Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾರುಕಟ್ಟೆ ಸಂಪರ್ಕಗಳನ್ನು ಸಮರ್ಪಕವಾಗಿ ಬಲಪಡಿಸುವುದೂ ಸೇರಿ ರೂಪಿಸಲಾಗುವ ಸಮಗ್ರ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ, ಎಐ ತಂತ್ರಜ್ಞಾನದಿಂದ ರೈತ ಕರೆ ಕೇಂದ್ರ ಉನ್ನತಿ, ಎಪಿಎಂಸಿಗಳ ಸಂಪೂರ್ಣ ಡಿಜಿಟಲೀಕರಣ ಯೋಜನೆಗಳು ಕೃಷಿಕರ ಬದುಕಿನ ಬದಲಾವಣೆಗೆ ಪೂರಕವಾಗಲಿವೆ. ಕಳಪೆ ಬಿತ್ತನೆ ಬೀಜ, ಕೀಟನಾಶಕ ಪೂರೈಕೆ ತಡೆ ಅತ್ಯಗತ್ಯವಾಗಿದ್ದು, ಕೈಗೊಳ್ಳಬೇಕಾದ ಕ್ರಮಗಳ ಕುರಿತು ರಾಜ್ಯಮಟ್ಟದ ಸಲಹಾ ಸಮಿತಿ ರಚನೆ ಘೋಷಣೆ ಸ್ವಾಗತಾರ್ಹವಾಗಿದೆ ಎಂದು ರಾಜ್ಯ ಬಜೆಟ್ ಕುರಿತು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌. ಪಾಟೀಲ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Read More

ವಿಜಯಪುರದಲ್ಲಿ ಅಕ್ರಮ 35,060 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದ ಅಧಿಕಾರಿಗಳು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಆರ್ ಎನ್ಎಸ್ ಶೋ ರೂಮ್ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಆರ್ ಎನ್ಎಸ್ ಶೋ ರೂಮ್ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, 35,060 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಟಿ.ರಾಜು ಎಂಬುವವರ ಮೇಲೆ ಜಲ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಈ ದಾಳಿಯಲ್ಲಿ ಆಹಾರ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರೇಶ ತಾಂಡೂರ, ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ,ಜಲನಗರ ಪಿ ಎಸ್ ಐ ಮಹೇಶ ಸಂಖ್ ,ಪೋಲಿಸ್ ಸಿಬ್ಬಂದಿಗಳಾದ ವೈ. ಎ ರಾಥೋಡ, ಎಚ್ ಎನ್ ಪೂಜಾರಿ ಹಾಗೂ ಎಂ.ಆರ್ ಶಿಂಧೆ ಇದ್ದರು‌ ಎಂದುಆಹಾರ ಇಲಾಖೆಯಉಪ ನಿರ್ದೇಶಕವಿನಯಕುಮಾರ…

