Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರ: ಭಾರತ ಸರ್ಕಾರ, ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕೇಂದ್ರ ಸಂವಹನ ಇಲಾಖೆ, ವಿಜಯಪುರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೆಹರು ಯುವ ಕೇಂದ್ರ, ವಿಜಯಪುರ ಇವರುಗಳ ಸಹಯೋಗದಲ್ಲಿ ನಗರದ ಪಿ ಡಿ ಜೆ ಪದವಿ ವೂರ್ವ ಮಹಾವಿದ್ಯಾಲಯದಲ್ಲಿ ನವೆಂಬರ್ ೦೮ ರಿಂದ ೧೦ರವರೆಗೆ ಸ್ವಚ್ಛ ಭಾರತ, ಏಕ ಭಾರತ ಶ್ರೇಷ್ಠ ಭಾರತ, ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ, ಕೇಂದ್ರ ಸರ್ಕಾರದ ಯೋಜನೆಗಳು, ಪ್ರಧಾನಮಂತ್ರಿಯವರ ದೂರದರ್ಶಿತ್ವ-೨೦೪೭, ವೋಕಲ್ ಪಾರ್ ಲೋಕಲ್ ಹಾಗೂ ಇತರೆ ಯೋಜನೆಗಳ ಕುರಿತ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಉದ್ಘಾಟನಾ ಕಾರ್ಯಕ್ರಮವನ್ನು ನವೆಂಬರ್ ೮ರಂದು ಬೆಳಗ್ಗೆ ೧೦:೩೦ಕ್ಕೆ ಏರ್ಪಡಿಸಲಾಗಿದೆ. ವಿಜಯಪುರ ಸಂಸದರಾದ ರಮೇಶ್ ಜಿಗಜಿಣಗಿ ಅವರು ಕರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭಾಗವಹಿಸಲಿದ್ದು, ವಿವಿಧ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯಪುರ: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ನವೆಂಬರ್ ೯ ರಂದು ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಾ ಕೇಂದ್ರದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯಲಿದೆ.ಅಂದು ಬೆಳಿಗ್ಗೆ ೧೦-೩೦ ಗಂಟೆಯಿಂದ ಪೋಲಿಸ್ ಅಧೀಕ್ಷಕರು (ಮೊ:೯೩೬೪೦೬೨೫೨೮), ಪೊಲೀಸ್ ಉಪಾಧೀಕ್ಷಕರು (ಮೊ:೯೩೬೪೦೬೨೫೫೭), ಪೊಲೀಸ್ ಇನ್ಸಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್ಸಪೆಕ್ಟರ್-೨(ಮೊ:೯೩೬೪೦೬೨೬೩೯) ದೇವರ ಹಿಪ್ಪರಗಿಯ ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿಯಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡಿವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ, ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದ್ದು, ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಸ್ಥಳೀಯ ಅಧಿಕಾರಿಗಳ ಸಹಕಾರದೊಂದಿಗೆ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಸಂಪಾದನೆ ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರ ದೂರುಗಳಿದ್ದಲ್ಲಿ ಹೆಚ್ಚಿನ ಮಾಹಿತಿಗಾಗಿ ಲೋಕಾಯುಕ್ತ…
