Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಅತ್ಯಂತ ಶಿಸ್ತುಬದ್ಧ-ಯಶಸ್ವಿ ಆಯೋಜನೆಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇದೇ ಜನವರಿ ೯ರಂದು ಮುಖ್ಯಮಂತ್ರಿ ಶ್ರೀ ಸಿದ್ಧರಾಮಯ್ಯ ಅವರು ಜಿಲ್ಲೆಗೆ ಆಗಮಿಸುತ್ತಿದ್ದು, ವೀರರಾಣಿ ಕಿತ್ತೂರ ಚೆನ್ನಮ್ಮ ಪ್ರತಿಮೆ ಅನಾವರಣ, ಬಸ್ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ ನಾಮಕರಣ,ನಗರದಲ್ಲಿ ವೆಲೋಡ್ರೊಮ ಉದ್ಘಾಟನಾ ವಿವಿಧ ಅಭಿವೃದ್ಧಿ ಶಿಲಾನ್ಯಾಸ ಕಾಮಗಾರಿಯ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜಿಲ್ಲೆಗೆ ಆಗಮನದ ಹಿನ್ನೆಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ ಸಿದ್ಧತಾ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜ.೯ರಂದು ಮುಖ್ಯಮಂತ್ರಿಗಳು ಆಗಮಿಸಿ, ಸೈಕ್ಲಿಂಗ್ ವೆಲೋಡ್ರೋಮ್ ಉದ್ಘಾಟನೆ, ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಅನಾವರಣ ಹಾಗೂ ಕೇಂದ್ರ ಬಸ್ ನಿಲ್ದಾಣಕ್ಕೆ ನಾಮಕರಣ ಕಾರ್ಯಕ್ರಮ ನಡೆಯಲಿದ್ದು, ನಂತರ ನಗರದ ದರಬಾರ ಶಾಲಾ ಮೈದಾನದಲ್ಲಿ ಆಯೋಜಿಸಲಾಗುವ ವೇದಿಕೆ ಕಾರ್ಯಕ್ರಮಕ್ಕೆ ಭಾಗವಹಿಸಲಿದ್ದು, ವ್ಯವಸ್ಥಿತವಾಗಿ ಯಾವುದೇ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೂರ್ತಿ ಟ್ರಸ್ಟ್,ಪ್ರವಾಸೋದ್ಯಮ ಇಲಾಖೆ ಹಾಗೂ ಭಾರತೀಯ ಪುರಾತತ್ವ ಸವೇಕ್ಷಣಾ ಇಲಾಖೆ ಹಾಗೂ ಇವರ ಸಹಯೋಗದಲ್ಲಿ ಇದೇ ಜನವರಿ ೩ ಹಾಗೂ ೪ ರಂದು ಎರಡು ದಿನಗಳ ಕಾಲ ನಗರದ ಐತಿಹಾಸಿಕ ಸ್ಮಾರಕವಾದ ಗೋಳಗುಮ್ಮಟ ಆವರಣದಲ್ಲಿ ಭಾರತೀಯ ಶಾಸ್ತ್ರೀಯ ಕಲೋತ್ಸವವನ್ನು ಆಯೋಜಿಸಲಾಗಿದೆ.ಈ ಕಾರ್ಯಕ್ರಮವು ಸಾರ್ವಜನಿಕರಿಗೆ ಮುಕ್ತವಾಗಿದ್ದು, ಮೂರ್ತಿ ಟ್ರಸ್ಟ್ನ ಸಹಕಾರದೊಂದಿಗೆ ಭಾರತೀಯ ವಿದ್ಯಾಭವನ ಬೆಂಗಳೂರು ವತಿಯಿಂದ ಈ ಉತ್ಸವವನ್ನು ಆಯೋಜಿಸಲಾಗಿದೆ.ಜ.೩ರಂದು ನಡೆಯುವ ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ, ರಾಜ್ಯಸಭೆ ಸಂಸದರಾದ ಶ್ರೀಮತಿ ಸುಧಾಮೂರ್ತಿ, ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಭಾಗವಹಿಸಲಿದ್ದಾರೆ.ಜ.೩ರಂದು ಪದ್ಮಶ್ರೀ ಪುರಸ್ಕೃತ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ ವೆಂಕಟೇಶ್ ಕುಮಾರ್ ಅವರಿಂದ ಶಾಸ್ತ್ರೀಯ ಗಾಯನ ಕಾರ್ಯಕ್ರಮ ನಡೆಯಲಿದ್ದು, ತಬಲಾದಲ್ಲಿ ಪಂಡಿತ ರಘುನಾಥ ನಾಕೋಡ್ ಹಾಗೂ ಹಾರ್ಮೋನಿಯಂನಲ್ಲಿ ಪಂಡಿತ…
