Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಭೂತನಾಳ ಮೀನುಗಾರಿಕೆ ಸಂಶೋಧನೆ ಮತ್ತು ಮಾಹಿತಿ ಕೇಂದ್ರದ ವತಿಯಿಂದ ನವೆಂಬರ್ ೧೦ರಂದು ಬೆಳಿಗ್ಗೆ ೧೦ ಗಂಟೆಗೆ ಮೀನುಮರಿಗಳ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ತಲಾ ಒಂದು ರೂಪಾಯಿಗೆ ಒಂದರಂತೆ ಸಾಮಾನ್ಯ ಗೆಂಡೆ (ಗೌರಿ) ಮೀನು ಮರಿಗಳನ್ನು ಮಾರಾಟ ಮಾಡಲಾಗುವುದು. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೇಂದ್ರದ ಸಹ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ಮರಾಠಾ ಲೈಟ್ ಇನ್ಫೆಂಟ್ರಿ ಸೆಂಟರ್ ಬೆಳಗಾವಿಯ ಶಿವಾಜಿ ಸ್ಟೇಡಿಯಂನಲ್ಲಿ ಮಾಜಿ ಸೈನಿಕರು, ವೀರ ನಾರಿಯರು ಹಾಗೂ ಮಾಜಿ ಸೈನಿಕರ ವಿಧವಾ ಪತ್ನಿಯರಿಗಾಗಿ ನವೆಂಬರ್ ೨೬ ರಂದು ಬೆಳಿಗ್ಗೆ ೮ -೩೦ರಿಂದ ಸಂಜೆ ೪ ಗಂಟೆವರೆಗೆ ಮಾಜಿ ಸೈನಿಕರ ರ್ಯಾಲಿ ಆಯೋಜಿಸಲಾಗಿದೆ.ಈ ರ್ಯಾಲಿಯಲ್ಲಿ ವಿವಿಧ ಅಭಿಲೇಖ ಕಾರ್ಯಾಲಯಗಳಿಮದ ಸಿಬ್ಬಂದಿಗಳು, ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಪಿಂಚಣಿ, ಕುಟುಂಬ ಪಿಂಚಣಿಗೆ ಸಂಬಂಧಿಸಿದ ಅಭಿಲೇಖ ಕಾರ್ಯಾಲಯಕ್ಕೆ ಹಾಗೂ ಪಿಂಚಣಿ ಬಟವಡೆ ಬ್ಯಾಂಕಿಗೆ ಸಂಬಂಧಿಸಿದ ಹಾಗೂ ಇತರೆ ಹಲವಾರು ಕುಂದು ಕೊರತೆ ನಿವಾರಿಸುವ ಪ್ರಕ್ರಿಯೆ ನಡೆಯಲಿದೆ. ರ್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವಿಜಯಪುರ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ: ವಿಜಯಪುರ ಜಿಲ್ಲೆಯ ಸೈನಿಕ್ ಮಂಡಳಿಯನ್ನು ಪುನರ್ ರಚಿಸಲಾಗುತ್ತಿದ್ದು, ಮಂಡಳಿಗೆ ನೇಮಕಾತಿ ಬಯಸುವ ಮಾಜಿ ಸೈನಿಕರು ಹಾಗೂ ಸೇನೆ ನಿವೃತ್ತ ಅಧಿಕಾರಿಗಳು ತಮ್ಮ ಸೇವೆಯ ಸಂಕ್ಷಿಪ್ತ ಹಿನ್ನಲೆ ಮತ್ತು ಪೂರ್ವ ಚರಿತ್ರೆಯನ್ನು ನವೆಂಬರ್ ೧೭ ರೊಳಗೆ ಸೈನಿಕ್ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಜಯಪುರ ಕಚೇರಿಗೆ ಸಲ್ಲಿಸುವಂತೆ ಕೋರಲಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೫೦೯೧೩ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಿಗೆ ಪ್ರಾಥಮಿಕ ವರದಿ ಸಲ್ಲಿಸಿದ ಉನ್ನತ ಸಮಿತಿ ಬೆಂಗಳೂರು: ವಿಜಯಪುರ ಜಿಲ್ಲೆಯನ್ನು ಇಂಧನ ಕ್ಷೇತ್ರದ ಸಾಧನಗಳು, ಮಶಿನರಿ ಮತ್ತು ಎಕ್ವಿಪ್ಮೆಂಟ್, ನಾನ್-ಮೆಟಲಿಕ್ ಖನಿಜೋತ್ಪನ್ನಗಳು, ಕೃಷಿ ಮತ್ತು ಕೃಷಿ ಆಧಾರಿತ ಉತ್ಪನ್ನಗಳು, ನ್ಯೂಟ್ರಾಸ್ಯುಟಿಕಲ್ಸ್, ಮೆಡಿಸಿನಲ್ ಮತ್ತು ಬೊಟಾನಿಕಲ್ ಉತ್ಪನ್ನಗಳು ಮತ್ತು ವಿಶೇಷ ಅಲಾಯ್ ಹಾಗೂ ಲೋಹೋತ್ಪನ್ನಗಳ ತಯಾರಿಕೆ ಹೀಗೆ ಒಟ್ಟು ಆರು ಕೈಗಾರಿಕಾ ವಲಯಗಳಲ್ಲಿ ಸಮಗ್ರವಾಗಿ ಅಭಿವೃದ್ಧಿಪಡಿಸಲು ಅತ್ಯುತ್ತಮ ಅವಕಾಶಗಳಿವೆ ಎಂದು ಉನ್ನತ ಮಟ್ಟದ ಸಮಿತಿಯೊಂದು ಹೇಳಿದೆ.ಈ ಸಂಬಂಧದ ಪ್ರಾಥಮಿಕ ವರದಿಯನ್ನು ಅದು ಗುರುವಾರ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರಿಗೆ ಸಲ್ಲಿಸಿದೆ. ಏಕಸ್ ಎಸ್ಇಜೆಡ್ ಮತ್ತು ದೆಹಲಿಯ ಸಿಬಿಆರ್ ಇ ಸಂಸ್ಥೆಯ ಪ್ರತಿನಿಧಿಗಳು ಈ ವರದಿಯನ್ನು ಸಿದ್ಧಪಡಿಸಿದ್ದಾರೆ. ಪಾಟೀಲ ಅವರು ನೂತನ ಸರಕಾರದಲ್ಲಿ ಕೈಗಾರಿಕಾ ಇಲಾಖೆಯ ಸಚಿವ ಹುದ್ದೆ ಸ್ವೀಕರಿಸಿದ ಕೆಲದಿನಗಳಲ್ಲೇ ತಮ್ಮ ತವರು ಜಿಲ್ಲೆಯನ್ನು ಕೈಗಾರಿಕಾ ದೃಷ್ಟಿಯಿಂದಲೂ ಮುಂಚೂಣಿಗೆ ತರುವ ಉದ್ದೇಶದಿಂದ ಸಿಬಿಆರ್ ಇ ಸಂಸ್ಥೆಗೆ ವರದಿ ನೀಡುವಂತೆ…
ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ | ಅರೆಕಾಲಿಕ ಸ್ವಯಂಸೇವಕರಿಗೆ ತರಬೇತಿ | ನ್ಯಾ.ಶಿವಾಜಿ ನಲವಡೆ ಆಶಯ ವಿಜಯಪುರ: ಸಮಾಜದ ಕಟ್ಟಕಡೆಯ ವ್ಯಕ್ತಿಗೆ, ಅಸಹಾಯಕರಿಗೆ ಉಚಿತ ಕಾನೂನು ಅರಿವು ಮತ್ತು ನೆರವು ತಲುಪುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಕಾನೂನಿನ ಸೇವೆಯಲ್ಲಿರುವ ಪ್ರತಿಯೊಬ್ಬ ಅಧಿಕಾರಿ ಜವಾಬ್ದಾರಿಯುತವಾಗಿ, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪ್ರಧಾನ ಜಿಲ್ಲಾ, ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷ ಶಿವಾಜಿ ಅನಂತ ನಲವಡೆ ಹೇಳಿದರು.