Author: editor.udayarashmi@gmail.com

ವಿಜಯಪುರ: ಮಧುಮೇಹಿಗಳು ಮುಖದಷ್ಟೇ ಪಾದಗಳಿಗೂ ಪ್ರಾಮುಖ್ಯತೆ ನೀಡಬೇಕು ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ.ಕೋಟೆಣ್ಣವರ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರ ಚಿಕಿತ್ಸಾ ವಿಭಾಗದ ವತಿಯಿಂದ ಇಂದು ಶನಿವಾರ ಆಯೋಜಿಸಲಾಗಿದ್ದ ಉಚಿತ ಮಧುಮೇಹ ಪಾದರೋಗ ತಪಾಸಣೆ ಮತ್ತು ಚಿಕಿತ್ಸಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಹೆಚ್ಚು ಮಧುಮೇಹಿಗಳು ದೇವಾಲಯ ದರ್ಶನಕ್ಕೆ ಬರಿಗಾಲಲ್ಲಿ ನಡೆದುಕೊಂಡು ಹೋಗುತ್ತಾರೆ. ಆಗ ಪಾದದ ಸಮಸ್ಯೆಗೆ ಒಳಗಾಗುತ್ತಾರೆ. ಆದ್ದರಿಂದ ಮಧುಮೇಹಿಗಳು ಮನೆಯೇ ದೇವಾಲಯವೆಂದು ತಿಳಿದು ಆದಷ್ಟು ಜಾಗೃತೆ ವಹಿಸಬೇಕು ಎಂದು ಹೇಳಿದ ಅವರು, ಮಧುಮೇಹಿಗಳು ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಮಾತನಾಡಿ, ಭಾರತವು ಮಧುಮೇಹದಲ್ಲಿ ವಿಶ್ವದ ರಾಜಧಾನಿಯಾಗುತ್ತಿದೆ. ಮಧುಮೇಹಿಗಳು ರಕ್ತದಲ್ಲಿರುವ ಸಕ್ಕರೆ ಪ್ರಮಾಣವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳದಿದ್ದರೆ ದೀರ್ಘಕಾಲೀನ ತೊಂದರೆಗಳು ಉಂಟಾಗುತ್ತವೆ. ದ್ರಷ್ಟಿಹೀನತೆ(ರೆಟಿನೊಪತಿ), ಕಿಡ್ನಿ ವೈಫಲ್ಯ(ನೆಫ್ರೊಪತಿ) ಮತ್ತು ನರಗಳ ದೌರ್ಬಲ್ಯತೆಯಿಂದ (ನ್ಯೂರೊಪತಿ) ಪಾದದ ಸಮಸ್ಯೆಗಳಿಂದ ಬಳಲಬೇಕಾಗುತ್ತದೆ. ಬಿ.ಎಲ್.ಡಿ.ಇ…

