Author: editor.udayarashmi@gmail.com

ಬಿಜೆಪಿ ರೈತ ಮೊರ್ಚಾ ರಾಜ್ಯ ಕಾರ್ಯದರ್ಶಿ ಸಂಜಯ ಪಾಟೀಲ ಕನಮಡಿ ಆರೋಪ ತಿಕೋಟಾ: ಬಿಜೆಪಿ ಸರ್ಕಾರ ಈ ಹಿಂದೆ ಜಾರಿಗೆ ತಂದ ರೈತ ಪರವಾದ ಯೋಜನೆಗಳಾದ ಕಿಸಾನ್ ಸಮ್ಮಾನ ನಿಧಿ, ರೈತ ವಿದ್ಯಾನಿಧಿ, ಭೂ ಚೇತನ, ಭೂ ಸಿರಿ, ರೈತ ಶಕ್ತಿ, ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್‌ ಸೇರಿದಂತೆ ಅನೇಕ ಯೋಜನೆಗಳನ್ನು ಅನುದಾನದ ಕೊರತೆ ಎಂಬ ನೆಪವೊಡ್ಡಿ ಈಗಿರುವ ಕಾಂಗ್ರೇಸ್ ಸರ್ಕಾರ ರದ್ದು ಮಾಡಿದೆ ಎಂದು ರಾಜ್ಯ ರೈತ ಮೊರ್ಚಾ ಕಾರ್ಯದರ್ಶಿ ಸಂಜಯ ಪಾಟೀಲ ಕನಮಡಿ ಹೇಳಿದರು.ಪಟ್ಟಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರಗಾಲ ಅನಿಯಮಿತ ವಿದ್ಯುತ್‌ ಲೋಡ್ ಶೆಡ್ಡಿಂಗ್‌ನಿಂದ ಕಂಗಾಲದ ರೈತರ ಗಾಯದ ಮೇಲೆ ಬರೆ ಎಳೆದ ಕಾಂಗ್ರೇಸ್ ಸರ್ಕಾರ ಇನ್ನು ಮುಂದೆ ರೈತರ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪಡೆಯಬೇಕಾದರೇ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‌ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್‌ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು, ಇದು ಅತ್ಯಂತ ಖಂಡನೀಯವಾಗಿದೆ. ಈ ಹಿಂದೆ…

Read More

ಬಸವನಬಾಗೇವಾಡಿ: ರಾಷ್ಟ್ರೀಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ನಿರ್ದೇಶನದ ಮೇರೆಗೆ ಅಮೃತ ೨.೦ ಕಾರ್ಯಕ್ರಮದಡಿ ಮಹಿಳೆಯರಿಗಾಗಿ ನೀರು, ನೀರಿಗಾಗಿ ಮಹಿಳೆಯರು ದ್ಯೇಯ ವಾಕ್ಯದಡಿ ಜಲ ದೀಪಾವಳಿ ಕಾರ್ಯಕ್ರಮವನ್ನು ನ. ೯ ರಂದು ನಿಡಗುಂದಿಯ ಡಬ್ಲೂಟಿಪಿ ಘಟಕದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಹೇಳಿದರು.ಪಟ್ಟಣದ ಪುರಸಭೆಯ ತಮ್ಮ ಕಾರ್ಯಾಲಯದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ.೯ ರಂದು ಬೆಳಗ್ಗೆ ೯ ಗಂಟೆಗೆ ಸ್ಥಳೀಯ ವಿವಿಧ ಸ್ವ-ಸಹಾಯ ಸಂಘದಿಂದ ಆಯ್ಕೆ ಮಾಡಲಾದ ೩೦ ಮಹಿಳೆಯರ ತಂಡ, ಪುರಸಭೆಯ ಸದಸ್ಯರನ್ನು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಆಗುವ ನಿಡಗುಂದಿಯ ಡಬ್ಲೂಟಿಪಿ ಘಟಕಕ್ಕೆ ಕರೆದುಕೊಂಡು ಹೋಗಲಾಗುವುದು. ಅಲ್ಲಿ ಮನೆಗಳಿಗೆ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಪೂರೈಕೆಯ ಪ್ರಕ್ರಿಯೆ, ನಾಗರಿಕರು ಉತ್ತಮ ಗುಣಮಟ್ಟದ ನೀರನ್ನು ಪಡೆದುಕೊಳ್ಳಲು ಅನುಸರಿಸುವ ವಿವಿಧ ಪರೀಕ್ಷಾ ಮಾದರಿಯ ಪ್ರಕ್ರಿಯೆಯ ಬಗ್ಗೆ ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿಯನ್ನು ತಿಳಿಸುವ ಜೊತೆಗೆ ನೀರಿನ ಮೂಲ ಸೌಕರ್ಯದ ಬಗ್ಗೆ ಮಾಲೀಕತ್ವದ ಭಾವನೆಯನ್ನು…

