Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಹೆತ್ತವರ ಒಲವಿನ ಕುಡಿಯವಳುಪತಿಯಮುದ್ದಿನ ಮಡದಿಯವಳು ಎರಡುಮನೆಗಳ ನಂದಾದೀಪವಾಗಿಮುದ್ದು ಕಂದಮ್ಮಗಳ ಮಾತೆಯಾಗಿ ಸುಖದುಃಖಗಳಲಿ ಸದಾ ಸಮಚಿತ್ತಳುಸಹನೆಯಲಿ ಭೂಮಿಯಂತೆ ಇಹಳು ಸಭ್ಯ ಸಂಸ್ಕೃತಿಯ ಪ್ರತೀಕವಿವಳುಎಲ್ಲೆಡೆ ಛಾಪನ್ನು ಮೂಡಿಸುವವಳು ಪ್ರೀತಿ ತ್ಯಾಗ ಸ್ನೇಹಕ್ಕೆ ಸಮಾನಳಿವಳುನವ ಸಮಾಜದ ನಿರ್ಮಾತೃ ಇವಳು ಪ್ರಕೃತಿದೇವಿಯ ತದ್ರೂಪವೇ ಇವಳುಹೆಣ್ಣೆಂದರೆ ಆದಿಶಕ್ತಿಯ ಸ್ವರೂಪಳು..
ಸುಮಾರು 150 ವರ್ಷಗಳ ಹಿಂದಿನ ಮಾತಿದು. ಇಂದಿನ ಗದಗ ಜಿಲ್ಲೆಯ ರೋಣ ತಾಲೂಕಿನ ಹಾಲಕೇರಿಯ ಮಠದ ಆ ಗುರುಗಳು ಅತ್ಯಂತ ಮಹಿಮಾಾನ್ವಿತರು. ಅವರನ್ನು ಗಡ್ಡದ ಅಜ್ಜ ಎಂದೇ ಜನರು ಕರೆಯುತ್ತಿದ್ದರು. ಕುದುರೆಯ ಮೇಲೆ ಹಳ್ಳವನ್ನು ದಾಟಿದ ಅವರಿಗೆಬಸರಿಗಿಡದ ವೀರಪ್ಪ ಎಂಬ ಮಹಾನ್ ವ್ಯಕ್ತಿ ನಮ್ಮ ತಲೆಯ ಮೇಲಿನ ಟೋಪ್ಪಿಗೆಯನ್ನು ಕಾಣಿಕೆಯಾಗಿ ನೀಡಿ ಭವದ ನಿಜವಾದ ವಿರಕ್ತ ಸ್ವಾಮಿ ಎಂದು ಕರೆದಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಶಿಕ್ಷಣ ಪ್ರಸಾರಕ್ಕಾಗಿ ಕಾರ್ಯನಿರ್ವಹಿಸಿದ್ದ ಸ್ವಾಮಿಗಳು ಭಕ್ತರ ಮನದಲ್ಲಿ ವಿಶೇಷ ಸ್ಥಾನ ಗಳಿಸಿದ್ದರು.ಆ ಹಾಲಕೇರಿ ಊರಿನ ಗೌಡರ ಮನೆತನದ ಸೊಸೆ ಫಣಿಯಮ್ಮ ತಾನು ಮದುವೆಯಾಗಿ ಹಾಲಕೇರಿಗೆ ಬಂದಾಗಿನಿಂದಲೂ ಪ್ರತಿದಿನ ನಿತ್ಯವಿಧಿಗಳನ್ನು ಪೂರೈಸಿ ಸ್ನಾನ ಪೂಜೆಗಳನ್ನು ನೆರವೇರಿಸಿ ಮಠಕ್ಕೆ ಬಂದು ಗದ್ದುಗೆಗೆ ನಮಸ್ಕರಿಸಿ ನಂತರ ಗಡ್ಡದ ಅಜ್ಜ ಎಂದು ಕರೆಯಲ್ಪಡುವ ಗುರುಗಳ ಪಾದೋದಕ ಪ್ರಸಾದವನ್ನು ಸೇವಿಸಿಯೇ ಆಹಾರ ಸೇವಿಸುವ ಕ್ರಮವನ್ನು ಪಾಲಿಸುತ್ತಿದ್ದಳು. ದಶಕಗಳ ಕಾಲ ಇದು ಹೀಗೆಯೇ ನಡೆದಿತ್ತು. ಒಂದು ದಿನ ಎಂದಿನಂತೆ ಗದ್ದುಗೆಯ ದರ್ಶನ ಮಾಡಿ ನಮಸ್ಕರಿಸಿ ಅಜ್ಜನವರ…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಅವರು ತಮ್ಮನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಬಿಜೆಪಿ ನಾಯಕ ಬಿ.