Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ನವೆಂಬರ್ ೧೫ ರಿಂದ ೨೮ರವರೆಗೆ ಯಶಸ್ವಿಯಾಗಿ ಹಮ್ಮಿಕೊಂಡು ಯಶಸ್ವಿಗೊಳಿಸಿ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚಿಸಿದರು.ಶುಕ್ರವಾರ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ `ಸಭೆಯ ಅಧ್ಯಕ್ಷತೆ ವಹಿಸಿ,ಪ್ರತಿ ತಿಂಗಳು ಮೊದಲನೇ ಶನಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಒಂದು ಗ್ರಾಮ ಆಯ್ಕೆ ಮಾಡಿಕೊಂಡು ಆರೋಗ್ಯ ಮೇಳವನ್ನು ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಏರ್ಪಡಿಸಿ ಆ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು.ಸರ್ಕಾರದ ಮಾರ್ಗಸೂಚಿಯ ಪ್ರಕಾರ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಬೇಕು ಎಂದು ಹೇಳಿದರು.ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳಲ್ಲಿ ಎಚ್.ಎನ್.ಎಸ್ ಸಮೀಕ್ಷಾ ಕಾರ್ಯಕ್ರಮದ ಕುರಿತು,ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದಡಿ ಸರಕಾರಿ ಶಾಲೆಗಳಲ್ಲಿ,ಅಂಗನವಾಡಿ,ಅನುದಾನಿತ ಶಾಲೆಯ ಶಾಲಾ ಮಕ್ಕಳ ವೈದ್ಯಕೀಯ ತಪಾಸಣೆ ಕೈಗೊಳ್ಳುವುದು. ಸಕ್ರೀಯ ಕ್ಷಯರೋಗ ಪತ್ತೆ ಮತ್ತು ಉಚಿತ ಚಿಕಿತ್ಸಾ ಆಂದೋಲನಾ ಕಾರ್ಯಕ್ರಮವನ್ನು ದಿನಾಂಕ: ೧೫-೧೧-೨೦೨೩ ರಿಂದ ೦೨-೧೨-೨೦೨೩ ರವರೆಗೆ ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ನಡೆಸುವಂತೆ ಸೂಚಿಸಿದರು.ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿಯನ್ನು ವೈದ್ಯಾಧಿಕಾರಿಗಳು…
ವಿಜಯಪುರ: ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸ್ವಸಹಾಯ ಸಂಘಗಳ ಮಹಿಳೆಯರು ತಮ್ಮ ಪರಿಶ್ರಮ ಹಾಗೂ ಸೃಜನಶೀಲತೆ ಮೂಲಕ ಸಿದ್ಧಪಡಿಸಿದ ಹಲ ವಿನ್ಯಾಸದ ಮಣ್ಣಿನ ದೀಪಗಳಿಗೆ ಮಾರುಕಟ್ಟೆ ಒದಗಿಸುವದಕ್ಕೆ ಹಾಗೂ ಸ್ವದೇಶೀ ಉತ್ಪನ್ನಗಳ ಖರೀದಿಸುವ ಮೂಲಕಮಹಿಳಾ ಸ್ವಾವಲಂಬಿ ಜೀವನ ರೂಪಿಸಿಕೊಳ್ಳಲು ಬೆಂಬಲಿಸಬೇಕು ಎಂದು ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶಕ ಸಿಬಿ ದೇವರಮನಿ ಅವರು ಹೇಳಿದರು.ಜಿಲ್ಲಾ ಪಂಚಾಯತಿ ವತಿಯಿಂದ ಜಿಲ್ಲಾ ಪಂಚಾಯತಿ ಕಾರ್ಯಲಯದ ಸಮೀಪದಲ್ಲಿ ಎರಡು ದಿನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ “ದೀಪ ಸಂಜೀವಿನಿ” ಇತ್ತಿಚಿಗೆ ಉದ್ಘಾಟಿಸಿ ಅವರು ಮಾತನಾಡಿದರು.ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳಿಗೆ ವಿಶೇಷ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವುದರೊಂದಿಗೆ ಆರ್ಥಿಕ ಬಲವರ್ಧನೆಗೆ ಸಹಕಾರ ನೀಡುವ ಉದ್ದೇಶದಿಂದ ಈ ಮೇಳ ಹಮ್ಮಿಕೊಳ್ಳಲಾಗಿದೆ.ವಿಜಯಪುರ ನಗರ ಮತ್ತು ಸುತ್ತ-ಮುತ್ತಲಿನ ಗ್ರಾಮಗಳ ಸಾರ್ವಜನಿಕರು ಈ ಮೇಳಕ್ಕೆ ಆಗಮಿಸಿ, ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಸಹಕಾರ ನೀಡಬೇಕು ಸ್ವಸಹಾಯ ಸಂಘದ ಮಹಿಳೆಯರು ಉತ್ತಮ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸಿದ್ದು, ಹೀಗಾಗಿ ಜಿಲ್ಲಾ ಕೇಂದ್ರವಲ್ಲದೆ ತಾಲೂಕು ಕೇಂದ್ರಗಳಲ್ಲೂ ಕೂಡ…
ವಿಜಯಪುರ: ಮುಂಗಾರು ಹಂಗಾಮಿಗೆ ಕಾಲುವೆ ಜಾಲದಡಿಯಲ್ಲಿ ನೀರು ಹರಿಸುವ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ನವ್ಹೆಂಬರ್ ೨೭ ರಿಂದ ಡಿ.೧೨ರವರೆಗೆ ಒಟ್ಟು ೧೫ ದಿನಗಳ ನೀರು ಹರಿಸುವ ಅವಧಿ ನಿಗದಿಗೊಳಿಸಲು ನಿರ್ಧಾರ ಪ್ರಕಟಿಸಲಾಯಿತು.ಇಂಡಿ ತಾಲೂಕಿನ ಹೊರ್ತಿಯಲ್ಲಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಧ್ಯಕ್ಷತೆಯಲ್ಲಿ ಕಾಲುವೆಗಳಿಗೆ ನೀರು ಬಿಡುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ನಿರ್ಧರಿಸಲಾಯಿತು.ಕೃಷ್ಣ ಮೇಲ್ದಂಡೆ ಯೋಜನೆಯ ೨೦೨೩-೨೪ ನೇ ಸಾಲಿನ ಮುಂಗಾರು ಹಂಗಾಮಿಗೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸಲಹಾ ಸಮಿತಿ ನಿರ್ದೇಶನದಂತೆ ಕಳೆದ ಅಕ್ಟೋಬರ್ ೧೪ ರಿಂದ ನವ್ಹೆಂಬರ್ ೧೮ರವರೆಗೆ ಕಾಲುವೆ ಜಾಲಗಳಲ್ಲಿ ನೀರು ಹರಿಸಲಾಗುತ್ತಿದ್ದು, ತದನಂತರ ನವ್ಹೆಂಬರ್ ೧೯ ರಿಂದ ನ.೨೬ ರವರೆಗೆ ಕಾಲುವೆಗಳಲ್ಲಿ ನೀರು ಹರಿಸಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.ಇತ್ತೀಚಿಗೆ ಜರುಗಿದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಅಚ್ಚುಕಟ್ಟು ಪ್ರದೇಶದ ಮುಂಗಾರು ಬೆಳೆಗಳಿಗೆ ನಿಗದಿಪಡಿಸಿ ಬಾಕಿ ಇರುವ ನೀರಿನ ಪ್ರಮಾಣವನ್ನು ತಮ್ಮ ವ್ಯಾಪ್ತಿಯಲ್ಲಿ ಬರುವ ರೈತರು ಜನಪ್ರತಿನಿಗಳೊಂದಿಗೆ ಚರ್ಚಿಸಿ ಕಾಲುವೆಗಳಲ್ಲಿ ನೀರು ಹರಿಸುವ ನಿಟ್ಟಿನಲ್ಲಿ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಸಭೆಯಲ್ಲಿ ಚರ್ಚಿಸಲಾಯಿತು.ನವ್ಹೆಂಬರ್…