Read More

ಮುದ್ದೇಬಿಹಾಳದಲ್ಲಿ ಪುರಸಭೆ ಮತ್ತು ಪೊಲೀಸ್ ಅಧಿಕಾರಿಗಳ ಜಂಟಿ ಕಾರ್ಯಾಚರಣೆ ಮುದ್ದೇಬಿಹಾಳ: ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಎಲ್ಲಂದರಲ್ಲಿ ರಸ್ತೆಗಳನ್ನು ಅನಧಿಕೃತವಾಗಿ ಅತಿಕ್ರಮಿಸಿ ಡಬ್ಬಾ ಅಂಗಡಿಗಳನ್ನಿಟ್ಟುಕೊಂಡು ವ್ಯಾಪಾರ ನಡೆಸುತ್ತ, ವಾಹನ ಸವಾರರಿಗೆ, ಪಾದಾಚಾರಿಗಳಿಗೆ ದಿನಂಪ್ರತಿ ತೊಂದರೆ ನೀಡುತ್ತಿದ್ದವರ ಮೇಲೆ ಪುರಸಭೆ ಮತ್ತು ಪೊಲೀಸ್ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಜಂಟಿಯಾಗಿ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿದರು.ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಕಳೆದ ಕೆಲವು ದಿನಗಳ ಹಿಂದೆಯೇ ಪಟ್ಟಣದಲ್ಲಿ ರಸ್ತೆಯನ್ನು ಅತಿಕ್ರಮಣ ಮಾಡಿದವರು ಸ್ವಯಂ ಪ್ರೇರಿತರಾಗಿ ತೆರವುಗೊಳಿಸುವಂತೆ ಪ್ರಕಟಣೆಯ ಮೂಲಕ ತಿಳಿಸಿದ್ದು, ಪಟ್ಟಣದ ಆಲಮಟ್ಟಿ, ತಂಗಡಗಿ, ಮುಖ್ಯ ಬಜಾರ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಕಾರ್ಯಪ್ರವೃತ್ತರಾಗಿ ರಸ್ತೆಯನ್ನು ಅತಿಕ್ರಮಿಸಿ ತಮ್ಮ ಅನುಕೂಲಕ್ಕಾಗಿ ಸ್ವಲ್ಪ ಮಟ್ಟಿಗೆ ಕಟ್ಟಡ ಮಾಡಿಕೊಂಡು ಹಲವಾರು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದವರನ್ನು ಸೇರಿದಂತೆ ಯಾವ ಪ್ರಭಾವಕ್ಕೂ ಒಳಗಾಗದೇ ತಮ್ಮ ದಿಟ್ಟತನ ತೋರಿದರು.ಈ ವೇಳೆ ಪಿಎಎಸ್‌ಐ ಸಂಜೀವ ತಿಪರೆಡ್ಡಿ ಮಾತನಾಡಿ, ಹಲವು ದಿನಗಳಿಂದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು ಪುರಸಭೆಯವರ ಸಹಕಾರದೊಂದಿಗೆ…

