Author: editor.udayarashmi@gmail.com

ವಿಶ್ವಪ್ರಕಾಶ ಮಲಗೊಂಡ ನಟಿಸಿ ನಿರ್ದೇಶಿಸಿರುವ ಕನ್ನಡ ಚಿತ್ರ ವಿಜಯಪುರ: ಈಗಾಗಲೇ ತನ್ನ ಬಹುತೇಕ ಕೆಲಸಗಳನ್ನು ಪೂರ್ಣಗೊಳಿಸಿ ತೆರೆಗೆ ಬರಲು ತಯಾರಾಗುತ್ತಿರುವ “ತುಷಾರ್” ಸಿನಿಮಾದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ‘ನಾ ನಿನ್ನ ಕಾಯೋ ಕಾವಲುಗಾರ’ ಎಂಬ ಹಾಡಿಗೆ ಪವನಕುಮಾರ ಬೂದಿಹಾಳ ಸಾಹಿತ್ಯ ಬರೆದಿದ್ದು, ಮಂಜು ಕವಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಹೊಸ ಪ್ರತಿಭೆ ಆರ್ ಜೆ ನವೀನ್ ಧ್ವನಿಯಾಗಿದ್ದಾರೆ.ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರತಂಡ ಈ ಹಾಡನ್ನು Charvi Music YouTube Channel ನಲ್ಲಿ ಬಿಡುಗಡೆ ಮಾಡಿದೆ.ಇದೇ ವೇಳೆ ಮಾತನಾಡಿದ ತುಷಾರ್ ಚಿತ್ರದ ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ‘ಈಗಾಗಲೇ ತುಷಾರ್ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಬಿರುಸಿನಿಂದ ಸಾಗಿದೆ.ತುಂಬಾ ಕನಸ್ಸಿಟ್ಟುಕೊಂಡು ಮಾಡಿರುವ ಈ ಸಿನಿಮಾ ದೀಪಾವಳಿ ಹಬ್ಬದ ಹಿನ್ನೆಲೆ ಈ ಹಾಡು ಬಿಡುಗಡೆ ಮಾಡಿದ್ದೆವೆ. ಈ ಹಾಡಿನ ಚಿತ್ರೀಕರಣ ಉತ್ತರ ಕರ್ನಾಟಕ ಹಾಗೂ ಬೆಂಗಳೂರಿನ ಸುತ್ತಮುತ್ತ ನಡೆದಿದೆ ಎಂದರು.ತುಷಾರ್ ಸಿನಿಮಾಕ್ಕೆ ವಿಶ್ವಪ್ರಕಾಶ ಮಲಗೊಂಡ ನಟನೆಯ ಜೊತೆಗೆ…

Read More

ವಿಜಯೇಂದ್ರ ನೇಮಕಕ್ಕೆ ಅಸಮಾಧಾನ | ಹೈಕಮಾಂಡ್‌ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ನಿರ್ಧಾರ | ಶೀಘ್ರವೇ ಬೆಂಬಲಿಗರ ಸಭೆ ಬೆಂಗಳೂರು: ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರನ್ನ ಬಿಜೆಪಿ ಹೈಕಮಾಂಡ್‌ ನೇಮಕ ಮಾಡಿದ್ದು, ಬಿಜೆಪಿ ಹಿರಿಯ ನಾಯಕ ವಿ ಸೋಮಣ್ಣ ಅವರ ಅಸಮಾಧಾನಕ್ಕೆ ಕಾರಣವಾಗಿದ್ದು, ಪಕ್ಷ ಬಿಡಲು ವಿ ಸೋಮಣ್ಣ ಮುಂದಾಗಿದ್ದಾರೆ.ಹೌದು, ಬಿಜೆಪಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿಜೆಪಿ ನಾಯಕ ವಿ.ಸೋಮಣ್ಣ ಅವರು ಸದ್ಯವೇ ಗೋವಿಂದರಾಜನಗರ ಕ್ಷೇತ್ರದ ತಮ್ಮ ಬೆಂಬಲಿಗರ ಸಭೆ ಕರೆದು ಮುಂದಿನ ನಡೆಯನ್ನು ತೀರ್ಮಾನಿಸಲಿದ್ದಾರೆ ಎಂದು ಹೇಳಲಾಗಿದೆ.ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡ ವಿ ಸೋಮಣ್ಣ ಅವರು, ನಮ್ಮ ಪಕ್ಷದವರೇ ನನ್ನ ಸೋಲಿಸಲು ಕೆಲಸ ಮಾಡಿದ್ದಾರೆ ಎಂದು ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ರು, ಇದೀಗ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಿರುವುದು ಇನ್ನಷ್ಟು ಬೇಸರಕ್ಕೆ ಕಾರಣವಾಗಿದೆ. ಅಲ್ಲದೇ ಬಿಜೆಪಿ ಕೆಲ ನಾಯಕರೊಂದಿಗೆ ಮುನಿಸಿಕೊಂಡಿರುವ ವಿ ಸೋಮಣ್ಣ ಬಿಜೆಪಿ…

