Subscribe to Updates
Get the latest creative news from FooBar about art, design and business.
Author: editor.udayarashmi@gmail.com
ವಿಜಯಪುರದಲ್ಲಿ ಶಾಸಕ ಹಾಗೂ ಜೆಎಸ್ಎಸ್ ಆಸ್ಪತ್ರೆಯ ಸಂಸ್ಥಾಪಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮೆಟ್ರೋ ನಗರದಲ್ಲಿ ಒದಗಿಸಲಾಗಿರುವ ಆರೋಗ್ಯ ಸೇವೆಗಳನ್ನು ವಿಜಯಪುರದ ಜೆಎಸ್ಎಸ್ ಆಸ್ಪತ್ರೆಯಲ್ಲಿಯೇ ಒದಗಿಸಲಾಗುತ್ತಿದ್ದು, ಅದರ ಭಾಗವಾಗಿ ಅತ್ಯಾಧುನಿಕ ನವಜಾತ ಶಿಶುಗಳ ತೀವ್ರ ನಿಗಾ ಘಟಕ, ದಂತಗಳ ಆರೋಗ್ಯಕ್ಕೆ ಸಂಬಂಧಿಸಿದ ಮ್ಯಾಕ್ಸಿಲೋಫಿಷಿಯಲ್ ಶಸ್ತ್ರಚಿಕಿತ್ಸೆ ಸಹ ಜೆಎಸ್ಎಸ್ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಹಾಗೂ ಜೆಎಸ್ಎಸ್ ಆಸ್ಪತ್ರೆಯ ಸಂಸ್ಥಾಪಕ ಬಸನಗೌಡ ಪಾಟೀಲ ಯತ್ನಾಳ ಪ್ರಕಟಿಸಿದರು.ಜೆಎಸ್ಎಸ್ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗುತ್ತಿರುವ ಆರೋಗ್ಯ ಸೇವೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದ ಅವರು, ವಿಜಯಪುರದಲ್ಲಿ ಎನ್ಐಸಿಯು ಘಟಕವನ್ನು ಆಧುನಿಕ ಸ್ಪರ್ಶದೊಂದಿಗೆ ಆರಂಭಿಸಲಾಗಿದ್ದು, ನವಜಾತ ಶಿಶುಗಳಿಗಳಿಗೆ ಸಕಲ ಆರೋಗ್ಯ ಸೌಲಭ್ಯಗಳು ದೊರಕಲಿವೆ, ೨೪ ಗಂಟೆಗಳ ನಿಯೋನೇಟಾಲಜಿಸ್ಟ್, ಮಲ್ಟಿಪಾರಾ ಮಾನಿಟರ್, ಬಬಲ್ ಸಿಪಿಎಪಿ ಸೌಲಭ್ಯ ಸೇರಿದಂತೆ ವೈದ್ಯಕೀಯ ರಂಗದಲ್ಲಿ ಅದರಲ್ಲೂ ನವಜಾತ ಶಿಶುಗಳ ಆರೋಗ್ಯ ರಕ್ಷಣೆಯಲ್ಲಿ ಆಧುನಿಕ ಸ್ಪರ್ಶ ನೀಡಲಾಗಿದೆ ಎಂದರು.ದಂತಗಳ ಆರೋಗ್ಯ ಸೇವೆ ಒದಗಿಸುವಲ್ಲಿಯೂ ಜೆಎಸ್ಎಸ್ ಮುನ್ನಡೆ ಇರಿಸಿದೆ, ಅತ್ಯಾಧುನಿಕ ದಂತ ಹಾಗೂ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ವಿಶ್ವಭಾರತಿ ವಿದ್ಯಾವರ್ಧಕ ಸಂಸ್ಥೆಯ ಎಸ್.ಕೆ. ಬೆಳ್ಳುಬ್ಬಿ ವಿಜ್ಞಾನ ಪಿಯು ಕಾಲೇಜಿನಲ್ಲಿ ಈ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರರಷ್ಟು ಫಲಿತಾಂಶ ದಾಖಲಾಗಿದೆ.