Subscribe to Updates
Get the latest creative news from FooBar about art, design and business.
Author: editor.udayarashmi@gmail.com
ದೇವರಹಿಪ್ಪರಗಿ: ಕಾಲುವೆಗೆ ಕಾಲು ಜಾರಿ ಬಿದ್ದು ರೈತನೊಬ್ಬ ಮೃತಪಟ್ಟ ಘಟನೆ ಕಡಕೋಳ ಗ್ರಾಮದ ಬಳಿ ಜರುಗಿದೆ.ತಾಲ್ಲೂಕಿನ ಕಡಕೋಳ ಗ್ರಾಮದ ರೈತ ರೇವಣಸಿದ್ಧ ಖೈನೂರ(೩೦) ಕಾಲು ಜಾರಿ ಕಾಲುವೆಗೆ ಬಿದ್ದ ರೈತನಾಗಿದ್ದಾನೆ. ಗುರುವಾರ ಸಾಯಂಕಾಲ ಜಮೀನಿಗೆ ನೀರು ಹರಿಸಿ ಮೋಟಾರು ಬಂದ ಮಾಡಲು ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಗ್ರಾಮಸ್ಥರು ಹಾಗೂ ಪೊಲೀಸರು ಭೇಟಿ ನೀಡಿ ಶೋಧ ಕಾರ್ಯ ಆರಂಭಿಸಿದ ನಂತರ ಬಿದ್ದ ಸ್ಥಳದಿಂದ ಸ್ವಲ್ಪ ದೂರದಲ್ಲಿಯೇ ಶುಕ್ರವಾರ ಬೆಳಿಗ್ಗೆ ಮೃತದೇಹ ದೊರೆತಿದೆ. ಕಲಕೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.
ಮುದ್ದೇಬಿಹಾಳ: ತಾಲೂಕಿನ ಅಗಸಬಾಳ ಗ್ರಾಮದ ಕೆರೆ ಬತ್ತಿ ಈ ಭಾಗದ ಜನ ಜಾನುವಾರು ಸಾಕಷ್ಟು ಹೈರಾಣಾಗಿದ್ದಾರೆ. ಕೆರೆ ತುಂಬುವ ಯೋಜನೆಯಡಿ ಅಗಸಬಾಳ ಗ್ರಾಮದ ಕೆರೆ ಕೂಡ ಇದ್ದು ಕೆರೆ ತುಂಬಲು ಅಧಿಕಾರಿಗಳು ಕಾಲುವೆ ಕಾಮಗಾರಿಯ ಅಪೂರ್ಣ ನೆಪ ಹೇಳುತ್ತಿದ್ದಾರೆ. ಅಪೂರ್ಣವಾದ ಕಾಲುವೆ ಕಾಮಗಾರಿಯನ್ನು ಪೂರ್ಣಗೊಳಿಸಿ ಕೂಡಲೇ ಕೆರೆ ತುಂಬಲು ಅಧಿಕಾರಿಗಳು ಮುಂದಾಗಬೇಕು. ಇಲ್ಲವಾದಲ್ಲಿ ಸಾವಿರಕ್ಕೂ ಹೆಚ್ಚು ರೈತರ ಪಡೆ ಅಗಸಬಾಳ ಗ್ರಾಮದಿಂದ ಆಲಮಟ್ಟಿಯ ಕೆಬಿಜೆಎನ್ಎಲ್ ಕಚೇರಿಯ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳುವ ಮೂಲಕ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಈ ಭಾಗದ ರೈತರಾದ ಎನ್.ಆರ್.ಮೊಕಾಶಿ, ರುದ್ರಗೌಡ ಪಾಟೀಲ, ದುಂಡಪ್ಪ ಅರಸುಣಗಿ, ಅರವಿಂದ ಕಾಶಿನಕುಂಟಿ, ಶರಣಯ್ಯ ಹಿರೇಮಠ, ಅಪ್ಪು ಕುಂಬಾರ, ಕಾಶಿನಾಥ ಅರಸುಣಗಿ, ಮಹಾಂತೇಶ ಕಾಶಿನಕುಂಟಿ, ರಾಮನಗೌಡ ಬಿರಾದಾರ, ಬಸನಗೌಡ ಪಾಟೀಲ, ಮುತ್ತಪ್ಪ ಉಪ್ಪಲದಿನ್ನಿ, ಸಿದ್ದಪ್ಪ ಚಲವಾದಿ, ಕಾಶಪ್ಪ ಮಾದರ, ಯಲ್ಲಾಲಿಂಗ ಉಪ್ಪಲದಿನ್ನಿ, ಸಿದ್ದು ಲೋಟಗೇರಿ, ನಿಂಗಬಸಪ್ಪ ಬಿಸನಾಳ ಸೇರಿದಂತೆ ಮತ್ತೀತರರು, ಅಗಸಬಾಳ ಗ್ರಾಮದ…
ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಶತಮಾನೋತ್ಸವ ಭವನ ಉದ್ಘಾಟನೆ | ಸಚಿವ ಶಿವಾನಂದ ಪಾಟೀಲ ಸುದ್ದಿಗೋಷ್ಠಿ ವಿಜಯಪುರ: ಅಖಿಲ ಭಾರತ ಸಹಕಾರ ಸಪ್ತಾಹದ ೭೦ನೇ ಸಮಾರೋಪ ಸಮಾರಂಭ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ಶತಮಾನೋತ್ಸವ ಭವನ ಉದ್ಘಾಟನೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮತ್ತು ಸಹಕಾರ ಸಚಿವರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ಸಮಾರಂಭದ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷರೂ ಆದ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.ನಗರದ ಕೇಂದ್ರ ಸಹಕಾರಿ ಬ್ಯಾಂಕ್ನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನವೆಂಬರ್ ೨೦ ರಂದು ನಡೆಯು ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲೆಯ ಡಿಸಿಸಿ ಸಂಘಗಳ ಸದಸ್ಯರು, ವಿವಿಧ ಸಹಕಾರಿ ಸಂಘಗಳ ಸಹಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೆ ವೈಯಕ್ತಿಕವಾಗಿ ಮನವಿ…
ಮುದ್ದೇಬಿಹಾಳ: ಪಟ್ಟಣದ ಹಳೆಯ ಕಾಯಿಪಲ್ಲೆ ಮಾರುಕಟ್ಟೆಯಲ್ಲಿರುವ ಖಾಸ್ಗತೇಶ್ವರ ಮಠದಲ್ಲಿ ನ.೧೮ ರಿಂದ ನ.೩೦ ರವರೆಗೆ ಕಾರ್ತಿಕ ಮಾಸದ ಪ್ರಯುಕ್ತ ಪ್ರತಿದಿನ ಸಂಜೆ ೬-೩೦ ರಿಂದ ೮-೩೦ ರವರೆಗೆ ಪ್ರವಚನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಸಾಧನಾ ಮಹಿಳಾ ಒಕ್ಕೂಟ, ಅಕ್ಕನ ಬಳಗ ಹಾಗೂ ಯಶಸ್ವಿನಿ ಸಾಮಾಜಿಕ ಮಹಿಳಾ ಸಂಘ ಕುಂಟೋಜಿ ಇವರ ಸಹಯೋಗದೊಂದಿಗೆ ಇಂಗಳೇಶ್ವರ ವಚನ ಶಿಲಾ ಮಂಟಪದ ಮ.ನಿ.ಪ್ರ ಚೆನ್ನಬಸವ ಮಹಾಸ್ವಾಮಿಗಳು ಪ್ರವಚನ ನಡೆಸಿಕೊಡುವರು. ಬಾಲ ಶಿವಯೋಗಿ ಸಿದ್ದಲಿಂಗದೇವರು ದಿವ್ಯ ಸಾನಿಧ್ಯ ವಹಿಸಲಿದ್ದು, ವೇ.ಮೂ ಸಂಗಯ್ಯ ವಿರಕ್ತಮಠ ಸ್ವಾಮಿಗಳು ಉದ್ಘಾಟಿಸಲಿದ್ದಾರೆ. ಮಠದ ಎಲ್ಲ ಸದ್ಭಕ್ತರು ಪ್ರತಿದಿನ ಪ್ರವಚನ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಡಬಲ್ ಡಿಜಿಟ್ ಸಹ ಕ್ರಾಸ್ ಮಾಡುವುದಿಲ್ಲ. ಒಂದಿಬ್ಬರು ಆಯ್ಕೆಯಾಗಬಹುದು ಅಷ್ಟೇ. ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಸಂಪೂರ್ಣ ಕಡಿಮೆಯಾಗಿದೆ ಎಂದು ಮಾಜಿ ಸಚಿವ ಬಿ. ಶ್ರೀರಾಮಲು ಭವಿಷ್ಯ ನುಡಿದರು.ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ವಿಜಯಪುರ ಕಾರ್ಯಕರ್ತರೊಡನೆ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಜನರಿಗೆ ಕಾಂಗ್ರೆಸ್ ಮೋಸದ ಬಗ್ಗೆ ಅರಿವಾಗಿದೆ ಎಂದರು.ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸುವ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಧೃಡಸಂಕಲ್ಪ ಮಾಡಬೇಕು, ಇದು ಕೇವಲ ಒಬ್ಬರಿಂದ ಆಗುವ ಕೆಲಸವಲ್ಲ, ಇದೊಂದು ಸಾಮೂಹಿಕ ಪ್ರಯತ್ನ, ಎಲ್ಲ ಕಾರ್ಯಕರ್ತರು ಹೊಸ ಹುಮ್ಮಸ್ಸಿನಿಂದ ದುಡಿಯಬೇಕು. ಕರ್ನಾಟಕ ರಾಜ್ಯದಿಂದ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡಿ ಕಳುಹಿಸುವ ಮೂಲಕ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಕರೆ ನೀಡಿದರು.ಪ್ರಸ್ತುತ ಸಂಸದರಾಗಿರುವ ರಮೇಶ ಜಿಗಜಿಣಗಿ ಅವರು ಸಹ ಹಿರಿಯ ರಾಜಕೀಯ ಧುರೀಣರು, ಲಕ್ಷಾಂತರ ಕಾರ್ಯಕರ್ತರ ಪ್ರೀತಿಯನ್ನು ಸಂಪಾದಿಸಿದ್ದಾರೆ…
ವಿಜಯಪುರ: ದರಬಾರ ಸಮೂಹ ಶಿಕ್ಷಣ ಸಂಸ್ಥೆಯ ವಿದ್ಯಾವರ್ಧಕ ಸಂಘದ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ 17-11-2023 ಮುಂಜಾನೆ/9,40 ಗಂಟೆಗೆ ವಿವಿಧ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ‘ಡಿ’ ಗ್ರುಪ್ ದ ನೌಕರರು ದೀಪಾವಳಿಯಂದು ಸಂಸ್ಥೆಯು ಹಬ್ಬದ ಪ್ರಯುಕ್ತ ಬೋನಸ್ ನೀಡಿದ ಕಾರಣ ಪ್ರೀತಿಯ ದ್ಯೋತಕವಾಗಿ ಅಭಿಮಾನದಿಂದ ಸಂಸ್ಥೆಯ ಅಧ್ಯಕ್ಷ ರಾಜೇಶ್ ‘ಡಿ’ ದರಬಾರ, ಉಪಾಧ್ಯಕ್ಷ ಕೆ.ಜಿ. ದೇಶಪಾಂಡೆ ಹಾಗೂ ಆಡಳಿತ ಮಂಡಳಿಯ ಹಿರಿಯ ಸದಸ್ಯ ಡಿ.ಸಿ. ದರಬಾರ ಅವರನ್ನು ಸಂಸ್ಥೆಯ ಸಮನ್ವಯ ಅಧಿಕಾರಿ ಡಾ. ವಿ.ಬಿ ಗ್ರಾಮ ಪುರೋಹಿತ ಹಾಗೂ ’ಡಿ’ ಗ್ರುಪ್ ನೌಕರರು ಸಂತಸದಿಂದ ಗೌರವಾನ್ವಿತರನ್ನು ಸನ್ಮಾನಿಸಿದರು.ಬನಸಿಲಾಲ ವಿಠ್ಠಲದಾಸ ದರಬಾರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಚ್ ಮಣ್ಣೂರ, ಡಿ.ಎನ್ ದರಬಾರ ಬಾಲಕಿಯರ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಡಿ.ವಿ. ಚೌಧರಿ, ಪಾಂಡುರಂಗ ಜಿ ರೊಟ್ಟಿ, ಅನಂತ ದೇಶಪಾಂಡೆ, ಮುಖ್ಯೋಪಾಧ್ಯಾಯ ರಮೇಶ್ ಕೋಟ್ಯಾಳ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ನಿಡಗುಂದಿ: ಕನ್ನಡ ಪುಸ್ತಕ ಪರಿಷತ್ತು ತನ್ನ ೨೫ನೆಯ ಬೆಳ್ಳಿ ಸಂಭ್ರಮ ಹಬ್ಬದ ನಿಮಿತ್ತವಾಗಿಐವರು ಸಾಧಕರಿಗೆ “ಬೆಳ್ಳಿ ಸಂಭ್ರಮ-೨೦೨೨”ರ ಗೌರವಕ್ಕೆ ಆಯ್ಕೆ ಮಾಡಿದೆ.ಬಾಗಲಕೋಟೆಯ ಸೋಮಲಿಂಗ ಗೆಣ್ಣೂರ (ಆಡಳಿತ), ಬೆಂಗಳೂರಿನ ಅಬೂಬಕರ ಮುಜಾವರ (ಸಂಕೀರ್ಣ), ವಿಜಯಪುರದ ಶರಣು ಸಬರದ (ಸಾಮಾಜಿಕ), ಬೀಳಗಿಯ ಬಾಳನಗೌಡ ಪಾಟೀಲ (ಜಾನಪದ) ಮತ್ತು ಆಲಮೇಲದ ಶ್ರೀಮತಿ ವಿಜಯಲಕ್ಷ್ಮಿ ರ. ಕತ್ತಿ (ಪ್ರಕಾಶನ) ಅವರನ್ನು ಆಯ್ಕೆ ಮಾಡಲಾಗಿದೆ.ಗೌರವವು ಅವರ ಒಟ್ಟು ಸಾಂಸ್ಕೃತಿಕ ಚಟುವಟಿಕೆಗೆ ಆಗಿದ್ದು, ಸ್ಮರಣಿಕೆ, ಪ್ರಮಾಣ ಪತ್ರ, ಫಲಪುಷ್ಪಗಳನ್ನೊಳಗೊಂಡಿರುತ್ತದೆ.ನಿಡಗುಂದಿ ತಾಲ್ಲೂಕಿನ ಆಲಮಟ್ಟಿಯ ಹರ್ಡೇಕರ ಮಂಜಪ್ಪ ಸಭಾಭವನದಲ್ಲಿ ದಿನಾಂಕ ೨೩- ೧೧-೨೦೨೩ರಂದು ನಡೆವ ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರಾದ ನಾಡೋಜ, ಡಾ.ಮ.ನು ಬಳಿಗಾರ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ಬಿ.ಕೆ.ತುಳಸಿಮಾಲಾ ಪ್ರಶಸ್ತಿಗಳನ್ನು ಪ್ರದಾನ ಮಾಡುವರೆಂದು ಪರಿಷತ್ತಿನ ಸಂಚಾಲಕ ಮೋಹನ ಕಟ್ಟಿಮನಿ ಹಾಗೂ ಪ್ರದಾನ ಕಾರ್ಯದರ್ಶಿ ಶಂಕರ ಬೈಚಬಾಳ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ನಗರದಲ್ಲಿ ಡಿಸೆಂಬರ್ 24 ರಂದು ನಡೆಯಲಿರುವ ವೃಕ್ಷತ್ಥಾನ್ ಹೆರಿಟೇಜ್ ರನ್-2023ಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿದೇಶಗಳಿಂದಲೂ ಓಟಗಾರರು ಹೆಸರು ನೋಂದಾಯಿಸಿದ್ದಾರೆ. ಈ ಮೂಲಕ ಈ ಬಾರಿಯ ವೃಕ್ಷೋತ್ಥಾನ್ ಗೆ ಭರ್ಜರಿ ಬೆಂಬಲ ವ್ಯಕ್ತವಾಗುತ್ತಿದೆ.ಶ್ರಮದ ಫಲವಾಗಿ ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಬಗ್ಗೆ ಜಾಗೃತಿ ಹಾಗೂ ಸಂರಕ್ಷಣೆ ಸಂದೇಶವನ್ನು ಹೊಂದಿರುವ ಮತ್ತು ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಗಳಿಗೆ ಗೌರವ ಸಲ್ಲಿಸುವ ಸದುದ್ದೇಶದಿಂದ ಈ ಓಟ ಆಯೋಜಿಸಲಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಈ ಓಟದ ಆಯೋಜನೆಯ ರೂವಾರಿಯಾಗಿದ್ದು, ಈಗಾಗಲೇ ವಿಜಯಪುರ ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಮತ್ತು ನಾನಾ ಹೊರ ರಾಜ್ಯಗಳಿಂದಲೂ ಮ್ಯಾರಾಥಾನ್ ಓಟಗಾರರು ಹೆಸರು ನೋಂದಾಯಿಸುತ್ತಿದ್ದಾರೆ.ಆನಲೈನ್ ಮೂಲಕ ಹೆಸರು ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದ್ದು, ಈಗ ಅಮೇರಿಕದಲ್ಲಿ ನಾನಾ ಉದ್ಯಮಗಳಲ್ಲಿ ಉನ್ನತ ಸ್ಥಾನದಲ್ಲಿರುವ ಇಬ್ಬರು ಅಧಿಕಾರಿಗಳು ಈ ಹೆರಿಟೇಜ್ ರನ್ ನಲ್ಲಿ ಪಾಲ್ಗೋಳ್ಳಲು ಹೆಸರು ನೋಂದಾಯಿಸಿದ್ದಾರೆ.…
ಅಂತರವಲಯ ಮಟ್ಟದ ಪುರುಷ ಹಾಗೂ ಮಹಿಳೆಯರ ಕುಸ್ತಿ ಪಂದ್ಯಾವಳಿ ಉದ್ಘಾಟನೆ ಸಿಂದಗಿ: ಕುಸ್ತಿ ಒಂದು ಗ್ರಾಮೀಣ ಭಾಗದ ಕ್ರೀಡೆಯಾದರೂ ಅದು ಇಂದು ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಖ್ಯಾತಿಯನ್ನು ಪಡೆದುಕೊಂಡಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಅವರು ಪಟ್ಟಣದ ಮಾಂಗಲ್ಯ ಭವನದಲ್ಲಿ ಶುಕ್ರವಾರ ಸಿಎಂ ಮನಗೂಳಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ಹಾಗೂ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಹಮ್ಮಿಕೊಂಡಿರುವ ಏಕದಿನದ ಅಂತರವಲಯ ಮಟ್ಟದ ಪುರುಷ ಹಾಗೂ ಮಹಿಳೆಯರ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.ಸಿಂದಗಿ ನಗರ ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚು ಹೆಸರನ್ನು ಪಡೆದ ಕ್ಷೇತ್ರವಾಗಿದೆ. ವಿಶ್ವವಿದ್ಯಾಲಯ ಇಲ್ಲಿ ರಾಷ್ಟ್ರಮಟ್ಟದ ಯಾವುದೇ ಕ್ರೀಡೆಗಳನ್ನು ಹಮ್ಮಿಕೊಂಡರೂ ನಾನು ಅದಕ್ಕೆ ತನು-ಮನದಿಂದ ಸೇವೆ ಮಾಡಲು ಸಿದ್ಧನಾಗಿದ್ದೇನೆ ಎಂದರು.ಗ್ರಾಮೀಣ ಭಾಗದ ಕ್ರೀಡೆಗಳು ನಶಿಸಿ ಹೋಗಬಾರದು. ಪಾರಂಪರಿಕವಾಗಿ ಅವೆಲ್ಲ ಮುಂದುವರೆಸಿಕೊಂಡು ಹೋಗಬೇಕು. ಆ ನಿಟ್ಟಿನಲ್ಲಿ ಸಿಂದಗಿಯಲ್ಲಿ ಗರಡಿಮನೆ ನಿರ್ಮಾಣಕ್ಕಾಗಿ ಅಂದಾಜು 2 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡುವ ಕನಸನ್ನ ಹೊತ್ತು ಕೊಂಡಿದ್ದೇನೆ.…
Udayarashmi kannada daily newspaper