Read More

ವಿಜಯಪುರ: ೧೧೦ ಕೆವಿ ದೇವರಹಿಪ್ಪರಗಿ-ಸಿಂದಗಿ ವಿದ್ಯುತ್ ಪ್ರಸರಣ ಜೋಡಿ ಮಾರ್ಗದಲ್ಲಿ ವಾಹಕಗಳ ಮತ್ತು ಗೋಪುರಗಳ ಬದಲಾವಣೆ ಕಾಮಗಾರಿ ಕೈಗೊಂಡಿರುವುದರಿAದ ಈ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ೩೩ ಕೆವಿ ಗೋಲಗೇರಿ ಹಾಗೂ ೩೩ ಕೆವಿ ಕಲಕೇರಿ ಮತ್ತು ೧೧ ಕೆವಿ ಬ್ಯಾಕೋಡ ಹಾಗೂ ೧೧ ಕೆವಿ ಬಂದಾಳ ಐಪಿ ಮಾರ್ಗಗಳಲ್ಲಿ ನವೆಂಬರ್ ೧೮ರ ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿಜಯಪುರ: ಅತೀಸಾರ ಭೇದಿಯಿಂದ ಉಂಟಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಲು ೫ ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಅತೀಸಾರ ಭೇದಿಗೆ ಒಳಗಾಗಬಾರದು ಎಂಬ ಉದ್ದೇಶದಿಂದ ತೀವ್ರಗೊಂಡ ಅತೀಸಾರ ಬೇಧಿ ನಿಯಂತ್ರಣ ಪಾಕ್ಷಿಕ (ಐಡಿಸಿಎಫ್) ಕಾರ್ಯಕ್ರಮ ಅನುಷ್ಟಾನ ಮಾಡಲಾಗುತ್ತಿದೆ. ಇಲಾಖೆಯ ವೈದ್ಯಾಧಿಕಾರಿಗಳು ನರ್ಸಿಂಗ್ ಅಧಿಕಾರಿಗಳು ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ನೀಡಿ, ಅತೀಸಾರ ಬೇಧಿಯಿಂದಾಗುವ ಸಾವಿನ ಪ್ರಮಾಣ ಶೂನ್ಯಕ್ಕೆ ತರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ತೀವ್ರತರ ಅತೀಸಾರ ನಿಯಂತ್ರಣ ಪಾಕ್ಷಿಕ, ರಾಷ್ಟ್ರೀಯ ನವಜಾತ ಶಿಶು ಸಪ್ತಾಹ ಹಾಗೂ ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ನ್ಯುಮೋನಿಯಾವನ್ನು ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಮತ್ತು ಕ್ರಿಯೆ ಕಾರ್ಯಕ್ರಮದ ಬಗ್ಗೆ ಆಶಾ ಮತ್ತು ಪಿ.ಹೆಚ್.ಸಿ.ಓ ಅವರು ಮನೆ ಮನೆಗೆ ತೆರಳಿ ನ್ಯೂಮೊನಿಯಾ…