ವಿಜಯಪುರ: ದೀಪಾವಳಿ ಹಬ್ಬವನ್ನು ನವೆಂಬರ್ ೧೧ ರಿಂದ ೧೫ರವರೆಗೆ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಹಸಿರು ಪಟಾಕಿಗಳನ್ನು ಮಾತ್ರ ಬಳಸುವ ಮೂಲಕ ಪರಿಸರ ಸ್ನೇಹಿಯಾಗಿ ಹಬ್ಬವನ್ನು ಆಚರಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದಿನ ಸೌದಾಗರ ಮನವಿ ಮಾಡಿಕೊಂಡಿದ್ದಾರೆ.ಮಾನ್ಯ ಸರ್ವೋಚ್ಛ ನ್ಯಾಯಾಲಯ ರಿಟ್ ಪಿಟಿಷನ್ ರಲ್ಲಿ ನೀಡಿದ ನಿರ್ದೇಶನದಂತೆ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಿ ಸಾರ್ವಜನಿಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಹಾಗೂ ರಾತ್ರಿ ೧೦:೦೦ಗಂಟೆಯ ವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದೆ, ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ದಿನಾಂಕ : ೧೦-೧೧-೨೦೨೩ರಂದು ವಿಜಯಪುರ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ವಾಣಿಜ್ಯ ಪ್ರದೇಶಗಳಲ್ಲಿ ಪಟಾಕಿ ಮಾರಾಟ ಮಾಡುತ್ತಿರುವ ವರ್ತಕರಕ ಅಂಗಡಿ ಮುಂಗಟ್ಟುಗಳಲ್ಲಿ ಮಾರಾಟ ಮಾಡುವುದನ್ನು ನಿಷೇಧಿಸಿ, ನಗರದ ಡಾ|| ಬಿ.ಆರ್.ಅಂಬೇಡ್ಕರ್ ಕ್ರಿಡಾಂಗಣದ ಬಾಸ್ಕೆಟ್ ಬಾಲ್ ಕೋರ್ಟ್ ಹತ್ತಿರ ಪಟಾಕಿಯನ್ನು ಮಾರಾಟ ಮಾಡಲು ಅವಕಾಶವನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಸವನಬಾಗೇವಾಡಿ: ಸರ್ಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರಿಗೆ ನ. ೧೬ ರಂದು ಪಟ್ಟಣದಲ್ಲಿ ತಾಲೂಕು ಮಟ್ಟದ ಸಹ-ಪಠ್ಯ ಚಟುವಟಿಕೆ ಸ್ಪರ್ಧೆ ಹಮ್ಮಿಕೊಂಡಿದೆ. ಈ ಸ್ಪರ್ಧೆಯಲ್ಲಿ ಶಿಕ್ಷಕ ಬಾಂಧವರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕ್ರಮ ವಹಿಸಬೇಕೆಂದು ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ಹೇಳಿದರು.ಪಟ್ಟಣದ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಸಿಆರ್ಸಿ, ಬಿಆರ್ಪಿಗಳ ಸಭೆಯಲ್ಲಿ ಮಾತನಾಡಿದ ಅವರು, ಒಬ್ಬ ಶಿಕ್ಷಕ ಒಂದು ಸ್ಪರ್ಧೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದೆ. ಪ್ರಥಮ ಸ್ಥಾನ ಪಡೆದ ಶಿಕ್ಷಕರು ಮಾತ್ರ ಮುಂದಿನ ಹಂತಕ್ಕೆ ಅರ್ಹನಾಗುತ್ತಾರೆ.ಯಾವುದೇ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ಶಿಕ್ಷಕರು ಆ ವಿಷಯದಲ್ಲಿ ಮತ್ತೆ ಸ್ಪರ್ಧಿಸಲು ಅರ್ಹರಾಗುವುದಿಲ್ಲ. ಆದರೆ ಇತರೇ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿದೆ. ಈ ಸಲ ಜನಪದ ಹಾಡು, ಆಶುಭಾಷಣ, ಪ್ರಬಂಧ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಗಳಿವೆ. ಈ ಸಹ-ಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಭಾಗವಹಿಸುವ ಶಿಕ್ಷಕರು ತಾಲೂಕಿನ ನೋಡಲ್ ಅಧಿಕಾರಿ ಬಿಆರ್ಪಿ ಎಂ.ವ್ಹಿ.ಗಬ್ಬೂರ ಅವರಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕೆಂದರು.ಸಭೆಯಲ್ಲಿ ಕ್ಷೇತ್ರ…