ಅಹಿಂದ ಲೀಡರ್ ಆಗಿದ್ದರೆ ಎಲ್ಲಿ ಬೇಕಾದರೂ ಗೆಲ್ಲಬಹುದಿತ್ತು ಎಂದು ಸಿಎಂ ಸಿದ್ದರಾಮಯ್ಯ ಕಾಲೆಳೆದ ಎಚ್.ಡಿ ದೇವೇಗೌಡ ಬೆಂಗಳೂರು: ನೀವು ನಿಜವಾದ ಅಹಿಂದ ಲೀಡರ್ ಆಗಿದ್ದರೆ ಎಲ್ಲಿ ಬೇಕಾದರೂ ಗೆಲ್ಲಬಹುದಿತ್ತು. ನಿಮ್ಮ ಮಗ ಬಿಟ್ಟ ಕ್ಷೇತ್ರವನ್ನೇ ಏಕೆ ಆಯ್ಕೆ ಮಾಡಿಕೊಂಡಿರಿ? ಇದು ಅಹಿಂದವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಶ್ನಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಜ.25ರಂದು ಮೈಸೂರಿನಲ್ಲಿ ಅಹಿಂದ ಸಮಾವೇಶ ಮಾಡುತ್ತಿದ್ದಾರೆ. ನಾವು ಜ.23ರಂದ ಹಾಸನದಲ್ಲಿ ಒಂದು ಸಮಾವೇಶ ಮಾಡುತ್ತೇವೆ. ಈ ಅಹಿಂದ ವ್ಯಾಖ್ಯಾನ ಮಾಡಲು ನಾನು ತಡವರಿಸುತ್ತೇನೆ. ಅದನ್ನು ವಿವರಿಸುವುದು ಕಷ್ಟ ಎಂದರು.ಈ ದೇಶದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳಿಗೆ ಮೀಸಲಾತಿ ಕೊಟ್ಟವರು ಯಾರು? ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟವರು ಯಾರು? ಆರು ರೆಸಿಡೆನ್ಶಿಯಲ್ ಸ್ಕೂಲ್ ಕೊಟ್ಟವರು ಯಾರು? ನಾಯಕ ಸಮುದಾಯಕ್ಕೆ ಮೀಸಲಾತಿ ತಂದವರು ಯಾರು ಎಂದು ಪ್ರಶ್ನಿಸಿದರು.ಡಾಕ್ಟರ್ ಆಗಿದ್ದ ಎರಡನೇ ಮಗನನ್ನು ರಾಜಕೀಯಕ್ಕೆ ತನ್ನಿ ಹೇಳಿದ್ದೆ. ಈ ಇಳಿವಯಸ್ಸಿನಲ್ಲೂ ಎಷ್ಟು ದುಡಿಯುತ್ತೀರಿ ಸಾರ್ ಎಂದು ಅವರು…
ಜಮಖಂಡಿಯಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಶಾಸಕ ಜಗದೀಶ ಗುಡಗುಂಟಿ ಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಆರೋಪ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವ ವಿರೋಧಿ ಕಾನೂನು ಜಾರಿಗೆ ತರುವ ಹುನ್ನಾರ ನಡೆಸಿದೆ. 1975ರ ತುರ್ತು ಪರಿಸ್ಥಿತಿಯನ್ನು ಜನವಿರೋಧಿ ಕಾನೂನಿನ ಅಡಿಯಲ್ಲಿ ಜಾರಿಗೊಳಿಸಿ ಸಾರ್ವಜನಿಕರು, ವಿಪಕ್ಷಗಳು, ಮಾಧ್ಯಮಗಳ ಅಭಿವ್ಯಕ್ತಿ ಸ್ವತಂತ್ಯ್ರವನ್ನು ಹತ್ತಿಕ್ಕುವ ಯತ್ನದಲ್ಲಿ ತೊಡಗಿದ್ದಾರೆ ಎಂದು ಶಾಸಕ ಜಗದೀಶ ಗುಡಗುಂಟಿ ಆರೋಪಿಸಿದರು.