Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ಜಯಶ್ರೀ. ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಪ್ರಿಯ ಪ್ರಿಯತಮೆ ಪ್ರಿಯಾ,ಕಿಟಕಿಯ ಕಿಂಡಿಯಲ್ಲಿ ಒಳಗೆ ಹಣಕಿಕ್ಕಿ ಕದ್ದು ಕದ್ದು ನೋಡಿದೆ. ನೀನು ಉಟ್ಟುಕೊಳ್ಳುತ್ತಿದ್ದ ಬಂಗಾರದಂಚಿನ ಸೀರೆಯ ತುದಿಯನ್ನು ಒಂದು ಕೈಯಲ್ಲಿ ಹಿಡಿದಿದ್ದೆ. ಮತ್ತೊಂದು ಕೈಯನ್ನು ಅಂದವಾದ ನಾಭಿಯ ಹತ್ತಿರ ಇಟ್ಟು ಭಾವ ಪ್ರಪಂಚದಲ್ಲಿ ಮುಳುಗಿದ್ದೆ. ನನಗೆನಿಸಿದಂತೆ ನೀನು ನನ್ನನ್ನೇ ನೆನೆಯುತ್ತ ಕನ್ನಡಿಯ ಮುಂದೆ ನಿನ್ನನ್ನು ನೀನು ಮುದ್ದು ಮಾಡಿಕೊಳ್ಳುತ್ತಿದಿಯಾ ಎಂದು ಭಾಸವಾಯಿತು. ತುಟಿಗೆ ಹಚ್ಚಿದ ಬಣ್ಣ ನನ್ನನ್ನೇ ಕೈ ಬೀಸಿ ಕರೆದಂತೆನಿಸಿತು. ತಡ ಮಾಡದೇ ಬಂದು ನಿನ್ನ ಸಪೂರ ಗಲ್ಲದ ಮೇಲೆ ಕಲೆ ಮಾಡಿ ಬಿಡಬೇಕೆನಿಸಿತು. ಅದು ನೆನೆದು, ಕ್ಷಣಾರ್ಧದಲ್ಲಿ ಮೈ ಬಿಸಿಯಾಯಿತು. ‘ಸೀರೆಲಿ ಹುಡುಗಿಯರ ನೋಡಲೇಬಾರದು ನಿಲ್ಲಲ್ಲ ಟೆಂಪ್ರೆಚರ್.’ ಹಾಡು ತಲೆಯಲ್ಲಿ ಸುಳಿದು ಗಿರಗಟ್ಲೆ ಆಡ ತೊಡಗಿತು. ಕಪ್ಪು ಬಿಳುಪಿನ ನನ್ನ ಜೀವನ ಕಲರ್ ಫುಲ್ ಆಗೋ ಮುನ್ಸೂಚನೆ ಕಾಣತೊಡಗಿತು. ನನ್ನ ನಾನೇ ಮರೆತು ಕನಸಲ್ಲೂ ನಿನ್ನ ಮೇಲೆ ಗೀಚಿದ ಅದೆಷ್ಟೋ ಕವನಗಳು ಎದೆಯ ಗೂಡಿನಲ್ಲಿ ಬೆಚ್ಚಗೆ…
ಜೆಡಿಎಸ್ ತಾಲೂಕು ಮಾಜಿ ಅಧ್ಯಕ್ಷ ಸಿ. ವಿ. ನಾಗರಾಜ್ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ಹೆಚ್.ಡಿ.ಕೋಟೆ: ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ನಿಖಿಲ್ ಕುಮಾರಸ್ವಾಮಿ ಟೊಂಕಕಟ್ಟಿ ನಿಂತಿದ್ದಾರೆ. ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಜೆಡಿಎಸ್ ತಾಲೂಕು ಮಾಜಿ ಅಧ್ಯಕ್ಷ ಸಿ. ವಿ. ನಾಗರಾಜ್ ಭವಿಷ್ಯ ನುಡಿದರು.ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ನಡೆದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ 37ನೇ ಹುಟ್ಟು ಹಬ್ಬದ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಯಲ್ಲಿ ಮೂರು ಬಾರಿ ಸೋತರೂ ಕುಗ್ಗದೆ ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಾಮಾಣಿಕವಾದ ಹೋರಾಟವನ್ನು ಮಾಡುತ್ತಿರುವ ವ್ಯಕ್ತಿ. ಪಕ್ಷದಲ್ಲಿ ಇರುವ ಸ್ಥಾನ ಮಾನಗಳನ್ನು ಬಳಕೆ ಮಾಡಿಕೊಂಡು ಇಡೀ ರಾಜ್ಯವನ್ನು ಸುತ್ತಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಛಲವನ್ನು ಇಟ್ಟುಕೊಂಡಿರುವ ನಿಖಿಲ್ ಕುಮಾರಸ್ವಾಮಿ ಅವರಿಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿ ಎಂದು ತಿಳಿಸಿದರು.ಹಿರಿಯ ಜೆಡಿಎಸ್ ಮುಖಂಡ ನರಸಿಂಹೇಗೌಡ ಮಾತನಾಡಿ ಚುನಾವಣೆ ಸೋಲಿನಿಂದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾವೆಲ್ಲರೂ ಭಾರತೀಯರೆಂಬ ಐಕ್ಯತಾ ಮಂತ್ರವನ್ನು ಪಠಿಸುತ್ತಾ ನಮ್ಮಲ್ಲಿರುವ ಜಾತಿ, ಮತ, ಪಂಥ, ಪಂಗಡ, ಮೇಲು-ಕೀಳುಗಳೆಂಬ ಅನಿಷ್ಟಗಳನ್ನು ತೊಲಗಿಸಿ ನಾವೆಲ್ಲರೂ ಒಂದೇ, ಜಾತಿ ಒಂದೇ, ಮತ ಒಂದೇ ನಾವು ಮನುಜರು ಎಂಬಂತೆ ಸದ್ಭಾವನೆಯನ್ನು ಹೊಂದಬೇಕು. ನಮ್ಮದು ‘ವಸುದೈವ ಕುಟುಂಬಕಂ’ ಎನ್ನುವ ಸಂಸ್ಕೃತಿಯ ನಾಡು. ಮಾನವೀಯತೆ, ಸದಾಚಾರ, ಸನ್ನಡತೆ, ಸದ್ವಿಚಾರ, ಸಚ್ಚಾರಿತ್ರ್ಯ, ಸತ್ಸಂಗ, ಸಮಷ್ಠಿಭಾವ ಮತ್ತು ಸಮನ್ವಯತೆ ಮತ್ತು ಸಮಾನತೆಯಂತಹ ಗುಣಗಳನ್ನು ಅಳವಡಿಸಿಕೊಂಡು ನಮ್ಮ ನಾಡಿನ ಭವ್ಯ ಸಂಸ್ಕೃತಿ-ಪರಂಪರೆಯನ್ನು ಎತ್ತಿ ಹಿಡಿಯಬೇಕು ಎಂದು ಜಮಖಂಡಿಯ ಓಲೆಮಠದ ಆನಂದ ದೇವರು ಅಭಿಪ್ರಾಯಪಟ್ಟರು.ಅವರು ನಗರದ ಅಥಣಿ ರಸ್ತೆಯ ಅಲ್-ಅಮೀನ ಆಸ್ಪತ್ರೆಯ ಎದುರಿಗೆ ಎನ್.ಜಿ,ಓ ಕಾಲನಿಯ ಜೈ ಶ್ರೀ ಆಂಜನೇಯ ದೇವಸ್ಥಾನದ ೬ ನೇಯ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ದುಶ್ಚಟಗಳ ನಿರ್ಮೂಲನೆ ಮತ್ತು ಸದ್ಭಾವನಾ ಜನಜಾಗೃತಿ ಪಾದಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ಇಂದಿನ ಆಧುನಿಕತೆ ಮತ್ತು ವಾಣಿಜ್ಯೀಕರಣದತ್ತ ಸಾಗುತ್ತಿರುವ ಈ ಸಮಾಜದಲ್ಲಿ ಯುವಕರು ನೈತಿಕ-ಮೌಲ್ವಿಕ ಮತ್ತು ಮಾನವೀಯತೆಯಂತಹ ಗುಣಗಳನ್ನು ತೊರೆದು ಮಾಯಾ ಜಗತ್ತಿನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಚಿಕ್ಕ ಗಲಗಲಿ ಗ್ರಾಮದಲ್ಲಿ ನಿಜ ಶರಣ ಅಂಬಿಗರ ಚೌಡಯ್ಯನವರ ಜಯಂತಿ ಆಚರಣೆ ಅದ್ದೂರಿಯಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಜನಾರ್ಧನ ಮಹಾಸ್ವಾಮಿಗಳು , ಗಂಗಯ್ಯ ಮಠಪತಿ, ಸುಭಾಸಗೌಡ ಪಾಟೀಲ್,ರಾಮಪ್ಪ ಬಬಲಾದಿ,ಕಲ್ಲಪ್ಪ ಗಡ್ಡಿ,ಶೇಖಪ್ಪ ನೀಲನ್ನವರ, ಸುರೇಶ ಗಡ್ಡಿ, ಅಶೋಕ ಕರೇನಿ, ಲೋಹಿತ್ ನೀಲನ್ನವರ, ಅನಿಲ ಕರೇನಿ, ಹನಮಂತ ಕರೇನಿ, ಲಾಲೆಸಾಬ್ ಮುಲ್ಲಾ ಇತರರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಕಲಕೇರಿ: ರಸ್ತೆ ಸಂಚಾರಿ ನಿಯಮವನ್ನು ಪಾಲಿಸುವದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು ಇವುಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಮುಖ್ಯವಾಗಿ ವಾಹನಗಳನ್ನು ಚಲಾಯಿಸುವಾಗ ಯಾವುದೇ ಕಾರಣಕ್ಕೂ ಮೊಬೈಲ್ನಲ್ಲಿ ಮಾತನಾಡಬಾರದು, ಅಪ್ರಾಪ್ತ ವಯಸ್ಸಿನವರು ಯಾವುದೇ ಕಾರಣಕ್ಕೂ ವಾಹನಗಳನ್ನು ಚಲಾಯಿಸಲು ಮುಂದಾಗಬಾರದು ವಾಹನಗಳನ್ನು ಅಪ್ರಾಪ್ತರಿಗೆ ನೀಡುವದು ಕೂಡಾ ತಪ್ಪು ಎಂದು ಸಿಂದಗಿಯ ವಕೀಲರ ಸಂಘದ ಅಧ್ಯಕ್ಷ ಎಸ್ ಬಿ ಪಾಟೀಲ ಹೇಳಿದರು.ಕಲಕೇರಿ ಗ್ರಾಮದ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಅನುದಾನಿತ ಬಸವೇಶ್ವರ ಪೌಢಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮೀತಿ, ವಕೀಲರ ಸಂಘ, ಪೋಲಿಸ್, ಶಿಕ್ಷಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಸ್ತೆ ಸುರಕ್ಷತಾ ಸಪ್ತಾಹ-೨೦೨೬ ಅಭಿಯಾನ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದ್ವಿ ಚಕ್ರವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಲಘು ವಾಹನ ಚಾಲಕರು ಶೀಟ್ ಬೆಲ್ಟ್ಗಳನ್ನು ಧರಿಸಿ ವಾಹನ ಚಲಾಯಿಸಬೇಕು ಇದರಿಂದ ಬಹುತೇಕ ಅಪಘಾತಗಳನ್ನು ತಡೆಗಟ್ಟಬಹುದು ಈ ಕುರಿತು…
