Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಕಲಕೇರಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅಡಿಗಲ್ಲು ಸಮಾರಂಭದಲ್ಲಿ ಶ್ರೀಗಳ ಅಭಿಮತ ಕಲಕೇರಿ: ಅಭಿಮಾನದಿಂದ ದಾರ್ಶನಿಕರ ಜಯಂತ್ಯೋತ್ಸವ ಆಚರಿಸುವಂತಾಗಬೇಕು, ಪ್ರತಿಮೆಗಳು ಕೇವಲ ಪ್ರತಿಷ್ಠೆಗಳಾಗದೇ ಪ್ರತಿಮೆಗಳು ಗ್ರಾಮದ ಅಭಿವ್ರದ್ದಿಗೆ ಪ್ರತೀಕವಾಗಬೇಕು ಹಾಗೂ ಯುವ ಜನಾಂಗಕ್ಕೆ ಸ್ಪೂರ್ತಿಯಾಗುವಂತಾಗಬೇಕು. ಈ ದಿಸೆಯಲ್ಲಿ ಭಾರತ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿ ಚುಕ್ಕೆ ರಾಣಿ ಚೆನ್ನಮ್ಮಳ ಪುತ್ತಳಿ ನಿರ್ಮಾಣ ಕಾರ್ಯಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನಿಯವಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.ಗ್ರಾಮದ ವಿದ್ಯಾಗಿರಿ ಲೇಔಟ್ನಲ್ಲಿ ಆಯೋಜಿಸಲಾಗಿದ್ದ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿ ಅಡಿಗಲ್ಲು ಸಮಾರಂಭದಲ್ಲಿ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ನಮ್ಮ ಮೀಸಲಾತಿ ಹೋರಾಟ ನಿರಂತರವಾಗಿರಲಿದ್ದು, ನಮ್ಮ ಪಾಲಿನ ಮೀಸಲಾತಿ ಪಡೆಯುವವರೆಗೂ ಹೋರಾಟ ನಿಲ್ಲದು, ಡಿ.೪ ರ ಒಳಗೆ ಸಭೆ ಕರೆದು ಸಮಸ್ಯೆ ಬಗೆಹರಿಸಲು ಸರಕಾರ ಮುಂದಾಗಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು,ಅಲ್ಲದೇ ಈ ಭಾಗದ ದೇವರಹಿಪ್ಪರಗಿ, ಸಿಂದಗಿ ಕ್ಷೇತ್ರದ ಶಾಸಕರು ಮೀಸಲಾತಿಗಾಗಿ ಅಧೀವೇಶನದಲ್ಲಿ ದ್ವನಿ ಎತ್ತಲಿ ಎಂದು ಸೂಚನೆ ನೀಡಿದರು.ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ…