Read More

ಲೇಖನ:-ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು,ದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಜಗತ್ತಿನಲ್ಲಿ ಹಲವು ವಿಧದ, ಬಣ್ಣದ, ರೂಪದ, ಗಾತ್ರದ ಪಕ್ಷಿಗಳಿದ್ದು, ಅವೆಲ್ಲದರ ಪೈಕಿ ಅತ್ಯಂತ ಹೆಚ್ಚು ಅನಾದರಕ್ಕೆ ಒಳಗಾದ ಪಕ್ಷಿಯೆಂದರೆ ಕಾಗೆ.ಬಣ್ಣದಲ್ಲಿ ಕಪ್ಪು, ಕೂಗಿನಲ್ಲಿ ಕರ್ಕಶ ಇವೆಲ್ಲಾ ಕಾರಣಗಳಿಂದ ಮನುಷ್ಯನಿಗೆ ಕಾಗೆಗಳೆಂದರೆ ಅಷ್ಟಕ್ಕಷ್ಟೇ. ಜಗತ್ತಿನ ಜೀವವಿಜ್ಞಾನಿಗಳು ಮತ್ತು ಮಹಾನ್ ಆಡಳಿತಗಾರನಾದ ಚಾಣಕ್ಯ ಹೇಳುವಂತೆ ಮನುಷ್ಯನು ಕಾಗೆಯನ್ನು ನೋಡಿಕೊಂಡು ಅದರಿಂದ ಕಲಿಯಬೇಕಾಗಿರುವುದು ಬಹಳಷ್ಟು ವಿಚಾರಗಳಿವೆ. ಅದರಲ್ಲೂ ಮುಖ್ಯವಾಗಿ ಕಾಗೆಯಲ್ಲಿ ಇರುವ ಯಶಸ್ಸಿನ ಗುಣಗಳನ್ನು ಎಲ್ಲರೂ ಕಲಿಯಲೇಬೇಕು. ಕಾಗೆಯಿಂದ ಕಲಿಯಬೇಕಾದ ಮೊದಲನೆಯ ಗುಣವೆಂದರೆ ಎಲ್ಲೂ ಕಾಗೆಯು ಬಹಿರಂಗವಾಗಿ ಮಿಲನವನ್ನು ನಡೆಸುವುದಿಲ್ಲ ಮತ್ತು ಅದನ್ನು ತೀರಾ ಗುಪ್ತವಾಗಿರಿಸುತ್ತದೆ. ಮನುಷ್ಯ ಇದನ್ನು ಸರಿಯಾಗಿ ಅರಿತುಕೊಂಡರೆ ಮತ್ತು ಅದರ ಮೌಲ್ಯವನ್ನು ಅರಿತರೆ ಆತನಿಗೆ ಸಮಾಜದಲ್ಲಿ ಅಪಾರ ಗೌರವ ಪ್ರಾಪ್ತಿಯಾಗುತ್ತದೆ. ‘ಅನ್ನದ ಅಗುಳೊಂದ ಕಂಡರೆ ಕೂಗಿ ಕರೆಯದೇ ಕಾಗೆಯೊಂದು ತನ್ನ ಬಳಗವನ್ನು’ ಎಂಬ ಮಾತೇ ಇರುವಂತೆ ಕಾಗೆಯು ಒಂದು ತುತ್ತು ಆಹಾರ ಸಿಕ್ಕರೂ ಅದನ್ನು…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಇಂಡಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 52ರ ಮೇಲಿನ ಅರ್ಜನಾಳ ಗ್ರಾಮದ ರಸ್ತೆ ಸಂಪೂರ್ಣ ಹಾಳಾಗಿದ್ದು, ದಿನವಿಡಿ ವಾಹನಗಳು ಅಡ್ಡಾಡುವದರಿಂದ ಶಾಲೆಯ ಮಕ್ಕಳು ಜೀವದ ಭಯದಲ್ಲಿ ತಿರುಗಾಡುವಂತಾಗಿದೆ ಎಂಬುದು ಶಾಲಾ ವಿದ್ಯಾರ್ಥಿಗಳ ಪ್ರಶ್ನೆಯಾಗಿದೆ.