ವಿಜ್ಞಾನ ವಿಭಾಗದಲ್ಲಿ ಪ್ರತಿಭಾ ಡೆಂಗಿ ಅವರು ಶೇಕಡಾ 97 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದು, ದಾನಮ್ಮ ಹಿರೇಮಠ ಅವರು ಶೇಕಡಾ 96.25 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಸುಮಿತ್ರಾ ವಂದಾಲ ಅವರು ಶೇಕಡಾ 93.25 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಒಟ್ಟು 25 ವಿದ್ಯಾರ್ಥಿಗಳಲ್ಲಿ 13 ಮಂದಿ ಡಿಸ್ಟಿಂಕ್ಷನ್, 11 ಮಂದಿ ಪ್ರಥಮ ದರ್ಜೆ ಹಾಗೂ 1 ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.ವಿದ್ಯಾರ್ಥಿಗಳ ಪರಿಶ್ರಮ ಮತ್ತು ಶಿಕ್ಷಕರ ಕರ್ತವ್ಯನಿಷ್ಠೆಗೆ ಸಂಸ್ಥೆಯ ಅಧ್ಯಕ್ಷ ಮಲ್ಲಿಕಾರ್ಜುನ ಸಂ. ಬೆಳ್ಳುಬ್ಬಿ ಹಾಗೂ ಆಡಳಿತ ಮಂಡಳಿಯವರು, ಪ್ರಾಚಾರ್ಯರು ಮತ್ತು ಸಿಬ್ಬಂದಿ ವರ್ಗದವರು ಸಂತೋಷ ವ್ಯಕ್ತಪಡಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಜಮಖಂಡಿ:: 2024-25ನೇ ಸಾಲಿನ ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ಜಮಖಂಡಿಯ ವಿದ್ಯಾರ್ಥಿನಿಯರು ಅತ್ಯುತ್ತಮ ಸಾಧನೆ ಮಾಡಿ ಮಹಾವಿದ್ಯಾಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಿಂದ ಎಂ.ಎ. ಕನ್ನಡ ಸ್ನಾತಕೋತ್ತರ ವಿಭಾಗದಲ್ಲಿ ರೇಖಾ ದೊಡವಾಡ ಅವರು ಪ್ರಥಮ ರ್ಯಾಂಕ್ ಪಡೆದು ನಾಲ್ಕು ಬಂಗಾರದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ‘ಭಾರತೀಯ ಕಾವ್ಯಮೀಮಾಂಸೆ’ ವಿಷಯದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಆರತಿ ತಳವಾರ ಅವರು ಬಂಗಾರದ ಪದಕಕ್ಕೆ ಪಾತ್ರರಾಗಿದ್ದಾರೆ.ಇನ್ನೂ ಸವಿತಾ ಗುಡ್ಲಮನಿ ನಾಲ್ಕನೇ ರ್ಯಾಂಕ್ ಹಾಗೂ ಶೃತಿ ನಾವಿ ಐದನೇ ರ್ಯಾಂಕ್ ಪಡೆದು ಮಹಾವಿದ್ಯಾಲಯದ ಪ್ರತಿಷ್ಠೆಯನ್ನು ಹೆಚ್ಚಿಸಿದ್ದಾರೆ.ಈ ಸಾಧನೆಗೆ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಸುನಂದಾ ಎಸ್. ಶಿರೂರ, ಸಂಯೋಜಕರಾದ ಡಾ. ವೈ.ವೈ. ಕೊಕ್ಕನವರ, ಡಾ. ವಿ.ಆರ್. ದಳವಾಯಿ, ಡಾ. ಎಂ.ಎಂ. ಮಂಟೂರ ಸೇರಿದಂತೆ ಎಲ್ಲಾ ಸಿಬ್ಬಂದಿ ವರ್ಗವು ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ತಿಳಿಸಿ ಶುಭಾಶಯ ಕೋರಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಮಾರುತಿ ದೇವರ ನೀರಓಕುಳಿ ಉತ್ಸವವು ರವಿವಾರ ಅತ್ಯಂತ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಜರುಗಿತು.ಬೆಳಿಗ್ಗೆಯಿಂದಲೇ ಗ್ರಾಮದ ಭಕ್ತರು ದೇವಸ್ಥಾನಕ್ಕೆ ಹರಿದುಬಂದು ವಿಶೇಷ ಪೂಜೆಗಳು, ಅಭಿಷೇಕ ಹಾಗೂ ಅಲಂಕಾರ ಸೇವೆಗಳಲ್ಲಿ ಭಾಗವಹಿಸಿದರು. ಮುಂಚೆಯ ದಿನ ಶನಿವಾರ ದೇವರ ಮೂರ್ತಿಗೆ ಗ್ರಾಮದೆಲ್ಲೆಡೆ ಭವ್ಯ ಮೆರವಣಿಗೆ ನಡೆಸಲಾಗಿದ್ದು, ಭಜನೆ, ಡೊಳ್ಳು-ತಾಸೆ ಹಾಗೂ ನೃತ್ಯಗಳೊಂದಿಗೆ ಉತ್ಸವಕ್ಕೆ ಮತ್ತಷ್ಟು ಕಳೆ ತಂದಿತು.ನೀರಓಕುಳಿ ಸಂಪ್ರದಾಯದಂತೆ ಪರಸ್ಪರ ನೀರು ಎರಚಿಕೊಂಡು ಸಂತೋಷ ವ್ಯಕ್ತಪಡಿಸಿದರು. ಈ ಸಂದರ್ಭ ಯುವಕರು, ಮಹಿಳೆಯರು ಹಾಗೂ ಮಕ್ಕಳು ಉತ್ಸಾಹದಿಂದ ಪಾಲ್ಗೊಂಡು ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದರು.ಗ್ರಾಮದ ಹಿರಿಯರು ಹಾಗೂ ಮುಖಂಡರು ಪಾಲ್ಗೊಂಡು ಕಾರ್ಯಕ್ರಮಗಳ ಯಶಸ್ಸಿಗೆ ಸಹಕರಿಸಿದರು. ಎಲ್ಲರೂ ಸಮಾರಂಭದಲ್ಲಿ ಶಾಂತಿ, ಸೌಹಾರ್ದತೆಯ ಸಂದೇಶ ಸಾರಲಾಗಿತ್ತು, ಗ್ರಾಮದ ಏಕತೆ ಮತ್ತಷ್ಟು ಬಲವತ್ತಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.ಉತ್ಸವದ ಅಂಗವಾಗಿ ಅನ್ನಸಂತರ್ಪಣೆ ಕಾರ್ಯಕ್ರಮವೂ ಏರ್ಪಡಿಸಲಾಗಿದ್ದು, ನೂರಾರು ಭಕ್ತರು ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಪರಮಗೊಂಡ ದಾನಗೌಡˌ ಗುರಪಾದಯ್ಯ ಹಿರೇಮಠˌ ಚಂದಪ್ಪ ಕಡಕೋಳˌ ಸಿದ್ದಪ್ಪ ಮುತ್ತೂರˌ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಜ್ಯೋತಿಬಾ ಫುಲೆ ಆದರ್ಶ ವ್ಯಕ್ತಿಗಳಾಗಿದ್ದರು, ಎಲ್ಲರಿಗೂ ಶಿಕ್ಷಣ ದೊರೆಯಲಿ ಎಂದು ಹಿಂದುಳಿದ ವರ್ಗ, ದೀನ ದಲಿತರಿಗೆ ಶಿಕ್ಷಣ ನೀಡಿದರು, ಸಾಮಾಜಿಕ ಸಮಾನತೆ ಮತ್ತು ಮಹಿಳಾ ಶಿಕ್ಷಣಕ್ಕಾಗಿ ಹೋರಾಡಿದವರು ಎಂದು ಶಿಕ್ಷಣ ಪ್ರೇಮಿ ಮಹಾನಿಂಗ ರಾಮದುರ್ಗ ಹೇಳಿದರು.ಸಮೀಪದ ಕಡಪಟ್ಟಿ ಗ್ರಾಮದ ಮಾಳಿ ಸಮಾಜ ಹಾಗೂ ಶ್ರೀ ಜ್ಯೋತಿಬಾ ಫುಲೆ ಯುವಕ ಮಂಡಳ ಇವರ ಸಹಯೋಗದಲ್ಲಿ ನಡೆದ ಮಹಾತ್ಮ ಜ್ಯೋತಿಬಾ ಫುಲೆ ಅವರ 199 ನೆಯ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಜ್ಯೋತಿಬಾ ಫುಲೆ ಹಾಗೂ ಸಾವಿತ್ರಿಬಾಯಿ ಫುಲೆ ಆದರ್ಶ ದಂಪತಿಗಳಾಗಿದ್ದರು ಅವರ ಆದರ್ಶಗಳನ್ನು ನಾವು ಪಾಲಿಸಬೇಕು, ಅವರು ಮಾಡಿದ ಸಾಮಾಜಿಕ ಕಾರ್ಯಗಳನ್ನು ನಾವು ಎಂದಿಗೂ ಮರೆಯಬಾರದು, ಎಲ್ಲರೂ ಸೇರಿ ಸಮಾಜವನ್ನು ಒಗ್ಗೂಡಿಸುವ ಕಾರ್ಯ ಮಾಡಬೇಕು ಎಂದು ಹೇಳಿದರು.ಸಾಮಾಜಿಕ ಹೋರಾಟಗಾರ ಜಕ್ಕಪ್ಪ ಮೆಂಡಿಗೇರಿ ಮಾತನಾಡಿ,ಜ್ಯೋತಿಬಾ ಫುಲೆ ಅವರು ಶಿಕ್ಷಣ ಪ್ರೇಮಿಯಾಗಿದ್ದರು ಸಮಾಜದ ಪ್ರತಿಯೊಬ್ಬ ಮಹಿಳೆಯರಿಗೆ ಶಿಕ್ಷಣ ದೊರೆಯಲಿ ಎಂದು ಹಗಲಿರುಳು ದುಡಿದವರು, ಸ್ವತಂತ್ರ ಪೂರ್ವದಲ್ಲಿ ಮಹಿಳೆಯರಿಗೆ ಶಿಕ್ಷಣ ದೊರೆಯಬಾರದೆಂದು ಫುಲೆ ದಂಪತಿಗಳಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಕ್ಯಾನವಾಸ್ ಆರ್ಟ್ ಫೌಂಡೇಶನ್ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನಸಹಾಯದೊಂದಿಗೆ ವಿಶ್ವ ದೃಶ್ಯಕಲಾ ದಿನಾಚರಣೆಯ ಅಂಗವಾಗಿ ಕ್ಯಾನವಾಸ್ ಆರ್ಟ್ ಫೌಂಡೇಶನ್ ಸಂಸ್ಥೆಯ ಸಂಗ್ರಹದಲ್ಲಿರುವ ನಮ್ಮ ನಾಡಿನ ಹಿರಿಯ ಮತ್ತು ಯುವ ಕಲಾವಿದರ ರೇಖಾಚಿತ್ರ ಮತ್ತು ಚಿತ್ರಕಲಾ ಕಲಾಪ್ರದರ್ಶನವನ್ನು ಬುಧವಾರ ದಿನಾಂಕ : ೧೫-೦೪-೨೦೨೬ ಸಂಜೆ. ೦೪:೦೦ ಗಂಟೆಗೆ ಪ್ರವಾಸೋದ್ಯಮ ಇಲಾಖೆಯ “ಸರಕಾರಿ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ ಪ್ರದರ್ಶನದ ಉದ್ಘಾಟನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ನೆರವೆರಿಸಲಿದ್ದಾರೆ ಅತಿಥಿಗಳಾಗಿ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಅಶೋಕ ಯಡಳ್ಳಿ ಹಿರಿಯ ಕಲಾವಿದರಾದ ಪಿ. ಎಸ್. ಕಡೇಮನಿ, ಪ್ರವಾಸೋಧ್ಯಮ ಇಲಾಖೆಯ ಉಪನಿರ್ದೇಶಕರಾದ ಅರವಿಂದ ಹೂಗಾರ, ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಇಂದುಶೇಖರ ಮಣೂರ ಅವರು ಆಗಮಿಸಲಿದ್ದಾರೆ. ಬಹಳ ಅಪರೂಪದ ಮತ್ತು ಶ್ರೇಷ್ಠ ಕಲಾವಿದರುಗಳ ವಿಶೇಷ ಕಲಾಪ್ರದರ್ಶನ ಇದಾಗಲಿದೆ ಈ ಪ್ರದರ್ಶನದಲ್ಲಿ ನಮ್ಮ ನಾಡಿನ ಹೆಸರಾಂತ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶದಲ್ಲಿ ಜಿಲ್ಲೆಯ ಆಲಮಟ್ಟಿ ಎಸ್.ವಿ.ವಿ.ಸಂಸ್ಥೆಯ ಮಂಜಪ್ಪ ಹಡೇ೯ಕರ ಸ್ಮಾರಕ ಸಂಯುಕ್ತ ಪದವಿಪೂರ್ವ (ಎಂಎಚ್ಎಂ) ಕಾಲೇಜು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಅತ್ಯತ್ತಮ ಫಲಿತಾಂಶ ದಾಖಲಿಸಿಕೊಂಡಿದೆ.2025-2026 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಕಲಾ,ವಾಣಿಜ್ಯ ವಿಭಾಗದಲ್ಲಿ ಈ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ ಕಾಲೇಜಿಗೆ, ಸಂಸ್ಥೆಗೆ ಹಾಗೂ ಆಲಮಟ್ಟಿ ಗ್ರಾಮಕ್ಕೆ ಅಪಾರ ಕೀತಿ೯ ತಂದಿದ್ದಾರೆ.