Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಡಿಸೆಂಬರ್ ೦೩ ರಂದು ಆಚರಿಸಲಾಗುವ ವಿಶ್ವ ವಿಕಲಚೇತನರ ದಿನಾಚರಣೆ ಹಿನ್ನೆಲೆಯಲ್ಲಿ ನವೆಂಬರ್ ೧೭ ರಂದು ಬೆಳಿಗ್ಗೆ ೧೦ ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.ಈ ಸಭೆಗೆ ಜಿಲ್ಲೆಯ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ವಿಕಲಚೇತನರು ಭಾಗವಹಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕನಕದಾಸ ಬಡಾವಣೆಯ ಜಿಲ್ಲಾ ಪಂಚಾಯತ್ ಅವರಣದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯನ್ನು ಹಾಗೂ ದೂರವಾಣಿ ಸಂಖ್ಯೆ : ೦೮೩೫೨-೭೯೬೦೬೦ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ರಾಜಶೇಖರ ದೈವಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಮಹಾರಾಷ್ಟ್ರದ ಪಂಢರಪುರದಲ್ಲಿ ದಿನಾಂಕ: ೧೯-೧೧-೨೦೨೩ ರಿಂದ ೨೫-೧೧-೨೦೨೩ರವರೆಗೆ ನಡೆಯುವ ಕಾರ್ತಿಕ ಏಕಾದಶಿ ಜಾತ್ರೆ ಅಂಗವಾಗಿ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುವ ದೃಷ್ಟಿಯಿಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಸಾರಿಗೆ ವ್ಯವ್ಯಸ್ಥೆ ಕಲ್ಪಿಸಲಾಗಿದೆ. ಜಾತ್ರೆಯ ಅಂಗವಾಗಿ ವಿಜಯಪುರ ವಿಭಾಗದ ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು.ಒಂದೇ ಗುಂಪಿನಿಂದ ಪ್ರಾಯಾಣಿಸುವ ಕನಿಷ್ಠ ೫೫ ಜನ ಪ್ರಯಾಣಿಕರು ಲಭ್ಯವಾದಲ್ಲಿ ಅವರ ಸ್ವಸ್ಥಳದಿಂದಲೇ ನೇರವಾಗಿ ಪಂಢರಪುರಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರಯಾಣಿಕರು ಸಾರಿಗೆ ಸೌಲಭ್ಯಕ್ಕಾಗಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಬಸ್ ನಿಲ್ದಾಣ ವಿಜಯಪುರ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊಬೈಲ್ ಸಂಖ್ಯೆ: ೭೭೬೦೯೯೨೨೫೮, ಘಟಕ ವ್ಯವಸ್ಥಾಪಕರು ವಿಜಯಪುರ-೧: ಮೊ: ೭೭೬೦೯೯೨೨೬೩, ವಿಜಯಪುರ-೨ ಮೊ: ೭೭೬೦೯೯೨೨೬೪, ವಿಜಯಪುರ-೩ ಮೊ: ೭೭೬೦೯೧೪೦೦೮, ಇಂಡಿ ಮೊ: ೭೭೬೦೯೯೨೨೬೫, ಸಿಂದಗಿ ಮೊ: ೭೭೬೦೯೯೨೨೬೬, ಮುದ್ದೇಬಿಹಾಳ ಮೊ: ೭೭೬೦೯೯೨೨೬೭, ತಾಳಿಕೋಟ ಮೊ:…
ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬಿಎಲ್.ಡಿ.ಇ. ಸಂಸ್ಥೆಯ ಎ.ವ್ಹಿ.ಎಸ್. ಆಯುರ್ವೇದ ಮಹಾವಿದ್ಯಾಲಯ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರ ಫೆಡರೇಶನ್, ನೆಹರು ಯುವ ಕೇಂದ್ರ ಹಾಗೂ ಎನ್.ಎಸ್.ಎಸ್. ಘಟಕ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ ೧೮ ರ ಬೆಳಿಗ್ಗೆ ೧೦ ಗಂಟೆಗೆ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವ್ಹಿಎಸ್ ಆಯುರ್ವೇದ ಮಹಾವಿದ್ಯಾಲಯದ ವಾಗ್ಭಟ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದಯುವಜನೋತ್ಸವದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ, ಸಂಸದರಾದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ…
ಬಸವನಬಾಗೇವಾಡಿ: ಕೋವಿಡ್ ಸಂದರ್ಭದಲ್ಲಿ ಆದ ಸಾವು ನೋವುಗಳು ಹಣವೊಂದಿದ್ದರೆ ಏನೆಲ್ಲಾ ಸಾಧಿಸಬಹುದು ಎಂಬ ಅಹಂ ದೂರು ಮಾಡಿದೆ. ಆರೋಗ್ಯದ ಮಹತ್ವ ಏನೆಂಬುದು ತಿಳಿಸಿಕೊಟ್ಟಿದ್ದು ಇಂದು ಕಾಲಕಾಲಕ್ಕೆ ತಪಾಸಣೆಗೆ ಒಳಗಾಗುವ ಮನಸ್ಥಿತಿ ಹೆಚ್ಚಿದೆ ಎಂದು ಜವಳಿ ಕಬ್ಬು ಅಭಿವೃದ್ಧಿ ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡ ಚಗನಿದೇವಿ ನೇಮಿಚಂದ ಅಗರವಾಲ ಅವರ ಸ್ಮರಣಾರ್ಥ ಲೋಕನಾಥ್ ನೇಮಿಚಂದ್ರ ಅಗರವಾಲ್ ಅವರ ಪರಿವಾರ ಹಾಗೂ ಆಯುಷ್ ಆಸ್ಪತ್ರೆ ವಿಜಯಪುರ ಮತ್ತು ರಾಷ್ಟ್ರೀಯ ಬಸವ ಸೈನ್ಯ ಸಂಘಟನೆಯ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ಇಂದು ಮನುಕುಲಕ್ಕೆ ಮುಖ್ಯವಾಗಿದೆ. ಕೋವಿಡ್ ಸಂದರ್ಭದಲ್ಲಿ ಹಲವಾರು ಜೀವಗಳನ್ನು ನಾವು ನೀವೆಲ್ಲರೂ ಕಳೆದುಕೊಂಡೆವು. ಈ ನಿಟ್ಟಿನಲ್ಲಿ ಇಂತಹ ಉಚಿತ ಆರೋಗ್ಯ ಶಿಬಿರಗಳನ್ನು ಏರ್ಪಡಿಸುವುದರ ಮುಖಾಂತರ ಬಡವರು ರೈತರು ಕೃಷಿ ಕಾರ್ಮಿಕರಿಗೆ ಅನುಕೂಲವಾಗುತ್ತದೆ. ಇಂತಹ ಶಿಬಿರದಲ್ಲಿ ಜನರು…
ಮುದ್ದೇಬಿಹಾಳ: ತಾಲೂಕಿನ ಇಣಚಗಲ್ ಗ್ರಾಮದ ನಾಗರಾಜ ಕನ್ನೊಳ್ಳಿ ಅವರನ್ನು ಅಖಿಲ ಕರ್ನಾಟಕ ನಾಯಕ ತಳವಾರ ಜನಾಂಗದ ಹಿತರಕ್ಷಣಾ ಸಮಿತಿಯ ತಾಲೂಕು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.ರಾಜ್ಯಾಧ್ಯಕ್ಷ ಅಮಿತ ಎ.ಕೆ ಹಾಗೂ ಪ್ರಧಾನ ಕಾರ್ಯದರ್ಶಿ ಶಂಕರ ಬಿ.ಜಿ ನೇಮಕ ಮಾಡಿ ಆದೇಶಿಸಿದ್ದು ಸಮಾಜದ ಹಿತದೃಷ್ಠಿಯಿಂದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಮತ್ತು ಸಮಾಜದ ಜಾಗೃತಿಗಾಗಿ ಈ ಆಯ್ಕೆ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ರಾಣಿ ಚನ್ನಮ್ಮ ವಿವಿ ಏಕ ವಲಯ ಅಂತರ ಕಾಲೇಜುಗಳ ಮಹಿಳೆಯರ ಕಬಡ್ಡಿ ಪಂದ್ಯಾವಳಿಗೆ ಚಾಲನೆ ದೇವರಹಿಪ್ಪರಗಿ: ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ನಿರಂತರ ಕ್ರೀಡಾಕೂಟಗಳ ಸಂಘಟನೆಗೆ ಸ್ಥಳೀಯರ ಸಹಕಾರವೇ ಮುಖ್ಯವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಅಶೋಕ ಹೆಗಡೆ ಹೇಳಿದರು.ಪಟ್ಟಣದ ಶಾಸಕರ ಸರ್ಕಾರಿ ಮಾದರಿ ಬಾಲಕರ ಪ್ರಾಥಮಿಕ ಶಾಲಾ ಆವರಣದಲ್ಲಿ ಗುರುವಾರ ಜರುಗಿದ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಏಕ ವಲಯ ಅಂತರ ಕಾಲೇಜುಗಳ ಮಹಿಳೆಯರ ಕಬಡ್ಡಿ ಪಂದ್ಯಾವಳಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕಾಲೇಜಿನ ದೈಹಿಕ ನಿರ್ದೇಶಕರ ಸತತ ಪರಿಶ್ರಮ ಹಾಗೂ ಸ್ಥಳೀಯರ ಸಹಕಾರದ ಕಾರಣದಿಂದ ಒಂದೇ ವರ್ಷದ ಅವಧಿಯಲ್ಲಿ ಅಂತರ ಕಾಲೇಜು ಕ್ರಿಕೆಟ್ ಪಂದ್ಯಾವಳಿ ಹಾಗೂ ಅಥ್ಲೇಟಿಕ್ ಕೂಟವನ್ನು ಯಶಸ್ವಿಯಾಗಿ ಹಮ್ಮಿಕೊಂಡು ಈಗ ಕಬಡ್ಡಿ ಪಂದ್ಯಾವಳಿಗೆ ಚಾಲನೆ ನೀಡಲಾಗುತ್ತಿದೆ ಎಂದರು.