-ಸುಮಂಗಲಾ ಹುದ್ದಾರಬಸವನಬಾಗೇವಾಡಿ: ಮುಂಗಾರು-ಹಿಂಗಾರು ಮಳೆ ಸರಿಯಾಗಿ ಬಾರದೇ ಇರುವದರಿಂದ ಬರದ ಛಾಯೆಯಲ್ಲಿಯೇ ಬೆಳಕಿನ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಲು ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಜನರು ಭರದಿಂದ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಪಟ್ಟಣದಲ್ಲಿ ಕೆಲ ದಿನಗಳಿಂದ ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಹೊಸ ಬಟ್ಟೆ, ಸೀರೆ ಖರೀದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬಟ್ಟೆ ಅಂಗಡಿಗಳಲ್ಲಿ ಕಂಡು ಬರುತ್ತಿದ್ದಾರೆ. ದೀಪಾವಳಿ ಹಬ್ಬ ಶನಿವಾರದಿಂದ ಆರಂಭವಾಗುತ್ತಿರುವುದರಿಂದಾಗಿ ಶುಕ್ರವಾರ ಬಟ್ಟೆ ಅಂಗಡಿ ಸೇರಿದಂತೆ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿಸಲು ವಿವಿಧೆಡೆಗಳಿಂದ ಹೆಚ್ಚು ಜನರು ಆಗಮಿಸಿದ್ದು ಕಂಡು ಬಂತು.ದೀಪಾವಳಿ ಹಬ್ಬಕ್ಕೆ ಬೇಕಾದ ಪೂಜಾ ಸಾಮಗ್ರಿಗಳು, ಆಕಾಶ ಬುಟ್ಟಿ, ಹೊಸ ಬಟ್ಟೆ ಸೇರಿದಂತೆ ಇನ್ನೀತರ ವಸ್ತುಗಳನ್ನು ಖರೀದಿಸುವಲ್ಲಿ ಜನರು ತುಂಬಾ ಬ್ಯುಸಿಯಾಗಿದ್ದಾರೆ. ದೀಪಾವಳಿ ಹಬ್ಬವನ್ನು ಎಲ್ಲ ಜನರು ಆಚರಿಸಲು ಸಿದ್ದಗೊಳ್ಳುತ್ತಿದ್ದಾರೆ. ವರ್ಷಕ್ಕೊಮ್ಮೆ ಬರುವ ಈ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲು ಕಳೆದ ಹಲವು ದಿನಗಳಿಂದಲೇ ಜನರು ತಮ್ಮ ಮನೆ, ಅಂಗಡಿ-ಮುಂಗಟ್ಟುಗಳ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ. ಸಂಭ್ರಮದ ದೀಪಾವಳಿ ಹಬ್ಬಕ್ಕೆ ಕ್ಷಣ ಗಣನೆ ಆರಂಭವಾಗಿದೆ.ವಾಹನ ಹೊಂದಿರುವ…
ಬಸವನಬಾಗೇವಾಡಿ: ತಾಲೂಕಿನ ಇಂಗಳೇಶ್ವರ ಗ್ರಾಮದ ಬೀರಲಿಂಗೇಶ್ವರ ಬಡಾವಣೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಂದೆ ಹಾಯ್ದು ಹೋಗುವ ಮುಖ್ಯ ರಸ್ತೆಯು ತುಂಬಾ ಹದಗೆಟ್ಟು ಹೋಗಿರುವದರಿಂದಾಗಿ ಮಳೆ ನೀರು ನಿಂತು ಕೊಳಚೆ ಗುಂಡಿ ನಿರ್ಮಾಣ ಗೊಂಡಿದೆ. ಇದರಿಂದಾಗಿ ನಿತ್ಯ ಶಾಲೆಗೆ ವಿದ್ಯಾರ್ಥಿಗಳು ಈ ರಸ್ತೆ ಮೂಲಕವಾಗಿಯೇ ಹೋಗುವ ದುಸ್ಥಿತಿಯಿದೆ. ರಸ್ತೆ ಸಂಪೂರ್ಣ ಹದಗೆಟ್ಟಿರುವದರಿಂದಾಗಿ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿ ನೀರು ನಿಂತಿದೆ. ಒಂದು ವೇಳೆ ವಿದ್ಯಾರ್ಥಿಗಳು ಹಾಯತಪ್ಪಿ ಗುಂಡಿಯೊಳಗೆ ಕಾಲಿಟ್ಟರೆ ಅಪಾಯ ತಪ್ಪಿದ್ದಲ್ಲ. ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಪ್ರಯಾಸ ಪಡುವಂತಾಗಿದೆ. ಈ ರಸ್ತೆ ಹಲವಾರು ತಿಂಗಳುಗಳಿಂದ ಹದಗೆಟ್ಟು ಹೋಗಿದ್ದರೂ ಸಂಬಂಧಿಸಿದ ಇಲಾಖೆಯು ಗಮನಹರಿಸುತ್ತಿಲ್ಲ. ಮುಂದೆ ಅಪಘಾತಗಳಾಗುವ ಮುನ್ನವೇ ಇಲಾಖೆಯು ಎಚ್ಚೆತ್ತುಕೊಂಡು ರಸ್ತೆ ರಿಪೇರಿ ಮಾಡಿ ಡಾಂಬರೀಕರಣ ಮಾಡುವ ಮೂಲಕ ಶಾಲಾ ಮಕ್ಕಳಿಗೆ, ವಾಹನ ಸವಾರರು ಸುಗಮವಾಗಿ ಸಂಚರಿಸುವಂತೆ ಮಾಡಬೇಕೆಂದು ರೈತ ಮುಖಂಡ ಅರವಿಂದ ಕುಲಕರ್ಣಿ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ಬಸವನಬಾಗೇವಾಡಿ: ತಾಲೂಕಿನ ಅರಳಿಚಂಡಿ ಗ್ರಾಮದಲ್ಲಿ ನ. ೧೧ ರಂದು ಸಂಜೆ ೪ ಗಂಟೆಗೆ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತೋತ್ಸವ ಹಾಗೂ ವಿವಿಧ ಕಾಮಗಾರಿಗಳ ಭೂಮಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಸಾನಿಧ್ಯವನ್ನು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಇಂಗಳೇಶ್ವರದ ಚನ್ನಬಸವ ಸ್ವಾಮೀಜಿ, ಬಸವನಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ವಹಿಸುವರು.ಅಧ್ಯಕ್ಷತೆಯನ್ನು ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಐ.ಸಿ.ಪಟ್ಟಣಶೆಟ್ಟಿ ವಹಿಸುವರು. ಸಚಿವ ಶಿವಾನಂದ ಪಾಟೀಲ ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ಶಾಸಕರಾದ ವಿಜಯಾನಂದ ಕಾಶಪ್ಪನವರ, ರಾಜುಗೌಡ ಪಾಟೀಲ, ಬಾಗಲಕೋಟ ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ, ಜೆಡಿಎಸ್ ಮುಖಂಡ ಅಪ್ಪುಗೌಡ ಪಾಟೀಲ, ವ್ಹಿಡಿಸಿಸಿ ಬ್ಯಾಂಕಿನ ನಿರ್ದೇಶಕ ಚಂದ್ರಶೇಖರಗೌಡ ಪಾಟೀಲ, ಸಿಪಿಐ ಶರಣಗೌಡ ಗೌಡರ, ಅಖಿಲ ಭಾರತೀಯ ಲಿಂಗಾಯತ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರಗೌಡ ಬಿರಾದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ, ತಾಲೂಕು ಪಂಚಮಸಾಲಿ ಸಮಾಜ ಅಧ್ಯಕ್ಷ ಬಸವರಾಜ ಗೊಳಸಂಗಿ, ಮುಖಂಡರಾದ ಸಂಗಮೇಶ ಓಲೇಕಾರ, ಶರಣಪ್ಪ ಬಳ್ಳಾವೂರ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಇಂಗಳೇಶ್ವರ…
ಬಸವನಬಾಗೇವಾಡಿ: ಜಗತ್ತಿನಲ್ಲಿಯೇ ದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ದೇಶ ಭಾರತ. ನಮ್ಮ ದೇಶದ ಪ್ರತಿಯೊಬ್ಬ ಪ್ರಜೆ ಕಾನೂನು ಅರಿವು ಹೊಂದುವ ಜೊತೆಗೆ ಮೂಲಭೂತ ಹಕ್ಕುಗಳು, ಕರ್ತವ್ಯಗಳ ಬಗ್ಗೆ ಜ್ಞಾನ ಹೊಂದಬೇಕೆಂದು ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಅರ್ಜುನ ಬನಸೋಡೆ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನದಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ನ್ಯಾಯಾಂಗಕ್ಕೆ ಗೌರವ ಸ್ಥಾನವಿದೆ. ಸರಿಯಾದ ಕಾನೂನು ಎಲ್ಲರಿಗೂ ಸಿಗುವಂತಾಗಬೇಕು. ಈ ನಿಟ್ಟಿನಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿಯು ಸಮಾಜದ ದುರ್ಬಲ ವರ್ಗದ, ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಉಚಿತ ಕಾನೂನು ಸೇವೆ ಒದಗಿಸುತ್ತದೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.ವಕೀಲ ವ್ಹಿ.ಬಿ.ಮರ್ತುರ ರಾಷ್ಟ್ರೀಯ ಕಾನೂನು ಸೇವಾ ದಿನ ಹಾಗೂ ಪೋಕ್ಸೋ ಕಾಯ್ದೆ ಕುರಿತು ಮಾತನಾಡಿದರು.ನ್ಯಾಯವಾದಿ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ ಮಾತನಾಡಿದರು. ಡಾ.ಪ್ರಶಾಂತ ಟಿ.ಆರ್.ಸ್ವಾಗತಿಸಿದರು. ಡಾ.ಯುವರಾಜ…
ವಿಜಯಪುರ: ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ವಿಭಾಗದ ವತಿಯಿಂದ ನವೆಂಬರ್ 13 ರಂದು ಸೋಮವಾರದಿಂದ ನವೆಂಬರ 18 ಶನಿವಾರದ ವರೆಗೆ ಒಂದು ವಾರ ಉಚಿತ ಮಧುಮೇಹ ಪಾದ ರೋಗದ (ಡಯಾಬಿಟಿಕ್ ಫುಟ್) ತಪಾಸಣೆ ಮತ್ತು ಚಿಕಿತ್ಸಾ ಸಪ್ತಾಹ ಶಿಬಿರ ಸಪ್ತಾಹ ನಡೆಯಲಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಶಸ್ತ್ರಚಿಕಿತ್ಸ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ, ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಕೋಣೆ ಸಂಖ್ಯೆ 4ರಲ್ಲಿ ಈ ಶಿಬಿರ ನಡೆಯಲಿದೆ. ಆಸಕ್ತ ಮಧುಮೇಹಿಗಳು ಇದರ ಪ್ರಯೋಜನವನ್ನು ಪಡೆಯಬಹುದಾಗಿದೆ. ಒಂದು ವಾರ ನಡೆಯಲಿರುವ ಈ ಶಿಬಿರದಲ್ಲಿ ಮಧುಮೇಹ ಪಾದರೋಗ ತಪ್ಪಿಸಲು ವಹಿಸಬೇಕಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಆರೋಗ್ಯ ಶಿಕ್ಷಣ ನೀಡಲಾಗುವುದು. ಜೊತೆಗೆ ಅಗತ್ಯವಿರುವ ಮಧುಮೇಹಿಗಳಿಗೆ ಪಾದದ ವಿಶೇಷ ಪರೀಕ್ಷೆಗಳಾದ ಕಂಪನ ಜ್ಞಾನ(ಬಯೋಥಿಸಿಯೋ ಮೀಟರ್), ಸ್ಪರ್ಶ ಜ್ಞಾನ( ಮೋನೊಫಿಲಾಮೆಂಟ್), ಪಾದದಲ್ಲಿಯ ಒತ್ತಡ( ಹ್ಯಾರಿಸ್…
