Author: editor.udayarashmi@gmail.com

ವಿಜಯಪುರ: ಪ್ರಸಕ್ತ ಸಾಲಿನ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಪಡೆದ ಹಿರಿಯ ಪತ್ರಕರ್ತ ರಫೀ ಬಂಡಾರಿ ಇವರಿಗೆ ಸ್ಥಳೀಯ ಗಗನ ಮಹಲ ಉದ್ಯಾನವನದಲ್ಲಿ ಅವರ ಅಭಿಮಾನಿ ಹಾಗೂ ವಾಯು ವಿಹಾರ ಬಳಗದ ವಿವಿಧ ಸಮಾಜದ ಮುಖಂಡರ ವತಿಯಿಂದ ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿದ ಪತ್ರಕರ್ತ ರಪೀ ಬಂಡಾರಿ ಮಾತನಾಡಿ, ತಮ್ಮ ಈ ಪ್ರಶಸ್ತಿಯನ್ನು ಭಾಷೆ ಮತ್ತು ಕೋಮು ಸೌಹಾರ್ಧತೆಗೆ ಸಮರ್ಪಿಸುತ್ತೇನೆಂದು ಹೇಳುತ್ತಾ, ಹಿಂದೂ-ಮುಸ್ಲಿಂ ಸಮಾಜ ಬಾಂಧವರು ಸೇರಿ ಸನ್ಮಾನಿಸಿದ್ದು ನನಗೆ ಪ್ರಶಸ್ತಿ ನೀಡಿರುವುದಕ್ಕಿಂತಲೂ ಅತ್ಯಂತ ಸಂತೋಷವನ್ನುಂಟು ಮಾಡಿದೆ. ಸರಕಾರ ತನ್ನನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಭಾವ್ಯಕ್ಯತೆಗೆ ಸಂದ ಗೌರವ ಎಂದು ಭಾವಿಸಿರುವುದಾಗಿ ಹೇಳಿದರು.ಅತಿಥಿಗಳಾಗಿ ನೇತ್ರ ತಜ್ಞ ಡಾ. ಪ್ರಭುಗೌಡ ಪಾಟೀಲ ಮಾತನಾಡಿ, ರಫೀ ಬಂಡಾರಿ ಇವರ ಆದರ್ಶ, ಜೀವನದ ಮೌಲ್ಯಗಳು ನಮಗೆಲ್ಲರಿಗೂ ಮಾದರಿ ಮತ್ತು ಅನುಕರಣೀಯ. ರಫೀ ಬಂಡಾರಿ ಅವರು ಕೇವಲ ಒಂದು ಮತ ಪಂಗಡಕ್ಕೆ ಸೀಮಿತಗೊಳ್ಳದೇ ಇಡೀ ಸಮಾಜವೇ ಪ್ರೀತಿಸುವ ಮಹಾನ್ ವ್ಯಕ್ತಿ ಎಂದು ಬಣ್ಣಿಸಿದರು.ಉದ್ದಿಮೆದಾರರಾದ ಮದನ ದೇಶಪಾಂಡೆ ಅಧ್ಯಕ್ಷತೆ ವಹಿಸಿದ್ದರು.…