ಎಸ್. ಡಿ. ಎಂ ಸಿ. ಅಧ್ಯಕ್ಷ ಧರ್ಮರಾಜ ಬಿರಾದಾರ ಮಾತನಾಡಿ, ಅರ್ಜನಾಳ ಗ್ರಾಮ ರಾಷ್ಟ್ರೀಯ ಹೆದ್ದಾರಿ ಇಂದ ಸುಮಾರು 3 ಕಿಲೋಮೀಟರ್ ರಸ್ತೆ ಸಂಪೂರ್ಣ ಹಾಳಾಗಿದ್ದು, ಗ್ರಾಮದಲ್ಲಿ ರಸ್ತೆಯ ಬದಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆ ಇದ್ದು, ಇಲ್ಲಿಗೆ ದಿನಾಲು ಅರ್ಜನಾಳ, ಗೊಟ್ಯಾಳ ಗ್ರಾಮದ ವಿದ್ಯಾರ್ಥಿಗಳು ದಿನಾಲು ಜೀವದ ಹಂಗು ತೊರೆದು ಶಾಲೆಗೆ ಬರುವಂತಾಗಿದೆ ಎಂದರು.ಎಸ್. ಡಿ. ಎಂ. ಸಿ. ಕಾರ್ಯದರ್ಶಿ ರಾಜಕುಮಾರ ಪೂಜಾರಿ ಮಾತನಾಡಿ, ಸರ್ಕಾರ ರಸ್ತೆಗಳ ಸುಧಾರಣೆ ಮಾಡದೇ ಹೋದಲ್ಲಿ ಪ್ರಾಣಹಾನಿ ಸಂಭವಿಸುವದು ಗ್ಯಾರಂಟಿ ಅದಕ್ಕೆ ತಕ್ಕ ಉತ್ತರ ಕೊಡಬೇಕಾಗುತ್ತದೆ, ಇಲ್ಲಿಯವರೆಗೂ ಸಣ್ಣ ಪುಟ್ಟ ಗಾಯಗಳು ವಿದ್ಯಾರ್ಥಿಗಳು ಅನುಭವಿಸಿವೆ, ಹೀಗೆ ನಡೆದಲ್ಲಿ ಮುಂದಿನ ಅನಾಹುತಕ್ಕೆ ಯಾರು ಕಾರಣಿಭೂತರು, ಹೆದ್ದಾರಿಯಿಂದ ಗ್ರಾಮದ ವರೆಗೂ ಸಂಪೂರ್ಣ ರಸ್ತೆ…

Read More

ಷರತ್ತುಬದ್ಧ ಅನುಮತಿ ನೀಡಿದ ಯಡ್ರಾಮಿ ತಾಲೂಕು ಆಡಳಿತ ಉದಯರಶ್ಮಿ ದಿನಪತ್ರಿಕೆ ಯಡ್ರಾಮಿ: ತಾಲೂಕಿನ ಕುಮ್ಮನಸಿರಸಗಿ ಗ್ರಾಮದಲ್ಲಿ ಆರ್‌.ಎಸ್. ಎಸ್. ಪಥಸಂಚಲ ನಡೆಸಲು ತಾಲೂಕ ಆಡಳಿತ ಷರತ್ತು ಬದ್ಧ ಅನುಮತಿ ನೀಡಿದೆ. ಇದರಿಂದ ಸಂಘದ ಕಾರ್ಯಕರ್ತರಲ್ಲಿ ಸಂತೋಷದ ವಾತಾವರಣ ನಿರ್ಮಾಣವಾಗಿದ್ದು, ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.ಯುಗಾದಿ ಉತ್ಸವದ ಅಂಗವಾಗಿ ಮಾ. 7ರಂದು ಶನಿವಾರ ಕುಮ್ಮನಸಿರಸಗಿ ಗ್ರಾಮದಲ್ಲಿ ಪಥ ಸಂಚಲನ ನಡೆಸಲು ಅನುಮತಿ ಕೋರಿ ಆರ್.ಎಸ್.ಎಸ್. ಸಂಘ ಅರ್ಜಿ ಸಲ್ಲಿಸಲಾಗಿತ್ತು.ಅದನ್ನು ಪರಿಗಣಿಸಿದ ಪೊಲೀಸ್ ಇಲಾಖೆ ಮತ್ತು ಯಡ್ರಾಮಿ ತಾಲೂಕ ಆಡಳಿತ ಕೂಲಂಕುಶವಾಗಿ ಪರಿಶೀಲಿಸಿ ಅನುಮತಿ ನೀಡಲಾಗಿದೆ ಎಂದು ತಿಳಿಸಲಾಗಿದೆ.ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದಿಂದ ಗಣವೇಶಧಾರಿಗಳಿಂದ ಪಥಸಂಚಲನ ಪ್ರಾರಂಭವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ.ಪಥ ಸಂಚಲನಕ್ಕೆ 15 ಷರತ್ತುಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಥಸಂಚಲನಕ್ಕೆ ಷರತ್ತು ವಿಧಿಸಲಾಗಿದ್ದು, ಸಾರ್ವಜನಿಕ ಅಥವಾ ಖಾಸಗಿ ಆಸ್ತಿಗೆ ಹಾನಿಯಾಗದಂತೆ ನೋಡಿಕೊಳ್ಳುವುದು, ನಿಗದಿತ ಮಾರ್ಗವನ್ನಷ್ಟೇ ಬಳಸುವುದು, ರಸ್ತೆ ತಡೆದು ಸಂಚಾರಕ್ಕೆ ತೊಂದರೆ ಆಗದಂತೆ, ಜಾತಿ ಅಥವಾ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: 4 ವರ್ಷ ಮೇಲ್ಮಟ್ಟ ವಯೋಮಾನದ ನಗರದ ಮನಿಯಾರ ಕಾಲೋನಿಯಲ್ಲಿರುವ ಕುಮಾರಿ ಬಿಬಿ ಖತಿಜಾ ಅವರು ಕಳೆದ ಶುಕ್ರವಾರ ಒಂದು ದಿನ‌ ಪವಿತ್ರ ರಂಜಾನ ತಿಂಗಳಿನ ಉಪವಾಸ ಕೈಗೊಂಡು ಈ ಚಿಕ್ಕ ವಯಸ್ಸಿನಲ್ಲಿ ತನ್ನ ಭಕ್ತಿ ಭಾವ ಮೆರೆದಿದ್ದಾಳೆ.ಕುಮಾರಿ ಬಿಬಿ ಖತಿಜಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶಿರಸ್ತೆದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಸಲೀಂ ಬಿಜಾಪೂರ ಇವರ ಮೊಮ್ಮಗಳಾಗಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಹಿಂದೂಗಳ ಪ್ರಮುಖ ಹಬ್ಬವಾದ ರಂಗಿನಾಟದ ಪ್ರಮುಖ ಕಾರ್ಯಕ್ರಮಕ್ಕೆ ಚಾಲನೆ ನೀಡುವಂತೆ ಶಾಸಕ ನಾಡಗೌಡರನ್ನು ಆಹ್ವಾನಿಸಿದ್ದರೂ ಅವರು ನಿರ್ಲಕ್ಷಿಸಿ ತೆರಳಿರುವ ಘಟನೆ ಪಟ್ಟಣದ ಹಿಂದೂ ಸಮಾಜ ಹಾಗೂ ವ್ಯಾಪಾರಸ್ಥರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದು ಕೇವಲ ಕಾರ್ಯಕ್ರಮದ ನಿರ್ಲಕ್ಷ್ಯವಲ್ಲ, ಹಿಂದೂ ಸಮಾಜದ ಭಾವನೆಗಳನ್ನು ಅವಮಾನಿಸಿದ ಕ್ರಮವಾಗಿದೆ ಎಂದು ವ್ಯಾಪಾರಸ್ಥರ ಮುಖಂಡ ಜಗದೀಶ ಕಂಠಿ ಕಿಡಿಕಾರಿದರು.ಪಟ್ಟಣದ ಬಜಾರ್‌ನ ದುರ್ಗಾದೇವಿ ದೇವಸ್ಥಾನದ ಮುಂಭಾಗದಲ್ಲಿ ಆಯೋಜಿಸಲಾದ ಬಣ್ಣದಾಟ ಕಾರ್ಯಕ್ರಮದ ಸಂದರ್ಭದಲ್ಲಿ ಉದಯರಶ್ಮಿ ದಿನಪತ್ರಿಕೆಯೊಂದಿಗೆ ಮಾತನಾಡಿದ ಅವರು, ಶಾಸಕ ನಾಡಗೌಡರು ಸಾರ್ವಜನಿಕ ವೇದಿಕೆಗಳಲ್ಲಿ ಎಲ್ಲ ಧರ್ಮಗಳೂ ಒಂದೇ ಎಂದು ಹೇಳುತ್ತಾ ಭಾವೈಕ್ಯತೆಯ ಬಗ್ಗೆ ಮಾತನಾಡುತ್ತಾರೆ. ಆದರೆ ತಮ್ಮದೇ ಧರ್ಮದ ಹಬ್ಬಕ್ಕೆ ಆಹ್ವಾನ ನೀಡಿದಾಗ ಅದನ್ನು ನಿರ್ಲಕ್ಷಿಸುವುದು ಅವರ ಮಾತು ಮತ್ತು ನಡೆ ನಡುವೆ ಇರುವ ವ್ಯತ್ಯಾಸವನ್ನು ತೋರಿಸುತ್ತದೆ ಎಂದು ಆರೋಪಿಸಿದರು.