Author: editor.udayarashmi@gmail.com

ಚಡಚಣ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ ಕರ್ನಾಟಕ ಸುವರ್ಣ ಸಂಭ್ರಮದ ಅಂಗವಾಗಿ ಹಮ್ಮಿಕೊಳ್ಳಲಾದ ಕರ್ನಾಟಕ ಸುವರ್ಣ ಸಿರಿ ರಾಜ್ಯ ಪ್ರಶಸ್ತಿಗೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಉಮರಜ ಗ್ರಾಮದವರಾದ ಶಿಕ್ಷಕ ಸಾಹಿತಿ ಶ್ರೀಪ್ರಮೋದಕುಮಾರ ಮಠಪತಿ ಭಾಜನರಾಗಿದ್ದಾರೆ.ಶ್ರೀಯುತರ ಶೈಕ್ಷಣಿಕ ಮತ್ತು ಕನ್ನಡ ನಾಡು, ನುಡಿಗಾಗಿನ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಸುವರ್ಣ ಸಿರಿ ರಾಜ್ಯ ಪ್ರಶಸ್ತಿಗೆ ಆಯ್ಕೆಮಾಡಿ ಅಭಿನಂದಿಸಲಾಗಿದೆ ಎಂದು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಮುಖ್ಯಸ್ಥರಾದ ಸಾಲಿ ಗ್ರಾಮಶೆಣೈರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಮೋದಕುಮಾರ ಮಠಪತಿ ಇವರು ಪ್ರಸ್ತುತ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲ್ಲೂಕಿನ ಮಾಚಹಳ್ಳಿ ಶಾಲೆಯಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕೊಲ್ಹಾರ: ಪಟ್ಟಣದ ಸರಕಾರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲಾ ಆವರಣದಲ್ಲಿ ತಾಲೂಕಾ ಆಡಳಿತದ ಮುಂದಾಳತ್ವದಲ್ಲಿ ಸ್ಥಳಿಯ ಆಡಳಿತ ಮಂಡಳಿಯ ಸಹಯೋಗದೊಂದಿಗೆ ಕರ್ನಾಟಕ ಏಕೀಕರಣದ ೬೮ನೇ ರಾಜ್ಯೋತ್ಸವ ಹಾಗೂ ಮೈಸೂರು ಎಂಬ ಹೆಸರು ಕರ್ನಾಟಕ ಎಂಬ ಹೆಸರಿನಿಂದ ಮರುನಾಮಕರಣಗೊಂಡ ೫೦ನೇ ವರ್ಷಾಚರಣೆಯ ಕಾರ್ಯಕ್ರಮವು ಬಹು ವಿಜ್ರಂಭಣೆಯಿಂದ ಜರುಗಿತು.ತಾಯಿ ಭುವನೇಶ್ವರಿಯ ಭಾವಚಿತ್ರದ ಮೆರವಣಿಗೆಯು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಶಾಲಾ ಕ್ರೀಡಾಂಗಣ ಆವರಣಕ್ಕೆ ಆಗಮಿಸಿದ ನಂತರ ತಹಶೀಲ್ದಾರ ಎಸ್.ಎಸ್.ನಾಯ್ಕಲಮಠ ಅವರು ಕನ್ನಡ ರಾಜ್ಯೋತ್ಸವದ ಧ್ವಜಾರೋಹಣವನ್ನು ರಾಷ್ಟ್ರಧ್ವಜದ ಆರೋಹಣ ನಂತರ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ವರ್ಷ ಪೂರ್ತಿ ಕನ್ನಡ ಭಾಷೆಯ ಬಳಕೆಯಾಗಬೇಕು ಕರ್ನಾಟಕ ಏಕೀಕರಣದ ಮಹತ್ವವನ್ನು ನಾಡಿನ ಜನತೆಗೆ ಪರಿಚಯಿಸಬೇಕು ಇಂಗ್ಲೀಷ ವ್ಯಾಮೋಹ ಪದಗಳ ಬಳಕೆ ಕಡಿಮೆ ಮಾಡಿ ಕನ್ನಡ ಭಾಷೆಗೆ ಮಹತ್ವವನ್ನು ಸಾರುವ ಸಲುವಾಗಿ ಸರಕಾರ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಆಡಳಿತ ಯಂತ್ರದೊಂದಿಗೆ ಸಾರ್ವಜನಿಕರು ಸಹಕರಿಸಿ ಕನ್ನಡ ರಾಜ್ಯೋತ್ಸವವನ್ನು ವರ್ಷ ಪೂರ್ತಿ ಅತ್ಯಂತ ವಿಜ್ರಂಬಣೆಯಿಂದ ಆಚರಿಸೋಣ ಎಂದು ಕರೆ ಕೊಟ್ಟರು.ಈ ಸಂದರ್ಭದಲ್ಲಿ ಉಪನ್ಯಾಸಕರಾಗಿ…

