Author: editor.udayarashmi@gmail.com

ಇಂಡಿ : ಮುಂಗಾರು, ಹಿಂಗಾರು ಎರಡೂ ಮಳೆ ಬಾರದೆ ಇರುವುದರಿಂದ ಸರಕಾರ ಬರಗಾಲ‌ ಘೋಷಿಸಿದೆ. ಆದರೆ ಇದು ಬರೀ ಬರಗಾಲವಲ್ಲ, ಬೀಕರ ಬರಗಾಲ‌ವಾಗಿದ್ದರಿಂದ ಮುನ್ನೆಚ್ಚರಿಕೆವಾಗಿ ತಾಲ್ಲೂಕಿನ ಯಾವುದೇ ಗ್ರಾಮಗಳಿಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಆಬೀದ್ ಗದ್ಯಾಳ ಹೇಳಿದರು.ಬುಧವಾರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಏರ್ಪಡಿಸಿರುವ ಕುಡಿಯುವ ನೀರಿನ ಮುಂಜಾಗ್ರತಾ ಕ್ರಮದ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.ಈಗಾಗಲೇ ನಿನ್ನೆಯ ದಿನ ಗ್ರೌಂಡ್ ಲೆವಲ್ಲಲ್ಲಿ ಕೆಲಸವಾಗುತ್ತಿಲ್ಲೆಂದು ಶಾಸಕ ಯಶವಂತರಾಯಗೌಡ ಪಾಟೀಲ್ & ಜಿಲ್ಲಾ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದು, ಈ ಕೂಡಲೇ ಕುಡಿಯುವ ನೀರಿನ ಬಗ್ಗೆ ಚುರುಕು ಕೆಲಸ ನಡೆಯಬೇಕು ಎಂದು ಜಿಲ್ಲಾ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಹೇಳಿದರು.ಸೆ- 9 ರಂದು ತಾಲೂಕು ಮಟ್ಟದ ಅಧಿಕಾರಿಗಳನ್ನು ಪಂಚಾಯತ್ ನೋಡಲ್ ಅಧಿಕಾರಿಗಳಾಗಿ ನೇಮಕ ಮಾಡಿ ಆದೇಶಿಸಿಲಾಗಿದೆ. ಆದರೆ ಇಲ್ಲಿಯವರೆಗೆ ಯಾರೊಬ್ಬರೂ ಪಂಚಾಯತ್ ಗೆ ತೆರಳಿ ಮುಂಜಾಗ್ರತೆಗೆ ಸಭೆ ನಡೆಸಿ ಸಮಸ್ಯೆ ಕಂಡುಕೊಳ್ಳುವ ಮತ್ತು ಪರಿಹಾರ ಮಾರ್ಗಗಳ…

Read More

ಯಡ್ರಾಮಿ: ತಾಲೂಕು ಕಾಂಗ್ರೆಸ್ ಮುಖಂಡ, ಜೇವರ್ಗಿ ಮತ್ತು ಯಡ್ರಾಮಿ ತಾಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ರಾಜಶೇಖರ ಸಾಹು ಸೀರಿ ಅವರನ್ನು ರಾಜ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಿಸುವಂತೆ ಕಾಂಗ್ರೆಸ್ ಹಿರಿಯ ಮುಖಂಡ ಬಾಬುಗೌಡ ಪಾಟೀಲ ಕುಳಗೇರಿ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.ರಾಜಶೇಖರ ಸಾಹು ಸೀರಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಶಾಸಕ ಡಾ|ಅಜಯ್ ಸಿಂಗ್ ಅವರ ಗೆಲುವಿಗಾಗಿ ನಿರಂತರವಾಗಿ ಶ್ರಮಿಸಿದ್ದಾರೆ. ಅಲ್ಲದೇ, ಈ ಹಿಂದೆ ಮಾಜಿ ಮುಖ್ಯಮಂತ್ರಿ ದಿ. ಎನ್.ಧರ್ಮಸಿಂಗ್ ಅವರ ನಿಕಟವರ್ತಿಯಾಗಿ ಪಕ್ಷದಲ್ಲಿ ಕೆಲಸ ಮಾಡಿದ್ದಾರೆ. ಜೇವರ್ಗಿ, ಯಡ್ರಾಮಿ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗಾಗಿ ಸೀರಿ ಅವರು ಪ್ರಾಮಾಣಿಕತೆಯಿಂದ ಕಾರ್ಯ‌ ನಿರ್ವಹಿಸುತ್ತಿರುವುದರಿಂದ ಅವರನ್ನು ಯಾವುದಾದರೊಂದು ರಾಜ್ಯ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ.