ತಾಲ್ಲೂಕು ಆಡಳಿತ ಸೌಧದ ಮುಂದೆ ಬಿಜೆಪಿ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ತಹಶೀಲ್ದಾರ ಅನೀಲ ಬಡಿಗೇರಗೆ ಮನವಿ ಸಲ್ಲಿಸಿ ಮಾತನಾಡಿ ಕಾಂಗ್ರೆಸ್ ಸರ್ಕಾರ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025ನ್ನು ತರಾತುರಿಯಲ್ಲಿ ಜಾರಿಗೆ ತಂದು ಒಂದು ಕೋಮಿನವರನ್ನು ಎತ್ತಿಕಟ್ಟುವ ಹುನ್ನಾರ ನಡೆಸಿದೆ ಎಂದರು.ಬಾಬಾಸಾಹೇಬ್ ಅಂಬೇಡ್ಕರ ಅವರು ನೀಡಿದರುವ ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ಯ್ರದ ಉಲ್ಲಂಘನೆ ಆಗಿದೆ. ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ಯ್ರವನ್ನು ಕಾಂಗ್ರೆಸ್ ಸರ್ಕಾರ ಕಿತ್ತುಕೊಳ್ಳಲು ಹೊರಟಿದೆ…
ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ೨೦೨೫ – ೨೮ ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ತಾಲ್ಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕಂದಗಲ್ ಹಣಮಂತ್ರಾಯ ರಂಗಮಂದಿರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಸಂಘ ವಿಜಯಪುರ ಜಿಲ್ಲಾ ಘಟಕದ ೨೦೨೫ – ೨೮ ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ತಾಲ್ಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಅಭಿನಂದನಾ ಸಮಾರಂಭದಲ್ಲಿ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಾಯಿತು.ಸಂಘದ ಜಿಲ್ಲಾ ಮತ್ತು ತಾಲೂಕು ಘಟಕಗಳ ಚುನಾವಣೆಯಲ್ಲಿ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರು ಹಾಗೂ ಸಂಘದ ಹಿತೈಷಿಗಳಾದ ಶರಣು ಮಸಳಿ, ಮಹೇಶ ಶೆಟಗಾರ, ರಾಜು ಕೊಂಡಗೂಳಿ, ಸೀತಾರಾಮ ಕುಲಕರ್ಣಿ, ಮೋಹನ್ ಕುಲಕರ್ಣಿ, ಕೆ.ಕೆ.ಕುಲಕರ್ಣಿ, ದೇವೆಂದ್ರ ಹೆಳವರ ಮತ್ತು ಜಿಲ್ಲಾ ಚುನಾವಣಾಧಿಕಾರಿಯಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಿದ ಟಿ.ಕೆ.ಮಲಗೊಂಡ ಅವರನ್ನು ಸಚಿವ ಎಂ.ಬಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ರಾಜ್ಯ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಜ್ಯ ಸರಕಾರದಿಂದ ಬಡ ಕಾರ್ಮಿಕರ ಅನುಕೂಲಕ್ಕಾಗಿ ಟೂಲ್ ಕಿಟ್ ವಿತರಣೆ ಮಾಡಲಾಗುತ್ತಿದೆ. ಎಲ್ಲ ಕಾರ್ಮಿಕರು ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ಸಂಗಮ ಸಮಗ್ರ ಗ್ರಾಮೀಣ ಅಭಿವೃದ್ಧಿ ಕೇಂದ್ರದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ ಕಿಟ್ ವಿತರಿಸಿ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಯ ಜೊತೆಗೆ ಜನರ ಕಷ್ಟಗಳಲ್ಲಿ ಭಾಗವಹಿಸಿದ್ದು ಕಾಂಗ್ರೆಸ್ ಸರಕಾರ. ಕಾರ್ಮಿಕರ ಹಿತದೃಷ್ಠಿಯಿಂದ ಸರಕಾರ ಅನೇಕ ಯೋಜನೆಗಳನ್ನು ತಂದಿದೆ. ಮುಂಬರುವ ದಿನಮಾನಗಳಲ್ಲಿ ಕಾರ್ಮಿಕರ ಹಿತದೃಷ್ಠಿಯಿಂದ ಮತಕ್ಷೇತ್ರಕ್ಕೆ ಒಂದು ಕಾರ್ಮಿಕರ ಶಾಲೆ ಮಂಜೂರು ಮಾಡುವಂತೆ ಸಂಬಂಧಿಸಿದ ಸಚಿವರಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಅದಕ್ಕೆ ಬೇಕಾದ ಜಾಗೆಯನ್ನು ಆಲಮೇಲ ಮತ್ತು ಸಿಂದಗಿ ಮಧ್ಯದಲ್ಲಿ ಹೂವಿನಹಳ್ಳಿಯ ಹತ್ತಿರ ೭ಎಕರೆ ಜಾಗೆಯನ್ನು ಶಾಲೆಗಾಗಿ ಮೀಸಲಿಡಲಾಗಿದೆ. ಜನೆವರಿ ತಿಂಗಳಲ್ಲಿ ಮಂಜೂರಾಗುವ ಭರವಸೆ ಇದೆ. ಕಾರ್ಮಿಕರ ಏಳೆಗೆಗಾಗಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಾಷ್ಟ್ರೀಯ ಸೇವಾ ಯೋಜನೆಯಂತಹ ಚಟುವಟಿಕೆಗಳಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಪರಿಸರ ಪ್ರೇಮ ಬೆಳೆಸಲು ಸಹಕಾರಿಯಾಗುತ್ತದೆ. ಶಿಕ್ಷಣದ ಜೊತೆಗೆ ವ್ಯವಹಾರಿಕ ಮನೋಭಾವ ಬೆಳೆಸಿಕೊಳ್ಳಲು ಇಂತಹ ಶಿಬಿರಗಳು ಮಹತ್ವವುಳ್ಳವು ಎಂದು ಶ್ರೀಪದ್ಮರಾಜ ಮಹಿಳಾ ಪಪೂ ಕಾಲೇಜಿನ ಪ್ರಾಚಾರ್ಯ ವ್ಹಿ.ಡಿ.ಪಾಟೀಲ ಕರೆ ನೀಡಿದರು.ಸಿಂದಗಿ ನಗರದ ಆರ್.ಡಿ.ಪಾಟೀಲ ಪದವಿಪೂರ್ವ ಮಹಾವಿದ್ಯಾಲಯದ ವತಿಯಿಂದ ಹಮ್ಮಿಕೊಂಡ ೨೦೨೫-೨೬ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯಡಿ ವಾರ್ಷಿಕ ವಿಶೇಷ ಶಿಬಿರವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರೀಯ ಸೇವಾ ಯೋಜನೆ ಶಿಬಿರ ಸಾರ್ಥಕವಾಗಬೇಕಾದರೆ ವಿದ್ಯಾರ್ಥಿಗಳು ನಿಸ್ವಾರ್ಥತೆಯಿಂದ ದುಡಿದು ಶ್ರಮದಾನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಕಾರ್ಯಕ್ರಮಗಳು ಅತ್ಯಗತ್ಯ. ಇದರ ಸದುಪಯೋಗವನ್ನು ಎಲ್ಲ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಮಾತನಾಡಿ, ವಿದ್ಯಾರ್ಥಿ ಸ್ವಯಂಸೇವಕರು ೭ದಿನಗಳ ಕಾಲ ಬಂದಾಳ ಗ್ರಾಮವನ್ನು ದತ್ತು ಪಡೆದ ಗ್ರಾಮ ಸಮಾಜ ಸೇವೆ ಮಾಡುವ ಒಂದು ಕಾರ್ಯಕ್ರಮವಾಗುವ ಜೊತೆಗೆ ಸಮುದಾಯದೊಂದಿಗೆ ಸಂಪರ್ಕ ಬೆಳೆಸುವಂತಹ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕು ಕಾನೂನು ಸೇವಾ ಸಮಿತಿ ಇಂಡಿ, ಜಿಲ್ಲಾ ಕಾನೂನು ಸೇವಾ ಸಮಿತಿ ವಿಜಯಪುರ ಮತ್ತು ಕಾನೂನು ಪ್ರಾಧಿಕಾರ ಇಂಡಿ ಇವರ ಸಹಯೋಗದಲ್ಲಿ ತಾಲೂಕಿನ ನ್ಯಾಯಾಲಯದಲ್ಲಿ ಜ ೨ ರಿಂದ ಮಿಡಿಯೇಷನ್ ಫಾರ್ ನೇಶನ್ ದೇಶಕ್ಕಾ ಮಧ್ಯಸ್ಥಿಕೆ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ದಿವಾನಿ ನ್ಯಾಯಾಧೀಶ ಕೊಟಪ್ಪ ಕಾಂಬಳೆ ಹೇಳಿದರು.ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವ್ಯಾಜ್ಯ ಪೂರ್ವ ಬ್ಯಾಂಕು, ಟ್ರಾಫಿಕ್ ಪ್ರಕರಣ, ಕ್ರಿಮಿನಲ್ ಸಾರ್ವಜನಿಕ ಉಪಯುಲಕ್ತತಾ ಪ್ರಕರಣ, ಚೆಕ್ ಬೌನ್ಸ, ಕೌಟುಂಬಿಕ ವ್ಯಾಜ್ಯ, ವಿಭಾಗದ ದಾವೆ, ಸಿವಿಲ್ ಪ್ರಕರಣ, ಮೋಟಾರು ವಾಹನ ಅಪಘಾತ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುದು ಎಂದರು.ನ್ಯಾಯಾಲಯದಲ್ಲಿ ಜಾರಿ ಇರುವ ಪ್ರಕರಣ ರಾಜಿ ಆಗಬಹುದಾದ ಪ್ರಕರಣ ಆಯ್ಕೆ ಮಾಡಿ ಇಬ್ಬರಿಗೂ ಸಂಧಾನ ಪ್ರಕ್ರಿಯೆ ನಡೆಸಿ ಉಭಯ ಪಕ್ಷಗಳ ಅಹವಾಲು ಕೇಳಿ ಪಕ್ಷಿದಾರರಿಗೆ ಆಗುವ ಹಣಕಾಸಿನ ಹೊರೆ ತಪ್ಪಿಸಲು ಇಂಡಿಯಲ್ಲಿಯೇ ಕೋರ್ಟಿನ ಆವರಣದಲ್ಲಿ ಇರುವ ಮಧ್ಯಸ್ಥಿಕ ಕೇಂದ್ರಕ್ಕೆ ಕಳುಹಿಸಿ ಅವರ ಮೂಲಕ ಬಗೆ…
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಕರೆ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದೇಶದ ಅಭಿವೃದ್ಧಿ ಕುರಿತು ಪ್ರಧಾನಿ ಮೋದಿ ಅವರು ವ್ಯಕ್ತಪಡಿಸುವ ವಿಷಯ ಹಾಗೂ ವಿಚಾರಗಳನ್ನು ಕಾರ್ಯಕರ್ತರು ಜನಸಾಮಾನ್ಯರಿಗೆ ತಿಳಿಸಲು ಮುಂದಾಗಬೇಕು ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ (ಸಾಸನೂರ) ಹೇಳಿದರು.ಪಟ್ಟಣದಲ್ಲಿ ಶನಿವಾರ ಬಿಜೆಪಿ ಮಂಡಲದಿಂದ ಪ್ರಧಾನಿ ಮೋದಿ ಅವರ ‘ಮನ್ ಕಿ ಬಾತ್’ ೧೨೯ನೇ ಸಂಚಿಕೆಯ ಅಂಗವಾಗಿ ಜರುಗಿದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.