Read More

ತಾಳಿಕೋಟಿ. ಕನ್ನಡ ನಾಡು- ನುಡಿ ಹಾಗೂ ಸಂಸ್ಕೃತಿಯ ರಕ್ಷಣೆಗಾಗಿ ಹೋರಾಡುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಇದಕ್ಕಾಗಿ ನಾವೆಲ್ಲರೂ ಕಂಕಣಭದ್ಧರಾಗೋಣ ಎಂದು ಶಾಸಕ ಸಿ .ಎಸ್. ನಾಡಗೌಡ ಅಪ್ಪಾಜಿ ಹೇಳಿದರು.ಬುಧವಾರ ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕ ಆಡಳಿತದ ವತಿಯಿಂದ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಾಡ ಧ್ವಜಾರೋಹಣ ನೆರವೇರಿಸಿ ನಂತರ ಅವರು ಮಾತನಾಡಿದರು.ಕರ್ನಾಟಕದ ಅಖಂಡತೆಯನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ ಮಹಾತ್ಮ ಗಾಂಧೀಜಿಯವರು ದೇಶದ ಅಖಂಡತೆಯನ್ನು ಬಯಸಿದ್ದರು. ನಾವು ರಾಜಕೀಯ ಹಿತಾಸಕ್ತಿ ಗಳಿಗಾಗಿ ರಾಜ್ಯದ ಇಬ್ಬಾಗವನ್ನು ಬಯಸುವುದು ಸರಿಯಲ್ಲ. ಸಮಗ್ರ ಕರ್ನಾಟಕದ ಪ್ರಗತಿ ಹಾಗೂ ಅಭಿವೃದ್ಧಿ ನಮ್ಮೆಲ್ಲರ ಪರಿಕಲ್ಪನೆ ಆಗಬೇಕು. ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಹಾಗೂ ಐಟಿಬಿಟಿರಂಗದಲ್ಲಿ ವಿಶ್ವದ ಗಮನಸೆಳೆದ ರಾಜ್ಯವಾಗಿದೆ. ಇಂದಿನ ಯುವ ಪೀಳಿಗೆಗೆ ನಾಡಿನ ಈ ಸಂಸ್ಕೃತಿಯನ್ನು ವರ್ಗಾಯಿಸುವ ಅಗತ್ಯ ಇದೆ ಎಂದರು.ಸಾಹಿತಿ ಅಶೋಕ ಹಂಚಲಿ ಮಾತನಾಡಿದರು.ತಹಶೀಲ್ದಾರ್ ಕೀರ್ತಿ ಚಾಲಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಈ ಸಮಯದಲ್ಲಿ ತಾಲೂಕ…

