Author: editor.udayarashmi@gmail.com

೧೫ ನೇ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನ ಉದ್ಘಾಟಿಸಿದ ನಿವೃತ್ತ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಭಾರತ ಪಾಶ್ಚಿಮಾತ್ಯ ಶಿಕ್ಷಣ ಪದ್ದತಿಯಿಂದ ಹೊರಬಂದು ಭಾರತೀಯ ಪರಂಪರೆಯ ಶಿಕ್ಷಣ ಪದ್ದತಿಯ ಕಡೆಗೆ ಬಂದಾಗ ಮಾತ್ರ ಭಾರತದ ಶಿಕ್ಷಣ ಭವ್ಯ ಶಿಕ್ಷಣವಾಗುತ್ತದೆ, ಇಲ್ಲವಾದಲ್ಲಿ ನಮ್ಮ ಶಿಕ್ಷಣಕ್ಕೆ ಮೋಕ್ಷವಿಲ್ಲ ಎಂದು ನಿವೃತ್ತ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.ಅವರು ಪಟ್ಟಣದ ಎಚ್.ಜಿ.ಪಪೂ ಕಾಲೇಜಿನಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣಶಾಸ್ತ್ರ ಉಪನ್ಯಾಸಕರ ಸಂಘ ಮತ್ತು ಎಚ್.ಜಿ.ಕಲಾ ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜುಗಳ ಸಹಯೋಗದಲ್ಲಿ ದಿ.ಎಮ್.ಸಿ.ಮನಗೂಳಿ ವೇದಿಕೆಯಲ್ಲಿ ಹಮ್ಮಿಕೊಂಡ ೧೫ ನೇ ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣದ ಮೂಲ ಉದ್ದೇಶ ಜ್ಞಾನ, ಸಂಸ್ಕಾರ ಹಾಗೂ ಕೌಶಲ್ಯಗಳನ್ನು ನೀಡುವುದು. ಆದರೆ ಇಂದು ಜ್ಞಾನ ಸಿಗುತ್ತಿದೆ ಸಂಸ್ಕಾರ ಸಿಗುತ್ತಿಲ್ಲ ಇದರಿಂದ ನಮ್ಮ ಮುಂದಿನ ಪಿಳಿಗೆಯ ಸ್ಥಿತಿ ಅದೋಗತಿಗೆ ಬರುವುದರಲ್ಲಿ ಯಾವ ಸಂದೇಹವು ಇಲ್ಲ. ಜ್ಞಾನ ಯಾರಿಂದಲೇ ಸಿಗಲಿ ಅದನ್ನು…

Read More

ರೇಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಗಳ ಫಲವಾಗಿ ವಿಶೇಷ ರೈಲು | ಸಚಿವ ಎಂ.ಬಿ.ಪಾಟೀಲ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿಯನ್ನು 14 ಗಂಟೆಯಿಂದ 10 ಗಂಟೆಗೆ ಇಳಿಸಲು ಐದು ಸಲ ನಡೆಸಿರುವ ಸಭೆಗಳು ಮತ್ತು ರೇಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿರುವ ನಿರಂತರ ಸಭೆಗಳ ಫಲವಾಗಿ ಈ ವಿಶೇಷ ರೈಲು ಓಡಿಸಲಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಬೆಂಗಳೂರು- ವಿಜಯಪುರ ರೈಲು ಸಂಚಾರ ಅವಧಿ ಕಡಿಮೆ ಮಾಡುವ ನಿಟ್ಟಿನಲ್ಲಿ ಹುಬ್ಬಳ್ಳಿ ಮತ್ತು ಗದಗ ಬೈಪಾಸ್ ಮಾರ್ಗಗಳ ಮೂಲಕ ರೈಲು ಓಡಾಟಕ್ಕೆ ಅವಕಾಶ ನೀಡುವುದು ಮುಖ್ಯವಾಗಿದೆ. ಇರದಿದ್ದರೆ ಈ ಮಾರ್ಗದ ರೈಲುಗಳು ಹುಬ್ಬಳ್ಳಿ ಮತ್ತು ಗದಗ ಎರಡೂ ಕಡೆ ನಗರದೊಳಗೆ ಇರುವ ರೈಲು ನಿಲ್ದಾಣಗಳಿಗೆ ಹೋಗಲು ಮತ್ತು ಅಲ್ಲಿ ಎಂಜಿನ್ ಬದಲಾವಣೆಗೆ ತುಂಬಾ ಹೊತ್ತು ನಿಲ್ಲುವುದರಿಂದ ರೈಲು ಪ್ರಯಾಣ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಪ್ರತಿ ವರ್ಷದಂತೆ ಈ ವರ್ಷವೂ ಗೊಟ್ಯಾಳ ಗ್ರಾಮದ ಗ್ರಾಮ ದೇವತೆಗಳಾದ ಜಾಂಗೀರಬಾಷಾ ಹಾಗೂ ದಾವಲಮಲಿಕ ಜಾತ್ರಾ ಮಹೋತ್ಸವವನ್ನು ಜ.1 ರಿಂದ ಜ.3 ರವರೆಗೆ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವದು ಎಂದು ಜಾತ್ರಾ ಕಮೀಟಿ ಅಧ್ಯಕ್ಷ ಮಲ್ಲನಗೌಡ ಬಿರಾದಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಗುರುವಾರ ಜ.1 ರಂದು ಬೆಳಿಗ್ಗೆ 10 ಗಂಟೆಗೆ ಹೊರ ರಾಜ್ಯಗಳಿಂದ ಆಗಮಿಸುವ ಪ್ರತಿಷ್ಠಿತ ಶ್ವಾನಗಳ ಸ್ಪರ್ಧೆ ನಡೆಯಲಿದೆ. ರಾತ್ರಿ 8 ಗಂಟೆಗೆ ನಾನಾರೀತಿಯ ವಾದ್ಯಗಳು ನುಡಿಸುವ ಕಾರ್ಯಕ್ರಮ ಜರುಗುವದು ಹಾಗೂ ಚಿತ್ರವಿಚಿತ್ರ ಸುಡುಮದ್ದು ಸುಡುವದರೊಂದಿಗೆ ಆಕಾಶದಲ್ಲಿ ನೋಡುಗರ ಗಮನಸೆಳೆಯಲಿದೆ ಎಂದರು.ನಂತರ ಜಾಂಗೀರಬಾಷಾ ಹಾಗೂ ದಾವಲಮಲಿಕ ದೇವರಿಗೆ ಗಂಧಲೇಪನ ಕಾರ್ಯಕ್ರಮ ನಡೆಯಲಿದೆ. ರಾತ್ರಿ 10 ಗಂಟೆಗೆ ಪ್ರತಿಷ್ಠಿತ ಕಲಾ ತಂಡದವರಿಂದ ಹರದೇಶಿ–ನಾಗೇಶಿ ಗೀ–ಗೀ ಪದಗಳ ಕಾರ್ಯಕ್ರಮ ಜರುಗಲಿದೆ.ಶುಕ್ರವಾರ ಜ.2 ರಂದು ನಸುಕಿನ ಜಾವ ಭಕ್ತಾದಿಗಳಿಂದ ದಿರ್ಘದಂಡ ನಮಸ್ಕಾರ ನಡೆಯಲಿದೆ. ಬೆಳಿಗ್ಗೆ 6 ಗಂಟೆಯಿಂದ ದಿನವಿಡಿ ದೇವರಿಗೆ ಭಕ್ತಾದಿಗಳಿಂದ ಹರಕೆ ನೈವೇದ್ಯ ಹಾಗೂ ದಿನವಿಡಿ ವಿವಿಧ ಕಲಾ ತಂಡಗಳಿಂದ ಗೀ–ಗೀ ಪದಗಳ…