Read More

ವಿಜಯಪುರ: ಕನ್ನಡ ಭಾಷೆಯದ್ದು ಅವಿಚ್ಛಿನ್ನ ಪರಂಪರೆ. ಇದಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಅದ್ಭುತವಾದ ಭವ್ಯ ಪರಂಪರೆ ಹೊಂದಿದೆ. ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವನ್ನು ಇಂದಿನ ಮಕ್ಕಳು ರೂಢಿಸಿಕೊಳ್ಳಬೇಕು ಎಂದು ಮುಖ್ಯಶಿಕ್ಷಕ ಸುರೇಶಗೌಡ ಬಿರಾದಾರ ಹೇಳಿದರು.ಅವರು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ, ಕನ್ನಡ ಭಾಷೆ, ನಾಡು- ನುಡಿ- ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಕನ್ನಡಿಗರು ಜವಾಬ್ದಾರಿ ಹೊತ್ತುಕೊಳ್ಳಬೇಕು. ಅನೇಕ ಮಹನೀಯರು ಕನ್ನಡದ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವುಗಳನ್ನು ಉಳಿಸುವ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು.ಸಂಸ್ಥೆಯ ಕಾರ್ಯದರ್ಶಿ ಸುನಂದಾ ಹುಣಶ್ಯಾಳ,ಶಿಕ್ಷಕರಾದ ರಾಘು ಮೊಗಳ, ಭೀಮಾಶಂಕರ ಕೋರೆ, ಬಸಮ್ಮ ವಡಗೇರಿ, ಜಯಶ್ರೀ ಬಂಗಾರಿ, ಮಧುಮತಿ ನಿಕ್ಕಂ, ಸರೋಜಿನಿ ಕಟ್ಟಿಮನಿ, ರೇಣುಕಾ ಭಜಂತ್ರಿ, ಎಲ್ ಎಂ ಮೇತ್ರಿ ಹಾಗೂ ಸಿಬ್ಬಂದಿಗಳಾದ ವೀರೇಶ ಹುಣಶ್ಯಾಳ,ಸಿದ್ದಣ್ಣ…

Read More

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಠನೆ ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಅವರು ಈ ವಿಷಯ ತಿಳಿಸಿದರು.ರಾಜ್ಯದಲ್ಲಿ ವಿದ್ಯುತ್ ಕೊರತೆಯಿದೆ ಎಂದು ನೀರಾವರಿ ಪಂಪ್‍ಸೆಟ್‍ಗಳಿಗೆ ಏಳು ಗಂಟೆಗಳ ಕಾಲ ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲು ಮೊದಲೇ ಘೋಷಣೆ ಮಾಡಿದ್ದೆವು. ಕೆಲವು ಜನ ಸತತವಾಗಿ ಮೂರು ಫೇಸ್‍ನಲ್ಲಿ 5 ಗಂಟೆ ವಿದ್ಯುತ್ ನೀಡಿದರೆ ಸಾಕು ಎಂದಿದ್ದರು. ಅದಕ್ಕಾಗಿ 5 ಗಂಟೆಗಳ ಕಾಲ 3 ಫೇಸ್‍ನಲ್ಲಿ ವಿದ್ಯುತ್ ನೀಡುವಂತೆ ಸೂಚನೆ ನೀಡಲಾಗಿತ್ತು. ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೈತರು ಭೇಟಿ ಮಾಡಿ ಭತ್ತ ಬೆಳೆಯುವುದರಿಂದ 5 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸಾಕಾಗುವುದಿಲ್ಲ, 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು. ವಿದ್ಯುತ್ ಉತ್ಪಾದನೆಯಲ್ಲಿ ಹೆಚ್ಚಳರಾಯಚೂರು, ಬಳ್ಳಾರಿಯಲ್ಲಿ ಥರ್ಮಲ್ ಘಟಕಗಳಿದ್ದು, ರಾಜ್ಯದಲ್ಲಿ ಥರ್ಮಲ್, ಜಲವಿದ್ಯುತ್, ಸೋಲಾರ್ ಮೂಲಕ ವಿದ್ಯುತ್…