Read More

ಸಿಂದಗಿ: ಪಟ್ಟಣದ ಹೊರವಲಯದ ಪ್ರೇರಣಾ ಶಾಲೆಯಲ್ಲಿ ಕನ್ನಡ ರಾಜ್ಯೊತ್ಸವವನ್ನು ಆಚರಣೆ ಮಾಡಲಾಯಿತು.ಈ ವೇಳೆ ಶ್ರೀ ಸಮರ್ಥ ವಿದ್ಯಾ ವಿಕಾಸ ಸಂಸ್ಥೆಯ ಅಧ್ಯಕ್ಷ ಆರ್.ಡಿ ಕುಲಕರ್ಣಿ, ನಿರ್ದೇಶಕ ಪಿ.ಡಿ. ಕುಲಕರ್ಣಿ, ಮುಖ್ಯ ಗುರಮಾತೆ ಎಸ್.ಐ ಅಸ್ಕಿ ಸೇರಿದಂತೆ ಸಂಸ್ಥೆಯ ನಿರ್ದೇಶಕ ಮಂಡಳಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು. *ಶ್ರೀ ಪದ್ಮರಾಜ ಮಹಿಳಾ ಕಾಲೇಜು*ಪಟ್ಟಣದ ಶ್ರೀ ಪದ್ಮರಾಜ ಮಹಿಳಾ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.ಇದೇ ವೇಳೆ ಪದವಿ ಪ್ರಾಚಾರ್ಯ ಎಮ್.ಎಸ್ ಹೈಯ್ಯಾಳಕರ, ಎಸ್.ಎಂ ಪೂಜಾರಿ, ಉಪನ್ಯಾಸಕರಾದ ಜಿ.ಎ.ನಂದಿಮಠ, ಜಿ.ಎಸ್.ಕುಲಕರ್ಣಿ, ಎಸ್.ಸಿ ದುದ್ದಗಿ, ಹೇಮಾ ಕಾಸರ, ಯು.ಸಿ ಪೂಜೇರಿ, ಪ್ರಭಾವತಿ ಮಾಲಿಪಾಟೀಲ, ಎಂ.ಕೆ ಬಿರಾದಾರ, ಶೃತಿ ಹುಗಾರ, ಸತೀಶ ಕಕ್ಕಸಗೇರಿ, ಶಂಕರ ಕುಂಬಾರ, ವಿಜಯಲಕ್ಷ್ಮಿ ಭಜಂತ್ರಿ ಸೇರಿದಂತೆ ಅನೇಕರಿದ್ದರು. *ಬ್ಲಾಕ್ ಕಾಂಗ್ರೆಸ್ ಕಛೇರಿ*ಪಟ್ಟಣದ ಎಪಿಎಂಸಿಯಲ್ಲಿರುವ ಸಿಂದಗಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು. ಇದೇ ವೇಳೆ ಬ್ಲಾಕ್ ಕಾಂಗ್ರೆಸ್ ಸಮಿತಿ ತಾಲೂಕಾಧ್ಯಕ್ಷ ಸುರೇಶ ಪೂಜಾರ, ಜಯಶ್ರೀ ಹದನೂರ, ಶಾರದಾ ಬೆಟಗೇರಿ, ಮಹಾನಂದ…