Read More

ತಿಕೋಟಾ: ಶಿಕ್ಷಣ ಎಂದರೆ ಕೇವಲ ಓದು ಬರಹ ಅಲ್ಲ, ಮಕ್ಕಳಲ್ಲಿ ಅಡಗಿರುವ ಯಾವುದೇ ವಿಶೇಷ ಪ್ರತಿಭೆಯನ್ನು ಗುರ್ತಿಸಿ ಹೊರ ಹಾಕಿ ಸಮಾಜಕ್ಕೆ ಉತ್ತಮ ಕೊಡುಗೆಯನ್ನು ನೀಡುವಂತ ಸಂಸ್ಕಾರ ಹಾಗೂ ಸಂಸ್ಕೃತಿ ಬೆಳೆಸಿ ಮಕ್ಕಳನ್ನು ತಯಾರಿಸವುದಾಗಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ವಿಜಯಪುರ ತಾಲ್ಲೂಕಿನ ಕಗ್ಗೋಡ ಗ್ರಾಮದ ಪ್ರಕೃತಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ಗ್ರಾಮೀಣವಲಯದ ವತಿಯಿಂದ ಬುಧವಾರ ನಡೆದ 2022-23 ನೇ ಸಾಲಿನ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಶಿಕ್ಷಕರು ತಮ್ಮ ಪೂರ್ಣ ಜೀವನವನ್ನು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಒದಗಿಸಿರುತ್ತಿರಿ. ತಂದೆ ತಾಯಿಗಿಂತ ಹೆಚ್ಚು ಮಗು ಶಿಕ್ಷಕರ ಜೊತೆ ಇರುತ್ತದೆ. ಅವರು ನೀಡಿದ ಶಿಕ್ಷಣ ಜೀವನ ಪರ್ಯಂತ ಯಾರು ಮರೆಯುವದಿಲ್ಲ. ಶಾಸಕ, ಮಂತ್ರಿ, ಉದ್ಯಮಿಯಾದರೂ ಪ್ರಾಥಮಿಕ ಶಿಕ್ಷಕರು ನೀಡಿದ ಶಿಕ್ಷಣ ಮರೆಯಲಾರರು ಎಂದರು.ಸಾನಿಧ್ಯ ವಹಿಸಿ ಮಾತನಾಡಿದ ಬುರಣಾಪುರ ಸಿದ್ದಾರೂಢ…