ನೀರು ಪೋಲು ಮಾಡದೆ ಕೆಬಿಜೆಎನ್ನೆಲ್ ಅಧಿಕಾರಿಗಳೊಂದಿಗೆ ಸಹಕರಿಸಲು ಮನವಿ ವಿಜಯಪುರ: ನೀರಾವರಿ ಬಳಕೆಗಾಗಿ ಲಭ್ಯವಾಗಬಹುದಾದ ನೀರಿನ ಪ್ರಮಾಣ ಕೇವಲ ೫ ಟಿ.ಎಂ.ಸಿ. ಮಾತ್ರ ಇದ್ದು, ಲಭ್ಯವಾಗುವ ನೀರಿನ ಪ್ರಮಾಣವು ಸಹ ಭಾಷ್ಪಿಕರಣಗೊಳ್ಳುವ ಸಂಭವನೀಯತೆ ಇರುವುದರಿಂದ ಅಗತ್ಯವಿರುವ ೭೫ ಟಿಎಂಸಿ ನೀರು ಲಭ್ಯವಿಲ್ಲದೇ ಇರುವುದರಿಂದ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು ಪೂರೈಸಲು ಸಾಧ್ಯವಾಗುವುದಿಲ್ಲವೆಂದು ತೀರ್ಮಾನಿಸಲಾಯಿತು.ಮಂಗಳವಾರ ಆಲಮಟ್ಟಿಯಲ್ಲಿ ಅಬಕಾರಿ ಖಾತೆ ಸಚಿವರೂ ಆದ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಆರ್.ಬಿ.ತಿಮ್ಮಾಪುರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ಸಧ್ಯ ಚಾಲ್ತಿಯಲ್ಲಿರುವ ವೇಳಾಪಟ್ಟಿಯಂತೆ ದಿನಾಂಕ : ೧೮-೧೧-೨೦೨೩ರ ವರೆಗೆ ಕಾಲುವೆ ಜಾಲಕ್ಕೆ ನೀರು ಪೂರೈಸುವುದನ್ನು ಚಾಲ್ತಿಯಲ್ಲಿಡಲಾಗುವುದು. ತದನಂತರ, ದಿನಾಂಕ : ೧೯-೧೧-೨೦೨೩ ರಿಂದ ೨೬-೧೧-೨೦೨೩ರವರೆಗೆ ೮ ದಿನ ಕಾಲುವೆ ಜಾಲಕ್ಕೆ ನೀರು ಪೂರೈಸುವುದನ್ನು ಸ್ಥಗಿತಗೊಳಿಸಲಾಗುವುದು. ತದನಂತರ, ದಿನಾಂಕ : ೨೭-೧೧-೨೦೨೩ ರಿಂದ ೦೪-೧೨-೨೦೨೩ರವರೆಗೆ ೮ ದಿನಗಳಿಗೆ…
ಮುದ್ದೇಬಿಹಾಳ : ಸರಿಯಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ಬೇಸರಗೊಂಡ ರೈತನೋರ್ವ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ತಾಲೂಕಿನ ಢವಳಗಿ ಗ್ರಾಮದಲ್ಲಿ ನಡೆದಿದೆ.ತಾಲೂಕಿನ ಆಲಕೊಪ್ಪರ ಗ್ರಾಮದ ರಾಮನಗೌಡ ಬಿರಾದಾರ ಆತ್ಮಹತ್ಯೆಗೆ ಪ್ರಯತ್ನಿಸಿದ ವ್ಯಕ್ತಿ. ಮೂಲತಃ ರೈತಾಪಿ ಕುಂಟುಂಬದಿಂದ ಬಂದಿದ್ದ ಈತನ ಉದ್ಯೋಗ ಒಕ್ಕಲುತನ. ತನ್ನ ಜಮೀನುಗಳನ್ನೇ ನಂಬಿ ಸಾಗುವಳಿ ಮಾಡಿಕೊಂಡು ಬದುಕು ನಡೆಸುತ್ತಿರುವ ಈತನಿಗೆ ಕಳೆದ ಕೆಲವು ದಿನಗಳಿಂದ ಸರಿಯಾಗಿ ವಿದ್ಯುತ್ ಪೂರೈಕೆಯಾಗದ ಹಿನ್ನೆಲೆಯಲ್ಲಿ ತನ್ನ ಕುಂಟುಂಬವನ್ನು ಸಲಹುವುದು ಹೇಗೆ ಎಂಬ ಚಿಂತೆಯಲ್ಲಿ ಆತ್ಮಹತ್ಯೆಯೇ ಪರಿಹಾರವೆಂದು ಇಲ್ಲಿಗೆ ಬಂದಿರುವದಾಗಿ ಸ್ವತಃ ತಾನೇ ಹೇಳಿಕೊಂಡಿದ್ದಾನೆ.ತಮಗೆ ವಿದ್ಯತ್ ಪೂರೈಸುವ ಢವಳಗಿಯ ಕೆಇಬಿಯಲ್ಲಿನ ವಿದ್ಯುತ್ ಲೈನ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ್ದು ಕೆಇಬಿ ಸಿಬ್ಬಂದಿ ಈತನನ್ನು ಅನಾಹುತದಿಂದ ತಪ್ಪಿಸಿ ೧೧೨ ಮೂಲಕ ಪೊಲೀಸರಿಗೆ ತಿಳಿಸಿದ್ದು ೧೧೨ ಸಿಬ್ಬಂದಿ ಮುದ್ದೇಬಿಹಾಳ ಠಾಣೆಗೆ ಒಪ್ಪಿಸಿದ್ದಾರೆ.