ನಗರದ ಜಿಲ್ಲಾ ನ್ಯಾಯಾಲಯ ಆವರಣದ ನ್ಯಾಯಾಂಗ ಅಧಿಕಾರಿಗಳ ಸಭಾ ಭವನದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಪೋಲಿಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ವಿಜಯಪುರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಮತ್ತು ಅರೆಕಾಲಿಕ ಸ್ವಯಂಸೇವಕರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಷ್ಟ್ರೀಯ ಕಾನೂನು ಸೇವೆಗಳ…
ಬರ ನಿರ್ವಹಣೆ ಹಾಗೂ ಕುಡಿವ ನೀರಿನ ಅನುಷ್ಟಾನ ಕುರಿತ ವೀಡಿಯೋ ಸಂವಾದ ಸಭೆಯಲ್ಲಿ ಡಿಸಿ ಟಿ.ಭೂಬಾಲನ್ ಸೂಚನೆ ವಿಜಯಪುರ: ಜಿಲ್ಲೆಯಲ್ಲಿ ಬರದ ಛಾಯೆ ಇರುವುದರಿಂದ ಕುಡಿಯುವ ನೀರಿನ ತೊಂದರೆಯಾಗದಂತೆ ಎಲ್ಲ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಬೂಬಾಲನ್ ಹೇಳಿದರು.ಗುರುವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಕುಡಿಯುವ ನೀರಿನ ಅನುಷ್ಟಾನ ಕುರಿತ ವಿಡಿಯೋ ಸಂವಾದದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರ ಈಗಾಗಲೇ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡಿದ್ದು ಮುಂಬರು ದಿನಗಳಲ್ಲಿ ಜಿಲ್ಲೆಯ ಪ್ರತಿಯೊಂದು ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗಿನಿಂದಲೇ ಕ್ರಮ ವಹಿಸಬೇಕು ಹಾಗೂ ಕುಡಿಯುವ ನೀರಿಗೆ ಪ್ರಥಮ ಆಧ್ಯತೆ ನೀಡಬೇಕು ಎಂದು ಸೂಚಿಸಿದರು.ಜಿಲ್ಲೆಯಲ್ಲಿ ಪ್ರತಿಯೊಂದು ಗ್ರಾಮಗಳಲ್ಲಿಯೂ ಕುಡಿಯುವ ನೀರು ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಕರ್ತವ್ಯ ನಿರ್ವಹಿಸಬೇಕು. ಬಹು ಹಳ್ಳಿ ಕುಡಿಯುವ ನೀರಿನ ಯೋಜನೆಯ ಎಲ್ಲ ಕೆರೆಗಳಿಗೆ ನೀರು ಹರಿಸಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ…
ಹೂವಿನಹಿಪ್ಪರಗಿ: ಸಮೀಪದ ಗೂಗಿ ಅಗಸಬಾಳ ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ರಚನೆ ಮಾಡುವ ಸಲುವಾಗಿ ನ.