Read More

ವಿಜಯಪುರ: ಜಿಲ್ಲೆಯಲ್ಲಿ ಬರುವ ಮಲಘಾಣ ಪಶ್ಚಿಮ ಕಾಲುವೆ, ಮನಗೂಳಿ ಶಾಖಾ ಕಾಲುವೆ ಮತ್ತು ಬಬಲೇಶ್ವರ ಶಾಖಾ ಕಾಲುವೆ-೧ &೨ರ ಜಾಲದ ಅಡಿಯಲ್ಲಿ ಬರುವ ಕೆರೆಗಳನ್ನು ಪ್ರತಿಶತ ೫೦ರಷ್ಟು ಭರ್ತಿಗೊಳಿಸಲು ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಸಣ್ಣ ನೀರಾವರಿ ಮತ್ತು ಜಿಲ್ಲಾ ಪಂಚಾಯತ್ ಕೆರೆಗಳಿಗೆ ಕಾಲುವೆ ಜಾಲಗಳ ಕೊನೆಯ ಭಾಗದವರೆಗೆ ನೀರನ್ನು ಹರಿಸಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುವೆಗಳ ಎಡ-ಬಲ ೧೦೦ ಅಡಿ ವ್ಯಾಪ್ತಿಯಲ್ಲಿ ದಿನಾಂಕ : ೦೪-೧೧-೨೦೨೩ ರಿಂದ ೧೫-೧೧-೨೦೨೩ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಕಾಲುವೆ ವ್ಯಾಪ್ತಿಯ ದಡದ ೧೦೦ ಅಡಿ ಸುತ್ತಮುತ್ತಲಿನ ಪ್ರದೇಶದಲ್ಲಿ ಸಾರ್ವಜನಿಕರು ಗುಂಪು-ಗುಂಪಾಗಿ ಓಡಾಡುವುದನ್ನು ನಿಷೇಧಿಸಿದೆ. ಕಾಲುವೆಗಳಿಂದ ಅಕ್ರಮ ಪಂಪಸೆಟ್-ಸೈಫನ್-ಜಲಚರದಿಂದ ಸೈಫನ್ ಮೂಲಕ ನೀರನ್ನು ಉಪಯೋಗಿಸಕೂಡದು. ಸದರಿ ಕಾಲುವೆಗಳ ವ್ಯಾಪ್ತಿಯಲ್ಲಿ ಕಾಲುವೆಗಳಿಂದ ಅಕ್ರಮ ಪಂಪಸೆಟ್ ಮೂಲಕ ನೀರನ್ನು ಬಳಸುತ್ತಿದ್ದಲ್ಲಿ ಅಂತಹ ಪಂಪಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ಹೆಸ್ಕಾಂ ಇಲಾಖೆಯವರು ಕಡಿತಗೊಳಿಸಲಿದ್ದಾರೆ. ಕಾಲುವೆ ದಡದ ಸುತ್ತಮುತ್ತಲಿನ ೧೦೦ ಅಡಿ ಪ್ರದೇಶದಲ್ಲಿ ಜನರು ಮಾರಕಾಸ್ತ್ರಗಳನ್ನು ಹಿಡಿದು…