Read More

ವಿಜಯಪುರ: ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸಾಯಿಟಿಯ 34ನೇ ರಾಷ್ಟ್ರೀಯ ಸಮ್ಮೇಳನ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ನವೆಂಬರ್ 1 ಬುಧವಾರದಿಂದ ನವೆಂಬರ್ 3ರ ಶುಕ್ರವಾರದ ವರೆಗೆ ನಡೆಯಿತು.ರಾಷ್ಟ್ರೀಯ ಶರೀರಕ್ರಿಯಾ ಶಾಸ್ತ್ರಜ್ಞರ ಸೊಸೈಟಿಯ ಈ ಸಮ್ಮೇಳನವನ್ನು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೊಧನಾ ಕೇಂದ್ರದ ಶರೀರ ಕ್ರಿಯಾ ಶಾಸ್ತ್ರ ವಿಭಾಗ ಆಯೋಜಿಸಿತ್ತು.ಸಮ್ಮೆಳನದ ಮೊದಲ ದಿನ ನಿರಂತರ ವೈದ್ಯಕೀಯ ಶಿಕ್ಷಣ ಹಾಗೂ ಕಾರ್ಯಾಗಾರವನ್ನು ನಡೆಯಿತು. ಈ ಕಾರ್ಯಾಗಾರದಲ್ಲಿ ಆರೋಗ್ಯ ಮತ್ತು ದು:ಖಸ್ಥಿತಿ ಶಾರೀರಿಕ ಶಾಸ್ತ್ರ- ಇತ್ತಿಚಿನ ಪ್ರವೃತ್ತಿ ಹಾಗೂ ಪ್ರಗತಿಗಳು ಎಂಬುದು ಧ್ಯೇಯ ವಾಕ್ಯದಡಿ ನಡೆದ ಗೋಷ್ಠಿಗಳಲ್ಲಿ ಆರು ಪರಿಣಿತ ವೈದ್ಯರು ಆಯ್ದ ವಿಷಯಗಳ ಮೇಲೆ ತಮ್ಮ ವಿಚಾರಗಳನ್ನು ಮಂಡಿಸಿದರು. ಮಧ್ಯಾಹ್ನ ನುರಿತ ಯೋಗಪಟುಗಳು ಮತ್ತು ನೋಂದಾಯಿತ ಅಭ್ಯರ್ಥಿಗಳಿಂದ ಯೋಗಾಸನದ ನಾನಾ ಭಂಗಿಗಳು ಹಾಗೂ ಧ್ಯಾನದ ಕುರಿತು ಪ್ರಾತ್ಯಕ್ಷಿಕೆ ನಡೆಯಿತು.ಸಮ್ಮೇಳನದ ಎರಡನೇ ಮತ್ತು ಮೂರನೇ ದಿನ ನಡೆದ ಮುಖ್ಯ ಸಮ್ಮೇಳನವನ್ನು ಸಮ್ಮೆಳನದಲ್ಲಿ ಶರೀರಕ್ರಿಯಾಶಾಸ್ತ್ರ: ಪ್ರಯೋಗಶಾಸ್ತ್ರದಿಂದ…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರ ಅಧ್ಯಯನಕ್ಕೆ ಹಾಸನಕ್ಕೆ ತೆರಳಿರುವುರಲ್ಲಿ ನಮ್ಮ ತಕರಾರು ಇಲ್ಲ. ಕೇಂದ್ರ ಸರ್ಕಾರದ ಬಳಿ ಕೇಳಿ ನಮಗೆ ಪರಿಹಾರ ಕೊಡಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಈ ಕುರಿತು ಮಂಗಳವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬರ ಅಧ್ಯಯನವನ್ನು ಕೇಂದ್ರದ ತಂಡ ನಡೆಸಿ ಹೋಗಿದ್ದಾರೆ. ಕೇಂದ್ರ ಸರ್ಕಾರಕ್ಕೆಅವರಿನ್ನೂ ವರದಿ ನೀಡಿಲ್ಲ. ಬಿಜೆಪಿ ಯವರು ರಾಜಕಾರಣ ಮಾಡಲು ಅಧ್ಯಯನ ಮಾಡುತ್ತೇವೆ ಎನ್ನುತ್ತಿದ್ದಾರೆ. ಕೇಂದ್ರ ಸರ್ಕಾರದ ಬಳಿ ಕೇಳಿ ನಮಗೆ ಪರಿಹಾರ ಕೊಡಿಸಲಿ. ಅದನ್ನು ಬಿಟ್ಟು ಅಧ್ಯಯನ ಮಾಡುತ್ತೇವೆ ಎನ್ನುತ್ತಾರೆ. ಮಾಡಲಿ, ನಮ್ಮ ತಕರಾರು ಇಲ್ಲ ಎಂದು ಹೇಳಿದರು.ಕೇಂದ್ರ ಸರ್ಕಾರಕ್ಕೆ 17900 ಕೋಟಿ ರೂ ಗಳ ಪರಿಹಾರ ಕೊರಲಾಗಿದೆ. ರಾಜ್ಯದಲ್ಲಿ ಸುಮಾರು 33, 700 ಕೋಟಿ ನಷ್ಟವಾಗಿದೆ. ರೈತರು ಹಾಗೂ ಕರ್ನಾಟಕದ ಬಗ್ಗೆ ಕಾಳಜಿ ಇದ್ದರೆ ಬಿಜೆಪಿ ಪರಿಹಾರ ಕೊಡಿಸಲಿ ಎಂದರು. 25 ಬಿಜೆಪಿ ಸಂಸದರು ಪರಿಹಾರ ಕೊಡಿಸುವುದನ್ನು ಮೊದಲು ಮಾಡಲಿ. ನಮ್ಮ ಮಂತ್ರಿಗಳಿಗೆ ಸಂಬಂಧ ಪಟ್ಟ ಸಚಿವರು ಬಿಜೆಪಿಗೆ…