ಉದಯರಶ್ಮಿ ದಿನಪತ್ರಿಕೆ ಇಂಡಿ: ವಿದ್ಯುತ್ ಶಾರ್ಟ ಸರ್ಕ್ಯೂಟನಿಂದ ಕೊಯ್ಲಿಗೆ ಬಂದ ಬೆಲೆ ಬಾಳುವ ಕಬ್ಬು ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಲಚ್ಯಾಣ ಗ್ರಾಮದ ಹೊರವಲಯದ ಜಮೀನಿನಲ್ಲಿ ನಡೆದಿದೆ.ಈ ಅಗ್ನಿ ಅವಘಡದಲ್ಲಿ ಇಲ್ಲಿನ ಮಲ್ಲಿಕಾರ್ಜುನ ಮುಜಗೊಂಡ ಇವರ ೪ ಎಕರೆ ಕಬ್ಬು ಸುಟ್ಟು ಕರಕಲಾಗಿಸುಮಾರು ಮೂರು ಲಕ್ಷ ರೂ ದಷ್ಟು ಬೆಳೆ ನಷ್ಟವಾಗಿದೆ.ಬೆಳಿಗ್ಗೆ ೧೦ ಗಂಟೆಯ ವೇಳೆಯಲ್ಲಿ ಆಕಸ್ಮಿಕವಾಗಿ ಕಬ್ಬಿನ ಪಡದ ಮಧ್ಯೆ ಹಾದುಹೋದ ಎಲ್.ಟಿ ವಿದ್ಯುತ್ ಲೈನ ತಂತಿ ಗಾಳಿಯಲ್ಲಿ ಜೋಡಣೆಯಾಗಿ ವಿದ್ಯುತ್ ಶಾರ್ಟ ಸರ್ಕ್ಯೂಟದಿಂದ ಉತ್ಪತ್ತಿಯಾದ ಬೆಂಕಿಯ ಕಿಡಿಯು ತಂತಿಯ ಕೆಳಭಾಗದ ಒಣಗಿದ ರವದಿ ತುಂಬಿದ ಕಬ್ಬಿನ ಗದ್ದೆಯಲ್ಲಿ ಬಿದ್ದಿದೆ.ಇಂಡಿಯ ಅಗ್ನಿಶಾಮಕ ದಳದವರಿಗೆ ಮಾಲಿಕರು ಫೋನು ಮಾಡಿದ್ದಾರೆ. ಪಕ್ಕದ ಜಮೀನ ಬೋರವೆಲ್ ನೀರನ್ನು ಬಳಸಿ ಮತ್ತು ಅಗ್ನಿ ಶಾಮಕ ದಳದವರೂ ಸ್ಥಳಕ್ಕೆ ಧಾವಿಸಿ ೨ ಎಕರೆ ಕಬ್ಬನ್ನು ಉಳಿಸಿದ್ದಾರೆ.. ಗ್ರಾಮ ಲೆಕ್ಕಾಧಿಕಾರಿ ಅವಜಿ, ವಿದ್ಯುತ್ ಇಲಾಖೆಯ ಸಿಬ್ಬಂದಿ ಸ್ಥಳಕ್ಕೆ ಬೇಟಿ ನಡೆಸಿದ್ದಾರೆ.ಇಂಡಿಯ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮೃತ ವ್ಯಕ್ತಿ ಹುಚ್ಚಪ್ಪ ಡೋಣೂರ | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ಕ್ರಮಕ್ಕೆ ಒತ್ತಾಯ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ವೈಷ್ಣವಿ ವ್ಯಸನ ಮುಕ್ತ ಕೇಂದ್ರದಲ್ಲಿ ಚಿಕೆತ್ಸೆಗೆಂದು ಬಂದಿರುವ ಹುಚ್ಚಪ್ಪ ಡೋಣುರ (೪೯) ಎಂಬ ವ್ಯಕ್ತಿಯನ್ನು ಚಿಕಿತ್ಸೆ ನೀಡುವುದಾಗಿ ಹೇಳಿ ಆಸ್ಪತ್ರೆಯ ಸಿಬ್ಬಂದಿ ಅಮಾನವೀಯವಾಗಿ ಥಳಿಸಿದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟ ಘಟನೆ ನಡೆದಿದೆ.ಸಿಂದಗಿ: ಪಟ್ಟಣದ ವೈಷ್ಣವಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹುಚ್ಚಪ್ಪ ಡೋಣೂರ ಸಾವು ಸಮಗ್ರ ವ್ಯಸನ ಮುಕ್ತಿ ಹಾಗೂ ಪುನರ್ವಸತಿ ಕೇಂದ್ರವಾಗಿರೋ ವೈಷ್ಣವಿ ಆಸ್ಪತ್ರೆಯಲ್ಲಿ ಡಿಸೆಂಬರ್ನಲ್ಲಿ ದಾಖಲಾಗಿದ್ದ ಹುಚ್ಚಪ್ಪನ ಮೇಲೆ ಸಮಗ್ರ ವ್ಯಸನ ಮುಕ್ತಿ ಹಾಗೂ ಪುನರ್ವಸತಿ ಕೇಂದ್ರದಲ್ಲಿ ತೀವ್ರ ಹಲ್ಲೆ ಮಾಡಿ ಹೊಡೆದಿದ್ದಾರೆಂದು ಆರೋಪ ಕಳೆದ ನಾಲ್ಕು ದಿನಗಳ ಹಿಂದೆಯೇ ಕೇಂದ್ರದ ವಿರುದ್ದ ಹುಚ್ಚಪ್ಪನ ಕುಟುಂದವರು ಆರೋಪಿಸಿದ್ದರು ಎನ್ನಲಾಗಿದೆ.ಈ ಹಿನ್ನಲೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಕಾನ್ಸಸ್ಟೇಬಲ್ ಆಗಿರುವ ಸಿದ್ದು ಮುರುಡಿ ಪತ್ನಿ ಒಡೆತನದಲ್ಲಿರೋ ಕೇಂದ್ರ ವ್ಯಸನ…
ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕಳೆದ ಐದು ವರ್ಷಗಳಕಾಲ ನಡೆದ ಸಿಹಿ ಕಹಿ ಘಟಣೆಗಳನ್ನು ಗ್ರಾಮ ಪಂಚಾಯತಿ ಸದಸ್ಯರು ಅವಧಿಯ ಕೊಣೆಯ ಸಾಮಾನ್ಯ ಸಭೆಯಲ್ಲಿ ನೆನಪು ಮಾಡಿಕೊಂಡು ಪುಳಕಿತರಾದರು.ಗುರುವಾರ ಸ್ಥಳಿಯ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಶ್ರೀಮತಿ ಬಂಗಾರೆವ್ವ ಜಾಲಿಕಟ್ಟಿಯವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಾಮಾನ್ಯ ಸಭೆಯಲ್ಲಿ ಹಿರಿಯ ಸದಸ್ಯ ಗುರಲಿಂಗಪ್ಪ ಪೂಜಾರಿ ಮಾತನಾಡಿ ಗ್ರಾಮದ ಅಭಿವೃದ್ದಿಯಲ್ಲಿ ಪಕ್ಷಬೇಧ ಮರೆತು ಎಲ್ಲ ಸದಸ್ಯರು ನೀಡಿದ ಸಹಕಾರವನ್ನು ನೆನೆದರು,ಸದಸ್ಯ ಆನಂದ ಕವಟಿ, ಮಹಾಲಿಂಗ ಮಾಯಣ್ಣವರ, ಮನೋಜ ಹಟ್ಟಿ ಮಾತನಾಡಿ ಪರರ ಪಾಲಾಗಿದ್ದ ಗ್ರಾಮದ ೨೦ ಎಕರೆ ಸರಕಾರಿ ಗೋಮಾಳ ಜಾಗೆಯನ್ನು ಮರಳಿ ಪಡೆಯಲು ಗ್ರಾಮದ ಪ್ರತಿಯೊಬ್ಬರು ಶ್ರಮ ವಹಿಸಿದ್ದು ಹಾಗೂ ಗ್ರಾ.ಪಂ. ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಒಂದು ತಿಂಗಳ ಕಾಲ ಬಯಲು ಶೌಚ ಮುಕ್ತಗೊಳಿಸಲು ಶ್ರಮಿಸಿದ ಘಟಣೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.ಸದಸ್ಯರಾದ ಕೇಶವ ವಂದಾಲ, ಶ್ರೀಮತಿ ಮೇಘಾ ಗಾಣಿಗೇರ, ಶ್ರೀಮತಿ ಪರವ್ವ ಮಲ್ಲಯ್ಯ ಮಠಪತಿ ಮಾತನಾಡಿ ಐದು ವರ್ಷಗಳ ಅವಧಿಯಲ್ಲಿಯೂ ತಮ್ಮ ವಾರ್ಡಿನಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯಾವುದೇ ಕೆಲಸಕ್ಕೆ ಮುಂದಾದಾಗ ಸೋಲು ಎದುರಾಗುವುದು ಸಹಜ. ಸೋಲಿಗೆ ಎದೆಗುಂದದೆ ಸಾಧನೆಯತ್ತ ಮುನ್ನುಗ್ಗಬೇಕು. ಜೀವನದಲ್ಲಿ ಪ್ರಾಮಾಣಿಕತೆ, ಸಮಯಪಾಲನೆ, ವಿಶ್ವಾಸಾರ್ಹತೆ, ಸತತ ಪರಿಶ್ರಮ, ಶ್ರದ್ಧೆ ಮುಖ್ಯ. ಇವುಗಳಿದ್ದರೆ ಯಶಸ್ಸು, ಹಣ ತಾನಾಗಿಯೇ ಹುಡುಕಿಕೊಂಡು ಬರುತ್ತದೆ ಎಂದು ಬಂಜಾರಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಎಸ್.