Read More

ಚಡಚಣ: ಪುಸ್ತಕದ ಸ್ನೇಹ ಬೆಳೆಸುವುದರಿಂದ ಮೆದುಳಿನ ಬೆಳವಣಿಗೆ ವೇಗ ಪಡೆಯುವುದಷ್ಟೇ ಅಲ್ಲದೆ ಬುದ್ಧಿಮತ್ತೆಯೂ ಚುರುಕುಗೊಳ್ಳುತ್ತದೆ. ಯಾವುದೇ ದೃಶ್ಯ ಮಾಧ್ಯಮಗಳೂ ಪುಸ್ತಕಗಳು ನೀಡುವ ಜ್ಞಾನವನ್ನು ಕೊಡಲು ಮತ್ತು ಓದುಗನಲ್ಲಿ ಉಂಟು ಮಾಡುವ ಮನೋವಿಕಾಸವನ್ನು ಸರಿಗಟ್ಟಲು ಸಾಧ್ಯವೇ ಇಲ್ಲ. ಪ್ರಾಥಮಿಕ ಹಂತದ ಶಿಕ್ಷಣ ಓದಲು ಕಲಿಸುತ್ತದೆ, ಉನ್ನತ ಹಂತದ ಶಿಕ್ಷಣ ಕಲಿಯಲು ಬೇಕಾದ ಓದುವ ಪರಿಯನ್ನು ತಿಳಿಸುತ್ತದೆ ಎಂದು ನಿವರಗಿ ಗ್ರಾಪಂ ಪಿಡಿಓ ಎಸ್.ಎಚ್.ಶಿನಖೇಡರವರು ಹೇಳಿದರು.ತಾಲೂಕು ಪಂಚಾಯತ ವತಿಯಿಂದ ಮಂಗಳವಾರದಂದು ನಿವರಗಿ ಗ್ರಾಮಕ್ಕೆ ‘ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಸಾರ್ವಜನಿಕ ಗ್ರಂಥಾಲಯ’ವನ್ನು ಗ್ರಾಪಂ ಅಧ್ಯಕ್ಷರಾದ ಜಯಶ್ರೀ ಹುನ್ನೂರ ಹಾಗೂ ಉಪಾಧ್ಯಕ್ಷರು ತಮ್ಮಾರಾಯ ತೇಲಿಯವರುಗಳು ಉದ್ಘಾಟನೆಗೊಳಿಸಿದರು.ಈ ವೇಳೆಯಲ್ಲಿ ಮಾತನಾಡಿದ ಗ್ರಾಪಂ ಪಿಡಿಓ ಎಸ್.ಎಚ್.ಶಿನಖೇಡರವರು. ಮುಗಿದು ಹೋಗದ ಸಂಪತ್ತು ಎಂದರೆ ಅದು ಜ್ಞಾನ ಸಂಪತ್ತು. ಆ ಸಂಪತ್ತಿನ ಬೆಳವಣಿಗೆಗೆ ಪುಸ್ತಕ ಹವ್ಯಾಸವನ್ನು ಬೆಳಸಿಕೊಳ್ಳಬೇಕು, ಅದಕ್ಕಾಗಿ ನೂತನ ಗ್ರಂಥಾಲಯದ ಸದೋಪಯೋಗವನ್ನು ಪಡೆದುಕೊಂಡು ಜ್ಞಾನ ಸಂಪಾದನೆ ಮಾಡಿ ಅರ್ಥಪೂರ್ಣ ಬದುಕನ್ನು ನಿರ್ಮಿಸಿ ಎಂದು ಹೇಳಿದರು.ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷರಾದ ಪ್ರಕಾಶ…

