Subscribe to Updates
Get the latest creative news from FooBar about art, design and business.
Author: editor.udayarashmi@gmail.com
೫೦ನೇ ಕರ್ನಾಟಕ ಸಂಭ್ರಮ ಹಿನ್ನಲೆಕನ್ನಡ ಕಾರ್ಯಗಳಿಗೆ ಕೈಜೋಡಿಸಿ ರಾಜ್ಯೋತ್ಸವ ವಿಶೇಷವಾಗಿಸಿ ವಿಜಯಪುರ: ನಗರದ ಎಲ್ಲಾ ವರ್ತಕರು ತಮ್ಮ ಅಂಗಡಿ ಮುಂಗಟ್ಟುಗಳ ಮುಂಭಾಗದಲ್ಲಿ ಕನ್ನಡ ನಾಮಫಲಕ ಅಳವಡಿಸುವ ಮೂಲಕ ಕನ್ನಡತನ ಮೆರೆಯಬೇಕು. ಈ ನಿಟ್ಟಿನಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿಸಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕರೆ ನೀಡಿದರು.ಶನಿವಾರ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ೫೦ನೇ ಕರ್ನಾಟಕ ಸಂಭ್ರಮ ಹಿನ್ನೆಲೆಯಲ್ಲಿ ಕನ್ನಡ ನಾಮಫಲಕಗಳನ್ನು ಅಳವಡಿಸುವ ಕುರಿತು ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯ ಮತ್ತು ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಅರಿವು ಮೂಡಿಸುವ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.ನವಂಬರ್ ೧ರಿಂದ ಎಲ್ಲರೂ ಕಡ್ಡಾಯವಾಗಿ ಕನ್ನಡ ನಾಮ ಫಲಕ ಅಳವಡಿಸಿ ೫೦ನೇ ಕರ್ನಾಟಕದ ಸಂಭ್ರಮ ಆಚರಣೆ ಮಾಡಲು ಆ ದಿನದಂದು ಕನ್ನಡಮಯ ವಾತಾವರಣದಿಂದ ಅಂಗಡಿ ಮುಂಗಟ್ಟುಗಳನ್ನು ಶೃಂಗರಿಸಿ ಸಾಯಂಕಾಲ ದೀಪ (ಹಣತೆ) ಗಳನ್ನು ಬೆಳಗಿಸಲು ಮನವಿ ಮಾಡಿದರು.ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ೫೦ ವರ್ಷಗಳು…
ವಿಜಯಪುರ: ಪ್ರಸಕ್ತ ಸಾಲಿನಲ್ಲಿ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಗೆ ಸ್ವಚ್ಛತೆ, ಶುಚಿತ್ವ ಮತ್ತು ನೈರ್ಮಲಕ್ಕಾಗಿ ನೀಡುವ ಕಾಯಕಲ್ಪ ಪ್ರಶಸ್ತಿ ವಿಜಯಪುರ ಜಿಲ್ಲೆಯ ೪೦ ಆರೋಗ್ಯ ಸಂಸ್ಥೆಗಳಿಗೆ ಲಭಿಸಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.