Read More

ಸಿಂದಗಿ: ಕನ್ನಡ ನಾಡಿನಲ್ಲಿ ಕನ್ನಡವೇ ಪ್ರಥಮ, ಪ್ರಧಾನ, ಸಾರ್ವಭೌಮವಾಗಬೇಕು. ಉಳಿದ ಅನ್ಯ ಭಾಷೆಗಳು ಕನ್ನಡ ನೆಲದಲ್ಲಿ ಸೇವಕರಾಗಿ ಕೆಲಸ ಮಾಡಬೇಕು ಎಂದು ಎಚ್.ಜಿ.ಪಪೂ ಮಹಾವಿದ್ಯಾಲಯದ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಹೇಳಿದರು.ಬುಧವಾರದಂದು ನಗರದ ಬಸವ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದಲ್ಲಿ ಉಪನ್ಯಾಸ ನೀಡಿದ ಅವರು, ಕನ್ನಡ ನಾಡನ್ನು ಕನ್ನಡ ನಾಡು, ಶ್ರೀಗಂಧದ ನಾಡು, ಕರುನಾಡ ನಾಡು, ಸಾಧು-ಸಂತರು, ದಾಸರು, ಶಿವಶರಣರು ಹಾಗೂ ಕವಿಗಳಿಂದ ಕಂಗೊಳಿಸುತ್ತಿರುವ ಕನ್ನಡ ನಾಡು ಎಂಬ ಹೆಸರೇ ಒಂದು ಧೀಮಂತ ಶಕ್ತಿ. ಕನ್ನಡ ಅನ್ನದ ಭಾಷೆ, ಜೀವದ ಭಾಷೆ, ಪವಿತ್ರ ಭಾಷೆ, ಹೃದಯ ಭಾಷೆಯಾಗಿ ನಾವು ಕಾಣಬೇಕಾಗಿದೆ. ಏಕೆಂದರೆ ಆಂಗ್ಲದಲ್ಲಿ ಅನೇಕ ತಪ್ಪುಗಳನ್ನು ಕಾಣಬಹುದು ಆದರೆ ಕನ್ನಡ ಭಾಷೆ ಅಥವಾ ಪದದಲ್ಲಿ ಯಾವುದೇ ಒಂದು ತಪ್ಪನ್ನು ಕಾಣಲು ಸಾಧ್ಯವಿಲ್ಲ. ಕಾರಣ ಕನ್ನಡದ ಪ್ರತಿಯೊಂದ ಅಕ್ಷರ ಸಂಶೋಧನೆಯಿಂದ ಮೂಡಿ ಬಂದಿರುವ ಪದಗಳು. ನಾವೆಲ್ಲರೂ ನವೆಂಬರ್ ಕನ್ನಡಿಗರಾಗದೇ ನಂ: ೦೧ ಕನ್ನಡಿಗರಾಗೋಣ. ನಂ:೦೧…

Read More

ದೇವರಹಿಪ್ಪರಗಿ: ತಾಲ್ಲೂಕು ಆಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಡಿಯಲ್ಲಿ ೬೮ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ಪಟ್ಟಣದ ಪ್ರಾಥಮಿಕ ಶಾಲಾ ಆವರಣದಲ್ಲಿ ಬುಧವಾರ ಜರುಗಿದ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಪ್ರಕಾಶ ಸಿಂದಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಶಾಸಕ ರಾಜುಗೌಡ ಪಾಟೀಲ(ಕುದರಿಸಾಲವಾಡಗಿ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕರ್ನಾಟಕ ನೂರಾರು ವರ್ಷಗಳ ಇತಿಹಾಸ ಹೊಂದಿ, ಭವ್ಯ ಪರಂಪರೆಯ ಮೂಲಕ ಕನ್ನಡ ನಾಡಾಗಿ ಬೆಳಗುತ್ತಿದೆ. ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಾಧಕರಿಗೆ ಅಭಿನಂದನೆಗಳು ಎಂದರು.ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಬೂಲ್ ಕೊಕಟನೂರ ಮಾತನಾಡಿ, ನಾಡು ನುಡಿಗಾಗಿ ನಮ್ಮ ಸೇವೆ ಅನನ್ಯವಾಗಬೇಕು ಎಂದರು.ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಕನ್ನಡದಲ್ಲಿ ಹೆಚ್ಚು ಅಂಕ ಗಳಿಸಿದ ಹಾಗೂ ಕ್ರೀಡೆಗಳಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಕಾರ್ಯಕ್ರಮದ ಮುಂಚೆ ನಾಡದೇವಿ ಮೆರವಣಿಗೆ ಡೊಳ್ಳು, ಹಲಗೆ, ಸನಾದಿ ವಾದ್ಯಗಳೊಂದಿಗೆ ಮೊಹರೆ ಹಣಮಂತರಾಯ ವೃತ್ತದ ಮೂಲಕ ಸಾಗಿ ಶಾಲಾ ಆವರಣ ತಲುಪಿತು.ಗಣ್ಯರಾದ ರಿಯಾಜ್ ಯಲಗಾರ, ಶಾಂತಯ್ಯ ಜಡಿಮಠ, ಬಶೀರ್‌ಅಹ್ಮದ್ ಬೇಪಾರಿ, ಉಮೇಶ ರೂಗಿ,…