Read More

ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಶಾಸನ ಪಡೆಯುತ್ತಿರುವವರು ನವೆಂಬರ್ ತಿಂಗಳಿನಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.ಇಲಾಖೆಯಿಂದ ಈಗಾಗಲೇ ಮಾಶಾಸನ ಪಡೆಯುತ್ತಿರುವ, ಕಷ್ಟ ಪರಿಸ್ಥಿತಿಯಲ್ಲಿರುವ ಸಾಹಿತಿ-ಕಲಾವಿದರಿಗೆ ಹಾಗೂ ಮೃತಪಟ್ಟ ಕಲಾವಿದರ ಪತ್ನಿಯರಿಗೆ ಮಾಶಾಸನ ನೀಡಲಾಗುತ್ತಿದ್ದು, ಆಧಾರ ಪ್ರತಿ,ಪಿಂಚಣಿ ಪುಸ್ತಕ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ, ಐಡೆಂಟಿಟಿ ಅಳತೆ ಭಾವಚಿತ್ರದೊಂದಿಗೆ ಜೀವಂತ ಪ್ರಮಾಣ ಪತ್ರವನ್ನು ನಗರದ ಸ್ಟೇಶನ್ ರಸ್ತೆಯ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿಗೆ ಖುದ್ದಾಗಿ ಸಲ್ಲಿಸುವಂತೆಯೂ,ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ೦೮೩೫೨-೨೫೧೨೬೧ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ ರಾಜ್ಯ, ರಾಷ್ಟç ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ ೧೮ ವರ್ಷದ ಒಳಗಿನ ಮಕ್ಕಳಿಗೆ ಬಾಲಗೌರವ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ ಹೀಗೆ ೦೬ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿ ಪ್ರಶಸ್ತಿ ಪುರಸ್ಕೃತ ಮಗುವಾಗಿರಬೇಕು. ಇಂತಹ ಮಕ್ಕಳು ಅಕಾಡೆಮಿ ಬಾಲ ಗೌರವ ಪ್ರಶಸ್ತಿಗಾಗಿ ತಮ್ಮ ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ ವಿವರಗಳನ್ನು ಒಳಗೊಂಡ ಅರ್ಜಿಯನ್ನು ದಿನಾಂಕ : ೧೮-೧೧-೨೦೨೩ರೊಳಗೆ ಸಲ್ಲಿಸಬೇಕು. ಅರ್ಜಿ ನಮೂನೆ, ಮಾನದಂಡಗಳು ಸೇರಿದಂತೆ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://balavikasaacademy.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ:ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ೨೦೨೩-೨೪ನೇ ಸಾಲಿಗೆ ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.ಕನಿಷ್ಠ ೫ ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು kannadasiri.Karnataka.gov.in ವೆಬ್ ಸೈಟ್ ಮೂಲಕ ಪಡೆಯಬಹುದಾಗಿದೆ.ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ: ೦೭-೧೧-೨೦೨೩ ರಿಂದ ೦೭-೧೨-೨೦೨೩ರೊಳಗೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,ಕನ್ನಡ ಭವನ,ಜೆ.ಸಿ ರಸ್ತೆ,ಬೆಂಗಳೂರು ಇವರಿಗೆ ಸಲ್ಲಿಸುವಂತೆ ಪ್ರಕಟಣೆಯಲ್ಲಿ ಅವರು ಕೋರಿದ್ದಾರೆ