ಪ್ರಧಾನಿ ಮೋದಿಯವರ ಈ ಕಾರ್ಯಕ್ರಮ ಸರ್ಕಾರದ ನೀತಿಗಳು, ಸಾಮಾಜಿಕ ವಿಷಯಗಳು ಮತ್ತು ಪ್ರೇರಣಾದಾಯಕ ಕಥೆಗಳನ್ನು ಹಂಚಿಕೊಳ್ಳುತ್ತದೆ. ಇದರಲ್ಲಿನ ವಿಷಯಗಳು ಕಾರ್ಯಕರ್ತರಿಗೆ ಸಹಕಾರಿಯಾಗಬಲ್ಲವು ಎಂದರು.ಜೊತೆಗೆ ಮುಂದೆ ಬರಬಹುದಾದ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಸಹಿತ ರಾಜ್ಯದ ವಿವಿಧ ಚುನಾವಣೆ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದರು.ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ, ಕಾರ್ಯಕರ್ತರಾದ ಶರಣು ದಳವಾಯಿ, ಗುರುನಾಥ ಮುರುಡಿ, ಭೀಮನಗೌಡ ಲಚ್ಯಾಣ, ಸುಧಾಕರ ಅಡಕಿ, ಪ್ರಕಾಶ ದೊಡಮನಿ ಮಾತನಾಡಿದರು.ಇದೇ…
ಉದಯರಶ್ಮಿ ದಿನಪತ್ರಿಕೆ ಚಡಚಣ: ಗ್ರಾಮಗಳಲ್ಲಿ, ಬಸ್ಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ದಾರಿಹೋಕರಲ್ಲಿ ಕಳ್ಳತನ ಸೇರಿದಂತೆ ವಿವಿಧ ಅಪರಾಧಗಳು ನಡೆಯುತ್ತಿರುವುದನ್ನು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅತ್ಯಂತ ಅಗತ್ಯವಾಗಿದೆ ಎಂದು ಅಪರಾಧ ವಿಭಾಗದ ಪಿಎಸ್ಐ ನಡಿವಿನಕೇರಿ ಅವರು ಅಪರಾಧ ತಡೆ ಮಾಸಾಚರಣೆ ಸಂದರ್ಭದಲ್ಲಿ ಹೇಳಿದರು.ಝಳಕಿ ಗ್ರಾಮದಲ್ಲಿ ಶನಿವಾರ ಬಸ್ ನಿಲ್ದಾಣ, ಚಡಚಣ ರಸ್ತೆ, ಇಂಡಿ ರಸ್ತೆ ಸೇರಿದಂತೆ ಹಲವಾರು ಸಾರ್ವಜನಿಕ ಸ್ಥಳಗಳಲ್ಲಿ ಅಪರಾಧ ತಡೆ ಮಾಸಾಚರಣೆ ಹಮ್ಮಿಕೊಂಡು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು. ಯಾವುದೇ ಸಮಯದಲ್ಲಿ ಅಪರಾಧ ಅಥವಾ ಅನಾಹುತ ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಅಥವಾ ತಕ್ಷಣವೇ 112 ಗೆ ಕರೆ ಮಾಡಬೇಕು. ಸುತ್ತಮುತ್ತ ನಡೆಯುವ ಅಪರಾಧಗಳಿಗೆ ಕಡಿವಾಣ ಹಾಕಲು ಜನರ ಸಹಕಾರ ಅಗತ್ಯವಾಗಿದೆ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ರಾಹುಲ ಗಿರಾಣಿವಡ್ಡರ ಸೇರಿದಂತೆ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಅಲ್ಲದೇ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಉಪಾಧ್ಯಕ್ಷ ಪ್ರಕಾಶಗೌಡ ಬಿರಾದಾರ, ಚಂದುಗೌಡ ಪಾಟೀಲ, ಉಮೇಶ್…