ಮುದ್ದೇಬಿಹಾಳ: ತಾಲೂಕಿನ ಮಲಗದಿನ್ನಿ ಕೆರೆ ತುಂಬುವಂತೆ ಮತ್ತು ಕೆರೆಗೆ ಕಾಲುವೆ ಮೂಲಕ ಬರುವ ನೀರನ್ನು ತಡೆಹಿಡಿದಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಯುವಜನಸೇನೆಯ ಪದಾಧಿಕಾರಿಗಳು ಕೆಬಿಜೆಎನ್ಎಲ್ ನ ಎಎಲ್ಬಿಸಿಯ ಇಇ ರಾಮನಗೌಡ ಹಳ್ಳೂರ ಮತ್ತು ತಹಶೀಲ್ದಾರಗೆ ಮನವಿ ಪತ್ರ ಸಲ್ಲಿಸಿದರು.ಈ ವೇಳೆ ಸಂಘಟನೆಯ ತಾಲೂಕು ಸಂಚಾಲಕ ಮುತ್ತು ಟಕ್ಕಳಕಿ ಮಾತನಾಡಿ, ಕೆರೆ ತುಂಬುವ ಯೋಜನೆಯಡಿ ಮಲಗಲದಿನ್ನಿ ಕೆರೆಗೆ ವರ್ಷದಲ್ಲಿ ನಾಲ್ಕು ತಿಂಗಳು ನೀರು ಹರಿಸಬೇಕೆನ್ನುವ ನಿಯಮ ಇದೆ. ಆದರೆ ಈ ನಿಯಮ ಪಾಲನೆಯಾಗುತ್ತಿಲ್ಲ. ಕಾಲುವೆ ಮೂಲಕ ನೀರು ತುಂಬಿದರೂ ಕೆರೆಗ ಸೇರುತ್ತಿಲ್ಲ. ಕವಡಿಮಟ್ಟಿ ಮಾರ್ಗವಾಗಿ ಹಾಯ್ದು ಹೋಗಿರುವ ಮುಖ್ಯ ಕಾಲುವೆ ಮುಂದೆ ಮಲಗಲದಿನ್ನಿ ಕೆರೆಗೆ ಸೇರುತ್ತದೆ. ಕಾಲುವೆಯ ನೀರನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ತಡೆದಿದ್ದು ಮುಂದೆ ನೀರು ಬಾರದೇ ಇತ್ತ ಕೆರೆಯೂ ಸೇರದೇ ಪಟ್ಟಭದ್ರರಿಗೆ ಮಾತ್ರ ಉಪಯೋಗವಾಗುತ್ತಿದೆ. ಹಲವು ರೈತರು ಸೇರಿ ನೀರನ್ನು ತಡೆಹಿಡಿಯದಂತೆ ಮನವಿ ಮಾಡಲು ಹೋದಾಗ ಹಲ್ಲೆಗೆ ಮುಂದಾಗುತ್ತಾರೆ. ನೀರನ್ನು ತಡೆಹಿಡಿಯುವುದು ಸಂಪೂರ್ಣ ಕಾನೂನು ಬಾಹಿರವಾಗಿದ್ದು ತಪ್ಪಿತಸ್ಥರ ಮೇಲೆ…
ಹಿಂಗಾರು ಹಂಗಾಮಿಗೆ ಮಾರ್ಚ್ ಅಂತ್ಯದವರೆಗೂ ನೀರು ಹರಿಸಲು ರೈತರ ಒತ್ತಾಯ ಆಲಮಟ್ಟಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಐಸಿಸಿ ಸಭೆ ನಡೆಯುವ ಆಲಮಟ್ಟಿಯ ಕೆಬಿಜೆಎನ್ ಎಲ್ ಎಂಡಿ ಕಚೇರಿ ಎದುರು ಬೆಳಿಗ್ಗೆಯಿಂದಲೇ ಬೇರೆ ಬೇರೆ ಭಾಗದಿಂದ ಬಂದಿದ್ದ ನೂರಾರು ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.