8 ವರ್ಷಗಳಿಂದ ವಿದ್ಯುತ್ ಸಂಪರ್ಕವೇ ಇರದ ಬಡಾವಣೆಗೆ ಶಾಸಕ ಯತ್ನಾಳರಿಂದ ಮೋಕ್ಷ ವಿಜಯಪುರ: ವಿದ್ಯುತ್ ಸಂಪರ್ಕ ಇಲ್ಲದೆ, ಕತ್ತಲಲ್ಲೇ ಜೀವನ ಸಾಗಿಸುತ್ತಿರುವುದು ತಿಳಿದು, ಆ ಪ್ರದೇಶಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ಮೂಲಕ ನಗರ ಶಾಸಕರಾದ ಬಸನಗೌಡ ರಾ.ಪಾಟೀಲ ಅವರು ದೀಪಗಳ ಹಬ್ಬ ದೀಪಾವಳಿ ಸಂದರ್ಭದಲ್ಲಿ ಬೆಳಕು ಹರಡಿಸಿದ್ದಾರೆ.ಹೌದು ಅಥಣಿ ರಸ್ತೆಯ ನಮೋ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ಮನೆಗಳಿಂದ ಕೂದಲೆಳೆ ದೂರದಲ್ಲಿರುವ ಗೋಲ್ಡನ್ ಪಾರ್ಕಗೆ ಕಳೆದ 8 ವರ್ಷಗಳಿಂದ ವಿದ್ಯುತ್ ಸಂಪರ್ಕವೇ ಇರಲಿಲ್ಲ. ಅಲ್ಲಿನ ನಿವಾಸಿಗಳು ಕತ್ತಲಲ್ಲೇ ಜೀವನ ಸಾಗಿಸುತ್ತಿದ್ದರು. ಮಕ್ಕಳ ವಿದ್ಯಾಭ್ಯಾಸ, ಮೊಬೈಲ್ ಚಾರ್ಜಿಂಗ್ ಸೇರಿದಂತೆ ಎಲ್ಲ ಕೆಲಸ ಕಾರ್ಯಗಳಿಗೂ ತೊಂದರೆ ಆಗುತ್ತಿತ್ತು. ಇಲ್ಲಿ ನಿವೇಶನಗಳನ್ನು ಹೊಂದಿದ್ದ ಬಹುತೇಕರು ಮನೆ ನಿರ್ಮಿಸಿಕೊಳ್ಳಲು ಹಾಗೂ ಬೇರೆಯವರು ಇಲ್ಲಿ ನಿವೇಶನ ಖರೀದಿಗೆ ಹಿಂದೇಟು ಹಾಕುತ್ತಿದ್ದರು.ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಈ ಗಂಭೀರ ಸಮಸ್ಯೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಗಮನಕ್ಕೆ ಬಂದಿತ್ತು. ಆಗ ನೀಡಿದ ಭರವಸೆಯಂತೆ ಇಂದು ಶಾಸಕರ ಪುತ್ರರಾದ ರಾಮನಗೌಡ ಪಾಟೀಲ ಯತ್ನಾಳ…
ವಿಜಯಪುರ: ನಗರದ ಜವಳಿ ಉದ್ಯಮಿಯೊಬ್ಬರಿಗೆ ಆನಲೈನ್ ಮೂಲಕ ವಂಚಿಸಿದ್ದ ನೈಜಿರಿಯಾ ಮೂಲದ ಮೂರು ಜನರನ್ನು ಬಂಧಿಸುವಲ್ಲಿ ವಿಜಯಪುರ ಸಿಇಎನ್ ಪೊಲೀಸರು ಯಶಸ್ವಿಯಾಗಿದ್ದಾರೆ.ಕ್ರಿಪ್ಟೋ ಮೈನಿಂಗ್ ನಲ್ಲಿ ಹೂಡಿಕೆ ಮಾಡಿದರೆ ಹಾಕಿದ ಬಂಡವಾಳದ ಹಣದ ಜೊತೆಗೆ ಶೇ. 200 ರಷ್ಟು ಲಾಭಾಂಶ ಕೊಡುವುದಾಗಿ ಹೇಳಿ ಈ ಆರೋಪಿಗಳು ನಾನಾ ಸುಳ್ಳು ಸಬೂಬೂಗಳನ್ನು ಉದ್ಯಮಿಯಿಂದ ನಾನಾ ಹಂತಗಳಲ್ಲಿ ತಮ್ಮ ಬ್ಯಾಂಕ್ ಖಾತೆಗಳಿಗೆ ರೂ. 59 ಲಕ್ಷ 12 ಸಾವಿರದ 765 ಹಣವನ್ನು ಹಾಕಿಸಿಕೊಂಡಿದ್ದರು. ಅಲ್ಲದೇ, ಉದ್ಯಮಿಗೆ ಯಾವುದೇ ಲಾಭಾಂಶ ಕೊಡದೇ ಹಣವನ್ನೂ ಮರಳಿಸದೇ ಆನಲೈನ್ ಮೂಲಕ ವಂಚಿಸಿದ್ದರು.