ಕಲಾ ವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 91 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಕುಳಿತ್ತಿದ್ದ 31 ವಿದ್ಯಾರ್ಥಿಗಳಲ್ಲಿ 30 ಜನ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದ ಫಲಿತಾಂಶ ಶೇ, 98.91 ರಷ್ಟಾಗಿದೆ. ವಾಣಿಜ್ಯ ವಿಭಾಗದ ರಿಜಲ್ಟ್ ಶೇ,96.97 ರಷ್ಟಾಗಿದೆ. ಇವೆರಡೂ ವಿಭಾಗ ಸೇರಿ ಈ ಬಾರಿ ಕಾಲೇಜಿನ ಒಟ್ಟು ಫಲಿತಾಂಶ ಶೇ, 98.27 ರಷ್ಟು ದಾಖಲಾಗಿದೆ.ಕಲಾ ವಿಭಾಗದಲ್ಲಿ 20 ಡಿಸ್ಟಿಂಕ್ಷನ್, 60 ಪ್ರಥಮ, 08 ದ್ವಿತೀಯ, 03 ತೃತೀಯ ದಜೆ೯ಯಲ್ಲಿ…
ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷರಿಂದ ಬೆದರಿಕೆ ತಂತ್ರ | ಶಿಕ್ಷಕಿ ಜಯಶ್ರೀ ಬೆಣ್ಣಿ ಆರೋಪ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೨೦೨೬ ರಿಂದ ೩೧ರ ಅವಧಿಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಸಂಬಂಧಿಸಿದಂತೆ ಗೊಂದಲದ ವ್ಯವಸ್ಥೆ ನಿರ್ಮಾಣವಾಗಿದೆ ಎಂದು ಶಿಕ್ಷಕಿ ಜಯಶ್ರೀ ಬೆಣ್ಣಿ ಆಕ್ರೋಶ ವ್ಯಕ್ತಪಡಿಸಿದರು.ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಧಿಕ್ಕರಿಸಿ ಸಂಘವು ಈಗ ಪ್ರಕಟಪಡಿಸುತ್ತಿರುವ ಮತದಾರರ ಪಟ್ಟಿಯಲ್ಲಿ ಸೇವೆಗೆ ಸೇರಿದಾಗಿನಿಂದ ಈ ತನಕ ಸದಸ್ಯತ್ವ ಕಟಾವಣೆಯಾಗಿದ್ದ ಸದಸ್ಯರ ಹೆಸರನ್ನು ಮತದಾರ ಪಟ್ಟಿಯಿಂದ ಕೈಬಿಡು ಹುನ್ನಾರ ನಡೆದಿದೆ ಎಂದು ತಿಳಿದು ಬಂದಿದ್ದು, ಒಂದು ವೇಳೆ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸದೇ ಚುನಾವಣೆ ಮಾಡಿದ್ದೇ ಆದಲ್ಲಿ ಇದು ಪ್ರಜಾಪ್ರಭುತ್ವದ ಒಂದು ವಿಕಾರ ರೂಪವನ್ನು ತಾಳುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಕರ್ನಾಟಕ ರಾಜ್ಯ ತಾಲೂಕು ಪ್ರಾಥಮಿಕ ಶಿಕ್ಷಕ ಸಂಘ ಸಿಂದಗಿ ಘಟಕದ ನಿರ್ದೇಶಕ ಸ್ಥಾನಗಳ ಚುನಾವಣೆ ಘೋಷಣೆಯಾಗಿದೆ ಎಂದು ರಾಜ್ಯ ಚುನಾವಣಾಧಿಕಾರಿ ಮೈಬೂಬಪಾಷಾ ಮೂಲಿಮನಿ ಆದೇಶ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಆರ್ಬಿಐ ಅಧೀನದಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಪೈನಾನ್ಸ್ಗಳಲ್ಲಿ ಏ.