ಬಸವನ ಬಾಗೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಮ್.ಬಿ.ಹೊಸಮನಿ, ಬೊಳೆಗಾಂವ ಕಾಲೇಜಿನ ಪ್ರಾಂಶುಪಾಲ ಎಸ್.ಎ.ಪತಂಗೆ ಮಾತನಾಡಿದರು.ತಹಶೀಲ್ದಾರ ಪ್ರಕಾಶ ಸಿಂದಗಿ ಮೊಹರೆ ಹಣಮಂತ್ರಾಯ ವೃತ್ತದಿಂದ ಆರಂಭಗೊಂಡ ಪಥಸಂಚಲನಕ್ಕೆ ಚಾಲನೆ ನೀಡಿದರು.…
ಆ ಜೀವ ಬದುಕಿರಬೇಕಾಗಿತ್ತು, ಏಕೆಂದರೆ ಪತ್ರಿಕಾ ವರದಿಗಾರರಾಗಿ ತ್ರಿಶಂಕು ಸ್ಥಿತಿಗೆ ಸಿಲುಕಿದಂತಹ ಜೀವಗಳನ್ನು ಸಂತೈಸುವ ಹಾಗೂ ಬೆನ್ನೆಲುಬಾಗಿ ನಿಲ್ಲುತ್ತಿದ್ದಂತಹ ಮಾತೃಹೃದಯಿ ಅಕ್ಷರ ಮಾಂತ್ರಿಕ ದಿ.ರವಿ ಬೆಳಗೆರೆ ಎಂದರೆ ಅತಿಶಯೋಕ್ತಿ ಎನಿಸದು.ನಿಜ, ಆ ಜೀವವು ಕಡುಬಡುತನದಲ್ಲಿ ಹುಟ್ಟಿ ಅಸಂಖ್ಯಾತ ಸಂಕಷ್ಟಗಳನ್ನು ಎದುರಿಸಿ, ರಾಜ್ಯದ ರಾಜಧಾನಿಯಿಂದ ಹಾಯ್ ಬೆಂಗಳೂರ್ ಎನ್ನುವ ವಾರಪತ್ರಿಕೆಯ ಮೂಲಕ ಮಾಧ್ಯಮ ಲೋಕದ ಸಿಂಹಾಸನಾಧೀಶನಾಗಿ ಅದು ಕೂಡಾ ಭರ್ತಿ ಎರಡುವರೆ ದಶಕಗಳ ಕಾಲ ಆಳಿದ್ದು ಅದೊಂದು ತಪ್ಪಸ್ಸು ಎಂದರೆ ತಪ್ಪಾಗಲಾರದು. ಇಂತಹ ಪತ್ರಕರ್ತ ಈ ನಾಡಿನಲ್ಲಿ ಮತ್ತೋರ್ವ ಹುಟ್ಟಿಬರಲು ಅಸದಳವಾದದು.ನೋವು ಅನುಭವಿಸಿದ ಜೀವಕ್ಕೆ ನೋವಿನ ಬೇನೆ ಎನು ಎನ್ನುವುದು ಗೊತ್ತಾಗುತ್ತೆ. ಹಾಗಾಗಿಯೇ ಮೋಡದ ಮರೆಯಲ್ಲಿ ಅವಿತ ಪ್ರಖರವಾದ ಸೂರ್ಯನಂತೆ ನೊಂದ ಪತ್ರಕರ್ತರಿಗೆ ಬುದ್ಧಿ ಹೇಳುವ ಹಿರಿಯಣ್ಣನಾಗಿದ್ದರು ಬೆಳಗೆರೆ. “ಯಾಕೋ ಆ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದೆ ಈಗ ಏನು ಮಾಡ್ಲಕತ್ತಿ?. ಹೆಂಗದ ನಿನ್ನ ಕುಟುಂಬ?. ಎಲ್ಲರೂ ಆರಾಮ ಅದಿರೋ ಇಲ್ಲೋ?. ಮತ್ತ ಈ ಕಡೆ ಇವತ್ತು ನೆನಸಿ ಬಂದಿಯಲ್ಲೋ ಯಾಕ?. ಏನಾರೆ ಕೆಲಸ…