Read More

ಜಯ್ ನುಡಿಜಯಶ್ರೀ.ಜೆ.ಅಬ್ಬಿಗೇರಿಇಂಗ್ಲಿಷ್ ಉಪನ್ಯಾಸಕರುಸ ಪ ಪೂ ಕಾಲೇಜುನಾಗನೂರ ಕಾಲೇಜುತಾ: ಬೈಲಹೊಂಗಲಜಿ:ಬೆಳಗಾವಿ೯೪೪೯೨೩೪೧೪೨ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರಾದ ಹುಯಿಲಗೋಳ ನಾರಾಯಣರ ಕನ್ನಡದ ಲೇಖನಿಯಿಂದ ಹೊರ ಹೊಮ್ಮಿದ ಕರ್ನಾಟಕದ ನಾಡಗೀತೆಯೆನಿಸಿದ “ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು” ರಾಷ್ಟ್ರಕವಿ ಕುವೆಂಪು ವಿರಚಿತ ಜೈ ಭಾರತ ಜನನಿಯ ತನುಜಾತೆ, ಎಲ್ಲಾದರೂ ಎಂತಾದರೂ ಇರು, ವರಕವಿ ಬೇಂದ್ರೆಯವರ ಒಂದೇ ಒಂದೇ ಒಂದೇ ಕರ್ನಾಟಕ ಒಂದೇ, ಡಿ ಎಸ್ ಕರ್ಕಿಯವರ ಹಚ್ಚೆವು ಕನ್ನಡದ ದೀಪ. ಕೆ ಎಸ್ ನಿಸ್ಸಾರ ಅಹ್ಮದರ ನಿತ್ಯೋತ್ಸವದ ಗೀತೆಗಳು ನವಂಬರ್ ತಿಂಗಳಲ್ಲಿ ಮಾತ್ರ ಕನ್ನಡಿಗರ ಕಿವಿ ಮನಗಳನ್ನು ತಂಪಾಗಿಸುವ ಬೇಡಿಕೆಯನ್ನು ಹೆಚ್ಚಿಸಿಕೊಳ್ಳುತ್ತಿವೆ. ಕನ್ನಡಮ್ಮನ ಮುದ್ದು ಕಂದಮ್ಮಗಳಾದ ನಾವು ನಿರಭಿಮಾನಿಗಳಾಗದಿರಲಿ ಎಂದು ಹಿರಿಯ ಸಾಹಿತಿಗಳು ನಮ್ಮಲ್ಲಿ ಪ್ರೇರಕ ಶಕ್ತಿಯಂತೆ ಇಂಥ ಸಾವಿರಾರು ಗೀತೆಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಕನ್ನಡಮ್ಮನ ಏಳ್ಗೆಯನ್ನು ಬಯಸಿದ ಅನೇಕ ಚಿಂತಕರು ನಾಡನ್ನು ಸುಭದ್ರವಾಗಿ ಕಟ್ಟೋದು ಹೇಗೆ? ಕಾಯೋದು ಹೇಗೆ? ಎನ್ನುವ ಚಿತ್ರವನ್ನು ನಮ್ಮ ಕೈಗಿತ್ತು ತೆರಳಿದ್ದಾರೆ. ಆದರೆ ನಾವಿಂದು ಪರಭಾಷೆಗಳ ವ್ಯಾಮೋಹಕ್ಕೆ ಬಲಿಯಾಗಿ ನಾಡು…