Read More

ಮುದ್ದೇಬಿಹಾಳ: ತಾಲೂಕಿನ ಬಿದರಕುಂದಿ ಬಳಿಯ ತಿರುವಿನಲ್ಲಿ ಕೆಕೆಆರ್‌ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ.ಮೃತ ದುರ್ದೈವಿಯನ್ನು ಸಂಗಣ್ಣ. ಚಂದಪ್ಪ. ತುರಡಗಿ(೩೩) ಎಂದು ಗುರುತಿಸಲಾಗಿದೆ. ೯ ವರ್ಷದ ತಂಗಿಯ ಮಗಳೊಂದಿಗೆ ಎಚ್‌ಎಫ್ ಡಿಲಕ್ಸ್ ಬೈಕ್ ಮೂಲಕ ಮುದ್ದೇಬಿಹಾಳ ಪಟ್ಟಣಕ್ಕೆ ಬರುವಾಗ ಬಿದರಕುಂದಿ ಬಳಿಯ ತಿರುವಿನಲ್ಲಿ ವಿಜಯಪುರಕ್ಕೆ ತೆರಳುವ ವಿಜಯಪುರ-ಮುದ್ದೇಬಿಹಾಳ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಘಟನೆಯ ನಂತರ ದಾರಿಹೋಕ ವಾಹನ ಸವಾರರು ಉಪಚರಿಸಿ ಅಂಬುಲೆನ್ಸ್ ಗೆ ಕರೆ ಮಾಡಿ ತಾಲೂಕು ಸರ್ಕಾರಿ ಆಸ್ಪತ್ರಗೆ ರವಾನಿಸಿದ್ದಾರೆ. ದುರ್ಘಟನೆಯಲ್ಲಿ ಗಾಯಾಳುವಿಗೆ ಬಲಗಾಲು ನುಜ್ಜು ನುಜ್ಜಾಗಿದ್ದು ವಿಪರೀತ ರಕ್ತಸ್ರಾವವಾಗಿದ್ದರಿಂದ ಪ್ರಥಮ ಚಿಕಿತ್ಸೆ ಬಳಿಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ.ಜೊತೆಯಲ್ಲಿದ್ದ ಬಾಲಕಿಗೆ ತಲೆ ಒಡೆದು ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಬಸ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಕುಣಿಕೆಗೆ ಕೊರಳು ಕೊಡುವ ಮುನ್ನ ಕೊಂಚ ಯೋಚಿಸಿ ಜೀವ ಉಳಿಸಿ ಜಯ್ ನುಡಿ (ವ್ಯಕ್ತಿತ್ವ ವಿಕಸನ ಮಾಲೆ)ಜಯಶ್ರೀ ಜೆ ಅಬ್ಬಿಗೇರಿಆಂಗ್ಲ ಭಾಷಾ ಉಪನ್ಯಾಸಕರುಸ ಪ ಪೂ ಕಾಲೇಜ್ ಹಿರೇಬಾಗೇವಾಡಿ, ಜಿ:ಬೆಳಗಾವಿ ೯೪೪೯೨೩೪೧೪೨  ಒಬ್ಬ ವಿಜಯವಂತ ವ್ಯಕ್ತಿಗೂ ಮತ್ತು ಇತರರಿಗೂ ಇರುವ ವ್ಯತ್ಯಾಸವು ಶಕ್ತಿಯ ಕೊರತೆ ಆಗಿರದೆ ಮನೋ ನಿರ್ಧಾರದ ಕೊರತೆ ಆಗಿರುತ್ತದೆ. ಎನ್ನುವ ಅರ್ಥಗರ್ಭಿತ ಮಾತುಗಳು ವಿನ್ಸ್ ಲೋಂಬಾರ್ಡ್ ಹೇಳಿರುವಂತವು. ಪ್ರತಿಯೊಬ್ಬರಿಗೂ  ತಮ್ಮ ಬದುಕಿನ ಖಾಸಗಿ ವಿಷಯಗಳ ಬಗ್ಗೆ ತೀರ್ಮಾನ ತೆಗೆದುಕೊಳ್ಳವ ಸಂಪೂರ್ಣ ಹಕ್ಕಿರುತ್ತದೆ. ಹಾಗಂತ ಆನೆ ನಡದದ್ದೇ ದಾರಿ ಎಂಬಂತೆ ಕೆಲವು ನಿರ್ಧಾರಗಳನ್ನು ಅದರಲ್ಲೂ  ನಾವು ನಮ್ಮ ಜೀವನವನ್ನು ಕೊನೆಗಾಣಿಸಿಕೊಳ್ಳಬೇಕೆಂದು ತೆಗೆದುಕೊಳ್ಳುವ ನಿರ್ಧಾರವನ್ನು ಸುತಾರಾಂ ಒಪ್ಪಲಾಗುವದಿಲ್ಲ.ಮುಂಜಾನೆದ್ದು ಕಣ್ಮುಂದೆ ಪತ್ರಿಕೆ ಹಿಡಿದರೆ ಸಾಕು ಟಿವಿ ಆನ್ ಮಾಡಿದರೆ ಸಾಕು ಆತ್ಮಹತ್ಯೆಯ ಸುದ್ದಿಯ ಸರಮಾಲೆ ಕಣ್ಣು ಕಿವಿಗಳನ್ನು ಆವರಿಸಿಕೊಂಡು ಬಿಡುತ್ತವೆ. ಕಣ್ಣಗಲಿಸಿ ಕಿವಿ ಚೂಪು ಮಾಡಿ ಕಾರಣವೇನೆಂದು ತಿಳಿಯ ಹೋದರೆ ಬೆಚ್ಚಿ ಬೀಳುವ ಪ್ರಸಂಗ. ಎಂಥ ಕ್ಷುಲ್ಲಕ ಕಾರಣಗಳಿಗೆ ನೊಂದುಕೊಂಡು ಜೀವ ತೆತ್ತಿದ್ದಾರೆ.…