ಎಲ್ ಸಂತೋಷ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾದ ನಂತರ ಟ್ವೀಟ್ ಮಾಡಿರುವ ವಿಜಯೇಂದ್ರ ಅವರು, ಅಚಲ ವಿಶ್ವಾಸವಿಟ್ಟು ಪಕ್ಷ ಸಂಘಟನೆಯ ಬಹು ದೊಡ್ಡ ಜವಾಬ್ದಾರಿ ವಹಿಸಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಲ್ ಸಂತೋಷ್ ಅವರಿಗೆ ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸಿದ್ದಾರೆ.ಸಂಘದ ಹಾಗೂ ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಸರ್ವರ ನಿರೀಕ್ಷೆ ಹಾಗೂ ಜನರ ಅಪೇಕ್ಷೆಗೆ ಪೂರಕವಾಗಿ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಕಾರ್ಯಕರ್ತರೊಂದಿಗೆ ಕಾರ್ಯಕರ್ತನಾಗಿ ಅಹರ್ನಿಶಿ ದುಡಿಯುವ ಸಂಕಲ್ಪ ತೊಟ್ಟಿರುವೆ. ನಾಡಿನ…
ಬಿಎಸ್ವೈ ಪುತ್ರಗೊಲಿದ ಅದೃಷ್ಟ | ಲಿಂಗಾಯತ ವೋಟ್ ಬ್ಯಾಂಕಿನತ್ತ ಗಮನ | ಯಡಿಯೂರಪ್ಪ ಪ್ರಭಾವ ಮನಗಂಡ ಹೈಕಮಾಂಡ್ ಬೆಂಗಳೂರು: ಅಂತೂ ಇಂತೂ ಕೊನೆಗೂ ಬಿಜೆಪಿ ಕರ್ನಾಟಕಕ್ಕೆ ನೂತನ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.ಕೂಡಲೇ ಜಾರಿಗೆ ಬರುವಂತೆ ಬಿ.ವೈ. ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿಯ ನೂತನ ಸಾರಥಿಯನ್ನಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ನೇಮಿಸಿದ್ದಾರೆ. ಈ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಧಾನಸಭಾ ಚುನಾವಣೆ ಸೋಲಿನ ಹೊಣೆ ಹೊತ್ತು ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಖಾಲಿ ಬಿದ್ದಿತ್ತು. ಈ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಿ.ಟಿ. ರವಿ ಮತ್ತಿತರ ಹೆಸರುಗಳು ಕೇಳಿಬರುತಿತ್ತು.ಆದರೆ, ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರೂ ರಾಜ್ಯ ರಾಜಕೀಯದಲ್ಲಿ ಲಿಂಗಾಯತ ಪ್ರಬಲ ನಾಯಕ ಬಿಎಸ್ ಯಡಿಯೂರಪ್ಪ ಪ್ರಭಾವವನ್ನು…
ವಿಜಯಪುರ: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ಅವರು ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಶಿವಾಜಿ ವೃತ್ತದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ್ ಪಟ್ಟಣಶೆಟ್ಟಿ ಅವರ ಅಭಿಮಾನಿಗಳು ಸಂಭ್ರಮಾಚರಣೆ ಆಚರಿಸಿದರು.ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ಹಾಗೂ ಬಿಜೆಪಿ ಪರ ಜೈಕಾರ ಹಾಕಿದ ಅಭಿಮಾನಿಗಳು ಮತ್ತು ಕಾರ್ಯಕರ್ತರು ಪಟಾಕಿ ಹಚ್ಚಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ, ಮಾಜಿ ಕಾರ್ಪೊರೇಟರ್ ಅಪ್ಪು ಸಜ್ಜನ ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು
ವಿಜಯಪುರ: ನಾಗರಾಳೆ ಶಿಕ್ಷಣ ಸಂಸ್ಥೆ, ವಿಜಯಪುರ ವತಿಯಿಂದ ದೀಪಾವಳಿ ವಿಶೇಷ ಹಾಗೂ ಚಳುವಳಿಗಾಲದ ಸಮಯದಲ್ಲಿ ಉಪಯುಕ್ತ ಆಗುವಂತೆ ವಿಜಯಪುರ ನಗರದ ಬಾಗಲಕೋಟ ರಸ್ತೆಯಲ್ಲಿರುವ ಅನಾಥಾಶ್ರಮದಲ್ಲಿ ಎಲ್ಲ ಮಕ್ಕಳಿಗೂ ನಾಗರಾಳೆ ಶಿಕ್ಷಣ ಸಂಸ್ಥೆ, ಮತ್ತು ಸಿಹಿಯನ್ನು ಹಂಚಲಾಯಿತು.ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷ ಸಿದರಾಯ ಬಿ. ನಾಗರಾಳೆ ಇವರು ಮಾತನಾಡಿ, ನಮ್ಮ ಸಂಸ್ಥೆಯಿಂದ ಇಲ್ಲಿ ವಾಸವಾಗಿರುವ ಅನಾಥ ಮಕ್ಕಳಿಗೆ ಸ್ವೆಟರ್ ನೀಡಿದ್ದು ಅತೀವ ಸಂತಸವನ್ನುಂಟು ಮಾಡಿದೆ. ಈ ಎಲ್ಲ ಮಕ್ಕಳಿಗೆ ದೇವರು ಆರೋಗ್ಯವನ್ನು ನೀಡಲಿ, ದೀಪಾವಳಿಯು ಇವರ ಬಾಳಲ್ಲಿ ಹೊಸ ಹುಮ್ಮಸ್ಸನ್ನು ತರಲೆಂದು ಶುಭ ಹಾರೈಸಿದರು.ನಂತರ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ರಾಜ್ಯ ಕಾರ್ಮಿಕರ ಮತ್ತು ಬಡ ರೋಗಿಗಳ ಕಲ್ಯಾಣ ಪರಿಷತ್ (ಎನ್.ಜಿ.ಓ) ಅಧ್ಯಕ್ಷ ಅಶೋಕ ಜುಗತಿ ಮಾತನಾಡಿ, ಇಲ್ಲಿ ಆಶ್ರಯ ಪಡೆದಿರುವ ಎಲ್ಲ ಮಕ್ಕಳು ಅನಾಥ ಮಕ್ಕಳಲ್ಲ, ಇವರು ದೇಶದ ಆಸ್ತಿಗಳಾಗಿದ್ದಾರೆ. ಇಂತಹ ಅನಾಥ ಮಕ್ಕಳಿಗೆ ಸರಕಾರವು ಇವರ ಶಿಕ್ಷಣಕ್ಕಾಗಿ ಹೆಚ್ಚಿನ ಒತ್ತು ನೀಡಲೆಂದು ಕೋರಿದರು.ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಭೀಮರಾವ ದೇಸಾಯಿ, ಯಲ್ಲುಬಾಯಿ…
ಬ್ರಹ್ಮದೇವನಮಡು: ಸಿಂದಗಿ ತಾಲೂಕಿನ ಕಣ್ಣಗುಡ್ಡಿಹಾಳ ಗ್ರಾಮದ ಸಕಾ೯ರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಎಸ್ಡಿಎಂಸಿ ಅಧ್ಶಕ್ಷ ಮಾನಪ್ಪ ಪೂಜಾರಿ ಹಾಗೂ ಉಪಾಧ್ಶಕ್ಷ ನಾಗಮ್ಮ ಪತ್ತಾರ ಅವರಿಂದ ಶಾಸಕ ಅಶೋಕ ಮನಗೂಳಿ ಅವರನ್ನು ಸನ್ಮಾನಿಸಲಾಯಿತು.ಈ ವೇಳೆ ಕಾಂಗ್ರೆಸ್ ಯುವ ಮುಖಂಡ ಬಾಪುಗೌಡ ಎಂ.ಪಾಟೀಲ ಇದ್ದರು.
