೀಪದ ಕಲ್ಲಿನ ಕ್ರಶರ್‌ಗಳಿಂದ ಬಂದ ಶಬ್ದ ಎಂದು ಸಾರ್ವಜನಿಕರು ಹಾಗೂ ರೈತರಿಂದ ತಿಳಿದು ಬಂದಿತು.ಕಳೆದ ೩ ವರ್ಷಗಳ ಹಿಂದೆ ಇದೇ ತೆರನಾದ ಘಟನೆಗಳು ಜರುಗಿದ್ದು, ಆಗ ಸಾರ್ವಜನಿಕರು ಖುದ್ದಾಗಿ ಕಲ್ಲಿನ ಗಣಿ ಪ್ರದೇಶ ಹಾಗೂ ಕ್ರಶರ್‌ಗಳಿಗೆ ತೆರಳಿ ಸ್ಪೋಟಕ ಬಳಸದಂತೆ ವಿನಂತಿ ಮಾಡಿದ್ದರು. ಈಗ ಪುನಃ ಶನಿವಾರ ಇಂಥದೇ ಘಟನೆ ಆಗಿದೆ. ಅದೃಷ್ಟವಶಾತ್ ಯಾವುದೇ ಭೂಕಂಪ ಸಂಭವಿಸಿಲ್ಲ ಎಂದು ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಯಿತು.

Read More

ಸಿಂದಗಿ: ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ತುಂಬಾ ದೊಡ್ಡದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ ಹೇಳಿದರು.ತಾಲೂಕಿನ ಚಟ್ಟರಕಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಹಮ್ಮಿಕೊಂಡ ಮಕ್ಕಳ ಪಾಲಕರ ಸಭೆಯಲ್ಲಿ ಮಾತನಾಡಿದ ಅವರು, ಮಕ್ಕಳಿಗೆ ನಿಜವಾಗಲೂ ತಂದೆ ತಾಯಿಯ ಪ್ರೀತಿ, ಆರೈಕೆ ತುಂಬಾ ಅವಶ್ಯಕತೆಯಾಗಿರುತ್ತದೆ. ಅಂಗನವಾಡಿಯಲ್ಲಿ ಮಕ್ಕಳ ಯಾವೆಲ್ಲ ಬೆಳವಣಿಗೆಯಾಗುತ್ತೆ. ಮತ್ತು ಮಕ್ಕಳಿಂದ ಹಾಡು ಕತೆಗಳನ್ನು ಹೇಳಿಸಲಾಯಿತು. ಕಾನ್ವೆಂಟ್ ಗೆ ಹೋಗುವ ಮಕ್ಕಳು ಮತ್ತೆ ನಮ್ಮ ಅಂಗನವಾಡಿಗಿ ಬರುವ ಮಕ್ಕಳಲ್ಲಿನ ವ್ಯತ್ಯಾಸದ ಕುರಿತು ಮಾಹಿತಿ ನೀಡಿದರು.ಈ ವೇಳೆ ವಲಯದ ಮೇಲ್ವಿಚಾರಕಿಯರು, ಗ್ರಾಮ ಪಂಚಾಯತ ಸದಸ್ಯರು, ಬಾಲವಿಕಾಸ ಸಮಿತಿ ಸದಸ್ಯರು ಮತ್ತು ಅಂಗನವಾಡಿ ರ‍್ಯರ‍್ತೆಯರು, ಸಹಾಯಕಿಯರು, ಪಾಲಕರು ಉಪಸ್ಥಿತರಿದ್ದರು.