Read More

– ಮಂಡ್ಯ ಮ.ನಾ.ಉಡುಪ ವಾಲ್ಮೀಕಿ ರಾಮಾಯಣದಲ್ಲಿ ರಾವಣ ವಧೆಯ ನಂತರನಡೆಯುವ ಪ್ರಸಂಗವಿದು. ರಾಮ, ಲಕ್ಷ್ಮಣ, ಸೀತೆ,ಹನುಮಂತ ಎಲ್ಲರೂ ಅಯೋಧ್ಯೆಗೆ ಬರುತ್ತಾರೆ. ಭರತಮತ್ತು ಶತೃಘ್ನರು ಪ್ರೀತಿಯಿಂದ ಎಲ್ಲರನ್ನೂ ಸ್ವಾಗತಿಸುತ್ತಾರೆ.ಹೀಗೆ ಎಲ್ಲರೂ ಆನಂದದಿಂದ ಇರುವಾಗ ಲಕ್ಷ್ಮಣನುತನ್ನೊಳಗೆ ತಾನೇ ನಗುತ್ತಾನೆ. ಆ ಸಮಯದಲ್ಲಿ ಅಲ್ಲಿದ್ದ ಕೈಕೇಯಿ ತನ್ನ ಮನದಲ್ಲಿ ಅಂದುಕೊಳ್ಳುತ್ತಾಳೆ.” ಅಂದು ರಾಮನನ್ನು ವನವಾಸಕ್ಕೆ ಕಳುಹಿಸಿ ಪತಿಯ ಸಾವಿಗೆ ಕಾರಣಳಾದ ನೀನು ಈ ದಿವಸ ನೀನು ರಾಮನನ್ನು ಸ್ವಾಗತಿಸುತ್ತೀಯಾ? “ಎಂದು ಪರಿಹಾಸ್ಯಮಾಡಿ ನಗುತ್ತಿದ್ದಾನೆ ಎಂದುಕೊಂಡಳು. ವಿಭೀಷಣ ತನ್ನ ಮನಸ್ಸಿನಲ್ಲಿ” ಮನೆಯ ಗುಟ್ಟನ್ನು ರಾಮನಿಗೆ ಹೇಳಿ ಲಂಕೆಗೆ ಕೇಡುಬಯಸಿ ಅಣ್ಣನನ್ನು ಕೊಲ್ಲಿಸಿ ಲಂಕಾಧಿಪತಿಯಾದೆನೆಂದು ?’ “ನಗುತ್ತಿರಬಹುದು ಎಂದುಕೊಂಡನು.ಸುಗ್ರೀವ ತನ್ನ ಮನಸ್ಸಿನಲ್ಲಿ“ ಅಣ್ಣನನ್ನು ಮೋಸದಿಂದ ಕೊಂದು ರಾಜ್ಯ ಸಂಪಾದಿಸಿರಾಮನ ಜೊತೆಯಲ್ಲಿ ಅನಂದದಿಂದ ಇರುವೆಯಾ “‘ಎಂದು ಲಕ್ಷ್ಮಣ ಪರಿಹಾಸ್ಯ ಮಾಡಿ ನಗುತ್ತಿರಬಹುದು ಎಂದುಕೊಂಡನು.ಸೀತೆ ತನ್ನ ಮನಸ್ಸಿನಲ್ಲಿ“ ರಾಮ ಚಿನ್ನದ ಜಿಂಕೆ ತರಲು ಹೋದಾಗ ಮೂರುಗೆರೆಗಳನ್ನು ಎಳೆದು ಹೊರಬರಬೇಡವೆಂದು ಸಾರಿಸಾರಿ ಹೇಳಿದ್ದರೂ ತನ್ನ ದಾಟಿ ಮಾತು ಕೇಳದೇ ಬಂದಿರುವುದಕ್ಕೆ ತಾನೇ ರಾಮ-ರಾವಣ…

Read More

ಭಾರತ – ಆಸ್ಟ್ರೇಲಿಯಾ ವಿಶ್ವಕಪ್ ಕ್ರಿಕೆಟ್ ಫೈನಲ್ ಇಂದು ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ- ವಿವೇಕಾನಂದ ಎಚ್ ಕೆ, ಬೆಂಗಳೂರು ಕ್ರಿಕೆಟ್ ಒಂದು ಜೂಜಾಟವಲ್ಲ,ಮೋಜಿನಾಟವೂ ಅಲ್ಲ,ಮನರಂಜನೆಯೂ ಅಲ್ಲ,ವ್ಯಾಪಾರವು ಅಲ್ಲ,ದೇಶದ ಸ್ವಾಭಿಮಾನದ ಪ್ರಶ್ನೆಯೂ ಅಲ್ಲ, ಅದೊಂದು ಕ್ರೀಡೆ, ಕೇವಲ ಕ್ರೀಡೆ ಮಾತ್ರ..2023 ರ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ನಡೆಸುವ ಒಂದು ದಿನದ 50/50 ಓವರುಗಳ ವಿಶ್ವಕಪ್ ಸ್ಪರ್ಧೆಯಲ್ಲಿ ಅಂತಿಮವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಫೈನಲ್ ತಲುಪಿದೆ. ಭಾನುವಾರ ಪ್ರಶಸ್ತಿಗಾಗಿ ಸ್ಪರ್ಧೆ ನಡೆದು ವಿಶ್ವಕಪ್ ವಿಜೇತರು ನಿರ್ಧರವಾಗುತ್ತಾರೆ..ಬಹುತೇಕ ಸಮ ಬಲದ ತಂಡಗಳ ನಡುವಿನ ಹೋರಾಟ ಕುತೂಹಲಕಾರಿಯಾಗಿದೆ. ಆದರೂ ಭಾರತ ಗೆಲ್ಲಲಿ ಎಂದು ಆಶಿಸುತ್ತಾ..ಭಾರತದ ಒಟ್ಟು ಜನಸಂಖ್ಯೆಯಲ್ಲಿ ಕನಿಷ್ಠ ಶೇಕಡಾ 30/40% ಜನರಿಗೆ ಕ್ರಿಕೆಟ್ ಬಗ್ಗೆ ಮಾಹಿತಿ ಇದೆ. ಆ ಕಾರಣದಿಂದಲೇ ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ವಿಶ್ವದ ಶ್ರೀಮಂತ ಕ್ರೀಡಾ ಸಂಸ್ಥೆ ಎಂದು ಹೆಸರು ಗಳಿಸಿದೆ..ಕ್ರಿಕೆಟ್ ನೆರಳಲ್ಲಿ ಭಾರತದ ಇತರ ಕ್ರೀಡೆಗಳು ಸೊರಗಿವೆ ಎಂಬ ಆರೋಪವೂ ಇದೆ. ಅಷ್ಟು ವ್ಯಾಪಕವಾಗಿ ಕ್ರಿಕೆಟ್ ಆವರಿಸಿದೆ.ದುರಾದೃಷ್ಟವಶಾತ್ ಭಾರತದಲ್ಲಿ…