ರೋಗಿಗಳಿಗೆ ಮತ್ತು ಸಾರ್ವಜನಿಕರಿಗೆ ಉತ್ತಮ ವಾತಾವರಣ ನಿರ್ಮಿಸಿಕೊಡುವ ಆಸ್ಪತ್ರೆಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರದಿಂದ ೨೦೧೫ ರಿಂದ ಕಾಯಕಲ್ಪ ಪ್ರಶಸ್ತಿ ನೀಡಲಾಗುತ್ತಿದ್ದು, ೨೦೧೯-೨೦ನೇ ಸಾಲಿನಲ್ಲಿ ಜಿಲ್ಲೆಯ ೧೫ ಆರೋಗ್ಯ ಸಂಸ್ಥೆಗಳಿಗೆ, ೨೦೨೦-೨೧ನೇ ಸಾಲಿನಲ್ಲಿ ೨೦ ಆರೋಗ್ಯ ಸಮಸ್ಥೆಗಳಿಗೆ ಪ್ರಶಸ್ತಿ ದೊರಕಿದ್ದು, ಈ ವರ್ಷ ೨೦೨೩ನೇ ಸಾಲಿನಲ್ಲಿ ಜಿಲ್ಲೆಯ ೪೦ ಆರೋಗ್ಯ ಸಂಸ್ಥೆಗಳಿಗೆ ಕಾಯಕಲ್ಪ ಪ್ರಶಸ್ತಿ ದೊರೆತಿದೆ.ಸಮುದಾಯ ಆರೋಗ್ಯ ಕೇಂದ್ರ ಮತ್ತು ತಾಲೂಕಾ ಆಸ್ಪತ್ರೆಗಳ ವಿಭಾಗದಲ್ಲಿ ತಾಲೂಕಾ ಆಸ್ಪತ್ರೆ ಬ.ಬಾಗೇವಾಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಜಿಲ್ಲೆಯಲ್ಲಿ ಪ್ರಾ.ಆ.ಕೇಂದ್ರ ತಿಕೋಟಾ ಅತ್ಯೂತ್ತಮ ಪ್ರಾ.ಆ.ಕೇಂದ್ರ, ಎಂದು ಪ್ರಶಸ್ತಿ ಪಡೆದಿರುತ್ತದೆ. ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವಿಭಾಗದಲ್ಲಿ ಬಾಗಲಕೋಟ ಮತ್ತು ಬಿಜಾಪುರ ಕ್ಲಸ್ಟರ್…
ಮಹರ್ಷಿ ವಾಲ್ಮೀಕಿಯವರ ಜಯಂತಿಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ ವಿಜಯಪುರ: ರಾಮಾಯಣ ಮಹಾಕಾವ್ಯವವನ್ನು ರಚಿಸಿದವರು ವಾಲ್ಮೀಕಿಯವರು. ಅವರು ರಾಮಾಯಣದಲ್ಲಿ ಉಲ್ಲೇಖಿಸಿರುವ ಅಂಶಗಳು ಇಂದಿಗೂ ಎಂದೆಂದಿಗೂ ಪ್ರಸ್ತುತವಾಗಿವೆ. ರಾಮಾಯಣದ ಮೌಲ್ಯಗಳು ಭವಿಷ್ಯಕ್ಕೆ ದಾರಿದೀಪವಾಗಿವೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ನಡೆದ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ,ಅವರು ಮಾತನಾಡಿದರು.ರಾಮಾಯಣ ಎಂಬ ಮಹಾಕಾವ್ಯವನ್ನು ರಚಿಸಿದ್ದು ವಾಲ್ಮೀಕಿಯವರು. ನಿಸರ್ಗದೊಂದಿಗೆ ಸಂಪರ್ಕ ಹೊಂದಿದ್ದ ಅವರಲ್ಲಿ ಕವಿತ್ವ ಭಾವನೆ ಇತ್ತು. ರಾಮಾಯಣ ಎಂಬ ಮಹಾಕಾವ್ಯವು ಇವರ ಕವಿತ್ವ ಭಾವನೆಯ ಕೊಡುಗೆಯಾಗಿದೆ. ಬ್ರಾತೃತ್ವ ಭಾವನೆ, ರಾಜನೀತಿ, ಮನೋಧರ್ಮ, ಮಾನವೀಯ ಮೌಲ್ಯ,ಪ್ರಜಾಪ್ರಭುತ್ವ ರಾಮಾಯಣ ಮಹಾಕಾವ್ಯವು ಪರಿಚಯಿಸಿದೆ ಎಂದು ಹೇಳಿದರು. ವಿಶ್ವಕ್ಕೆ ರಾಮಾಯಣ ಎಂಬ ಅತಿದೊಡ್ಡದಾದ ಕಾವ್ಯವನ್ನು ಕೊಡುಗೆ ನೀಡಿದ್ದಾರೆ. ರಾಮಾಯಣದಲ್ಲಿ ಒಳಗೊಂಡಿರುವ ತತ್ವಾದರ್ಶ ಕೊಡುಗೆ ಅಪಾರವಾಗಿದ್ದು, ಅವರು ನೀಡಿರುವ ಆದರ್ಶ ವಿಚಾರ-ತತ್ವಾದಾರ್ಶಗಳು ನಮ್ಮ ದೇಶ…