ಕಾಲುವೆಯ ಕೊನೆಯ ಭಾಗದವರೆಗೂ ನೀರು ಹರಿಸಬೇಕು, ಹಿಂಗಾರು ಹಂಗಾಮಿಗೆ ಮಾರ್ಚ್ ಅಂತ್ಯದವರೆಗೂ ನೀರು ಹರಿಸಬೇಕು ಎಂಬುದೇ ಬಹುತೇಕ ರೈತರ ಬೇಡಿಕೆಯಾಗಿತ್ತು.ಹಿಂಗಾರಿಗೆ ನೀರಿಲ್ಲ ಎಂದು ತಿರ್ಮಾನವಾದೊಡನೆ ಶಾಂತವಾಗಿದ್ದ ರೈತರು ಕೆಬಿಜೆಎನ್ ಎಲ್ ಎಂಡಿ ಕಚೇರಿಯ ಸಭಾಂಗಣದ ಗೇಟ್ ಹೊರಕ್ಕೆ ಯಾದಗೀರದಿಂದ ಬಂದಿದ್ದ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಅಧಿಕಾರಿಗಳನ್ನು ಹೊರಕ್ಕೆ ಬಿಡಲಿಲ್ಲ.ಸಚಿವ ಆರ್.ಬಿ. ತಿಮ್ಮಾಪುರ ಅವರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಪೊಲೀಸರು ಮಧ್ಯಪ್ರವೇಶಿಸಿ ಅವರ ವಾಹನ ಹೊರಬಿಟ್ಟರು. ಆದರೆ ನಂತರ ಕೆಬಿಜೆಎನ್ ಎಲ್ ಅಧಿಕಾರಿಗಳನ್ನು ಸಭೆ ನಡೆಯುವ ಹೊರ ಗೇಟ್ ನಲ್ಲಿ ರೈತರು ಹೊರ ಹೋಗದಂತೆ ತಡೆಗಟ್ಟಿದರು.ಜೇವರ್ಗಿ ರೈತರ ಪ್ರತಿಭಟನೆ:ಕಲಬುರಗಿ ಜಿಲ್ಲೆಯ ಜೇವರ್ಗಿ, ಕಾಚಾಪುರ,…
ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತಿರ್ಮಾನ :ಸಚಿವ ಆರ್.ಬಿ.ತಿಮ್ಮಾಪುರ ಆಲಮಟ್ಟಿ: ನೀರಿನ ಕೊರತೆಯಿಂದಾಗಿ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು ಪೂರೈಸಲು ಸಾಧ್ಯವಾಗುವುದಿಲ್ಲ. ಅಚ್ಚುಕಟ್ಟು ಪ್ರದೇಶದ ರೈತರು ಸಹಕರಿಸಬೇಕು ಎಂದು ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು.ಆಲಮಟ್ಟಿಯ ಕೃಷ್ಣಾ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ೨೦೨೩-೨೪ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಹಿಂಗಾರು ಹಂಗಾಮಿಗೆ ೨೦೨೩-೨೪ನೇ ಸಾಲಿನಲ್ಲಿ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆ.೧೪ರಂದು ಕ್ಷೀಣವಾಗಿದ್ದು, ಅ.೧೫ರಂದು ಸಂಪೂರ್ಣ ಸ್ಥಗಿತವಾಗಿದೆ. ಡಿ.೫ರಂದು ಅಲಮಟ್ಟಿ ಜಲಾಶಯದ ಮಟ್ಟ ಅಂದಾಜು ೫೧೩.೦೦ ಮೀಟರ್ ಎತ್ತರದಲ್ಲಿ ೫೦ ಟಿಎಂಸಿ ನೀರು ಇರಬಹುದಾಗಿದೆ. ಇದರಲ್ಲಿ ಜೀವಜಲ ೩೨ ಟಿಎಂಸಿ ಹಾಗೂ ನಾರಾಯಣಪುರ ಜಲಾಶಯದ ಜೀವಜಲ ೧೨ ಟಿಎಂಸಿ ಒಟ್ಟು ೪೪ ಟಿಎಂಸಿ ಜೀವಜಲ ಲಭ್ಯವಾಗಬಹುದು ಎಂದರು.ಡಿ.೫ರಿಂದ ೨೦೨೪ರ ಜು.೩೦ವರೆಗೆ ಕುಡಿವ ನೀರು, ಕೆರೆಗಳನ್ನು ತುಂಬುವುದು,…
ಜಯ್ ನುಡಿ (ವ್ಯಕ್ತಿತ್ವ ವಿಕಸನ ಮಾಲೆ) ಜಯಶ್ರೀ ಜೆ ಅಬ್ಬಿಗೇರಿಆಂಗ್ಲ ಭಾಷಾ ಉಪನ್ಯಾಸಕರುಸ ಪ ಪೂ ಕಾಲೇಜು, ಹಿರೇಬಾಗೇವಾಡಿ, ಜಿ: ಬೆಳಗಾವಿ, ೯೪೪೯೨೩೪೧೪೨ ಉತ್ಸಾಹ ಮಲಗಿಸಿಕೊಡುವದಿಲ್ಲ. ಆಲಸ್ಯ ಏಳಿಸಿಕೊಡುವದಿಲ್ಲ. ಎನ್ನುವ ಗಾದೆ ಮಾತು ನಿತ್ಯ ಜೀವನದಲ್ಲಿ ಅದೆಷ್ಟು ಸತ್ಯ ಎನಿಸುತ್ತದೆ. ಉತ್ಸಾಹ ನಮ್ಮ ಜೀವನಕ್ಕೆ ಪೆಟ್ರೊಲ್ ಇದ್ದಂತೆ ನಂದಾ ದೀಪದಂತೆ ಉರಿಯುವ ದೀಪಕ್ಕೆ ಆಲಸ್ಯತನವು ಬಿರುಗಾಳಿಯಿದ್ದಂತೆ. ಪ್ರತಿಯೊಂದಕ್ಕೂ ಗೊಣಗುಡುವ ನಮ್ಮ ಚಟಕ್ಕೆ ಮೂಲ ಕಾರಣ ಯಾವುದರಲ್ಲಿಯೂ ಉತ್ಸಾಹ ಇಲ್ಲದಿರುವದೇ ಆಗಿದೆ.ನಿರುತ್ಸಾಹವು ಅನೇಕ ಸಮಸ್ಯೆಗಳನ್ನು ಸಾಲು ಸಾಲಾಗಿ ನಮ್ಮೆದುರಿಗೆ ನಿಲ್ಲಿಸುತ್ತದೆ. ಎನ್ನುವದು ಗೊತ್ತಿದ್ದರೂ ಗಡಿಬಿಡಿಯ ಆಧುನಿಕ ಜೀವನದ ಶೈಲಿಯಲ್ಲಿ ನಿರುತ್ಸಾಹವು ನಮ್ಮಲ್ಲಿ ಮನೆಮಾಡುತ್ತಿದೆ. ಉತ್ಸಾಹವನ್ನು