Read More

ಕೂಡಲಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪ ವಿಜಯಪುರ: ಬಿಜೆಪಿ ರಾಜ್ಯಾಧ್ಯ್ಕಕ್ಷ ಮತ್ತು ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಉತ್ತರ ಕರ್ನಾಟಕ, ಲಿಂಗಾಯಿತ ಹಾಗೂ ಪಂಚಮಸಾಲಿ ಲಿಂಗಾಯಿತ ಸಮಾಜಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕೂಡಲ ಸಂಗಮ ಲಿಂಗಾಯಿತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ.ಶನಿವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಧ್ಯಕ್ಷರಾಗಿ ಬಿ. ವೈ. ವಿಜಯೇಂದ್ರ ಮತ್ತು ಪ್ರತಿಪಕ್ಷದ ನಾಯಕನಾಗಿ ಆರ್. ಅಶೋಕ ನೇಮಕಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.ಬಿಜೆಪಿ ಪಕ್ಷದ ವರಿಷ್ಠರು ಏನು ತೀರ್ಮಾನ ಮಾಡಿದ್ದಾರೆ ಅದರ ಬಗ್ಗೆ ಮಾತನಾಡುವುದಿಲ್ಲ. ಆದರೆ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಯತ್ನಾಳ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದೇ ರೀತಿ ಲಿಂಗಾಯತ ನಾಯಕತ್ವಕ್ಕೂ ಅನ್ಯಾಯವಾಗಿದೆ. ಪಂಚಮಸಾಲಿ ಸಮುದಾಯಕ್ಕೂ ಅನ್ಯಾಯವಾಗಿದೆ. ಉತ್ತರ ಕರ್ನಾಟಕದಲ್ಲಿ ಪಕ್ಷಕ್ಕೆ ದುಡಿದ ಅನೇಕ ನಾಯಕರಿದ್ದರು. ಅವರೆಲ್ಲರನ್ನು ಕಡೆಗಣಿಸಿ ಉತ್ತರ ಕರ್ನಾಟಕದ ನಾಯಕತ್ವಕ್ಕೆ ಅನ್ಯಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಕೆಲವರು ಕುತಂತ್ರವನ್ನು ಮಾಡುತ್ತಿದ್ದಾರೆ ಎಂಬ ಅನುಮಾನ…