ದೇವರಹಿಪ್ಪರಗಿ: ನವೆಂಬರ್ ೧ರಿಂದ ಮತಕ್ಷೇತ್ರದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಹವಾಲು ಆಲಿಸುವುದರೊಂದಿಗೆ ಸರಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ತಿಳಿಸಿದ್ದಾರೆ.ನ.೧ರಂದು ಬೆಳಿಗ್ಗೆ ೦೯ಗಂಟೆಗೆ ಮಾರ್ಕಬ್ಬಿನಹಳ್ಳಿ, ೧೧ ಗಂಟೆಗೆ ಸಾತಿಹಾಳ, ೦೧ ಗಂಟೆಗೆ ಯಾಳವಾರ, ೦೩ಗಂಟೆಗೆ ಕುದರಿಸಾಲವಾಡಗಿ, ೦೫ಗಂಟೆಗೆ ವಡವಡಗಿ, ಸಂಜೆ ೦೭ಗಂಟೆಗೆ ಹೂವಿನಹಿಪ್ಪರಗಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಜನಸ್ಪಂದನ ಸಭೆ ನಡೆಸಲಾಗುತ್ತಿದೆ.ನ.೨ರಂದು ಬೆಳಿಗ್ಗೆ ೦೯ಗಂಟೆಗೆ ದಿಂಡವಾರ, ೧೧ಗಂಟೆಗೆ ರೆಬಿನಾಳ, ಮದ್ಯಾಹ್ನ ೦೧ಗಂಟೆಗೆ ಬ್ಯಾಕೋಡ, ೦೩ಗಂಟೆಗೆ ಹುಣಶ್ಯಾಳ ಪಿಬಿ, ಸಂಜೆ ೦೫ಗಂಟೆಗೆ ಕಣಕಾಲ, ೦೭ಗಂಟೆಗೆ ಇಟಗಿ, ಸಭೆ ನಡೆಯಲಿವೆ. ಅದರಂತೆ ನ.೩ರಂದು ಬೆಳಿಗ್ಗೆ ೦೯ ಗಂಟೆಗೆ ತುಂಬಗಿ, ೧೧ಗಂಟೆಗೆ ಬಮ್ಮನಳ್ಳಿ, ಮದ್ಯಾಹ್ನ ೦೧ಗಂಟೆಗೆ ಬ. ಸಾಲವಾಡಗಿ, ೦೩ಗಂಟೆಗೆ ಕೊಡಗಾನೂರ, ಸಾಯಂಕಾಲ ೦೫ಗಂಟೆಗೆ ಬಂಟನೂರ ಹಾಗೂ ಸಂಜೆ ೦೭ ಗಂಟೆಗೆ ಅಸ್ಕಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಸಭೆ ನಡೆಸಲಾಗುತ್ತಿದೆ.ಸಭೆಯಲ್ಲಿ ಸರಕಾರದ ಸೌಲಭ್ಯಗಳು ಗ್ರಾಮೀಣ ಪ್ರದೇಶದಲ್ಲಿ ತಲುಪಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಜೊತೆಗೆ…
ಬಸವನಬಾಗೇವಾಡಿ: ಪಟ್ಟಣದ ಅಕ್ಕನಾಗಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಕರುನಾಡು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ಸಹಯೋಗದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವದಂಗವಾಗಿ ನ. ೧ ರಂದು ಮಧ್ಯಾನ್ಹ ೨ ಗಂಟೆಗೆ ರಾಜ್ಯಮಟ್ಟದ ಕರುನಾಡು ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ, ನೂತನ ಪದಾಧಿಕಾರಿಗಳ ಪದಗ್ರಹಣ, ಕವಿಗೋಷ್ಠಿ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಾರ್ಯಕ್ರಮದ ಸಾನಿಧ್ಯವನ್ನು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯ ಎಂ.ಬಿ.ವಗ್ಗರ ವಹಿಸುವರು.