ಈ ಹಿನ್ನೆಲೆಯಲ್ಲಿ ಉದ್ಯಮಿ ವಿಜಯಪುರ ಸಿ ಇ ಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೊಡ್ಡ ಸವಾಲಾಗಿದ್ದ ಈ ಪ್ರಕರಣವನ್ನು ಕೈಗೆತ್ತಿಕೊಂಡ ಸಿ ಇ ಎನ್ ಪೊಲೀಸರು ಕಲಂ 66(ಸಿ), 66(ಡಿ), ಐಟಿ ಆ್ಯಕ್ಟ್- 2008 ಮತ್ತು 419, 420ರ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣವನ್ನು ಎಸ್ಪಿ ಋಷಿಕೇಶ ಸೋನಾವಣೆ ಅವರು ಎಎಸ್ಪಿ ಶಂಕರ ಮಾರಿಹಾಳ…
Udayarashmi kannada daily newspaper
ಮಂಡ್ಯ ಮ.ನಾ.ಉಡುಪ ಮಹಾತ್ಮರಿಗೊಬ್ಬ ಶಿಷ್ಯನಿದ್ದ. ಅವನ ಹೆಸರು ದುಷ್ಟ ಅಂತ. ಆ ಶಿಷ್ಯನಿಗೆ ತನ್ನ ಹೆಸರಿನ ಬಗ್ಗೆ ಅತೀವವಾದ ನೋವಿತ್ತು. ಕೆಟ್ಟ ಕೆಲಸ ಮಾಡದಿದ್ದರೂ ಲೋಕದ ದೃಷ್ಟಿಯಲ್ಲಿ ದುಷ್ಟನಾದೆನಲ್ಲ ಎಂಬ ಕೊರತೆ ಅವನನ್ನು ಕಾಡುತಿತ್ತು. ಒಂದು ದಿನ ಆತ ಗುರುಗಳ ಬಳಿ ಹೋದ. ತನ್ನ ಸಂಕಟವನ್ನು ತೋಡಿಕೊಂಡ. ಗುರುಗಳು ನಕ್ಕು ನುಡಿದರು. ಹೊರಗಿನ ಪ್ರಪಂಚವನ್ನು ಒಮ್ಮೆ ಸುತ್ತಿ ಬಾ. ಯಾರ್ಯಾರ ಹೆಸರು ಹೇಗಿದೆ ಎಂಬುದನ್ನು ತಿಳಿದುಕೊಂಡು ಬಾ ಎಂದರು.ಗುರುಗಳ ಆಜ್ಞೆಯಂತೆ ಶಿಷ್ಯನು ಲೋಕಸಂಚಾರಕ್ಕೆ ಹೊರಟ. ಮಾರ್ಗಮಧ್ಯೆ ಬಿಕ್ಷುಕನೊಬ್ಬ ಎದುರಾದ. ಅವನೋ ದಟ್ಟದರಿದ್ರ ಆದರೆ ಅವನ ಹೆಸರು ಮಾತ್ರ ಶ್ರೀಮಂತನೆಂದಾಗಿತ್ತು. ಮರುದಿನ ಅವನಿಗೆ ದಾರಿಯಲ್ಲಿ ಅಳುತ್ತಿದ್ದ ಯುವಕನೊಬ್ಬ ಎದುರಾದ. ಯಾಕಯ್ಯಾ ಅಳುತ್ತಿದ್ದೀಯಾ? ಎಂದು ಪ್ರಶಿಸಿದ ಆ ಶಿಷ್ಯ. ನನಗೆ ವ್ಯಾಪಾರದಲ್ಲಿ ಅತೀವ ನಷ್ಟವಾಯಿತು. ನನ್ನ ಮಗ ತನ್ನೆಲ್ಲಾ ಸಮಯವನ್ನು ಜೂಜಿನಲ್ಲೇ ವ್ಯಯ ಮಾಡುತ್ತಾನೆ. ನನ್ನ ಹೆಂಡತಿಯೂ ಸದಾ ಕಾಯಿಲೆಯಲ್ಲೇ ನರಳುತ್ತಿರುತ್ತಾಳೆ ಎಂದ ಆ ಯುವಕ.ಆ ಶಿಷ್ಯನೋ ಕುತೂಹಲದಿಂದ ನಿಮ್ಮ ಹೆಸರೇನು ಎಂದು ಪ್ರಶಿಸುತ್ತಾನೆ.…