ಬಿ.ಪವಾರರವರು ಹೇಳಿದರು.ಶುಕ್ರವಾರದಂದು ನಗರದ ಬಂಜಾರಾ ಪ್ರೌಢ ಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಾದ ಶ್ರೀದೇವಿ ಕಡಿತೋಟ ಹಾಗೂ ಸಮರ್ಥ ಗವಂಡಿಯವರಿಗೆ ಪ್ರಶಸ್ತಿ ಪತ್ರಗಳನ್ನು ನೀಡಿ ಮಾತನಾಡುತ್ತ. ನಮ್ಮ ಸಂಸ್ಥೆಯಲ್ಲಿ ಕಲಿತ ಅದೇಷ್ಟೋ ವಿದ್ಯಾರ್ಥಿಗಳು ಮೇಡಿಕಲ್, ಇಂಜೀನಿಯರಿಂಗ್ ವಿಭಾಗ ಸೇರಿದಂತೆ ವಿವಿಧ ಉನ್ನತ ಹುದ್ದೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಪ್ರತಿಭಾ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಭಾಗದಲ್ಲಿ ಉಚಿತ ಪ್ರವೇಶ ನೀಡಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಇ.ಡಿ.ಲಮಾಣಿಯವರು ಮಾತನಾಡುತ್ತ. ಪೋಷಕರು ತಮ್ಮ ಆಸಕ್ತಿಗಳನ್ನು ಮಕ್ಕಳ ಮೇಲೆ ಹೇರಬೇಡಿ. ಮಕ್ಕಳ ಅಭಿರುಚಿ, ಆಸಕ್ತಿ,…
ಲೇಖನ- ವೀಣಾ ಹೇಮಂತಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಇತ್ತೀಚಿಗಿನ ದಿನಗಳಲ್ಲಿ ಪಾಲಕರಲ್ಲಿ ಒಂದು ಹೊಸ ರೀತಿಯ ಭ್ರಾಂತಿ ಆರಂಭವಾಗಿದೆ. ತಮ್ಮ ಮಕ್ಕಳು ಯಾವುದೇ ವಿಷಯದಲ್ಲಿ ಸೋಲಬಾರದು ಅವರು ಬಯಸುವ ಪ್ರತಿಯೊಂದು ವಸ್ತು ಅವರಿಗೆ ದೊರೆಯಲೇಬೇಕು , ಇನ್ನೂ ಮುಂದೆ ಹೋಗಿ ಈ ಹಿಂದೆ ನಮಗೆ ದೊರೆಯದ್ದು ನಮ್ಮ ಮಕ್ಕಳಿಗೆ ದೊರೆಯಲಿ ಎಂಬ ಆಶಯ. ಆದರೆ ಇದು ಶುದ್ಧ ತಪ್ಪು.ಬೀಳುವವನು ಏಳುತ್ತಾನೆ. ಸೋತವನು ಗೆಲ್ಲುವ ಕುರಿತು ಯೋಚಿಸುತ್ತಾನೆ.. ಸೋಲೇ ಗೆಲುವಿನ ಮೆಟ್ಟಿಲು ಪ್ರತಿಯೊಂದು ಸೋಲು ಕೂಡ ಮನುಷ್ಯನಿಗೆ ಒಂದು ಹೊಸ ಪಾಠವನ್ನು ಕಲಿಸುತ್ತದೆ.ಮಕ್ಕಳ ಸೋಲು ತಮ್ಮ ಅಹಮಿಕೆಗೆ ನೀಡುವ ಪೆಟ್ಟು ಎಂಬಂತೆ ಭಾವಿಸುವ ಪಾಲಕರು ನಮ್ಮಲ್ಲಿ ಇದ್ದಾರೆ. ಆದರೆ ನಿಜವಾಗಿಯೂ ಸೋಲನ್ನು ಒಪ್ಪಿಕೊಳ್ಳುವ ಮಗು ಆ ಸೋಲಿನಿಂದ ಉಂಟಾಗುವ ಧಕ್ಕೆಯನ್ನು ತಾಳಿಕೊಳ್ಳುವ ಸೈರಣ ಶಕ್ತಿಯನ್ನು ಪಡೆಯುತ್ತದೆ. ಸೋಲು ಗೆಲುವುಗಳು ಆಟದ ಅವಿಭಾಜ್ಯ ಅಂಗ ಇಂದಿನ ಸೋಲು ನಾಳೆಯ ಗೆಲುವಿಗೆ ಕಾರಣವಾಗುತ್ತದೆ ಎಂಬುದನ್ನು ನಾವು ಮಕ್ಕಳಿಗೆ ಕಲಿಸಬೇಕು.ಚಿಕ್ಕಂದಿನಿಂದಲೂ ಮಕ್ಕಳಿಗೆ ಬಿದ್ದುಗಿದ್ದೀಯಾ, ಕೈ ಕಾಲು…