Read More

ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆ ವಿಚಾರ ರಾಷ್ಟ್ರ ರಾಜಕಾರಣದಲ್ಲೂ ಸದ್ದು ಮಾಡುತ್ತಿದ್ದು, ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಎಷ್ಟು ದಿನ ಇರುತ್ತದೆ ಗೊತ್ತಿಲ್ಲ ಎಂದು ಮೋದಿ ವ್ಯಂಗ್ಯವಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಈಗಿನ ಮುಖ್ಯಮಂತ್ರಿಗಳು ಎಷ್ಟು ಅವಧಿಗೆ ಮುಖ್ಯಮಂತ್ರಿಗಳಾಗಿ ಉಳಿಯಲಿದ್ದಾರೆ ಎಂಬ ಪ್ರಧಾನಿಯವರ ರಾಜಕೀಯ ಭಾಷಣದಲ್ಲಿನ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದ್ದು, ಇವೆಲ್ಲವೂ ಸುಳ್ಳಿನ ಕಂತೆ ಎಂದರು.ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯು ದಿವಾಳಿಯಾಗಿರುವುದನ್ನು ಸೂಚಿಸುತ್ತದೆ ಎಂದರು.ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಭಾಷಣದಲ್ಲಿ ಮಾಡಿರುವ ಟೀಕೆಗೆ ಪ್ರತ್ಯುತ್ತರ ನೀಡಿದ ಸಿದ್ದರಾಮಯ್ಯ, 40 ಪರ್ಸೆಂಟ್ ಕಮೀಷನ್ ಸರ್ಕಾರ ಎಂಬ ಆರೋಪ ಬಿಜೆಪಿ ಸರ್ಕಾರದ ಮೇಲಿತ್ತು. ಈ…

Read More

ಲೂಟಿಗಾಗಿ ಸಿಎಂ-ಡಿಸಿಎಂ ನಡುವೆ ಪೈಪೋಟಿ | ಅಭಿವೃದ್ಧಿ ಕುಂಠಿತ | ಕರ್ನಾಟಕ ಹಾಳಾಗಿದೆ ಸಂಚಲನ ಮೂಡಿಸಿದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಹಾಳಾಗಿದ್ದು, ತಾವು ಎಷ್ಟು ದಿನ ರಾಜ್ಯದ ಮುಖ್ಯಮಂತ್ರಿಯಾಗಿರುತ್ತೇನೆ ಎಂಬುದು ಸಿದ್ದರಾಮಯ್ಯ ಅವರಿಗೇ ತಿಳಿಯದಂತಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ.ಮಧ್ಯಪ್ರದೇಶದ ಖಂಡವಾದಲ್ಲಿ ಭಾನುವಾರ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕೇವಲ ಆರು ತಿಂಗಳ ಹಿಂದೆ ರಚನೆಯಾದ ಕಾಂಗ್ರೆಸ್ ಸರ್ಕಾರವನ್ನು ನೋಡಿದರೆ ಎಲ್ಲವೂ ಗೊತ್ತಾಗುತ್ತದೆ. ಸಿಎಂ ಸಿದ್ದರಾಮಯ್ಯ ಎಷ್ಟು ದಿನ ರಾಜ್ಯಭಾರ ನಡೆಸುತ್ತಾರೋ ಎಂದು ಗೊತ್ತಿಲ್ಲ ಎಂದು ಹೇಳಿದ್ದಾರೆ.ಕರ್ನಾಟಕದಲ್ಲಿ ಮುಖ್ಯಮಂತ್ರಿಯ ಮುಂದುವರಿಕೆ ಬಗ್ಗೆಯೇ ಗೊಂದಲಗಳು ಎದ್ದಿದ್ದು, ಅಭಿವೃದ್ಧಿ ಕುಂಠಿತಗೊಂಡಿದೆ. ಅಧಿಕಾರ ಹಿಡಿದಿರುವ ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಭಾಗಿಯಾದ್ದರಿಂದ ಕರ್ನಾಟಕವನ್ನು ಅವರು ಹಾಳು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.ಕಾಂಗ್ರೆಸ್‌ ಪಕ್ಷ ಎಡವಟ್ಟಿನಿಂದ ಯಾವಾಗೆಲ್ಲಾ ಸರ್ಕಾರ ರಚನೆ ಮಾಡುತ್ತದೋ, ಆಗೆಲ್ಲಾ ಅಧಿಕಾರಕ್ಕೇರಿ ರಾಜ್ಯವನ್ನು ಲೂಟಿ ಮಾಡಲು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನಡುವೆ ಪೈಪೋಟಿ ಏರ್ಪಡುತ್ತದೆ.…