ಹಂಗರಗಿಯ ಚನ್ನಬಸವ ಪ್ರತಿಷ್ಠಾನದ ಅಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಶಿವರುದ್ರಯ್ಯ ಹಿರೇಮಠ ಅವರು ನಾಡದೇವಿಗೆ ಪುಷ್ಪಾರ್ಚನೆ ನೆರವೇರಿಸುವರು. ಶಿಕ್ಷಕ ಸಾಹಿತಿ ಮಶ್ಯಾಕ ಗೌಂಡಿ ಉಪನ್ಯಾಸ ನೀಡುವರು. ಅತಿಥಿಗಳಾಗಿ ಮಹಾಂತೇಶ ಸಂಗಮ, ಆರ್.ಜಿ.ಅಳ್ಳಗಿ, ಈರಣ್ಣ ಮರ್ತುರ, ಗಿರಿಜಾ ಪಾಟೀಲ, ದೇವೇಂದ್ರ ಗೋನಾಳ, ಪ್ರಭಾಕರ ಖೇಡದ, ಎನ್.ಎಸ್.ಹೂಗಾರ, ಶಿವಪುತ್ರ ಅಜಮನಿ ಆಗಮಿಸುವರು ಎಂದು ಕರುನಾಡು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ…
ಬಸವನಬಾಗೇವಾಡಿ: ಮಹಾಕಾವ್ಯ ರಾಮಾಯಣ ರಚಿಸುವ ಮೂಲಕ ಮಹರ್ಷಿ ವಾಲ್ಮೀಕಿ ಅಜರಾಮರವಾಗಿ ಉಳಿದುಕೊಂಡಿದ್ದಾರೆ. ಇಂತಹ ಮಹಾತ್ಮರ ಜೀವನವನ್ನು ವಿದ್ಯಾರ್ಥಿಗಳು ಅರಿತುಕೊಂಡು ತಮ್ಮ ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕೆಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಾಲ್ಮೀಕಿಯು ಸಂಘದೋಷದಿಂದ ತನ್ನ ವ್ಯಕ್ತಿತ್ವನ್ನು ಕಳೆದುಕೊಂಡಿದ್ದ. ಮುಂದೆ ಅವರು ನಾರದರ ಸಂಪರ್ಕದಿಂದ ಮಹಾನ್ ವ್ಯಕ್ತಿಯಾಗಿ ಶಕ್ತಿಯಾಗಿ ಬದಲಾಗಿ ಮಹಾಕಾವ್ಯ ರಾಮಾಯಣ ರಚನೆ ಮಾಡಿದರು. ವ್ಯಕ್ತಿಯ ಜೀವನದಲ್ಲಿ ಸಹ ಜೀವನ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ನಾವು ನಮ್ಮ ಬದುಕಿನಲ್ಲಿ ಉತ್ತಮ ಆಯ್ಕೆಗೆ ಮೊದಲ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳು ಉತ್ತಮ ಆಯ್ಕೆ ಮಾಡಿಕೊಂಡು ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬೇಕೆಂದರು.ಈ ಸಂದರ್ಭದಲ್ಲಿ ಅರ್ಥಶಾಸದ ವಿಭಾಗದ ಮುಖ್ಯಸ್ಥ ಡಾ.ರವೀಂದ್ರಗೌಡ ಕೆ., ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವೈ.ನಾಯಕ, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ.ಡಿ.ಎಸ್.ಲಗಳಿ, ಡಾ.ಎಸ್.ಬಿ.ಜನಗೊಂಡ, ಎಂ.ಕೆ.ಯಾಧವ, ಎಸ್.ಡಿ.ಹನಮರಡ್ಡಿ, ವ್ಹಿ.ಎನ್.ರಜಪೂತ, ಪಿ.ಎಸ್.ಹೊರಕೇರಿ, ಎಸ್.ಜೆ.ಸೂರ್ಯವಂಶಿ,…