ಮನೆಯಂಗಳದಲ್ಲಿ ಜಿ.ಕೆ.ಸತ್ಯ ಮಾತು | ಕೆಯುಡಬ್ಲ್ಯೂಜೆ ಗೆ ಬಂದಿದ್ದ ಅಂದಿನ ಪ್ರಧಾನಿ ನೆಹರು ಬೆಂಗಳೂರು: ಆಗಿನ ಪ್ರಧಾನಿ ಜವಹರಲಾಲ್ ನೆಹರು ಅವರು ಕೂಡ ಕೆಯುಡಬ್ಲ್ಯೂಜೆ ಗೆ ಬಂದಿದ್ದರು. ಕೆಯುಡಬ್ಲ್ಯೂಜೆ ಹೋರಾಟದ ಪಲವಾಗಿಯೇ ಅಂದು ಪತ್ರಿಕಾ ಅಕಾಡೆಮಿ ಸ್ಥಾಪನೆಯಾಯಿತು. ಭಾರತೀಯ ಪತ್ರಕರ್ತರ ಸಂಘಟನೆಯಲ್ಲಿ ಕೆಯುಡಬ್ಲ್ಯೂಜೆ ಪಾತ್ರ ಹಿರಿದು..ಹೀಗೆಂದವರು ಎಂಬತ್ತೊಂದು ವಸಂತ ತುಂಬಿರುವಹಿರಿಯ ಪತ್ರಕರ್ತ, ಕೆಯುಡಬ್ಲೂಜೆ ಮಾಜಿ ಅಧ್ಯಕ್ಷ ಜಿ.ಕೆ.ಸತ್ಯ ಅವರು.ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಗೌರವ ಸ್ವೀಕರಿಸಿ ಮಾತನಾಡಿದರು.ಪತ್ರಕರ್ತರ ಸಂಘಟನೆ ಮತ್ತು ಕಾರ್ಯಚಟುವಟಿಗಳಲ್ಲಿ ತನ್ನ ಜೀವಮಾನದ ಬಹುಪಾಲಿನ ಸಮಯ ಕಳೆದಿರುವೆ. ಆಗ 26 ಜಿಲ್ಲೆಗೂ ಪ್ರವಾಸ ಮಾಡಿ ಸಂಘಟನೆ ಮಾಡಿದ್ದೆವು ಜಿ.ಕೆ. ಸತ್ಯ ತಿಳಿಸಿದರು.ಕೆಯೂಡಬ್ಲ್ಯೂಜೆ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತ್ರತ್ವದಲ್ಲಿ ಕಳೆದ ವರ್ಷದಿಂದ ನಡೆಸಿಕೊಂಡು ಬರುತ್ತಿರುವ ಹಿರಿಯ ಪತ್ರಕರ್ತರನ್ನು ಗೌರವಿಸುವ ಮನೆಯಂಗಳದಲ್ಲಿ ಮನತುಂಬಿ ಕಾರ್ಯಕ್ರಮ ಅರ್ಥಪೂರ್ಣವಾಗಿದೆ. ಇದರಿಂದ ಎಷ್ಟೋ ಜನರ ಭಾವ ಬಂದ ಬೆಸೆದಂತಾಗುತ್ತದೆ ಎಂದರು.ರಾಜ್ಯ ಸಂಘದಲ್ಲಿ ಎರಡು ಅವಧಿಗೆ ಪ್ರಧಾನ ಕಾರ್ಯದರ್ಶಿ, ಮತ್ತು ಮೂರು…
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ವಿವೇಕಾನಂದ. ಎಚ್.ಕೆ. ಬೆಂಗಳೂರು ಜ್ಞಾನದ ಮರು ಪೂರಣ..ಜ್ಞಾನ – ಬುದ್ದಿ – ತಿಳಿವಳಿಕೆ..ಎಂಬ ಸಾಮಾನ್ಯ ಅರ್ಥದ ಅನುಭವ ಅಥವಾ ಅನುಭಾವ ಮುಗಿದು ಹೋಗುವ ವಸ್ತುಗಳ ಪಟ್ಟಿಯಲ್ಲಿ ಸೇರುತ್ತದೆ..ಸಾಮಾನ್ಯವಾಗಿ ಪ್ರಕೃತಿಯಲ್ಲಿ ಎರಡು ರೀತಿಯ ವಸ್ತುಗಳನ್ನು ಪಟ್ಟಿ ಮಾಡಲಾಗಿದೆ. ಮುಗಿದ ಹೋಗುವ ಮತ್ತು ಎಂದೂ ಮುಗಿಯದ ವಸ್ತುಗಳು ಎಂದು..