ವಿಜಯಪುರ: ಮಹಾರಾಷ್ಟ್ರದ ಪಂಢರಪುರ ಶ್ರೀ ವಿಠ್ಠಲ- ರುಕ್ಮಿಣಿ ದರ್ಶನಕ್ಕೆ ಹೊರಟಿರುವ ಬಾಗಲಕೋಟೆ ಜಿಲ್ಲೆಯ ಗುಳೆದಗುಡ್ಡದ ಕಾರ್ತಿಕ ಪಾದಯಾತ್ರೆಯ ದಿಂಡಿ ಉತ್ಸವದ ಯಾತ್ರಾರ್ಥಿಗಳ ತಂಡ ಸಚಿವ ಎಂ. ಬಿ. ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿತು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಪಂಢರಪುರ ಕರ್ನಾಟಕ ವಾಸ್ಕರ ಶಿವೂರಕರ ಸೇವಾ ಮಂಡಳಿಯವರು ತಂದಿದ್ದ ಪಲ್ಲಕ್ಕಿಯನ್ನು ಸಚಿವ ಎಂ. ಬಿ. ಪಾಟೀಲ ಅವರು ಹೆಗಲ ಮೇಲೆ ಹೊತ್ತುಕೊಂಡು ಪಲ್ಲಕ್ಕಿ ಸೇವೆ ಮಾಡಿದರು.ಈ ವೇಳೆ ಉಪಸ್ಥಿತರಿದ್ದ ಸಮಿತಿಯ ಮುಖ್ಯಸ್ಥ ಪುಂಡಲಿಕ ಮಹಾರಾಜರು ಸಚಿವರಿಗೆ ಇನ್ನೂ ಉನ್ನತ ಸ್ಥಾನ ಸಿಗಲಿ ಎಂದು ಶುಭ ಹಾರೈಸಿದರು.ಪಾದಯಾತ್ರೆಯಲ್ಲಿ ತೆರಳುತ್ತಿದ್ದ ವಾರಕರಿಗಳಿಗೆ ಸಚಿವರು ಶುಭ ಕೋರಿ ಬೀಳ್ಕೊಟ್ಟರು.ಈ ಸಂದರ್ಭದಲ್ಲಿ ಎ. ಎಸ್. ಪಾಟೀಲ(ಹೊನ್ನುಟಗಿ), ಎಸ್. ಎ. ಬಿರಾದಾರ(ಕನ್ನಾಳ), ಜಗದೀಶ ಪಾಟೀಲ, ಬಸವರಾಜ ಬಾಗೇವಾಡಿ, ಎಂ. ಬಿ. ಬಗಲಿ ಮುಂತಾದವರು ಉಪಸ್ಥಿತರಿದ್ದರು.
ಜೆಎಸ್ಎಸ್ ಆಸ್ಪತ್ರೆಯಲ್ಲಿ ಆರೋಗ್ಯ ದೀಪೋತ್ಸವ | ರೋಗಿಗಳಿಗೆ ಹಬ್ಬದ ವಾತಾವರಣ | ಶೈಲಜಾ ಪಾಟೀಲ ಅಭಿಮತ ವಿಜಯಪುರ: ಆಸ್ಪತ್ರೆ ಎಂದರೆ ಕೇವಲ ಆರೋಗ್ಯ ಸುಧಾರಣಾ ಕೇಂದ್ರಗಳಾಗುವುದಕ್ಕಿಂತ ಸ್ವಾಸ್ಯ ಸಮಾಜವನ್ನು ನಿರ್ಮಾಣ ಮಾಡುವ ಶಕ್ತಿ ಕೇಂದ್ರಗಳಾಗಬೇಕು. ಆರೋಗ್ಯದ ಜೊತೆಯಲ್ಲಿ ಸಂಸ್ಕಾರ, ಸಂಸ್ಕೃತಿಯನು ಉಳಿಸುವ ಕಾಯಕವನ್ನು ಮಾಡಬೇಕು ಎನ್ನುವುದಕ್ಕೆ ನಮ್ಮ ಜೆಎಸ್ಎಸ್ ಆಸ್ಪತ್ರೆ ಸಾಕ್ಷಿಯಾಗಿದೆ ಎಂದು ಶ್ರೀಮತಿ ಶೈಲಜಾ ಬಸನಗೌಡ ಪಾಟೀಲ್ ಯತ್ನಾಳ ಅವರು ಹೇಳಿದರು.