ಕಳೆದುಕೊಂಡರೆ ಜೀವನದ ಪಯಣವು ಮಕರಂದವನ್ನು ಕಳೆದುಕೊಂಡ ದುಂಬಿಯಂತಾಗುತ್ತದೆ. ನಾವಿಡುವ ಪ್ರತಿಯೊಂದು ಹೆಜ್ಜೆಯೂ ಭಾರವೆನಿಸುವ ಭಾವ ಹುಟ್ಟಿಸುತ್ತದೆ. ನೀರಸತೆಗೆ ಕಾರಣವಾಗುವ ನಿರುತ್ಸಾಹವನ್ನು ತೊರೆದು ಚಿಲುಮೆಯಂತೆ ಚಿಮ್ಮುವ ಉತ್ಸಾಹವನ್ನು ಅಪ್ಪಿಕೊಂಡು ಸಾಗುವದೇ ಜೀವಂತಿಕೆಯ ಲಕ್ಷಣ.“ಜೀವನವನ್ನು ರಸಮಯಗೊಳಿಸುವ ಮೂಲಧಾತುವೇ ಉತ್ಸಾಹ. ಸದಾ ಕ್ರಿಯಾಶೀಲವಾಗಿಸುವ ಭಾವವೇ ಉತ್ಸಾಹ. ಕಣ್ಣು ಕಂಡು ಕನಸನ್ನು ಬೆನ್ನಟ್ಟಿ…
ಹೊನವಾಡ: ನಮ್ಮ ಜೀವನದಲ್ಲಿ ನಮಗೆ ಯಾವುದೇ ಜ್ಞಾನ ಸಿಕ್ಕರೂ ಅದರ ಸದುಪಯೋಗ ಮಾಡಿಕೊಳ್ಳಬೇಕೆ ಹೋರತು ದುರುಪಯೋಗವಲ್ಲ. ಇಂದಿನ ಯುಗದಲ್ಲಿ ಕಂಪ್ಯೂಟರ್ ಶಿಕ್ಷಣ ವಿದ್ಯಾರ್ಥಿಗಳಿಗೆ ಅತ್ಯವಶ್ಯಕವಾಗಿದೆ ಎಂದು ಬಾಬುರಾವ್ ಮಹಾರಾಜ ತಿಳಿಸಿದರು.ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ ಶ್ರೀ ಬ್ಯಾಳಿ ಬಸವೇಶ್ವರ ದೇವಸ್ಥಾನದಲ್ಲಿ ನಡೆದ ಅಪ್ಪು ಆಕಾಡೆಮಿ ಕಂಪ್ಯೂಟರ್ ತರಬೇತಿ ಕೇಂದ್ರದ ವತಿಯಿಂದ ಸೋಮವಾರ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ನುಡಿ ನಮನ ಮತ್ತು ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕೋರ್ಸ್ ಗಳ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ರೇ ಸಿ ಪಾಟೀಲ್ ಅವರು ಮಾತನಾಡಿ, ಕಂಪ್ಯೂಟರ್ ಶಿಕ್ಷಣ ಎಷ್ಟು ಅವಶ್ಯಕತೆ ಇದೆಯೋ ಅಷ್ಟೇ ಬಳಸಿಕೊಳ್ಳಬೇಕು. ಅನವಶ್ಯಕವಾಗಿ ಬಳಸುವುದರಿಂದ ಮನುಷ್ಯರ ಮೇಲೆ ದುಷ್ಪರಿಣಾಮ ಬೀರುತ್ತವೆ. ಕಂಪ್ಯೂಟರ್ ಶಿಕ್ಷಣ ಅತ್ಯವಶ್ಯಕ, ಅದಕ್ಕಾಗಿ ಎಲ್ಲರೂ ಕಂಪ್ಯೂಟರ್ ಶಿಕ್ಷಣ ಪಡೆದುಕೊಳ್ಳಬೇಕು ಎಂದು ಹೇಳಿದರು.