ಬಸವನಬಾಗೇವಾಡಿ: ಮಠಗಳು ಸಮಾಜಕ್ಕೆ ಸಂಸ್ಕಾರ ನೀಡುವಲ್ಲಿ ಬಹು ಪ್ರಮುಖ ಪಾತ್ರವಹಿಸುತ್ತವೆ. ಮಠಗಳಿಂದ ಆಧ್ಯಾತ್ಮಿಕ ಕಾರ್ಯ ನಿತ್ಯ ನಿರಂತರವಾಗಿ ನಡೆಯುವಂತಿರಬೇಕು. ಇಂದಿನ ಯುವಜನಾಂಗಕ್ಕೆ ಒಳ್ಳೆಯ ಸಂಸ್ಕಾರ ನೀಡುವದು ತುಂಬಾ ಮುಖ್ಯವಾಗಿದೆ ಎಂದು ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ಸಿದ್ರಾಮೇಶ್ವರ ಮಹಾರಾಜ ಮಠದ ಸಪ್ತಾಹದಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಸತ್ಸಂಗ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಠಗಳು ಸ್ವಾರ್ಥಕ್ಕಾಗಿ ದುಡಿಯುವಂತಾಗಬಾರದು. ಅವು ಸಮಾಜದ ಅಭಿವೃದ್ಧಿಗೆ ಸಂಸ್ಕಾರಯುತ ಶಿಕ್ಷಣ ಕೊಡುವಂತಾಗಬೇಕು. ಮಕ್ಕಳಿಗೆ ಮಠಗಳು ಸಂಸ್ಕಾರ ನೀಡಬೇಕು. ಮಠಗಳಿಂದ ಸಂಸ್ಕಾರ ಸಿಗದೇ ಹೋದರೆ ಮಠಗಳಿಗೂ, ಮನೆಗಳಿಗೂ ಇರುವ ಅಂತರ ಏನು ಎಂದರು.ಮಾನವ ಜನ್ಮದಲ್ಲಿ ಭಗವಂತನ ಸ್ಮರಣೆ ಮಾಡುವದು ತುಂಬಾ ಮುಖ್ಯ. ಮನುಷ್ಯನಲ್ಲಿ ಭಕ್ತಿ ಇರಬೇಕು. ಭಕ್ತಿಯನ್ನು ಹೃದಯದಲ್ಲಿ ಬಿತ್ತಬೇಕು. ಭಕ್ತಿಯು ನಿತ್ಯ ಜೀವನದಲ್ಲಿ ಉಪಾಸನೆ ಆಗಬೇಕು. ಭಕ್ತಿಯನ್ನು ಎಂದಿಗೂ ಕುಗ್ಗಿಸಬಾರದು. ಅದನ್ನು ಹಿಗ್ಗಿಸುವಂತಾಗಬೇಕು. ಜೀವನದಲ್ಲಿ ನಡೆಯುವ ಘಟನೆಗಳು ನಡದೇ ನಡೆಯುತ್ತವೆ. ಅವು ನಮ್ಮ ಮನಸ್ಸಿನ ಮೇಲೆ ಪರಿಣಾಮ ಬೀರದಂತೆ ನೋಡಿಕೊಳ್ಳಬೇಕು. ಮನಸ್ಸನ್ನು…
ಬಾಗಲಕೋಟ: ೨೦೨೩-೨೪ ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳು ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾಗಿರುವುದು ಅತ್ಯಂತ ಹೆಮ್ಮೆಯ ವಿಷಯ. ಆರೋಗ್ಯಕರ ದೇಹದಲ್ಲಿ ಆರೋಗ್ಯಕರ ಮನಸ್ಸು ಎಂದ ವಿವೇಕಾನಂದರ ಮಾತಿನಂತೆ ವಿದ್ಯಾರ್ಥಿ ಸಮೂಹ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಆರೋಗ್ಯವಂತರಾಗುವುದು ಅಗತ್ಯವಾಗಿದೆ. ಆದ್ದರಿಂದ ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು’ ಎಂದು ಬಿ.ವಿ.ವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಅವರು ಹೇಳಿದರು.