Read More

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ವಿವೇಕಾನಂದ ಎಚ್.ಕೆ, ಬೆಂಗಳೂರು ಈಗಲೂ ಅಸ್ತಿತ್ವದಲ್ಲಿರುವ ಒಂದು ವೃತ್ತಿ ಅಥವಾ ಹೊಟ್ಟೆ ಪಾಡಿನ ಮಾರ್ಗ..ಸಣ್ಣ ವರ್ಗ ಅಥವಾ ವೃತ್ತಿಯೊಂದು ಅಸ್ತಿತ್ವದಲ್ಲಿದೆ. ಸಾಮಾನ್ಯ ಜನರಿಗೆ ಇದು ಅಷ್ಟು ಪರಿಚಿತವಲ್ಲ. ಎಲ್ಲೋ ಕೆಲವು ವೇಳೆ ಕೇಳಿರಬಹುದು ಅಥವಾ ಓದಿರಬಹುದು. ಆದರೆ ಸಮಾಜದ ಆಂತರ್ಯದಲ್ಲಿ ಈಗಲೂ ಚಲಾವಣೆಯಲ್ಲಿದೆ.ಭಾರತೀಯ ಸಮಾಜದಲ್ಲಿ ಸಾಮಾನ್ಯವಾಗಿ ವೇಶ್ಯಾ ವೃತ್ತಿಯನ್ನು ಅತ್ಯಂತ ಕೆಟ್ಟ ಕೀಳು ವೃತ್ತಿ ಅಥವಾ ದಂಧೆ ಎಂದು ಭಾವಿಸಲಾಗುತ್ತದೆ. ( ವಾಸ್ತವದಲ್ಲಿ ಮತ್ತು ಎಲ್ಲವನ್ನೂ ಪರಿಗಣನೆಗೆ ತೆಗೆದುಕೊಂಡರೆ ಅದು ನಿಜವಲ್ಲ. ಅದು ಬೇರೆ ವಿಷಯ ) ಆದರೆ ಅದಕ್ಕಿಂತಲೂ ಅತ್ಯಂತ ನೀಚ ವೃತ್ತಿಯೊಂದಿದೆ. ಇದು ಮಾನವೀಯ ಸಂಬಂಧಗಳ ಎಲ್ಲಾ ಮಿತಿಯನ್ನು ದಾಟಿ ಲೆಕ್ಕಕ್ಕೆ ಸಿಗುವುದಿಲ್ಲ. ಅಸಹ್ಯ ಎಂದು ಕರೆಯಬಹುದಾದ ವೃತ್ತಿ ಇದು.ಆಳ್ಕಟಿಗಳು ಅಥವಾ ಪಿಂಪಗಳು ಅಥವಾ ತಡೆಹಿಡುಕರು ಅಥವಾ ಮಾಮಾಗಳು ಎಂದು ಲೋಕಾಭಿರಾಮವಾಗಿ ಕರೆಯಲಾಗುವ ಜನರು ಮಾಡುವ ವೃತ್ತಿಯೇ ಇದು.ಮನುಷ್ಯರನ್ನು, ಅವರ ದೇಹವನ್ನು, ಅವರ ಭಾವನೆಗಳನ್ನು, ಅವರ ನಂಬಿಕೆಗಳನ್ನು, ಅವರ ಸಂಬಂಧಗಳನ್ನು, ಸಮಾಜದ ಮೌಲ್ಯಗಳನ್ನು…