ಜ್ಞಾನ ಮೊದಲ ಪಟ್ಟಿಯಲ್ಲಿ ಸೇರುತ್ತದೆ. ಆದರೆ ಅದರ ವಿಶೇಷತೆ ಎಂದರೆ ಅದಕ್ಕೆ ಎರಡನೇ ಪಟ್ಟಿಯಲ್ಲಿಯೂ ಸ್ಥಾನ ಕಲ್ಪಿಸಬಹುದು. ಅದು ವ್ಯಕ್ತಿಗಳ ಶ್ರಮ ಸಾಧನೆ ಮತ್ತು ಪ್ರಯತ್ನದ ಮೇಲೆ ಅವಲಂಬಿಸಿರುತ್ತದೆ..ಒಂದಷ್ಟು ಜನ ಜ್ಞಾನ ಎಂದರೆ ಹಣ ಅಧಿಕಾರ ಆಸ್ತಿ ಸಂಪಾದನೆ ಎಂದು ಭಾವಿಸಿರುತ್ತಾರೆ. ಅದರ ಆಧಾರದ ಮೇಲೆ ಜ್ಞಾನವನ್ನು ಅಳೆಯುತ್ತಾರೆ. ಎಷ್ಟು ಯಶಸ್ವಿಯಾಗುವರೋ ಅಷ್ಟು ಜ್ಞಾನಿಗಳು ಎಂಬ ಅರ್ಥದಲ್ಲಿ..ಇನ್ನೊಂದಿಷ್ಟು ಜನ ಅಕ್ಷರ ಕಲಿಕೆಯ ಮೂಲಕ ಅಂಕಗಳ ಆಧಾರದ ಮೇಲೆ ಪಡೆಯುವ ಉದ್ಯೋಗ ಸಂಬಳ ಮತ್ತು ಸ್ಥಾನಮಾನಗಳನ್ನು ಜ್ಞಾನದ ಬಲದಿಂದ ಪಡೆದದ್ದು ಎಂದು ಅರ್ಥೈಸುತ್ತಾರೆ..ಮತ್ತೆ ಕೆಲವರು ಜ್ಞಾನವೆಂಬುದು ಅರಿವಿನ ಕ್ರಮ. ಅದು ಒಂದು…
ವಿಜಯಪುರ: ಒನಕೆ ಓಬವ್ವ ಸ್ವಾಮಿನಿಷ್ಠೆ, ಸಮಯ ಸ್ಫೂರ್ತಿ ಮತ್ತು ತ್ಯಾಗದ ತ್ರಿವೇಣಿ ಸಂಗಮ. ಸಾಮಾನ್ಯ ಗೃಹಿಣಿಯೊಬ್ಬಳು ಅಸಾಮಾನ್ಯ ಸಾಹಸ ತೋರಿದ ರೀತಿ ಎಲ್ಲರಿಗೂ ಪ್ರೇರಕವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಒನಕೆ ಓಬವ್ವ ಜಯಂತಿ ಹಾಗೂ ಮೌಲಾನಾ ಅಬುಲ್ ಕಲಾಂ ಆಜಾದ್ ಅವರ ಜನ್ಮದಿನದ ನಿಮಿತ್ತ ರಾಷ್ಟ್ರೀಯ ಶಿಕ್ಷಣ ದಿನವನ್ನು ಉದ್ದೇಶಿಸಿ ಮಾತನಾಡಿದರು.ಓಬವ್ವ ಉತ್ತಮ ಸಂಸ್ಕೃತಿ, ಸಂಸ್ಕಾರ ಹೊಂದಿದ್ದು, ಅವಳ ಆಚಾರ-ವಿಚಾರ, ನಡೆ-ನುಡಿಗಳ ಪರಿಶುದ್ಧತೆ ಮತ್ತು ಕಾಯಕನಿಷ್ಠೆಯ ದೃಢಸಂಕಲ್ಪ ಇಂದಿನ ಮಹಿಳೆಯರಿಗೆ ಚೇತನಶಕ್ತಿಯಾಗಿದೆ ಎಂದು ಹೇಳಿದರು.ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಮಾತನಾಡಿ, ಅಜಾದ್ ಅವರು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಮುಖ್ಯ ಪಾತ್ರ ವಹಿಸಿ,ಖಿಲಾಫತ್ ಚಳವಳಿಯ ಮುಂದಾಳತ್ವ ವಹಿಸಿಕೊಂಡಿದ್ದರು.ಅವರು ಶಿಕ್ಷಣ ಸಚಿವರಾಗಿದ್ದ ಸಮಯದಲ್ಲಿ’ರಾಷ್ಟ್ರೀಯ ಶಿಕ್ಷಣ ನೀತಿ’ ಯನ್ನು ಜಾರಿಗೆ ತಂದಿದ್ದರು. ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು ಎಂದು ಹೇಳಿದರು.ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಂಸ್ಥೆಯ…