೧೪ರಂದು ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಆಚರಿಸುವಂತೆ ಆದೇಶ ನೀಡಬೇಕು ಎಂದು ಭೀಮ ಸೇನೆ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ತಹಶೀಲ್ದಾರ್ ಕರೆಪ್ಪ ಬೆಳ್ಳಿ ಅವರಿಗೆ ಮನವಿ ಸಲ್ಲಿಸಿದರು.ಈ ವೇಳೆ ಭೀಮ್ ಸೇನೆ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಅನಿಲ ಹೊಸಮನಿ, ಸಮಾಜ ಹೋರಾಟಗಾರ ಹರ್ಷವರ್ಧನ ಪೂಜಾರಿ ಮಾತನಾಡಿ, ಸಿಂದಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಆರ್ಬಿಐ ಅಧೀನದಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಪೈನಾನ್ಸ್ಗಳಲ್ಲಿ ಏ.೧೪ ರಂದು ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಿಸುವಂತೆ ಲಿಖಿತ ರೂಪದಲ್ಲಿ ಆದೇಶ ನೀಡಬೇಕು ಎಂದು ಮನವಿ ಮಾಡಿಕೊಂಡರು.ಮನವಿ ಸ್ವೀಕರಿಸಿ ತಹಶೀಲ್ದಾರ ಕರೆಪ್ಪ ಬೆಳ್ಳಿ ಮಾತನಾಡಿ, ಆರ್ಬಿಐ ಅಧೀನದಲ್ಲಿ ಬರುವ ಆರ್ಥಿಕ ವ್ಯವಹಾರ ಸಂಸ್ಥೆಗಳಲ್ಲಿ ಏ.೧೪ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಆದೇಶ ಆಚರಿಸುವಂತೆ ನೀಡಲಾಗುವುದು ಎಂದು ಭರವಸೆ ನೀಡಿದರು. ಈ ವೇಳೆ ತಾಲೂಕಾಧ್ಯಕ್ಷ ಪ್ರಜ್ವಲ್ ಮಲ್ಲಾರಿ, ದ್ಯಾವಪ್ಪ ಕುದರಗುಂಡ, ಲಕ್ಷ್ಮಣ ಓಲೇಕಾರ ಸೇರಿದಂತೆ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಕುಮಾರಿ ನೀಲಮ್ಮ ನಿಂಗಪ್ಪ ಬಿಸನಾಳ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ.ಅಸ್ಕಿ ಗ್ರಾಮದ ನಿಂಗಪ್ಪ ಬಿಸನಾಳ ಎಂಬ ಬಡ ರೈತರ ಮಗಳಾದ ಇವರು ಮೂಲತ ಕೃಷಿ ಕುಟುಂಬದಿಂದ ಬಂದಿದ್ದು ಇವರ ತಂದೆ ಪ್ರತಿದಿನವೂ ಕೂಲಿ ಮಾಡಿ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಹಗಳಿರಳು ಶ್ರಮಿಸುತ್ತಿದ್ದಾರೆ. ಇವರ ಮಗಳಾದ ಕುಮಾರಿ ನೀಲಮ್ಮ ಬೀಸನಾಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಕನ್ನಡ 98 ಇಂಗ್ಲೀಷ 86 ಇತಿಹಾಸ 97 ಅರ್ಥಶಾಸ್ತ್ರ 95 ಸಮಾಜಶಾಸ್ತ್ರ 93 ರಾಜ್ಯಶಾಸ್ತ್ರ 100ಕೆ 100 ಅಂಕಗಳೊಂದಿಗೆ ಶೇಕಡಾ 94.83 ರಷ್ಟು ಅಂಕಗಳನ್ನು ಗಳಿಸಿ ಪರೀಕ್ಷಾ ಕೇಂದ್ರಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ.