ಬಸವನಬಾಗೇವಾಡಿ: ವಾಲ್ಮೀಕಿ ಸಮಾಜಕ್ಕೆ ಸೇರಿದ ಮಹನೀಯರು ವಾಲ್ಮೀಕಿ ಜಾತಿಗೆ ಸೀಮಿತವಾಗಿ ಕೆಲಸ ಮಾಡದೇ ಇಡೀ ಸಮುದಾಯದ ಏಳ್ಗೆಗಾಗಿ ಶ್ರಮಿಸಿದ್ದಾರೆ. ಇಂತಹ ಸಮಾಜಕ್ಕೆ ಸೇರಿದ ಮಹರ್ಷಿ ವಾಲ್ಮೀಕಿ ಇಡೀ ಜಗತ್ತಿಗೆ ರಾಮಾಯಣ ಕೃತಿ ನೀಡುವ ಮೂಲಕ ಭಾರತೀಯ ಸಂಸ್ಕ್ರತಿಯನ್ನು ಎತ್ತಿ ಹಿಡಿದ್ದಾರೆ ಎಂದು ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಯಲ್ಲಪ್ಪ ನಾಯಕ ಹೇಳಿದರು.ಪಟ್ಟಣದ ಬಸವ ಭವನದಲ್ಲಿ ತಾಲೂಕಾಡಳಿತ, ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ವಾಲ್ಮೀಕಿ ಸಮಾಜ ಬಾಂಧವರು ಗುರುಭಕ್ತಿ, ದೈವಭಕ್ತಿಯನ್ನು ಹೊಂದಿದ್ದಾರೆ. ವಾಲ್ಮೀಕಿಯವರ ಕುರಿತು ಕೆಲವರು ಅಪಪ್ರಚಾರ ಮಾಡುತ್ತಿರುವದು ವಿಷಾದನೀಯ. ವಾಲ್ಮೀಕಿ ಸಮಾಜದ ಕುರಿತು ಅವಹೇಳನಕಾರಿಯಾಗಿ ಹೇಳಬಾರದು ಎಂದು ಅಲಹಾಬಾದ್ ನ್ಯಾಯಾಲಯ ತೀರ್ಪು ನೀಡಿದೆ ಎಂದ ಅವರು, ದೇಶಕ್ಕೆ ಸಂವಿಧಾನ ನೀಡಿರುವ ಡಾ. ಅಂಬೇಡ್ಕರ ಅವರು ಸಹ ಸಾಕಷ್ಟು ಅಪಮಾನಕ್ಕೆ ಒಳಗಾಗಿರುವದನ್ನು ನೋಡುತ್ತೇವೆ. ಮಹರ್ಷಿ ವಾಲ್ಮೀಕಿ, ಡಾ.ಅಂಬೇಡ್ಕರ ಈ ಮಹನೀಯರನ್ನು ಸಮಕಾಲೀನ ಕಾಲದಲ್ಲಿ ಸ್ಮರಣೆ…
ಮುದ್ದೇಬಿಹಾಳ: ಸಾಮೂಹಿಕ ವಿಹಾಹಗಳಿಂದ ಸಾಕಷ್ಟು ಬಡ ಜನತೆಗೆ ಅನುಕೂಲಗಳಾಗುತ್ತವೆ. ಈ ಬಾರಿ ಬರದ ಛಾಯೆ ಎಲ್ಲೆಡೆ ಆವರಿಸಿದ್ದು ಮಠದ ಸದ್ಭಕ್ತರಿಗೆ ಅನುಕೂಲಕರವಾಗಲೆಂದು ವಿಶೇಷ ಪೂಜೆ ಮತ್ತು ಸಾಮೂಹಿಕ ವಿವಾಹಗಳನ್ನು ನಡೆಸುತ್ತಿರುವದಾಗಿ ತಾಲೂಕಿನ ಯರಝರಿಯ ಯಲ್ಲಾಲಿಂಗ ಮಠದ ಸಾಮೂಹಿಕ ವಿಹಾಹಗಳಿಂದ ಸಾಕಷ್ಟು ಬಡ ಜನತೆಗೆ ಅನುಕೂಲಗಳಾಗುತ್ತವೆ ಎಂದು ಮಲ್ಲಾರಲಿಂಗ ಪ್ರಭುಗಳು ಹೇಳಿದರು.ತಾಲೂಕಿನ ಯರಝರಿ ಗ್ರಾಮದ ಶ್ರೀ ಮಠದಲ್ಲಿ ನವರಾತ್ರೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಸಾಮೂಹಿಕ ವಿವಾಹ ಹಾಗೂ ಧರ್ಮಸಭೆ ಕಾರ್ಯಕ್ರಮದಲ್ಲಿ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡಿದರು.ಮನುಷ್ಯರಿಗೆ ದೈವದ ಮೇಲೆ ನಂಬಿಕೆ ಕಡಿಮೆಯಾಗಿದೆ. ಮೊಬೈಲ್ನಲ್ಲಿ ಬರುವ ಹಾಳು ಮೂಳುಗಳನ್ನು ನೋಡಿಕೊಂಡು ಕೆಲವರು ದೇವರಿಗೆ ಕೈ ಮುಗಿವುದನ್ನೇ ಬಿಟ್ಟು ಬಿಟ್ಟಿದ್ದಾರೆ. ಮಹಿಳೆಯರು ದೇವರ ಸ್ವರೂಪ. ಅವರನ್ನು ಹಿಂಸಿಸಬಾರದು. ಮನೆ ಬೆಳಗಲು ಬರುವ ದೇವತೆಯರನ್ನು ವರದಕ್ಷಿಣೆ ರೂಪದಲ್ಲಿ ಕಿರುಕುಳ ಕೊಡುತ್ತಿರುವದರಿಂದ ಮಳೆ ಬಾರದೆ ಬೆಳೆ ಇಲ್ಲದೇ ಪರದಾಡುವಂತಾಗಿದೆ. ನಾಡಿನ ಪ್ರತಿಯೊಬ್ಬರೂ ಶಕ್ತಿ ದೇವತೆಯ ಆರಾಧನೆ ಮಾಡಿ ಮಳೆಗಾಗಿ ಪ್ರಾರ್ಥಿಸುವಂತೆ ತಿಳಿಸಿದರು.ಸಮಾಜದಲ್ಲಿ ಮಠ ಮಾನ್ಯಗಳ ಪಾತ್ರ ಬಹಳ ಮುಖ್ಯವಾದದ್ದು. ಮಠಗಳು…
ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದ ಸಮೀಪದ ಆಲಕೊಪ್ಪರ ಗ್ರಾಮದ ಕೆರೆಯಿಂದ ಕಣಕಾಲ ಗ್ರಾಮದ ರೈತ ರಾಮಣ್ಣ ಬಸಪ್ಪ ಯರಝರಿ ಅವರ ಜಮೀನದಲ್ಲಿ ಶುಕ್ರವಾರ ಮೊಸಳೆಯೊಂದು ಕಾಣಿಸಿಕೊಂಡಿದ್ದರಿಂದ ರೈತರಲ್ಲಿ ಆತಂಕವುಂಟು ಮಾಡಿತ್ತು.ತಾಲೂಕಿನಾದ್ಯಂತ ಬರಗಾಲದ ಛಾಯೆ ಅವರಿಸಿದ್ದರಿಂದ ಕೃಷ್ಣಾ ನದಿಯಿಂದ ಆಲಮಟ್ಟಿ ಡ್ಯಾಂ ನಿಂದ ಕಾಲುವೆಗಳ ಮುಖಾಂತರ ಕೆರೆಗೆ ನೀರು ಬಿಟ್ಟಿದರ ಹಿನ್ನೆಲೆಯಲ್ಲಿ ಕಾಲುವೆ ಮೂಲಕ ಮೊಸಳೆ ಕೆರೆ ಸೇರಿ ಶುಕ್ರವಾರ ಜಮೀನಿನಲ್ಲಿ ಸೇರಿತ್ತು. ಇದನ್ನು ನೋಡಿದ ರೈತರು ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೊಸಳೆ ಹಿಡಿಯಲು ಬಿದಿರು, ಹಗ್ಗದ ಸಹಾಯದ ಮೂಲಕ ಸೆರೆ ಹಿಡಿದು ಟಂಟಂ ಮೂಲಕ ಆಲಮಟ್ಟಿ ಡ್ಯಾಂ ಗೆ ಕಳುಹಿಸಿಕೊಡಲಾಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯ ರಾಜಶೇಖರ ಹುಲ್ಲೂರ ತಿಳಿಸಿದರು.
ವಿಜಯಪುರ: ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢಿಕರಿಸುವ ಉದ್ಧೇಶದಿಂದ ೩೭೯ ವರ್ಗಗಳ ಎಲ್ಲ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ ಪೊರ್ಟಲ್ ಮೂಲಕ ನೊಂದಾಯಿಸಲಾಗುತ್ತಿದ್ದು, ದಿ.೩೧-೦೩-೨೦೨೨ರವರೆಗೆ ನೊಂದಣಿಯಾಗಿ ಅಪಘಾತೊಂಡ ಫಲಾನುಭವಿಗಳಿಗೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ ೨ ಲಕ್ಷ ರೂ. ಅಪಘಾತ ಪರಿಹಾರ ಒದಗಿಸುತ್ತಿದೆ.ಫಲಾನುಭವಿ ಆಧಾರ ಸಂಖ್ಯೆ, ಯುಎಎನ್ ಕಾರ್ಡ, ಮರಣ ಪ್ರಮಾಣ ಪತ್ರ, ಮರಣಕ್ಕೆ ಕಾರಣದ ವೈದ್ಯಕೀಯ ಪ್ರಮಾಣ ಪತ್ರ, ಎಫ್ಐಆರ್-ಪಂಚನಾಮೆಯೊಂದಿಗೆ ನೊಂದಾಯಿಸಿಕೊಂಡು ಪರಿಹಾರ ಪಡೆದುಕೊಳ್ಳಬಹುದಾಗಿದ್ದು, ಆಸಕ್ತರು ಸೂಕ್ತ ದಾಖಲೆಗಳೊಂದಿಗೆ ಕಾರ್ಮಿಕರ ಅಧಿಕಾರಿಗಳ ಕಚೇರಿ, ವಿಜಯಪುರ ಉಪ ವಿಭಾಗ, ಕಾರ್ಮಿಕ ಕಲ್ಯಾಣ ಸಮುದಾಯ ಭವನ, ಸಿಂದಗಿ ನಾಕಾ, ಅಲ್ಲಾಪೂರ ಓಣಿ, ವಿಜಯಪುರ ಇವರಿಗೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