ಢವಳಗಿ: ಗ್ರಾಮದ ಬಸವ ಬಾಲ ಭಾರತಿ ಶಾಲೆಯಲ್ಲಿ ನ.11 ಶನಿವಾರದಂದು ವೀರವನಿತೆ ಒನಕೆ ಓಬವ್ವ ಹಾಗೂ ಡಾ.ಮೌಲಾನ ಅಬ್ದುಲ್ ಕಲಾಂ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಯಿತು.ಶಾಲೆಯ ಮುಖ್ಯ ಗುರುಗಳಾದ ರಮೇಶ ಮೂಲಿಮನಿ, ಹರಿನಾಥ ಎನ್.ಪರಶುರಾಮ ಮೂಲಿಮನಿ, ಜೆ ಎಸ್ ಪಾಟೀಲ, ಎಸ್ ಬಿ ಬಿರಾದಾರ, ಎಸ್ ಎಸ್ ಅವಟಿ,ಹಾಗೂ ಬಿ ಬಿ ಫಾತಿಮಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.
ಒನಕೆ ಓಬವ್ವ ಜಯಂತಿ ಆಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅಭಿಮತ ವಿಜಯಪುರ: ಶತ್ರುಗಳಿಂದ ಚಿತ್ರದುರ್ಗ ಕೋಟೆ ಸಾಮ್ರಾಜ್ಯವನ್ನು ರಕ್ಷಿಸುವಲ್ಲಿ ಸಾಹಸಮಯ ಧೈರ್ಯ ತೋರಿದ ಹೆಮ್ಮೆಯ ಧೀರ ಮಹಿಳೆ ಒನಕೆ ಓಬವ್ವ ಅವರ ನಿಷ್ಠೆ, ಧೈರ್ಯ, ಆತ್ಮವಿಶ್ವಾಸ, ತ್ಯಾಗಮಯವಾದ ಆದರ್ಶ ವಿಚಾರ ಇಂದಿನ ಯುವಪೀಳಿಗೆ ಅರಿತುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ವೀರವನಿತೆ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು.ಪತ್ನಿ ಧರ್ಮವನ್ನು ಅನುಸರಿಸಿದ ಓಬವ್ವ ಕೋಟೆಯನ್ನು ಸುತ್ತುವರಿದ ಶತ್ರುಗಳನ್ನು ಸಂಹರಿಸಿ,ಹಿಮ್ಮೆಟ್ಟಿಸಿದ ದಿಟ್ಟ ಮಹಿಳೆ. ಧೀರ ಮಹಿಳೆ ಓಬವ್ವ ಶೌರ್ಯದ ಸಾಧನೆ ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿದೆ ಎಂದು ಹೇಳಿದರು.ಡಾ. ವನಿತ ಎನ್. ತೊರವಿ ಅವರು ಉಪನ್ಯಾಸ ನೀಡಿ, ಶತ್ರು ಸೈನ್ಯವು ಚಿತ್ರದುರ್ಗದ ಕೋಟೆ ಮೇಲೆ ಹಠಾತ್ತಾಗಿ ಆಕ್ರಮಣ ಮಾಡಿದಾಗ ತನ್ನ ಒನಕೆಯನ್ನೇ ಅಸ್ತ್ರವಾಗಿಟ್ಟುಕೊಂಡು ಶತ್ರುಗಳನ್ನು ಎದುರಿಸಿ ಶೌರ್ಯ,…