Read More

ಬಸವ ತತ್ವದಡಿಯಲ್ಲಿ ಸ್ವಾವಲಂಬಿ ಗ್ರಾಮ ನಿರ್ಮಾಣಕ್ಕೆ ಸಂಬಂಧಿಸಿದ ವೈಜ್ಞಾನಿಕ ಚಿಂತನ-ಮಂಥನ ಸಮಾವೇಶ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಡೆದಾಡುವ ಸಂತ ಶ್ರೀ ಸಿದ್ದೇಶ್ವರ ಸ್ವಾಮಿಗಳ ಜನ್ಮಭೂಮಿ ಪವಿತ್ರ ಬಿಜ್ಜರಗಿಯಲ್ಲಿ ಇದೇ ದಿನಾಂಕ ೩೦ ರಂದು ವೈಕುಂಠ ಏಕಾದಶಿಯಂದು ೩೩೦ ಜೋಡೆತ್ತಿನ ಬಂಡಿಗಳ ಐತಿಹಾಸಿಕ ಸಮಾವೇಶ ಹಾಗೂ ಬಸವ ತತ್ವದಡಿಯಲ್ಲಿ ಸ್ವಾವಲಂಬಿ ಗ್ರಾಮ ನಿರ್ಮಾಣಕ್ಕೆ ಸಂಬಂಧಿಸಿದ ವೈಜ್ಞಾನಿಕ ಚಿಂತನ-ಮಂಥನ ಸಮಾವೇಶ ನಡೆಯಲಿದೆ. ಕೀನ್ಯಾ ಸೇರಿದಂತೆ ಹಲವು ಭಾಗಗಳಿಂದ ಪರಿಣಿತರು ಭಾಗವಹಿಸಿ ಅನುಭವ ಹಂಚಿಕೊಳ್ಳಲಿದ್ದಾರೆ ಎಂದು ಕೃಷಿ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಎಸ್.ಜೆ. ನಾಡಗೌಡ ಮಾಹಿತಿ ನೀಡಿದರು.ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹತ್ವಪೂರ್ಣವಾಗಿರುವ ಈ ಸಮಾವೇಶಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ, ನಂದಿ ಕೂಗು ಅಭಿಯಾನದ ಅಡಿಯಲ್ಲಿ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ೩ನೇ ಪುಣ್ಯ ಸ್ಮರಣೆ ಅಂಗವಾಗಿ ಈ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ,ಮುಗಳಖೋಡ ಮಠದ ಶ್ರೀ ಡಾ.ಮುರಘರಾಜೇಂದ್ರ ಮಹಾಸ್ವಾಮಿಗಳು, ಜ್ಞಾನಯೋಗಾಶ್ರಮದ ಶ್ರೀ ಬಸವಲಿಂಗ ಮಹಾಸ್ವಾಮೀಜಿಗಳ ಸಾನಿಧ್ಯದಲ್ಲಿ ಜರಗುವುದು. ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಯುವ ಸನ್ಯಾಸಿ ಶಶಿಕಾಂತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಲಬುರ್ಗಿಯ ಕೇಂದ್ರಿಯ ವಿಶ್ವವಿದ್ಯಾಲಯಕ್ಕೆ ಸಿಯುಇಟಿ ಮೂಲಕ ಸ್ನಾತಕೋತ್ತರ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಜನವರಿ ೧೪ ರವರೆಗೆ ಪ್ರವೇಶ ಪಡೆದುಕೊಳ್ಳಬಹುದಾಗಿದೆ ಎಂದು ಕಲಬುರ್ಗಿ ಕೇಂದ್ರಿಯ ವಿವಿ ಹಿಂದಿ ವಿಭಾಗದ ಪ್ರಾಧ್ಯಾಪಕ ಪ್ರೊ.ಗಣೇಶ ಪವಾರ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ವಿಶ್ವವಿದ್ಯಾಲಯದಲ್ಲಿ ಹಲವಾರು ಕೋರ್ಸ್ಗಳ ಅಧ್ಯಯನ ಅವಕಾಶವಿದ್ದು, ಇಂಗ್ಲಿಷ್, ಹಿಂದಿ, ಕನ್ನಡ, ಭಾಷಾಶಾಸ್ತ್ರ, ಜಾನಪದ ಮತ್ತು ಬುಡಕಟ್ಟು ಅಧ್ಯಯನ, ಅರ್ಥಶಾಸ್ತ್ರ, ಇತಿಹಾಸ, ಸಾರ್ವಜನಿಕ ಆಡಳಿತ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ,ಪ್ರವಾಸೋದ್ಯಮ – ಪ್ರಯಾಣ ನಿರ್ವಹಣೆ, ಮನೋವಿಜ್ಞಾನ, ಭುಗೋಳಶಾಸ್ತç, ಭೂವಿಜ್ಞಾನ, ಗಣಿತ ಮೊದಲಾದ ಕೋರ್ಸ್ಗಳ ಪ್ರವೇಶ ಜೊತೆಗೆ ಎಂ.ಟೆಕ್ ಪವರ್ ಆ್ಯಂಡ್ ಎನರ್ಜಿ ಸೋರ್ಸಸ್ ಇಂಜಿನಿಯರಿಂಗ್, ಆರ್‌ಎಫ್ ಮೈಕ್ರೋವೇವ್ ಇಂಜಿನಿಯರಿಂಗ್‌ನಲ್ಲಿ ಅಧ್ಯಯನಕ್ಕೆ ಅವಕಾಶವಿದೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಎಂಪಿಎ, ಇನ್ಸ್ಟ್ರುಮೆಂಟಲ್ ಸಂಗೀತದಲ್ಲಿ ಎಂಪಿಎ, ಸಸ್ಯಶಾಸ್ತç, ಪ್ರಾಣಿ ಶಾಸ್ತç ಹೀಗೆ ಅನೇಕ ಕೋರ್ಸ್ಗಳ ಅಧ್ಯಯನಕ್ಕೆ ಅವಕಾಶವಿದೆ ಎಂದರು.ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಶೇ.೮…