೧೦ ಶುಕ್ರವಾರ ಸಾಯಂಕಾಲ ೬ ಘಂಟೆಗೆ ಗ್ರಾಮದ ಅಂಜುಮನ್ ಮಜಿದ್ ನಲ್ಲಿ ಮುಸ್ಲಿಂ ಸಮಾಜದ ಸಭೆ ಕರೆಯಲಾಗಿದ್ದು ಗ್ರಾಮದ ಎಲ್ಲಾ ಮುಸ್ಲಿಂ ಭಾಂದವರು ಸಭೆಗೆ ಹಾಜರಾಗಬೇಕೆಂದು ಸಮಾಜದ ಮುಖಂಡ ನಯುಮ ಹಳಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೂವಿನಹಿಪ್ಪರಗಿ: ಮುಂಗಾರು ಹಾಗೂ ಹಿಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಬಾರದ ಕಾರಣ ಬೆಳೆಗಳು ಒಣಗಿಹೋಗಿದ್ದು ರೈತರು ಕಂಗಾಲಾಗಿದ್ದಾರೆ ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು ಹೂವಿನಹಿಪ್ಪರಗಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳವಾರ ನಡೆದ ಆಲಮಟ್ಟಿ ಕೃಷ್ಣಾ ಭಾಗ್ಯ ಜಲನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೆರಿಯಲ್ಲಿ ನೀರಾವರಿ ಸಲಹಾ ಸಮಿತಿ ಸಭೆಗೆ ಜಿಲ್ಲೆಯ ೮ ಶಾಸಕರ ಪೈಕಿ ನಾಲ್ಕು ಜನ ಶಾಸಕರು ಮಾತ್ರ ಭಾಗವಹಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಜಿಲ್ಲೆಯ ಉಸ್ತುವಾರಿ ಸಚಿವರು, ಬಸವನಬಾಗೇವಾಡಿ ಶಾಸಕರು ಹಾಗೂ ಜವಳಿ ಕಬ್ಬು ಅಭಿವೃದ್ಧಿ ಸಚಿವರು, ದೇವರ ಹಿಪ್ಪರಗಿಯ ಶಾಸಕ ರಾಜುಗೌಡ ಪಾಟೀಲರು ನೀರಾವರಿ ಸಲಹಾ ಸಮಿತಿ ಸಭೆಗೆ ಗೈರಾಗಿದ್ದು ತಮಗೆ ಶೋಭೆ ತರುವಂತದಲ್ಲ, ಇದನ್ನು ರೈತ ಸಂಘ ಖಂಡಿಸುತ್ತದೆ. ಆಯ್.ಸಿ.ಸಿ ಸಭೆ ಮಹತ್ವದ ಸಭೆಯಾಗಿರುವುದರಿಂದ ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ಶಾಸಕರುಗಳು ಹಾಜರಿರಬೇಕು. ರೈತರ ಬೇಡಿಕೆಯಂತೆ ಅವರಿಗೆ ಅನಕೂಲವಾಗುವ ರೀತಿ ನಿರ್ಣಯ ಕೈಗೊಳ್ಳದಿದ್ದರೆ ಅದನ್ನು ಪ್ರಶ್ನಿಸಲು ಕಡ್ಡಾಯವಾಗಿ…
ಲೋಕಾಯುಕ್ತ ವಿಜಯಪುರ ಇವರ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ದೇವರಹಿಪ್ಪರಗಿ: ಭ್ರಷ್ಟಾಚಾರರಹಿತ ಆಡಳಿತದ ಅಗತ್ಯತೆ ಇಂದು ಹೆಚ್ಚಾಗಿದೆ. ಆದ್ದರಿಂದ ನಾವು ಯಾವುದೇ ಕಾರಣ ಭ್ರಷ್ಟಾಚಾರದ ಭಾಗವಾಗಬಾರದು ಎಂದು ವಿಜಯಪುರ ಲೋಕಾಯುಕ್ತ ಡಿವೈಎಸ್ಪಿ ಸುರೇಶ ರೆಡ್ಡಿ ಹೇಳಿದರು.ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಗುರುವಾರ ಜರುಗಿದ ಕರ್ನಾಟಕ ಲೋಕಾಯುಕ್ತ ವಿಜಯಪುರ ಇವರ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಒಳ್ಳೆಯವರು ಇದ್ದಾರೆ. ಹಾಗೂ ಕೆಟ್ಟವರು ಇದ್ದಾರೆ. ಆದರೆ ಸರ್ಕಾರದ ಕೆಲಸ ದೇವರ ಕೆಲಸ ಎಂದು ತಿಳಿದು ಒಳ್ಳೆಯವರು ಯಾವುದೇ ಆಮಿಷಗಳಿಗೆ ಒಳಗಾಗದೇ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.ಲೋಕಾಯುಕ್ತ ಉಪಅಧೀಕ್ಷಕ ಆನಂದ ಟಕ್ಕಣ್ಣವರ ಮಾತನಾಡಿ, ಲೋಕಾಯುಕ್ತದ ವ್ಯಾಪ್ತಿ, ಅದರ ಮಹತ್ವ, ಕಾರ್ಯಗಳು, ಉದ್ದೇಶಗಳ ಕುರಿತು ಸಮಗ್ರವಾಗಿ ಮಾಹಿತಿ ಮಾತನಾಡಿದರು.ಸಭೆಯಲ್ಲಿ ಕೃಷಿ ಇಲಾಖೆಯ ಎಚ್.ವೈ. ಸಿಂಗೇಗೋಳ, ಅಬಕಾರಿ ಇಲಾಖೆಯ ಆರತಿ ಖೈನೂರ, ಶಿಕ್ಷಣ ಇಲಾಖೆಯ ಆರೀಫ್ ಬಿರಾದಾರ, ತೋಟಗಾರಿಕೆ ಇಲಾಖೆಯ ರಾಘವೇಂದ್ರ ಬಗಲಿ, ಆರೋಗ್ಯ ಇಲಾಖೆಯ ಸಂತೋಷ ಯಡಹಳ್ಳಿ, ಪಟ್ಟಣ…
ಹಡಪದ ಅಪ್ಪಣ್ಣ ಕಂಚಿನ ಮೂರ್ತಿ ಉದ್ಘಾಟನೆ | ಹಡಪದ ಸಮಾಜದ ಜನಜಾಗೃತಿ ಸಮಾವೇಶ ಇಂಡಿ: ೧೨ ನೆಯ ಶತಮಾನದ ಸಾಮಾಜಿಕ ಅಂದೋಲನದ ನಾಯಕನಾಗಿದ್ದ ವಚನಕಾರರಲ್ಲಿ ಪ್ರಭಲರಾಗಿದ್ದ ಅಪ್ಪಣ್ಣರನ್ನು ಅಂದು ಪ್ರಮುಖವಾಗಿ ಕಾಣಿಸಿಕೊಂಡರೆ ಇಂದು ಇಂಡಿಯಲ್ಲಿ ಕಂಚಿನ ಮೂರ್ತಿಯ ಮೂಲಕ ಹಡಪದ ಅಪ್ಪಣ್ಣ ಮರು ಸ್ಥಾಪನೆಗೊಂಡಿದ್ದಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಬಣ್ಣಿಸಿದರು.ಪಟ್ಟಣದ ಶ್ರೀ ಹಡಪದ ಅಪ್ಪಣ್ಣ ವೃತ್ತದ ಕಂಚಿನ ಮೂರ್ತಿ ಉದ್ಘಾಟನೆ ಮತ್ತು ಪೋಲಿಸ್ ಮೈದಾನದಲ್ಲಿ ನಡೆದ ಹಡಪದ ಅಪ್ಪಣ್ಣನವರ ಸಮಾಜದ ಜನ ಜಾಗೃತಿ ಸಮಾವೇಶದಲ್ಲಿ ಮಾತನಾಡಿದರು.ಹಡಪದ ಅಪ್ಪಣ್ಣನವರು ಸಮಾಜಕ್ಕೆ ಸಂಸ್ಕಾರ ನೀಡಿದ್ದು ಸರ್ವರನ್ನು ಪ್ರೀತಿಸುವ ಸಮಾಜದ ನಿರ್ಮಾಣದ ಕಲ್ಪನೆ ನೀಡಿದ್ದಾರೆ. ಸಮಾಜ ಬಾಂಧವರು ಶಿಕ್ಷಣ, ಸಂಘಟನೆ ಹೋರಾಟದ ಪರಿಕಲ್ಪನೆಯಲ್ಲಿ ಸಮಾಜವನ್ನು ಮುನ್ನಡೆಸಬೇಕಾಗಿದೆ. ಈಗಾಗಲೇ ಈ ಸಮಾಜ ರಾಜ್ಯದಲ್ಲಿಯೇ ಅತ್ಯುತ್ತಮ ಶಿಕ್ಷಣ ಸಂಸ್ಥೆ ಮತ್ತು ಪ್ರಗತೀಶೀಲ ಬ್ಯಾಂಕು ಹೊಂದಿದೆ. ಅದಲ್ಲದೆ ರಾಜ್ಯದಲ್ಲಿಯೇ ಕಂಚಿನ ಮೂರ್ತಿ ಮೂರ್ತಿ ಸ್ಥಾಪಿಸಿದ್ದು ಇಂಡಿಯಲ್ಲಿ ಮಾತ್ರ ಎಂದರು.ತಂಗಡಗಿ ಕ್ಷೇತ್ರದ ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಶ್ರೀಗಳು ಮಾತನಾಡಿದರು.ಗುರುದೇವ…