Read More

ಇಂಡಿ: ಜ್ಞಾನದ ಹಸಿವು ಎಲ್ಲರಲ್ಲಿರಬೇಕು. ಅಧ್ಯಾತ್ಮಿಕ ಸಂಸ್ಕೃತಿಯೊಂದಿಗೆ ವೈಚಾರಿಕತೆಯನ್ನು ಬೆಳೆಸಿಕೊಳ್ಳಬೇಕು. ಎಲ್ಲರೂ ತಮ್ಮ ಮನಸ್ಸನ್ನು ಶುದ್ಧವಾಗಿಟ್ಟುಕೊಳ್ಳಬೇಕು. ನಿತ್ಯ ಯೋಗ, ಧ್ಯಾನ ಮಾಡುತ್ತಾ, ಸಾತ್ವಿಕತೆಯ ಬದುಕನ್ನು ರೂಢಿಸಿಕೊಳ್ಳಬೇಕು ಎಂದು ಅಥರ್ಗಾ ಗುರುದೇವಾಶ್ರಮದ ಈಶಪ್ರಸಾದ ಸ್ವಾಮಿಗಳು ಹೇಳಿದರು.ರವಿವಾರ ಸಂಜೆ ತಾಲೂಕಿನ ಅಥರ್ಗಾ ಗ್ರಾಮದ ಹನುಮಾನ ದೇವಸ್ಥಾನದಲ್ಲಿ ನೂತನವಾಗಿ ಪ್ರತಿಷ್ಠಾಪಿಸಲ್ಪಟ್ಟ ನವಗ್ರಹ ಮೂರ್ತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಇಂದಿನ ಮಕ್ಕಳು ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಅಧ್ಯಾತ್ಮಿಕ ಪ್ರವಚನಗಳನ್ನು ಆಲಿಸಬೇಕು. ಗುರು ಹಿರಿಯರನ್ನು ಗೌರವಿಸುತ್ತಾ, ಪ್ರೀತಿ, ವಿಶ್ವಾಸ, ಸಹಕಾರದಿಂದಲೇ ಸಮಾಜದ ಒಳಿತಿಗೆ ದುಡಿಯಬೇಕು ಎಂದು ಹೇಳುತ್ತಾ ನವಗ್ರಹ ಪೂಜೆಯ ಮಹತ್ವವನ್ನು ತಿಳಿಸಿದರು.ನಿವೃತ್ತ ಶಿಕ್ಷಕ ಆರ್ ವ್ಹಿ ಪುರೋಹಿತ ಮಾತನಾಡಿ,ಯುವಕರೇ ಸಮಾಜದ ನಿಜವಾದ ಸಂಪತ್ತು. ಯುವ ಸಮೂಹಕ್ಕೆ ಸಾಂಸ್ಕೃತಿಕ, ಧಾರ್ಮಿಕ ಚಿಂತನೆಗಳ ಮೌಲ್ಯಗಳು ಅಗತ್ಯ. ಅಧ್ಯಾತ್ಮಿಕ ಶಿಕ್ಷಣವನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ಆಗಲೇ ಮನುಷ್ಯ ಮನುಷ್ಯನಾಗಿ ಬಾಳಲು ಸಾಧ್ಯ ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನ ಸಮಿತಿ ಅಧ್ಯಕ್ಷ ಶಿವು ನಿಂಬಾಳ ಮಾತನಾಡಿದರು.ಶಿಕ್ಷಕ ಸಿ ಎಸ್…

Read More