ನಗರದ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಜನ್ಮ ದಿನೋತ್ಸವ ಹಾಗೂ ದೀಪಾವಳಿ ಅಂಗವಾಗಿ ಆಯೋಜಿಸಲಾಗಿದ್ದ ‘ಆರೋಗ್ಯ ದೀಪೋತ್ಸವ’ ಹಾಗೂ ಮುತೈದೆಯರಿಗೆ ಉಡಿ ತುಂಬುವ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು; ಇಂದು ನಮ್ಮ ದೇಶದ ಸಂಸ್ಕಾರ ಸಂಸ್ಕೃತಿ ಹಾಗೂ ಪರಂಪರೆಗಳನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಹಬ್ಬ ಹರಿದಿನಗಳ ಬಗ್ಗೆ ಮಕ್ಕಳಲ್ಲಿ ಜ್ಞಾನ ಮೂಡಿಸಿ ನಮ್ಮ ದೇಶದ ಬಗ್ಗೆ ಅಭಿಮಾನ ಉಂಟು ಮಾಡಬೇಕಾದ ಗುರುತರ ಜವಾಬ್ದಾರಿ ನಮ್ಮ ಹೆಗಲ ಮೇಲಿದೆ. ಈ…
ಸಿಂದಗಿ: ನಮ್ಮ ಮನಸ್ಸು ನಮ್ಮ ಹತೋಟಿಯಲ್ಲಿರಬೇಕಾದರೆ ಗುರುವಿನ ಮಾರ್ಗದರ್ಶನವಿರಬೇಕು ಎಂದು ಕನ್ನೋಳ್ಳಿ ಹಿರೇಮಠದ ಸಿದ್ದಲಿಂಗ ಶಿವಾಚಾರ್ಯರು ಹೇಳಿದರು.ಪಟ್ಟಣದ ಸಾರಂಗಮಠದಲ್ಲಿ ಮಂಗಳವಾರ ನಡೆದ ಪೂಜ್ಯಶ್ರೀ ಚನ್ನವೀರ ಸ್ವಾಮೀಜಿಯವರ ೧೩೦ನೆಯ ಜಯಂತೋತ್ಸವ ಹಾಗೂ ಶಿವಶರಣೆಯರ ಜೀವನ ಚರಿತಾಮೃತ ಪ್ರವಚನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗುರುವಿನ ಮಾರ್ಗದರ್ಶವಿದ್ದೆಡೆ ನಮ್ಮ ಮನಸ್ಸು ನಮ್ಮ ಮಾತು ಕೇಳುತ್ತದೆ. ನಮ್ಮ ಮನಸ್ಸು ನಾವು ಹೇಳಿದ ಹಾಗೆ ಕೇಳ್ತದೆ ಮತ್ತು ಸಂಸ್ಕಾರ ನೀಡುತ್ತದೆ ಇಲ್ಲ ಅಂದರೆ ಸಂಸ್ಕಾರ ನೀಡುವುದಿಲ್ಲ. ಗುರು ನಮ್ಮನ್ನು ಕಾಯುತ್ತಾನೆ ಆ ಗುರುವನ್ನು ನಾವೆಂದು ಮರೆಯಬಾರದು. ನಾವೆಷ್ಟು ಗುರವಿನ ಸ್ಮರಣೆ, ಗುರುವಿನ ಸೇವೆ ಮಾಡುತ್ತೇವೆ ಅಷ್ಟು ನಮಗೆ ದೊರಕುತ್ತಾನೆ ಎಂದರು.ಈ ವೇಳೆ ಭೀಮಾಶಂಕರ ಶ್ರೀಮಠದ ದತ್ತಪ್ಪಯ್ಯ ಮಹಾರಾಜರು, ಗುರುದೇವಾಶ್ರಮದ ಶಾಂತಗಂಗಾಧರ ಶ್ರೀಗಳು, ವಿರಕ್ತಮಠದ ಬಸವಪ್ರಭು ಶ್ರೀಗಳು ಮಾತನಾಡಿದರು.ಶಿವಶರಣೆ ತೋಂಗಿನ ಮಹಾದೇವಿಯ ವಚನಾಮೃತವನ್ನು ವಿಶ್ರಾಂತ ಪ್ರಾಧ್ಯಾಪಕ, ಪ್ರವಚನಕಾರ ಬಿ.ಎನ್. ಪಾಟೀಲ ಇಬ್ರಾಹಿಂಪುರ ಪ್ರವಚನವನ್ನು ನೀಡಿದರು.ಇದೇ ಸಂದರ್ಭದಲ್ಲಿ ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಆಶೀರ್ವಚನ ನೀಡಿದರು. ಡಾ.ಶರಣಬಸವ ಜೋಗುರ ಸ್ವಾಗತಿಸಿ ಪ್ರಾಸ್ತಾವಿಕವಾಗಿ…