Read More

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ವಿವೇಕಾನಂದ ಎಚ್ ಕೆ, ಬೆಂಗಳೂರು ಹುಲಿ ಉಗುರು, ಆನೆ ದಂತ, ನವಿಲು ಗರಿ, ಜಿಂಕೆ – ಹುಲಿಯ ಚರ್ಮ, ಮೀನಿನ ವಾಸ್ತು, ಹಾವಿನ ವಿಷ, ಸಾರಂಗದ ಕೊಂಬು, ಆನೆ – ಕರಡಿಯ ಕೂದಲು ಹೀಗೆ ಕೆಲವು ಸಂರಕ್ಷಿತ ಪ್ರಾಣಿಗಳ ವಸ್ತುಗಳನ್ನು ಉಪಯೋಗಿಸುವ ಖಯಾಲಿ..ಪ್ರಕೃತಿಯ ಮಡಿಲಿನ ರಾಷ್ಟ್ರಕವಿ ಕುವೆಂಪು ಒಂದು ಕಡೆ ಹೇಳುತ್ತಾರೆ ” ಹೂವು ಬಳ್ಳಿಗೆ ಅಲಂಕಾರವೇ ಹೊರತು ವಿಗ್ರಹಕ್ಕಲ್ಲ”. ಹಾಗೆಯೇ ವಚನಕಾರ ಅಂಬಿಗರ ಚೌಡಯ್ಯ ಒಂದು ವಚನದಲ್ಲಿ ಹೇಳುವ ಸಾರಾಂಶ ಹೀಗಿದೆ..”ಆರೈಕೆಗೆ ಬಿತ್ತಿದ ಗಿಡದ ಹೂವನ್ನು ಕೊಯ್ದು, ಊರಿನವರು ಬಾಯಾರಿಕೆಗಾಗಿ ಕಟ್ಟಿಸಿದ ಕೆರೆಯ ನೀರನ್ನು ತಂದು, ನಾಡಿನ ಜನರೆಲ್ಲ ನೋಡಲಿ ಎಂದು ಆಡಂಬರಕ್ಕಾಗಿ, ಬಹಿರಂಗವಾಗಿ ಪೂಜೆ ಮಾಡುವುದು ತಪ್ಪು. ಹಾಗೆ ಪೂಜೆ ಮಾಡುವುದರಿಂದ ಅದರ ಪುಣ್ಯ ಹೂವಿಗೋ, ನೀರಿಗೋ ಅಥವಾ ಪೂಜಿಸಿದ ಮನುಷ್ಯನಿಗೋ ನನಗಂತೂ ಗೊತ್ತಿಲ್ಲ. ನಿನಗಾದರೂ ಗೊತ್ತಿದ್ದರೆ ಹೇಳು ಎಂದು ಅಂಬಿಗರ ಚೌಡಯ್ಯ ತನ್ನ ಇಷ್ಟ ದೈವವನ್ನು ಕೇಳುತ್ತಾರೆ “ಆದರೆ ಈ ಮೂರ್ಖ…