Read More

ವಿಜಯಪುರ: ಅನಾಮಧೇಯ ಅಂದಾಜು ೬೦ ರಿಂದ ೬೫ ವಯಸ್ಸಿನ ವ್ಯಕ್ತಿ ಶವ ಪತ್ತೆಯಾಗಿರುವ ಕುರಿತು ತಿಕೋಟಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನಾಮಧೇಯ ವ್ಯಕ್ತಿ ವಾರಸುದಾರರ ಪತ್ತೆಗೆ ಸಾರ್ವಜನಿಕರಲ್ಲಿ ಪೋಲಿಸ್ ಠಾಣೆ ಸಬ್‌ಇನ್ಸಪೆಕ್ಟರ್ ಅವರು ಮನವಿ ಮಾಡಿಕೊಂಡಿದ್ದಾರೆ.ಪತ್ತೆಯಾದ ವ್ಯಕ್ತಿಯು ೫.೪ ಫೂಟ್ ಎತ್ತರ, ಸಾಧಾರಣ ಮೈಕಟ್ಟು, ಉದ್ಧ ಮುಖ, ಸಾದ ಗಪ್ಪು ಮೈ ಬಣ್ಣ, ಮೈಮೇಲೆ ಪಿಂಕ್ ಕಲರ್ ಶರ್ಟ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿದ್ದಾನೆ. ಈ ಚಹರೆಪಟ್ಟಿಯುಳ್ಳ ವ್ಯಕ್ತಿ ವಾರಸುದಾರರು ಪತ್ತೆಯಾದಲ್ಲಿ ಸಾರ್ವಜನಿಕರು ತಿಕೋಟಾ ಪೋಲಿಸ್ ಠಾಣೆ ದೂ:೦೮೩೫೨-೨೩೧೫೩೩, ಮೊ: ೯೪೮೦೮೦೪೨೪೮, ಸಿಪಿಐ ಗ್ರಾಮೀಣ ವೃತ್ತ ದೂ: ೦೮೩೫೨-೨೫೧೨೧೭, ಮೊ: ೯೪೮೦೮೦೪೨೩೧ ಅಥವಾ ಕಂಟ್ರೋಲ್ ರೂಂ. ವಿಜಯಪುರ ದೂ: ೦೮೩೫೨-೨೫೦೮೪೪ ಸಂಖ್ಯೆಗೆ ಮಾಹಿತಿ ಒದಗಿಸುವಂತೆ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ವಿಜಯಪುರ: ಕೃಷಿ ಇಲಾಖೆ ವತಿಯಿಂದ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದಲ್ಲಿ ೫ ಜನ ರೈತರಿಗೆ ಹಾಗೂ ಜಿಲ್ಲಾ ಮಟ್ಟದಲ್ಲಿ ೧೦ ಜನ ರೈತರಿಗೆ ಶ್ರೇಷ್ಠ ಕೃಷಿಕ ಪ್ರಶಸ್ತಿಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಸಾವಯವ-ಸಮಗ್ರ ಕೃಷಿ, ತೋಟಗಾರಿಕೆ, ರೇಷ್ಮೆ ಬೇಸಾಯ, ಪಶು ಸಂಗೋಪನೆ-ಮೀನುಗಾರಿಕೆ, ಸಿರಿಧಾನ್ಯ ಬೇಸಾಯ, ಕೃಷಿ ಅರಣ್ಯ ಕ್ಷೇತ್ರದಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ನಮೂನೆಯನ್ನು ಸಂಬಂಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ-ರೈತ ಸಂಪರ್ಕ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ : ೨೪-೧೧-೨೦೨೩ರೊಳಗೆ ಸಂಬಂಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.ತಾಲೂಕಾ ಮಟ್ಟದಲ್ಲಿ ಪ್ರಶಸ್ತಿ ಪಡೆದ ರೈತರು ಜಿಲ್ಲಾ ಮಟ್ಟದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಓರ್ವ ರೈತ ಒಂದೇ ಅರ್ಜಿ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಿವಿಧ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ನಿಗಮದಿಮದ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ದಿಯನ್ನು ಹೊಂದಲು ಪರಿಶಿಷ್ಟ ಜಾತಿಯವರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ ಯೋಜನೆಯಡಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಸಾಲ-ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್ ಮೂಲಕ, ಕರ್ನಾಟಕ ಒನ್, ಗ್ರಾಮ ಒನ್‌ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೩೦-೧೧-೨೦೨೩ ಕೊನೆಯ ದಿನಾಂಕವಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

Read More

ದೇವರಹಿಪ್ಪರಗಿ: ಕಾಲುವೆಗೆ ನೀರು ಪೂರೈಸುವ ವಿಷಯದಲ್ಲಿ ರೈತಪರ ಧ್ವನಿಯಾಗಿ ನಿಮ್ಮ ಜೊತೆ ಹೋರಾಟಗಳಲ್ಲಿ ಭಾಗಿಯಾಗಲು ನಾನು ಸದಾ ಸಿದ್ದ ಎಂದು ಮಾಜಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ) ಹೇಳಿದರು.ಪಟ್ಟಣದ ಹತ್ತಿರದಲ್ಲಿಯ ನಾಗಠಾಣ ಉಪಕಾಲುವೆಗೆ ಸೋಮವಾರ ಭೇಟಿ ನೀಡಿ, ನೀರಿನ ಮಟ್ಟ ವೀಕ್ಷಣೆ ಮಾಡುವುದರ ಮೂಲಕ ರೈತರೊಂದಿಗೆ ಮಾತನಾಡಿದರು.ಮಳೆಯ ಅಭಾವದಿಂದ ಈ ಭಾಗದ ಬೆಳೆ ಹಾನಿಗೊಳಗಾಗಿದ್ದು, ಉಳಿದ ಬೆಳೆಗಾಗಿ ಕಾಲುವೆಗೆ ನೀರು ಹರಿಸಲು ಈಗಾಗಲೇ ನಾನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೇನೆ. ಅವರು ಸಹ ಸ್ಪಂದಿಸಿ ನೀರು ಹರಿಯುವಂತೆ ಕ್ರಮ ಕೈಗೊಂಡಿದ್ದಾರೆ. ಈಗ ಸತತ ನಾಲ್ಕು ದಿನಗಳಿಂದ ಹರಿಯುತ್ತಿರುವ ನೀರು ಕೆಲವು ಕಡೆ ಪೋಲಾದ ಕಾರಣ ಕಡ್ಲೇವಾಡ ಪಿಸಿಎಚ್, ಮುಳಸಾವಳಗಿ, ಚಿಕ್ಕರೂಗಿ ಕೆರೆಗಳನ್ನು ತಲುಪುತ್ತಿಲ್ಲ. ಆದ್ದರಿಂದ ನೀರು ಪೋಲಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಅದಕ್ಕಾಗಿ ನಾನು ಈಗ ರೈತಪರ ಧ್ವನಿಯಾಗಿ ಮನವಿ ಮಾಡುತ್ತೇನೆ. ಜೊತೆಗೆ ರೈತರು ಸಹ ಕಾಲುವೆ ನೀರನ್ನು ವ್ಯರ್ಥ ಮಾಡದೇ ಸಹಕಾರ ನೀಡಬೇಕು ಎಂದರು.ರೈತರಾದ ಸಂಗಣ್ಣ ಶಿನ್ನೂರ, ಭೀಮಾಶಂಕರ ಹಳ್ಳಿ,…