Read More

ರೈತ ಸಂಘದ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ ಅಭಿಮತ ವಿಜಯಪುರ: ರಾಜ್ಯದಲ್ಲಿ ಬರಪರಿಸ್ಥಿತಿ ತಲೆದೋರಿ ರೈತ ಸಮುದಾಯ ತೀವ್ರ ಸಂಕಷ್ಟಕ್ಖೆ ಸಿಲುಕಿದ್ದು, ರೈತರ ಅನುಕೂಲಕ್ಕಾಗಿ ಏಕೆ ಒಂದು ಗ್ಯಾರಂಟಿ ಯೋಜನೆ ಘೋಷಣೆ ಮಾಡಬಾರದು? ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯಾಧ್ಯಕ್ಷ ಸಿದ್ದನಗೌಡ ಪಾಟೀಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.ನಗರದ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಮಂಗಳವಾರ ನಡೆದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರೈತರು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ತೊಳಲಾಡುತ್ತಿದ್ದಾರೆ. ರೈತರಿಗಿರುವಷ್ಟು ಸಂಕಷ್ಟ ಬೇರಾರಿಗೂ ಇಲ್ಲ. ರಾಜ್ಯ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆಯೇನೋ ನಿಜ. ಅದೇ ರೀತಿ ರೈತರಿಗೆ ಅನುಕೂಲವಾಗುವಂತೆ ರೈತರ ಜಮೀನಿಗೆ ನೀರು ಒದಗಿಸುವ, ಪಂಪಶೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವ, ಬೆಳೆದ ಬೆಳೆಗೆ ಸರಿಯಾದ ಬೆಲೆ ಕೊಡಿಸುವ ಗ್ಯಾರಂಟಿ ಯೋಜನೆಯನ್ನು ಘೋಷಿಸಬಹುದಾಗಿತ್ತಲ್ಲ ಎಂದು ಒತ್ತಾಯಿಸಿದರು.ಚುನಾವಣೆ ಬಂದಾಗ ರೈತರು, ನೀರಾವರಿ ಯೋಜನೆಗಳು ರಾಜಕಾರಣಿಗಳ ನೆನಪಿಗೆ ಬರುತ್ತವೆ. ಚುನಾವಣೆಯಾದ ನಂತರ…

Read More

ಮುದ್ದೇಬಿಹಾಳ: ನ.೧ ರಂದು ಸಂಜೆ ೬ಕ್ಕೆ ಪಟ್ಟಣದ ಪುರಸಭೆ ಕಾರ್ಯಾಲಯದ ಎದುರಿಗೆ ಟ್ರಾö್ಯಕ್ಸ್ ನಿಲ್ದಾಣದಲ್ಲಿ ಕಲಾವಿದರ ಬಳಗದಿಂದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕುಂಟೋಜಿ ಸಂಸ್ಥಾನ ಹಿರೇಮಠದ ಡಾ.ಚನ್ನವೀರ ದೇವರು ವಹಿಸಲಿದ್ದು, ಕಾಂಗ್ರೇಸ್ ಮುಖಂಡ ಶಾಂತಗೌಡ ಪಾಟೀಲ ನಡಹಳ್ಳಿ ಉದ್ಘಾಟಿಸಲಿದ್ದಾರೆ. ಸಮಾಜ ಸೇವಕ ಸಿ.ಬಿ.ಅಸ್ಕಿ, ಪುರಸಭೆ ಸದಸ್ಯ ಮಹೆಬೂಬ ಗೊಳಸಂಗಿ, ಮಾಜಿ ಸಮಸದಸ್ಯ ಕಾಮರಾಜ ಬಿರಾದಾರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು ಪುನೀತ ಅಭಿಮಾನಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಾಭಿಮಾನಿಗಳು, ಕಲಾವಿದರು, ಪುನೀತ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಆಯೋಜಕರು ಕೋರಿದ್ದಾರೆ

Read More