Read More

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗರಾಗಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿದ್ದು, ಗೌಪ್ಯ ಸಭೆ ನಡೆಸಿದ್ದಾರೆ.ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ಅವರ ಸರ್ಕಾರಿ ನಿವಾಸದಲ್ಲಿ ನಡೆದಿರುವ ಈ ಸಭೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ವಿಶೇಷವಾಗಿ ಕಾಂಗ್ರೆಸ್‌ನಲ್ಲಿ ಊಹಾಪೋಹಗಳನ್ನು ಹುಟ್ಟುಹಾಕಿದೆ.ಸಭೆ ಮುಗಿದ ಕೂಡಲೇ ಶಿವಕುಮಾರ್ ನವದೆಹಲಿಗೆ ತೆರಳಿದ್ದಾರೆ. ಈ ಹಿಂದೆ ಜಾರಕಿಹೊಳಿ ತಮ್ಮ ತವರು ಜಿಲ್ಲೆ ಬೆಳಗಾವಿಯಲ್ಲಿ ಶಿವಕುಮಾರ್ ಹಸ್ತಕ್ಷೇಪದ ಬಗ್ಗೆ ತಮ್ಮ ಆಕ್ಷೇಪವನ್ನು ವ್ಯಕ್ತಪಡಿಸಿದ್ದರು. ಜಿಲ್ಲೆಯಲ್ಲಿ ಜಾರಕಿಹೊಳಿ ಕುಟುಂಬದ ಪ್ರಾಬಲ್ಯಕ್ಕೆ ಸವಾಲು ಹಾಕಿ ಲಿಂಗಾಯತ ನಾಯಕಿಯಾಗಿ ಹೊರಹೊಮ್ಮುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಶಿವಕುಮಾರ್ ನೀಡಿದ ಪ್ರಾಮುಖ್ಯತೆ ಮತ್ತು ಬೆಂಬಲದಿಂದ ಪಿಡಬ್ಲ್ಯೂಡಿ ಸಚಿವರು ಅಸಮಾಧಾನಗೊಂಡಿದ್ದರು.ಇತ್ತೀಚೆಗೆ ಶಿವಕುಮಾರ್ ಬೆಳಗಾವಿಗೆ ಆಗಮಿಸಿದಾಗ ಅವರಿಗೆ ಸ್ವಾಗತ ಕೋರುವ ಕಾರ್ಯಕ್ರಮದಿಂದಲೂ ಸತೀಶ್ ಜಾರಕಿಹೊಳಿ ಹೊರಗುಳಿದಿದ್ದರು. ಅಲ್ಲದೇ, ಶಿವಕುಮಾರ್ ಅವರನ್ನು ಹೊರಗಿಟ್ಟು ಸಿಎಂ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಡಿನ್ನರ್ ಮೀಟ್‌ನಲ್ಲಿ ಹಾಜರಾಗಿದ್ದರು.…

Read More

ಸಿಂದಗಿ: ಹೃದಯಕ್ಕೆ ರಕ್ತದ ಹರಿವು ಕಡಿಮೆಯಾದಾಗ ಅಥವಾ ಕೊನೆಗೊಂಡಾಗ ಹೃದಯಾಘಾತ ಸಂಭವಿಸುತ್ತದೆ ಎಂದು ಹೃದಯ ರೋಗ ತಜ್ಞ ಡಾ.ಗೌತಮ ವಗ್ಗರ ಹೇಳಿದರು.ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಮಹಾ ಶಿವಯೋಗಿಗಳ 83 ನೇ ಪುಣ್ಯಸ್ಮರಣೋತ್ಸವದ ಹಾಗೂ ಜಾತ್ರಾ ಮಹೋತ್ಸವದ ನಿಮಿತ್ಯ ಎಮ್ಮಿಗನೂರು ಜಡೆಸಿದ್ದೇಶ್ವರ ಮಹಾ ಶಿವಯೋಗಿಗಳ ಪ್ರವಚನದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ಹೃದಯಕ್ಕೆ ಆಮ್ಲಜನಕ-ಸಮೃದ್ಧ ರಕ್ತದ ಕೊರತೆಯು ಪೀಡಿತ ಪ್ರದೇಶಕ್ಕೆ ಹಾನಿಯನ್ನು ಉಂಟುಮಾಡಬಹುದು. ಪರಿಣಾಮವಾಗಿ, ಹೃದಯ ಸ್ನಾಯು ಕ್ಷೀಣಿಸಲು ಪ್ರಾರಂಭಿಸುತ್ತದೆ.ನಿಮ್ಮ ಹೃದಯವು ಸರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ರಕ್ತ ಮತ್ತು ಆಮ್ಲಜನಕವನ್ನು ಪಡೆಯದಿದ್ದರೆ, ನೀವು ಹೃದಯ ವೈಫಲ್ಯ ಮತ್ತು ಇತರ ಹಾನಿಕಾರಕ ಪರಿಣಾಮಗಳನ್ನು ಪಡೆಯುವ ಸಾಧ್ಯತೆ ಹೆಚ್ಚು.ಹೃದಯಾಘಾತವು ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ತೀವ್ರವಾದ ವೈದ್ಯಕೀಯ ತುರ್ತುಸ್ಥಿತಿಯಾಗಿದೆ. ನಿಮ್ಮ ಹೃದಯದ ರಕ್ತದ ಹರಿವನ್ನು ಸಹಜ ಸ್ಥಿತಿಗೆ ತರಲು ನೀವು ಎಷ್ಟು ಬೇಗನೆ ಚಿಕಿತ್ಸೆಯನ್ನು ಪಡೆಯುವ, ಯಶಸ್ವಿ ಶಸ್ತ್ರಚಿಕಿತ್ಸೆ ಹೊಂದುವ ಸಾಧ್ಯತೆಗಳು ಉತ್ತಮವಾಗಿರುತ್ತದೆ. ಯುವ ಜನತೆ ದುಶ್ಚಟಗಳಿಂದ ದೂರವಿದ್ದು ಆರೋಗ್ಯವಂತರಾಗಿ ಬಾಳಬೇಕು ಎಂದು…