Read More

ದೇವರ ಹಿಪ್ಪರಗಿ:ಸತತ ೩೫ ವರ್ಷಗಳಿಂದ ಪಾದಯಾತ್ರೆಯ ಮೂಲಕ ಯಾತ್ರೆ ಕೈಗೊಂಡಿರುವ ಬಳ್ಳಾರಿ ಜಿಲ್ಲೆಯ ಹೆಚ್. ಓಬಳಾಪುರದ ಭಕ್ತಾಧಿಗಳು ಪಟ್ಟಣದ ಭಕ್ತರ ಊಟೋಪಚಾರದ ಸೇವೆಯ ನಂತರ ಪಂಢರಾಪುರಕ್ಕೆ ಪಾದಯಾತ್ರೆ ಬೆಳೆಸಿದರು.ಸೋಮವಾರ ಸಾಯಂಕಾಲ ಪಟ್ಟಣಕ್ಕೆ ಆಗಮಿಸಿದ ಬಳ್ಳಾರಿ, ಭದ್ರಾವತಿ, ಸೇರಿದಂತೆ ವಿವಿಧ ಪ್ರದೇಶಗಳ ಇನ್ನೂರಕ್ಕೂ ಹೆಚ್ಚು ಯಾತ್ರಾರ್ಥಿಗಳು ಪಟ್ಟಣದ ಶಾಲಾ ಆವರಣದಲ್ಲಿ ಭದ್ರಾವತಿ ಗೋಂದಿಮಠದ ಶ್ರೀಸ್ವಾಮಿನಾಮ ದೇವಾನಂದ ಭಾರತಿ ನೇತೃತ್ವದಲ್ಲಿ ಕೀರ್ತನೆ, ಭಜನೆಗಳನ್ನು ನೆರವೇರಿಸಿ ವಾಸ್ತವ್ಯ ಹೂಡಿದರು. ಈ ಸಂದರ್ಭದಲ್ಲಿ ಪಟ್ಟಣದ ಸದ್ಭಕ್ತರು ಯಾತ್ರಾರ್ಥಿಗಳಿಗೆ ಸಾಯಂಕಾಲದ ಫಳಾರ, ರಾತ್ರಿ ಊಟ, ನೀರು, ಬಾಳೆಹಣ್ಣು ಸೇರಿದಂತೆ ಲೈಟ್ ಸೇವೆ ಒದಗಿಸಿದರು.ಪ್ರತಿ ವರ್ಷದ ಪಾದಯಾತ್ರೆ ಸಮಯಕ್ಕೆ ಪಟ್ಟಣದ ಜನತೆ ನೀಡುತ್ತಿರುವ ಸಹಕಾರ ಕುರಿತು ಪಾದಯಾತ್ರೆ ಸಮಿತಿಯ ಉಪಾಧ್ಯಕ್ಷ ಮಹಾದೇವಪ್ಪ ಮಗಿಮಾವಿನಹಳ್ಳಿ ಮಾತನಾಡಿ, ನವೆಂಬರ್ ೧ರಿಂದ ಬಳ್ಳಾರಿ ಜಿಲ್ಲೆಯ ಹೆಚ್. ಓಬಳಾಪುರದಿಂದ ಆರಂಭಗೊಂಡ ಈ ಯಾತ್ರೆಯಲ್ಲಿ ೪೫ ಮಹಿಳೆಯರು ಸೇರಿ ನೂರಿಪ್ಪತ್ತಕ್ಕೂ ಹೆಚ್ಚು ಜನರಿದ್ದು, ಸತತವಾಗಿ ೨೦ ದಿನಗಳ ಕಾಲುನಡಿಗೆಯಲ್ಲಿ ಸಾಗಿ ನವೆಂಬರ್ ೨೦ ಸೋಮವಾರ ಕಾರ್ತಿಕ ಶುದ್ಧ…