Read More

ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನೆ ದಿನಾಚರಣೆಯಲ್ಲಿ ಪ್ರಭುಚನ್ನಬಸವ ಶ್ರೀ ಅಭಿಮತ ವಿಜಯಪುರ: ಬಸವಾದಿ ಶರಣರ ಆಶಯದಂತೆ ಪ್ರಾರಂಭವಾದ ಬಿ.ಎಲ್.ಡಿ.ಇ ಸಂಸ್ಥೆ ಜಿಲ್ಲೆಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗಿದೆ ಎಂದು ಅಥಣಿಯ ಶ್ರೀ ಮೋಟಗಿಮಠದ ಪ್ರಭುಚನ್ನಬಸವ ಸ್ವಾಮೀಜಿ ಹೇಳಿದ್ದಾರೆ.ಇಂದು ಸೋಮವಾರ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಎ. ಎಸ್. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ ಆಯೋಜಿಸಿದ್ದ ಬಿ.ಎಲ್.ಡಿ.ಇ ಸಂಸ್ಥೆಯ ಸಂಸ್ಥಾಪನೆ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಬ್ರಿಟೀಷರ ಆಡಳಿತದಲ್ಲಿ ಹಿಂದುಳಿದಿದ್ದ ಅಖಂಡ ವಿಜಯಪುರ ಜಿಲ್ಲೆಯಲ್ಲಿ ಸರ್ವಾಂಗೀಣ ಅಭಿವೃದ್ಧಿಗಾಗಿ 1910ರಲ್ಲಿ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಅವರು ಸ್ಥಾಪಿಸಿದ ಈ ಸಂಸ್ಥೆಯ ಅಭಿವೃದ್ಧಿಗೆ ದಾನಚಿಂತಾಮಣಿ ಶ್ರೀಮತಿ ಬಂಗಾರಮ್ಮ ಸಜ್ಜನ, ಬಂಥನಾಳ ಶ್ರೀ ಸಂಗನಬಸವ ಶಿವಯೋಗಿಗಳು, ಶಿಕ್ಷಣ ಹರಿಕಾರ ದಿ. ಬಿ. ಎಂ. ಪಾಟೀಲರ ಜೊತಗೆ ಅನೇಕ ಜನರು ಶ್ರಮಿಸಿದ್ದಾರೆ. ಈಗ ಹಾಲಿ ಅಧ್ಯಕ್ಷರಾದ ಎಂ. ಬಿ. ಪಾಟೀಲ ಅವರು ಡಾ. ಹಳಕಟ್ಟಿ, ಆದಿಲಶಾಹಿ, ಡಾ.…

Read More