ಬಜಾರ್ ವ್ಯಾಪಾರಸ್ಥರು ಹಾಗೂ ಹಿಂದೂ ಸಮಾಜದ ಮುಖಂಡರು ಗೌರವಪೂರ್ವಕವಾಗಿ ಆಹ್ವಾನ ನೀಡಿದ್ದರೂ ಅದನ್ನು ಸ್ವೀಕರಿಸದೇ ಕಾರ್ಯಕ್ರಮವನ್ನು ಕಡೆಗಣಿಸಿರುವುದು ಇಡೀ ಬಜಾರ್ ಜನತೆಗೂ ಹಾಗೂ ಹಿಂದೂ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುಗಾದಿ ಹಬ್ಬದ ಹಿನ್ನೆಲ್ಲೆಯಲ್ಲಿ ಶ್ರೀ ಮಲ್ಲಿಕಾರ್ಜುನ ಜಾತ್ರೆಯ ಪ್ರಯುಕ್ತ ಶ್ರೀಶೈಲಗೆ ತೆರುಳುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮೂಲಕ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಬಸ್ ನಿಲ್ದಾಣದಿಂದ ದಿನಾಂಕ೦೬-೦೩-೨೦೨೬ ಜನದಟ್ಟಣೆಗನುಗುಣವಾಗಿ ಶ್ರೀಶೈಲಕ್ಕೆ ಹೆಚ್ಚುವರಿ ಬಸ್ಸುಗಳು ಕಾರ್ಯಾಚರಿಸಲಿದ್ದು, ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಸಹ ಕಲ್ಪಿಸಿದೆ.ಈ ಕುರಿತ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ೧ನೇ ಘಟಕ ವ್ಯವಸ್ಥಾಪಕರು- ಮೊ:೭೭೬೦೯೯೨೨೬೩, ವಿಜಯಪುರದ ೨ನೇ ಘಟಕದ ವ್ಯವಸ್ಥಾಪಕರು ಮೊ:೭೭೬೦೯೯೨೨೬೪, ಇಂಡಿ ಘಟಕ ವ್ಯವಸ್ಥಾಪಕರು ಮೊ:೭೭೬೦೯೯೨೨೬೫, ಸಿಂದಗಿ ಘಟಕ ವ್ಯವಸ್ಥಾಪಕರು ಮೊ:೭೭೬೦೯೯೨೨೬೬, ಮುದ್ದೇಬಿಹಾಳ ಘಟಕ ವ್ಯವಸ್ಥಾಪಕರು ಮೊ:೭೭೬೦೯೯೨೨೬೭, ತಾಳಿಕೋಟಿ ಘಟಕ ವ್ಯವಸ್ಥಾಪಕರು ಮೊ:೭೭೬೦೯೯೨೨೬೮, ಬ.ಬಾಗೇವಾಡಿ ಘಟಕ ವ್ಯವಸ್ಥಾಪಕರು ಮೊ:೭೭೬೦೯೯೮೮೬೯, ವೀರರಾಣಿ ಕಿತ್ತೂರ ಚನ್ನಮ್ಮ ಕೇಂದ್ರ ಬಸ್ ನಿಲ್ದಾಣದ ಸಹಾಯಕ ಸಂಚಾರ ವ್ಯವಸ್ಥಾಪಕರ ಮೊ:೭೭೬೦೯೯೨೨೫೮, ವಿಜಯಪುರ ಮುಂಗಡ ಟಿಕೇಟ ವಿಭಾಗ ಮೊ:೭೭೬೦೯೯೨೨೭೦, ವಿಭಾಗೀಯ ಸಾರಿಗೆ ಅಧಿಕಾರಿ ಮೊ:೭೭೬೦೯೯೨೨೫೨, ವಿಭಾಗೀಯ…

Read More