Read More

ಆಲಮೇಲದಲ್ಲಿ ನಡೆದ ಜಿಲ್ಲಾ ಮಕ್ಕಳ ೧೨ ನೇ ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ೫ ನಿರ್ಣಯಗಳ ಮಂಡನೆ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಶಂ.ಗು.ಬಿರಾದಾರ ರವರ “ನಾವು ಎಳೆಯರು-ನಾವು ಗೆಳೆಯರು” ಗೀತೆಯನ್ನು ಮಕ್ಕಳ ಧ್ಯೇಯ ಗೀತೆಯನ್ನಾಗಿ ಮಾಡಬೇಕು- ಸಾತಿಹಾಳಆಲಮೇಲ- ಆಲಮೇಲ ಪಟ್ಟಣದ ವಿಶ್ವೇಶ್ವರ ದೇವಸ್ಥಾನದಲ್ಲಿ ಜರುಗಿದ ೧೨ ನೇ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಕ್ಕಳ ಸಾಹಿತ್ಯ ಸಂಗಮದ ಜಿಲ್ಲಾ ಕಾರ್ಯದರ್ಶಿ ಎಸ್.ಎಸ್.ಸಾತಿಹಾಳ ೫ ನಿರ್ಣಯಗಳನ್ನು ಮಂಡನೆ ಮಾಡಿ ಸರಕಾರಕ್ಕೆ ಒತ್ತಾಯಿಸಿದರು.ಸಮ್ಮೇಳನದ ಹಿರಿಯ ಮಕ್ಕಳ ಸಾಹಿತಿಗಳ ಒತ್ತಾಯದಂತೆ ವಿಜಯಪುರ ಜಿಲ್ಲೆಯ ಹೆಸರಾಂತ ಮಕ್ಕಳ ಸಾಹಿತಿ ಶಂ.ಗು.ಬಿರಾದಾರ ರವರ ನಾವು ಎಳೆಯರು ನಾವು ಗೆಳೆಯರು ಗೀತೆಯನ್ನು ಸರಕಾರ ಕರ್ನಾಟಕದ ಮಕ್ಕಳ ಧ್ಯೇಯ ಗೀತೆಯನ್ನಾಗಿ ಮಾಡಬೇಕು,ರಾಜ್ಯದಲ್ಲಿ ೧ ರಿಂದ ೫ ನೇ ತರಗತಿಯವರೆಗೆ ಮಾತೃಭಾಷೆ ಕನ್ನಡದಲ್ಲಿ ಶಿಕ್ಷಣ ಜಾರಿ ಮಾಡಬೇಕು, ಸರಕಾರದ ಎಲ್ಲ ಆಡಳಿತ ಕಚೇರಿಗಳಲ್ಲಿ ಕನ್ನಡ ಅಂಕಿಗಳನ್ನು ಕಡ್ಡಾಯವಾಗಿ ಬಳಸಬೇಕು, ಮಕ್ಕಳ ಸಾಹಿತಿಗಳ ಪುಸ್ತಕಗಳನ್ನು ಸರಾಕರ ಖರೀದಿಸಿ ಎಲ್ಲಾ ಗ್ರಂಥಾಲಯಗಳಿಗೆ ಒದಗಿಸಬೇಕು, ಸ್ಥಳಿಯ…