Read More

ಸಿಂದಗಿ: ಭಾರತದ ಗ್ರಾಮೀಣ ಕ್ರೀಡೆಯಾಗಿರುವ ಕಬಡ್ಡಿ ಸುಮಾರು ನಾಲ್ಕು ಸಾವಿರ ವರ್ಷಗಳಷ್ಟು ಪುರಾತನವಾದದ್ದು. ಭಾರತದ ದೇಸೀ ಕ್ರೀಡೆ ಕಬಡ್ಡಿಯು ದೇಶಕ್ಕೆ ಸಾಕಷ್ಟು ಹೆಗ್ಗಳಿಕೆಯ ಜೊತೆಗೆ ಹೆಸರನ್ನೂ ತಂದು ಕೊಟ್ಟಿದೆ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು.ನಗರದ ಸಾತವಿರೇಶ್ವರ ಸಭಾಭವನದಲ್ಲಿ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಜೀವನವು ಪುಸ್ತಕ ಮತ್ತು ಲ್ಯಾಬ್‌ಗಳಿಗೆ ಸೀಮಿತವಾಗದೆ ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಬೆಲೆಸಿಕೊಳ್ಳಬೇಕು. ಎಲ್ಲ ರಂಗಗಳಲ್ಲಿ ಮಹಿಳೆಯರು ಪುರುಷರಿಗಿಂತ ಪ್ರಗತಿಯನ್ನು ಸಾಧಿಸುತ್ತಿರುವುದು ಸಂತಸದ ಸಂಗತಿ. ಕ್ರೀಡೆ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡುವ ಕಾರ್ಯವಾಗಬೇಕಾಗಿದೆ. ಆ ದಿಸೆಯಲ್ಲಿ ಸಾರಂಗಮಠದ ಪೂಜ್ಯರು ಈ ಕಾರ್ಯ ಮಾಡುತ್ತಿರುವುದು ಒಂದು ಸುವರ್ಣ ಘಟ್ಟವಾಗಿದೆ ಎಂದರು.ಇದೇ ಸಂದರ್ಭದಲ್ಲಿ ದಿವ್ಯ ಸಾನಿಧ್ಯ ವಹಿಸಿದ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಆಟ…

Read More

ದೇವರಹಿಪ್ಪರಗಿ: ಮಹಿಳೆಯರು ಮಕ್ಕಳ ಪಾಲನೆ ಜೊತೆಗೆ ರಾಜ್ಯ, ದೇಶದ ವಿದ್ಯಮಾನಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ವಲಯ ಮೇಲ್ವಿಚಾರಕಿ ಶಾಂತಾ ನಾಯಿಕ ಹೇಳಿದರು.ತಾಲ್ಲೂಕಿನ ನಿವಾಳಖೇಡ ಗ್ರಾಮದ ಅಂಗನವಾಡಿ ಕೇಂದ್ರ-೨ರಲ್ಲಿ ಶನಿವಾರ ಜರುಗಿದ ಪಾಲಕರ ಸಭೆಗೆ ಚಾಲನೆ ನೀಡಿ ಮಾತನಾಡಿದರು. ಮಹಿಳೆಯರು ಗಂಡ,ಮಕ್ಕಳು ಸಂಸಾರದೊಂದಿಗೆ ಬದಲಾಗುತ್ತಿರುವ ಜಗತ್ತನ್ನು ಅರಿಯಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮಕ್ಕಳಿಗೆ ನೀಡಿರುವ ಸಮವಸ್ತ್ರ ಆಹಾರ ವಿತರಣೆ ಸೇರಿದಂತೆ ವಿವಿಧ ಯೋಜನೆಗಳ ಕುರಿತು ತಿಳಿದುಕೊಳ್ಳಬೇಕು. ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಹಣ ಪಡೆಯದೇ ಇದ್ದಲ್ಲಿ ಇ-ಕೆವೈಸಿ ಮಾಡಿ ಹಣ ಜಮೆಯಾಗುವಂತೆ ಕ್ರಮ ವಹಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಮನೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಂಸ್ಕಾರವಂತರನ್ನಾಗಿ ಮಾಡಿ ಎಂದರು.ಕಾರ್ಯಕರ್ತೆ ಪ್ರಭಾವತಿ ಕೊಣ್ಣೂರ, ಶರಣಮ್ಮ ಗದ್ದಿಗೆಮಠ, ತಾರಾ ಸುತಾರ್, ಸಾವಿತ್ರಿ ಸುಂಗಠಾಣ, ಚನ್ನಮ್ಮ ಸಿಂದಗಿ, ಲಕ್ಷ್ಮೀಬಾಯಿ ಇಂಡಿ, ಮಲ್ಲಮ್ಮ ನಿಡಗುಂದಿ, ಸಂಗೀತಾ ಭಂಟನೂರ, ಕಾಶೀಬಾಯಿ ಲೋಣಿ, ಲಕ್ಷ್ಮೀಬಾಯಿ ಮೆಟಗಾರ, ನೀಲಮ್ಮ ಹಿರೇಮಠ ಸೇರಿದಂತೆ ಮಕ್ಕಳು ಇದ್ದರು.

Read More