ಕಾರ್ಯಕ್ರಮ ಯಶಸ್ವಿಗೆ ಜಿಲ್ಲಾ ವಾರ್ತಾಧಿಕಾರಿ ಅಮರೇಶ ದೊಡಮನಿ ಕೋರಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಮಾರ್ಚ್ ೯ರ ಸೋಮವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸಂಜೆ ೪ ಗಂಟೆಗೆ ಭೀಮ ಗಾಯನ ಕಾರ್ಯಕ್ರಮ ನಡೆಯಲಿದೆ.ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನ ಸಾಧನೆ, ಸಮಾನತೆಯ ಹೋರಾಟ, ಅಸ್ಪೃಶ್ಯತೆ ನಿರ್ಮೂಲನೆ, ಸ್ತ್ರೀ ಸಮಾನತೆ ಕುರಿತ ಗೀತೆಗಳ ಗಾಯನ ನಡೆಯಲಿದೆ.ಸಮಾನತೆಯ ಸ್ವರ ಸಂಭ್ರಮ ಭೀಮನ ಆದರ್ಶಗಳನ್ನು ಸ್ವರಗಳಲ್ಲಿ ಜೀವಂತಗೊಳಿಸುವ ಜಾಗೃತಿ, ಆತ್ಮಗೌರವ ಮತ್ತು ಸಮಾನತೆಯ ಸಂಗೀತ ಕಾರ್ಯಕ್ರಮವೇ ಭೀಮ ಗಾಯನವಾಗಿದೆ.ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘವು ಭೀಮ ಗಾಯನವನ್ನು ಪ್ರಸ್ತುತಪಡಿಸಲಿದ್ದಾರೆ.ಡಾ.ಬಿ.ಆರ್.ಅಂಬೇಡ್ಕರ್ ಅವರು ಭೇಟಿ ನೀಡಿರುವ ರಾಜ್ಯದ ಪ್ರಮುಖ ಸ್ಥಳಗಳ ಪೈಕಿ ಆಯ್ದ ಸ್ಥಳಗಳಲ್ಲಿ ಭೀಮಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಭೀಮ ಗಾಯನ ಕಾರ್ಯಕ್ರಮಕ್ಕೆ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಕಳೆದ ೧೫ ವರ್ಷಗಳಿಂದ ಪತ್ರಕರ್ತರಾಗಿ ಹಾಗೂ ಪತ್ರಿಕೆ ವಿತರಕರಾಗಿ ಸೇವೆ ಸಲ್ಲಿಸುತ್ತಿರುವ ಕಲಕೇರಿ ಗ್ರಾಮದ ಈರಣ್ಣ ಎಂ. ಝಳಕಿ ಅವರು ಗ್ರಾಮದ ಶ್ರೀಗುರು ಮರುಳಾರಾಧ್ಯ ಸಂಸ್ಥಾನ ಹಿರೇಮಠವು ಕೊಡಮಾಡುವ ೨೦೨೬ನೇ ಸಾಲಿನ “ಶ್ರೀ ಗುರು ಮರುಳಾರಾಧ್ಯ ಸಿರಿ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಶ್ರೀಯುತರಿಗೆ ಪ್ರತ್ರಿಕಾ ಕ್ಷೇತ್ರದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಮಾ.೮ ರಂದು ಶ್ರೀಶೈಲ ಜಗದ್ಗುರುಗಳ ಸಾನಿಧ್ಯದಲ್ಲಿ ನಡೆಯುವ ಶ್ರೀಗುರು ಮರುಳಾರಾಧ್ಯರ ಅನುಭಾವ ಜಾತ್ರಾ ಮಹೋತ್ಸವ ಹಾಗೂ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವದು ಎಂದು ಶ್ರೀಮಠದ ಪೀಠಾಧಿಪತಿ ಸಿದ್ಧರಾಮ ಶಿವಾಚಾರ್ಯ ಸ್ವಾಮೀಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More