Read More

ದೇವರಹಿಪ್ಪರಗಿ: ೧೨ನೇ ಶತಮಾನದ ಅಸಂಖ್ಯಾತ ಶರಣರಲ್ಲಿ ಚನ್ನಬಸವಣ್ಣನವರು ಸಾಮಾಜಿಕ ಬದಲಾವಣೆಯ ಹರಿಕಾರರಾಗಿ “ಚಿನ್ಮಯಜ್ಞಾನಿ’ ಎನಿಸಿದ್ದಾರೆ ಎಂದು ಶರಣಸಂಗಮ ಸೇವಾ ಸಮೀತಿ ತಾಲ್ಲೂಕು ಅಧ್ಯಕ್ಷ ಸಂಗಪ್ಪ ತಡವಲ್ ಹೇಳಿದರು.ಪಟ್ಟಣದ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಚನ್ನಬಸವಣ್ಣನವರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.ಅನುಭವ ಮಂಟಪದ ಎರಡನೆಯ ಶೂನ್ಯ ಪೀಠಾಧೀಶರಾಗಿದ್ದ ಚನ್ನಬಸವಣ್ಣ ಪ್ರತಿಯೊಂದು ವಚನಗಳಿಗೆ ಅಂತಿಮವಾಗಿ ಒಪ್ಪಿಗೆಯನ್ನು ಕೊಡುವ ಜವಾಬ್ದಾರಿ ನಿರ್ವಹಿಸುತ್ತಿದ್ದರು. ಅಂತೆಯೇ ತಮ್ಮ ೨೧ನೇ ವರ್ಷದಲ್ಲಿ ಖಡ್ಗ ಹಿಡಿದು ಕನ್ನಡ ಶರಣ ಸಾಹಿತ್ಯವನ್ನು ರಕ್ಷಣೆ ಮಾಡುವುದರ ಮೂಲಕ ಷಟಸ್ಥಲಜ್ಞಾನಿ ಎನಿಸಿದ್ದರು. ಇವರ ಜೀವಿತ ಕಾಲಾವಧಿ ತೀರಾ ಕಡಿಮೆ. ಬದುಕಿದ್ದು ಕೇವಲ ಇಪ್ಪತ್ತನಾಲ್ಕು ವರ್ಷಗಳು ಮಾತ್ರ. ಕೊನೆಗೆ ಉಳವಿಯಲ್ಲಿಯೇ ಲಿಂಗೈಕ್ಯರಾದರು ಎಂದು ಚನ್ನಬಸವಣ್ಣನವರ ಹಿರಿಮೆಯ ಕುರಿತು ಮಾಹಿತಿ ನೀಡಿದರು.ರಾಣಿ ಕುಂಬಾರ ಹಾಗೂ ಸಂಗಡಿಗರು ವಚನಪಠಣ ಮೂಲಕ ಪ್ರಾರ್ಥನೆ ಪ್ರಸ್ತುತಪಡಿಸಿದರು. ನಿಂಗು ಜಡಗೊಂಡ ಪ್ರಾಸ್ತಾವಿಕವಾಗಿ ಮಾತನಾಡಿ ಶರಣರ ವಚನಗಳನ್ನು ವಾಚಿಸಿದರು.ಚುಟುಕು ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಬಿ.ಸಿ.ಹಿರೇಮಠ, ವಚನ ಸಾಹಿತ್ಯ ಪರಿಷತ್ ತಾಲ್ಲೂಕು…