Read More

ಮೋರಟಗಿ: ತಾಲೂಕಿನ ಮೋರಟಗಿ ಗ್ರಾಮದ ಆರಾದ್ಯ ದೇವರುಗಳಾದ ಶ್ರೀ ಸಿದ್ದರಾಮೇಶ್ವರ ಹಾಗೂ ಶ್ರೀ ಗುರು ರೇವಣಾಸಿದ್ದೇಶ್ವರ ಜಾತ್ರಾ ನಿಮಿತ್ಯವಾಗಿ ನ.೧೮ರಂದು ರಾತ್ರಿ ೮ಘಂಟೆಗೆ ಉಭಯ ಮಹಾತ್ಮರ ಮಹಾಪುರಾಣ ಕಾರ್ಯಕ್ರಮ ಪ್ರಾರಂಭವಾಗಲಿದೆ.ಜೇರಟಗಿ ವಿರಕ್ತಮಠದ ಶ್ರೀ ಮಹಾಂತ ಸ್ವಾಮಿಗಳು ಸಾನಿದ್ಯ ವಹಿಸಲಿದ್ದಾರೆ. ಹೂವಿನಹಳ್ಳಿಯ ಗುರುಲಿಂಗಯ್ಯ ಸ್ವಾಮಿಗಳು ಪುರಾಣ ಪ್ರವಚನ ನೀಡಲಿದ್ದಾರೆ. ಸಿದ್ರಾಮಯ್ಯ ಮಠಪತಿ ಬಸವಣ್ಣನ ಸ್ಥಾನ ವಹಿಸಲಿದ್ದು, ಗಾಯಕರಾಗಿ ಗುರುನಾಥ ವಿಶ್ವಕರ್ಮ, ತಬಲಾ ವಾದಕರಾಗಿ ರವಿ ವಿಭೂತಿ ಸೇರಿದಂತೆ ಅನೇಕ ಕಲಾವಿದರು ಭಾಗವಹಿಸಲಿದ್ದಾರೆ.ಕಾರಣ ಮೋರಟಗಿ ಸೇರಿದಂತೆ ಗ್ರಾಮದ ಸುತ್ತಮುತ್ತಲಿನ ಶ್ರೀ ಸಿದ್ದರಾಮೇಶ್ವರ ಹಾಗೂ ಗುರು ರೇವಣಾಸಿದ್ದೇಶ್ವರ ಸದ್ಭಕ್ತಾದಿಗಳು ಪುರಾಣ ಪ್ರವಚನವನ್ನು ಕೇಳಿ ಪಾವನರಾಗಬೇಕು ಎಂದು ಶ್ರೀ ಸಿದ್ದರಾಮೇಶ್ವ ಸಮೀತಿಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲು ಕಂಡಿರುವುದರಿಂದ ಬೂತ್ ಮಟ್ಟದಿಂದ ಪಕ್ಷವನ್ನು ಕಟ್ಟಬೇಕಿದೆ. ಅಸಮಾಧಾನಗೊಂಡಿರುವ ಹಿರಿಯ ಶಾಸಕರ ಮನವೊಲಿಸಬೇಕಿದೆ. ಲೋಕಸಭೆ ಚುನಾವಣೆ ಬಿಜೆಪಿಗೆ ದೊಡ್ಡ ಸವಾಲಾಗಿದ್ದು ಕಳೆದ ಬಾರಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಅಷ್ಟೇ ಸ್ಥಾನಗಳನ್ನು ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ.ವಿರೋಧ ಪಕ್ಷದ ನಾಯಕರ ಆಯ್ಕೆಗೆ ಸಭೆ ನಡೆಯುತ್ತಿರುವಾಗ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀ ಕುಡಿಯುವುದಾಗಿ ಹೇಳಿ ಸಭೆಯಿಂದ ಹೊರನಡೆದಿದ್ದರು. ಇನ್ನು ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಯಡಿಯೂರಪ್ಪ ಮತ್ತು ಅವರ ಕುಟುಂಬವನ್ನು ಉಲ್ಲೇಖಿಸಿ ಬಿಜೆಪಿ ಒಂದೇ ಕುಟುಂಬದ ಪಕ್ಷವಾಗಬಾರದು ಎಂದು ಹೇಳಿದರು.ಕಳೆದ ವಾರ ಬಿಜೆಪಿ ಹೈಕಮಾಂಡ್ ಕರ್ನಾಟಕದ ರಾಜ್ಯಾಧ್ಯಕ್ಷರನ್ನಾಗಿ ಶಿಕಾರಿಪುರದ ಶಾಸಕ ಬಿ ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿತು. ವಿಜಯೇಂದ್ರ ಬಿಜೆಪಿಯಲ್ಲಿ ಪ್ರಮುಖ ನಾಯಕನಾಗಿರುವ ಬಿ ಎಸ್ ಯಡಿಯೂರಪ್ಪ ಅವರ ಮಗ,…

Read More

ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಘೋಷಣೆ | ಬೆಂಬಲಿಗರಿಂದ ಸಂಭ್ರಮಾಚರಣೆ | ಹಲ ನಾಯಕರ ಅಸಮಾಧಾನ ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಆರ್ ಅಶೋಕ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.ಕರ್ನಾಟಕ ವಿಧಾನಸಭೆ ನಡೆದ 6 ತಿಂಗಳ ಬಳಿಕ ಬಿಜೆಪಿ ಕೊನೆಗೂ ವಿಪಕ್ಷ ನಾಯಕನ ಹೆಸರು ಘೋಷಣೆ ಮಾಡಿದೆ. ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ಎರಡನೇ ದಿನದಲ್ಲೇ ಬಿಜೆಪಿ ವಿಪಕ್ಷ ನಾಯಕನ ಹೆಸರನ್ನೂ ಘೋಷಣೆ ಮಾಡಿದೆ.ಆರ್. ಅಶೋಕ್ ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿದ್ದಾರೆ. ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕನಾಗಿರುವ ಅಶೋಕ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗಿಯೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕಂದಾಯ ಸಚಿವರಾಗಿ ಕೆಲಸ ಮಾಡಿದ್ದಾರೆ.ಲಿಂಗಾಯತ ಸಮುದಾಯದ ನಾಯಕ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ…

Read More

ವಿಜಯಪುರ: ಇಂಡಿ ತಾಲೂಕಿನ ತಾಂಬಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿನಾಂಕ : ೨೫-೧೦-೨೦೨೩ ರಂದು ಡಾ.ನವೀನಕುಮಾರ ಇವರನ್ನು ವೈದ್ಯಾಧಿಕಾರಿಗಳ ಹುದ್ದೆಗೆ ನೇಮಕ ಮಾಡಲಾಗಿದ್ದು, ತಾಂಬಾ ಗ್ರಾಮದ ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಮಸ್ಥರು ತಾಂಬಾ ಸರ್ಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಯನ್ನು ಪಡೆದುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಿಂದ ಪಿಎಂ ವಿಶ್ವಕರ್ಮ ಯೋಜನೆಯಡಿ ಸಾಲ ಹಾಗೂ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಪಿಎಂ ವಿಶ್ವಕರ್ಮ ಯೋಜನೆಯಡಿ ಕುಶಲಕರ್ಮಿಗಳಿಗೆ ೩ಲಕ್ಷ ರೂ.ದವರೆಗೆ ಆಧಾರರಹಿತ ಸಾಲ, ೧೫ ಸಾವಿರ ರೂ.ಗಳ ಟೂಲ್ ಕಿಟ್, ಕೌಶಲ್ಯಾಭಿವೃದ್ದಿ ತರಬೇತಿ ಮತ್ತು ದೈನಂದಿನ ೫೦೦ ರೂ. ಸಂಭಾವನೆ ಹಾಗೂ ಸಂಪೂರ್ಣ ತಯಾರಾದ ಕ್ವಾಲಿಟಿ ಸರ್ಟಿಫಿಕೇಶನ್, ಬ್ರಾಂಡಿಂಗ್, ಮತ್ತು ಜಾಹೀರಾತು ಮಾದರಿಯಲ್ಲಿ ಮಾರ್ಕೆಟಿಂಗ್ ನೆರವು ನೀಡಲಾಗುವುದು.ಕೈ ಮತ್ತು ಉಪಕರಣಗಳೊಂದಿಗೆ ಕೆಲಸ ಮಾಡುವ ಸಾಂಪ್ರದಾಯಿಕ ಬಡಿಗತನ ವೃತ್ತ, ದೋಣಿ ತಯಾರಿಸುವುದು, ಶಸ್ತ್ರ ತಯಾರಕರು, ಕಮ್ಮಾರ ವೃತ್ತ, ಸುತ್ತಿಗೆ ಮತ್ತು ಉಪಕರಣ ತಯಾರಿಕೆ, ಬೀಗ ತಯಾರಕರು, ಪತ್ತಾರಿಕೆ ವೃತ್ತ, ಕುಂಬಾರ ವೃತ್ತ, ಮೂರ್ತಿ ಮತ್ತು ಕಲ್ಲಿನ ಕೆತ್ತನೆ, ಚಮ್ಮಾರ ವೃತ್ತಿ, ಕಲ್ಲು ಕುಟಿಕ, ಬುಟ್ಟಿ-ಚಾಪೆ-ಪೊರಕೆ ತಯಾರಕರು, ಗೊಂಬೆ ಮತ್ತು ಆಟಿಕೆ, ಕ್ಷೌರಿಕ ವೃತ್ತಿ, ಹೂ ಮಾಲೆ ತಯಾರಿಕೆ, ಅಗಸರು, ದೋಭಿ, ಶಿಂಪಿಗ, ಟೇಲರ್, ಮೀನು ಬಲೆ ತಯಾರಿಕೆಯಲ್ಲಿ ತೊಡಗಿಕೊಂಡಿರುವವರು ಈ ಯೋಜನೆಯಡಿ ಅರ್ಜಿ ಸಲ್ಲಿಸಬಹುದಾಗಿದ್ದು, ಈ ಕುರಿತಂತೆ…

Read More