Read More

ವಿಜಯಪುರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹಿಂದೂ ಧರ್ಮಕ್ಕೆ ಅನ್ಯಾಯವಾದರೆ ಅದರ ವಿರುದ್ಧ ಸ್ವಯಂಪ್ರೇರಿತವಾಗಿ ಧ್ವನಿ ಎತ್ತುವುದು ಪ್ರತಿಯೊಬ್ಬ ಹಿಂದೂಗಳ ಕರ್ತವ್ಯ, ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಧರ್ಮ ಕಾರ್ಯ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹೇಳಿದರು.ಬಿಜೆಪಿ ಕಾರ್ಯಾಲಯದಲ್ಲಿ ಬಬಲೇಶ್ವರದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹಿಂದೂಗಳು ನಾವೆಲ್ಲರೂ ಒಂದಾಗಬೇಕು, ಹಿಂದೂಗಳ ವಿರುದ್ಧ ಅನ್ಯಾಯವಾದರೆ ಅದನ್ನು ಪ್ರತಿಭಟಿಸಬೇಕು, ಉಳಿದ ಧರ್ಮಿಯರಿಗೆ ಅನ್ಯಾಯವಾದರೆ ಅದರಲ್ಲೂ ಬೇರೆ ದೇಶದಲ್ಲಿಯೂ ಅನ್ಯಾಯವಾದರೂ ಅವರು ಇಲ್ಲಿ ಪ್ರತಿಭಟನೆ ಮಾಡುತ್ತಾರೆ, ಆದರೆ ನಾವೆಲ್ಲ ಹಿಂದೂಗಳು ಹಿಂದೂಗಳ ವಿರುದ್ಧ ಅನ್ಯಾಯವಾದರೆ ಸುಮ್ಮನೆ ಮನೆಯಲ್ಲಿ ಕೂರಬಾರದು, ಕೆಲವರು ಮಾತನಾಡುವುದರಿಂದ ಹಿಂದೂ ಧರ್ಮದ ಸಂಘಟನೆಯಾಗುವುದಿಲ್ಲ, ನಾವೆಲ್ಲರೂ ಸ್ವಯಂಪ್ರೇರಿತವಾಗಿ ಹಿಂದೂ ಪರವಾಗಿ ಗಟ್ಟಿ ಧ್ವನಿಯಾಗಬೇಕು, ಆಗ ಹಿಂದೂಗಳ ರಕ್ಷಣೆ ಸಾಧ್ಯ ಎಂದರು.ಬಬಲೇಶ್ವದಲ್ಲಿ ನಡೆಯಲಿರುವ ಬಸವಾದಿ ಶರಣರ ಹಿಂದೂ ಸಮಾವೇಶವನ್ನು ಯಶಸ್ವಿಗೊಳಿಸಲು ಹಿಂದೂಗಳು ಸಹಸ್ರ ಸಹಸ್ರ…

Read More

ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಹೃದಯ ಕದ್ದ ಚೆಲುವೆಜಿಂಕೆಯಂಥ ಹೊಳೆಯುವ ನಿನ್ನ ಕಣ್ಣೋಟದ ಸನ್ನೆಗೆ ಮರು ಮಾತು ಬರದೇ ಮನಸೋತೆ. ಮರುಕ್ಷಣವೇ, ಮಿಡಿವ ಹೃದಯವ ನಿನ್ನ ಹೆಸರಿಗೆ ಬರೆದೆ. ಗಿಳಿಯಂಥ ಸವಿ ನುಡಿಗೆ ಕಿವಿಯಾದೆ.. ಪ್ರೀತಿ ಎನ್ನುವ ಮಾಯೆಯೇ ಹಾಗಿರಬೇಕು. ನೀ ನಗುತ ಕರೆದರೆ ಮುಗಿದೇ ಹೋಯಿತು. ಮನಸ್ಸು ನಿರಾಕರಿಸುವುದು ಉಂಟೆ ಚೆಲುವೆ? ರಸ ಕಾವ್ಯದಂಥ ನಿನ್ನ ಯೌವ್ವನಕೆ ಪ್ರಥಮ ನೋಟದಲ್ಲೇ ಒಲವಿನ ಕುಸುಮ ಅರಳಿತು. ಪ್ರೀತಿ ಹೊಸ ಶಕ್ತಿ ಉಲ್ಲಾಸ ಉತ್ಸಾಹ ತುಂಬುತ್ತೆ ಅಂತ ಕೇಳಿದ್ದೆ. ಅದು ನಿಜಕ್ಕೂ ನಿಜ ಅನಿಸ್ತಿದೆ. ಮೊದಲಿನಂತಿಲ್ಲ ನಾನೀಗ. ಏನೇನೋ ಹೊಸ ಕನಸು ಕಾಣ್ತಿದಿನಿ. ಹೊಸ ಹುರುಪಿನಿಂದ ನಿನ್ನ ಓಣಿಯಲ್ಲಿ ಹಾಡುತ್ತ ಕುಣಿಯುತ್ತ ಓಡಾಡ್ತಿದಿನಿ. ನನ್ನ ಹರೆಯದ ಗೋಡೆಯ ಮೇಲೆ ನಿನ್ನದೇ ಚಿತ್ರ ಬರೆದಿರುವೆ.ಎದೆಯ ಭಿತ್ತಿಯ ಮೇಲೂ ನಿನ್ನದೇ ಕಚಗುಳಿಯಾಟದ ನರ್ತನ. ಪ್ರತಿ ದಿನ ಪ್ರತಿ ಕ್ಷಣ ನಿನ್ನದೇ ಧ್ಯಾನ. ಕಂಡ ಕಂಡ ಹುಡುಗಿಯರಲ್ಲೂ ನಿನ್ನನ್ನೇ ಕಾಣುತಿರುವೆ. ಹೂ ನಗೆಯ…