Read More

ಪೋಲಿಸ ಗ್ರಾಮ ವಾಸ್ತವ್ಯದಲ್ಲಿ ಎಸೈ ರಾಘವೇಂದ್ರ ಖೋತ ಅಭಿಮತ ಚಿಮ್ಮಡ: ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಪೋಲೀಸ ಇಲಾಖೆಯೊಂದಿಗೆ ಸಹಕರಿಸಬೇಕು, ಪ್ರತಿಯೊಬ್ಬ ಪ್ರಜೆಯೂ ಸಮವಸ್ತ್ರವಿಲ್ಲದ ಪೋಲಿಸ್ ಇದ್ದಂತೆ ಎಂದು ಬನಹಟ್ಟಿ ಠಾಣಾಧಿಕಾರಿ ರಾಘವೇಂದ್ರ ಖೋತ ಹೇಳಿದರು.ಗ್ರಾಮದ ಬಾಹುಸಾಹೇಬರ ಮಠ, ಜಾಮಿಯಾ ಮಸೀದಿ, ದುರ್ಗಾದೇವಿ ದೇವಸ್ಥಾನದ ಆವರಣ ಹಾಗೂ ಜನತಾ ಪ್ಲಾಟ್‌ನಲ್ಲಿ ಪೋಲಿಸ್ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಜನಸಂಪರ್ಕ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಗಾಂಧೀಜಿಯವರ ಆಶಯ ಪೋಲಿಸ್ ಇಲಾಖೆಯ ಧ್ಯೇಯ. ಸಮಾಜದಲ್ಲಿ ಶಾಂತಿ, ನೆಮ್ಮದಿ ತರಲು ಇಲಾಖೆ ಹಗಲಿರುಳು ಶೃಮಿಸುತಿದ್ದು ಇದಕ್ಕೆ ಸಾರ್ವಜನಿಕರ ಸಹಕಾರವೂ ಅಷ್ಟೆ ಅವಶ್ಯಕವಾಗಿದೆ ಎಂದು ಹೇಳಿದರು.ಇಲಾಖೆಯಿಂದ ಸಾರ್ವಜನಿಕರಿಗೆ ದೊರೆಯುವ ಹಲವಾರು ಸೌಲಭ್ಯ, ಹೊಸ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಹಾಗೂ ಗ್ರಾಮದಲ್ಲಿ ಕೈಗೊಳ್ಳಬೇಕಾಗಿರುವ ಮುನ್ನೆಚ್ಚರಿಕೆ ಕೃಮಗಳ ಕುರಿತು ಸಲಹೆ ನೀಡಿದರು.ಪೊಲಿಸ್ ಸಿಬ್ಬಂದಿ ಬಿ.ಐ ಹುನ್ನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಗ್ರಾ.ಪಂ. ಸದಸ್ಯ ಮನೋಜ ಹಟ್ಟಿ, ಪತ್ರಕರ್ತ ಇಲಾಹಿ ಜಮಖಂಡಿ ಮಾತನಾಡಿದರು.ಗ್ರಾ.ಪಂ. ಮಾಜಿ…

Read More