೨೦೨೩-೨೪ ನೇ ಶೈಕ್ಷಣಿಕ ವರ್ಷದ ವಿವಿಧ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದ ಅವರು ‘ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ÷ಓದಿನ ಜೊತೆಗೆ ಕ್ರೀಡೆಗೂ ಮಹತ್ವ ನೀಡಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರಿಗೆ ಅನುಕೂಲವಾಗಲೆಂದು ಸುಸಜ್ಜಿತ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾ ಅಂಕಣಗಳನ್ನು ಹಾಗೂ ಸ್ವಿಮ್ಮಿಂಗ್ಪೂಲ್ ಸ್ಥಾಪಿಸಲಾಗಿದೆ. ವಿದ್ಯಾರ್ಥಿಗಳು ಈ ಸೌಲಭ್ಯದ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಹೇಳಿದರು.ವಿದ್ಯಾರ್ಥಿಗಳು ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ಕ್ರೀಡಾಕೂಟಗಳಿಗೆ ಮತ್ತು ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯಗಳ ಕ್ರೀಡಾಕೂಟಗಳಿಗೆ ಆರು ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿ ತಂದಿರುವರು.…
ಇಂಡಿ: ಈ ಗ್ರಾಮದಲ್ಲಿ ಇಬ್ಬರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದ್ರೂ ಗ್ರಾಮದಲ್ಲಿ ಬೀದಿಯ ದೀಪ ಉರಿಯುವದಿಲ್ಲ, ಕುಡಿಯುವ ನೀರಿನ ಸಮಸ್ಯೆ ಜೊತೆಗೆ ಸ್ವಚ್ಚತಾ ಸಮಸ್ಯೆ ಎದುರಿಸುತ್ತಿದ್ದೇವೆ. ಅದಲ್ಲದೇ ಮೂಲಭೂತ ಸೌಲಭ್ಯಗಳ ಕೊರತೆ ಜೊತೆಗೆ ಇತರೆ ಕಾಮಗಾರಿಯ ಅಭಿವೃದ್ಧಿ ಕೆಲಸ ಕಾರ್ಯಗಳು ಕುಂಠಿತಗೊಂಡಿವೆ. ಆದ್ದರಿಂದ ಗ್ರಾಮಸ್ಥರು ಅನೇಕ ಸಮಸ್ಯೆಗಳಿಂದ ಬಳಲುವಂತಾಗಿದೆ ಎಂದು ದೂರಿ ಕಂದಾಯ ಉಪವಿಭಾಗ ಅಧಿಕಾರಿ ಆಬೀದ್ ಗದ್ಯಾಳ ಅವರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು.ತಾಲ್ಲೂಕಿನ ಹಿರೇಮಸಳಿ ಗ್ರಾಮದಲ್ಲಿ ಇಬ್ಬರೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇದ್ದರೂ ಗ್ರಾಮದ ಜನರು ಕತ್ತಲಲ್ಲೆ ಇರುವಂತಾಗಿದೆ. ಈ ಗ್ರಾಮದಲ್ಲಿ ಶೋಭಾ ಹೊರಪೆಟೆ ಎಂಬುವರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಈಗ ಅವರನ್ನು ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ ಮಹಾದೇವ ಕೆರೂಟಗಿ ಎಂಬುವರನ್ನು ನಿಯೋಜನೆ ಮಾಡಿ ಹಿರೇಮಸಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಆದೇಶವಾಗಿದೆ. ಆದರೆ ಈ ಮೊದಲು ಕಾರ್ಯ ನಿರ್ವಹಿಸುತ್ತಿರುವ ಅಭಿವೃದ್ಧಿ ಅಧಿಕಾರಿ ಶೋಬಾ ಹೊರಪೇಟೆ ಅವರು ಕರ್ತವ್ಯಕ್ಕೂ ಹಾಜರಾಗದೇ, ಅಧಿಕಾರವನ್ನೂ…