Read More

ಸ್ವಯಂಕೃತ ಅಪರಾಧದಿಂದ ಪ್ರತಿಪಕ್ಷ ಸ್ಥಾನ | 130 ರಿಂದ 140 ಸ್ಥಾನ ಗೆಲ್ಲುವ ಮೂಲಕ ಅಧಿಕಾರಕ್ಕೆ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ಬೆಂಗಳೂರು: ರಾಜ್ಯದಲ್ಲಿ ಯಾವಾಗ ಚುನಾವಣೆ ನಡೆದರೂ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಪಕ್ಷದ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಾಳೆ ಅಥವಾ 2028 ರಲ್ಲಿ ಚುನಾವಣೆ ನಡೆದರೆ, ಬಿಜೆಪಿ ಸುಮಾರು 130 ರಿಂದ 140 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ವಂತವಾಗಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಅವರು ಹೇಳಿದರು.ಕರ್ನಾಟಕವು ಮುಂದೊಂದು ದಿನ ದಕ್ಷಿಣ ಭಾರತದಲ್ಲಿ ಬಿಜೆಪಿಯ ಭದ್ರ ಕೋಟೆ ಆಗಲಿದೆ ಎಂಬ ದೂರದೃಷ್ಟಿತ್ವ ವಾಜಪೇಯಿ ಅವರಲ್ಲಿತ್ತು. ಕಾರ್ಯಕರ್ತರ ಕುರಿತು ಅದಮ್ಯ ವಿಶ್ವಾಸ ಅವರದಾಗಿತ್ತು. ಸೋಲಿನಿಂದ ಅಂಜುವ ಪ್ರಶ್ನೆಯೇ ಇಲ್ಲ ಎಂಬ ಮಾತನ್ನು ವಾಜಪೇಯಿ ಅವರು ಹೇಳುತ್ತಿದ್ದರು. ಪಕ್ಷವನ್ನು ದೃಢವಾಗಿ ಕಟ್ಟುವ ಆತ್ಮವಿಶ್ವಾಸವನ್ನು ಕಾರ್ಯಕರ್ತರಲ್ಲಿ ಅವರು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ರಾಷ್ಟçಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆಯನ್ನು ಡಿ.೨೯ರ ಬೆಳೆಗ್ಗೆ ೧೦ ಗಂಟೆಗೆ ವಿಜಯಪುರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಬೃಹತ್ ಮಧ್ಯಮ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಡಾ. ಎಂ. ಬಿ. ಪಾಟೀಲ ಅವರು ನೆರವೇರಿಸಲಿದ್ದು, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ.ನಗರ ಶಾಸಕ ಬಸವನಗೌಡ ಆರ್. ಪಾಟೀಲ ಯತ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ಶಾಸಕರೂ ಆದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಪ್ರಕಾಶ ಬಿ. ಹುಕ್ಕೇರಿ,ಕರ್ನಾಟಕ ಸೋಪ್ಸ್ ಮತ್ತು ಡಿಟಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ. ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ,…

Read More