Read More

ಅಧಿಕಾರಿಗಳ ಅಸಮರ್ಪಕ ನಿರ್ವಹಣೆಗೆ ಬೇಸತ್ತ ಶಾಸಕ ಯಶವಂತರಾಯಗೌಡ ಎಚ್ಚರಿಕೆ! ವಿಜಯಪುರ: ಇಂಡಿ ಮತಕ್ಷೇತ್ರದ ಕೆರೆ ಮತ್ತು ಕಾಲುವೆಗಳಿಗೆ ನೀರು ಹರಿಸದಿದ್ದರೆ ರಾಜೀನಾಮೆ ನೀಡುವುದಾಗಿ ಇಂಡಿ ಆಡಳಿತಾರೂಢ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ವಿ. ಪಾಟೀಲ ಎಚ್ಚರಿಕೆ ನೀಡಿದ್ದಾರೆ.ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಯೋಜನೆಗಳಡಿ ಇಂಡಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಭೌತಿಕವಾಗಿ ಕಾಮಗಾರಿಗಳು ಮುಗಿದಿವೆ.  ಆದರೆ, ಈ ಯೋಜನೆಗಳು ಪೂರ್ಣಗೊಂಡು 22 ವರ್ಷಗಳು ಕಳೆದರೂ ಈವರೆಗೂ ಕಾಲುವೆಯ ಟೇಲ್ ಎಂಡ್(ಕೊನೆಯ ತುದಿ) ವರೆಗೂ ನೀರು ಹರಿಯುತ್ತಿಲ್ಲ. ಈಗ ಭೀಕರ ಬರ ಎದುರಾಗಿರುವ ಹಿನ್ನಲೆಯಲ್ಲಿ ರೈತರು, ಜನ, ಜಾನುವಾರುಗಳು ಸಂಕಷ್ಟದಲ್ಲಿದ್ದಾರೆ. ಅಧಿಕಾರಿಗಳ ವೈಫಲ್ಯದಿಂದಾಗಿ ನೀರು ಬರುತ್ತಿಲ್ಲ.  ಕೂಡಲೇ ನೀರು ಹರಿಸದಿದ್ದರೆ ಅಧಿಕಾರದಲ್ಲಿದ್ದರೂ ಪ್ರಯೋಜನವಿಲ್ಲ. ಹೀಗಾಗಿ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿ ಆಗಿರಬೇಕು. ಜನರ ಆಶಯಗಳನ್ನು ಈಡೇರಿಸಲು ಆಗದಿದ್ದರೆ ರಾಜಕೀಯ ನಿವೃತ್ತಿಯಾಗಬೇಕು ಅಥವಾ ರಾಜಿನಾಮೆ‌ ನೀಡಬೇಕು. ಇಂಡಿ ಮತಕ್ಷೇತ್ರದ ಕಟ್ಟ ಕಡೆಯ ರೈತರಿಗೆ ನೀರು ಸಿಗುತ್ತಿಲ್ಲ. ಜನರಿಗೆ ನೀರು…

Read More