ನಿಂಗರಾಜ್ ಸಿಂಗಾಡಿ ಮಾತನಾಡಿ, ಕಂಪ್ಯೂಟರ್ ಎನ್ನುವುದು ಇಂಟರ್ನೆಟ್ ಸೌಲಭ್ಯದ ಜೊತೆಗೆ ಮಕ್ಕಳು ಶಿಕ್ಷಣದಲ್ಲಿ ಹೊಸ ಕೌಶಲ್ಯ ಮತ್ತು ಸಾಮರ್ಥ್ಯಗಳನ್ನು ಕಲಿಯಲು ಬಳಸಬಹುದಾದ ಅತ್ಯಂತ ಶಕ್ತಿಶಾಲಿ ಸಾಧನವಾಗಿದೆ. ಕೋವಿಡ್…
ದೇವರಹಿಪ್ಪರಗಿ: ಮಹಿಳೆಯರಿಗಾಗಿ ನೀರು, ನೀರಿಗಾಗಿ ಮಹಿಳೆಯರು ಪರಿಕಲ್ಪನೆಯಡಿ ಪಟ್ಟಣ ಪಂಚಾಯಿತಿಯ ಡೇ ನಲ್ಮ್ ವಿಭಾಗದಿಂದ ನ.೯ ರಂದು ಗುರುವಾರ ವಿಶೇಷ ಕಾರ್ಯಕ್ರಮ ಜರುಗಲಿದೆ.ಪಟ್ಟಣ ಪಂಚಾಯಿತಿಯ ಆವರಣದಲ್ಲಿ ಗುರುವಾರ ಬೆಳಿಗ್ಗೆ ೧೦ ಘಂಟೆಗೆ ಚಾಲನೆ ನೀಡಿ ನಂತರ ಪಟ್ಟಣದ ಪಂಪ್ ಹೌಸ್ ನಂತರ ಹರನಾಳ ಗ್ರಾಮದ ಬಹುಹಳ್ಳಿ ಕುಡಿಯುವ ನೀರು ಯೋಜನೆಯ ಶುದ್ಧಿಕರಣ ಘಟಕ ನಂತರ ಬಳಗಾನೂರ ಕೆರೆಗೆ ತೆರಳಲಾಗುವುದು.ಇದು ಜಲಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮವಾಗಿದ್ದು, ಮನೆಗಳಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಪೂರೈಕೆ, ಸಾರ್ವಜನಿಕರು ಉತ್ತಮ ಗುಣಮಟ್ಟದ ನೀರನ್ನು ಪಡೆದುಕೊಳ್ಳಲು ಅನುಸರಿಸುವ ವಿವಿಧ ಪರೀಕ್ಷಾ ಮಾದರಿಯ ಪ್ರಕ್ರಿಯೆಗಳ ಬಗ್ಗೆ ಮಾಹಿತಿಯನ್ನು ತಿಳಿಸುವುದರ ಜೊತೆಗೆ ನೀರಿನ ಮೂಲ ಸೌಕರ್ಯಗಳ ಕುರಿತು ಮಾಲೀಕತ್ವದ ಭಾವನೆಯನ್ನು ಮಹಿಳೆಯರಲ್ಲಿ ತರುವುದಾಗಿದೆ.ಜಲಜಾಗೃತಿ ಕಾರ್ಯಕ್ರಮದಲ್ಲಿ ಪಟ್ಟಣದ ಬಹುತೇಕ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ವಿಗೊಳಿಸಲಿದ್ದಾರೆ ಎಂದು ಮುಖ್ಯಾಧಿಕಾರಿ ಎಲ್.ಡಿ. ಮುಲ್ಲಾ ತಿಳಿಸಿದ್ದಾರೆ
